Breaking News

Uncategorized

ರಮೇಶ್ ಜಾರಕಿಹೊಳಿ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಿಸಿ – ಹೈಕೋರ್ಟ್ ನ್ಯಾಯಾಧೀಶರ ಮೇಲುಸ್ತುವಾರಿಯಲ್ಲಿ ತನಿಖೆ ನಡೆಸಲಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸದನದಲ್ಲಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಡಿಯಲ್ಲಿರುವ ಯುವತಿಗೆ ತಕ್ಷಣ ರಕ್ಷಣೆ ನೀಡಬೇಕು. ಆ ಯುವತಿ ತನ್ನನ್ನು ಬಳಸಿಕೊಂಡಿದ್ದಾರೆ ಎಂದು ಹೇಳಿರುವುದರಿಂದ ಅದು ರೇಪ್ ಎಂದಾಗಿರುತ್ತದೆ. ಹಾಗಾಗಿ ರಮೇಶ್ ಜಾರಕಿಹೊಳಿ ವಿರುದ್ಧ ರೇಪ್ ಕೇಸ್ ದಾಖಲಿಸಿ ತನಿಖೆ ನಡೆಸಬೇಕು ಎಂದು ಆಗ್ರಹಿಸಿದರು. ಎಸ್ …

Read More »

ಕೊನೆಗೂ SITಯಿಂದ ಸಿಡಿ ಲೇಡಿ ಸಂಪರ್ಕ : 5ನೇ ಬಾರಿ ವಿಚಾರಣೆಗೆ ಹಾಜರಾಗುವಂತೆ ನೋಟಿಸ್

ಬೆಂಗಳೂರು : ರಮೇಶ್ ಜಾರಕಿಹೊಳಿಗೆ ಸಂಬಂಧಿಸಿದ್ದು ಎನ್ನಲಾದಂತ ಸಿಡಿ ಪ್ರಕರಣನ ಸಿಡಿ ಲೇಡಿ ಪತ್ತೆಗೆ ಎಸ್‌ಐಟಿ ತಂಡ ಹರಸಾಹಸ ನಡೆಸುತ್ತಿತ್ತು. ಇದರ ಬೆನ್ನಲ್ಲೇ, ಪೋಷಕರ ಮೂಲಕ, ಸಿಡಿ ಲೇಡಿಯನ್ನು ಎಸ್‌ಐಟಿ ತಂಡ ಸಂಪರ್ಕಿಸಿದೆ. 5 ಬಾರಿ ಸಿಡಿ ಲೇಡಿ ತಮ್ಮನೊಂದಿಗೆ ಮಾತನಾಡಿರುವಂತ ಮಾಹಿತಿಯನ್ನು ವಿಚಾರಣೆಯ ವೇಳೆ ಎಸ್‌ಐಟಿ ಅಧಿಕಾರಿಗಳ ಮುಂದೆ ಪೋಷಕರು ಬಿಚ್ಚಿಟ್ಟಿದ್ದಾರೆ. ಹೀಗಾಗಿ ಐದನೇ ಬಾರಿ, ಸಿಡಿ ಲೇಡಿಗೆ ವಿಚಾರಣೆಗೆ ಹಾಜರಾಗುವಂತೆ ಎಸ್‌ಐಟಿ ತಂಡ, ನೋಟಿಸ್ ನೀಡಿದೆ. ಈಗಾಗಲೇ …

Read More »

ಇವರು ಸದನದಲ್ಲಿ ಮಾತಾಡೋಕೆ ನಿಂತರೆ ಸಿಎಂ ಯಡಿಯೂರಪ್ಪ ‌ಕೂಡ ಸುಮ್ಮನಾಗ್ತಾರೆ -ಶಾಸಕರನ್ನು ಕೊಂಡಾಡಿದ ಶ್ರೀರಾಮುಲು

ಹಾಸನ: ರಾಜಕೀಯದಲ್ಲಿ ಆ ಜಾತಿ ಈ ಜಾತಿ ಎಂದು ಹೇಳುತ್ತೇವೆ. ಆದ್ರೆ ಮಕ್ಕಳಲ್ಲಿ ಸರ್ವಧರ್ಮತ್ವವನ್ನ ಶಿಕ್ಷಕರು ಬೆಳೆಸುತ್ತಾರೆ ಎಂದು ರಾಮನಹಳ್ಳಿ ಇಂದಿರಾ ಗಾಂಧಿ ವಸತಿ ಶಾಲೆ ಉದ್ಘಾಟನೆ ವೇಳೆ ಸಚಿವ ಶ್ರೀರಾಮುಲು ಮಾತನಾಡಿದರು. ಜಿಲ್ಲೆಯ ಅರಸೀಕೆರೆ ತಾಲೂಕಿನ ರಾಮನಹಳ್ಳಿಯಲ್ಲಿ ಸಚಿವ ಶ್ರೀರಾಮುಲು ವಸತಿ ಶಾಲೆ ಉದ್ಘಾಟನೆ ಮಾಡಿದರು. ಅರಸೀಕೆರೆ ಶಾಸಕ ಶಿವಲಿಂಗೇಗೌಡರು ಸದನದಲ್ಲಿ ಮಾತನಾಡುತ್ತ ನಿಂತರೆ ಸಿಎಂ ಬಿ.ಎಸ್.ಯಡಿಯೂರಪ್ಪ ಕೂಡ ಸುಮ್ಮನಾಗ್ತಾರೆ ಎಂದು ಶ್ರೀರಾಮುಲು ಹೇಳಿದರು. ರೈತರ ವಿಚಾರ, ನೀರಾವರಿ …

