Breaking News

Uncategorized

ಇನ್ನೂ ಬಾರದ ಕಿತ್ತೂರಿನ ಐತಿಹಾಸಿಕ ದಾಖಲೆಗಳು: ಇಚ್ಚಾಶಕ್ತಿ ತೋರದ ಜನಪ್ರತಿನಿಧಿಗಳು

 ಕಿತ್ತೂರು: ಕಿತ್ತೂರು ಉತ್ಸವ ಈಗ ದ್ವಿಶತಮಾನೋತ್ಸವ ಸಂಭ್ರಮದಲ್ಲಿದೆ. ಆದರೆ, ಕಿತ್ತೂರು ಸಂಸ್ಥಾನದ ನೈಜ ಇತಿಹಾಸದ ಬಗ್ಗೆ ಇಂದಿಗೂ ಸ್ಪಷ್ಟತೆ ಇಲ್ಲ. ಅದರ ಕುರಿತು ಅಧ್ಯಯನ ಕೈಗೊಳ್ಳಲು ಮಹಾರಾಷ್ಟ್ರದ ಮುಂಬೈ ಮತ್ತು ಪುಣೆಯ ಪತ್ರಾಗಾರ ಇಲಾಖೆಯಲ್ಲಿನ ಕೆಲವು ದಾಖಲೆಗಳನ್ನು ತರಲಾಗಿದೆ. ಆದರೆ, ಇನ್ನೂ ಅಧಿಕ ಪ್ರಮಾಣದಲ್ಲಿ ಅಲ್ಲಿರುವ ದಾಖಲೆಗಳನ್ನು ತರುವ ನಿಟ್ಟಿನಲ್ಲಿ ಸರ್ಕಾರ ಕ್ರಮ ವಹಿಸಬೇಕು ಎನ್ನುವ ಆಗ್ರಹ ಕೇಳಿಬರುತ್ತಿದೆ. ‘ಪ್ರತಿವರ್ಷ ಉತ್ಸವ ಬಂದಾಗ, ಈ ವಿಷಯ ಮುನ್ನೆಲೆಗೆ ಬರುತ್ತದೆ. ‘ಲಂಡನ್‌ ಮತ್ತು …

Read More »

ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ :ಬಾಲಚಂದ್ರ ಜಾರಕಿಹೊಳಿ

ಮೂಡಲಗಿ- ದೇವರ ದಯೆಯಿಂದ ಈ ಬಾರಿ ಉತ್ತಮವಾಗಿ ಮಳೆಯಾಗುತ್ತಿದ್ದು, ಇದರಿಂದ ರೈತರ ಮುಖದಲ್ಲಿ ಮಂದಹಾಸ ಮೂಡುತ್ತಿದೆ. ರೈತರು ಸುಖವಾಗಿದ್ದರೆ ಇಡೀ ದೇಶವೇ ಸುಖದಿಂದ ಇರುತ್ತದೆ ಎಂದು ಬೆಮ್ಯುಲ್ ಅಧ್ಯಕ್ಷರೂ ಆಗಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ರವಿವಾರ ಸಂಜೆ ತಾಲ್ಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮಿ ದೇವರ ದರ್ಶನ ಪಡೆದು ಮಾತನಾಡಿದ ಅವರು, ದಸರಾ ಮುಗಿದು ದೀಪಾವಳಿ ಹಬ್ಬಕ್ಕೆ ಅಣಿಯಾಗುತ್ತಿರುವ ಈ ಸಂದರ್ಭದಲ್ಲಿ ದೇವರು ಎಲ್ಲರಿಗೂ ಒಳ್ಳೇಯದು ಮಾಡುತ್ತಾನೆ ಎಂದವರು …

Read More »

ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ರೇಡ್ : ಹಲವು ದಾಖಲೆಗಳ ಪರಿಶೀಲನೆ

