ಬೆಂಗಳೂರು: ಸಿ.ಡಿ. ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾಗುತ್ತಿರುವ ಸಂತ್ರಸ್ತ ಯುವತಿ ಮಾತನಾಡಿದ್ದಾರೆ ಎನ್ನಲಾದ ಆಡಿಯೊವೊಂದು ವೈರಲ್ ಆಗಿದೆ. ತನ್ನ ತಮ್ಮ ಮತ್ತು ತಾಯಿಯೊಂದಿಗೆ ಮಾತನಾಡಿರುವ ಯುವತಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಹೆಸರನ್ನು ಪ್ರಸ್ತಾಪಿಸಿದ್ದಾರೆ. ‘ನೀನು ನನ್ನನ್ನು ನಂಬು. ಯಾರು ನನ್ನನ್ನು ನಂಬುತ್ತಿಲ್ಲ. ಆ ವಿಡಿಯೊದಲ್ಲಿರುವುದು ನಾನಲ್ಲ. ಮಾಜಿ ಸಚಿವ ರಮೇಶ ಜಾರಕಿಹೊಳಿ ಜೊತೆಗಿರುವ ವಿಡಿಯೊ ಪ್ರಸಾರವಾಗಿರುವ ಬಗ್ಗೆ ಯಾರೂ ಹೆದರುವ ಅಗತ್ಯ ಇಲ್ಲ. ನಾನು ಡಿ.ಕೆ.ಶಿವಕುಮಾರ್ ಅವರ ಮನೆ …
Read More »ಬಿ.ಎಸ್.ವೈ ಸಂಪುಟದಲ್ಲಿ ಮಂತ್ರಿಯಾಗಲ್ಲ. ಇದು ನನ್ನ ಭೀಷ್ಮ ಪ್ರತಿಜ್ಞೆ: ಯತ್ನಾಳ್..!
ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಭೀಷ್ಮ ಪ್ರತಿಜ್ಞೆ ಮಾಡಿದ ಯತ್ನಾಳ್..! ತುಮಕೂರು: ಸ್ವಪಕ್ಷದ ವಿರುದ್ಧವೇ ಹೇಳಿಕೆಗಳನ್ನ ನೀಡುತ್ತಾ ಸದಾ ಸುದ್ದಿಯಲ್ಲಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಮತ್ತೊಮ್ಮೆ ಬಿಎಸ್ ವೈ ನೇತೃತ್ವದ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೇ ಪ್ರತಿಜ್ಞೆ ಒಂದನ್ನ ಮಾಡಿದ್ದಾರೆ. ಹೌದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದ ಸರಕಾರದಲ್ಲಿ ನಾನು ಮಂತ್ರಿಯಾಗಲ್ಲ ಎಂದು ಶಪತ ಮಾಡಿದ್ದಾರೆ ಯತ್ನಾಳ್. ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ …
Read More »ಯುವತಿ ದೂರು ಕೊಡಲಿ; ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸುತ್ತೇನೆ: ರಮೇಶ್ ಜಾರಕಿಹೊಳಿ,
ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಕ್ಷಣಕ್ಕೂ ಕುತೂಹಲ ಮೂಡಿಸುತಿದ್ದು, ಸಿಡಿಯಲ್ಲಿರುವ ಯುವತಿ ದೂರು ದಾಖಲಿಸುವುದಾಗಿ ಹೇಳುತ್ತಿದ್ದಂತೆ ಪ್ರತಿಕ್ರಿಯಿಸಿರುವ ರಮೇಶ್ ಜಾರಕಿಹೊಳಿ, ಯುವತಿ ದೂರು ಕೊಡಲಿ ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ಹೇಳಿದ್ದಾರೆ. ಯುವತಿ 3ನೇ ಸಿಡಿ ಬಿಡುಗಡೆ ಮಾಡಿದ ಬೆನ್ನಲ್ಲೇ ಸುದ್ದಿಗಾರರೊಂದಿಗೆ ಮಾತನಾಡಿದ ರಮೇಶ್ ಜಾರಕಿಹೊಳಿ, ಯುವತಿ ಯಾವ ಕೇಸ್ ದಾಖಲಿಸುತ್ತಾಳೋ ದಾಖಲಿಸಿ. ನನ್ನ ವಿರುದ್ಧ ರೇಪ್ ಕೇಸ್ ದಾಖಲಿಸಿದರೂ ನಾನು ಕಾನೂನಾತ್ಮಕವಾಗಿ ಹೋರಾಟ ನಡೆಸಲು …
Read More »ಸಿಡಿ ಕೇಸ್: ಕತ್ತರಿ ಹಾಕದ ವಿಡಿಯೋ ಪತ್ತೆ
ಬೆಂಗಳೂರು: ಸಿಡಿ ಕೇಸ್ ತನಿಖೆ ಚುರುಕುಗೊಳಿಸಿರುವ ಎಸ್ ಐಟಿ ಅಧಿಕಾರಿಗಳಿಗೆ “ಕತ್ತರಿ ಹಾಕದ’ ಸುಮಾರು 2 ಗಂಟೆ 28 ನಿಮಿಷದ ವಿಡಿಯೋ ಸಿಕ್ಕಿದೆ ಎಂಬ ವಿಚಾರ ಬೆಳಕಿಗೆ ಬಂದಿದೆ. ಮತ್ತೂಂದೆಡೆ ಬುಧ ವಾರ ರಾತ್ರಿ 3ನೇ ಬಾರಿಗೆ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವ ರನ್ನು ಎಸ್ ಐಟಿ ಅವರ ಮನೆಯಲ್ಲೇ ವಿಚಾರಣೆ ನಡೆಸಿದೆ. ಇತ್ತೀಚೆಗೆ ಪ್ರಕರಣದ ಕಿಂಗ್ ಪಿನ್ ಎನ್ನ ಲಾದ ಪತ್ರ ಕರ್ತ ನರೇ ಶ್ …
Read More »ಪ್ರಜಾಪ್ರಭುತ್ವವನ್ನು ಕೊಲ್ಲಲೂ ಮೋದಿ ಸರ್ಕಾರ ಹಿಂಜರಿಯುವುದಿಲ್ಲ; ಶಿವಸೇನೆ
ಮುಂಬೈ, ಮಾರ್ಚ್ 25: ದೆಹಲಿ ಮೇಲೆ ಕೇಂದ್ರಕ್ಕೆ ಹೆಚ್ಚಿನ ಅಧಿಕಾರ ನೀಡುವ ರಾಷ್ಟ್ರೀಯ ರಾಜಧಾನಿ ದೆಹಲಿ ಸರ್ಕಾರ (ತಿದ್ದುಪಡಿ) ಮಸೂದೆ 2021ಗೆ ಸಂಬಂಧಿಸಿದಂತೆ ಬಿಜೆಪಿ ಸರ್ಕಾರದ ಮೇಲೆ ವಾಗ್ದಾಳಿ ನಡೆಸಿರುವ ಶಿವಸೇನೆ, “ಬಿಜೆಪಿಯೇತರ ರಾಜ್ಯಗಳನ್ನು ರಾಜ್ಯಪಾಲರ ಮೂಲಕ ಕೇಸರಿ ಪಕ್ಷ ನಿಗ್ರಹಿಸುತ್ತಿದೆ” ಎಂದು ಆರೋಪಿಸಿದೆ. ಪಕ್ಷದ ಪತ್ರಿಕೆ “ಸಾಮ್ನಾ”ದ ಸಂಪಾದಕೀಯದಲ್ಲಿ ಈ ಕುರಿತು ಟೀಕಿಸಿದ್ದು, ನರೇಂದ್ರ ಮೋದಿ ಅವರು ಈ ದೇಶದಲ್ಲಿ ಪ್ರಜಾಪ್ರಭುತ್ವ ಹಾಗೂ ಸ್ವಾತಂತ್ರ್ಯವನ್ನು ನಿಗ್ರಹಿಸಲು ನಿರ್ಧರಿಸಿದಂತಿದೆ ಎಂದು …
