Breaking News

Uncategorized

ಶಿವರಾತ್ರಿಯ ವಿಶೇಷ ಪೂಜೆ ವೇಳೆ ನಾಗರಾಜ ಪ್ರತ್ಯಕ್ಷ; ಭಕ್ತಿ, ಭಾವದಿಂದ ಕೈಮುಗಿದ ಭಕ್ತರು

ಕೊಪ್ಪಳ: ಶಿವರಾತ್ರಿಯ ದಿನವಾದ ಇಂದು ಕೊಪ್ಪಳದ ಹೊರವಲಯದಲ್ಲಿರುವ ಮಳೆ ಮಲ್ಲೇಶ್ವರ ದೇವಾಲಯದಲ್ಲಿ ಅಚ್ಚರಿಯೊಂದು ನಡೆದಿದೆ. ಶಿವರಾತ್ರಿಯ ಹಿನ್ನೆಲೆಯಲ್ಲಿ ಇಂದು ದೇವಾಲಯಕ್ಕೆ ಸಾಕಷ್ಟು ಭಕ್ತರು ಆಗಮಿಸಿದ್ದರು. ಶಿವನಿಗೆ ವಿಶೇಷ ಪೂಜಾ ಕೈಂಕರ್ಯಗಳನ್ನು ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ದೇವಾಲಯದ ಹೊರಗಿನಿಂದ ಬಂದ ನಾಗರ ಹಾವೊಂದು ಗರ್ಭಗುಡಿಯ ಒಳಗಡೆ ಪ್ರವೇಶಿಸಿದೆ. ಲಿಂಗದ ಕಡೆಗೆ ತೆರಳಿದ ಹಾವು ಅಲ್ಲಿಂದ ಕಾಣೆಯಾಗಿದೆ. ಹಾವನ್ನು ಕಂಡ ಭಕ್ತರು ಧನ್ಯತಾಭಾವದಿಂದ ಕೈಮುಗಿದಿದ್ದಾರೆ.

Read More »

ಕೆ,ಪಿ,ಸಿ,ಸಿ ಕಾರ್ಯಧ್ಯಕ್ಷರಾದ ಸತೀಶ ಜಾರಕಿಹೊಳಿಯವರು ಅವರ ಮಕ್ಕಳೊಂದಿಗೆ ಹಳೆಯ ನೆನಪುಗಳನ್ನು ಹಂಚಿಕೊಂಡರು.

ಗೋಕಾಕ : ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸತೀಶ ಜಾರಕಿಹೊಳಿ ಅವರು ಗೋಕಾಕಿನ ಕ್ರಿಂ ಕಾರ್ನರ್ ರಿಂದ ಆನಂದ ಟಾಕೀಸ್ ವರೆಗೆ ಸಾಯಂಕಾಲ ಸಮಯದಲ್ಲಿ ಸತೀಶ ಜಾರಕಿಹೊಳಿ ಅವರು ತಮ್ಮ ಸ್ನೇಹಿತರಿಗೆ ಭೇಟಿ ನೀಡಿ ತಮ್ಮ ಮಕ್ಕಳಾದ ಪುತ್ರ ರಾಹುಲ್ ಜಾರಕಿಹೊಳಿ ಮತ್ತು ಪುತ್ರಿ ಪ್ರಿಯಾಂಕಾ ಜಾರಕಿಹೊಳಿ ಅವರನ್ನು ತಮ್ಮ ಗೋಕಾಕಿನ ಸ್ನೇಹಿತರಿಗೆ ಪರಿಚಯ ಮಾಡಿಸುವ ಮೂಲಕ ದಿಡೀರ್ ಭೇಟಿ ನೀಡಿದರು.  

Read More »

ಕೊರೊನಾ ಪ್ರಕರಣ ಏರಿಕೆ; ರಾಜ್ಯದಲ್ಲಿ ರಾತ್ರಿ ಪಾರ್ಟಿ ಮೇಲೆ ನಿಷೇಧ

ಬೆಂಗಳೂರು, ಮಾರ್ಚ್ 11: ರಾಜ್ಯದಲ್ಲಿ ಕೊರೊನಾ ಸೋಂಕಿನ ಪ್ರಕರಣಗಳು ನಿರಂತರವಾಗಿ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ರಾತ್ರಿ ಪಾರ್ಟಿಗಳಿಗೆ ರಾಜ್ಯ ಸರ್ಕಾರ ನಿಷೇಧ ಹೇರಿದೆ. ಗುರುವಾರ(ಮಾರ್ಚ್ 11) ದಿಂದ ರಾಜ್ಯಾದ್ಯಂತ, ಪ್ರಮುಖವಾಗಿ ಬೆಂಗಳೂರು ಹಾಗೂ ಬೆಂಗಳೂರಿನ ಸುತ್ತಮುತ್ತ ರಾತ್ರಿ ಹೊತ್ತು ಪಾರ್ಟಿಗಳನ್ನು ನಡೆಸುವುದರ ಮೇಲೆ ನಿಷೇಧ ಹೇರಿದ್ದು, ಸ್ಟಾರ್ ಹೋಟೆಲ್‌, ರೆಸ್ಟೊರೆಂಟ್‌ಗಳಿಗೆ ಸೂಚಿಸಿರುವುದಾಗಿ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಈ ಪಾರ್ಟಿಗಳು ಕೊರೊನಾ ಸೋಂಕಿನ ಸೂಪರ್‌ ಸ್ಪ್ರೆಡರ್‌ಗಳಾಗುವ ಎಲ್ಲಾ …

