ಮೈಸೂರು: ನಗರದ ನರಸಿಂಹರಾಜ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಫಯಾಜ್ ಅಹಮ್ಮದ್ ಹಾಗೂ ಮೊಕ್ತಾರ್ ಪಾಷಾ ಬಂಧಿತ ಆರೋಪಿಗಳು. ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ನಕಲಿ ಕೀ ಬಳಸಿ ಬೈಕ್ಗಳನ್ನ ಕಳ್ಳತನ ಮಾಡುತ್ತಿದ್ದರು. ಬೈಕ್ ಕಳುವಾಗಿರುವ ಸಂಬಂಧ ಪೊಲೀಸ್ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಕದ್ದ ಬೈಕ್ಗಳನ್ನ ಮಾರಾಟ ಮಾಡಲು ಮುಂದಾದ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಬಂಧಿತ ಆರೋಪಿಗಳಿಂದ ಪೊಲೀಸರು, 6 …
Read More »ಕಪಿಲೇಶ್ವರ ಮಂದಿರದ ಬಳಿ ಆಟವಾಡಲೆಂದು ಹೋದ ಬಾಲಕ; ಕಲ್ಯಾಣಿಯಲ್ಲಿ ಮುಳುಗಿ ಸಾವು
ಬೆಳಗಾವಿ: ಆಟವಾಡುತ್ತಿದ್ದ ಬಾಲಕ ದೇವಸ್ಥಾನದ ಕಲ್ಯಾಣಿಯಲ್ಲಿ ಬಿದ್ದು ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಬೆಳಗಾವಿಯ ಕಪಿಲೇಶ್ವರ ಮಂದಿರದ ಬಳಿ ನಡೆದಿದೆ. ಮೃತ ಬಾಲಕನನ್ನು 7 ವರ್ಷದ ಸ್ವರಾಜ್ ಎಂದು ಗುರುತಿಸಲಾಗಿದೆ. ಶನಿವಾರ ಸ್ನೇಹಿತರ ಜೊತೆ ಕಪಿಲೇಶ್ವರ ಮಂದಿರಕ್ಕೆ ತೆರಳಿದ್ದ ಬಾಲಕ ಮರಳಿ ಮನೆಗೆ ವಾಪಸ್ ಆಗಿಲ್ಲ. ಇದರಿಂದ ಗಾಬರಿಯಾದ ಪೋಷಕರು ಖಡೇಬಜಾರ್ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಕಪಿಲೇಶ್ವರ ಮಂದಿರದ ಬಳಿ ಬಾಲಕನಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ ಆದರೂ ಬಾಲಕನ ಸುಳಿವಿಲ್ಲ. …
Read More »ವಿಜಯಪುರದ ‘BSNL’ ಕಚೇರಿ ಮೇಲೆ ‘CBI’ ಅಧಿಕಾರಿಗಳ ದಾಳಿ ; ಮಹತ್ವದ ದಾಖಲೆಗಳು ವಶಕ್ಕೆ
