Breaking News

Uncategorized

ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ‍್ಯಾಲಿ

ಬೆಳಗಾವಿ(ಫೆ.3): ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ‍್ಯಾಲಿ ನಡೆಯಲಿದ್ದು, ಸಾವಿರಾರು ಜನ ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದಾರೆ. ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕೋವಿಡ್ ಪರಿಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಮುಂದೆ ನೂರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಾಳೆಯಿಂದ ಬೆಳಗಾವಿಗೆ ಸಾವಿರಾರು ಯುವಕರು ರ‍್ಯಾಲಿಗೆ ಬರುವ ಹಿನ್ನೆಲೆ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಮೈದಾನದಲ್ಲಿ ನಾಳೆಯಿಂದ ಸೇನಾ ನೇಮಕಾತಿ‌ ರ‍್ಯಾಲಿ …

Read More »

ಮಾರ್ಕೆಟ್​, ಬಸ್​ನಲ್ಲಿ ಜನಜಂಗುಳಿ ಓಕೆ…ಥಿಯೇಟರ್​ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ

ಕೋವಿಡ್​ 19 ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ಸೇವೆ, ಶಾಲಾ – ಕಾಲೇಜುಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ಆದರೆ ಫೆಬ್ರವರಿ 28ರವರೆಗೆ ರಾಜ್ಯದ ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು ಚಂದನವನದ ತಾರೆಯರ ಕಣ್ಣು ಕೆಂಪಗಾಗಿಸಿದೆ. ಈ ವಿಚಾರವಾಗಿ ಟ್ವೀಟ್​ ಮಾಡಿರುವ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ, ಮಾರ್ಕೆಟ್​ನಲ್ಲಿ ಗಿಜಿ ಗಿಜಿಗುಡುತ್ತಿರುವ ಜನ, ಬಸ್​ನಲ್ಲೂ ಜನರ ಹಿಂಡೇ ತುಂಬಿರುತ್ತೆ. …

Read More »

ವಿಶ್ವದ ಮೊದಲ ಹೈಬ್ರಿಡ್ ಏರ್ ಶೋ ಇಂದಿನಿಂದ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.

ಬೆಂಗಳೂರು : ವಿಶ್ವದ ಮೊದಲ ಹೈಬ್ರಿಡ್ ಏರ್ ಶೋ ಇಂದಿನಿಂದ ಬೆಂಗಳೂರಿನ ವಾಯುನೆಲೆಯಲ್ಲಿ ನಡೆಯುತ್ತಿದ್ದು, ಈ ಏರೋ ಇಂಡಿಯಾ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್, ಏರ್ ಶೋ ನಮ್ಮ ದೇಶದ ಶಕ್ತಿ ಪ್ರದರ್ಶನದ ವೇದಿಕೆಯಾಗಿದೆ. ವಿಶ್ವದ ಮೊಟ್ಟ ಮೊದಲ ಹೈಬ್ರಿಡ್ ಏರ್ ಶೋ ಇದಾಗಿದೆ. ಭಾರತೀಯ ತಯಾರಿಕೆಯ ತೇಜಸ್ ಯುದ್ಧ ವಿಮಾನಕ್ಕೆ ಸಾಕಷ್ಟು ಬೇಡಿಕೆಯಿದೆ. ಈಗಾಗಲೇ 83 …

Read More »

ಕೇರಳ ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ʼಸುಪ್ರೀಂʼ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ʼPhD ಕಡ್ಡಾಯʼ

ನವದೆಹಲಿ: ಕೇರಳ ಹೈಕೋರ್ಟ್ ತೀರ್ಪನ್ನ ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, AICTE ನಿಯಮಾವಳಿಗಳ ಪ್ರಕಾರ, 5.3.2010ರ ನಂತರ ತಾಂತ್ರಿಕ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್ ಡಿ ಕಡ್ಡಾಯ ಎಂದಿದೆ. ಪಿಹೆಚ್ ಡಿ ಪದವಿಯ ಕೊರತೆಗೆ ಸಂಬಂಧಿಸಿದಂತೆ ಸಹಾಯಕ ಪ್ರಾಧ್ಯಾಪಕರು ಸಲ್ಲಿಸಿದ್ದ ಹನ್ನೆರಡು ಅರ್ಜಿಗಳನ್ನ ವಿಲೇವಾರಿ ಮಾಡಿದ ಸುಪ್ರಿಂಕೋರ್ಟ್‌, ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ವಿಶೇಷ ಅರ್ಜಿಗಳನ್ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ದಿನೇಶ್ ಮಹೇಶ್ವರಿ …

