Breaking News

Uncategorized

TRP ತಿರುಚಿದ ಪ್ರಕರಣದ ಆರೋಪಿ ಪಾರ್ಥೋ ದಾಸ್ ಗುಪ್ತಾಗೆ ಬಾಂಬೆ ಕೋರ್ಟ್ ಜಾಮೀನು..!

ನವ ದೆಹಲಿ : ಟಿ ಆರ್ ಪಿ ತಿರುಚಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ರಾಡ್ ಕಾಸ್ಟ್ ಆಡಿಯೆನ್ಸ್ ರಿಸರ್ಚ್ ಕೌನ್ಸಿಲ್ ನ ಮಾಜಿ ಸಿಇಒ ಪಾರ್ಥೋ ದಾಸ್ ಗುಪ್ತಾ ಅವರಿಗೆ ಬಾಂಬೆ ಹೈಕೋರ್ಟ್ ಶ್ಯೂರಿಟಿ ಮೇರೆಗೆ ಜಾಮೀನು ನೀಡಿದೆ. 2 ಲಕ್ಷ ಶ್ಯೂರಿಟಿ ಮೇರೆಗೆ ಪಾರ್ಥೋ ಗುಪ್ತಾ ಅವರಿಗೆ ಬಾಂಬೆ ಕೋರ್ಟ್ ಜಾಮೀನು ನೀಡಿದ್ದು, ಆರು ತಿಂಗಳುಗಳ ಕಾಲ ಪ್ರತಿ ಶನಿವಾರ ಮುಂಬೈ ಪೊಲೀಸರ ಅಪರಾಧ ಶಾಖೆಗೆ ವಿಚಾರಣೆಗಾಗಿ ಭೇಟಿ ನೀಡಬೇಕು …

Read More »

ಕೈ-ಕಾಲು ಕಟ್ಟಿದ ಸ್ಥಿತಿಯಲ್ಲಿ ನಿರ್ಜನ ಪ್ರದೇಶದಲ್ಲಿ ಕಾಲೇಜು ವಿದ್ಯಾರ್ಥಿನಿ ಪತ್ತೆ..!

ವಿಜಯವಾಡ: ದುಷ್ಕರ್ಮಿಗಳು ಪದವಿ ವಿದ್ಯಾರ್ಥಿನಿಯ ಕೈಕಾಲು ಕಟ್ಟಿ ನಿರ್ಜನ ಪ್ರದೇಶವೊಂದರಲ್ಲಿ ಎಸೆದು ಹೋಗಿರುವ ಆತಂಕಕಾರಿ ಘಟನೆ ಆಂಧ್ರ ಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ನಡೆದಿದೆ. ಥೇರ್ಲಂ ಪೊಲೀಸ್​ ಠಾಣೆಯ ಸಮೀಪವಿದ್ದ ನಿರ್ಜನ ಪ್ರದೇಶದಲ್ಲಿ ಪ್ರಜ್ಞೆಯಿಲ್ಲದೆ ಬಿದ್ದಿದ್ದ ವಿದ್ಯಾರ್ಥಿನಿಯನ್ನು ನೋಡಿದ ಸ್ಥಳೀಯರು ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ತಕ್ಷಣ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಸದ್ಯ ವಿದ್ಯಾರ್ಥಿನಿ ಕೋಮಾದಲ್ಲಿದ್ದು, ಆಕೆಯನ್ನು ಥೇರ್ಲಂ ವಲಯದ ಚಾರ್ಲಾ ಗ್ರಾಮದ ನಿವಾಸಿ ರಮಾ ಎಂದು …

Read More »

ಈ ಸರ್ಕಾರದಲ್ಲಿ ಯಾರು ಏನು ಬೇಕಾದ್ರೂ ಮಾಡಬಹುದು: H.D.K.

