Breaking News

Uncategorized

ಜುಲೈ 7, 8ರಂದು ಸಿಇಟಿ ಪರೀಕ್ಷೆ, ಇಲ್ಲಿದೆ ವೇಳಾಪಟ್ಟಿ

ಬೆಂಗಳೂರು, ಫೆ. 20: ಪ್ರಸಕ್ತ 2021ನೇ ಸಾಲಿನ ವೃತ್ತಿಪರ ಕೋರ್ಸುಗಳ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಜುಲೈ 7 ಮತ್ತು 8ರಂದು ನಡೆಯಲಿದ್ದು, ಪರೀಕ್ಷಾ ವೇಳಾಪಟ್ಟಿಯನ್ನು ಉನ್ನತ ಶಿಕ್ಷಣ ಇಲಾಖೆ ಪ್ರಕಟಿಸಿದೆ. ವೇಳಾಪಟ್ಟಿ ಹೀಗಿದೆ: * 07.07. 2021 ಬುಧವಾರ ಬೆಳಗ್ಗೆ 10.30ರಿಂದ 11.50: ಜೀವಶಾಸ್ತ್ರ * 07.07. 2021 ಬುಧವಾರ ಮಧ್ಯಾಹ್ನ 2.30ರಿಂದ 3.50: ಗಣಿತ * 08.07. 2021 ಗುರುವಾರ ಬೆಳಗ್ಗೆ 10.30ರಿಂದ 11.50: ಭೌತಶಾಸ್ತ್ರ * …

Read More »

ಡ್ರಗ್ಸ್‌ ಜೊತೆ ಸಿಕ್ಕಿಬಿದ್ದ ಪ್ರಕರಣ; ಸಿಐಡಿ ತನಿಖೆಗೆ ಪಮೇಲಾ ಗೋಸ್ವಾಮಿ ಒತ್ತಾಯ

ಕೋಲ್ಕತ್ತಾ, ಫೆಬ್ರವರಿ 20: ಪಶ್ಚಿಮ ಬಂಗಾಳದ ಬಿಜೆಪಿ ಯುವ ಘಟಕದ ನಾಯಕಿ ಪಮೇಲಾ ಗೋಸ್ವಾಮಿ, ಮಾದಕವಸ್ತುವಿನ ಸಮೇತ ಶುಕ್ರವಾರ ಸಿಕ್ಕಿಬಿದ್ದಿದ್ದು, ಕಾರ್‌ನಲ್ಲಿದ್ದ ಸುಮಾರು 10 ಲಕ್ಷ ರೂ ಮೌಲ್ಯದ 90 ಗ್ರಾಂ ಕೊಕೇನ್ ಅನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಪಮೇಲಾ ಗೋಸ್ವಾಮಿ ಅವರನ್ನು ಶನಿವಾರ ಕೋಲ್ಕತ್ತಾದ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ವಿಚಾರಣೆ ನಡೆಸಲಾಗಿದೆ. ಈ ಸಂದರ್ಭ ಮಾತನಾಡಿರುವ ಪಮೇಲಾ ಗೋಸ್ವಾಮಿ, “ಇದು ನನ್ನ ವಿರುದ್ಧದ ಸಂಚು. ಇದರಲ್ಲಿ ಪಕ್ಷದ …

Read More »

‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿ

ಬೆಂಗಳೂರು: ಮೊನ್ನೆಯಷ್ಟೆ ಭರ್ಜರಿ ಓಪನಿಂಗ್ ಕಂಡು ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಧ್ರುವ ಸರ್ಜಾ ಅಭಿನಯದ ‘ಪೊಗರು ಚಿತ್ರ’ ವಿವಾದವೊಂದಕ್ಕೆ ಗುರಿಯಾಗಿದೆ. ಈ ಚಿತ್ರದಲ್ಲಿ ಅರ್ಚಕರು ಹಾಗೂ ಪುರೋಹಿತರನ್ನು ಅವಹೇಳನಕಾರಿಯಾಗಿ ಚಿತ್ರೀಕರಿಸಿ ಪ್ರದರ್ಶಿಸಲಾಗುತ್ತಿದೆ ಎಂಬ ಆರೋಪ ಕೇಳಿಬಂದಿದೆ. ಇದು ಖಂಡನೀಯವಾದದ್ದು ಎಂದು ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಎಚ್.ಎಸ್. ಸಚ್ಚಿದಾನಂದ ಮೂರ್ತಿ ಹೇಳಿದ್ದಾರೆ. ಯಾವುದೇ ಜಾತಿ ಧರ್ಮವನ್ನು ಅವಹೇಳನಕಾರಿಯಾಗಿ ತೋರಿಸುವುದು ಸರಿಯಾದ ಕ್ರಮವಲ್ಲ ಅದರಿಂದ ಸಾಮಾಜಿಕ ಸ್ವಾಸ್ಥ್ಯ ಹಾಳು …

