ಬೆಳಗಾವಿ: ತುರ್ತು ವೈದ್ಯಕೀಯ ವಿಭಾಗವು ಆಸ್ಪತ್ರೆ ಪ್ರಮುಖ ಆಧಾರಸ್ತಂಭವಾಗಿದೆ. ಅಪಘಾತಗಳು, ಹೃದಯಾಘಾತ, ಸ್ಟ್ರೋಕ್, ವಿಷಸೇವನೆ, ಗಂಭೀರ ಗಾಯಗಳು ಹಾಗೂ ಇತರ ಜೀವಾಪಾಯದ ಪರಿಸ್ಥಿತಿಗಳಲ್ಲಿ ರೋಗಿಯ ಜೀವ ಉಳಿಸುವ ಮೊದಲ ಜವಾಬ್ದಾರಿ ತುರ್ತು ವೈದ್ಯಕೀಯ ತಂಡದ ಮೇಲಿದೆ. ಇವರ ತ್ವರಿತ ನಿರ್ಧಾರ, ಪರಿಣತಿ ಹಾಗೂ ಮಾನವೀಯ ಸೇವೆ ಪ್ರತಿದಿನ ಅನೇಕ ಜೀವಗಳನ್ನು ಉಳಿಸುತ್ತಿದೆ ಎಂದು ಕೆಎಲ್ಇ ಶತಮಾನೋತ್ಸವ ಚಾರಿಟಬಲ್ ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರದ ವೈದ್ಯಕೀಯ ಅಧೀಕ್ಷಕ ಡಾ.ಸಂಜಯ ಕಂಬಾರ …
Read More »ದರ್ಶನಕ್ಕೆ ಮುಕ್ತವಾದ ಹಿಡಕಲ್ ಜಲಾಶಯದಲ್ಲಿ ಮುಳುಗಡೆಯಾಗಿದ್ದ ಪುರಾತನ ವಿಠ್ಠಲ ದೇವಸ್ಥಾನ
ಹುಕ್ಕೇರಿ: ತಾಲೂಕಿನ ಹಿಡಕಲ್ ಜಲಾಶಯದ ಹಿನ್ನೀರಿನಲ್ಲಿ ಮುಳುಗಡೆಯಾಗಿದ್ದ ಹುನ್ನೂರ ಆರ್ಸಿ ಗ್ರಾಮದಲ್ಲಿರುವ ಶತಮಾನದ ಪುರಾತನ ವಿಠ್ಠಲ ದೇವಸ್ಥಾನ ಜಲಾಶಯದ ನೀರು ಕಡಿಮೆಯಾಗಿರುವುದರಿಂದ ಭಕ್ತರ ದರ್ಶನಕ್ಕೆ ಲಭ್ಯವಾಗಿದೆ. 1928ರಲ್ಲಿ ಈ ವಿಠ್ಠಲ ದೇವಸ್ಥಾನ ನಿರ್ಮಿಸಿದ್ದು, ಗುತ್ತಿಯ ಮಣ್ಣಿನಿಂದ ವಿಠ್ಠಲ ಮೂರ್ತಿ ತಯಾರಿಸಲಾಗಿದೆ. ಆ ಮೂರ್ತಿಯ ಮೇಲೆ ಹೊದಿಸಿರುವ ಕಂಬಳಿ ವರ್ಷವಿಡಿ ನೀರಿನಲ್ಲಿದ್ದರೂ ಅದರಲ್ಲಿ ನೀರಿನಂಶ ಇರುವುದಿಲ್ಲ. ಹಾಗಾಗಿ ಇದೊಂದು ದೈವಿಕ ಪವಾಡ ಎನ್ನುತ್ತಾರೆ ಭಕ್ತರು. 1975-76ರಲ್ಲಿ ಹಿಡಕಲ್ ಜಲಾಶಯದಲ್ಲಿ ನೀರಿನ ಸಂಗ್ರಹದಿಂದ …
Read More »ಎರಂಡೋಲಿ ಗ್ರಾಮದಲ್ಲಿ ಕದ್ದ ಚಿನ್ನ ಖರೀದಿಸಿದ ವ್ಯಾಪಾರಿ ವಿಚಾರಣೆ