ಬೆಂಗಳೂರು: ಮನೆಯಲ್ಲಿಯೇ ಕೊರೊನಾ ಲಸಿಕೆ ಪಡೆದ ಕೃಷಿ ಸಚಿವ ಬಿ.ಸಿ.ಪಾಟೀಲ್ ವರ್ತನೆಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ, ಈ ಸರ್ಕಾರದಲ್ಲಿ ಏನು ಬೇಕಾದರೂ ಮಾಡಬಹುದಾಗಿದೆ ಎಂದು ಕಿಡಿಕಾರಿದ್ದಾರೆ. ಕೊರೊನಾ ಮಾರ್ಗಸೂಚಿಯನ್ನೂ ಪಾಲಿಸದೇ ಬಿ.ಸಿ.ಪಾಟೀಲ್ ಮನೆಗೆ ಆಸ್ಪತ್ರೆ ಸಿಬ್ಬಂದಿ ಕರೆಸಿ ಲಸಿಕೆ ಹಾಕಿಸಿಕೊಂಡಿದ್ದು, ಸಚಿವರ ನಡೆಗೆ ಸರ್ಕಾರದ ಸಚಿವರೇ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಈ ನಡುವೆ ಮಾಜಿ ಸಿಎಂ, ಕುಮಾರಸ್ವಾಮಿ ಈ ಸರ್ಕಾರಲ್ಲಿ ಯಾರು ಏನು …

Read More »

15 ದಿನದಲ್ಲಿ ಹುಲಿ, ಚಿರತೆ ಸಾಫಾರಿಗೂ ಅವಕಾಶ: ಶಾಸಕ ಸತೀಶ ಜಾರಕಿಹೊಳಿ

  ಬೆಳಗಾವಿ: ಮೂರು ರಾಜ್ಯಗಳ ಸಂಪರ್ಕ ಕೊಂಡಿಯಾಗಿರುವ  ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡಿರುವ ಬೆಳಗಾವಿಯ ರಾಣಿ ಚನ್ನಮ್ಮ ಮೃಗಾಲಯದಿಂದ  ಪ್ರವಾಸೋದ್ಯಮ ಇಲಾಖೆ ಮಹತ್ವ ಬರಲಿದೆ   ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಭೂತರಾಮನಹಟ್ಟಿ ರಾಣಿ ಚನ್ನಮ್ಮ ಮೃಗಾಲಯದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, ಮೈಸೂರು ಮಾದರಿಯಲ್ಲಿ ಬೆಳಗಾವಿಯ ಮೃಗಾಲಯಕ್ಕೆ ಒತ್ತು ನೀಡಲಾಗುವುದು. ಇದರಿಂದ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ ಸಂಪರ್ಕಕೊಂಡಿಯಾಗಲಿದೆ. ಅದರಲ್ಲಿಯೂ ಉತ್ತರ ಕರ್ನಾಟಕ ಜನತೆ ಮೈಸೂರಿಗೆ …

Read More »

ಗೋಕಾಕ : ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶದಲ್ಲಿ ಐಪಿಎಸ್ ರವಿ ಚಣ್ಣನ್ನವರ ಅವರನ್ನು ಶ್ರೀಮಠದಿಂದ ಸನ್ಮಾನಿಸುತ್ತಿರುವುದು.

ಗೋಕಾಕ: ಸಾಧನೆಗೆ ಅಸಾಧ್ಯವಾದದ್ದು ಯಾವುದೂ ಇಲ್ಲ, ಸಾಧನೆ ಮಾಡುವ ಛಲ ಇರಬೇಕು. ವಿದ್ಯಾರ್ಜನೆಯೇ ನನ್ನ ಕಸಬು ಎಂದು ಐಪಿಎಸ್ ರವಿ ಚಣ್ಣನ್ನವರ ಹೇಳಿದರು. ಸೋಮವಾರದಂದು ನಗರದ ಶ್ರೀ ಚನ್ನಬಸವೇಶ್ವರ ವಿದ್ಯಾಪೀಠ ಆವರಣದಲ್ಲಿ ಇಲ್ಲಿನ ಶ್ರೀ ಶೂನ್ಯ ಸಂಪಾದನ ಮಠದ 16 ನೇ ಶರಣ ಸಂಸ್ಕøತಿ ಉತ್ಸವದ ಯುವ ಸಮಾವೇಶವನ್ನುದ್ದೇಶಿಸಿ ಅವರು ಮಾತನಾಡಿದರು. ಯುವ ಜನತೆಗೆ ಜ್ಞಾನಾರ್ಜನೆ ಮುಖ್ಯವಾಗಿದೆ ಅದನ್ನು ಕಲಿಯಬೇಕು. ನನಗೆ ಸ್ವಾಮಿ ವಿವೇಕಾನಂದ, ಚಂದ್ರಶೇಖರ ಆಝಾದ, ಭಗತ್‍ಸಿಂಗ್ ಅವರ …

Read More »

