Home / Uncategorized (page 578)

Uncategorized

ಪುಲ್ವಾಮಾ ರೀತಿಯ ಉಗ್ರ ದಾಳಿ ಸಂಚು ವಿಫಲಗೊಳಿಸಿದ ಸೇನೆ; 52 ಕೆಜಿ ಸ್ಫೋಟಕ ಪತ್ತೆ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಹೆದ್ದಾರಿ ಬಳಿ 52 ಕೆ.ಜಿ ಸ್ಫೋಟಕ ವಸ್ತುಗಳನ್ನು ಭಾರತೀಯ ಸೇನೆ ಪತ್ತೆ ಮಾಡಿದೆ. ಗುರುವಾರ ಬೆಳಗ್ಗೆ 8 ಗಂಟೆಗೆ ಶೋಧ ಕಾರ್ಯ ಆರಂಭಿಸಿದ್ದೆವು. ಹಣ್ಣಿನ ತೋಟವೊಂದರಲ್ಲಿ ಹೂತು ಹಾಕಿದ್ದ ಸಿಂಟೆಕ್ಸ್ ಟ್ಯಾಂಕ್ ಒಳಗಡೆ 52 ಕೆಜಿ ಸ್ಫೋಟಕ ವಸ್ತು ಪತ್ತೆಯಾಗಿದೆ. ಈ ಸ್ಫೋಟಕಗಳನ್ನು 416 ಪೊಟ್ಟಣಗಳಾಗಿ ವಿಂಗಡಿಸಲಾಗಿದ್ದು ಪ್ರತಿಯೊಂದು ಪೊಟ್ಟಣವೂ 125 ಗ್ರಾಂ ತೂಕ ಹೊಂದಿದೆ ಎಂದು ಸೇನಾಪಡೆ ಹೇಳಿಕೆ ನೀಡಿರುವುದಾಗಿ ಎನ್‌ಡಿಟಿವಿ ವರದಿ ಮಾಡಿದೆ. …

Read More »

ಸಂಪುಟ ಪುನಾರಚನೆಯತ್ತ ಚಿತ್ತ | ವರಿಷ್ಠರ ತೀರ್ಮಾನಕ್ಕೆ ಬದ್ಧ: ಬಿ.ಎಸ್. ಯಡಿಯೂರಪ್ಪ

ಬೆಂಗಳೂರು: ಸಚಿವ ಸಂಪುಟದಿಂದ ಕೆಲವರನ್ನು ಕೈ ಬಿಟ್ಟು ಎಂಟು ಮಂದಿಯನ್ನು ಸೇರಿಸಿಕೊಳ್ಳುವ ಮೂಲಕ ಸಂಪುಟ ಪುನಾರಚನೆಯ ಪ್ರಸ್ತಾವ ಮುಂದಿಟ್ಟುಕೊಂಡು ದೆಹಲಿಗೆ ಹೋಗಿರುವ ಮುಖ್ಯಮಂತ್ರಿ ಯಡಿಯೂರಪ್ಪ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಗೃಹ ಸಚಿವ ಅಮಿತ್ ಶಾ ಒಪ್ಪಿಗೆ ಪಡೆಯಲು ನಿರ್ಧರಿಸಿದ್ದಾರೆ. ಪುನಾರಚನೆಗೆ ಒಪ್ಪದೇ ಇದ್ದರೆ ಮೂವರನ್ನು ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳುವ ಆಲೋಚನೆ ಅವರದ್ದಾಗಿದೆ ಎಂದು ಮುಖ್ಯಮಂತ್ರಿ ಆಪ್ತ ಮೂಲಗಳು ತಿಳಿಸಿವೆ. ಎಲ್ಲವೂ ಯಡಿಯೂರಪ್ಪ ಅಂದುಕೊಂಡಂತೆ ನಡೆದರೆ ಇದೇ ಭಾನುವಾರ(ಸೆ.20) ಸಂಪುಟ …

Read More »