Read More »ಕೋವಿಡ್: ಮತ್ತಷ್ಟು ಕ್ರಮ
ಬೆಂಗಳೂರು: ಕೋವಿಡ್ ನಿಯಂತ್ರಣಕ್ಕಾಗಿ ಸರಕಾರವು ಎಲ್ಲ ಹಬ್ಬಗಳ ಸಾರ್ವಜನಿಕ ಆಚರಣೆಯ ಮೇಲೆ ನಿರ್ಬಂಧ ಹೇರಿ ಆದೇಶ ಹೊರಡಿಸಿದೆ. ಹೊಸ ಆದೇಶದಂತೆ ಮುಂಬರುವ ಯುಗಾದಿ, ಹೋಳಿ, ಷಬ್-ಎ- ಬರಾತ್, ಗುಡ್ ಫ್ರೈಡೇ ಸಹಿತ ಹಲವು ಹಬ್ಬಗಳು ಮತ್ತು ಸಂಬಂಧಿತ ಸಮಾರಂಭಗಳನ್ನು ಸಾರ್ವಜನಿಕ ಸ್ಥಳಗಳಲ್ಲಿ ಆಚರಿಸಬಾರದು. ಈ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕ ಸ್ಥಳ, ಮೈದಾನ, ಉದ್ಯಾನವನ, ಮಾರುಕಟ್ಟೆ, ಧಾರ್ಮಿಕ ಪ್ರದೇಶಗಳು ಮತ್ತಿತರ ಕಡೆಗಳಲ್ಲಿ ಸಭೆ-ಸಮಾರಂಭ ನಡೆಸದಂತೆ ಸೂಚಿಸಲಾಗಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ವಿಪತ್ತು …
Read More »ಆ ಸಿಡಿಯನ್ನ ವಿಷ್ಣುಚಕ್ರ ಅಂದುಕೊಂಡು ತಿರುಗಿಸಿದ್ರಾ?;: ಎಚ್. ವಿಶ್ವನಾಥ್
ಮೈಸೂರು(ಮಾ.25): ಕೋಟ್ಯಾಂತರ ರೂಪಾಯಿ ಲೂಟ್ ಆಗಿರುವ ಇಡಿ ಬಗ್ಗೆ ಚರ್ಚೆ ಮಾಡೋಲ್ಲ ಬರಿ ಸಿಡಿ ಚರ್ಚೆ ಮಾಡುತ್ತೀರಲ್ಲಾ, ಬಜೆಟ್ ಚರ್ಚೆಗಿಂತ ಸಿಡಿಯೇ ಹೆಚ್ಚಾಯ್ತಾ ನಿಮಗೆ ಅಂತ, ಸದನದಲ್ಲಿ ಸರ್ಕಾರಕ್ಕೆ ಚಾಟಿ ಬೀಸಲಿಲ್ಲ ಎಂದು ವಿರೋಧ ಪಕ್ಷಗಳಿಗೆ ಪರಿಷತ್ ಸದಸ್ಯ ಹಳ್ಳಿಹಕ್ಕಿ ಹೆಚ್.ವಿಶ್ವನಾಥ್ ಚಾಟಿ ಬೀಸಿದ್ದಾರೆ. ನಿನ್ನೆ ಮುಗಿದ ಸದನ ಮುಗಿತು ಅಷ್ಟೆ, ಇದರಲ್ಲಿ ರಾಜ್ಯದ ಜನರಿಗೆ ಯಾವುದೇ ಪ್ರಯೋಜನ ಆಗಲಿಲ್ಲ. ಬಜೆಟ್ ಅಧಿವೇಶ ಅಂದ್ರೆ ಆದಾಯ, ತೆರಿಗೆ, ಹಣಕಾಸಿನ ಬಗ್ಗೆ …
Read More »C.D. ಯುವತಿ ಪರ ಮಹಿಳಾ ಕಾಂಗ್ರೆಸ್ ನಿಂತಿದೆ.
ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ‘ಸಂತ್ರಸ್ತ’ ಯುವತಿ ಪರ ಮಹಿಳಾ ಕಾಂಗ್ರೆಸ್ ನಿಂತಿದೆ. ಒಬ್ಬ ರಾಜಕಾರಣಿಯಿಂದ ಆಕೆಗೆ ಅನ್ಯಾಯ ಆಗಿದ್ದರೂ ಸಂತ್ರಸ್ತೆಗೆ ಸರ್ಕಾರದಿಂದ ರಕ್ಷಣೆ ಕೊಡಲು ಸಾಧ್ಯವಾಗಿಲ್ಲ. ಸರ್ಕಾರದ ಮೇಲೆ ಆಕೆಗೆ ನಂಬಿಕೆ ಇಲ್ಲ, ಹಾಗಾಗಿ ಕಾಂಗ್ರೆಸ್ ನಾಯಕರ ಬಳಿ ರಕ್ಷಣೆ ಕೋರಿದ್ದಾಳೆ. ಆ ಹೆಣ್ಣುಮಗಳ ರಕ್ಷಣೆಗೆ ನಾವಿದ್ದೇವೆ ಎಂದು ಕಾಂಗ್ರೆಸ್ ಶಾಸಕಿಯರು ಹೇಳಿದ್ದಾರೆ. ಸಚಿವ ಡಾ.ಕೆ. ಸುಧಾಕರ್ ನೀಡಿದ್ದ ಏಕಪತ್ನಿವ್ರತಸ್ಥ ಹೇಳಿಕೆ ಖಂಡಿಸಿ ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಿದ …
Read More »ಸುಧಾಕರ್ ಅವರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸುವಂತೆ ಮಹಿಳಾ ಕಾಂಗ್ರೆಸ್ ಆಗ್ರಹ
ಬೆಂಗಳೂರು: 225 ಶಾಸಕರ ಬಗ್ಗೆಯೂ ಕೀಳಾಗಿ ಮಾತನಾಡುವ ಮೂಲಕ ವಿಧಾನಸಭೆಗೆ ಅವಮಾನ ಮಾಡಿರುವ ಡಾ.ಕೆ. ಸುಧಾಕರ್ ಅವರನ್ನು ತಕ್ಷಣವೇ ಸಚಿವ ಸ್ಥಾನದಿಂದ ವಜಾ ಮಾಡಬೇಕು. ಅವರು ಶಾಸಕರಾಗಿಯೂ ಉಳಿಯಬಾರದು ಎಂದು ಕರ್ನಾಟಕ ಪ್ರದೇಶ ಮಹಿಳಾ ಕಾಂಗ್ರೆಸ್ ಆಗ್ರಹಿಸಿದೆ. ಪಕ್ಷದ ಶಾಸಕಿಯರ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಪ್ರದೇಶ ಮಹಿಳಾ ಕಾಂಗ್ರೆಸ್ ಸಮಿತಿ ಅಧ್ಯಕ್ಷೆ ಪುಷ್ಪಾ ಅಮರನಾಥ್, ‘ ಸುಧಾಕರ್ ಆರೋಗ್ಯ ಸಚಿವರಲ್ಲ, ಅನಾರೋಗ್ಯ ಸಚಿವ. ಅವರು ಸಚಿವರಾಗಿರಲು ನಾಲಾಯಕ್. ಮುಖ್ಯಮಂತ್ರಿ …
Read More »ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ
ಕಲಬುರಗಿ : ರಾಜ್ಯದಲ್ಲಿ ಬಿಜೆಪಿ ಸರ್ಕಾರ ಸ್ವತಂತ್ರವಾಗಿ ಅಧಿಕಾರ ನಡೆಸಲು ಕೇಂದ್ರದವರು ಬಿಟ್ಟಿಲ್ಲ. ಬಿಜೆಪಿ ಸರ್ಕಾರಕ್ಕೆ ಅಧಿಕಾರ ನಡೆಸಲು ಬರಲ್ಲ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಕುತಂತ್ರದಿಂದ ಬಂದಿದೆ. ಹೀಗಾಗಿ ಬಿಜೆಪಿಯವರಿಗೆ ರಾಜ್ಯದಲ್ಲಿ ಅಧಿಕಾರ ನಡೆಸಲು ಬರಲ್ಲ. ಕೇಂದ್ರದಿಂದ ಪ್ರಜಾಪ್ರಭುತ್ವವನ್ನು ಹಂತ ಹಂತವಾಗಿ ನಾಶ ಮಾಡುತ್ತಿದೆ ಎಂದು ವಾಗ್ದಾಳಿ ನಡೆಸಿದ್ದಾರೆ. ಮೈತ್ರಿ ಸರ್ಕಾರದ ಪತನದ …
Read More »
Laxmi News 24×7