Breaking News

Uncategorized

ಪೌರತ್ವ ತಿದ್ದುಪಡಿ ನಿಯಮಗಳು ಜುಲೈ ಒಳಗೆ ಸಿದ್ಧವಾಗಲಿವೆ: ಕೇಂದ್ರ ಸರ್ಕಾರ

ನವದೆಹಲಿ,ಫೆಬ್ರವರಿ 02: ಪೌರತ್ವ ತಿದ್ದುಪಡಿ ಕಾಯ್ದೆಯಲ್ಲಿನ ನಿಯಮಗಳು ಜುಲೈ ಒಳಗೆ ಸಿದ್ಧವಾಗಲಿವೆ ಎಂದು ಕೇಂದ್ರ ಸರ್ಕಾರ ಲೋಕಸಭೆಗೆ ಮಾಹಿತಿ ನೀಡಿದೆ. ಬಾಂಗ್ಲಾದೇಶ,ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನದಲ್ಲಿ ಕಿರುಕುಳಕ್ಕೊಳಗಾದ ಮುಸ್ಲಿಮೇತರ ಅಲ್ಪ ಸಂಖ್ಯಾತರಿಗೆ ಹಿಂದೂ, ಸಿಖ್,ಜೈನ,ಬೌದ್ಧ,ಪಾರ್ಸಿ ಮತ್ತು ಕ್ರೈಸ್ತರಿಗೆ ಭಾರತೀಯ ಪೌರತ್ವ ನೀಡಲು ಅನುಕೂಲವಾಗುವ ಸಿಎಎಯನ್ನು 2019ರಡಿಸೆಂಬರ್‌ನಲ್ಲಿ ಸಂಸತ್ ಅಂಗೀಕರಿಸಿತ್ತು. 2019ರ ನಾಗರಿಕ ಕಾಯ್ದೆಯನ್ನು 2019ರ ಡಿಸೆಂಬರ್ ರಂದು ಅಧಿಸೂಚಿಸಲಾಗಿದೆ. 2020ರ ಜನವರಿ 10ರಿಂದ ಕಾಯ್ದೆ ಜಾರಿಗೆ ಬಂದಿದೆ.ನಿಯಮಗಳನ್ನು ರೂಪಿಸಲು ಲೋಕಸಭೆ ಮತ್ತು …

Read More »

ರೈತ ಹೋರಾಟ: ಹರಿಯಾಣದ 7 ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆ ಸ್ಥಗಿತ

ನವದೆಹಲಿ, ಫೆಬ್ರವರಿ.03: ವಿವಾದಿತ ಕೃಷಿ ಕಾಯ್ದೆಗಳ ವಿರುದ್ಧ ನವದೆಹಲಿಯಲ್ಲಿ ನಡೆದ ಹಿಂಸಾಚಾರದ ಹಿನ್ನೆಲೆ ಹರಿಯಾಣ ಸರ್ಕಾರವು ಏಳು ಜಿಲ್ಲೆಗಳಲ್ಲಿ ಇಂಟರ್ ನೆಟ್ ಸೇವೆಗಳ ಮೇಲೆ ವಿಧಿಸಿದ ನಿರ್ಬಂಧವನ್ನು ಫೆಬ್ರವರಿ.3ರ ಸಂಜೆ 5 ಗಂಟೆವರೆಗೂ ವಿಸ್ತರಿಸಿದೆ. ಹರಿಯಾಣದ ಕೈಥಲ್, ಪಾಣಿಪತ್, ಜಿಂದ್, ರೋಹ್ಟಕ್, ಚರ್ಖಿ ದಾದ್ರಿ, ಸೋನಿಪತ್ ಮತ್ತು ಝಜ್ಜರ್ ಜಿಲ್ಲೆಗಳಲ್ಲಿ ದೂರವಾಣಿ ಕರೆಯನ್ನು ಹೊರತುಪಡಿಸಿದಂತೆ ಇಂಟರ್ ನೆಟ್, ಎಸ್‌ಎಂಎಸ್ ಮತ್ತು ಡೋಂಗಲ್ ಸೇವೆಯನ್ನು ನಿರ್ಬಂಧಿಸಲಾಗಿದೆ. ಕೇಂದ್ರ ಸರ್ಕಾರ ಜಾರಿಗೊಳಿಸಿರುವ ರೈತರ …

