Breaking News

Uncategorized

ಗಣತಿ ನಮೂನೆ ಹಿಂದಿರುಗಿಸದಿದ್ರೆ ಕರಡು ಪಟ್ಟಿಯಿಂದ ಮತದಾರರ ಹೆಸರು ಡಿಲೀಟ್: ಚುನಾವಣಾಧಿಕಾರಿ ವಾರ್ನಿಂಗ್‌

ಬೆಂಗಳೂರು: ಮತದಾರರು ಭರ್ತಿ ಮಾಡಿದ ಗಣತಿ ನಮೂನೆಯನ್ನು ಬಿಎಲ್‌ಒಗಳಿಗೆ ಹಿಂದಿರುಗಿಸದೇ ಇದ್ರೆ, ಅಂಥವರ ಹೆಸರನ್ನ ಮತದಾರರ ಪಟ್ಟಿಯಿಂದ  ತೆಗೆದುಹಾಕಲಾಗುತ್ತದೆ ಎಂದು ಅಪರ ಜಿಲ್ಲಾ ಚುನಾವಣಾಧಿಕಾರಿ ಶ್ರೀ ಕೆ.ಎನ್. ರಮೇಶ್ ಎಚ್ಚರಿಕೆ ನೀಡಿದ್ದಾರೆ. ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು, ಬೆಂಗಳೂರು ದಕ್ಷಿಣ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಸಂಬಂಧ ಬಿಎಲ್ಒ ಗಳು ಮನೆ ಮನೆಗೆ ಭೇಟಿ ನೀಡಿ ಎನ್ಯುಮರೇಷನ್ ಫಾರಂ ನೀಡುವ, ಭರ್ತಿ ಮಾಡಿದ ಅರ್ಜಿಗಳನ್ನ …

Read More »

ಮಳೆ ತೀವ್ರ ಕೊರತೆ – ಎಕರೆಗೆ 50 ಸಾವಿರ ಪರಿಹಾರ ನೀಡುವಂತೆ ವಿಜಯೇಂದ್ರ ಆಗ್ರಹ

ಬೀದರ್: ಉತ್ತರ ಕರ್ನಾಟಕದಲ್ಲಿ ವಿಶೇಷವಾಗಿ ಕಲ್ಯಾಣ ಕರ್ನಾಟಕದಲ್ಲಿ ಮಳೆಯ ತೀವ್ರ ಕೊರತೆಯಾಗಿದ್ದು, ರೈತರು ಆತಂಕಕ್ಕೊಳಗಾಗಿದ್ದಾರೆ. ಆದ್ದರಿಂದ ಸರ್ಕಾರ ಅನ್ನದಾತರ ಕಷ್ಟಕ್ಕೆ ಸ್ಪಂದಿಸಬೇಕು. ಸಂಕಷ್ಟದಲ್ಲಿರುವ ರೈತರಿಗೆ ಎಕರೆಗೆ 50 ಸಾವಿರ ರೂ. ಪರಿಹಾರವನ್ನು ಸರ್ಕಾರ ನೀಡಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ  ಅವರು ಆಗ್ರಹಿಸಿದರು. ಬೀದರ್‌ನಲ್ಲಿ (Bidar) ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಉತ್ತರ ಕರ್ನಾಟಕದಲ್ಲಿ ಮುಂಗಾರು ದುರ್ಬಲವಾಗಿದೆ. ಕಲ್ಯಾಣ ಕರ್ನಾಟದ ಭಾಗದಲ್ಲಿ 30 ಲಕ್ಷ ಹೆಕ್ಟೇರ್‌ಗೂ ಹೆಚ್ಚು …

Read More »