ಕನ್ನಡದ ದಿಗ್ಗಜರ ಜೊತೆ ನಟಿಸಿದ ಈ ನಟಿಯ ಕಥೆ ಕೇಳಿದರೆ ನೀವು ಅಳುವುದು ಗ್ಯಾರಂಟಿ

ಪದ್ಮಪ್ರಿಯಾ ಒಬ್ಬ ದಕ್ಷಿಣ ಭಾರತೀಯ ನಟಿ, ಅವರು ಕನ್ನಡ ಮತ್ತು ತಮಿಳು ಭಾಷೆಯ ಚಲನಚಿತ್ರಗಳಲ್ಲಿ ಪ್ರಧಾನವಾಗಿ ಕೆಲಸ ಮಾಡಿದರು. ಅವರು ಕೆಲವು ಮಲಯಾಳಂ ಮತ್ತು ತೆಲುಗು ಚಿತ್ರಗಳಲ್ಲಿಯೂ ನಟಿಸಿದ್ದಾರೆ. ಅವರ ಮೊದಲ ಚಲನಚಿತ್ರ ತೆಲುಗು, ಅದಪಿಲ್ಲಾಲಾ ತಾಂಡ್ರಿ ನಲ್ಲಿ, ಮತ್ತು ನಂತರ ಅವರು ಕನ್ನಡ ಚಲನಚಿತ್ರೋದ್ಯಮದಲ್ಲಿ ಬಂಗಾರದ ಗುಡಿ ಅವರೊಂದಿಗೆ ಪಾದಾರ್ಪಣೆ ಮಾಡಿದರು; ಅವರು 1970 ರ ದಶಕದ ಆರಂಭದಲ್ಲಿ ಮತ್ತು ಕೊನೆಯಲ್ಲಿ ಜನಪ್ರಿಯ ನಟಿಯಾಗಿದ್ದರು. ಆಪರೇಷನ್ ಡೈಮಂಡ್ ರಾಕೆಟ್, …

Read More »

ಆಂಧ್ರಪ್ರದೇಶದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬಂಧನ

ತಿರುಪತಿ : ತಿರುಪತಿ ವಿಮಾನ ನಿಲ್ದಾಣದಲ್ಲಿ ಆಂಧ್ರ ಪ್ರದೇಶದ ಮಾಜಿ ಮುಖ್ಯಮಂತ್ರಿ ಹಾಗೂ ಟಿಡಿಪಿ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಚಂದ್ರಬಾಬು ನಾಯ್ಡು ಚಿತ್ತೂರು ಜಿಲ್ಲೆಯಲ್ಲಿ ಚುನಾವಣಾ ಪ್ರಚಾರಕ್ಕೆ ಹಾಜರಾಗಲು ತೆರಳುತ್ತಿದ್ದ ವೇಳೆ, ಅವರನ್ನು ಏರ್​ಪೋರ್ಟ್​ನಲ್ಲೇ ರೇನಿಗುಂಟಾ ಪೊಲೀಸರು ತಡೆದಿದ್ದಾರೆ. ಇದನ್ನು ಅಲ್ಲಿಯೇ ಖಂಡಿಸಿದ ಅವರು ಬೇಕಾದರೆ ನನ್ನನ್ನು ಬಂಧಿಸಿ.ಆದರೆ ನಿರ್ಭಂಧಿಸಬೇಡಿ. ಇಲ್ಲಿ ಏನು ನಡೆಯುತ್ತಿದೆ? ನಾನು ಯಾರನ್ನಾದರೂ ಕೊಲ್ಲಲು ಹೋಗುತ್ತಿದ್ದೇನಾ? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. …

Read More »

100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ ಆಕ್ರೋಶ ಜಾಥಾ

ಚಿಕ್ಕಬಳ್ಳಾಪುರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತ ಮತ್ತು ಜನ ವಿರೋಧಿ ಧೋರಣೆಗಳನ್ನು ಅನುಸರಿಸುತ್ತಿದೆ ಎಂದುಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್‌ ಅಧ್ಯಕ್ಷೆ ಡಾ.ಪುಷ್ಪಅಮರನಾಥ್‌ ಹೇಳಿದರು. ನಗರದ ಜಿಲ್ಲಾ ಕಾಂಗ್ರೆಸ್‌ ಕಚೇರಿಯಲ್ಲಿ ಮಹಿಳಾ ವಿಭಾಗದ ಪದಾಧಿಕಾರಿಗಳೊಂದಿಗೆ ಜನಧ್ವನಿ ಹೋರಾಟದ ಅಂಗವಾಗಿ ಆಯೋಜಿಸಿದ ಪೂರ್ವಭಾವಿ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರ ಚುನಾವಣಾ ಪ್ರಣಾಳಿಕೆಯ ವಾಗ್ಧಾನಗಳನ್ನು ಈಡೇರಿಸ  ಬೇಕೆಂದು ಆಗ್ರಹಿಸಿ ಪ್ರಸಕ್ತ ಸಾಲಿನಲ್ಲಿ ರಾಜ್ಯದ 100 ವಿಧಾನಸಭಾ ಕ್ಷೇತ್ರದಲ್ಲಿ ಮಹಿಳಾ …