Read More »

ಬಿಡಿಎನಲ್ಲಿ ಊಹಿಸಲಾಗದಷ್ಟು ಹಗರಣ, ಮೂರ್ನಾಲ್ಕು ತಿಂಗಳಲ್ಲಿ ಎಲವೂ ಬಹಿರಂಗ: B.S.Y.

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದಲ್ಲಿ ಊಹೆ ಮಾಡಲಾಗದಷ್ಟು ದೊಡ್ಡ ಹಗರಣ ನಡೆದಿದೆ. ಇನ್ನು ಮೂರುನಾಲ್ಕು ತಿಂಗಳಲ್ಲಿ ಅದೆಲ್ಲವನ್ನೂ ಹೊರಹಾಕಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಮಂಗಳವಾರ ವಿಧಾನಸಭೆಗೆ ಭರವಸೆ ನೀಡಿದ್ದಾರೆ. ವಿಧಾನಸಭೆಯಲ್ಲಿ ರಾಜ್ಯಪಾಲರ ಭಾಷಣದ ಮೇಲಿನ ವಂದನಾರ್ಪಣೆ ಚೆರ್ಚೆಯ ವೇಳೆ ಬಿಡಿಎ ವಿಚಾರ ಪ್ರಸ್ತಾಪವಾದಾಗ ಸಿಎಂ ಯಡಿಯೂರಪ್ಪ ಅವರು ಈ ಭರವಸೆ ನೀಡಿದ್ದಾರೆ. ನಾನೇ ಖುದ್ದಾಗಿ ಹೋಗಿ ಬಿಡಿಎ ಪ್ರಗತಿ ಪರಿಶೀಲನೆ ಸಭೆ ನಡೆಸಿದ್ದು, ಎರಡು …

Read More »

ಗ್ರಾ.ಪಂ: ಸಾಮಾನ್ಯ ಸ್ಥಾನದವರಿಗೂ ಮೀಸಲಾತಿ ಸ್ಥಾನಕ್ಕೆ ಸ್ಪರ್ಧಿಸಲು ಅವಕಾಶ!

ಪುತ್ತೂರು: ಸಾಮಾನ್ಯ ಕ್ಷೇತ್ರದಲ್ಲಿ ಆಯ್ಕೆಯಾಗಿರುವ ಅಭ್ಯರ್ಥಿಗಳು ಕೂಡ ಗ್ರಾ.ಪಂ. ಅಧ್ಯಕ್ಷ- ಉಪಾಧ್ಯಕ್ಷ ಚುನಾವಣೆಯಲ್ಲಿ ಅವರ ವರ್ಗಕ್ಕೆ ಮೀಸಲಿಟ್ಟ ಸ್ಥಾನಕ್ಕೆ ಸ್ಪರ್ಧಿಸಲು ಅರ್ಹತೆ ಹೊಂದಿದ್ದಾರೆ! ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿಯಡಿ ಸ್ಪರ್ಧಿಸಬಹುದಾದ ಅರ್ಹತೆಗಳ ಬಗ್ಗೆ ಮೂಡಿರುವ ಗೊಂದಲದ ಬಗ್ಗೆ ರಾಜ್ಯ ಚುನಾವಣ ಆಯೋಗ ಸುತ್ತೋಲೆ ಹೊರಡಿಸುವ ಮೂಲಕ ಗೊಂದಲಕ್ಕೆ ತೆರೆ ಎಳೆದಿದೆ. ಗ್ರಾ.ಪಂ. ಅಧ್ಯಕ್ಷ-ಉಪಾಧ್ಯಕ್ಷತೆ ಸಾಮಾನ್ಯ ಕ್ಷೇತ್ರದಲ್ಲಿ ಸ್ಪರ್ಧಿಸಿ ಗೆದ್ದಿರುವ ಹಿಂದುಳಿದ ವರ್ಗ ಎ, ಬಿ, ಎಸ್‌ಸಿ, ಎಸ್‌ಟಿ ಪುರುಷ ಅಥವಾ …