ಬರೀ SIR ಬಗ್ಗೆ ಮಾತನಾಡೋಕೆ ಬಂದಿದ್ದೀರಾ? – ಆರ್.ಅಶೋಕ್ ಕಾರು ಅಡ್ಡಗಟ್ಟಿ ರೈತರ ಆಕ್ರೋಶ

ಚಾಮರಾಜನಗರ: ಜಿಲ್ಲೆಗೆ ಆಗಮಿಸಿದ್ದ ವಿಪಕ್ಷ ನಾಯಕ ಆರ್. ಅಶೋಕ್ (R Ashok) ಅವರಿಗೆ ಇಲ್ಲಿನ ರೈತರು ಕಾರು ಅಡ್ಡಗಟ್ಟಿ ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ನಡೆಯಿತು. ಕೇವಲ ಎಸ್‌ಐಆರ್ ವಿಚಾರದ ಬಗ್ಗೆ ಮಾತನಾಡಲು ಮಾತ್ರ ಚಾಮರಾಜನಗರಕ್ಕೆ ಬಂದಿದ್ದೀರಾ? ಜಿಲ್ಲೆಯಲ್ಲಿ ಸರಿಯಾಗಿ ಮಳೆಯಾಗದೇ ಬರ ಪರಿಸ್ಥಿತಿ ನಿರ್ಮಾಣವಾಗಿದ್ದರೂ ಇಲ್ಲಿ ಬರ ಅಧ್ಯಯನ ನಡೆಸಿಲ್ಲ ಎಂದು ರೈತರು ತೀವ್ರ ಅಸಮಾಧಾನ ಹೊರಹಾಕಿದರು. ನಗರದ ಜೆಎಸ್ಎಸ್ ಆಸ್ಪತ್ರೆಯ ಬಳಿ ಅಶೋಕ್ ಅವರ ವಾಹನವನ್ನು ತಡೆದು ನಿಲ್ಲಿಸಿದ ರೈತ …

Read More »

ಜಿಬಿಎ ಚುನಾವಣೆ ಮುಂದೂಡಿಕೆ ಕೋರಿ ಸುಪ್ರೀಂ ಕೋರ್ಟ್‌ಗೆ ರಾಜ್ಯ ಸರ್ಕಾರ ಅರ್ಜಿ

ನವದೆಹಲಿ: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ  ಚುನಾವಣೆ ಮುಂದೂಡುವಂತೆ ಕೋರಿ ರಾಜ್ಯ ಕಾಂಗ್ರೆಸ್‌ ಸರ್ಕಾರ ಸುಪ್ರೀಂ ಕೋರ್ಟ್‌ಗೆ  ಅರ್ಜಿ ಸಲ್ಲಿಸಿದೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ  ಅಭಿಯಾನ ನಡೆಯುತ್ತಿರುವ ಹಿನ್ನೆಲೆ ಚುನಾವಣೆ ನಡೆಸಲು ಡಿಸೆಂಬರ್‌ ವರೆಗೆ ಅವಕಾಶ ಕೇಳಿ ರಾಜ್ಯ ಸರ್ಕಾರ ಅರ್ಜಿ ಸಲ್ಲಿಕೆ ಮಾಡಿದೆ. ಈ ಅರ್ಜಿಯನ್ನ ಶುಕ್ರವಾರ (ಜು.17) ಕೋರ್ಟ್‌ ವಿಚಾರಣೆ ನಡೆಸಲಿದೆ. ರಾಜ್ಯ ಸರ್ಕಾರವು ಚುನಾವಣೆ ವಿಳಂಬಗೊಳಿಸಲು ಯತ್ನಿಸುತ್ತಿದೆ ಎಂದು ಕಟುವಾಗಿ ಟೀಕಿಸಿದ್ದ ಸುಪ್ರೀಂ ಕೋರ್ಟ್‌, …

Read More »

ಮೊಜ್ತಬಾ ಖಮೇನಿ 90% ಗಾನ್‌ – ಸಂಚಲನ ಸೃಷ್ಟಿಸಿದ ಟ್ರಂಪ್‌ ಹೇಳಿಕೆ

ಟೆಹ್ರಾನ್:‌ ಅಮೆರಿಕ – ಇರಾನ್‌ ನಡುವಿನ ಯುದ್ಧದ ಸನ್ನಿವೇಶ ತೀವ್ರಗೊಂಡಿರುವ ಹೊತ್ತಿನಲ್ಲೇ ಇರಾನ್‌ನ ಸುಪ್ರೀಂ ಲೀಡರ್‌ ಮೊಜ್ತಬಾ ಖಮೇನಿ 90% ಗಾನ್‌ ಎನ್ನುವ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಹೇಳಿಕೆ ಸಂಚಲನ ಸೃಷ್ಟಿಸಿದೆ. ಮಾಧ್ಯಮವೊಂದಕ್ಕೆ ನೀಡ ಸಂದರ್ಶನದಲ್ಲಿ ಮಾತನಾಡಿದ ಟ್ರಂಪ್‌, ಇರಾನ್ ತನ್ನ ನೌಕಾಪಡೆ, ವಾಯುಪಡೆ, ವಾಯು ರಕ್ಷಣಾ ವ್ಯವಸ್ಥೆಗಳು ಹಾಗೂ ಉನ್ನತ ಮಿಲಿಟರಿ ಕಮಾಂಡರ್‌ಗಳನ್ನ ಕಳೆದುಕೊಂಡಿದೆ. ಸುಪ್ರೀಂ ಲೀಡರ್ ಮೊಜ್ತಬಾ ಖಮೇನಿ 90% ಗಾನ್‌ ಆಗಿದ್ದಾರೆ. ಸಂಘರ್ಷದ ಸಮಯದಲ್ಲಿ ಇರಾನ್‌ನ …

