Home / Uncategorized (page 588)

Uncategorized

ಗಾಂಜಾ ಪೆಡ್ಲರ್ ಮೇಲೆ ಅತ್ತಿಬೆಲೆ ಪೊಲೀಸರಿಂದ ಫೈರಿಂಗ್; 7 ಕೆ.ಜಿ ಗಾಂಜಾ ಜಪ್ತಿ

ಭಾರತ-ಚೀನಾ ಗಡಿ ಸಂಘರ್ಷ: ‘ಶಾಂತಿಗೆ ಬದ್ಧ, ಸಮರಕ್ಕೂ ಸಿದ್ಧ’ ಎಂದ ಕೇಂದ್ರ ಸಚಿವ ರಾಜನಾಥ್​​ ಸಿಂಗ್​​ ಬಂಧಿತ ಆರೋಪಿ ಮಾಲೂರಿನಿಂದ ಆನೇಕಲ್ ಕಡೆ ಗಾಂಜಾ ಸಾಗಿಸುತ್ತಿರುವ ಬಗ್ಗೆ ಬಾತ್ಮೀದಾರರೊಬ್ಬರಿಂದ ಅತ್ತಿಬೆಲೆ ಪೊಲೀಸರಿಗೆ ಖಚಿತ ಮಾಹಿತಿ ದೊರೆಯುತ್ತದೆ. ಹಿರಿಯ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದ ಇನ್ಸ್ಪೆಕ್ಟರ್ ಸತೀಶ್ ಪಿಎಸ್‌ಐ ಹರೀಶ್ ರೆಡ್ಡಿ ಮತ್ತು ಮುರುಳಿ ಜೊತೆ ಕಾರ್ಯಾಚರಣೆಗಿಳಿಯುತ್ತಾರೆ. ಮಾಲೂರುನಿಂದ ಸರ್ಜಾಪುರ ಮಾರ್ಗವಾಗಿ ಬಿದರಗುಪ್ಪೆ ಬಳಿ ಅತ್ತಿಬೆಲೆ ಕಡೆ ಬರುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು …

Read More »

ಡ್ರಗ್ಸ್‌ ದಂಧೆಕೋರನಿಗೆ ಪೊಲೀಸರ ಗುಂಡೇಟು

ಆನೇಕಲ್‌ : ಡ್ರಗ್ಸ್‌ ದಂಧೆಕೋರರ ವಿರುದ್ಧ ಕಾರ್ಯಾಚರಣೆ ಮುಂದುವರೆಸಿರುವ ಪೊಲೀಸರು, ಅತ್ತಿಬೆಲೆ ಠಾಣಾ ವ್ಯಾಪ್ತಿಯ ಬಿದರಗುಪ್ಪೆ ಬಳಿ ಗುಂಡು ಹಾರಿಸಿ ಪೆಡ್ಲರ್‌ ಒಬ್ಬನನ್ನು ಮಂಗಳವಾರ ಬಂಧಿಸಿದ್ದಾರೆ. ಡ್ರಗ್ಸ್‌ ದಂಧೆಯಲ್ಲಿ ನಟ-ನಟಿಯರು, ರಾಜಕಾರಣಿಗಳ ಮಕ್ಕಳು, ಉದ್ಯಮಿಗಳ ಹೆಸರು ಕೇಳಿ ಬಂದ ನಂತರ ರಾಜ್ಯಾದ್ಯಂತ ಪೆಡ್ಲರ್‌ಗಳ ಹೆಡೆಮುರಿ ಕಟ್ಟುವಲ್ಲಿ ಪೊಲೀಸರು ನಿರತವಾಗಿದ್ದು, ಈ ಸಂದರ್ಭದಲ್ಲಿ ಗಾಂಜಾ ಸರಬರಾಜುದಾರನ ಮೇಲೆ ನಡೆದ ಮೊದಲ ಶೂಟೌಟ್‌ ಇದಾಗಿದೆ.   ಆನೇಕಲ್‌ ತಾಲೂಕಿನ ಅಡಿಗಾರ ಕಲ್ಲಹಳ್ಳಿಯ ಅಯೂಬ್‌ …

Read More »

ಇಂದಿನ ರಾಶಿ ಭವಿಷ್ಯ ಮತ್ತು ಪಂಚಾಂಗ (16-09-2020-ಬುಧವಾರ)