ಧಾರವಾಡ : ಇಂದು ಲೋಕಾಯುಕ್ತ ಅಧಿಕಾರಿಗಳು ಧಾರವಾಡ ನಗರದ ಹೊಸ ಬಸ್ ನಿಲ್ದಾಣದ ಮೇಲೆ ದಾಳಿ ಮಾಡಿದರು. ಸಾರ್ವಜನಿಕರಿಂದ ನಿಲ್ದಾಣದ ಸ್ವಚ್ಛತೆ ಹಾಗೂ ಇತರೆ ವಿಷಯಗಳ ಕುರಿತಾಗಿ ದೂರು ಬಂದ ಹಿನ್ನೆಲೆಯಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಹೌದು ಧಾರವಾಡ ಹೊಸ ಬಸ್ ನಿಲ್ದಾಣದ ಮೇಲೆ ಲೋಕಾಯುಕ್ತ ದಾಳಿ ಮಾಡಿದ್ದು, ಬಸ್ ನಿಲ್ದಾಣದ ಸ್ವಚ್ಛತೆಯ ಬಗ್ಗೆ ಸಾರ್ವಜನಿಕರಿಂದ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಡಿವೈಎಸ್ಪಿ ವೆಂಕಟನಗೌಡ ನೇತೃತ್ವದಲ್ಲಿ ಅಧಿಕಾರಿಗಳು …

Read More »

ಸಿಎಂ ಬಂಧಿಸಿ ವಿಚಾರಣೆ ನಡೆಸುವಂತೆ ಲೋಕಾಯುಕ್ತಕ್ಕೆ ಮತ್ತೊಂದು ದೂರು

ಮೈಸೂರು, ಅ.14- ಮುಡಾ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ ಅಧಿಕಾರವನ್ನು ದುರುಪಯೋಗಪಡಿಸಿಕೊಳ್ಳುತ್ತಿದ್ದು, ತನಿಖೆಯ ದಿಕ್ಕು ತಪ್ಪಿಸುವ ಪ್ರಯತ್ನ ನಡೆಸುತ್ತಿದ್ದಾರೆ ಹಾಗೂ ಪ್ರಚೋದನೆ ನೀಡುವ ಕೃತ್ಯದಲ್ಲಿ ನಿರಂತರವಾಗಿ ಭಾಗಿಯಾಗುತ್ತಿದ್ದಾರೆ. ಹೀಗಾಗಿ ಕೂಡಲೇ ಅವರನ್ನು ಬಂಧಿಸಿ ವಿಚಾರಣೆಗೊಳ ಪಡಿಸುವಂತೆ ದೂರುದಾರ ಸ್ನೇಹಮಯಿ ಕೃಷ್ಣ ಲೋಕಾಯುಕ್ತ ಪೊಲೀಸ್ ಅಧ್ಯಕ್ಷಕರಿಗೆ ದೂರು ನೀಡಿದ್ದಾರೆ. ದಸರಾ ಸಂದರ್ಭದಲ್ಲಿ ರಾಜ್ಯ ಸರ್ಕಾರದಿಂದ ನೀಡಲಾದ ಜಾಹೀರಾತುವಿನಲ್ಲಿ ಮುಖ್ಯಮಂತ್ರಿಯವರು ತಮ್ಮ ಮೇಲಿನ ಆರೋಪವನ್ನು ಮುಚ್ಚಿಕೊಳ್ಳಲು ಹಾಗೂ ಪ್ರಚೋದನೆ ನೀಡಲು ಸಾರ್ವಜನಿಕರ ಹಣವನ್ನು ದುರ್ಬಳಕೆ …

Read More »

ಯಲ್ಲಮ್ಮ ದೇವಿ ಭಕ್ತರಿಗೆ ದಾಸೋಹ ವ್ಯವಸ್ಥೆ, ಸ್ವಚ್ಛತೆಗೆ ಆದ್ಯತೆ ನೀಡಿ: ಸಿಎಂ

ಬೆಳಗಾವಿ: ಶ್ರೀರೇಣುಕಾ ಯಲ್ಲಮ್ಮ ದೇವಿ ಸನ್ನಿಧಿಗೆ ಪ್ರತೀ ವರ್ಷ 1.5 ಯಿಂದ 2 ಕೋಟಿ ಭಕ್ತರು ಬರುವುದರಿಂದ ಆರೋಗ್ಯಕರ ದಾಸೋಹ ವ್ಯವಸ್ಥೆ ಮತ್ತು ವೈಜ್ಞಾನಿಕ ಪದ್ಧತಿಯ ಕಸ ವಿಲೇವಾರಿ ವ್ಯವಸ್ಥೆ ರೂಪಿಸಬೇಕು. ಹಾಗೆಯೇ ಬರುವ ಭಕ್ತರಿಗೆ ತಾಯಿಯ ದರ್ಶನ ಕಡ್ಡಾಯ ಸಿಗುವ ವ್ಯವಸ್ಥೆಯ ಪ್ರಥಮ ಆದ್ಯತೆಯಲ್ಲಿ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದರು.   ಶ್ರೀ ಕ್ಷೇತ್ರ ಯಲ್ಲಮ್ಮನಗುಡ್ಡದಲ್ಲಿ ರವಿವಾರ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ರೇಣುಕಾ ಯಲ್ಲಮ್ಮ …

