Breaking News

Uncategorized

ಸರಕಾರದ ಮಟ್ಟದಲ್ಲಿ ಹೋರಾಟಮಾಡಿ ಅನುದಾನ ತರುತ್ತಿದ್ದೇನೆ ​: ಲಕ್ಷ್ಮಿ ಹೆಬ್ಬಾಳಕರ್

ಬೆಳಗಾವಿ​ –  ಬೆಳಗಾವಿ ಗ್ರಾಮೀಣ ಕ್ಷೇತ್ರಕ್ಕಿರುವ ಹಿಂದುಳಿದ ಕ್ಷೇತ್ರ ಎನ್ನುವ ಹಣೆಪಟ್ಟಿಯನ್ನು ತೆಗೆದುಹಾಕುವುದೇ ನನ್ನ ಸಂಕಲ್ಪ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಹೇಳಿದ್ದಾರೆ. ಬಾಳೇಕುಂದ್ರಿ ಕೆ. ಎಚ್ ಗ್ರಾಮದ ಅಂಬೇಡ್ಕರ್ ಗಲ್ಲಿಯಲ್ಲಿ ಶಾಸಕರ ನಿಧಿಯ (MLA Fund) ವತಿಯಿಂದ ​8 ಲಕ್ಷ ರೂ,ಗಳ ವೆಚ್ಚದಲ್ಲಿ ರಸ್ತೆಯ ಎರ​ಡೂ​​ ಬದಿಗೆ ಕಾಂಕ್ರೀಟ್ ಗಟಾರ್ ನಿರ್ಮಾಣದ ಕಾಮಗಾರಿಗಳಿಗೆ ಅಧಿಕೃತವಾಗಿ ಚಾಲನೆಯನ್ನು ​ನೀಡಿ ಅವರು ಮಾತನಾಡಿದರು.  ಬೆಳಗಾವಿ ಗ್ರಾಮೀಣ ಕ್ಷೇತ್ರ ಹಿಂದಿನಿಂದಲೂ ಅಭಿವೃದ್ಧಿ ವಂಚಿತವಾಗಿದೆ. ಬೆಳಗಾವಿ ನಗರದ …

Read More »

ಫೆ.23ರಂದು ಖಾಸಗಿ ಶಿಕ್ಷಣ ಸಂಸ್ಥೆಗಳಿಂದ ಬೃಹತ್ ಪ್ರತಿಭಟನೆ

ಬೆಂಗಳೂರು(ಫೆ.10): ಖಾಸಗಿ ಶಿಕ್ಷಣ ಸಂಸ್ಥೆಗಳ ಹೋರಾಟ ಸದ್ಯಕ್ಕೆ ಮುಗಿಯುವಂತೆ ಕಾಣುತ್ತಿಲ್ಲ.  ಮತ್ತೆ  ಸರ್ಕಾರದ ವಿರುದ್ಧ ತೊಡೆ ತಟ್ಟಲು ಖಾಸಗಿ ಶಾಲೆಗಳ ಒಕ್ಕೂಟ ನಿರ್ಧರಿಸಿದೆ. ಶುಲ್ಕ ಕಡಿತ ವಿಚಾರದಲ್ಲಿ ಸ್ಪೋಟ ಭುಗಿಲೆದ್ದಿದ್ದು, ಸರ್ಕಾರದ ವಿರುದ್ಧ ಖಾಸಗಿ ಶಾಲೆಗಳ ಒಕ್ಕೂಟಗಳು ಕಿಡಿಕಾರಿವೆ. ಶುಲ್ಕ ಕಡಿತ ಪುನರ್ ಪರಿಶೀಲನೆ ಮಾಡಿ ಎಂದು ಖಾಸಗಿ ಶಿಕ್ಷಣ ಸಂಸ್ಥೆಗಳು ಒತ್ತಾಯಿಸಿವೆ.  ಕ್ಯಾಮ್ಸ್, ಮಿಕ್ಸಾ, ಮಾಸ್ , ಕುಸಮ, ಸಿಬಿಎಸ್ ಇ ಹಾಗೂ ಐಸಿಎಸ್ಸಿ ಇ ಒಕ್ಕೂಟಗಳು ಪ್ರತಿಭಟನೆಗೆ …

Read More »

ಮಠದ ಜಾಗದಲ್ಲಿ ಕೆಎಲ್ಇ ಮೆಡಿಕಲ್ ಕಾಲೇಜು ನಿರ್ಮಾಣವಾಗಬೇಕೆನ್ನುವುದು ಹಿಂದಿನ ಶ್ರೀಗಳ ಕನಸಾಗಿತ್ತು.: ಸಂಕೇಶ್ವರ