ಗುರುವಿನ ಸ್ಥಾನ ಅತ್ಯಂತ ಮಹತ್ವವೂ, ಜವಾಬ್ದಾರಿಯುತವೂ, ಕ್ಲಿಷ್ಟವೂ, ಜಟಿಲವೂ ಆದುದು. ಸಮಾಜ ಗುರುವಿನಿಂದ ಬಹಳಷ್ಟು ನಿರೀಕ್ಷಿಸುತ್ತದೆ. ಗುರು ದಾರಿ ತಪ್ಪಿದರೆ ಸಮಾಜ ನಾಶದತ್ತ ಸಾಗಿದಂತೆ. # ಪಂಚಾಂಗ : ಬುಧವಾರ, 16.09.2020 ಸೂರ್ಯ ಉದಯ ಬೆ.06.09 / ಸೂರ್ಯ ಅಸ್ತ ಸಂ.06.19 ಚಂದ್ರ ಉದಯ ರಾ.05.51 / ಚಂದ್ರ ಅಸ್ತ ಸಂ.05.44 ಶಾರ್ವರಿ ಸಂವತ್ಸರ / ದಕ್ಷಿಣಾಯಣ / ರ್ಷ ಋತು / ಭಾದ್ರಪದ ಮಾಸ / ಕೃಷ್ಣ ಪಕ್ಷ …

Read More »

ಬೀಚ್‍ನಲ್ಲಿ ಸೆಲ್ಫಿ ಕ್ಲಿಕ್ಕಿಸುವಾಗ ಇದ್ದಕ್ಕಿದ್ದಂತೆ ಸಮುದ್ರದಲ್ಲಿ ಕೊಚ್ಚೋಯ್ತು ಕಂದಮ್ಮ

ತಿರುವನಂತಪುರಂ: ಸೆಲ್ಫಿಯಿಂದಾಗಿ ಹಲವು ರೀತಿಯಲ್ಲಿ ಅನಾಹುತಗಳು ಸಂಭವಿಸಿರುವುದನ್ನು ಕಂಡಿದ್ದೇವೆ. ಅದೇ ರೀತಿಯ ಮನಕಲುಕುವ ದುರಂತ ಇದೀಗ ನಡೆದಿದ್ದು, ತಾಯಿ ತನ್ನ ಮೂರು ಮಕ್ಕಳೊಂದಿಗೆ ಸೆಲ್ಫಿ ಕ್ಲಿಕ್ಕಿಸಿಕೊಳ್ಳುವ ವೇಳೆ ಎರಡೂವರೆ ವರ್ಷದ ಕಂದಮ್ಮ ಸಮುದ್ರದ ಅಲೆಯಲ್ಲಿ ಕೊಚ್ಚಿ ಹೋಗಿರುವ ಆಘಾತಕಾರಿ ಘಟನೆ ನಡೆದಿದೆ. ಮದುವೆ ಸಮಾರಂಭಕ್ಕಾಗಿ ಅನಿತಮೋಲಿ ತಮ್ಮ ಎರಡು ಮಕ್ಕಳೊಂದಿಗೆ ಬಿನು ಅವರ ಮನೆಗೆ ಬಂದಿದ್ದಾರೆ. ಅಲ್ಲದೆ ತಮ್ಮ ಸಹೋದರನ ಮಗನೂ ಇದೇ ವೇಳೆ ವಿವಾಹ ಸಮಾರಂಭಕ್ಕಾಗಿ ಬಂದಿದ್ದ. ಈ …

Read More »

ಬೆಂಗಳೂರು ಗಲಭೆ ಪ್ರಕರಣ: ಆರೋಪಿಗಳಿಗಿಲ್ಲ ಜಾಮೀನು

ಬೆಂಗಳೂರು: ನಗರದ ಡಿ.ಜೆ ಹಳ್ಳಿ ಮತ್ತು ಕೆ.ಜೆ ಹಳ್ಳಿ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಯಲ್ಲಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆಗೆ ಬೆಂಕಿ ಇಡಲು ಪ್ರಚೋದಿಸಿದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಅರುಣ್‌ ಮನೋಜ್‌ ಸೇರಿ ಇತರೆ ಮೂವರು ಆರೋಪಿಗಳಿಗೆ ಜಾಮೀನು ನೀಡಲು ನಗರದ 66ನೇ ಸಿವಿಲ್‌ ಮತ್ತು ಸೆಷನ್ಸ್‌ ನ್ಯಾಯಾಲಯ ನಿರಾಕರಿಸಿದೆ. ಆರೋಪಿಗಳಾದ ಅರುಣ್‌ ಮನೋಜ್‌, ಸಂತೋಷ್‌ಕುಮಾರ್‌, ಲಿಯಾಖತ್‌ ಮತ್ತು ರೆಹಮಾನ್‌ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರು, ಘಟನೆಗೆ …

