ಬೆಂಗಳೂರು: “ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆಗೆ ಸಚಿವ ಪ್ರಿಯಾಂಕ್ ಖರ್ಗೆ ಕೂಡ ಕಾರಣ. ಊರಿಗೆಲ್ಲಾ ಉಪದೇಶ ಮಾಡುವ ಪ್ರಿಯಾಂಕ್ ಖರ್ಗೆ ಮೊದಲು ರಾಜೀನಾಮೆ ಕೊಟ್ಟು ನೈತಿಕತೆ ಪ್ರದರ್ಶನ ಮಾಡಲಿ” ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಗ್ರಹಿಸಿದ್ದಾರೆ. ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, “ಖರ್ಗೆ ಕುಟುಂಬಕ್ಕೆ ಅಂಬೇಡ್ಕರ್ ಸಂವಿಧಾನ ಅನ್ವಯ ಆಗುವುದಿಲ್ಲವೇ?. ಪ್ರಿಯಾಂಕ್ ಖರ್ಗೆ ಕಲಬುರಗಿ ನಿಜಾಮನೂ ಅಲ್ಲ, ಅವರ ಅನುಯಾಯಿಗಳು ರಜಾಕಾರರೂ ಅಲ್ಲ. ಗುತ್ತಿಗೆದಾರ ಸಚಿನ್ …
Read More »ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ;D.C.M.
ಬೆಂಗಳೂರು: ”ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾರೂ ಸಹ ದುರ್ವರ್ತನೆ ಮಾಡುವಂತಿಲ್ಲ. ಕಾನೂನು ಉಲ್ಲಂಘನೆ ಮಾಡುವಂತಿಲ್ಲ. ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ಇದನ್ನು ಮನವಿ ಎಂದಾದರೂ ಪರಿಗಣಿಸಿ, ಇಲ್ಲವೇ ಎಚ್ಚರಿಕೆ ಎಂದಾದರೂ ಪರಿಗಣಿಸಿ” ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಸಂದೇಶ ರವಾನಿಸಿದರು. ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯ …
Read More »ಕಟಾವು ಮಾಡಲಿದ್ದ ಬೆಳೆಯನ್ನು ಕಾಡಾನೆಗಳು ನಾಶಪಡಿಸಿರುವುದರಿಂದಾಗಿ ಹಲವು ರೈತರಿಗೆ ಲಕ್ಷಾಂತರ ರೂ. ನಷ್ಟ
ಹಾಸನ (ಬೇಲೂರು): ಕಟಾವಿಗೆ ಬಂದಿರುವ ಭತ್ತದ ಬೆಳೆಗಳನ್ನ ಕಾಡಾನೆಗಳ ಹಿಂಡು ತುಳಿದು ನಾಶಪಡಿಸಿರುವ ಘಟನೆ ಬೇಲೂರು ತಾಲೂಕು ಅರೇಹಳ್ಳಿ ಹೋಬಳಿ ಮಲಸಾವರ ಹಾಗೂ ಅನುಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಶನಿವಾರ ರಾತ್ರಿ ನಡೆದಿದೆ. 22 ಕಾಡಾನೆಗಳು ಚಿಕ್ಕ ಸಾಲಾವರ (ಬಾವಿಕಟ್ಟೆ) ಗ್ರಾಮದ ಹರೀಶ್, ಶಾಂತಪ್ಪ, ಅಶೋಕ, ಉಪೇಂದ್ರ ಅವರಿಗೆ ಸೇರಿದ ಭತ್ತದ ಪೈರನ್ನು ನಾಶಪಡಿಸಿ ಮಂಜುನಾಥ್ ಎಂಬುವರಿಗೆ ಸೇರಿದ ತೆಂಗಿನ ಮರಗಳನ್ನು ಮುರಿದಿವೆ. ಬಾವಿಕಟ್ಟೆ ಗ್ರಾಮದ ಸುಶೀಲಮ್ಮ ಎಂಬ ರೈತ …