ಸಂಬರಗಿ: ಕದ್ದ ಚಿನ್ನ ಖರೀದಿ ಪ್ರಕರಣಕ್ಕೆ ಸಂಬಂಧಿಸಿ ಮಿರಜ್ ತಾಲೂಕಿನ ಎರಂಡೋಲಿ ಗ್ರಾಮದ ಆಭರಣ ಅಂಗಡಿ ಮೇಲೆ ಅಥಣಿ ಪೊಲೀಸರು ಮಂಗಳವಾರ ದಾಳಿ ನಡೆಸಿ, ಮಾಲೀಕನನ್ನು ವಿಚಾರಣೆಗೆ ಒಳಪಡಿಸಿದ್ದಾರೆ. ಅಂತಾರಾಜ್ಯ ಪ್ರಕರಣವಾಗಿರುವುದರಿಂದ ಅಂಗಡಿ ಮಾಲೀಕನ ಹೆಸರನ್ನು ಪೊಲೀಸರು ಬಹಿರಂಗಪಡಿಸಿಲ್ಲ. ಗಡಿ ಭಾಗದ ಎರಂಡೋಲಿ ಗ್ರಾಮದ ಚಿನ್ನದ ವ್ಯಾಪಾರಿ ಬಹುದಿನಗಳಿಂದ ಕರ್ನಾಟಕದಲ್ಲಿನ ಕಳವು ಪ್ರಕರಣಗಳಿಗೆ ಸಂಬಂಧಿಸಿದ ಚಿನ್ನವನ್ನು ಅನಧಿಕೃತವಾಗಿ ಖರೀದಿಸುತ್ತಿದ್ದನು ಎಂಬ ನಿಖರ ಮಾಹಿತಿ ಮೇರೆಗೆ ಕರ್ನಾಟಕ ಪೊಲೀಸರು ವ್ಯಾಪಾರಿಯನ್ನು ಅಥಣಿ ಠಾಣೆಗೆ …
Read More »ಚಮಕೇರಿ ಹನುಮ ದೇಗುಲದಲ್ಲಿ 3 ಕೆಜಿ ಬೆಳ್ಳಿ ಕಳವು
ಅಥಣಿ ಗ್ರಾಮೀಣ: ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ದುಷ್ಕರ್ಮಿಗಳು ಮಂಗಳವಾರ ರಾತ್ರಿ ಹನುಮ ದೇವಸ್ಥಾನದ ಗರ್ಭ ಗುಡಿ ಬಾಗಿಲು ಕತ್ತರಿಸಿ, ಸುಮಾರು 7 ಲಕ್ಷ ರೂ. ಮೊತ್ತದ 3 ಕೆಜಿ 750 ಗ್ರಾಂ ಬೆಳ್ಳಿ ಮೂರ್ತಿ, ಗದೆ ಹಾಗೂ 5 ಗುಂಜಿ ಬಂಗಾರ ಆಭರಣ ದೋಚಿ ಪರಾರಿಯಾಗಿದ್ದಾರೆ. 1.5 ಕೆಜಿ ತೂಕದ ಬೆಳ್ಳಿ ಮುಖ, 1.25 ಕೆಜಿ ತೂಕದ ಬೆಳ್ಳಿ ಕುದುರೆ ಮುಖ, 1 ಕೆಜಿ ತೂಕದ ಬೆಳ್ಳಿ ಗದೆ ಹಾಗೂ …
Read More »ಪೊಲೀಸರು ಕಾರ್ಯಾಚರಣೆ 4.94 ಲಕ್ಷ ರೂ. ಮೌಲ್ಯದ ಮೊಬೈಲ್ ವಶ