Read More »

ಗೋಕಾಕ ಫಾಲ್ಸ್‌ನಲ್ಲಿ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಆಚರಣೆ..

ಗೋಕಾಕ ಫಾಲ್ಸ್‌ನಲ್ಲಿ ಗೋಕಾಕ ಖ್ಯಾತ ಶಿಲ್ಪಿ ಜಕಣಾಚಾರಿ ಅವರಿಂದ ನಿರ್ಮಿತವಾಗಿರುವ ಐತಿಹಾಸಿಕ ತಡಸಲ ಮಹಾಲಿಂಗೇಶ್ವರ “ತಟಾಕೇಶ್ವರ” ದೇವಸ್ಥಾನದಲ್ಲಿ ಮಹಾಶಿವರಾತ್ರಿವನ್ನು ಪ್ರತಿ ವರ್ಷದಂತೆ ಇ ವರ್ಷವು ಅತಿ ವಿಜೃಂಭಣೆಯಿಂದ ಆಚರಣೆ ಮಾಡಿದಲಾಗಿತ್ತು. 1153 ನೇ ಕಾಲದಲ್ಲಿ ನಿರ್ಮಿತವಾದ ಈ ದೇವಸ್ಥಾನ ಪ್ರತಿ ಶಿಲ್ಪಗಳೂ ಐತಿಹಾಸಿಕ ಮಹತ್ವ ಸಾರುತ್ತವೆ. ಪಕ್ಕದಲ್ಲಿ ಫಾಲ್ಸ್ ಹಸಿರಿನ ನಿಸರ್ಗ ತಾಣ ಇದ್ದು ಇದರ ಮುಂದೆ ಹರಿದು ಬರುವ ಘಟಪ್ರಭೆ 134 ಕಲ್ಲಿನ ಪದರಗಳ ಮಧ್ಯೆ ಸಾಗಿ ಜಲಪಾತವಾಗಿ …

Read More »

ಪೈರಸಿ ತಡೆಯುವುದಕ್ಕೆ ಮೊದಲು ನಾವು ಬದಲಾಗಬೇಕು: ಪುನೀತ್ ರಾಜ್​ಕುಮಾರ್

ಪೈರಸಿ ವಿಷಯ ಕಳೆದ ಕೆಲವು ದಿನಗಳಿಂದ ಬಹಳ ಸುದ್ದಿ ಮಾಡುತ್ತಿದೆ. ಪ್ರಮುಖವಾಗಿ ತಮ್ಮ’ಹೀರೋ’ ಚಿತ್ರ 3ನೇ ದಿನಕ್ಕೆ ಪೈರಸಿ ಆಗೋಯ್ತು ಎಂದು ನಟ -ನಿರ್ದೇಶಕ ರಿಷಬ್​ ಶೆಟ್ಟಿ ಬೇಸರ ವ್ಯಕ್ತಪಡಿಸಿದ್ದರು. ಪೈರಸಿ ಪ್ರೋತ್ಸಾಹಿಸುವ ಕೆಲವು ಆಯಪ್ ಮತ್ತು ವೆಬ್‍ಸೈಟ್‍ಗಳನ್ನು ಯಾಕೆ ಬ್ಯಾನ್ ಮಾಡಲಾಗುತ್ತಿಲ್ಲ ಎಂದು ಅವರು ಪ್ರಶ್ನಿಸಿದ್ದರು. ಅದರ ಹಿಂದೆಯೇ ‘ರಾಬರ್ಟ್’ ಚಿತ್ರದ ನಿರ್ಮಾಪಕ ಉಮಾಪತಿ ಶ್ರೀನಿವಾಸ್ ಗೌಡ, ಒಂದು ಪಕ್ಷ ತಮ್ಮ ಚಿತ್ರವನ್ನೇನಾದರೂ ಪೈರಸಿ ಮಾಡಿದರೆ ಅವರನ್ನು ಸುಮ್ಮನೆ …

Read More »