Read More »ಇಂದು ಕೆಎಎಸ್ ಪೂರ್ವಭಾವಿ ಪರೀಕ್ಷೆ
ಬೆಂಗಳೂರು: 384 ಗೆಜೆಟೆಡ್ ಪ್ರೊಬೆಷನರಿ ಹುದ್ದೆಗಳ (ಕೆಎಎಸ್) ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇಂದು ನಡೆಯಲಿದ್ದು, ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ)ವು ಸಕಲ ಸಿದ್ಧತೆ ಮಾಡಿಕೊಂಡಿದೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ಕಟ್ಟು ನಿಟ್ಟಿನ ಸೂಚನೆಗಳನ್ನು ಪಾಲಿಸುವಂತೆ ಕೂಡ ಕೆಪಿಎಸ್ಸಿ ಸೂಚಿಸಿದೆ. ಅಭ್ಯರ್ಥಿಗಳಿಗೆ ಮಾರ್ಗಸೂಚಿ: ಕೆಪಿಎಸ್ಸಿಯಿಂದ ಡೌನ್ಲೋಡ್ ಮಾಡಿದ ಮರು ಪರೀಕ್ಷೆಯ ಪ್ರವೇಶ ಪತ್ರದ ಜೊತೆಗೆ ಭಾವಚಿತ್ರವಿರುವ ಗುರುತಿನ ಚೀಟಿಯನ್ನು ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಎಲೆಕ್ಟ್ರಾನಿಕ್ ಗ್ಯಾಜೆಟ್ಗಳಾದ ಮೊಬೈಲ್, ಕ್ಯಾಲ್ಕುಲೇಟರ್, …
Read More »ನಮ್ಮ ಅತ್ತೆ ಬೇಗ ಸಾಯಬೇಕು” ಎಂದು ಬರೆದು ಭಾಗ್ಯವಂತಿ ದೇವಿಗೆ ಹರಕೆ!
ಕಲಬುರಗಿ, ಡಿಸೆಂಬರ್ 28: ಕಲಬುರಗಿ (Kalaburagi) ಜಿಲ್ಲೆಯ ಅಫಜಲಪುರ (Afzalpur) ತಾಲೂಕಿನ ಘತ್ತರಗಿ ಗ್ರಾಮದ ಭಾಗ್ಯವಂತಿ ದೇವಿಯ (Bhagyavanti Devi) ಹುಂಡಿ ಎಣಿಕೆ ಕಾರ್ಯ ನಡೆಯಿತು. ಹುಂಡಿ ಎಣಿಕೆ ಮಾಡುವ ವೇಳೆ ವಿಚಿತ್ರ ಹರಕೆಯ ನೋಟ್ ಪತ್ತೆಯಾಗಿದೆ. ಅತ್ತೆ ಸಾಯಬೇಕೆಂದು ಬರೆದಿರುವ 20 ರೂ. ಮುಖಬೆಲೆಯ ನೋಟ್ ಪತ್ತೆಯಾಗಿದೆ. “ತಾಯಿ, ನಮ್ಮ ಅತ್ತೆ ಬೇಗ ಸಾಯಬೇಕು” ಅಂತ 20 ರೂ. ಮುಖಬೆಲೆಯ ನೋಟ್ ಮೇಲೆ ಬರೆದು ಹುಂಡಿಯಲ್ಲಿ ಹಾಕಲಾಗಿದೆ.ಹುಂಡಿ ಎಣಿಕೆ ಕಾರ್ಯ …