Read More »

ಅಪೌಷ್ಟಿಕತೆ ಮುಕ್ತ ಬೆಳಗಾವಿ ಪೋಷಣ ಅಭಿಯಾನ ಯೋಜನೆಯ ಪ್ರಗತಿ ಪರಿಶೀಲನೆ

ಬೆಳಗಾವಿ  : ರಾಜ್ಯದಲ್ಲಿ ೨೦೨೦ ಪೋಷಣಾ ಅಭಿಯಾನ ಯೋಜನೆಯಲ್ಲಿ ಬೆಳಗಾವಿ ಜಿಲ್ಲೆಯು ಮೊದಲ ಸ್ಥಾನದಲ್ಲಿದೆ ಎಂಬುದು ಹೆಮ್ಮೆಯ ವಿಷಯ. ಅಪೌಷ್ಟಿಕತೆ ಮುಕ್ತ ಬೆಳಗಾವಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಮಾಡಿದ ಕಾರ್ಯ ಶ್ಲಾಘನೀಯ ಎಂದು ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ(ಫೆ.೨) ನಡೆದ ಎಲ್ಲಾ ಶಕ್ತಿ ಕೇಂದ್ರ ಯೋಜನೆ ಟ್ರಾನ್ಸ್ಜೆಂಡರ್ ರವರ ಸಮನ್ವಯ ಮತ್ತು ಉಸ್ತುವಾರಿ ಸಮಿತಿ, ಪ್ರಧಾನ ಮಂತ್ರಿ ಯೋಜನೆ ಹಾಗೂ ಪೋಷಣ ಅಭಿಯಾನ ಯೋಜನೆಯ …

Read More »

ಬೆಂಗಳೂರು ತಲುಪಿದ ಕುರುಬರ ಪಾದಯಾತ್ರೆ; ಎಲ್ಲೆಲ್ಲಿ ಟ್ರಾಫಿಕ್ ಜಾಮ್?

ಬೆಂಗಳೂರು(ಫೆ. 03): ಕುರುಬರಿಗೆ ಎಸ್​ಟಿ ಮೀಸಲಾತಿ ಸ್ಥಾನಮಾನ ಕಲ್ಪಿಸುವಂತೆ ಒತ್ತಾಯಿಸಿ ಕಾಗಿನೆಲೆ ಶ್ರೀಗಳ ನೇತೃತ್ವದಲ್ಲಿ ಕುರುಬ ಸಮುದಾಯದವರು ಜನವರಿ 15ರಂದು ಆರಂಭಿಸಿರುವ ಬೃಹತ್ ಪಾದಯಾತ್ರೆ ಇಂದು ಬೆಂಗಳೂರು ನಗರವನ್ನ ಪ್ರವೇಶಿಸಿದೆ. ‘ಎಸ್​ಟಿ ನಮ್ಮ ಹಕ್ಕು’ ಹೆಸರಿನಲ್ಲಿ ನಡೆಯುತ್ತಿರುವ ಈ ಪಾದಯಾತ್ರೆ ಬೆಳಗ್ಗೆ 6ಗಂಟೆ ಬಳಿಕ ನಗರಕ್ಕೆ ಅಡಿ ಇಟ್ಟಿತು. ದಾಸರಹಳ್ಳಿ ಶಾಸಕ ಆರ್ ಮಂಜುನಾಥ್ ಅವರು ನಿರಂಜನಾನಂದಪುರಿ ಸ್ವಾಮಿಗಳಿಗೆ ಹೂ, ಹಾರ ಶಾಲು ಹಾಕಿ ಸ್ವಾಗತಿಸಿ ಆಶೀರ್ವಾದ ಪಡೆದರು. ನೆಲಮಂಗಲ …

