Breaking News

Uncategorized

ವಕ್ಫ್​ ಆಸ್ತಿ ಕಬಳಿಕೆ ವಿಚಾರ: ನಾವು ದೇವಸ್ಥಾನ, ರೈತರ ಆಸ್ತಿ ಮುಟ್ಟಲ್ಲ. ರೈತರ ಆಸ್ತಿ ಮುಟ್ಟಿದ್ರೆ ನಾನೇ ಬಂದು ತೆಗಿಸುತ್ತೇನೆ

ಬೆಳಗಾವಿ: ಶೇ.95ರಷ್ಟು ವಕ್ಫ್ ಆಸ್ತಿಯಲ್ಲಿ ಒತ್ತುವರಿ ಮಾಡಿರುವುದು ಮುಸ್ಲಿಮರೇ ಎಂದು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಕ್ಫ್ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟಪಡಿಸಿದರು‌. ವಿಧಾನಸಭೆಯಲ್ಲಿ ಇಂದು ನಿಯಮ 69 ಅಡಿಯಲ್ಲಿ ನಡೆದ ವಕ್ಫ್​ ನೋಟಿಸ್ ಚರ್ಚೆಗೆ ಉತ್ತರಿಸಿದ ಸಚಿವ ಜಮೀರ್, ವಿಜಯಪುರದಲ್ಲಿ ನಡೆದ ವಕ್ಫ್ ಅದಾಲತ್​​ಗೆ ಯತ್ನಾಳ್ ಬರಲಿಲ್ಲ. ಬಳಿಕ ಗೊಂದಲ ಶುರು ಮಾಡಿದ್ರು. ರೈತರ ಜಮೀನು ವಕ್ಫ್ ಹೆಸರಲ್ಲಿ ಮಾಡಿ ಅಂತ ನಾನು ಸೂಚನೆ ಕೊಡಲಿಲ್ಲ. ರಾಜ್ಯದಲ್ಲಿ 1.28 …

Read More »

ಸರ್ಕಾರಿ ಶಾಲೆ, ಹಿಂದೂ ರುದ್ರಭೂಮಿ, ದೇವಸ್ಥಾನ ಇದ್ದರೆ ಅಲ್ಲಿ ವಕ್ಫ್​​ ಆಸ್ತಿ ಎಂದು ತರಲೇಬಾರದೆಂದು ಸೂಚಿಸಲಾಗಿದೆ.

ಬೆಳಗಾವಿ: ”ನಮ್ಮ ಸರ್ಕಾರ ಮುಜರಾಯಿ ದೇವಸ್ಥಾನಗಳ 10,700 ಎಕರೆ ಜಮೀನು ಖಾತೆ ಬದಲಾಯಿಸಿ ಸಂರಕ್ಷಿಸಿದ್ದರೆ, ವಕ್ಫ್​​​ಗೆ ಕೇವಲ 600 ಎಕರೆ ಜಮೀನಿನ ಖಾತೆ ಬದಲಾವಣೆ ಮಾಡಿದ್ದೇವೆ” ಎಂದು ಕಂದಾಯ ಸಚಿವ ಕೃಷ್ಣ ಬೈರೇಗೌಡ ಸ್ಪಷ್ಟಪಡಿಸಿದ್ದಾರೆ. ವಿಧಾನಸಭೆಯಲ್ಲಿ ವಕ್ಫ್ ನಿಲುವಳಿ ಸೂಚನೆಗೆ ಉತ್ತರಿಸಿದ ಸಚಿವ ಕೃಷ್ಣ ಬೈರೇಗೌಡ, ”ಬಿಜೆಪಿ ವಕ್ಫ್ ವಿಚಾರವಾಗಿ ಸುಳ್ಳಿನ ಸರಮಾಲೆ ಹೇಳಿದೆ. 2004ರಿಂದೀಚೆಗೆ ರಾಜ್ಯದಲ್ಲಿ ಒಟ್ಟು 9,800 ವಕ್ಫ್ ಆಸ್ತಿ ಎಂದು ನಮೂದಾಗಿದೆ. ಇದರಲ್ಲಿ ಬಾಧಿತ ರೈತರ ಸಂಖ್ಯೆ …

Read More »