ಹುಬ್ಬಳ್ಳಿ: ಮೂರು ಸಾವಿರ ಮಠದ ವಿವಾದ ಮತ್ತೆ ತಾರಕಕ್ಕೇರಿದ್ದು, ಈ ಕುರಿತು ಮಾತನಾಡಿರುವ ಉದ್ಯಮಿ ವಿಜಯ ಸಂಕೇಶ್ವರ್, ಮೂಜಗು ಶ್ರೀಗಳು ಸಾಲದಿಂದ ಅಳುತ್ತಿದ್ದಾರೆ. ಮಠದ ಈಗಿನ ಪೀಠಾಧಿಪತಿಗಳಿಗೆ ಮಠವನ್ನು ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ಹಾಗಾಗಿ ಇಬ್ಬರು ಸ್ವಾಮೀಜಿಗಳು ಕುಳಿತು ಸೌಹಾರ್ದಯುತವಾಗಿ ಸಮಸ್ಯೆ ಇತ್ಯರ್ಥ ಮಾಡಬೇಕು ಎಂದಿದ್ದಾರೆ. ನಾನು ಉನ್ನತ ಸಮಿತಿಯಲ್ಲಿದ್ದಾಗ ಮಠದ ಅಭಿವೃದ್ಧಿ ನಿಟ್ಟಿನಲ್ಲಿ ಸಭೆ ಕರೆಯುವಂತೆ ಸಾಕಷ್ಟು ಬಾರಿ ಹೇಳಿದ್ದೆ. ಆದರೆ ಯಾರೊಬ್ಬರೂ ಗೋಜಿಗೆ ಹೋಗಿಲ್ಲ. ಹೀಗಾಗಿ ಎಲ್ಲಿ ದುಡ್ದಿನ …

Read More »

ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳ

ಬೆಂಗಳೂರು: ಪೆಟ್ರೋಲ್ ದರದಲ್ಲಿ ಇಂದೂ ಕೂಡ ಹೆಚ್ಚಳವಾಗಿದ್ದು, ಪೆಟ್ರೋಲ್ ದರ ಲೀಟರ್ ಗೆ 70 ಪೈಸೆ ಹಾಗೂ ಡೀಸೆಲ್ ಲೀಟರ್ ಗೆ 27 ಪೈಸೆ ಏರಿಕೆಯಾಗಿದೆ. ರಾಜಧಾನಿ ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಪ್ರತಿ ಲೀಟರ್ ಗೆ 90.53 ರೂ ಹಾಗೂ ಡೀಸೆಲ್ ಲೀಟರ್ ಗೆ 82.40 ರೂ ಆಗಿದೆ. ದೆಹಲಿಯಲ್ಲಿ ಪೆಟ್ರೋಲ್ ಲೀಟರ್ ಗೆ 87.60 ಹಾಗೂ ಡೀಸೆಲ್ 77.73 ರೂ ಆಗಿದೆ. ಮುಂಬೈ ನಲ್ಲಿ ಪ್ರತಿ ಲೀಟರ್ ಪೆಟ್ರೋಲ್ …

Read More »

ಬೆಲೆ ಏರಿಕೆ ಖಂಡಿಸಿ ಅಕ್ಕಿ ಮುಕ್ಕಿ ಪ್ರತಿಭಟನೆ

ಮಂಡ್ಯ: ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆ ಆಗಿದೆ ಎಂದು ಆರೋಪಿಸಿ ಜಿಲ್ಲಾ ಕಾಂಗ್ರೆಸ್ ಕಾರ್ಮಿಕ ವಿಭಾಗದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಎದುರು ಅಕ್ಕಿ ಮುಕ್ಕುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿದ ಕಾರ್ಯಕರ್ತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ನಂತರ ಒಂದು ಕೈಯಲ್ಲಿ ಅಕ್ಕಿ ಮತ್ತು ಮತ್ತೊಂದು ಕೈಯಲ್ಲಿ ನೀರಿನ ಬಾಟಲಿಯಿಂದ ನೀರು ಕುಡಿದು …

Read More »

ಎಲ್ಲಾ ಉದ್ಯೋಗಿಗಳಿಗೆ ವಾರಕ್ಕೆ ನಾಲ್ಕು ದಿನಗಳ ಕೆಲಸ ಮತ್ತು ಮೂರು ದಿನಗಳ ವೇತನ ಸಹಿತ ರಜೆ‌ ?