ಕಟಕೋಳ: ಇಲ್ಲಿನ ಪೊಲೀಸರು ಕಾರ್ಯಾಚರಣೆ ನೆಡೆಸಿ ಎಂಟು ಜನ ಕಳ್ಳರನ್ನು ಬಂಧಿಸಿ 4.94 ಲಕ್ಷ ರೂ. ಮೌಲ್ಯದ ಮೊಬೈಲ್ ಹಾಗೂ 5.40 ಲಕ್ಷ ರೂ.ಮೌಲ್ಯದ ಎರಡು ಕಾರು ವಶಪಡಿಸಿಕೊಂಡಿದ್ದಾರೆ. ರಾಮದುರ್ಗ ಡಿವೈಎಸ್ಪಿ ಚಿದಂಬರ ಮಡಿವಾಳ ಹಾಗೂ ಸಿಪಿಐ ವಿನಾಯಕ ಬಡಿಗೇರ ನೇತೃತ್ವದಲ್ಲಿ ತಂಡ ರಚಿಸಿ ಕಾರ್ಯಾಚರಣೆ ನಡೆಸಲಾಗಿತ್ತು. ಸ್ಥಳೀಯ ಪಿಎಸ್ಐ ಬಸವರಾಜ ಕೊಣ್ಣೂರೆ, ಎಎಸ್ಐ ಎಲ್.ಅನ್ನಪೂರ್ಣಾ, ಸಿಬ್ಬಂದಿ ಎಸ್.ಎಂ.ಡೊನವಾಡ, ಎಸ್.ಎಂ.ಬಸರಿಕಟ್ಟಿ, ಆರ್.ಬಿ.ಗೊಕಾಕ, ಎಸ್.ಎಸ್.ವಜ್ರಮಟ್ಟಿ, ಎಂ.ಎಂ.ದ್ಯಾಮನಗೌಡರ, ಡಿ.ಎಚ್.ನದ್ಾ, ಮಂಜುನಾಥ ಹಿರೂರ, ಬಿ.ವಿ.ಹುಲಕುಂದ, …
Read More »ಹಣಕ್ಕಾಗಿ ಮಕ್ಕಳ ಮಾರಾಟ, ವರದಕ್ಷಿಣೆಗಾಗಿ ಪತ್ನಿಯ ಕೊಲೆ – ತಲೆಮರೆಸಿಕೊಂಡ ಪತಿಗಾಗಿ ಪೊಲೀಸರಿಂದ ತಲಾಶ್
ಹಾಸನ: ವರದಕ್ಷಿಣೆಗಾಗಿ ಪತ್ನಿಯನ್ನು ಕೊಲೆ ಮಾಡಿ ನಂತರ ಮೃತದೇಹವನ್ನು ಆಸ್ಪತ್ರೆಯಲ್ಲಿ ಇಟ್ಟು ಪತಿ ಎಸ್ಕೇಪ್ ಆದ ಘಟನೆ ಚನ್ನರಾಯಪಟ್ಟಣದ ಕಂಚಾಗಾರ ಬೀದಿಯಲ್ಲಿ ನಡೆದಿದೆ. ಗುಲ್ಷನ್ ಬಾನು (34) ಕೊಲೆಯಾದ ಮಹಿಳೆ. ಪತಿ ಸೈಫ್ ಅಲಿಖಾನ್ ವಿರುದ್ಧ ಕೊಲೆ ಆರೋಪ ಕೇಳಿಬಂದಿದೆ. ಕಳೆದ 14 ವರ್ಷಗಳ ಹಿಂದೆ ಹಾಸನದ ಚಿಪ್ಪಿನಕಟ್ಟೆಯ ಗುಲ್ಷನ್ ಬಾನು, ಚನ್ನರಾಯಪಟ್ಟಣದ ಸೈಫ್ ಅಲಿಖಾನ್ ಜೊತೆ ವಿವಾಹವಾಗಿದ್ದರು. ದಂಪತಿಗೆ ಎರಡು ಗಂಡು ಮಕ್ಕಳಿದ್ದು ಸೈಫ್ಅಲಿಖಾನ್ ಗಾರೆ ಕೆಲಸ ಮಾಡಿಕೊಂಡಿದ್ದ. …
Read More »ಕರ್ನಾಟಕದಿಂದ ರಾಜ್ಯಸಭೆಗೆ ಶರ್ಮಿಳಾ ರೆಡ್ಡಿ ಆಯ್ಕೆ ಸಾಧ್ಯತೆ