ಪ್ರವಾಸಿಗರಿಗಾಗಿ ತಲೆ ಎತ್ತಲಿವೆ ತ್ರಿಸ್ಟಾರ್ ಹೋಟೆಲ್‌ಗಳು: ಸಿ.ಪಿ.ಯೋಗೇಶ್ವರ್

ಬೆಂಗಳೂರು: ರಾಜ್ಯದ ಪ್ರಮುಖ ನಾಲ್ಕು ಪ್ರವಾಸಿ ತಾಣಗಳಲ್ಲಿ ಪ್ರವಾಸೋದ್ಯಮ ಇಲಾಖೆಯು ನಾಲ್ಕು ತ್ರಿಸ್ಟಾರ್‌ ಹೋಟೆಲ್‌ಗಳನ್ನು ನಿರ್ಮಾಣ ಮಾಡಲಿದೆ. ಈ ಕುರಿತು ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು ರೈಟ್ಸ್‌ ಸಂಸ್ಥೆಯೊಂದಿಗೆ ಬುಧವಾರ ಒಪ್ಪಂದಕ್ಕೆ ಸಹಿ ಹಾಕಿದೆ. ‘ಬೇಲೂರು, ಬಾದಾಮಿ, ವಿಜಯಪುರ ಹಾಗೂ ಹಂಪಿಯಲ್ಲಿ ಈ ಹೋಟೆಲ್‌ಗಳು ತಲೆ ಎತ್ತಲಿವೆ. ಮುಂದಿನ ತಿಂಗಳು ಭೂಮಿ ಪೂಜೆ ನೆರವೇರಿಸಲಾಗುವುದು. 18 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಿ, ಪ್ರವಾಸಿಗರ ಸೇವೆಗೆ ಸಮರ್ಪಿಸಲಾಗುವುದು’ ಎಂದು ಪ್ರವಾಸೋದ್ಯಮ ಸಚಿವ ಸಿ.ಪಿ. …

Read More »

ಗ್ರಾಹಕಿ ಮುಖಕ್ಕೆ ಪಂಚ್; ಜೊಮ್ಯಾಟೊ ಬಾಯ್ ಬಂಧನ

ಬೆಂಗಳೂರು: ‘ಜೊಮ್ಯಾಟೊ’ ಮೊಬೈಲ್ ಆಯಪ್ ಮೂಲಕ ಕಾಯ್ದಿರಿಸಿದ್ದ ಆಹಾರದ ಪೂರೈಕೆ ತಡವಾಗಿದ್ದಕ್ಕಾಗಿ ಗ್ರಾಹಕಿ ಹಾಗೂ ಡೆಲಿವರಿ ಬಾಯ್‌ ನಡುವೆ ಜಗಳವಾಗಿದ್ದು, ಸಿಟ್ಟಾದ ಡೆಲಿವರಿ ಬಾಯ್ ಗ್ರಾಹಕಿಯ ಮುಖಕ್ಕೆ ಪಂಚ್ ಮಾಡಿದ್ದಾನೆ. ಗ್ರಾಹಕಿ ಮುಖಕ್ಕೆ ತೀವ್ರ ಗಾಯವಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬ್ಯಾಂಡೇಜ್‌ ಹಾಕಿಸಿಕೊಂಡಿದ್ದಾರೆ. ‘ಮಂಗಳವಾರ ರಾತ್ರಿ ಆಹಾರ ನೀಡಲು ಬಂದಿದ್ದ ಡೆಲಿವರಿ ಬಾಯ್ ಕಾಮರಾಜ್ ಎಂಬಾತ ಅವಾಚ್ಯ ಶಬ್ದಗಳಿಂದ ನಿಂದಿಸಿ ನನ್ನ ಮೇಲೆ ಹಲ್ಲೆ ಮಾಡಿದ್ದಾನೆ’ ಎಂದು ಆರೋಪಿಸಿ ಸ್ಥಳೀಯ …

Read More »