Read More »

ಇನ್ಮುಂದೆ 7 ದಿನಗಳಲ್ಲೇ ಸಿಗಲಿದೆ ಜನನ-ಮರಣ ಪ್ರಮಾಣಪತ್ರ!

ಬೆಂಗಳೂರು : ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರವನ್ನು ವಿತರಿಸುವಾಗ ಇ- ಜನ್ಮ ತಂತ್ರಾಂಶದ ಸಕಾಲ ಮಿತಿಯನ್ನು 15 ರಿಂದ 7 ದಿನಗಳಿಗೆ ಕಡಿಮೆ ಮಾಡುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಆಸ್ಪತ್ರೆಯಲ್ಲಿ ಮತ್ತು ನಂತರದ ಜನನ ಪ್ರಮಾಣ ಪತ್ರದ ವಿತರಣೆಯ ಕುರಿತು ಉಲ್ಲೇಖ (1) ರಂತೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗ-2 ರ 4ನೇ ವರದಿಯ ಶಿಫಾರಸ್ಸು ಸಂಖ್ಯೆ 131 ಕ್ಕೆ …

Read More »

ಚರ್ಚ್‌ನಲ್ಲಿ ಆಯುಧ ಪೂಜೆ ಮಾಡಿ ಗಮನ ಸೆಳೆದ ಕ್ರೈಸ್ತರು

ಚಾಮರಾಜನಗರ, ಅಕ್ಟೋಬರ್‌, 11: ಇಂದು (ಅಕ್ಟೋಬರ್‌ 11) ಆಯುಧ ಪೂಜಾ ಕಾರ್ಯಗಳು ನಡೆಯುತ್ತಿವೆ. ಮತ್ತೊಂದೆಡೆ ಕ್ರೈಸ್ತ ಸಮುದಾಯದವರು ಹಿಂದೂಗಳ ಪವಿತ್ರ ಆಚರಣೆಯಾದ ಆಯುಧ ಪೂಜೆಯನ್ನು ಮಾಡುವ ಮೂಲಕ ಗಮನ ಸೆಳೆದ ಘಟನೆ ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಮಾರ್ಟಳ್ಳಿ ಗ್ರಾಮದಲ್ಲಿ ನಡೆದಿದೆ. ಮಾರ್ಟಳ್ಳಿ ಗ್ರಾಮದಲ್ಲಿ ಕ್ರೈಸ್ತ ಸಮುದಾಯವರೇ ಅಧಿಕ ಸಂಖ್ಯೆಯಲ್ಲಿದ್ದು, ಇಂದು ವಾಹನಗಳನ್ನು ಶುಚಿಗೊಳಿಸಿ, ಅಲಂಕೃತಗೊಳಿಸಿ ಚರ್ಚ್‌ಗೆ ಕೊಂಡೊಯ್ದು ಆಯುಧ ಪೂಜೆ ನೆರವೇರಿಸಿದ್ದಾರೆ. ಅಲ್ಲಿನ ಪಾದ್ರಿ ಸಗಾಯ್ ರಾಜ್ ಪ್ರಾರ್ಥನೆ, …

Read More »

