Breaking News

Uncategorized

ಪೋಕ್ಸೋ ಪ್ರಕರಣ – ವಚನಾನಂದ ಸ್ವಾಮೀಜಿಗೆ ಜಾಮೀನು ಮಂಜೂರು

ದಾವಣಗೆರೆ: ಹರಿಹರ ಪೀಠದ ವಚನಾನಂದ ಸ್ವಾಮೀಜಿಗೆ  ಪೋಕ್ಸೋ ಪ್ರಕರಣದಲ್ಲಿ ( POCSO case) ವಿಶೇಷ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಮಠದಲ್ಲಿದ್ದ ಅಪ್ರಾಪ್ತ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ವಚನಾನಂದ ಸ್ವಾಮೀಜಿ ವಿರುದ್ಧ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿತ್ತು. ಆರಂಭದಲ್ಲಿ ಗದಗ ಜಿಲ್ಲೆಯ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಝೀರೋ ಎಫ್‌ಐಆರ್ ದಾಖಲಾಗಿದ್ದು, ಬಳಿಕ ತನಿಖೆಗಾಗಿ ಪ್ರಕರಣವನ್ನು ಹರಿಹರ ಗ್ರಾಮಾಂತರ ಪೊಲೀಸ್ ಠಾಣೆಗೆ ವರ್ಗಾಯಿಸಲಾಗಿತ್ತು. ಪ್ರಕರಣ ದಾಖಲಾಗುವ ಮುನ್ನವೇ …

Read More »

ಬಿಡದಿ ಟೌನ್‌ಶಿಪ್‌ ಜಟಾಪಟಿ – ಸರ್ವೆಗೆ ಬಂದ ಅಧಿಕಾರಿಗಳಿಗೆ ಪೊರಕೆ ಏಟು!

ರಾಮನಗರ: ಬಿಡದಿ ಟೌನ್​ಶಿಪ್​​  ವಿಚಾರದಲ್ಲಿ ಗದ್ದಲ – ಗಲಾಟೆ ದಿನದಿಂದ ದಿನಕ್ಕೆ ಜೋರಾಗುತ್ತಿದೆ. ಸರ್ಕಾರದ ನಿರ್ಧಾರಕ್ಕೆ ರೈತರು ವಿರೋಧ ವ್ಯಕ್ತಪಡಿಸುತ್ತಿದ್ದು, ಜಮೀನು ಒತ್ತುವರಿ ವಿರುದ್ಧ ತಿರುಗಿಬಿದ್ದಿದ್ದಾರೆ. ವಿರೋಧದ ನಡುವೆಯೂ ಬಿಡದಿ ತಾಲೂಕಿನ ಮಂಡಲಹಳ್ಳಿ ಗ್ರಾಮದಲ್ಲಿ ಜೆಎಂಸಿ ಸರ್ವೆಗೆ ಮುಂದಾದ ಜಿಬಿಡಿಎ ಅಧಿಕಾರಿಗಳ ವಿರುದ್ಧ ರೈತರು ಆಕ್ರೋಶ ಹೊರಹಾಕಿದ್ದಾರೆ. ಯಾವುದೇ ಕಾರಣಕ್ಕೂ ಜೆಎಂಸಿ ಸರ್ವೇ ನಡೆಸದಂತೆ ಮಂಡಲಹಳ್ಳಿ ಗ್ರಾಮದ ರೈತರು ಒತ್ತಾಯಿಸಿದ್ದಾರೆ. ಬಲವಂತವಾಗಿ ಸರ್ವೇ ಕಾರ್ಯ ನಡೆಸಿದ್ರೆ ಅಧಿಕಾರಿಗಳಿಗೆ ಪೊರಕೆ ಏಟು …

Read More »