ಮಾಜಿ ಸಚಿವ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಹೇಳಿಕೆ

ಬೆಳಗಾವಿ: “ಗ್ಯಾರಂಟಿ ಯೋಜನೆಗಳನ್ನು ನೀಡಿರುವುದೇ ತಪ್ಪು ಎಂಬಂತೆ ವಿರೋಧ ಪಕ್ಷಗಳು ಇವುಗಳನ್ನು ಬಿಟ್ಟಿ ಭಾಗ್ಯ ಎಂದು ಟೀಕಿಸುತ್ತಿವೆ” ಎಂದು ಮಾಜಿ ಸಚಿವ ಹಾಗೂ ರಾಜ್ಯ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ.ಜಯಚಂದ್ರ ಬೇಸರ ವ್ಯಕ್ತಪಡಿಸಿದ್ದಾರೆ. ಸುವರ್ಣಸೌಧದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, “ವಿರೋಧ ಪಕ್ಷಗಳ ಟೀಕೆಯಿಂದ ನಮ್ಮ ಗ್ಯಾರಂಟಿ ಯೋಜನೆಗಳು ಪ್ರಚಾರ ಕಳೆದುಕೊಳ್ಳುತ್ತಿವೆ. ನಮ್ಮ ಸರ್ಕಾರದ ಯೋಜನೆಗಳಿಗೆ ಹೆಚ್ಚು ಪ್ರಚಾರ ದೊರೆಯುವ ಕೆಲಸವಾಗಬೇಕು. ಗ್ಯಾರಂಟಿಗಳು ಮಧ್ಯವರ್ತಿಗಳ ಹಾವಳಿಯಿಲ್ಲದೆ ನೇರವಾಗಿ ಫಲಾನುಭವಿಗಳನ್ನು ತಲುಪುತ್ತಿದೆ‌. …

Read More »

ಶಿವರಾಜ್​ಕುಮಾರ್​ ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ

ಕನ್ನಡ ಚಿತ್ರರಂಗದ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ತಮ್ಮ ಅನಾರೋಗ್ಯದ ಚಿಕಿತ್ಸೆಗಾಗಿ ಇಂದು ಸಂಜೆ ಅಮೆರಿಕಕ್ಕೆ ಪ್ರಯಾಣ ಬೆಳೆಸಲಿದ್ದಾರೆ. ಸಿನಿಮಾ ಮೇಲಿನ ಒಲವು, ಪರಿಶ್ರಮ, ಅಮೋಘ ಅಭಿನಯದಿಂದ ಚಂದನವನದಲ್ಲಿ ತಮ್ಮದೇ ಆದ ಸ್ಟಾರ್​ಡಮ್​​ ಗಿಟ್ಟಿಸಿಕೊಂಡಿರುವ ನಟ ತಮ್ಮ ಎಲ್ಲಾ ಬದ್ಧತೆಗಳನ್ನು ಪೂರ್ಣಗೊಳಿಸಿ, ವಿದೇಶಕ್ಕೆ ತೆರಳುತ್ತಿದ್ದಾರೆ. ನಿಮಗೆ ಈಗಾಗಲೇ ತಿಳಿಸಿರುವಂತೆ, ಅನಾರೋಗ್ಯದ ಹಿನ್ನೆಲೆ ಅಮೆರಿಕದಲ್ಲಿ ಶಸ್ತ್ರ ಚಿಕಿತ್ಸೆಗೆ ಒಳಗಾಗಲಿದ್ದಾರೆ. ಅಮೆರಿಕದ ಫ್ಲೋರಿಡಾದಲ್ಲಿರುವ ಮಿಯಾಮಿಯಲ್ಲಿ ಡಿಸೆಂಬರ್ 24ರಂದು ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲಿದ್ದಾರೆ. ಸರ್ಜರಿ ಬಳಿಕ ವಿಶ್ರಾಂತಿ …

Read More »

ಗೃಹಲಕ್ಷ್ಮಿ ಫಲಾನುಭವಿಗಳ ಜೊತೆಗೆ ಸುವರ್ಣ ಸೌಧಕ್ಕೆ ಬಂದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಬೆಳಗಾವಿ: “ಇಂದು ಸುವರ್ಣಸೌಧ ವೀಕ್ಷಣೆಗೆ ಹಾಗೂ ಸರ್ಕಾರದ ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿ ಪಡೆದುಕೊಳ್ಳಲು ಗೃಹಲಕ್ಷ್ಮಿಯರು ಬಂದಿದ್ದಾರೆ. ರಾಜ್ಯದ ಮುಖ್ಯಮಂತ್ರಿ ‌ಹಾಗೂ ಉಪಮುಖ್ಯಮಂತ್ರಿ ಕಾರ್ಯ ವೈಖರಿಯನ್ನು ನೋಡಲು ಅವರನ್ನು ಸುವರ್ಣ ಸೌಧಕ್ಕೆ ಆಗಮಿಸಿ ಸಂತಸ ವ್ಯಕ್ತಪಡಿಸಿದ್ದಾರೆ” ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದರು. ಅವರು ಸುವರ್ಣಸೌಧದ ಮುಂಭಾಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, “ರಾಜ್ಯದ ಪ್ರತಿಯೊಬ್ಬ ಮಹಿಳೆಗೂ ಗೃಹಲಕ್ಷ್ಮಿ ಯೋಜನೆಯ ಲಾಭ ಸಿಗಬೇಕು …