Read More »

ಬಾಗಲಕೋಟೆಯ ಸರ್ಕಾರಿ ಶಾಲೆಯಲ್ಲಿ ಬಿಸಿಯೂಟ ಸೇವಿಸಿ 12 ಮಕ್ಕಳು ಅಸ್ವಸ್ಥ

ಬಾಗಲಕೋಟೆ: ಮುಧೋಳ  ತಾಲೂಕಿನ ಮುಗಳಖೋಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಿಸಿಯೂಟ  ಸೇವಿಸಿದ ಬಳಿಕ 12 ಮಕ್ಕಳು ಅಸ್ವಸ್ಥಗೊಂಡ ಘಟನೆ ನಡೆದಿದೆ. ಮಕ್ಕಳಲ್ಲಿ ವಾಂತಿ ಮತ್ತು ಭೇದಿ ಕಾಣಿಸಿಕೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಸ್ವಸ್ಥಗೊಂಡ 12 ಮಕ್ಕಳ ಪೈಕಿ 9 ಮಂದಿಯನ್ನು ಮುಧೋಳ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಉಳಿದ 3 ಮಕ್ಕಳನ್ನು ಹೆಚ್ಚಿನ ಚಿಕಿತ್ಸೆಗೆ ಬಾಗಲಕೋಟೆ ಆಸ್ಪತ್ರೆಗೆ ರವಾನಿಸಲಾಗಿದೆ. ಮಧ್ಯಾಹ್ನ ಬಿಸಿಯೂಟ ಸೇವಿಸಿದ ಕೆಲವೇ ಹೊತ್ತಿನಲ್ಲಿ …

Read More »

ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಕುರಿತು ಚರ್ಚಿಸುತ್ತೇವೆ

ಚಿಕ್ಕೋಡಿ: ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ಘೋಷಣೆ ಬಗ್ಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಜತೆಗೆ ಚರ್ಚೆ ನಡೆಸಲಾಗುವುದು ಎಂದು ಸಚಿವ ಸತೀಶ ಜಾರಕಿಹೊಳಿ ಹೇಳಿದರು. ಸಂಸದರ ಕಚೇರಿಯಲ್ಲಿ ಭಾನುವಾರ ಸಾರ್ವಜನಿಕರ ಕುಂದು ಕೊರತೆ ಆಲಿಸಿ ಮಾತನಾಡಿದ ಅವರು, ಆಡಳಿತಾತ್ಮಕ ದೃಷ್ಟಿಯಿಂದ ಬಹುದಿನದ ಬೇಡಿಕೆಯಾದ ಚಿಕ್ಕೋಡಿ ಪ್ರತ್ಯೇಕ ಜಿಲ್ಲಾ ಘೋಷಣೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಲಾಗುವುದು. ಜಿಲ್ಲೆ ಹಾಗೂ ರಾಜ್ಯದಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗಿಲ್ಲ. ಈಚೆಗೆ ಸುರಿದ ಮಳೆಯಿಂದ ಜಲಾಶಯಕ್ಕೆ ನೀರು ಸಂಗ್ರಹವಾಗಿದೆ. ಇದರಿಂದ ಕುಡಿಯುವ …

Read More »