Read More »

PUC ವಿದ್ಯಾರ್ಥಿನಿಯರಿಗೆ 25 ಸಾವಿರ ರೂ, ಡಿಗ್ರಿ ಮುಗಿಸಿದ ಹೆಣ್ಣುಮಕ್ಕಳಿಗೆ 50 ಸಾವಿರ! ಸರ್ಕಾರದಿಂದ ಬಂಪರ್ ಗಿಫ್ಟ್

ಪಾಟ್ನಾ : ಪಿಯುಸಿ ತೇರ್ಗಡೆ ಮಾಡಿರುವ ಅವಿವಾಹಿತ ಹೆಣ್ಣು ಮಕ್ಕಳಿಗೆ 25 ಸಾವಿರ ರೂ. ಹಾಗೂ ಪದವಿ ಮುಗಿಸಿದ ವಿವಾಹಿತ ಮತ್ತು ಅವಿವಾಹಿತ ಹೆಣ್ಣುಮಕ್ಕಳಿಗೆ 50 ಸಾವಿರ ರೂ. ನೀಡಲಾಗುವುದು ಎಂದು ಬಿಹಾರ ಸರ್ಕಾರ ಘೋಷಣೆ ಮಾಡಿದೆ. ಸ್ತ್ರೀಯರಿಗೆ ಆರ್ಥಿಕ ನೆರವು, ವಿದ್ಯಾಭ್ಯಾಸಕ್ಕೆ ಪ್ರೋತ್ಸಾಹ ಸೇರಿದಂತೆ 20 ಅಂಶಗಳ ಯೋಜನೆಗೆ ಜಾರಿಗೆ ನಿರ್ಧರಿಸಿರುವ ನಿತೀಶ್ ಕುಮಾರ್ ಸರ್ಕಾರ ಅವಿವಾಹಿತ ಮತ್ತು ವಿವಾಹಿತ ಸ್ತ್ರೀಯರಿಗೆ ಭರ್ಜರಿ ಸಿಹಿಸುದ್ದಿ ನೀಡಿದೆ. ಬಿಹಾರದಲ್ಲಿ ಫೆ. …

Read More »

ಈ ಸರ್ಕಾರ ಡಕೋಟಾ ಬಸ್ʼನಂತೆ ಕೆಟ್ಟಿದೆ, ಗೇರ್ ಹಾಕೋಗಲ್ಲ, ಒಂದ್ವೇಳೆ ಗೇರ್ ಹಾಕಿದ್ರೂ ಕಿತ್ತಿ ಬರುತ್ತೆ: ಸಿದ್ದರಾಮಯ್ಯ

ಬೆಂಗಳೂರು: ಈ ಸರ್ಕಾರ ಡಕೋಟಾ ಎಕ್ಸ್‌ಪ್ರೆಸ್‌ ಸಿನಿಮಾದ ಬಸ್ʼನಂತಿದೆ. ರಸ್ತೆಯಲ್ಲೇ ಡಕೋಟಾ ಬಸ್ ರೀತಿ ಕೆಟ್ಟು ಹೋಗಿದೆ. ಗೇರ್ ಹಾಕೋಕೆ ಆಗೋದಿಲ್ಲ, ಹಾಕಿದ್ರು ಗೇರ್ ಕಿತ್ತಿಕೊಂಡು ಬರುತ್ತೆ ಎಂದು ವಿಪಕ್ಷ ನಾಯಕ ಸಿದ್ಧರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ರಾಜ್ಯಪಾಲರ ಭಾಷಣದ ವಂದನಾ ನಿರ್ಣಯದ ಮೇಲೆ ಭಾಷಣ ಮಾಡಿದ ಮಾಜಿ ಸಿಎಂ ಸಿದ್ಧರಾಮಯ್ಯ, ‘ ರಾಜ್ಯ ಸರ್ಕಾರ ರಾಜ್ಯಪಾಲರ ಭಾಷಣದ ಸುಳ್ಳುಗಳನ್ನ ಹೇಳಿಸಿದೆ. ಭಾಷಣದಲ್ಲಿ ಒಂಚೂರು ಸತ್ಯವಿಲ್ಲ. ಇದಕ್ಕೆ ಮುಂದಾಲೋಚನೆ‌ ಇಲ್ಲ, ದೂರದೃಷ್ಟಿಯೂ …