Read More »

ಲೋಹದ ಹಕ್ಕಿಗಳ ಕಲರವಕ್ಕೆ ಕ್ಷಣಗಣನೆ

ಬೆಂಗಳೂರು,ಫೆ.3- ಕೋವಿಡ್ ಭೀತಿಯಲ್ಲೇ ಆರಂಭಗೊಳ್ಳುತ್ತಿರುವ ಅಂತಾರಾಷ್ಟ್ರೀಯ ಏರೋ ಇಂಡಿಯಾ ವೈಮಾನಿಕ ಪ್ರದರ್ಶನಕ್ಕೆ ಯಲಹಂಕ ವಾಯುನೆಲೆಯಲ್ಲಿ ಈಗಾಗಲೇ ಸಕಲ ಸಿದ್ದತೆಗಳು ಪೂರ್ಣಗೊಂಡಿವೆ. ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಏರೋ ಇಂಡಿಯಾಗೆ ಅಧಿಕೃತ ಚಾಲನೆ ನೀಡಲಿದ್ದು, ಈ ಬಾರಿ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ಸುಮಾರು 600ಕ್ಕೂ ಹೆಚ್ಚು ಪ್ರದರ್ಶಕರಿದ್ದು, ಇದರಲ್ಲಿ 78 ವಿದೇಶಿ ಕಂಪನಿಗಳಿವೆ. ದೇಶದ ರಕ್ಷಣಾ ಸಂಸ್ಥೆಗಳಾದ ಡಿಆರ್‍ಡಿಒ, ಎಲ್‍ಆರ್‍ಡಿಇ ಇಸ್ರೋ, ಎನ್‍ಎಎಲ್, ಎಚ್‍ಎಎಲ್, ಬಿಎಚ್‍ಇಎಲ್, ಬಿಇಎಲ್ ಸೇರಿದಂತೆ …

Read More »

ಒಂದು ರಾತ್ರಿ ಜೊತೆ ಮಲಗು, ಬಿಡುತ್ತೇನೆ: ಫೇಸ್​ಬುಕ್​ನಲ್ಲಿ ಪರಿಚಯವಾದ ಯುವತಿಗೆ ಟಾರ್ಚರ್

ಬೆಂಗಳೂರು(ಫೆ. 02): ಫೇಸ್​ಬುಕ್​ನಲ್ಲಿ ಯುವತಿಯ ಪರಿಚಯ ಮಾಡಿಕೊಂಡು ಸಾವಿನ ನಾಟಕವಾಡಿ ಮೊಬೈಲ್ ನಂಬರ್ ಪಡೆದು ಇನ್ನಿಲ್ಲದಂತೆ ಪೀಡಿಸಿದ ಘಟನೆ ನಗರದಲ್ಲಿ ಬೆಳಕಿಗೆ ಬಂದಿದೆ. ಯುವತಿ ನೀಡಿದ ದೂರಿನ ಮೇರೆಗೆ ಅನ್ನಪೂರ್ಣೇಶ್ವರಿ ಠಾಣೆ ಪೊಲೀಸರು ಶ್ರವಣ್ ಕುಮಾರ್ ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ತನ್ನ ಮೇಲೆ ಈತನಿಂದ ಲೈಂಗಿಕ ಹಲ್ಲೆ, ಮಾನಸಿಕ ಕಾಟ ಆಗಿದೆ ಎಂದು ಯುವತಿ ಜನವರಿ 29ರಂದು ನೀಡಿದ ತನ್ನ ದೂರಿನಲ್ಲಿ ಆರೋಪಿಸಿದ್ದಾಳೆ. ಘಟನೆ ಏನು? ಯುವತಿ ನೀಡಿರುವ ದೂರಿನ …

