Breaking News

Uncategorized

ಹರಿದ ಜೀನ್ಸ್​ ಪ್ಯಾಂಟ್​ ವಿಚಾರಕ್ಕೆ ಮುಖ್ಯಮಂತ್ರಿಯನ್ನೇ ಎದುರು ಹಾಕಿಕೊಂಡ ಅಮಿತಾಭ್​ ಮೊಮ್ಮಗಳು ನವ್ಯಾ!

ಬಿಗ್​-ಬಿ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಇನ್ನೂ ಚಿತ್ರರಂಗಕ್ಕೆ ಕಾಲಿಟ್ಟಿಲ್ಲ. ಕಳೆದ ವರ್ಷವಷ್ಟೇ ಪದವಿ ಶಿಕ್ಷಣ ಮುಗಿಸಿರುವ ಅವರು ತಮ್ಮದೇ ಹಾದಿನಲ್ಲಿ ಸಾಗುತ್ತಿದ್ದಾರೆ. ಮಹಿಳೆಯ ಸಮಾನತೆಗಾಗಿ ಕೆಲಸ ಮಾಡುತ್ತಿದ್ದಾರೆ. ಈಗ ಅವರು ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರನ್ನು ಎದುರು ಹಾಕಿಕೊಂಡಿದ್ದಾರೆ. ಅದು ಕೂಡ ಹರಿದ ಜೀನ್ಸ್​ ಪ್ಯಾಂಟ್​ ಕಾರಣಕ್ಕೆ!     ಅರೆರೆ.. ಮುಖ್ಯಮಂತ್ರಿಗೂ, ಬಚ್ಚನ್​ ಮೊಮ್ಮಗಳಿಗೂ, ಹರಿದ ಜೀನ್ಸ್​ ಪ್ಯಾಂಟ್​ಗೂ ಏನು …

Read More »

ಸಚಿವರಿಗೆ ಸ್ವಪ‍ಕ್ಷೀಯರಿಂದಲೇ ಮುಜುಗರ

ಬೆಂಗಳೂರು: ನೇಕಾರರ ಸಮಸ್ಯೆ ಕುರಿತು ಆಡಳಿತ ಪಕ್ಷದ ಸದಸ್ಯರೇ ಪದೇ ಪದೇ ಪ್ರಶ್ನೆಗಳನ್ನು ಕೇಳುವ ಮೂಲಕ ಜವಳಿ ಸಚಿವ ಶ್ರೀಮಂತ ಪಾಟೀಲ ಅವರಿಗೆ ಮುಜುಗರ ತಂದ ವಿದ್ಯಮಾನ ವಿಧಾನಸಭೆಯಲ್ಲಿ ಬುಧವಾರ ನಡೆಯಿತು. ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿಯ ಸಿದ್ದು ಸವದಿ, ನೇಕಾರರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಪ್ರಶ್ನೆ ಕೇಳಿದರು. ‘ನೇಕಾರ ಸಮ್ಮಾನ್‌ ಯೋಜನೆಯಡಿ ನೀಡಿದ ₹2 ಸಾವಿರ ಯಾವುದಕ್ಕೂ ಸಾಲದು. ಲಾಕ್‌ಡೌನ್‌ ಅವಧಿಯಲ್ಲಿ ನೇಕಾರರು ತಯಾರಿಸಿದ ಸೀರೆಗಳನ್ನು ಇಲಾಖೆ ಖರೀದಿ ಮಾಡಿಲ್ಲ. …

Read More »

ಲೋಕಸಭಾ ಉಪ ಚುನಾವಣೆ ಮಾದರಿ ನೀತಿ ಸಂಹಿತೆ ಪಾಲನೆಗೆ ಕ್ರಮ ಕೈಗೊಳ್ಳಬೇಕು. : ಎಂ.ಜಿ.ಹಿರೇಮಠ

ಬೆಳಗಾವಿ: ಕೋವಿಡ್ ಹಿನ್ನೆಲೆಯಲ್ಲಿ ಲೋಕಸಭಾ ಉಪ ಚುನಾವಣೆ ಸಂದರ್ಭದಲ್ಲಿ ಪ್ರಚಾರ, ನಾಮಪತ್ರ ಸಲ್ಲಿಕೆ, ಅನುಮತಿ ನೀಡಿಕೆಗೆ ಸಂಬಂಧಿಸಿದಂತೆ ಬಹಳಷ್ಟು ಮಾರ್ಗಸೂಚಿಗಳು ಪರಿಷ್ಕರಣೆಗೊಂಡಿದ್ದು, ಹೊಸ ಮಾರ್ಗಸೂಚಿ ಅನ್ವಯವೇ ಅನುಮತಿಯನ್ನು ನೀಡಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು. ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಮಾ.17) ನಡೆದ ವಿವಿಧ ಸಮಿತಿಗಳ ನೋಡಲ್ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು. ಮಾದರಿ ನೀತಿ ಸಂಹಿತೆ ಪಾಲನೆಗೆ …