Read More »

ಏರೋ‌ ಇಂಡಿಯಾ 2021 ಚಾಲನೆಗೆ ಕ್ಷಣಗಣನೆ : ಟ್ರಾಫಿಕ್ ದಟ್ಟಣೆ

ಬೆಂಗಳೂರು    ಐತಿಹಾಸಿಕ‌ 13ನೇ ಆವೃತ್ತಿಯ ಏರೋ ಇಂಡಿಯಾ 2021ಗೆ ಕ್ಷಣಗಣನೆ ಆರಂಭವಾಗಿದ್ದು, ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್‌ ಏರೋ‌ ಇಂಡಿಯಾ 2021 ಉದ್ಘಾಟಿಸಲಿದ್ದಾರೆ.. ಉದ್ಘಾಟನಾ ಸಮಾರಂಭದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಸೇರಿದಂತೆ‌ ಹಲವಾರು ಗಣ್ಯರು ಭಾಗಿಯಾಗಲಿದ್ದಾರೆ. ಫೆ.3ರಿಂದ 5ರ ತನಕ ಏರ್​​ ಶೋ ನಡೆಯಲಿದೆ. ಏರ್ ಶೋ ವೀಕ್ಷಿಸಲು ಸಾರ್ವಜನಿಕರಿಗೂ ಅವಕಾಶವಿದ್ದು, ಬೆಳ್ಳಂಬೆಳಗ್ಗೆಯೇ ಹೆಬ್ಬಾಳದ ಎಸ್ಟೀಮ್ ಮಾಲ್‌ ಬಳಿಯಿಂದಲೇ ಟ್ರಾಫಿಕ್ ಜಾಮ್‌ ಶುರುವಾಗಿದೆ. ಸಾರ್ವಜನಿಕರು ಏರ್ ಶೋ ವೀಕ್ಷಿಸಲು …

Read More »

ತಮಿಳು ನಟ ಸಿಂಬು ಹೊಸ ಚಿತ್ರಕ್ಕೆ ಸಾಥ್ ನೀಡಿದ ಕಿಚ್ಚ ಸುದೀಪ್

ತಮಿಳು ನಟ ಸಿಂಬು ಅಭಿನಯಿಸಿರುವ ಹೊಸ ಚಿತ್ರಕ್ಕೆ ಪ್ಯಾನ್ ಇಂಡಿಯಾ ಸ್ಟಾರ್ಸ್ ಸಾಥ್ ನೀಡುತ್ತಿದ್ದಾರೆ. ಸಿಂಬು ನಟಿಸಿರುವ ‘ಮಾನಡು’ ಸಿನಿಮಾ ಬಹುಭಾಷೆಯಲ್ಲಿ ತೆರೆಕಾಣಲು ಸಜ್ಜಾಗಿದ್ದು, ಸ್ಟಾರ್ ನಟರು ಹಾಗೂ ಸ್ಟಾರ್ ಮೇಕರ್ಸ್ ಕೈ ಜೋಡಿಸಿದ್ದಾರೆ. ಫೆಬ್ರವರಿ 3 ರಂದು ಸಿಂಬು ಅವರ ಮಾನಡು ಚಿತ್ರದ ಟೀಸರ್ ರಿಲೀಸ್ ಆಗುತ್ತಿದೆ. ಐದು ಭಾಷೆಯಲ್ಲಿ ಮಾನಡು ಟೀಸರ್ ಬಿಡುಗಡೆಯಾಗುತ್ತಿದ್ದು, ಕನ್ನಡದಲ್ಲಿ ಕಿಚ್ಚ ಸುದೀಪ್ ರಿಲೀಸ್ ಮಾಡಲಿದ್ದಾರೆ. ಮಧ್ಯಾಹ್ನ 2.34 ಗಂಟೆಗೆ ಮಾನಡು ಕನ್ನಡ …

Read More »

ಸ್ಪ್ಯಾನಿಷ್ ಸಿನಿಮಾ ರೀಮೇಕ್ ನಲ್ಲಿ ಅಮೀರ್ ಖಾನ್?