ವಿಜಯಪುರ : ನಗರದ ಬಿಎಸ್ಎನ್ಎಲ್ ಕಚೇರಿ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ನಗರದ ಬಸವೇಶ್ವರ ವೃತ್ತದ ಬಳಿಯಿರುವ ಬಿ ಎಸ್ ಎನ್ ಎಲ್ ಕಚೇರಿ ಮೇಲೆ ದಾಳಿ ನಡೆಸಿದೆ. ಫೈಬರ್ ಕೇಬಲ್ ಅಳವಡಿಕೆ ವಿಚಾರದಲ್ಲಿ ಅಕ್ರಮ ಎಸಗಿರುವ ಆರೋಪದ ಮೇರೆಗೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ. ಕೇಂದ್ರದ ಡಿಜಿಟಲ್ ಇಂಡಿಯಾ ಯೋಜನೆಯಡಿ ಫೈಬರ್ ಕೇಬಲ್ ಗಳನ್ನು ಅಳವಡಿಕೆ ಮಾಡಲಾಗಿತ್ತು, ಗ್ರಾ.ಪಂ ಗೆ ಫೈಬರ್ …
Read More »ಕಲಬುರಗಿ ಜಿಲ್ಲೆಯಲ್ಲಿ ನನ್ನ ಸಿನಿಮಾ ಶೂಟಿಂಗ್ ಮಾಡುತ್ತೇನೆ: ಪುನೀತ್ ರಾಜಕುಮಾರ್
ಕಲಬುರಗಿ: ಹೈದರಾಬಾದ್-ಕರ್ನಾಟಕವನ್ನು ಕಲ್ಯಾಣ ಕರ್ನಾಟಕವೆಂದು ಮರು ನಾಮಕರಣ ಮಾಡಿದ ನಂತರ ಹಾಗೂ ಕೊರೊನಾ ಸೋಂಕಿನ ಬಳಿಕ ಮೊದಲ ಬಾರಿಗೆ ಕಲಬುರಗಿಗೆ ಆಗಮಿಸಿದ್ದು, ಜಿಲ್ಲೆಯಲ್ಲಿ ನನ್ನ ಸಿನಿಮಾವೊಂದರ ಶೂಟಿಂಗ್ ಮಾಡಲಾಗುವುದು ಎಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಘೋಷಿಸಿದರು. ‘ಯುವರತ್ನ’ ಚಿತ್ರದ ಪ್ರಚಾರಕ್ಕಾಗಿ ರವಿವಾರ ನಗರಕ್ಕೆ ಆಗಮಿಸಿದ್ದ ಅವರು ಅಭಿಮಾನಿಗಳನ್ನುದ್ದೇಶಿಸಿ ಮಾತನಾಡಿ, ಯಾವ ಸಿನಿಮಾದ ಶೂಟಿಂಗ್ ಎಂಬುದನ್ನು ಸದ್ಯದಲ್ಲೇ ಬಹಿರಂಗ ಪಡಿಸಲಿದ್ದೇವೆ ಎಂದು ಹೇಳಿದರು. ಕಲಬುರಗಿ ನನಗೆ ಹೊಸದಲ್ಲ. ಚಿಕ್ಕಂದಿನಿಂದಲೇ …
Read More »ಅಹೋರಾತ್ರ ಮನೆಗೆ ನುಗ್ಗಿ ಸುದೀಪ್ ಅಭಿಮಾನಿಗಳ ದಾಂಧಲೆ ಆರೋಪ; ಕಿಚ್ಚನನ್ನು ಅರೆಸ್ಟ್ ಮಾಡಲು ಆಗ್ರಹ
ಕಿಚ್ಚ ಸುದೀಪ್ ಅವರ ಬಗ್ಗೆ ಲಘುವಾಗಿ ಮಾತನಾಡಿದ್ದ ಬರಹಗಾರ ಹಾಗೂ ಚಿಂತಕ ಅಹೋರಾತ್ರ ಅವರ ಮನೆಗೆ ಕೆಲವರು ನುಗ್ಗಿ ದಾಂಧಲೆ ಮಾಡಿದ್ದಾರೆ. ಈ ರೀತಿ ದಾಂಧಲೆ ಮಾಡಿದವರನ್ನು ಕಿಚ್ಚ ಸುದೀಪ್ ಅಭಿಮಾನಿಗಳು ಎಂದು ಅಹೋರಾತ್ರ ದೂರಿದ್ದಾರೆ. ಅಷ್ಟೇ ಅಲ್ಲ, ಈ ಬಗ್ಗೆ ಲೈವ್ ವಿಡಿಯೋ ಮಾಡಿ ಬೇಸರ ಹೊರಹಾಕಿದ್ದಾರೆ. ಇಂದು ಫೇಸ್ಬುಕ್ನಲ್ಲಿ ಅಹೋರಾತ್ರ ಲೈವ್ ಬಂದಿದ್ದಾರೆ. ಈ ವೇಳೆ ಅವರ ಮನೆಗೆ ಒಂದಷ್ಟು ಜನರು ನುಗ್ಗಲು ಪ್ರಯತ್ನಿಸಿದ್ದಾರೆ. ಇದೆಲ್ಲ ಕಿಚ್ಚ …