Read More »

ಆನೆಯ ಬೆನ್ನ ಮೇಲೆ ಬೆತ್ತಲೆ ಮಲಗಿ ಫೋಟೋಶೂಟ್

ಮಾಡೆಲ್​ ಒಬ್ಬರು ಆನೆಯ ಬೆನ್ನ ಮೇಲೆ ಬೆತ್ತಲೆ ಮಲಗಿ ಫೋಟೋಶೂಟ್​ ಮಾಡಿಸಿಕೊಳ್ಳುವ ಮೂಲಕ ಟೀಕೆಗೆ ಗುರಿಯಾಗಿದ್ದಾರೆ. ಅನೇಕರು ಮಾಡೆಲ್​ ಮಾಡಿದ ಅವಾಂತರ ಕಂಡು ಗರಂ ಆಗಿದ್ದಾರೆ. ಮಾತ್ರವಲ್ಲದೆ, ಸಾಮಾಜಿಕ ಜಾಲತಾಣದಲ್ಲಿ ಬಗೆ ಬಗೆಯ ಕಾಮೆಂಟ್​ ಬರೆಯುವ ಮೂಲಕ ಮಾಡೆಲ್​ಗೆ ಬೈಗುಳಗಳ ಸುರಿಮಳೆ ಸುರಿಸಿದ್ದಾರೆ. ರಷ್ಯಾ ಮೂಲದ ಮಾಡೆಲ್​ ಅಲೆಸ್ಯ ಕಾಫೆಲ್ನಿಕೋವಾ ಬೆತ್ತಲೆಯಾಗಿ ಫೋಟೋ ಕ್ಲಿಕ್ಕಿಸಲು ಆನೆ ಬೆನ್ನೇರಿದ್ದಾರೆ. ಸುಮಾತ್ರನ್​ ಎಂಬ ಅಳಿವಿನಂಚಿನಲ್ಲಿರುವ ಆನೆಯನ್ನು ಫೋಟೋಶೂಟ್​ಗಾಗಿ ಬಳಸಿಕೊಂಡಿದ್ದಾರೆ. ಮಾಡೆಲ್​ ಅಲೆಸ್ಯ ಇತ್ತೀಚೆಗೆ …

Read More »

ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆ

ಬೆಂಗಳೂರು: ಸತತ 13ನೇ ದಿನವೂ ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗಿದ್ದು, ದಿನದಿಂದ ದಿನಕ್ಕೆ ತೈಲ ಬೆಲೆ ಗಗನಕ್ಕೇರುತ್ತಿದೆ. ಕಳೆದ 52 ದಿನಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 24 ಬಾರಿ ಹೆಚ್ಚಾಗಿದೆ. ದೇಶದಲ್ಲಿ ಇಂದೂ ಕೂಡ ಪೆಟ್ರೋಲ್-ಡೀಸೆಲ್ ದರ ಏರಿಕೆಯಾಗಿದ್ದು, ಬೆಂಗಳೂರಿನಲ್ಲಿ ಲೀಟರ್ ಪೆಟ್ರೋಲ್ 93.61 ರೂ., ಡೀಸೆಲ್ 85.84 ರೂ. ಇದೆ. ಮುಂಬೈ- ಪೆಟ್ರೋಲ್ 97 ರೂ., ಡೀಸೆಲ್ 88.06 ರೂ., ಜೈಪುರ – ಪೆಟ್ರೋಲ್ 97.10 ರೂ., …

Read More »

ಏಪ್ರಿಲ್ ನಿಂದ ಹೊಸ PF ತೆರಿಗೆ ನಿಯಮ ಜಾರಿ: ಇದು ನಿಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ, ಇಲ್ಲಿದೆ ಮಾಹಿತಿ