ನವದೆಹಲಿ: ಕರ್ನಾಟಕದಿಂದ ತೆರವಾಗುವ ಮೂರು ರಾಜ್ಯಸಭಾ ಸ್ಥಾನಗಳಿಗೆ ಅಭ್ಯರ್ಥಿಗಳ ಆಯ್ಕೆ ಕಸರತ್ತು ಆರಂಭಗೊಂಡಿದೆ. ಕರ್ನಾಟಕದಿಂದ ರಾಜ್ಯಸಭೆಗೆ ವೈಎಸ್ ರಾಜಶೇಖರ ರೆಡ್ಡಿ ಪುತ್ರಿ ಹಾಗೂ ಆಂಧ್ರ ಕಾಂಗ್ರೆಸ್ (Congress) ಸಮಿತಿಯ ಅಧ್ಯಕ್ಷೆ ಶರ್ಮಿಳಾ ರೆಡ್ಡಿ ಅವರನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. ಮೂರು ಸ್ಥಾನಗಳಲ್ಲಿ ಒಂದು ಸ್ಥಾನ ಖರ್ಗೆಗೆ, ಇನ್ನೊಂದು ಸ್ಥಾನವನ್ನು ಸಿದ್ದರಾಮಯ್ಯಗೆ ಹೈಕಮಾಂಡ್ ಮೀಸಲಿಟ್ಟಿದೆ. ಒಂದು ವೇಳೆ ಸಿದ್ದರಾಮಯ್ಯ ಒಪ್ಪದಿದ್ದರೆ ಪರ್ಯಾಯ ಅಭ್ಯರ್ಥಿಯನ್ನು ಆಯ್ಕೆ ಮಾಡುವ ಸಾಧ್ಯತೆಗಳಿವೆ. 3ನೇ ಸ್ಥಾನಕ್ಕೆ ಶರ್ಮಿಳಾ …
Read More »ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಆಟೋ ಚಾಲಕ ಸಾವು
ಬೆಂಗಳೂರು: ನಗರದಲ್ಲಿ ಇಂದು ಸಂಜೆ ಸುರಿದ ಧಾರಾಕಾರ ಮಳೆಗೆ ಕಾಂಪೌಂಡ್ ಗೋಡೆ ಕುಸಿದು ಆಟೋ ಚಾಲಕ ಬಲಿಯಾಗಿರುವ ಘಟನೆ ನಡೆದಿದೆ. ವಿಜಯನಗರದ ಕ್ಲಬ್ ಕಾಂಪೌಂಡ್ ಗೋಡೆ ಕುಸಿದು ಶಿವಬೋರಯ್ಯ ಎಂಬ ವ್ಯಕ್ತಿ ಮೃತಪಟ್ಟಿದ್ದಾರೆ. ಗೋಡೆ ಪಕ್ಕ ಆಟೋದಲ್ಲಿ ಕುಳಿತಿದ್ದರು. ಆಟೋ ಮೇಲೆ ಗೋಡೆ ಕುಸಿದು ಪರಿಣಾಮ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಗೋಡೆ ಕುಸಿತದ ವೇಳೆ ಭಾರಿ ದುರಂತ ತಪ್ಪಿದೆ. ಘಟನಾ ಸ್ಥಳದಲ್ಲಿ ನಿತ್ಯ ಸಾರ್ವಜನಿಕರು ಓಡಾಡುತ್ತಿದ್ದರು. ಇದೇ …
Read More »IPL ಆರ್ಸಿಬಿ ಫೈನಲ್; ಬೆಂಗಳೂರಲ್ಲಿ ಸಂಭ್ರಮಾಚರಣೆಗೆ ಬ್ರೇಕ್ – ಗೈಡ್ಲೈನ್ಸ್ ಬಿಡುಗಡೆ