Read More »ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು: ‘ಮಹಾ’ ಮಾಜಿ ಪೊಲೀಸ್ ಆಯುಕ್ತರ ಸ್ಫೋಟಕ ಹೇಳಿಕೆ
ಮುಂಬೈ: ತಿಂಗಳಿಗೆ 100 ಕೋಟಿ ರೂ ಲಂಚ ಸಂಗ್ರಹಿಸಿ ಕೊಡುವಂತೆ ಗೃಹ ಮಂತ್ರಿಗಳ ಆದೇಶವಿತ್ತು ಎಂದು ಮಹಾರಾಷ್ಟ್ರ ಐಪಿಎಸ್ ಅಧಿಕಾರಿ ಪರಮ್ ಬೀರ್ ಸಿಂಗ್ ಸ್ಫೋಟಕ ಹೇಳಿಕೆ ನೀಡಿದ್ದಾರೆ. ಉದ್ಯಮಿ ಮುಕೇಶ್ ಅಂಬಾನಿ ಅವರ ಮನೆ ಬಳಿ ಪತ್ತೆಯಾದ ಸ್ಫೋಟಕ ವಾಹನದ ಪ್ರಕರಣವನ್ನು ಸಮರ್ಪಕವಾಗಿ ನಿಭಾಯಿಸಿಲ್ಲ ಎನ್ನುವ ಕಾರಣಕ್ಕೆ ಮಹಾರಾಷ್ಟ್ರ ಸರ್ಕಾರ ಮುಂಬೈ ನಗರ ಪೊಲೀಸ್ ಆಯುಕ್ತರಾಗಿದ್ದ ಪರಮ್ ಬೀರ್ ಸಿಂಗ್ ಅವರನ್ನು ಗೃಹ ರಕ್ಷಕ ದಳದ ಮುಖ್ಯಸ್ಥರನ್ನಾಗಿ ಗುರುವಾರವಷ್ಟೇ …
Read More »ಬಿಎಸ್ವೈ ನೇತೃತ್ವದಲ್ಲಿ ಚುನಾವಣೆಗೆ ಹೋದರೆ ಬಿಜೆಪಿ ಸೋಲು : ಯತ್ನಾಳ
ವಿಜಯಪುರ : ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆತೃತ್ವದಲ್ಲಿ ಚುನಾವಣೆ ಎದರುಸಿದಲ್ಲಿ ಬಿಜೆಪಿ ಪಕ್ಷಕ್ಕೆ ಸೋಲು ಖಚಿತ. ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಸರ್ಕಾರದ ಅಸ್ತಿತ್ವಕ್ಕಾಗಿ ಸಿ.ಎಂ. ಬದಲಾವಣೆ ಅನಿವಾರ್ಯ ಎಂದು ಬಿಜೆಪಿ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದರು. ಶನಿವಾರ ನಗರದಲ್ಲಿ ರಾತ್ರಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಭ್ರಷ್ಟಾಚಾರದಲ್ಲಿ ತಡೊಗಿರುವ ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನದಿಂದ ಇಳಿಯಲೇಬೇಕು. ಬಿಜೆಪಿ ಉಳಿಬೇಕಿದ್ದಲ್ಲಿ ಮುಖ್ಯಮಂತ್ರಿ ಬದಲಾವಣೆ ಆಗಲೇಬೇಕು. ಸಿ.ಎಂ. ಬಚಲಾವಣೆ ನೂರಕ್ಕೆ ನೂರರಷ್ಟು ಖಚಿತ. ಭ್ರಷ್ಟಾಚಾರ …
Read More »ರಥೋತ್ಸವದಲ್ಲಿ ಬಾಳೆ ಹಣ್ಣಿನ ಮೇಲೆ `NEXT CM ಸಿದ್ದರಾಮಯ್ಯ’ ಎಂದು ಬರೆದು ಹರಕೆ ತೀರಿಸಿದ ಅಭಿಮಾನಿ!