Read More »

ಎರಡು ತಿಂಗಳ ಹಿಂದೆಯೇ ದೇವರ ಕೋಣ ನಾಪತ್ತೆ ಹುಡುಕಿಕೊಡುವಂತೆ ರಟ್ಟಿಹಳ್ಳಿ ಪೊಲೀಸರಿಗೆ ಮನವಿ

ಹಾವೇರಿ: ದೇವರ ಕೋಣ ನಾಪತ್ತೆಯಾಗಿದ್ದು, ಹುಡುಕಿ ಕೊಡುವಂತೆ ಗ್ರಾಮಸ್ಥರು ಪೊಲೀಸ್​ ಠಾಣೆ ಮೆಟ್ಟಿಲೇರಿರುವ ಘಟನೆ ಹಾವೇರಿ ಜಿಲ್ಲೆ ರಟ್ಟಿಹಳ್ಳಿ ತಾಲೂಕಿನ ಮಕರಿ ಗ್ರಾಮದಲ್ಲಿ ನಡೆದಿದೆ. ಮಕರಿ ಗ್ರಾಮದ ಆರಾಧ್ಯದೈವ ದುರ್ಗಾದೇವಿ. ನಾಲ್ಕು ವರ್ಷಗಳ ಹಿಂದೆ ದುರ್ಗಾದೇವಿಯ ಹೆಸರಿನಲ್ಲಿ ಕೋಣವನ್ನು ಬಿಡಲಾಗಿತ್ತು. ಗ್ರಾಮದಲ್ಲಿಯೇ ಕೋಣ ಓಡಾಡಿಕೊಂಡು ಮೇವು ತಿಂದುಕೊಂಡು ಇತ್ತು. ಈಗ ಎರಡು ತಿಂಗಳ ಹಿಂದೆ ದೇವರ ಕೋಣ ನಾಪತ್ತೆಯಾಗಿದೆ. ಗ್ರಾಮದ ಜನರು ಹಾಗೂ ಸಮಿತಿ ಸದಸ್ಯರು ಹುಡುಕಾಟ ನಡೆಸಿದರೂ ಕೋಣ ಮಾತ್ರ …

Read More »

ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ

ಹಿರಿಯ ರಾಜಕೀಯ ಧುರೀಣ ಮತ್ತು ಕಾಂಗ್ರೆಸ್ ಮುಖಂಡ ಶ್ರೀ ಅಶೋಕ ನಿಂಗಯ್ಯ ಸ್ವಾಮಿ ಪೂಜಾರಿ ಅವರು ಇಂದು ಚಿಕ್ಕೋಡಿ ತಾಲೂಕಿನ ಯಡೂರ ಶ್ರೀ ಯಡೂರ ವೀರುಪಾಕ್ಷಲಿಂಗ ದೇವಸ್ಥಾನಕ್ಕೆ ಗೋಕಾಕ ನಗರದ ಯಡೂರು ಪಾದಯಾತ್ರ ಭಕ್ತ ಮಂಡಳಿ ಅವರ ನೇತೃತ್ವದಲ್ಲಿ ಯಶಸ್ವಿಯಾಗಿ 47ನೇ ವರ್ಷದಲ್ಲಿ ಪಾದಯಾತ್ರೆಯಲ್ಲಿ ಆಗಮಿಸಿದ ಭಕ್ತ ಮಂಡಳಿಯವರು ನಡೆಸಿದ ಗುಗ್ಗಳೋತ್ಸವ, ದೇವರಿಗೆ ಮಂಗಳಾರತಿ ಹಾಗೂ ನೈವೇದ್ಯ ಅರ್ಪಣೆ ಹಾಗೂ ಸಾಮೂಹಿಕ ವಿವಾಹದ ಕಾರ್ಯಕ್ರಮದಲ್ಲಿ ಭಾಗವಹಿಸಿ ವಧು ವರರಿಗೆ ಶುಭ …

Read More »

ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ  ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ.