Read More »

ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ: ಸುರೇಶ್ ಕುಮಾರ್

ಬೆಂಗಳೂರು: ‘ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಕಣ್ಣಿನ ಮೇಲೆ ಪರಿಣಾಮ ಬೀರುತ್ತಿರುವ ವಿಷಯ ಗಮನಕ್ಕೆ ಬಂದಿದೆ. ಈ ಬಗ್ಗೆ ಆರೋಗ್ಯ ಸಚಿವರ ಜತೆ ಚರ್ಚಿಸಿ ಪರಿಹಾರ ಕಂಡುಕೊಳ್ಳಲಾಗುವುದು’ ಎಂದು ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಹೇಳಿದರು. ವಿಧಾನ ಪರಿಷತ್‌ನಲ್ಲಿ ಕಾಂಗ್ರೆಸ್ಸಿನ ಯು.ಬಿ. ವೆಂಕಟೇಶ್ ಅವರ ಪ್ರಶ್ನೆಗೆ ಉತ್ತರಿಸಿದ ಅವರು, ‘ಖಾಸಗಿ ಶಾಲೆಗಳು ಎಲ್‌ಕೆಜಿ, ಯುಕೆಜಿ ಮಕ್ಕಳಿಗೂ ಆನ್‌ಲೈನ್ ಶಿಕ್ಷಣ ಆರಂಭಿಸಿವೆ. ಆನ್‌ಲೈನ್ ಶಿಕ್ಷಣದಿಂದ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಬಗ್ಗೆ …

Read More »

ಕೂಡ್ಲಿಗಿ:ಪಪಂ ಚುನಾವಣೆ ಮತಯಾಚಿಸಿದ,ಶಾಸಕ ಎನ್.ವೈ.ಗೋಪಾಲಕೃಷ್ಣ

ವಿಜಯನಗರ ಜಿಲ್ಲೆ ಕೂಡ್ಲಿಗಿ ಪಟ್ಟಣದಲ್ಲಿ ಶಾಸಕ ಎನ್.ವೈ.ಗೋಪಾಲಕೃಷ್ಣ ರವರು,ಪಪಂನ 1ಮತ್ತು 12ನೇ ವಾರ್ಡ್ ಗಳ ಚುನಾವಣಾ ಪ್ರಯುಕ್ತ.ಅಭ್ಯರ್ಥಿಗಳಾದ ಪ್ರಕಾಶ ನಾಯ್ಕ ಹಾಗೂ ಶ್ರೀಮತಿ ಮಲ್ಲಮ್ಮ ಪರ ಮತಯಾಚನೆ ಮಾಡಿ ಮಾತನಾಡಿದರು,12ನೇವಾರ್ಡ್ ನಲ್ಲಿ ಶ್ರೀಸೊಲ್ಲಮ್ಮ ದೇವಿ ದೇವಸ್ಥಾನದ ಆವರಣದಲ್ಲಿ,ಮತದಾರರನ್ನು ಉದ್ದೇಶಿಸಿ ಮಾತನಾಡಿ ಮತಯಾಚನೆ ಮಾಡಿದರು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗಾಗಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇವೆ.ಪಟ್ಟಣದ ಹಿತಕ್ಕಾಗಿ ಹಾಗೂ ನಾಗರೀಕರ ಸಮಸ್ಥ ಶ್ರೇಯೋಭಿವೃದ್ಧಿಗಾಗಿ, ಬಿ.ಜೆ.ಪಿ ಶ್ರಮಿಸುತ್ತಿದೆ ಕಾರಣ ಬಿಜೆಪಿ ಅಭ್ಯರ್ಥಿಗಳನ್ನ ಆರಿಸಿ ಎಂದರು.ಬಿಜೆಪಿ ಜಿಲ್ಲಾ …

Read More »

ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ  ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ

ಖಾನಾಪುರ –  ಕೊವಿಡ್ -೧೯ ಹಿನ್ನೆಲೆಯಲ್ಲಿ ಈ ವರ್ಷ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ಜೂನ್ ತಿಂಗಳಲ್ಲಿ ನಡೆಯುತ್ತಿದ್ದು ಖಾನಾಪುರ ತಾಲೂಕಿನಲ್ಲಿ ಕಲಿಯುತ್ತಿರುವ ಎಸ್. ಎಸ್. ಎಲ್. ಸಿ. ವಿದ್ಯಾರ್ಥಿಗಳು ನಿರ್ಭಯವಾಗಿ ಹಾಗೂ ಆತ್ಮವಿಶ್ವಾಸದಿಂದ ಪರೀಕ್ಷೆಗಳನ್ನು ಎದುರಿಸಲು ಸಹಯವಾಗುವ ನಿಟ್ಟಿನಲ್ಲಿ ಈ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಉದ್ದೆಶದಿಂದ ’ಫೊನ್ ಇನ್ ಕಾರ್ಯಕ್ರಮ’ಕ್ಕೆ  ಕ್ಷೇತ್ರ ಶಿಕ್ಷಣಾಧಿಕಾರಿ ಲಕ್ಷ್ಮಣರಾವ್ ಯಕ್ಕುಂಡಿ ಚಾಲನೆ ನೀಡಿದರು. ಆಯ್ದ ಸಂಪನ್ಮೂಲ ವ್ಯಕ್ತಿಗಳು ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಗೆ …

Read More »

ರಮೇಶ್ ಜಾರಕಿಹೊಳಿ ಹೋದರೆ ಯಡಿಯೂರಪ್ಪ ಸರ್ಕಾರ ಜಾರಿ ಹೋಗುತ್ತೆ :ವಾಟಾಳ್ ನಾಗರಾಜ್

ಮೈಸೂರು : ರಮೇಶ್ ಜಾರಕಿಹೊಳಿ ಹೋದರೆ ಯಡಿಯೂರಪ್ಪ ಸರ್ಕಾರ ಜಾರಿ ಹೋಗುತ್ತದೆ ಎಂದು ವಾಟಾಳ್​ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಅವರು ಬಿಎಸ್​ವೈಗೆ ಕುಟುಕಿದ್ದಾರೆ. ನಂಜನಗೂಡಿನಲ್ಲಿ ಮಾ.26ರಂದು ಪಂಚ ಮಹಾರಥೋತ್ಸವ ನಡೆಸಬೇಕೆಂದು ಒತ್ತಾಯಿಸಿ ಪ್ರತಿಭಟನೆ ನಡೆಸಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಡಿಯ ಹಿಂದೆ ಯಾರಿದ್ದಾರೆ ಎಂದು ತಿಳಿಯಲು ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಆದರೆ, ರಮೇಶ್ ಜಾರಕಿಹೊಳಿಯನ್ನು ಪರಮ ಪವಿತ್ರ ಎಂದು ಬಿಂಬಿಸುತ್ತಿದ್ದಾರೆ. ಜಾರಕಿಹೊಳಿ ಪರ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ …

Read More »

ಜೊತೆ ಜೊತೆಯಲಿ ಡೈರೆಕ್ಟರ್ ಆರೂರು ಜಗದೀಶ್ ಸೀರಿಯಲ್ ನಲ್ಲಿ ಹಿರಿಯ ನಟಿ ಉಮಾಶ್ರೀ..? ಕಿರುತೆರೆಗೆ ಬಂದರು ಪುಟ್ಮಲ್ಲಿ..?

ಕನ್ನಡ ಸೀರಿಯಲ್ ಲೋಕದಲ್ಲಿ ಇವರದ್ದು ದೊಡ್ಡ ಹೆಸರು.ಇವರು ನಿರ್ದೇಶನ ಮಾಡಿರುವ ಎಲ್ಲಾ ಸೀರಿಯಲ್ಸ್ ಸಾವಿರಾರು ಎಪಿಸೋಡ್ಸ್ ಪ್ರದರ್ಶನ ಕಂಡಿವೆ. ಕನ್ನಡ ಕಿರುತೆರೆ ಪ್ರೇಕ್ಷಕರಿಗೆ ಮೆಚ್ಚುಗೆಯಾಗಿವೆ. ಇಂದಿಗೂ ಮೆಚ್ಚುಗೆಯಾಗ್ತಿವೆ. ಅದಕ್ಕೆ ಬೆಸ್ಟ್ ಎಕ್ಸಂಪಲ್ ಜೊತೆ ಜೊತೆಯಲಿ ಸೀರಿಯಲ್.. ಸೀರಿಯಲ್ ಜಗತ್ತಿನಲ್ಲಿ ಹೊಸ ದಾಖಲೆ ಬರೆದ ಧಾರಾವಾಹಿ ಜೊತೆ ಜೊತೆಯಲಿ.. ಒಂದು ನಾವಿರಾದ ಪ್ರೇಮ ಕಥೆ.. ಫ್ಯಾಮಿಲಿ ಟಚ್ ಎಲ್ಲವೂ ಇರುವ ಈ ಸೀರಿಯಲ್ ಇಂದು ಕರುನಾಡಿನ ಮನೆ ಮಂದಿ ಮೆಚ್ಚಿದ್ದಾರೆ. ಈ …