ಬಳ್ಳಾರಿ : ಬಳ್ಳಾರಿ ತಾಲೂಕಿನ ಗೋನಾಳ್ ಗ್ರಾಮದಲ್ಲಿ ನಡೆದ ಗಾಧಿಲಿಂಗೆಶ್ವರ ರಥೋತ್ಸವದಲ್ಲಿ ಸಿದ್ದರಾಮಯ್ಯ ಮತ್ತೊಮ್ಮೆ ಮುಖ್ಯಮಂತ್ರಿ ಆಗಲಿ ಎಂದು ಅಭಿಮಾನಿಯೊಬ್ಬರು ರಥೋತ್ಸವದ ವೇಳೆ ಬಾಳೆ ಹಣ್ಣು ಎಸೆದು ಹರಕೆ ತೀರಿಸಿದ್ದಾರೆ. ಹೌದು, ಶನಿವಾರ ಗೋನಾಳ್ ಗ್ರಾಮದಲ್ಲಿ ಜರುಗಿದ ಗಾದಿಲಿಂಗೇಶ್ವರ ರಥೋತ್ಸವದ ವೇಳೆ ಸಿದ್ದರಾಮಯ್ಯ ಅಭಿಮಾನಿ ವಿರೇಶ್ ಎಂಬುವರು Next CM ಸಿದ್ದರಾಮಯ್ಯ ಎಂದು ಬರೆದು ಗಾಧಿಲಿಂಗೇಶ್ವರ ರಥೋತ್ವದಲ್ಲಿ ಬಾಳೆ ಹಣ್ಣನ್ನು ಎಸೆದಿದ್ದಾರೆ. ರಾಜ್ಯದಲ್ಲಿ ಸಾರ್ವತ್ರಿಕ ಚುನಾವಣೆಗೆ ಇನ್ನೂ ಮೂರು ವರ್ಷವಿದ್ದು, …
Read More »‘ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅದು ಸುಳ್ಳು ಎಂದು ನಾನು ಸಹ ಹೇಳುವುದಿಲ್ಲ: B.S.Y.
ತುಮಕೂರು: ‘ರಾಜ್ಯದಲ್ಲಿ ಭ್ರಷ್ಟಾಚಾರ ನಡೆಯುತ್ತಿದೆ ಎಂದು ಕೆಲವರು ಹೇಳುತ್ತಿದ್ದಾರೆ. ಅದು ಸುಳ್ಳು ಎಂದು ನಾನು ಸಹ ಹೇಳುವುದಿಲ್ಲ’ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದರು. ತಿಪಟೂರಿನಲ್ಲಿ ಶನಿವಾರ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದ ನಂತರ ಅವರು ಸಾರ್ವಜನಿಕ ಸಭೆಯಲ್ಲಿ ಮಾತನಾಡಿದರು. ಏಪ್ರಿಲ್ನಿಂದ ಜಿಲ್ಲಾ ಪ್ರವಾಸ: ಜಿಲ್ಲಾಧಿಕಾರಿ ಕಚೇರಿ ಸೇರಿದಂತೆ ಇತರೆ ಕಚೇರಿಗಳಲ್ಲಿ 15-20 ದಿನಗಳವರೆಗೆ ಕಡತಗಳನ್ನು ಇಟ್ಟುಕೊಳ್ಳಲಾಗುತ್ತಿದೆ. ಸಕಾಲಕ್ಕೆ ಕಡತಗಳು ವಿಲೇವಾರಿಯಾಗುತ್ತಿಲ್ಲ. ಈ ಬಗ್ಗೆ ಬಿಗಿ ಕ್ರಮ ಕೈಗೊಳ್ಳಬೇಕಾಗಿದೆ. ಅನಗತ್ಯವಾಗಿ ಕಡತ …
Read More »ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ: B.S.Y.
ರಾಯಚೂರು: ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಶಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ. ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಲಾಗುತ್ತದೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ ಎಂದರು. ಸರ್ಕಾರದ ಯೋಜನೆಗಳೇ ಬಿಜೆಪಿ ಗೆಲುವಿನ ಅಸ್ತ್ರವಾಗಲಿದೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ …
Read More »
Laxmi News 24×7