ನಾಳೆ ರಾಜ್ಯಾದ್ಯಂತ ಮೆಗಾ ಇ-ಲೋಕ ಅದಾಲತ್‌

ಬೆಂಗಳೂರು: ರಾಜ್ಯದ ನ್ಯಾಯಾಂಗದ ಇತಿಹಾಸದಲ್ಲಿ ಪ್ರಥಮ ಪ್ರಯೋಗವಾಗಿ ಸೆ. 19ರಂದು ರಾಜ್ಯಾದ್ಯಂತ “ಮೆಗಾ ಇ-ಲೋಕ ಅದಾಲತ್‌’ ನಡೆಯಲಿದೆ. ವ್ಯಾಜ್ಯ ಪೂರ್ವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ರಾಜ್ಯ ಕಾನೂನು ಸೇವೆ ಗಳ ಪ್ರಾಧಿಕಾರವು “ಡಿಜಿಟಲ್‌ ವೇದಿಕೆ’ ಕಲ್ಪಿಸಿದೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಕಾರ್ಯನಿರ್ವಾಹಕ ಅಧ್ಯಕ್ಷರೂ ಆಗಿರುವ ಕರ್ನಾಟಕ ಹೈಕೋರ್ಟ್‌ನ ಹಿರಿಯ ನ್ಯಾಯಮೂರ್ತಿಗಳಾದ ಅರವಿಂದ ಕುಮಾರ್‌ ಅವರು ಈ ಕುರಿತು “ಉದಯವಾಣಿ’ಯೊಂದಿಗೆ ಮಾತನಾಡಿದ್ದಾರೆ. ಮೊದಲ ಪ್ರಯತ್ನ ಮೆಗಾ ಇ-ಲೋಕ …

Read More »

ರಾಜ್ಯ ಸರ್ಕಾರದಿಂದ ‘ರೈತರಿಗೆ ಸಿಹಿ ಸುದ್ದಿ’: ಇನ್ಮುಂದೆ ಮನೆ ಬಾಗಿಲಿಗೆ ಬರಲಿದೆ ‘ಈ ಸೇವೆ’

ಡಿಜಿಟಲ್‌ಡೆಸ್ಕ್‌: ಯಾವುದೇ ತರಹದ ರೋಗ ಮತ್ತು ಕೀಟಬಾಧೆ ಕಂಡುಬಂದಲ್ಲಿ ರೈತರ ಹೊಲಗಳಿಗೆ ಹೋಗಿ ಪ್ರಾತ್ಯಕ್ಷಿಕೆ ಮೂಲಕ ಅಗತ್ಯ ಸಲಹೆ, ನೆರವು ನೀಡಲು 108 ವಾಹನ ಮಾದರಿಯಲ್ಲಿ ಕೃಷಿ ಸಂಚಾರಿ ಲ್ಯಾಬ್ ಸಿದ್ಧಪಡಿಸಲಾಗುತ್ತಿದೆ. ಕೃಷಿಕರು ಕರೆ ಮಾಡಿದ ಕೂಡಲೆ ಕೃಷಿ ಪದವೀಧರರು ಸೇರಿದಂತೆ ಅಗತ್ಯ ಸಿಬ್ಬಂದಿಗಳನ್ನೊಳಗೊಂಡ ಈ ವಾಹನ ಹೊಲಗಳಿಗೆ ಹೋಗಿ ಸೂಕ್ತ ಸಲಹೆ ನೀಡಲಿದ್ದಾರೆ. ಈ ಯೋಜನೆಯನ್ನು ಪ್ರಾಯೋಗಿಕವಾಗಿ ತಮ್ಮ ಉಸ್ತುವಾರಿಯ ಕೊಪ್ಪಳ ಜಿಲ್ಲೆಯಲ್ಲಿ ಜಾರಿಗೆ ತರಲು ಸಿದ್ಧತೆ ನಡೆದಿದೆ. …

Read More »

ರೈಲು ಪ್ರಯಾಣಿಕರಿಗೆ ಮತ್ತೊಂದು ಶಾಕ್

ನವದೆಹಲಿ: ವಿಮಾನ ನಿಲ್ದಾಣಗಳಲ್ಲಿ ಇರುವಂತೆ ರೈಲು ನಿಲ್ದಾಣದಲ್ಲಿಯೂ ಬಳಕೆದಾರರ ಶುಲ್ಕ ಜಾರಿಗೆ ತರಲು ರೈಲ್ವೆ ಮಂತ್ರಾಲಯ ತೀರ್ಮಾನಿಸಿದೆ. ಅತಿ ಹೆಚ್ಚು ಜನಸಂದಣಿಯಿರುವ ಮತ್ತು ನವೀಕರಣಗೊಂಡಿರುವ ಶೇಕಡ 15 ರಷ್ಟು ನಿಲ್ದಾಣಗಳಲ್ಲಿ ಬಳಕೆದಾರರ ಶುಲ್ಕವನ್ನು ವಸೂಲಿ ಮಾಡಲಾಗುವುದು ಎಂದು ಹೇಳಲಾಗಿದೆ. ಕೇಂದ್ರ ರೈಲ್ವೆ ಮಂಡಳಿ ಮುಖ್ಯಸ್ಥ ವಿ.ಕೆ. ಯಾದವ್ ಈ ಕುರಿತು ಮಾತನಾಡಿ, ರೈಲು ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಸೌಲಭ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಆದಾಯ ಅಗತ್ಯವಿದೆ. ಹಾಗಾಗಿ ಬಳಕೆದಾರರ ಶುಲ್ಕ ವಿಧಿಸಲಾಗುವುದು. ಅತಿ ಹೆಚ್ಚು …