Read More »ಕಲಬುರಗಿ ಸ್ಟೇಷನ್ ಬಜಾರ್ ಠಾಣೆಯಲ್ಲಿ ಬಿಜೆಪಿ ನಾಯಕರು, ಪೊಲೀಸ್ ಮಧ್ಯೆ ಹೈಡ್ರಾಮಾ
ಕಲಬುರಗಿ, ಡಿಸೆಂಬರ್ 28: ಬೀದರ್ ಮೂಲದ ಕಾಂಟ್ರಾಕ್ಟರ್ ಸಚಿನ್ ಪಂಚಾಳ್ ಆತ್ಮಹತ್ಯೆ ಪ್ರಕರಣದಲ್ಲಿ, ಡೆತ್ನೋಟ್ನಲ್ಲಿ ಸುಪಾರಿ ಬಗ್ಗೆ ಉಲ್ಲೇಖವಾಗಿರುವುದು ಕಾಂಗ್ರೆಸ್-ಬಿಜೆಪಿ ರಾಜಕೀಯ ಜಿದ್ದಾಜಿದ್ದಿಗೆ ನಾಂದಿ ಹಾಡಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ, ಮಾಜಿ ಕಾರ್ಪೋರೆಟರ್ ರಾಜು ಕಪನೂರ್ ಹಾಗೂ ಗ್ಯಾಂಗ್ ಬಿಜೆಪಿ ಶಾಸಕ ಬಸವರಾಜ ಮತ್ತಿಮೂಡ್, ಆಂದೋಲಾ ಸ್ವಾಮೀಜಿ ಶ್ರೀ ಸಿದ್ದಲಿಂಗ ಸ್ವಾಮೀಜಿ, ಚಂದು ಪಾಟೀಲ್, ಮಣಿಕಂಠ ಸೇರಿ ನಾಲ್ಕು ಜನರ ಹತ್ಯೆಗೆ ಸುಪಾರಿ ನೀಡಿದ್ದಾರೆ ಎಂಬ ಉಲ್ಲೇಖದ ಡೆತ್ನೋಟ್ ಕಲಬುರಗಿಯ …
Read More »ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ಅಭಿನಂದಿಸಲಾಯಿತು.
ಸದನದಲ್ಲಿ ಕ್ರೀಡಾಳುಗಳ ಕುರಿತು ಚರ್ಚಿಸಿ ಶಾಸಕ ಅಭಯ ಪಾಟೀಲ್; ಸ್ಕೇಟಿಂಗ್ ತರಬೇತುದಾರರಿಂದ ಸನ್ಮಾನ ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಬೆಳಗಾವಿಯ ಕ್ರೀಡಾಳುಗಳ ಸಮಸ್ಯೆಯ ಕುರಿತು ಧ್ವನಿ ಎತ್ತಿ, ಬೆಳಗಾವಿಯಲ್ಲಿ ಸ್ಟೇಡಿಯಂ ನಿರ್ಮಿಸಬೇಕೆಂದು ಆಗ್ರಹಿಸಿದ ದಕ್ಷಿಣ ಶಾಸಕ ಅಭಯ ಪಾಟೀಲ್ ಅವರನ್ನು ಬೆಲಗಾಮ್ ಜಿಲ್ಲಾ ರೋಲರ್ ಸ್ಕೇಟಿಂಗ್ ಅಸೋಸಿಯೇಷನ್ ಮತ್ತು ಆಭಾ ಸ್ಫೋರ್ಟ್ಸ್ ಕ್ಲಬನ ವತಿಯಿಂದ ಸತ್ಮರಿಸಿ ಅಭಿನಂದಿಸಲಾಯಿತು. ಇದು ವರೆಗೂ ನಡೆದ ಅಧಿವೇಶನದಲ್ಲಿ ಕ್ರೀಡೆ ಮತ್ತು ಕ್ರೀಡಾಳುಗಳ ಕುರಿತು ಯಾವ ಶಾಸಕರು …
Read More »ವಕ್ಫ್ ಇಲಾಖೆಯಲ್ಲಿ ವ್ಯಾಪಕ ಪೆಟ್ರೋಲ್ ದುರ್ಬಳಕೆ ಪತ್ರ ಬರೆದ ಯತ್ನಾಳ್