ಎಸ್‌ಐಆರ್‌ನಲ್ಲಿ ಲೋಪವಾಗದಿರಲಿ

ಅಥಣಿ: ಎಸ್‌ಐಆರ್‌ನಿಂದ ಯಾರೂ ಹೊರಗುಳಿಯದಂತೆ ಬಿಎಲ್‌ಒ ಮತ್ತು ತಾಲೂಕು ಮಟ್ಟದ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಬಿಜೆಪಿ ಎಸ್‌ಐಆರ್ ಉಸ್ತುವಾರಿ ವಿಜಯಕುಮಾರ ಕೂಡಗನೂರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಥಣಿ ಕ್ಷೇತ್ರದಲ್ಲಿ ೨೬೦ ಬೂತ್‌ಗಳಿವೆ. ಮತದಾರರಿಗೆ ಸರಿಯಾಗಿ ಜಾಗೃತಿ ಮೂಡಿಸಿಲ್ಲ ಮತ್ತು ಬಿಎಲ್‌ಒಗಳಿಗೆ ಸರಿಯಾಗಿ ಮಾಹಿತಿ ನೀಡದೆ ಇರುವುದರಿಂದ ಲೋಪ-ದೋಷಗಳು ಕಂಡುಬರುತ್ತಿವೆ. ಬಿಎಲ್‌ಒಗಳು ಮನೆ ಮನೆಗೆ ತೆರಳಿ ಸರಿಯಾಗಿ ಮಾಹಿತಿ ನೀಡದೆ ಮತದಾರರನ್ನು ಗೊಂದಲಕ್ಕೆ ನೂಕುತ್ತಿರುವುದು ೭೩, ೮೧ರ …

Read More »

ಬಿಡದಿಯಲ್ಲಿ ರಣ ರಂಪಾಟ! ಇಷ್ಟಕ್ಕೆಲ್ಲ ರಾಜ್ಯ ಸರ್ಕಾರದ ಬೇಜವಾಬ್ದಾರಿ, ಚಿತಾವಣೆಯೇ ಕಾರಣ: ಎಚ್​ಡಿಕೆ

ಬೆಂಗಳೂರು: ರಾಜ್ಯದಲ್ಲಿ ಬಿಡದಿ ಟೌನ್​ಶಿಪ್​ ವಿವಾದ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಇದು ಸರ್ವೇ ಮಾಡಲು ಮುಂದಾದ ಅಧಿಕಾರಿಗಳ ವಿರುದ್ಧ ಪೊರಕೆ, ಕಲ್ಲು ತೂರಿ ರೈತರು ರೊಚ್ಚಿಗೆದ್ದಿದ್ದಾರೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಯಿಸಿರುವ ಕೇಂದ್ರ ಸಚಿವ ಎಚ್​ಡಿ ಕುಮಾರಸ್ವಾಮಿ, ಇದಕ್ಕೆಲ್ಲ ರಾಜ್ಯ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ದೂರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವರು,​ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿರುವ ರೈತರು ಸುಮಾರು 500 ದಿನಗಳಿಂದ ಬಿಡದಿಯಲ್ಲಿ ಶಾಂತಿಯುತವಾಗಿ ಹೋರಾಟ …

Read More »

ಯಾತ್ರೆ ಶುರುವಾದ ಐದೇ ದಿನಗಳಲ್ಲಿ ಕರಗಿದ ಅಮರನಾಥ ಹಿಮಲಿಂಗ

ಕೆಲವೇ ದಶಕಗಳ ಹಿಂದೆ ಶ್ರಾವಣ ಪೂರ್ಣಿಮೆಯವರೆಗೂ, ಅಂದರೆ ಆಗಸ್ಟ್ ಕೊನೆಯ ಭಾಗದವರೆಗೂ ಭಕ್ತರಿಗೆ ದರ್ಶನ ನೀಡುತ್ತಿದ್ದ ‘ಬಾಬಾ ಬರ್ಫಾನಿ’ ಅರ್ಥಾತ್ ಅಮರನಾಥದ ಪವಿತ್ರ ಹಿಮಲಿಂಗ ಈ ಬಾರಿ ಯಾತ್ರೆ ಶುರುವಾದ ಐದೇ ದಿನಗಳಲ್ಲಿ ಸಂಪೂರ್ಣ ಕರಗಿ ನೀರಾಗಿ, ಭಕ್ತರಲ್ಲಿ ನಿರಾಸೆ ಉಂಟು ಮಾಡಿದೆ. ಜಾಗತಿಕ ತಾಪಮಾನ ಏರಿಕೆ, ಹವಾಮಾನ ವೈಪರೀತ್ಯ, ಲಕ್ಷಾಂತರ ಯಾತ್ರಾರ್ಥಿಗಳ ದೇಹದ ಉಷ್ಣಾಂಶ, ನಿರಂತರ ಹೆಲಿಕಾಪ್ಟರ್ ಸಂಚಾರ, ಗುಹೆಯ ಸುತ್ತ ಮೂಲಸೌಕರ್ಯ ನಿರ್ಮಾಣ ಮುಂತಾದ ಕಾರಣಗಳಿಂದ ಹೆಚ್ಚಿನ …

Read More »