Read More »

ಬಿಜೆಪಿ ರಾಜ್ಯಸಭೆ ಸದಸ್ಯ ಅಶೋಕ ಗಸ್ತಿ ನಿಧನ

ಬೆಂಗಳೂರು: ಬಿಜೆಪಿಯ ರಾಜ್ಯಸಭಾ ಸದಸ್ಯ ಅಶೋಕ್‌ ಗಸ್ತಿ (55) ಕೋವಿಡ್‌-19 ಮತ್ತು ಬಹು ಅಂಗಾಂಗಳ ವೈಫಲ್ಯದಿಂದ ನಗರದ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇದೇ 2 ರಂದು ಕೊರೊನಾ ಸೋಂಕಿನಿಂದ ಮಣಿಪಾಲ ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಕೆಲವು ದಿನಗಳಿಂದ ಅವರನ್ನು ಜೀವ ರಕ್ಷಕ ವ್ಯವಸ್ಥೆಯಲ್ಲಿಡಲಾಗಿತ್ತು. ಚಿಕಿತ್ಸೆಗೆ ಸ್ಪಂದಿಸದೇ ರಾತ್ರಿ 10.31ರ ವೇಳೆಗೆ ಕೊನೆಯುಸಿರೆಳೆದರು ಎಂದು ಆಸ್ಪತ್ರೆಯ ಪ್ರಕಟಣೆ ತಿಳಿಸಿದೆ. ಅಶೋಕ ಗಸ್ತಿ ರಾಯಚೂರು ಜಿಲ್ಲೆಯವರು. ವಕೀಲರಾಗಿದ್ದ ಇವರು 1989ರಲ್ಲಿ ಬಿಜೆಪಿ ಸೇರ್ಪಡೆಯಾಗಿ, ಯುವ …

Read More »

ʼಪ್ರಾಥಮಿಕ ಶಾಲಾ ಮಕ್ಕಳಿಗೆʼ ಮುಖ್ಯ ಮಾಹಿತಿ: ಶುರುವಾಗಲಿದೆ ʼಲೋಕಲ್‌ ಚಾನೆಲ್‌ ಕ್ಲಾಸ್‌ʼ..!

ಬೆಂಗಳೂರು: ಕೊರೊನಾ ಹವಾಳಿಯಿಂದ ಮನೆಯಲ್ಲಿಯೇ ಆನ್‌ಲೈನ್‌ ಕ್ಲಾಸ್‌ ಪಡೆಯುತ್ತಿರುವ ಪ್ರಾಥಮಿಕ ಶಾಲಾ ಮಕ್ಕಳಿಗಾಗಿ ಸಚಿವ ಸುರೇಶ್‌ ಕುಮಾರ್‌ ಮತ್ತೊಂದು ವೇದಿಕೆಯನ್ನ ಸಿದ್ಧಪಡಿಸಿದ್ದು, 1 ರಿಂದ 8ನೇ ತರಗತಿವರೆಗಿನ ಶಾಲಾ ಮಕ್ಕಳಿಗೆ ಲೋಕಲ್‌ ಕೇಬಲ್‌ ಟಿವಿ ಚಾನೆಲ್‌ಗಳ ಮೂಲಕ ತರಗತಿಗಳನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು ಎಂದಿದ್ದಾರೆ. ‘ಈಗಾಗಲೇ ಸಂವೇದಾ ಕಾರ್ಯಕ್ರಮದ ಮೂಲಕ ದೂರದರ್ಶನದ ಚಂದನವಾಹಿನಿಯಲ್ಲಿ 9 ಮತ್ತು 10ನೇ ತರಗತಿಯ ಮಕ್ಕಳಿಗೆ ಪಾಠ ಪ್ರವಚನ ನಡೆಸಲಾಗುತ್ತಿದೆ. ಇನ್ನು 1ರಿಂದ 8ನೇ ತರಗತಿಯ ಮಕ್ಕಳಿಗೆ …

Read More »

ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿಷಾದ ಕರ್ಣನಂತಾದ ಬಳ್ಳಾರಿ: ಪನ್ನರಾಜ್ ವಿಷಾದ