ಹೊಸದಿಲ್ಲಿ, ಫೆಬ್ರವರಿ10: ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಹೊಸ ಕಾರ್ಮಿಕ ಸಂಹಿತೆಗಳನ್ನು ಹೊರತರುವ ನಿರೀಕ್ಷೆಯಿದೆ. ಇದು ಕಂಪೆನಿಗಳಿಗೆ ವಾರದಲ್ಲಿ ನಾಲ್ಕು ಕೆಲಸದ ದಿನಗಳ ಜೊತೆಗೆ ರಾಜ್ಯ ವಿಮೆಯ ಮೂಲಕ ಕಾರ್ಮಿಕರಿಗೆ ಉಚಿತ ವೈದ್ಯಕೀಯ ತಪಾಸಣೆಗಳನ್ನು ಒದಗಿಸುತ್ತದೆ. ಆದರೆ, ವಾರದಲ್ಲಿ 48 ಗಂಟೆಗಳ ಕಾಲ ಕೆಲಸದ ಅವಧಿಯನ್ನು ಒದಗಿಸುತ್ತದೆ. ಕಾರ್ಮಿಕ ಮತ್ತು ಉದ್ಯೋಗ ಕಾರ್ಯದರ್ಶಿ ಅಪೂರ್ವಾ ಚಂದ್ರ ಅವರು, ದಿನಕ್ಕೆ 12 ಗಂಟೆಗಳ ಕೆಲಸದ ಅವಧಿ ಮತ್ತು ಮೂರು ದಿನಗಳ …

Read More »

ಕೋಟಿ ಚೆನ್ನಯರ ಅವಹೇಳನ| ಗರಡಿಯಲ್ಲಿ ಕ್ಷಮೆಯಾಚಿಸಿದ ಜಗದೀಶ್ ಅಧಿಕಾರಿ

ಮೂಡುಬಿದಿರೆ: ಬಿಲ್ಲವರ ಆರಾಧ್ಯ ದೈವಗಳಾದ ಕೋಟಿ ಚೆನ್ನಯರ ಬಗ್ಗೆ ನಿಂದನಾತ್ಮಕ ಹೇಳಿಕೆ ನೀಡಿ ವಿವಾದಕ್ಕೆ ಕಾರಣವಾಗಿದ್ದ ಬಿಜೆಪಿ ಜಿಲ್ಲಾ ಘಟಕದ ಉಪಾಧ್ಯಕ್ಷ ಜಗದೀಶ್ ಅಧಿಕಾರಿ, ಮಂಗಳವಾರ ಕೆಲ್ಲಪುತ್ತಿಗೆಯ ಪುರಾತನ ಕ್ಷೇತ್ರ ಭೂತರಾಜಗುಡ್ಡೆಯ ಧರ್ಮರಸು ದೈವ, ಕುಕ್ಕಿನಂತಾಯ, ಕೊಡಮಣಿತ್ತಾಯ, ಬ್ರಹ್ಮ ಬೈದರ್ಕಳ ಗರಡಿಗೆ ಭೇಟಿ ನೀಡಿ, ತಪ್ಪು ಕಾಣಿಕೆ ಸಲ್ಲಿಸಿ, ಕ್ಷಮೆಯಾಚಿಸಿದರು. ‘ನನ್ನಿಂದಾದ ತಪ್ಪಿಗೆ ಕೋಟಿ ಚೆನ್ನಯರ ಗರಡಿಯಲ್ಲಿ ಕ್ಷಮೆಯಾಚಿಸಿ, ತಪ್ಪು ಕಾಣಿಕೆ ಸಲ್ಲಿಸಿ ವಿವಾದಗಳಿಗೆ ಇತಿಶ್ರೀ ನೀಡಲು ನಿರ್ಧರಿಸಿದ್ದೇನೆ. ಕಾಂಗ್ರೆಸ್ …

Read More »

ಕೃಷಿ ಕಾಯ್ದೆ ವಿರುದ್ಧ ನಕಲಿ ರೈತರ ಹೋರಾಟ

ಶಿವಮೊಗ್ಗ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವುದು ನಕಲಿ ರೈತರ ಹೋರಾಟ. ವಿದೇಶಿ ಶಕ್ತಿಗಳ ಕಪಿಮುಷ್ಠಿಯಲ್ಲಿ ರೈತ ಮುಖಂಡರು ಸಿಲುಕಿದ್ದಾರೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಆರೋಪಿಸಿದರು. ನಿಜವಾದ ರೈತರು ಹೋರಾಟ ನಡೆಸುತ್ತಿಲ್ಲ. ಕೆಲವು ಹಿತಾಸಕ್ತಿಗಳು ರೈತರ ದಾರಿ ತಪ್ಪಿಸುತ್ತಿವೆ. ಕೃಷಿ ಕಾಯ್ದೆಯಿಂದ ರೈತರಿಗೆ ಆಗುವ ಅನುಕೂಲಗಳ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ರೈತರ ಗೊಂದಲಗಳನ್ನು ನಿವಾರಿಸಿದ್ದಾರೆ. ಕನಿಷ್ಠ ಬೆಂಬಲ ಬೆಲೆ ಮುಂದುವರಿಸುವ ಭರವಸೆ ನೀಡಿದ್ದಾರೆ …

Read More »

ದಲಿತರು, ಅಲ್ಪ ಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ; ಸಿದ್ದರಾಮಯ್ಯ ಎಚ್ಚರಿಕೆ

ಮೈಸೂರು (ಫೆ. 10): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ …

Read More »

ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ‌.

ಬೆಳಗಾವಿ (ಫೆ. 9); ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ‌. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ …

Read More »