ಶಿವಮೊಗ್ಗದ ಮುಪ್ಪಾನೆ – ಹಲ್ಕೆ ನಡುವಿನ ಲಾಂಚ್ ಸೇವೆ ಪುನಾರಂಭ

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ಲಿಂಗನಮಕ್ಕಿ ಜಲಾಶಯದಲ್ಲಿ ಶರಾವತಿ ಹಿನ್ನೀರಿನ ಮಟ್ಟ ಏರಿಕೆಯಾದ ಹಿನ್ನೆಲೆ ಮುಪ್ಪಾನೆ ಮತ್ತು ಹಲ್ಕೆ ನಡುವಿನ ಲಾಂಚ್  (ಜಲಸಾರಿಗೆ ಬೋಟ್‌) ಸೇವೆ ಪುನಾರಂಭಗೊಂಡಿದೆ. ಮಳೆ ಕೊರತೆಯಿಂದ ಲಿಂಗನಮಕ್ಕಿ ಡ್ಯಾಂ ಹಿನ್ನೀರು ಕನಿಷ್ಠ ಮಟ್ಟಕ್ಕೆ ಇಳಿದಿತ್ತು. ಇದರಿಂದ ನೀರಿನ ಆಳದಲ್ಲಿನ ಮರದ ಕಾಂಡಗಳು ಲಾಂಚ್‌ ತಳಭಾಗಕ್ಕೆ ತಗಲುವ ಸಾಧ್ಯತೆ ಇತ್ತು. ವಾಹನ ಇಳಿಸುವ ಪ್ಲಾಟ್‌ಫಾರ್ಮ್ ಜಾಗದಲ್ಲೂ ಲಾಂಚ್ ಕೆಳಭಾಗ ನೆಲಕ್ಕೆ ತಾಗುತ್ತಿತ್ತು. ಈ ಹಿನ್ನೆಲೆಯಲ್ಲಿ ಜನರ ಸುರಕ್ಷತೆಯ …

Read More »

ನೇಪಾಳದಲ್ಲಿ ಬೆಳಗಾವಿ ಯುವಕನ ಬರ್ಬರ ಹತ್ಯೆ – ರೂಮ್‌ಮೇಟ್‌ನಿಂದಲೇ ಕೃತ್ಯ

ಬೆಳಗಾವಿ: ನೇಪಾಳದಲ್ಲಿ  ಹೋಟೆಲ್‌ ಕೆಲಸಕ್ಕೆ ತೆರಳಿದ್ದ ಬೆಳಗಾವಿ ಯುವಕ ತನ್ನ ರೂಮ್‌ಮೇಟ್‌ನಿಂದಲೇ ಬರ್ಬರವಾಗಿ ಕೊಲೆಯಾಗಿದ್ದಾನೆ. ಖಾನಾಪುರ ಪಟ್ಟಣದ ನಿವಾಸಿ ಸಾಹಿಲ್ ರಿಯಾಜ್ ಅಹ್ಮದ್ ಮೋಮಿನ್ (25) ಕೊಲೆಯಾದ ಯುವಕ. ಈತ ನೇಪಾಳದ ಹೋಟೆಲ್ ಕೆಲಸಕ್ಕೆ ತೆರಳಿದ್ದ. ಜೊತೆಗಿದ್ದ ರೂಮ್‌ಮೇಟ್‌ ಆತನನ್ನು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ. ಸಾಯಿಲ್ ಶವವನ್ನು ಭಾರತ ತರುವಂತೆ ಕುಟುಂಬಸ್ಥರು ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಪೊಲೀಸರ ಮೂಲಕ ಈ ಬಗ್ಗೆ ಪ್ರಯತ್ನ ಮಾಡುತ್ತಿದ್ದಾರೆ. ಈ ಬಗ್ಗೆ ಸಂಬಂಧಪಟ್ಟ …

Read More »

ಪತ್ನಿ ಆತ್ಮಹತ್ಯೆ ಮಾಡಿಕೊಂಡಿದ್ದನ್ನು ಕಂಡು ಪತಿಯೂ ನೇಣಿಗೆ ಶರಣು – ಪ್ರಾಣಬಿಟ್ಟ ನವದಂಪತಿ

ತುಮಕೂರು: ಪತ್ನಿ ನೇಣಿಗೆ ಶರಣಾಗಿದ್ದನ್ನು ಕಂಡು ಪತಿಯೂ ಸೂಸೈಡ್ ಮಾಡಿಕೊಂಡಿರುವ ಘಟನೆ ತುಮಕೂರು  ಜಿಲ್ಲೆಯ ಶಿರಾ  ತಾಲ್ಲೂಕಿನ ಹನುಮನಹಳ್ಳಿಯಲ್ಲಿ ನಡೆದಿದೆ. ಶರಣ್ಯ (20), ಗಿರೀಶ್ (28) ಆತ್ಮಹತ್ಯೆಗೆ ಶರಣಾದ ನವದಂಪತಿ.  ದಂಪತಿ ಕಳೆದ ಕಳೆದ ನಾಲ್ಕು ತಿಂಗಳ ಹಿಂದೆ ವಿವಾಹವಾಗಿದ್ದರು. ಮನೆಯಲ್ಲಿ ಯಾರು ಇಲ್ಲದೆ ವೇಳೆ ಪತ್ನಿ ಶರಣ್ಯ ಆತ್ಮಹತ್ಯೆಗೆ ಶರಣಾಗಿದ್ದರು. ಇದನ್ನ ಕಂಡ ಪತಿ ಹೊಲದ ಹತ್ತಿರದಲ್ಲಿದ್ದ ಮರಕ್ಕೆ ನೇಣಿಬಿಗಿದುಕೊಂಡು ತಾವೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸದ್ಯ ಆತ್ಮಹತ್ಯೆಗೆ ನಿಖರ …