Read More »

ಎಟಿಎಂ ನಲ್ಲಿ ಜ್ಯೋತಿ ಉದಯ್ ಮೇಲೆ ಹಲ್ಲೆ ಪ್ರಕರಣಅಪರಾಧಿಗೆ 12 ವರ್ಷ ಜೈಲು ಶಿಕ್ಷೆ ಪ್ರಕಟಿಸಿದ ಕೋರ್ಟ್

ಬೆಂಗಳೂರು: ಕಾರ್ಪೊರೇಷನ್ ಬ್ಯಾಂಕ್ ಎಟಿಎಂ ನಲ್ಲಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದ ಅಪರಾಧಿ ಮಧುಕರ್ ರೆಡ್ಡಿಗೆ ಬೆಂಗಳೂರಿನ 65ನೇ ಸಿಸಿಹೆಚ್ ನ್ಯಾಯಾಲಯ 12 ವರ್ಷಗಳ ಜೈಲು ಶಿಕ್ಷೆ ನೀಡಿ ತೀರ್ಪು ಪ್ರಕಟಿಸಿದೆ. 2013ರ ನವೆಂಬರ್ 19ರಂದು ಬೆಳಿಗ್ಗೆ 7:10ಕ್ಕೆ ಬ್ಯಾಂಕ್ ಮ್ಯಾನೇಜರ್ ಆಗಿದ್ದ ಜ್ಯೋತಿ ಉದಯ್, ಹಣ ಡ್ರಾ ಮಾಡಲೆಂದು ಬೆಂಗಳೂರಿನ ಕಾರ್ಪೊರೇಷನ್ ಸರ್ಕಲ್ ನಲ್ಲಿರುವ ಎಟಿಎಂಗೆ ಹೋಗಿದ್ದರು. ಈ ವೇಳೆ ಎಟಿಎಂ ನೊಳಗೆ ನುಗ್ಗಿದ್ದ ಮಧುಕರ್ ರೆಡ್ದಿ …

Read More »

ಬಡ ಮಹಿಳೆಯಿಂದ 15 ಸಾವಿರ ರೂ ಡಿಸೇಲ್ ಹಾಕಿಸಿಕೊಂಡ ಯುಪಿ ಪೊಲೀಸರು

ಉತ್ತರಪ್ರದೇಶ : ಮಗಳನ್ನ ಹುಡುಕಿಕೊಡಿ ಎಂದು ಠಾಣೆಗೆ ಬಂದ ಮಹಿಳೆಯಿಂದ ಪೊಲೀಸರು 15 ಸಾವಿರ ರೂಪಾಯಿ ಮೌಲ್ಯದಷ್ಟು ಡಿಸೇಲ್ ತುಂಬಿಸಿಕೊಂಡಿರುವ ಘಟನೆ ಉತ್ತರಪ್ರದೇಶದ ಲಕ್ನೋದಲ್ಲಿ ನಡೆದಿದೆ. ಈ ಕುರಿತು ನೊಂದ ಮಹಿಳೆ ಎಸ್ ಪಿ ಕಚೇರಿಗೆ ತೆರಳಿ ದೂರು ಸಲ್ಲಿಸಿದ್ದಾರೆ. ಏನಿದು ಘಟನೆ..? ತಿಂಗಳ ಹಿಂದೆ ಅಂಗವಿಕಲೆ ಗುಡಿಯಾ ಎಂಬುವರ ಮಗಳು ನಾಪತ್ತೆಯಾಗಿದ್ದರು. ಈ ಕುರಿತು ಗುಡಿಯಾ, ತನ್ನ ಅಪ್ರಾಪ್ತ ಮಗಳನ್ನ ಠಾಕೂರ್ ಎಂಬಾತ ಅಪಹರಿಸಿದ್ದಾನೆ ಎಂದು ಠಾಣೆಯಲ್ಲಿ ದೂರು …

Read More »