Breaking News

Uncategorized

ಎಲ್ಲರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ.: ಯತ್ನಾಳ

ವಿಜಯಪುರ (ಜ. 10); ಸಚಿವ ಸಂಪುಟ ವಿಸ್ತರಣೆಯಾಗುತ್ತೋ? ಪುನಾರಚನೆಯಾಗುತ್ತೋ? ಗೊತ್ತಿಲ್ಲ. ಆದರೆ, ಮಹತ್ವದ ನಿರ್ಣಯ ಕೈಗೊಳ್ಳಲು ಅಮಿತ್ ಶಾ ಸಿಎಂ ಯಡಿಯೂರಪ್ಪ  ಅವರನ್ನು ದೆಹಲಿಗೆ ಕರೆಯಿಸಿದ್ದಾರೆ ಅನಿಸುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ‌ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ದೆಹಲಿಗೆ ತೆರಳಿದ್ದಾರೆ. ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ. ಪ್ರಧಾನಿ, ಗೃಹ ಸಚಿವರಿಗೆ ಅವರದ್ದೆ …

Read More »

ಬಿಜೆಪಿಯ ದರಿದ್ರ ಸರ್ಕಾರದ ಜನ ವಿರೋಧಿ ಕಾಯ್ದೆಗಳ ವಿರುದ್ಧ ಬೀದಿಗಿಳಿದು ಹೋರಾಟ; ಸಿದ್ದರಾಮಯ್ಯ ಕಿಡಿ

ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …

Read More »

ಅಕಾಲಿಕ ಮಳೆಯಿಂದ ಬೆಳೆ ನಾಶ; ಸಂಕಷ್ಟದ ಸುಳಿಯಲ್ಲಿ ಧಾರವಾಡದ ರೈತರು

ಧಾರವಾಡ (ಜ. 10): ಮುಂಗಾರು ಬೆಳೆಗಳು ಅತಿವೃಷ್ಟಿ-ನೆರೆ ಹಾವಳಿಗೆ ತುತ್ತಾದ ಕಾರಣ ನಷ್ಟದ ಸುಳಿಯಲ್ಲಿದ್ದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇದೀಗ ಮತ್ತೆ ವರುಣನ ಆರ್ಭಟಕ್ಕೆ ಹಿಂಗಾರು ಬೆಳೆಗಳು ಸಹ ಹಾನಿಯಾಗುತ್ತಿದೆ. ಮಳೆರಾಯನ ಚೆಲ್ಲಾಟದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೌದು, ಧಾರವಾಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಅಕಾಲಿಕ ಮಳೆಯಿಂದ ಹಿಂಗಾರಿನ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಜಿಲ್ಲೆಯ ರೈತ ಸಮೂಹ ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. …

Read More »

2 ತಿಂಗಳೊಳಗೆ ನೆಲಮಂಗಲ ನಗರಸಭೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ

ನೆಲಮಂಗಲ (ಜ. 10): ಎರಡು ತಿಂಗಳಲ್ಲಿ ನೆಲಮಂಗಲ ನಗರಸಭೆ ಚುನಾವಣೆ ನಡೆಸುವಂತೆ ಹೈ ಕೋರ್ಟ್‌ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ದೇವದಾಸ್ ಅದೇಶ ನೀಡಿದ್ದಾರೆ. ನಗರಸಭೆ ಚುನಾವಣೆ ಕುರಿತಂತೆ ನೆಲಮಂಗಲ ನಗರಸಭೆಗೆ ನೂತನವಾಗಿ ಸೇರ್ಪಡೆಗೊಂಡಿರುವ ಅರಿಶಿನಕುಂಟೆ, ವಾಜರಹಳ್ಳಿ, ವಿಶ್ವೇಶ್ವರಪುರ, ಬಸವನಹಳ್ಳಿ ಗ್ರಾಮ ಪಂಚಾಯ್ತಿಗಳು 108 ಜನ ಮಾಜಿ ಸದಸ್ಯರ ಪರವಾಗಿ ಕಲ್ಪನಾ ಮಂಜುನಾಥ್ ಹೈ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ …

Read More »

ಬಿಎಸ್​ವೈ ಅವರನ್ನು ದೆಹಲಿಗೆ ಬರುವಂತೆ ಬುಲಾವ್​ ನೀಡಿದ್ದು, ರಾಜ್ಯ ಸಂಪುಟ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.