Read More »

ಬೈಕ್ ಸ್ಟಂಟ್ ರಾಣಿಯರಿಗೆ ಬಿತ್ತು ಭಾರೀ ದಂಡ

ಲಕ್ನೋ: ಹುಡುಗಿಯರಿಬ್ಬರು ಬೈಕ್‍ನಲ್ಲಿ ಸ್ಟಂಟ್ ಮಾಡಿ ಅದನ್ನು ಚಿತ್ರೀಕರಣ ಮಾಡಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಾಕಿಕೊಂಡಿದ್ದರು. ಇದನ್ನು ಗಮನಿಸಿರುವ ಪೊಲೀಸರು ಬೈಕ್ ರೈಡ್ ಮಾಡಿದ ಹುಡುಗಿಯ ಮೇಲೆ 28 ಸಾವಿರ ರೂಪಾಯಿ ದಂಡ ಪ್ರಯೋಗ ಮಾಡಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಸಕ್ರಿಯವಾಗಿರುವ ಉತ್ತರ ಪ್ರದೇಶದ ಗಾಜಿಯಾಬಾದ್‍ನ ಶಿವಾಂಗಿ ದಬಾಸ್ ತನ್ನ ಸ್ನೇಹಿತೆ ಕುಸ್ತಿಪಟು ಸ್ನೇಹಾ ರಘವಂಶಿಯ ಹೆಗಲ ಮೇಲೆ ಕೂತು ಬುಲೆಟ್ ಬೈಕ್‍ನಲ್ಲಿ ಗಾಜಿಯಾಬಾದ್‍ನಲ್ಲಿ ರೌಂಡ್ಸ್ ಹೊಡೆದಿದ್ದಾಳೆ. ರೌಂಡ್ಸ್ ಹೊಡೆಯುತ್ತಿರುವುದನ್ನು ಚಿತ್ರೀಕರಿಸಿ …

Read More »

ಕನ್ನಡ ದ್ರೋಹಿ MES ನಿಷೇಧಿಸಿ: ಶುಭಂ ಸೆಳಕೆ ಗಡಿಪಾರು ಮಾಡಿ ಎಂದು ಕನ್ನಡ ಸಂಘಟನೆ ಆಗ್ರಹ..

ಘಟಪ್ರಭಾ: ಬೆಳಗಾವಿಯಲ್ಲಿ ಇರುವ ಕನ್ನಡ ನಾಡ ದ್ರೋಹಿ ಶುಭಂ ಸೆಳಕೆ ಇತನು ಕನ್ನಡದ ಶಾಲು ಹಾಕಿಕೊಂಡು ಅಲೆದಾಡುವವರ ವಿರುದ್ಧ ಅಟ್ಟಿಸಿಕೊಂಡು ಹೊಡೆಯುವ ಕನ್ನಡಿಗರಿಗೆ ಬೆದರಿಕೆ ಹಾಕಿದ್ದಾನೆ ಎಂದು ಕನ್ನಡ ಪರ ಸಂಘಟನೆಗಳು ಆಕ್ರೋಶಿಸಿ ಇಂದು ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಘಟಪ್ರಭಾ ಮೃತ್ಯುಂಜಯ ಸರ್ಕಲನಲ್ಲಿ ಪ್ರತಿಭಟನೆ ಮಾಡಲಾಯಿತು. ಶ್ರೀಶೈಲ ಬ್ಯಾಕೂಡ ನಿರೀಕ್ಷಕರು, ಘಟಪ್ರಭಾ ಪೋಲಿಸ್ ಠಾಣೆ ಇವರ ಮುಖಾಂತರ ಲಕ್ಷ್ಮಣ ಣ ನಿಂಬರಗಿ ಪೋಲಿಸ್ ಅಧಿಕ್ಷಕರು ಬೆಳಗಾವಿ ಅವರಿಗೆ ಮನವಿ …

Read More »