Read More »

ಕಚೇರಿ ಹಾನಿ: 2 ಕೋಟಿ ರೂ. ಪರಿಹಾರ ಕೇಳಿದ ಕಂಗನಾ

ಮುಂಬೈ: ಬಾಲಿವುಡ್ ನಟಿ ಕಂಗನಾ ರಣಾವತ್ ಅವರು ತಮ್ಮ ಕಚೇರಿ ಹಾನಿ ಮಾಡಿದ್ದಕ್ಕೆ 2 ಕೋಟಿ ರೂ. ಪರಿಹಾರ ಕೋರಿ ಮುಂಬೈ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದಾರೆ. ಕಳೆದ ಸೆಪ್ಟೆಂಬರ್ 9 ರಂದು ಮುಂಬೈ ಮುನ್ಸಿಪಲ್ ಕಾರ್ಪೊರೇಷನ್(ಬಿಎಂಸಿ) ಕಂಗನಾ ಅವರ ಮುಂಬೈನ ಬಾಂದ್ರಾದಲ್ಲಿರುವ ಪಾಲಿ ಹಿಲ್ ಬಂಗಲೆಯನ್ನು ಅಕ್ರಮ ಕಟ್ಟಡ ಎಂದು ಪರಿಗಣಿಸಿ ತೆರವು ಕಾರ್ಯಾಚರಣೆ ಮಾಡಿತ್ತು. ಕೋರ್ಟಿಗೆ ಸಲ್ಲಿಸಿರುವ ಅರ್ಜಿಯಲ್ಲಿ ಕಂಗನಾ ಅವರು, ಬಿಎಂಸಿ ಈಗಾಗಲೇ ಬಂಗಲೆಗೆ ಶೇ.40ರಷ್ಟು ಹಾನಿ …

Read More »

ದೇಶದಲ್ಲೀಗ 50 ಲಕ್ಷ ಕೊರೋನಾ ಸೋಂಕಿತರು!

ನವದೆಹಲಿ : ದಿನದಿಂದ ದಿನಕ್ಕೆ ಏರುಗತಿಯಲ್ಲಿ ಸಾಗುತ್ತಿರುವ ಕೊರೋನಾ ವೈರಸ್‌ ಪ್ರಕರಣಗಳು ಭಾರತದಲ್ಲಿ ಮಂಗಳವಾರ 50 ಲಕ್ಷದ ಗಡಿ ದಾಟಿವೆ. ಈ ಮೂಲಕ ಅಮೆರಿಕ ಬಳಿಕ 50 ಲಕ್ಷ ಪ್ರಕರಣಗಳು ದಾಖಲಾದ ಎರಡನೇ ದೇಶ ಭಾರತವಾಗಿದೆ. ಮಂಗಳವಾರ 90,417 ಕೊರೋನಾ ವೈರಸ್‌ ಪ್ರಕರಣಗಳು ದೇಶದಲ್ಲಿ ಪತ್ತೆಯಾಗಿದ್ದು, ಒಟ್ಟಾರೆ ಸೋಂಕಿತರ ಸಂಖ್ಯೆ 50.05 ಲಕ್ಷಕ್ಕೆ ಏರಿಕೆ ಆಗಿದೆ. 67.54 ಲಕ್ಷ ಸೋಂಕಿತರೊಂದಿಗೆ ಅಮೆರಿಕ ಅಗ್ರ ಸ್ಥಾನದಲ್ಲಿದೆ. ಇನ್ನು ಸೋಂಕಿನಿಂದ ಭಾರತದಲ್ಲಿ ಮಂಗಳವಾರ …

Read More »

ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ

ಕೋಲಾರ: ಹಳೆ ದ್ವೇಷದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು 2 ಎಕರೆ ಟೊಮೆಟೊ ತೋಟಕ್ಕೆ ಕಳೆ ನಾಶಕ ಸಿಂಪಡಣೆ ಮಾಡಿ ವಿಕೃತಿ ಮೆರೆದಿದ್ದಾರೆ. ಪರಿಣಾಮ ಲಕ್ಷಾಂತರ ರೂಪಾಯಿ ಮೌಲ್ಯದ ಫಸಲಿಗೆ ಬಂದಿದ್ದ ಟೊಮೆಟೊ ಬೆಳೆ ನಾಶವಾಗಿದೆ. ಜಿಲ್ಲೆಯ ಬಂಗಾರಪೇಟೆ ತಾಲೂಕಿನ ಎಳೆಸಂದ್ರ ಗ್ರಾಮದ ರೈತ ಅರ್ಜುನಪ್ಪ ಎಂಬವರ ಟೊಮೆಟೊ ತೋಟಕ್ಕೆ ಕಿಡಿಗೇಡಿಗಳು ಕಳೆದ ರಾತ್ರಿ ಕಳೆ ನಾಶಕ ಸಿಂಪಡಣೆ ಮಾಡಿದ್ದಾರೆ. ಪರಿಣಾಮ 2 ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಸುಮಾರು 10 ಸಾವಿರ ಟೊಮೆಟೊ …

Read More »

ಶಾರ್ಜಾ ತಲುಪಿದ ಬಿಸಿಸಿಐ ಬಿಗ್ ಬಾಸ್ ಸೌರವ್ ಗಂಗೂಲಿ

ದುಬೈ,  ಐಪಿಎಲ್ ಪಂದ್ಯಗಳು ಸುಲಲಿತವಾಗಿ ನಡೆಯುವ ನಿಟ್ಟಿನಲ್ಲಿ ಎಲ್ಲ ತಯಾರಿಗಳ ನಡುವೆಯೇ ನಾಲ್ಕು ದಿನ ಮುಂಚಿತವಾಗಿ ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಶಾರ್ಜಾಗೆ ಬಂದಿಳಿದಿದ್ದಾರೆ. ಭಾರತ ಕ್ರಿಕೆಟ್ ತಂಡದ ಆಟಗಾರನಾಗಿ, ನಾಯಕನಾಗಿ ಹಲವು ಕೀರ್ತಿ ಸಾಸಿದ ಮತ್ತು ಐಪಿಎಲ್‍ನಲ್ಲೂ ತನ್ನ ಖದರ್ ತೋರಿಸಿದ್ದ ಸೌರವ್ ಗಂಗೂಲಿ ಈಗ ಭಾರತ ಕ್ರಿಕೆಟ್‍ನ ಬಿಗ್‍ಬಾಸ್. ಮೈದಾನದಿಂದ ಹೊರಗೆ ಆಡಳಿತ ನಡೆಸುವ ಚಾಕಚಕ್ಯತೆಯನ್ನು ಕಲಿಯುತ್ತಿರುವ ಗಂಗೂಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಈಗ ತಮ್ಮ ಛಾಪು ಒತ್ತಲು …

Read More »

ಸಿಗರೇಟು ಸೇದುವ ಚಟಕ್ಕೆ ಜೀವ ಕಳೆದುಕೊಂಡ ಬಾಲಕರು..!

ಕುಣಿಗಲ್,  ಕದ್ದುಮುಚ್ಚಿ ಸಿಗರೇಟ್ ಸೇದಲು ಹೋದ ಬಾಲಕರ ಮೇಲೆ ಇಟ್ಟಿಗೆ ಗೂಡು ಕುಸಿದು ಸಾವನ್ನಪ್ಪಿರುವ ಘಟನೆ ಅಮೃತೂರು ಪೊಲೀಸ್ ಠಾಣಾವ್ಯಾಪ್ತಿಯ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ, ಸೂಯಾನ್(15) ಹಾಗೂ ಪರ್ವೆಜ್(17) ಮೃತಪಟ್ಟ ಬಾಲಕರು. ಗ್ರಾಮದ ಹೊರವಲಯಲ್ಲಿರುವ ಇಟ್ಟಿಗೆ ಗೂಡಿನಲ್ಲಿ ಯಾರಿಗೂ ಕಾಣದಂತೆ ಸಿಗರೇಟ್ ಸೇದಲು ಹೋಗಿದ್ದು, ಇಟ್ಟಿಗೆ ಗೂಡಿನೊಳಗೆ ಸಿಗರೇಟ್ ಸೇದುತ್ತಿದ್ದ ಸಂದರ್ಭದಲ್ಲಿ ಮಳೆಯಿಂದ ತೇವವಾಗಿದ್ದ ಉಳಿದ ಇಟ್ಟಿಗೆಗಳು ಬಾಲಕರ ಮೇಲೆ ಕುಸಿದು ಬಿದ್ದಿವೆ. ಪರಿಣಾಮ ಇಟ್ಟಿಗೆಗಳ ಮಧ್ಯೆ ಸಿಲುಕಿ ಉಸಿರು …

Read More »