ವಿಜಯಪುರ, ಡಿಸೆಂಬರ್ 27: ಅಲ್ಪಸಂಖ್ಯಾತ ಕಲ್ಯಾಣ ಹಾಗೂ ವಕ್ಫ್ ಇಲಾಖೆಯಲ್ಲಿ (Waqf Board) ಮನಬಂದಂತೆ ಪೆಟ್ರೋಲ್ ಇಂಡೆಂಟ್ಗಳನ್ನು ಬಳಸಿಕೊಂಡು ಸರ್ಕಾರಿ ವಾಹನ ಚಾಲಕರು ಹಾಗೂ ಪೆಟ್ರೋಲ್ ಸರ್ವಿಸ್ ಸ್ಟೇಷನ್ಗಳು ದೊಡ್ಡ ಭ್ರಷ್ಟಾಚಾರವನ್ನು ಎಸಗಿದ್ದಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basangouda Patil Yatnal) ಆರೋಪ ಮಾಡಿದ್ದಾರೆ. ಈ ಕುರಿತಾಗಿ ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದು ಸರ್ಕಾರದ ಎಲ್ಲ ಇಲಾಖೆಗಳಿಗೂ ಇಂಧನ ಮಿತಿ ಮಾರ್ಗಸೂಚಿ ಹೊರಡಿಸುವಂತೆ ಮನವಿ ಮಾಡಿದ್ದಾರೆ. …
Read More »ಸಿನಿಮಾ ಶೈಲಿಯಲ್ಲಿ ಬ್ಯಾಂಕಿಗೆ ವಂಚನೆ: ತಂಗಿ ಮದ್ವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ
ನೆಲಮಂಗಲ, ಡಿಸೆಂಬರ್ 27: ಆಭರಣ ಮೌಲ್ಯಮಾಪಕನಿಂದ ಕರ್ನಾಟಕ ಗ್ರಾಮೀಣ ಬ್ಯಾಂಕ್ಗೆ 23 ಲಕ್ಷಕ್ಕೂ ಹೆಚ್ಚು ಹಣ ವಂಚನೆ (fraud) ಮಾಡಿರುವಂತಹ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಕರ್ನಾಟಕ ಗ್ರಾಮೀಣ ಬ್ಯಾಂಕ್ ಶಾಖೆಯಲ್ಲಿ ನಡೆದಿದೆ. ಆಭರಣ ಮೌಲ್ಯಮಾಪಕ ಮಂಜುನಾಥ ವಂಚಕ. ನೆಲಮಂಗಲ ಪೊಲೀಸ್ ಠಾಣೆಗೆ ಮ್ಯಾನೇಜರ್ ಆನಂದ್ ದೂರು ನೀಡುತ್ತಿದ್ದಂತೆ ಇತ್ತ ವಂಚಕ ಪರಾರಿ ಆಗಿದ್ದಾರೆ. ತಂಗಿಯ ಮದುವೆ ಸಾಲಕ್ಕೆ ಅಣ್ಣ ಜೈಲು ಸೇರುವ ಪರಿಸ್ಥಿತಿ ಎದರಾಗಿದೆ.ಅರ್ಧ ಕೆಜಿಯಷ್ಟು ನಕಲಿ ಚಿನ್ನಾಭರಣ ಅಡವಿಟ್ಟು ಮಂಜುನಾಥ …
Read More »ಚಾಟಿಯಿಂದತಮಗೆ ತಾವೇ ಹೊಡೆದುಕೊಂಡಅಣ್ಣಮಲೈ
ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದರು. ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಡಿಎಂಕೆ ಪಕ್ಷವನ್ನು ಅಧಿಕಾರದಿಂದ ಕೆಳಗಿಳಿಸುವವರೆಗೂ ಚಪ್ಪಲಿ ಧರಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಅಣ್ಣಾ ಯೂನಿರ್ವಸಿಟಿಯಲ್ಲಿ ಓದುತ್ತಿದ್ದ ಇಂಜಿನಿಯರಿಂಗ್ ವಿಧ್ಯಾರ್ಥಿನಿಯ ಮೇಲೆ ಕಾಲೇಜು ಕ್ಯಾಂಪಸ್ನಲ್ಲಿ …
Read More »
Laxmi News 24×7