Read More »

ರಾಮಮಂದಿರ ದೇಣಿಗೆ ಕಳ್ಳತನ ಪ್ರಕರಣ: ತನಿಖಾ ವರದಿ ಸಲ್ಲಿಸುವಂತೆ ಸುಪ್ರೀಂ ಆದೇಶ

ನವದೆಹಲಿ: ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ಗೆ ಬಂದಿದ್ದ ದೇಣಿಗೆಯ ಕಳ್ಳತನ ಹಾಗೂ ದುರುಪಯೋಗದ ಆರೋಪಕ್ಕೆ ಸಂಬಂಧಿಸಿದಂತೆ ಇದುವರೆಗೆ ನಡೆದಿರುವ ತನಿಖೆಯ ಸ್ಥಿತಿಗತಿ ವರದಿಯನ್ನು  ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ಈ ಇಡೀ ಹಗರಣದ ತನಿಖೆಯನ್ನು ಕೇಂದ್ರ ತನಿಖಾ ದಳಕ್ಕೆವಹಿಸಬೇಕು ಎಂದು ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಮುಂದಿನ ವಾರಕ್ಕೆ ನಿಗದಿಪಡಿಸಿದೆ. ಮುಖ್ಯ ನ್ಯಾಯಮೂರ್ತಿಗಳ ನೇತೃತ್ವದ ಪೀಠವು ಈ ಅರ್ಜಿಯ ವಿಚಾರಣೆಯನ್ನು …

Read More »

ಚಲಿಸುತ್ತಿದ್ದ ಟ್ರೈನ್‌ನಲ್ಲಿ ಪೂಜೆ – 3 ಲಕ್ಷಕ್ಕೂ ಹೆಚ್ಚಿನ ಬೆಲೆಗೆ ಖಾಸಗಿ ಕೋಚ್ ಬುಕ್ ಆಗಿತ್ತು: ರೈಲ್ವೇ ಇಲಾಖೆ ಸ್ಪಷ್ಟನೆ

ನವದೆಹಲಿ: ಚಲಿಸುತ್ತಿದ್ದ ರೈಲಿನಲ್ಲಿ ಪೂಜೆ ಮಾಡುತ್ತಿದ್ದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದಂತೆ ಭಾರತೀಯ ರೈಲ್ವೆ ಸ್ಪಷ್ಟನೆ ನೀಡಿದೆ. 3 ಲಕ್ಷ ರೂ.ಗೂ ಹೆಚ್ಚಿನ ಹಣ ನೀಡಿ ಖಾಸಗಿ ಕೋಚ್‌ನ್ನು ಬುಕ್ ಮಾಡಿಕೊಂಡಿದ್ದರು ಎಂದು ತಿಳಿಸಿದೆ. ಈ ಕುರಿತು ಭಾರತೀಯ ರೈಲ್ವೆ ಉತ್ತರ ವಿಭಾಗ  ಮಾಹಿತಿ ಹಂಚಿಕೊಂಡಿದೆ. ಪೂಜೆ ನಡೆದಿರುವುದು ರೈಲಿನ ಸಾಮಾನ್ಯ ಬೋಗಿಯಲ್ಲಲ್ಲ. ಬದಲಿಗೆ ವ್ಯಕ್ತಿಯೊಬ್ಬರು 3 ಲಕ್ಷ ರೂ.ಗೂ ಅಧಿಕ ಹಣ ನೀಡಿ ಐಆರ್‌ಸಿಟಿಸಿ ವೆಬ್‌ಸೈಟ್‌ನ ವಾಣಿಜ್ಯ …

Read More »

ಸೌಜನ್ಯ ಪ್ರಕರಣ ಬಳಸಿ ಸಾರ್ವಜನಿಕ ಭಾವನೆ ಕೆರಳಿಸಲು ಯತ್ನ – ಮಹೇಶ್ ಶೆಟ್ಟಿ ತಿಮರೋಡಿಗೆ ಸುಪ್ರೀಂ ತರಾಟೆ