ಬೆಂಗಳೂರು: ಐಪಿಎಲ್ 2026 ಟೂರ್ನಿಯಲ್ಲಿ ರಾಯಲ್ ಚಾಲೆಂಜರ್ಸ್ ಫೈನಲ್ ಪ್ರವೇಶಿಸಿದ್ದು, ಪಂದ್ಯದ ದಿನ ಬೆಂಗಳೂರಿನಲ್ಲಿ ಸಂಭ್ರಮಾಚರಣೆಗೆ ನಿಷೇಧ ಹೇರಲಾಗಿದೆ. ಕಳೆದ ಬಾರಿ ಆರ್ಸಿಬಿ ಐಪಿಎಲ್ ಟ್ರೋಫಿ ಗೆದ್ದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ ಸಂಭ್ರಮಾಚರಣೆ ನಡೆದಿತ್ತು. ಮಧ್ಯರಾತ್ರಿ 12 ಗಂಟೆ ನಂತರ ರಸ್ತೆ ರಸ್ತೆಗಳಲ್ಲಿ ಆರ್ಸಿಬಿ ಫ್ಯಾನ್ಸ್ ಸೆಲಬ್ರೇಷನ್ ಮಾಡಿದ್ದರು. ಈ ಬಾರಿ ಸಂಭ್ರಮಾಚರಣೆಗೆಗೆ ಕಟ್ಟುನಿಟ್ಟಿನ ನಿಯಮ ತರಲಾಗಿದೆ. ಪೊಲೀಸ್ ಇಲಾಖೆ ಮಾರ್ಗಸೂಚಿ ಪ್ರಕಟಿಸಿದೆ. ಸೋಷಿಯಲ್ ಮೀಡಿಯಾದ ಮೇಲೂ ಪೊಲೀಸರು ಕಣ್ಣಿಟ್ಟಿದ್ದಾರೆ. ಒಂದು …
Read More »ಸಿದ್ದರಾಮಯ್ಯ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು: ಸಂಜಯ್ ರಾವತ್
ಮುಂಬೈ: ಸಿದ್ದರಾಮಯ್ಯ ಅವರ ಬಗ್ಗೆ ನನಗಿದ್ದ ಗೌರವ ಮತ್ತಷ್ಟು ಹೆಚ್ಚಾಯ್ತು ಎಂದು ಮಹಾರಾಷ್ಟ್ರದ ಉದ್ಧವ್ಠಾಕ್ರೆ ಬಣದ ಶಿವಸೇನೆ ನಾಯಕ ಸಂಜಯ್ ರಾವತ್ ಕೊಂಡಾಡಿದ್ದಾರೆ. ಸಿದ್ದರಾಮಯ್ಯರಂತೆ ಸುಗಮ ಅಧಿಕಾರ ಹಸ್ತಾಂತರ ಅಪರೂಪ. ರಾಜಕಾರಣಿಗಳು ಸಾಮಾನ್ಯವಾಗಿ ತಮ್ಮ ಅಧಿಕಾರ ಮತ್ತು ಸ್ಥಾನಗಳನ್ನು ಬಿಟ್ಟುಕೊಡಲು ಹಿಂಜರಿಯುತ್ತಾರೆ. ಆದರೆ, ಸಿದ್ದರಾಮಯ್ಯ ನಡೆಸಿದ ಈ “ಸುಗಮ ಅಧಿಕಾರ ಹಸ್ತಾಂತರ” ಅತ್ಯಂತ ಅಪರೂಪವಾಗಿ ಕಂಡುಬರುತ್ತದೆ. ಯಾವುದೇ ಹಠ ಹಿಡಿಯದೇ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವ ಮೂಲಕ ರಾಜಕಾರಣದಲ್ಲಿ ಅಪರೂಪದ ಮಾದರಿಯನ್ನು …
Read More »
Laxmi News 24×7