ನವದೆಹಲಿ: ಏಪ್ರಿಲ್ 1ರಿಂದ ವಾರ್ಷಿಕ ₹2.5 ಲಕ್ಷಕ್ಕಿಂತ ಹೆಚ್ಚು ಭವಿಷ್ಯ ನಿಧಿಗೆ ನೌಕರರ ಕೊಡುಗೆಗಳ ಮೇಲಿನ ಬಡ್ಡಿಗೆ ತೆರಿಗೆ ವಿಧಿಸುವುದಾಗಿ ಹಣಕಾಸು ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2021ರ ಬಜೆಟ್ ನಲ್ಲಿ ಘೋಷಿಸಿದ್ದರು. ₹2.5 ಲಕ್ಷದವರೆಗೂ ಠೇವಣಿ ಯ ಮಿತಿಯಲ್ಲಿ ಬಡ್ಡಿ ವಿನಾಯಿತಿ ಇದೆ ಎಂದು ಹಣಕಾಸು ಸಚಿವರು ಅವರು ಇದೇ ವೇಳೆ ಹೇಳಿದ್ದಾರೆ ಉದ್ಯೋಗಿಯ ಮೂಲ ವೇತನ ಮತ್ತು ಕಾರ್ಯಕ್ಷಮತೆಯ ವೇತನದಲ್ಲಿ ಕನಿಷ್ಠ 12% ರಷ್ಟನ್ನು ಭವಿಷ್ಯನಿಧಿಯಾಗಿ …

Read More »

ನಿರುದ್ಯೋಗಿ ಕಾರ್ಮಿಕರಿಗೆ ರಾಜ್ಯ ಸರ್ಕಾರದಿಂದ ‘ಮಹತ್ವದ ಮಾಹಿತಿ’: ನಗದು ಪರಿಹಾರ ಪಡೆಯಲು ತಪ್ಪದೇ ಹೀಗೆ ಮಾಡಿ

ಬೆಂಗಳೂರು: ಕೇಂದ್ರ ಸರ್ಕಾರವು ಕಾರ್ಮಿಕರ ವಿಮಾ ನಿಗಮದ ಮೂಲಕ ಅಟಲ್ ವಿಮಿತ್ ವ್ಯಕ್ತಿ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯ ಮೂಲ ಉದ್ದೇಶವು ನೊಂದಾಯಿತ ವಿಮಾ ಕಾರ್ಮಿಕರ ಹಲವಾರು ಕಾರಣಗಳಿಂದ ಕೆಲಸ ಕಳೆದುಕೊಂಡು ನಿರುದ್ಯೋಗಿಗಳಾಗಿರುವುದರಿಂದ ಅವರ ನಿರುದ್ಯೋಗ ಅವಧಿಗೆ ನಗದು ಪರಿಹಾರ ಒದಗಿಸುವ ಉದ್ದೇಶವಾಗಿರುತ್ತದೆ. ಈ ಯೋಜನೆಯು ಜೂನ್ -2021ರ ಅಂತ್ಯದವರೆಗೆ ಜಾರಿಯಲ್ಲಿರುತ್ತದೆ. ನಿಗಮದಲ್ಲಿ ನೋಂಣಿಯಾದ ಕನಿಷ್ಠ 2 ವರ್ಷಗಳ ಅವಧಿಯಲ್ಲಿ ವಂತಿಗೆಯನ್ನು ಪಾವತಿಸಿ ನಿರುದ್ಯೋಗಿಯಾದ ದಿನಾಂಕದ ಪೂರ್ವ …

Read More »

RSS ಕ್ಯಾನ್ಸರ್ ಇದ್ದ ಹಾಗೆ, ರಾಮ ಮಂದಿರ ನಿರ್ಮಾಣಕ್ಕೆ ನಯಾ ಪೈಸೆ ಕೊಡಬೇಡಿ

ಮಂಗಳೂರು, ಫೆ 19: ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ ಮತ್ತು ಆರ್ ಎಸ್ ಎಸ್ ಸಂಘಟನೆಯ ಬಗ್ಗೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್‌ಐ) ಮುಖಂಡರೊಬ್ಬರು ನೀಡಿದ ಹೇಳಿಕೆಗೆ ಹಿಂದೂ ಸಂಘಟನೆಗಳು ಆಕ್ರೋಶ ವ್ಯಕ್ತ ಪಡಿಸಿವೆ. “ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವುದು ರಾಮ ಮಂದಿರವಲ್ಲ, ಅದು ಆರ್ ಎಸ್ ಎಸ್ ಮಂದಿರ. ನಿಮ್ಮ ಮನೆ ಬಾಗಿಲಿಗೆ ಯಾರಾದರೂ ದೇಣಿಗೆಗೆ ಬಂದರೆ ನಯಾಪೈಸೆ ಕೊಡಬೇಡಿ. ಆ ಸಂಘಟನೆ ಸಮಾಜಕ್ಕೆ ಕ್ಯಾನ್ಸರ್ ಇದ್ದಂತೆ”ಎಂದು ಪಿಎಫ್‌ಐ ಜನರಲ್ …