ಹುಬ್ಬಳ್ಳಿಗೆ ಬರುತ್ತಿದ್ದ ಇಬ್ಬರು ಕ್ರೀಡಾಪಟುಗಳ ದುರ್ಮರಣ: ಮೂವರಿಗೆ ಗಂಭೀರ ಗಾಯ

ವಿಜಯಪುರ: ಲಾರಿ ಹಾಗೂ ಥವೇರಾ ವಾಹನದ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಕ್ರೀಡಾಪಟುಗಳು ಸಾವನ್ನಪ್ಪಿ, ಮೂವರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ರೋಣಿಗಾರ ಕ್ರಾಸ್ ಬಳಿ ಸಂಭವಿಸಿದೆ. ಮಹಾರಾಷ್ಟ್ರದ ಸೊಲ್ಲಾಪುರದಿಂದ ಹುಬ್ಬಳ್ಳಿಯ ಕಬ್ಬಡ್ಡಿ ಟೂರ್ನಿಯಲ್ಲಿ ಭಾಗವಹಿಸಲು ಬರುತ್ತಿದ್ದ ಸಮಯದಲ್ಲಿ ದುರ್ಘಟನೆ ಸಂಭವಿಸಿದೆ. ಘಟನೆಯಲ್ಲಿ ಸೋಹೈಲ್ ಮತ್ತು ಮಹಾದೇವ ಎಂಬ 20 ವರ್ಷದ ಕ್ರೀಡಾಪಟುಗಳು ಸಾವಿಗೀಡಾಗಿದ್ದಾರೆ. ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರ ಬಗ್ಗೆ ಮಾಹಿತಿ …

Read More »

ಗರಿಗೆದರಿದ ಉಪಚುನಾವಣೆ ಕಣ : ಕಾಂಗ್ರೆಸ್-ಬಿಜೆಪಿ ಭರ್ಜರಿ ಪ್ರಚಾರ

ರಾಯಚೂರು : ಮಸ್ಕಿ ಉಪಚುನಾವಣೆಗೆ ದಿನಾಂಕ ಘೋಷಣೆಯಾದ ಹಿನ್ನೆಲೆ ಕ್ಷೇತ್ರದಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಮುಖಂಡರು, ಕಾರ್ಯಕರ್ತರು ಕ್ಷೇತ್ರದಲ್ಲಿ ಭರ್ಜರಿ ಪ್ರಚಾ ಆರಂಭಿಸಿದ್ದಾರೆ. ಕಾಂಗ್ರಸ್ ದ್ವಿಚಕ್ರ ವಾಹನ ಹಾಗೂ ಮನೆ ಮನೆ ಪ್ರಚಾರಕ್ಕಿಳಿದಿದೆ. ಕಾಂಗ್ರೆಸ್ ನಾಯಕ ಬಸನಗೌಡ ತುರುವಿಹಾಳ ಬೂತ್ ಮಟ್ಟದಿಂದ ಮತಬೇಟೆ ಆರಂಭಿಸಿದ್ದಾರೆ. ಇತ್ತ ಬಿಜೆಪಿ ಪಕ್ಷದಿಂದಲೂ ಭರ್ಜರಿ ತಯಾರಿ ನಡೆಯುತ್ತಿದ್ದು, ಸಿಎಂ ಯಡಿಯೂರಪ್ಪ ನೇತೃತ್ವದ ಸಮಾವೇಶಕ್ಕೆ ಭರದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಸ್ಕಿಯಲ್ಲಿ ಮಾರ್ಚ್​ 20ರಂದು ಸಂಜೆ …

Read More »

ಬೆಳಗಾವಿಯಲ್ಲಿ ನಿಗೂಢ ಸೋಂಕು : 10ಕ್ಕೂ ಹೆಚ್ಚು ಜಾನುವಾರುಗಳು ಸಾವು

ಬೆಳಗಾವಿ : ಜಿಲ್ಲೆಯ ಟಿಳಕವಾಡಿ ಭಾಗದಲ್ಲಿ ಹಲವು ದಿನಗಳಿಂದ ನಿಗೂಢ ಸೋಂಕು ಕಾಣಿಸಿಕೊಂಡ ಪರಿಣಾಮ 10ಕ್ಕೂ ಜಾರುವಾರು ಬಲಿಯಾಗಿವೆ. ಜಾನುವಾರುಗಳಿಗೆ ಜ್ವರ, ಉಸಿರಾಟದ ಸಮಸ್ಯೆಯಿಂದ ಬಳಲಿ ಸಾವನ್ನಪ್ಪುತ್ತಿವೆ ಎಂದು ಹೇಳಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಹೊಸ ಸೋಂಕಿನ ಭೀತಿ ಆರಂಭವಾಗಿದೆ. ಪಶು ವೈದ್ಯರು ಮೃತ ಜಾನುವಾರುಗಳ ಮರಣೋತ್ತರ ಪರೀಕ್ಷೆಗೆ ಮುಂದಾಗಿದ್ದಾರೆ. ಜೀವನೋಪಾಯಕ್ಕೆ ಸಾಕಿದ್ದ ಜಾನುವಾರಗಳು ಸಾವನ್ನಪ್ಪಿರೋದು ಕಂಡು ಮಾಲೀಕರು ಕಣ್ಣೀರು ಹಾಕುತ್ತಿದ್ದರೆ, ಸಾರ್ವಜನಿಕರು ಭೀತಿಯಲ್ಲಿ ಇದ್ದಾರೆ.