ನವದೆಹಲಿ: ಗಡಿಪಾರು  ಆದೇಶವನ್ನು ಪ್ರಶ್ನಿಸಿ ಮಹೇಶ್ ಶೆಟ್ಟಿ ತಿಮರೋಡಿ  ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂಕೋರ್ಟ್  ವಜಾ ಮಾಡಿದ್ದು, ಕಾನೂನು ಪ್ರಕಾರ ಸೂಕ್ತ ಸಕ್ಷಮ ಪ್ರಾಧಿಕಾರವನ್ನೇ ಸಂಪರ್ಕಿಸುವಂತೆ ನಿರ್ದೇಶಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾ. ಸಂಜಯ್ ಕುಮಾರ್ ನೇತೃತ್ವದ ದ್ವಿ ಸದಸ್ಯ ಪೀಠ ಮಹೇಶ್ ಶೆಟ್ಟಿ ಅವರು ಸಲ್ಲಿಸಿದ್ದ ಅರ್ಜಿಯನ್ನು ಉಚ್ಚ ನ್ಯಾಯಾಲಯ ಈಗಾಗಲೇ ವಜಾಗೊಳಿಸಿರುವುದನ್ನು ಪ್ರಸ್ತಾಪಿಸಿತು. ಲಭ್ಯವಿರುವ ಶಾಸನಬದ್ಧ ಪರಿಹಾರಗಳನ್ನು ಬಳಸಿಕೊಳ್ಳುವ ಬದಲು ನೇರವಾಗಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿರುವುದರ ಕುರಿತು …

Read More »

ರಾಜ್ಯದ 13 ರೋಪ್‌ವೇ ಯೋಜನೆಗಳ ಅನುಷ್ಠಾನಕ್ಕೆ ವೇಗ ನೀಡಿ: ಕೆ.ಜೆ. ಜಾರ್ಜ್ ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಪ್ರಸ್ತಾಪಿಸಲಾಗಿರುವ 13 ರೋಪ್‌ವೇ ಯೋಜನೆಗಳನ್ನು ತ್ವರಿತವಾಗಿ ಅನುಷ್ಠಾನಗೊಳಿಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಇಂಧನ ಹಾಗೂ ಪ್ರವಾಸೋದ್ಯಮ ಸಚಿವರಾದ ಕೆ.ಜೆ. ಜಾರ್ಜ್  ಅವರು ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ಪ್ರವಾಸೋದ್ಯಮ ಇಲಾಖೆಯ ಕಾರ್ಯದರ್ಶಿಗಳಾದ ಡಾ. ಕೆ.ವಿ. ತ್ರಿಲೋಕ್ ಚಂದ್ರ, ಆಯುಕ್ತರಾದ ಡಾ. ವಿ. ರಾಮ್ ಪ್ರಸಾತ್ ಮನೋಹರ್, ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ  ಹಾಗೂ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಉನ್ನತ ಮಟ್ಟದ ಪರಿಶೀಲನಾ ಸಭೆಯಲ್ಲಿ …

Read More »

ಚಾಕು ಇರಿದು ಪ್ರೇಯಸಿಯ ಹತ್ಯೆಗೈದು ರೈಲಿಗೆ ತಲೆಕೊಟ್ಟ ಟೆಕ್ಕಿ

ರಾಯ್ಪುರ: ಸಾಫ್ಟ್‌ವೇರ್ ಎಂಜಿನಿಯರ್  ಒಬ್ಬ ತನ್ನ ಪ್ರಿಯತಮೆಯನ್ನು ಚಾಕುವಿನಿಂದ ಬರ್ಬರವಾಗಿ ಹತ್ಯೆಗೈದು ಬಳಿಕ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹರಿಯಾಣದ ಗುರುಗ್ರಾಮದಲ್ಲಿ  ನಡೆದಿದೆ. ಮೃತರನ್ನು ಛತ್ತೀಸ್‌ಗಢದ  ಭಿಲಾಯಿ ಮೂಲದ ಶ್ರೇಷ್ಠ್ ಮಲಿಕ್ (25) ಹಾಗೂ ಉತ್ತರ ಪ್ರದೇಶದ ಸೀತಾಪುರ ಮೂಲದ ಇಶಾರಾ ಆಯೂಬಿ (25) ಎಂದು ಗುರುತಿಸಲಾಗಿದೆ. ಇಬ್ಬರೂ ಗುರುಗ್ರಾಮದ ಖಾಸಗಿ ಕಂಪನಿಯೊಂದರಲ್ಲಿ ಸಾಫ್ಟ್‌ವೇರ್ ಎಂಜಿನಿಯರ್‌ಗಳಾಗಿ ಕೆಲಸ ಮಾಡುತ್ತಿದ್ದರು. ಇಶಾರಾ ಅವರ ಕುಟುಂಬದವರು ಹಲವು ಬಾರಿ ಕರೆ ಮಾಡಿದರೂ …

Read More »