ನವದೆಹಲಿ; ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಳೆದ ಒಂದೂವರೆ ವರ್ಷದಿಂದ ಮುಂದೂಡಲ್ಪಡುತ್ತಲೇ ಇದೆ. ಒಂದೆಡೆ ಸಚಿವಾಕಾಂಕ್ಷಿಗಳ ಸಂಖ್ಯೆ ಏರುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಹೈಕಮಾಂಡ್​ ಈವರೆಗೆ ಸಂಪುಟವನ್ನು ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್.​ …

Read More »

ಸಚಿವರಿಗೆ ಸುಳ್ಳು ಮಾಹಿತಿ ಕೊಟ್ಟ ಎಂಇಎಸ್ ಮುಖಂಡನಿಗೆ ಶಾಸಕ ಅಭಯ ಪಾಟೀಲ್ ಹಿಗ್ಗಾಮುಗ್ಗಾ ತರಾಟೆ

ಬೆಳಗಾವಿ(ಜ.9): ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಂದು ಬಿಜೆಪಿ ಶಾಸಕ ಅಭಯ ಪಾಟೀಲ್ ಎಂಇಎಸ್ ಮಾಜಿ ಮೇಯರ್ ಮಧ್ಯೆ ವಾಗ್ವಾದ ನಡೆಯಿತು. ಎಂಇಎಸ್ ಮಾಜಿ ಮೇಯರ್ ಸುಳ್ಳು ಆರೋಪಕ್ಕೆ ಶಾಸಕ ಅಭಯ ಪಾಟೀಲ್ ಫುಲ್ ಗರ್ಂ ಆದರು. ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸಮ್ಮುಖದಲ್ಲಿ ವಾಗ್ವಾದ ನಡೆಯಿತು. ಸ್ಮಾರ್ಟ್ ಸಿಟಿ ಕಾಮಗಾರಿ ಸರಿಯಾಗಿಲ್ಲ ಎಂದು ಮಾಜಿ ಎಂಇಎಸ್ ಮೇಯರ್ ನಾಗೇಶ ಸಾತೇರಿ ಸಚಿವರ ಮುಂದೆ ಆರೋಪ …

Read More »

ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ 2020ರ ಜನೆವರಿ 10ರಂದು ಅಧಿಕಾರ ವಹಿಸಿಕೊಂಡ ಘೂಳಪ್ಪ ಹೊಸಮನಿ ಮತ್ತು ಆಯುಕ್ತರಾಗಿ ಕೆಲಸ ನಿರ್ವಹಿಸುತ್ತಿರುವ ಕ್ರಿಯಾಶೀಲ ಅಧಿಕಾರಿ ಪ್ರೀತಂ ನಸ್ಲಾಪುರೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಸ್ಪರ್ಷ ನೀಡಿದ್ದಾರೆ.

ಬೆಳಗಾವಿ : ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ 2020ರ ಜನೆವರಿ 10ರಂದು ಅಧಿಕಾರ ವಹಿಸಿಕೊಂಡ ಘೂಳಪ್ಪ ಹೊಸಮನಿ ಮತ್ತು ಆಯುಕ್ತರಾಗಿ ಕೆಲಸ ನಿರ್ವಹಿಸುತ್ತಿರುವ ಕ್ರಿಯಾಶೀಲ ಅಧಿಕಾರಿ ಪ್ರೀತಂ ನಸ್ಲಾಪುರೆ ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಹೊಸ ಸ್ಪರ್ಷ ನೀಡಿದ್ದಾರೆ. ನಗರಾಭಿವೃದ್ಧಿ ಪ್ರಾಧಿಕಾರದ ಅವಶ್ಯಕತೆ ಏನು? ಕೇವಲ ಸಿಬ್ಬಂದಿಗೆ ವೇತನ ನೀಡುವುದಷ್ಟೇ ಇದರ ಕೆಲಸವೇನೋ ಎನ್ನುವ ಸ್ಥಿತಿಯಲ್ಲಿದ್ದ ಸಂದರ್ಭದಲ್ಲಿ ಈ ಇಬ್ಬರ ಜೋಡಿ ಬುಡಾಕ್ಕೆ ಜೀವಕಳೆ ತುಂಬಿದೆ.  ಹೊಸ ಬಡಾವಣೆ ನಿರ್ಮಾಣಕ್ಕೆ ಯೋಜನೆ, ಅನೇಕ ಹೊಸ …

Read More »