ತಾವು ನಟಿಸುವ ಸಿನಿಮಾಗಳ ಕತೆಗಳನ್ನು ಬಹಳ ಜಾಗರೂಕತೆಯಿಂದ ಆಯ್ಕೆ ಮಾಡಿಕೊಳ್ಳುತ್ತಾರೆ ನಟ ಅಮೀರ್ ಖಾನ್. ಅವರು, ರೀಮೇಕ್ ಸಿನಿಮಾಗಳಲ್ಲಿ ನಟಿಸುವುದು ಬಹಳ ಅಪರೂಪ. ರೀಮೇಕ್ ಸಿನಿಮಾ ಗಜಿನಿಯಲ್ಲಿ ನಟಿಸಿದ್ದ ಅಮೀರ್ ಖಾನ್, ಪ್ರಸ್ತುತ, ಹಾಲಿವುಡ್ ಸಿನಿಮಾ ‘ಫಾರೆಸ್ಟ್ ಗಂಫ್’ ಸಿನಿಮಾದ ರೀಮೇಕ್ ನಲ್ಲಿ ನಟಿಸುತ್ತಿದ್ದಾರೆ. ಈ ನಡುವೆ ಸ್ಪ್ಯಾನಿಷ್ ಸಿನಿಮಾದ ರೀಮೇಕ್ ನಲ್ಲಿ ನಟಿಸುವಂತೆ ಅಮೀರ್ ಖಾನ್ ಅವರನ್ನು ಸಂಪರ್ಕ ಮಾಡಲಾಗಿದೆ. ಅಮೀರ್ ಖಾನ್‌ಗೂ ಕತೆ ಇಷ್ಟವಾಗಿದೆ ಎನ್ನಲಾಗುತ್ತಿದೆ. ಸ್ಪ್ಯಾನಿಷ್ …

Read More »

ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ ಹಾಲಿವುಡ್ ತಾರೆ

ಕೇಂದ್ರದ ಕೃಷಿ ಕಾಯ್ದೆ ವಿರುದ್ಧ ರೈತರು ಮಾಡುತ್ತಿರುವ ಪ್ರತಿಭಟನೆಗೆ ಕೆಲವು ಬಾಲಿವುಡ್ ತಾರೆಗಳು ಬೆಂಬಲ ಸೂಚಿಸಿದ್ದಾರೆ. ಕೆಲವರು ವಿರೋಧವನ್ನೂ ವ್ಯಕ್ತಪಡಿಸಿದ್ದಾರೆ. ಇದೀಗ ಖ್ಯಾತ ಪಾಪ್ ಗಾಯಕಿ, ಹಾಲಿವುಡ್ ಸಿನಿಮಾ ನಟಿ ರಿಹಾನಾ ದೆಹಲಿ ರೈತ ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. ದೆಹಲಿ ರೈತ ಪ್ರತಿಭಟನೆ ಬಗ್ಗೆ ಮಂಗಳವಾರ ಟ್ವೀಟ್ ಮಾಡಿರುವ ರಿಹಾನಾ, ‘ಇದರ ಬಗ್ಗೆ ನಾವೇಕೆ ಮಾತನಾಡುತ್ತಿಲ್ಲ’ ಎಂದು ಪ್ರಶ್ನೆ ಮಾಡಿದ್ದಾರೆ. ‘ಪ್ರತಿಭನಾಕಾರ ರೈತರು ಪೊಲೀಸರ ನಡುವೆ ತಿಕ್ಕಾಟದ ನಂತರ ಸರ್ಕಾರವು …

Read More »