ಸಿಎಂ ಸ್ಥಾನಕ್ಕಾಗಿ ಡಿಕೆಶಿ ಹೋಮ ಮಾಡಿಸ್ತಿದ್ದಾರೆ,

ಬೆಂಗಳೂರು: ಕಾಂಗ್ರೆಸ್​ ಪಕ್ಷದಲ್ಲಿ ಮುಖ್ಯಮಂತ್ರಿ (Chief Minister) ಸ್ಥಾನದ ಪೈಪೋಟಿ ಜೋರಾಗಿದ್ದು, ಸಿದ್ದರಾಮಯ್ಯ (Siddaramaiah) ನಂತರ ಮುಖ್ಯಮಂತ್ರಿ ಹುದ್ದೆಗೇರಲು ಸಚಿವ ಸತೀಶ್ ಜಾರಕಿಹೊಳಿ (Satish Jarakiholi) ಸ್ಮಶಾನದಲ್ಲಿ ಪೂಜೆ ಮಾಡಿಸುತ್ತಿದ್ದರೆ, ಇನ್ನೊಂದೆಡೆ ಗೃಹ ಸಚಿವ ಪರಮೇಶ್ವರ್ (Parameshwar) ಸಿದ್ದಗಂಗಾ ಮಠದಲ್ಲಿ ಪೂಜೆ ಮಾಡಿಸ್ತಿದ್ದಾರೆ ಎಂದು ಪ್ರತಿ ಪಕ್ಷದ ನಾಯಕ ಆರ್​. ಅಶೋಕ್​ (R. Ashok) ಟಾಂಗ್​ ನೀಡಿದ್ದಾರೆ. ಅದರಲ್ಲೂ ಬೆಳಗಾವಿ ಸಚಿವರಂತೂ ಬ್ಯುಸಿನೆಸ್ ಮ್ಯಾನ್ (Business man) ರೀತಿಯಲ್ಲಿ ಫುಲ್ …

Read More »

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು!

ಅತ್ಯಾಚಾರ ಆರೋಪ : ಶಾಸಕ ವಿನಯ್ ಕುಲಕರ್ಣಿ ವಿರುದ್ಧ ‘FIR’ ದಾಖಲು! ಬೆಂಗಳೂರು : ಕಾಂಗ್ರೆಸ್ ಶಾಸಕ ವಿನಯ ಕುಲಕರ್ಣಿ ರೈತ ಮುಖಂಡೆಯ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಸಂತ್ರಸ್ತೆ ಮಹಿಳೆ ಇಂದು ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಿರುವ ಹಿನ್ನೆಲೆಯಲ್ಲಿ ಎಫ್‌ಐಆರ್ ದಾಖಲಾಗಿದೆ.   ಹೌದು ರೈತ ಮುಖಂಡ ಮಹಿಳೆಯ ಮೇಲೆ ಅತ್ಯಾಚಾರ ಆರೋಪ ಹಿನ್ನೆಲೆಯಲ್ಲಿ ಕಾಂಗ್ರೆಸ್ ಶಾಸಕ …

Read More »

ಹೆಬ್ಬಾವಿನ ಮರಿ ರಕ್ಷಣೆ

ಬಿಡದಿ: ಶ್ಯಾನಮಂಗಲ ಗ್ರಾಮದ ವೆಂಕಟೇಶ್ ಎಂಬುವವರ ಜಮೀನಿನಲ್ಲಿ ಹೆಬ್ಬಾವಿನ ಮರಿಯನ್ನು ಸೋಮವಾರ ಹಿಡಿದು ರಕ್ಷಿಸಲಾಗಿದೆ. ಕೆಲಸದ ನಿಯಮಿತ ವೆಂಕಟೇಶ್ ಜಮೀನಿಗೆ ತೆರಳುತ್ತಿದ್ದಾಗ ದೈತ್ಯ ಗಾತ್ರದ ಹೆಬ್ಬಾವಿನ ಮರಿಯನ್ನು ಕಂಡು ಗಾಬರಿಯಾಗಿದ್ದಾರೆ. ನಂತರ ಅರಣ್ಯ ಇಲಾಖೆಗೆ ಕರೆ ಮಾಡಿ ತಿಳಿಸಿದ್ದಾರೆ. ಉರಗ ರಕ್ಷಕರಾದ ಶಶಿಕುಮಾರ್ ಸ್ಥಳಕ್ಕೆ ಬಂದು, ಸುಮಾರು 10 ಅಡಿ ಉದ್ದ 14 ಕೆಜಿ ತೂಕದ ಹೆಬ್ಬಾವಿನ ಮರಿಯನ್ನು ರಕ್ಷಿಸಿ, ಹಂದಿಗುಂದಿ ಅರಣ್ಯಕ್ಕೆ ಸುರಕ್ಷಿತವಾಗಿ ಬಿಡಲಾಗಿದೆ.

Read More »