ಬೆಳಗಾವಿ, ಡಿಸೆಂಬರ್​​ 15: ಮಗುವಿಗೆ ಪಿಡ್ಸ್​ ಬರುತ್ತೆ ಅಂತಾ ಹೆತ್ತ ಎರಡು ತಿಂಗಳ ಹೆಣ್ಣು ಹಸುಗೂಸನ್ನು ತಾಯಿ (Mother) ಕೆರೆಗೆ ಎಸೆದಿರುವಂತಹ ಮತ್ತೊಂದು ಅಮಾನವೀಯ ಘಟನೆ ಬೆಳಗಾವಿ‌‌ ತಾಲೂಕಿನ ಕಣಬರಗಿ ಗ್ರಾಮದಲ್ಲಿ ನಡೆದಿದೆ. ತಾಯಿ ಮಗುವನ್ನು ಕೆರೆಗೆ ಎಸೆಯುವುದನ್ನ ನೋಡಿದ ದನ, ಕರು ತೊಳೆಯುತ್ತಿದ್ದ ಯುವಕರು ತಕ್ಷಣವೇ ಕೆರೆಗೆ ಹಾರಿ ಮಗು ರಕ್ಷಣೆ ಮಾಡಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಕಣಬರಗಿ ಗ್ರಾಮದ ನಿವಾಸಿ ಶಾಂತಿ ಕರವಿನಕೊಪ್ಪ ಎಂಬುವವರು ಈ ಕೃತ್ಯ‌ವೆಸಗಿದ್ದಾರೆ. …

Read More »

ಗೋವಾ ಪೊಲೀಸ್​ನನ್ನು ಬಂಧಿಸಿದ ಹುಬ್ಬಳ್ಳಿ ಪೊಲೀಸರು

ಡಿಸೆಂಬರ್​ 14: ನಟೋರಿಯಸ್ ಕ್ರಿಮಿನಲ್ ಜೊತೆಗೆ ಬಂದಿದ್ದ ಗೋವಾ (Goa) ಪೊಲೀಸ್​ನನ್ನು ಹಳೇ ಹುಬ್ಬಳ್ಳಿಯ ಪೊಲೀಸರು (Old Hubballi Police) ಬಂಧಿಸಿದ್ದಾರೆ. ಬಂಧಿತ ಅಮಿತ ನಾಯಕ್ ಗೋವಾ ಪೊಲೀಸ್ ಕ್ರೈಂ ಬ್ರಾಂಚ್​ನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಆರೋಪಿ ಸುಲೇಮಾನ್ ಸಿದ್ದಿಕಿ ಹೈದರಾಬಾದ್, ಪುಣೆ, ದೆಹಲಿ, ಗೋವಾ ರಾಜ್ಯಗಳ ಪೊಲೀಸರಿಗೆ ಬೇಕಾಗಿದ್ದಾನೆ. ಈತನ ವಿರುದ್ಧ ಕೊಲೆ, ಕೊಲೆ‌ ಯತ್ನ, ಬೆದರಿಕೆ, ವಂಚನೆ, ಭೂ ಮಾಫಿಯಾ ದಂಧೆ, ಸಾರ್ವಜನಿಕರನ್ನು ಹೆದರಿಸಿ ದುಡ್ಡು ಕೀಳುವುದು, ದರೋಡೆ ಪ್ರಕರಣಗಳಲ್ಲಿ ಭಾಗಿಯಾಗಿರುವ …

Read More »

ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ: ಸತೀಶ್ ಜಾರಕಿಹೊಳಿಗೆ ಬಿಗ್​ ರಿಲೀಫ್

ಬೆಂಗಳೂರು, (ಡಿಸೆಂಬರ್ 12): ಸಚಿವ ಸತೀಶ್ ಜಾರಕಿಹೊಳಿ ವಿರುದ್ಧದ ಹಿಂದೂ ಧರ್ಮದ ಬಗ್ಗೆ ಅವಹೇಳನಕಾರಿ ಹೇಳಿಕೆ ಆರೋಪ ಪ್ರಕರಣವನ್ನು ಹೈಕೋರ್ಟ್​ ರದ್ದುಗೊಳಿಸಿದೆ. ಹಿಂದೂ ಧರ್ಮ‌ ನಿಂದನೆ‌ ಮೂಲಕ ಅಶಾಂತಿ ಮೂಡಿಸಲು ಯತ್ನ, ಸಮುದಾಯಗಳ ನಡುವೆ ದ್ವೇಷ ಮೂಡಿಸಲು ಯತ್ನಿಸಿದ್ದಾರೆಂದು ವಕೀಲ ಕೆ.ದಿಲೀಪ್ ಕುಮಾರ್ ಅವರು ದಾಖಲಿಸಿದ್ದ ಖಾಸಗಿ ದೂರನ್ನು ಇಂದು (ಡಿಸೆಂಬರ್ 12) ಹೈಕೋರ್ಟ್​ ರದ್ದುಪಡಿಸಿದೆ ಇದರಿಂದ ಸಚಿವ ಸತೀಶ್ ಜಾರಕಿಹೊಳಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ. ಪ್ರಕರಣ ಹಿನ್ನೆಲೆ 2022ರ ನವೆಂಬರ್​ನಲ್ಲಿ …

Read More »