ಸಿನಿಮಾದಲ್ಲಿ ನಟಿಸಲೆಂದು ಬಂದಿದ್ದ ಪುರುಷ ಮಾಡೆಲ್‍ ಮೇಲೆ ಗ್ಯಾಂಗ್‍ರೇಪ್

ಮುಂಬೈ: ಸಿನಿಮಾದಲ್ಲಿ ನಟಿಸಲೆಂದು ಗುಜರಾತ್‍ನಿಂದ ನಗರಕ್ಕೆ ಬಂದಿದ್ದ ಪುರುಷ ಮಾಡೆಲ್‍ನ್ನು 4 ಜನ ಯುವಕರು ರೇಪ್ ಮಾಡಿರುವ ಘಟನೆ ವರದಿಯಾಗಿದೆ. ಮಾಡೆಲ್ ಆಗಿದ್ದ 19 ವರ್ಷದ ಯುವಕ ತನ್ನ ಸಂಬಂಧಿಕರೊಂದಿಗೆ ಥಾಣೆಯಲ್ಲಿ ವಾಸಿಸುತ್ತಿದ್ದ. ಆ ಸಂದರ್ಭ ಸಾಮಾಜಿಕ ಜಾಲತಾಣದಲ್ಲಿ ಪುನೀತ್ ಶುಕ್ಲಾ ಎಂಬಾತಾನೊಂದಿಗೆ ಪರಿಚಯವಾಗಿತ್ತು. ಇವನನ್ನು ಭೇಟಿ ಮಾಡಿದ್ದ. ಕೆಲದಿನಗಳ ನಂತರ ಶುಕ್ಲಾ ತನ್ನ ಇತರ ಸ್ನೇಹಿತರನ್ನು ಕರೆದುಕೊಂಡು ಬಂದು ಮಾಡೆಲ್‍ನ್ನು ಮತ್ತೊಮ್ಮೆ ಕರೆಸಿಕೊಂಡಿದ್ದ ಎಂದು ವರದಿಯಾಗಿತ್ತು. ಶುಕ್ಲಾ ಮತ್ತು …

Read More »

ಜನವರಿ 21 ರಿಂದ ಹುಬ್ಬಳ್ಳಿಯಿಂದ ಗೋವಾ ಮತ್ತು ಕೊಚ್ಚಿಗೆ ನೇರ ವಿಮಾನಯಾನ ಆರಂಭ

[ ಹುಬ್ಬಳ್ಳಿ: ಜನವರಿ 21 ರಿಂದ ಹುಬ್ಬಳ್ಳಿಯಿಂದ ಗೋವಾ ಮತ್ತು ಕೊಚ್ಚಿಗೆ ನೇರ ವಿಮಾನಯಾನ ಆರಂಭಗೊಳ್ಳಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ಇಂಡಿಗೋ ಸಂಸ್ಥೆ ವಿಮಾನಯಾನದ ಮೂಲಕ ಹುಬ್ಬಳ್ಳಿಯಿಂದ ಮತ್ತೆರಡು ನಗರಗಳ ಜೊತೆ ನೇರ ಸಂಪರ್ಕ ಬೆಳೆಸಲಿದೆ. ಹುಬ್ಬಳ್ಳಿ-ಗೋವಾ ಮತ್ತು ಹುಬ್ಬಳ್ಳಿ-ಕೊಚ್ಚಿ ನಗರಗಳಿಗೆ ನೇರ ವಿಮಾನ ಸೇವೆಯನ್ನು ಜ. 21 ರಿಂದ ಪುನರಾರಂಭಿಸಲಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಸಾಮಾಜಿಕ ಜಾಲತಾಣದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಸಮಯ : …

Read More »

ಕಪಿಲ ಶರ್ಮಾಗೆ ರಷ್ಮೀಕ್ ನೋಡುವ ಆಸೆಯಂತೆ

ಮುಂಬೈ: ನ್ಯಾಷನಲ್ ಕ್ರಶ್ ಆಗಿರೋ ಕೂರ್ಗದ ಚೆಲುವೆ ರಶ್ಮಿಕಾ ಮಂದಣ್ಣರನ್ನ ನೋಡುವ ಆಸೆಯನ್ನ ಬಾಲಿವುಡ್ ನಟ, ಕಾಮಿಡಿಯನ್ ಕಪಿಲ್ ಶರ್ಮಾ ಹೊರ ಹಾಕಿದ್ದಾರೆ. ದಕ್ಷಿಣ ಭಾರತದ ಬೇಡಿಕೆಯ ನಟಿಯಲ್ಲಿ ಒಬ್ಬರಾಗಿರೋ ರಶ್ಮಿಕಾ ಮಂದಣ್ಣ ಸಾಲು ಸಾಲು ಸೂಪರ್ ಹಿಟ್ ಸಿನಿಮಾ ನೀಡಿ ತಮ್ಮ ಪ್ರತಿಭೆಯನ್ನ ಸಾಬೀತು ಮಾಡಿದ್ದಾರೆ. ಟಾಲಿವುಡ್ ಬಳಿಕ ಬಿಟೌನ್ ನಲ್ಲಿಯೂ ರಶ್ಮಿಕಾ ಸದ್ದು ಮಾಡುತ್ತಿದ್ದಾರೆ. ಮಿಶನ್ ಮಜ್ನು ಮೂಲಕ ಬಾಲಿವುಡ್ ಅಂಗಳಕ್ಕೆ ಪಾದಾರ್ಪಣೆ ಮಾಡಿರೋ ರಶ್ಮಿಕಾ ಮಂದಣ್ಣ …

Read More »