Read More »

‘ಕುಂದಾ ನಗರಿ, ರಾಣಿ ಚೆನ್ನಮ್ಮ, ಸಂಗೊಳ್ಳಿ ರಾಯಣ್ಣನವರುಗಳ ಊರು ಬೆಳಗಾವಿಗೆ ಬರಲು ಸದಾ ಖುಷಿಯಾಗುತ್ತದೆ. ನಾವು ಬಂದ ಕೂಡಲೇ ಮಳೆ ಸಹ ಬಂದಿದ್ದು ಶುಭ ಸೂಚಕ’ ಎಂದರು. ಪುನೀತ್ ರಾಜ್‌ಕುಮಾರ್

ಸಿನಿಮಾ, ಸಾಹಿತ್ಯ ಅಥವಾ ಇನ್ಯಾವುದೇ ಆಗಲಿ ಬೆಳಗಾವಿಯಲ್ಲಿ ನಡೆವ ಕನ್ನಡ ಕಾರ್ಯಕ್ರಮಗಳು ಸದಾ ವಿಶೇಷ.  ಬೆಳಗಾವಿಗೆ ನಟ ಪುನೀತ್ ರಾಜ್‌ಕುಮಾರ್ ಆಗಮಿಸಿದ್ದರು. ಈ ಗಡಿ ಜಿಲ್ಲೆಯಲ್ಲಿ ತಮ್ಮ ‘ಯುವರತ್ನ’ ಸಿನಿಮಾದ ಪ್ರಚಾರವನ್ನು ಪುನೀತ್ ನಡೆಸಿದರು. ಬೆಳಗಾವಿಯ ಕ್ಯಾಂಪ್ ಏರಿಯಾದಲ್ಲಿರುವ ಚಂದನ್-ಐನ್ಯಾಕ್ಸ್ ಚಿತ್ರಮಂದಿರದ ಬಳಿ ಬಂದ ಪುನೀತ್ ಅವರನ್ನು ನೂರಾರು ಅಭಿಮಾನಿಗಳು ಸೇರಿದ್ದರು. ಘೋಷಣೆಗಳನ್ನು ಕೂಗಿ, ಕನ್ನಡ ಬಾವುಟಗಳ್ನು ಹಿಡಿದು ಪುನೀತ್ ಅವರನ್ನು ಜಿಲ್ಲೆಗೆ ಸ್ವಾಗತಿಸಿದರು. ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿದ ಪುನೀತ್ ರಾಜ್‌ಕುಮಾರ್, …

Read More »

ಬೆಂಗಳೂರಲ್ಲಿಂದು ರೈತರ ರಣಕಹಳೆ

ಬೆಂಗಳೂರು: ದೆಹಲಿ ರೈತ ನಾಯಕರ ನೇತೃತ್ವದಲ್ಲಿ ಇಂದು ವಿಧಾನಸೌಧ ಚಲೋ ಹಮ್ಮಿಕೊಳ್ಳಲಾಗಿದೆ. ಭಾರತೀಯ ನಾಯಕರಾದ ರಾಕೇಶ್ ಟಿಕಾಯತ್, ಡಾ. ದರ್ಶನ್ ಪಾಲ್, ಯುದ್ಧವೀರ ಸಿಂಗ್ ಭಾಗಿಯಾಗಲಿದ್ದಾರೆ. ಸಂಯುಕ್ತ ಹೋರಾಟ ಕರ್ನಾಟಕ ಸಂಘಟನೆ ನೇತೃತ್ವದಲ್ಲಿ ಹೋರಾಟ ನಡೆಯಲಿದೆ. ದೆಹಲಿಯಲ್ಲಿ 100 ಕ್ಕೂ ಅಧಿಕ ದಿನಗಳಿಂದ ಹೋರಾಟ ನಡೆಸಲಾಗುತ್ತಿದೆ. ಕೇಂದ್ರದ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಿರೋಧಿಸಿ ನಡೆಯುತ್ತಿರುವ ಹೋರಾಟ ಮಾರ್ಚ್ 26 ರಂದು 4 ತಿಂಗಳು ಪೂರೈಸಲಿದೆ. ಈ ಹಿನ್ನೆಲೆಯಲ್ಲಿ ರೈತ ನಾಯಕರು …

Read More »