ಹುಬ್ಬಳ್ಳಿ: ಕಿಮ್ಸ್‌ ಸಿಬ್ಬಂದಿಗೆ ಸಿಗದ ಕೋವಿಡ್ ಭತ್ಯೆ

ಹುಬ್ಬಳ್ಳಿ: ಜೀವದ ಹಂಗು ತೊರೆದು ಕೋವಿಡ್-19‌ ರೋಗಿಗಳ ಚಿಕಿತ್ಸೆ ಮತ್ತು ಆರೈಕೆ ಮಾಡಿದ ಕಿಮ್ಸ್‌ ಆಸ್ಪತ್ರೆಯ ವೈದ್ಯಕೀಯ, ಅರೆ ವೈದ್ಯಕೀಯ, ಗುತ್ತಿಗೆ ಹಾಗೂ ಹೊರಗುತ್ತಿಗೆ ಸಿಬ್ಬಂದಿಗೆ ಸರ್ಕಾರ ಘೋಷಿಸಿದ್ದ ₹5 ಸಾವಿರ ಕೋವಿಡ್‌ ಭತ್ಯೆ ಇನ್ನೂ ಸಿಕ್ಕಿಲ್ಲ. ಕೆಇಎಯಿಂದ (ವೈದ್ಯಕೀಯ ಇಲಾಖೆ) ನೇಮಕವಾದ 149 ನರ್ಸಿಂಗ್ ಅಧಿಕಾರಿಗಳು, ಕಿಮ್ಸ್‌ನಿಂದ ನೇರವಾಗಿ ಗುತ್ತಿಗೆ ಆಧಾರದಲ್ಲಿ ನೇಮಕವಾದ 79 ಸಿಬ್ಬಂದಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ 39, ಕ್ಯಾಟ್‌ಲಾಬ್‌ನ 20 ಹಾಗೂ …

Read More »

ಸಾರಿಗೆ ನೌಕರರಿಗೆ ಶಿವರಾತ್ರಿ ಸಂಭ್ರಮ! ಅಂತರ್‌ ನಿಗಮಗಳ ವರ್ಗಾವಣೆಗೆ ಅಸ್ತು

ಬೆಂಗಳೂರು: ಶಿವರಾತ್ರಿ ಸಂದರ್ಭದಲ್ಲೇ ರಾಜ್ಯ ಸಾರಿಗೆ ನೌಕರರಿಗೆ ಸರಕಾರ ಸಿಹಿ ಸುದ್ದಿ ನೀಡಿದೆ. ಅಂತರ್‌ ನಿಗಮಗಳ ವರ್ಗಾವಣೆಗೆ ಸರಕಾರ ಬುಧವಾರ ಆದೇಶಿಸಿದ್ದು, ಪ್ರತ್ಯೇಕ ಮಾರ್ಗಸೂಚಿಗಳನ್ನು ಹೊರಡಿಸಿದೆ. ಇದರಿಂದ ಸುಮಾರು 20-25 ಸಾವಿರ ನೌಕರರಿಗೆ ಅನುಕೂಲ ಆಗಲಿದೆ ಎಂದು ಅಂದಾಜಿಸಲಾಗಿದೆ. ಮಾತೃಸಂಸ್ಥೆಯಲ್ಲಿ ಕನಿಷ್ಠ 10 ವರ್ಷ ಸೇವೆ ಸಲ್ಲಿಸಿದ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ವೃಂದದ ಖಾಯಂ ನೌಕರರಿಗೆ ನಿಬಂಧನೆಗಳಿಗೆ ಒಳಪಟ್ಟ ಅಂತರ್‌ ನಿಗಮಗಳ ವರ್ಗಾವಣೆ ಭಾಗ್ಯ ಕಲ್ಪಿಸಲಾಗಿದೆ. ಇನ್ನು ಮುಂದೆ …

Read More »

ಮಹಾಶಿವರಾತ್ರಿ ವಿಶೇಷ………

ಮಹಾಶಿವರಾತ್ರಿ ಶಿವ ತಣ್ತೀವನ್ನು ಮನದಲ್ಲಿ ಜಾಗ್ರತಗೊಳಿಸಿ ಶಿವಸ್ವರೂಪದ ಅನುಸಂಧಾನ ಮಾಡುವ ದಿನ ವಿಶೇಷವಾಗಿದೆ. ಆ ದಿನ- ಶ್ರೋತ್ರೇಣ ಶ್ರವಣಂ ತಸ್ಯ ವಚಸಾ ಕೀರ್ತನಂ ತಥಾ| ಮನಸಾ ಮನನಂ ತಸ್ಯ ಮಹಾಸಾಧನಮುಚ್ಯತೇ|| -ಶಿವಪುರಾಣದ ಈ ಹಾಡಿನ ಅರ್ಥದಂತೆ ಮಹೇಶ್ವರನ ಶ್ರವಣ, ಕೀರ್ತನ, ಮನನವನ್ನು ಮಾಡಬೇಕು; ಈ ಶ್ರುತಿ ವಾಕ್ಯವು ನಮಗೆಲ್ಲರಿಗೂ ಪ್ರಮಾಣಭೂತವಾಗಿದೆ. ಇದೇ ಸಾಧನೆಯಿಂದ ಸಮಸ್ತ ಮನೋರಥಗಳ ಸಿದ್ಧಿಯಲ್ಲಿ ತೊಡಗಿರುವ ನೀವೆಲ್ಲರೂ ಪರಮಸಾಧ್ಯವನ್ನು ಪಡೆದುಕೊಳ್ಳುವಿರಿ. ಮಾಘ ಕೃಷ್ಣ ಚತುರ್ದಶಿಯನ್ನು ಮಹಾಶಿವರಾತ್ರಿ ಎಂದು …

Read More »