Read More »

ರಾಮಮಂದಿರವಲ್ಲ ಅದು, RSS​ ಮಂದಿರ : ದೇಣಿಗೆ ನೀಡದಂತೆ PFI ಪ್ರಧಾನ ಕಾರ್ಯದರ್ಶಿ ಅನೀಸ್‌ ಆಹ್ಮದ್‌ ಕರೆ

ಮಂಗಳೂರು :ಪಿಎಫ್‌ಐ ಪ್ರಧಾನ ಕಾರ್ಯದರ್ಶಿ ಅನೀಸ್ ಅಹ್ಮದ್ ರಾಮಮಂದಿರದ ಬಗ್ಗೆ ವಿವಾದಾತ್ಮಕ ಭಾಷಣ ಮಾಡಿದ್ದು ಹಿಂದೂಗಳ ಆಕ್ರೋಶಕ್ಕೆ ಗುರಿಯಾಗಿದ್ದಾರೆ. ಪಿಎಫ್ ಐ ನ ಸಭೆಯಲ್ಲಿ ಮಾತಾನಾಡುತ್ತಾ’ಈ ಹಂತದಿಂದ, ನಾನು ನಿಮ್ಮೆಲ್ಲರಿಗೂ ಹೇಳುತ್ತಿದ್ದೇನೆ, ರಾಮ ಮಂದಿರಕ್ಕೆ ಹಣ ಸಂಗ್ರಹಿಸಲು ನಿಮ್ಮ ಮನೆಗಳಿಗೆ ಬರುತ್ತಿರುವ ಈ ಜನರೆಲ್ಲರೂ ಅವರಿಗೆ ಒಂದು ಪೈಸೆಯನ್ನೂ ನೀಡುವುದಿಲ್ಲ. ಎನ್‌ಆರ್‌ಸಿ (ನಾಗರಿಕರಿಗಾಗಿ ರಾಷ್ಟ್ರೀಯ ನೋಂದಣಿ) ಯನ್ನು ಬಹಿಷ್ಕರಿಸಿದ ರೀತಿಯಲ್ಲಿ ಅವರನ್ನು ಬಹಿಷ್ಕರಿಸಿ. ನಾನು ಇದನ್ನು ಎಲ್ಲಾ ಮುಸ್ಲಿಂ ಉದ್ಯಮಿ …

Read More »

2 ವರ್ಷದಲ್ಲಿ ಮತ್ತೆ ಅಧಿಕಾರಕ್ಕೆ ಬರ್ತೀವಿ, ಪ್ರತಿ ವ್ಯಕ್ತಿಗೆ 10 ಕೆಜಿ ಅಕ್ಕಿ ಕೊಡ್ತೀನಿ: ಸಿದ್ದರಾಮಯ್ಯ

ಬೆಂಗಳೂರು: 2 ವರ್ಷದಲ್ಲಿ ನಾವು ಮತ್ತೆ ಅಧಿಕಾರಕ್ಕೆ ಬರ್ತೀವಿ. ಬಡವರಿಗೆ 10 ಕೆ.ಜಿ ಅಕ್ಕಿ ಕೊಡ್ತೀನಿ ಎಂದು ಮಾಜಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಮತ್ತೆ ಅಧಿಕಾರಕ್ಕೆ ಬರುವ ವಿಶ್ವಾಸ ವ್ಯಕ್ತ ಪಡಿಸಿದ್ದು, ‘ನಾನು ಅಧಿಕಾರದಲ್ಲಿ ಇದ್ದಾಗ ಪ್ರತಿಯೊಬ್ಬರಿಗೆ ಫ್ರೀಯಾಗಿ 7 ಕೆಜಿ ಅಕ್ಕಿ ಕೊಡ್ತಿದ್ದೆ. ಈಗ 5 ಕೆಜಿ ಮಾಡಿದ್ದಾರೆ, 3 ಕೆಜಿ ಮಾಡ್ತಾರಂತೆ ಈಗ. ಬಡವರ ಹೊಟ್ಟೆ ಮೇಲೆ ಹೊಡೆಯುವ ಇವ್ರನ್ನ …

Read More »