ಬಳ್ಳಾರಿ: ‘ಕಲ್ಯಾಣ ಕರ್ನಾಟಕ ಆರು ಜಿಲ್ಲೆಗಳ ಪೈಕಿ ಬಳ್ಳಾರಿಯು ಕರ್ಣನಂತಾಗಿದೆ’ ಎಂದು ಕಲ್ಯಾಣ ಕರ್ನಾಟಕ ಹೋರಾಟ ಸಮಿತಿ‌ ಜಿಲ್ಲಾ ಘಟಕದ ಅಧ್ಯಕ್ಷ ಸಿರಿಗೇರಿ‌ ಪನ್ನರಾಜ್ ವಿಷಾದಿಸಿದರು.   ನಗರದ ಮುನ್ಸಿಪಲ್ ಕಾಲೇಜು ಮೈದಾನದಲ್ಲಿ ಗುರುವಾರ ಜಿಲ್ಲಾಡಳಿತ ಏರ್ಪಾಡಿಸಿದ್ದ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ವಿಶೇಷ ಉಪನ್ಯಾಸ ನೀಡಿದ ಅವರು, ‘1990ರಲ್ಲಿ ಹೈದರಾಬಾದ್ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾದಾಗ ಬಳ್ಳಾರಿ ಜಿಲ್ಲೆಯನ್ನು‌ ಹೊರಗೆ ಇಡಲಾಗಿತ್ತು. ಸುದೀರ್ಘ ಹೋರಾಟದ ಮೂಲಕವೇ ಸೇರ್ಪಡೆಯಾಯಿತು’ ಎಂದು ಸ್ಮರಿಸಿದರು. ‘ಜಿಲ್ಲೆಯು …

Read More »

ಬೆಂಗಳೂರಿನ 36 ಆಸ್ಪತ್ರೆಗಳಿಗೆ ನೋಟಿಸ್

ಬೆಂಗಳೂರು:  ಸರ್ಕಾರದ ನಿಯಮ ಉಲ್ಲಂಘಿಸಿ ಕೊರೊನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ ಬೆಂಗಳೂರಿನ 36 ಖಾಸಗಿ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸುವುದು ಖಚಿತ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಸಿದ್ದಾರೆ. ಈ ಸಂಬಂಧ ಟ್ವೀಟ್ ಮಾಡಿರುವ ಅವರು ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಸರ್ಕಾರದ ನಿಯಮಾವಳಿ ಪ್ರಕಾರ ಶೇ.50ರಷ್ಟು ಹಾಸಿಗೆಗಳನ್ನು ಮೀಸಲಿಡುವುದು ಕಡ್ಡಾಯವಾಗಿದೆ.   v ಆದರೆ ಕೆಲವು ಆಸ್ಪತ್ರೆಗಳು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುತ್ತಿರುವ …

Read More »

ಅಥಣಿಯಲ್ಲಿ ಹಾಸು ಹೊಕ್ಕಾಗಿರುವ ಶರಣ ಸಂಸ್ಕೃತಿ: ಶಿವಬಸವ ಸ್ವಾಮೀಜಿ

ಅಥಣಿ: ‘ಇಲ್ಲಿ ಶರಣ ಸಂಸ್ಕೃತಿ ಹಾಸುಹೊಕ್ಕಾಗಿದೆ. ಹೊರಗಿನಿಂದ ಬಂದವರೆಲ್ಲರನ್ನೂ ತಮ್ಮವರೆಂದು ಪ್ರೀತಿ, ವಿಶ್ವಾಸ ಕೊಟ್ಟು ಜಾತಿ, ಮತವೆನ್ನದೆ ಎಲ್ಲರನ್ನೂ ಅಪ್ಪಿಕೊಳ್ಳುವ ಗುಣ ಈ ಮಣ್ಣಿನದಾಗಿದೆ’ ಎಂದು ಗಚ್ಚಿನ ಮಠದ ಶಿವಬಸವ ಸ್ವಾಮೀಜಿ ಹೇಳಿದರು. ಶೆಟ್ಟರ ಮಠದ ಮರುಳಸಿದ್ಧ ಸ್ವಾಮೀಜಿ ಅವರ 128ನೇ ಪುಣ್ಯಾರಾಧನೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ‘ಭಾರತೀಯ ಆಹಾರ ಪದ್ಧತಿಯಲ್ಲಿ ದಿವ್ಯ ಔಷಧಿಗಳಿವೆ. ಆದಾಗ್ಯೂ ಎಲ್ಲರೂ ಮುನ್ನೆಚ್ಚರಿಕೆ ಕ್ರಮ ಅನುಸರಿಸಿ ಸೋಂಕಿನಿಂದ ದೂರವಿರಬೇಕು’ ಎಂದು ಸಲಹೆ ನೀಡಿದರು. …

Read More »