Read More »

ಬಿಗ್ ನ್ಯೂಸ್: ರಾಜ್ಯದಲ್ಲಿ ಮದ್ಯ ನಿಷೇಧಕ್ಕೆ ಸಿಎಂ ಯಡಿಯೂರಪ್ಪರಿಗೆ ಸಿರಿಗೆರೆ ಶ್ರೀಗಳ ಪತ್ರ

ಬೆಂಗಳೂರು: ರಾಜ್ಯದಲ್ಲಿ ಮಧ್ಯಾಹ್ನ ನಿಷೇಧಿಸುವಂತೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸಿರಿಗೆರೆ ತರಳಬಾಳು ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಪತ್ರ ಬರೆದು ಒತ್ತಾಯಿಸಿದ್ದಾರೆ. ಮದ್ಯದ ದಾಸರಾಗಿ ರಾಜ್ಯದ ಗ್ರಾಮೀಣ ಪ್ರದೇಶದ ಬಡವರು, ದಲಿತರು, ಮಧ್ಯಮವರ್ಗದ ಕುಟುಂಬದವರು ನಿತ್ಯ ನರಕ ಅನುಭವಿಸುವಂತಾಗಿದೆ. ಹೀಗಾಗಿ ರಾಜ್ಯದಲ್ಲಿ ಸಂಪೂರ್ಣ ಮದ್ಯ ನಿಷೇಧಿಸುವಂತೆ ಶ್ರೀಗಳು ಒತ್ತಾಯಿಸಿದ್ದಾರೆ. ಮದ್ಯಪಾನದಂತಹ ಅನಿಷ್ಟದಿಂದ ನಾಡಿನ ಪರಂಪರೆಗೆ ಪೆಟ್ಟು ಬೀಳುತ್ತಿದೆ. ಮದ್ಯವ್ಯಸನಿಗಳು ದುಡಿಯುವ ಶಕ್ತಿ ಕಳೆದುಕೊಂಡು ಕೌಟುಂಬಿಕ ಸಮಸ್ಯೆ ಎದುರಿಸುತ್ತಿದ್ದಾರೆ. ಅನೇಕರು …

Read More »

ಕೋವಿಡ್ ಲಸಿಕೆ ಎಲ್ಲಿ ಸಿಗುತ್ತೆ..? ಬೆಲೆ ಎಷ್ಟು..? ಇಲ್ಲಿದೆ ಪೂರ್ಣ ಮಾಹಿತಿ

ಬೆಂಗಳೂರು, ಮಾ.1- ರಾಜ್ಯದಲ್ಲೂ ಮೂರನೆ ಹಂತದ ಕೊರೊನಾ ಲಸಿಕಾ ಕಾರ್ಯಕ್ರಮ ಆರಂಭವಾಗಿದ್ದು , 250ಕ್ಕೂ ಹೆಚ್ಚು ಆಸ್ಪತ್ರೆಗಳಲ್ಲಿ ಇಂದಿನಿಂದ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬಿಬಿಎಂಪಿಯ ಆರೋಗ್ಯ ಕೇಂದ್ರಗಳು ಸೇರಿದಂತೆ ರಾಜ್ಯದ 250 ಆಸ್ಪತ್ರೆಗಳಲ್ಲಿ 60 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರು ಹಾಗೂ ಅನಾರೋಗ್ಯ ಇರುವ 45 ವರ್ಷ ಮೇಲ್ಪಟ್ಟ ಮಧ್ಯ ವಯಸ್ಕರಿಗೆ ಲಸಿಕೆ ಹಾಕಲಾಗುತ್ತಿದೆ. ಕೋ-ವಿನ್ 2.0 ಆ್ಯಪ್ ಮತ್ತು ಪೋರ್ಟಲ್‍ಗಳು ಬೆಳಗ್ಗೆ 9 ಗಂಟೆಯಿಂದ ಸಕ್ರಿಯವಾಗಿದ್ದು , ಲಸಿಕೆ …

Read More »