Read More »

ಸರ್ಕಾರಿ ಕಚೇರಿಯ ಮುಂದೆಯೇ ವ್ಯಕ್ತಿಯ ಭೀಕರ ಕೊಲೆ…!

ಗದಗ: ಯುವಕನೋರ್ವ ಅಶ್ಲೀಲವಾಗಿ ಬೈದಾಡುತ್ತಿದ್ದ ಸಂಬಂಧಿಯನ್ನು ಬರ್ಬರವಾಗಿ ಕೊಲೆಗೈದ ಘಟನೆ ನಗರದ ಬೆಟಗೇರಿಯ ಕುರಹಟ್ಟಿ ಪೇಟೆನಲ್ಲಿ ನಡೆದಿದೆ. ಕುರಹಟ್ಟಿ ಪೇಟೆ ನಿವಾಸಿ ಪ್ರವೀಣ್ ಗದುಗಿನ (23) ಕೊಲೆಗೈದ ಯುವಕ. ಪ್ರವೀಣ್ ತನ್ನ ಸಂಬಂಧಿಯಾದ ಮಂಜುನಾಥ್ ಗದುಗಿನ (44)ನನ್ನು ಕೊಲೆ ಮಾಡಿದ್ದಾನೆ. ಮಂಜುನಾಥ್ ಆಗಾಗ ಪ್ರವೀಣ್ ಮನೆ ಬಳಿ ಬಂದು ಅಶ್ಲೀಲವಾಗಿ ಬೈದಾಡುತ್ತಿದ್ದ. ಮಂಗಳವಾರ ರಾತ್ರಿ ಸಹ ಮಂಜುನಾಥ್ ಬೈದಾಡುತ್ತಿದ್ದ. ಇದರಿಂದ ಕೋಪಗೊಂಡ ಪ್ರವೀಣ್ ಆತನ ಕುತ್ತಿಗೆಗೆ ಚಾಕು ಹಾಕಿ ಕೊಲೆಗೈದು …

Read More »

ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ:ಪಿಯೂಷ್ ಗೋಯಲ್

ನವದೆಹಲಿ: ಭಾರತೀಯ ರೈಲ್ವೆ ಖಾಸಗೀಕರಣದ ಬಗ್ಗೆ ಹಲವಾರು ಗಾಳಿಸುದ್ದಿಗಳು ಹರಿದಾಡುತ್ತಿದ್ದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಪಿಯೂಷ್ ಗೋಯಲ್ ಸ್ಪಷ್ಟನೆ ನೀಡಿದ್ದು, ಭಾರತೀಯ ರೈಲ್ವೆ ಎಂದಿಗೂ ಖಾಸಗೀಕರಣಗೊಳ್ಳುವುದಿಲ್ಲ ಎಂದು ಹೇಳಿದ್ದಾರೆ. ರೈಲ್ವೆಗಾಗಿ ಬಿಡುಗಡೆಯಾದ ಅನುದಾನ ಕುರಿತು ಸದಸ್ಯರು ಕೇಳಿದ ಪ್ರಶ್ನೆಗೆ ಚರ್ಚೆವೇಳೆ ಉತ್ತರಿಸಿದ ಕೇಂದ್ರ ರೈಲ್ವೇ ಸಚಿವ ಪಿಯೂಷ್ ಗೋಯಲ್, ಪ್ರಧಾನಿ ಮೋದಿ ಸರ್ಕಾರ ರೈಲ್ವೆ ಹೂಡಿಕೆಯನ್ನು ಹೆಚ್ಚಿಸಿದೆ. 2019-20ರ ಆರ್ಥಿಕ ವರ್ಷದಲ್ಲಿ 1.5 ಲಕ್ಷ ಕೋಟಿ ಇದ್ದ ಹೂಡಿಕೆ 2021-22ರ …

Read More »