Breaking News

Uncategorized

ಚೇತರಿಸಿಕೊಂಡ ಕೇಂದ್ರ ಸಚಿವ ಸದಾನಂದಗೌಡ, 24 ಗಂಟೆ ಐಸಿಯುನಲ್ಲಿ ನಿಗಾ

ಬೆಂಗಳೂರು : ತೀವ್ರ ಅನಾರೋಗ್ಯದಿಂದ ಅಸ್ತತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅವರ ಆರೋಗ್ಯ ಸ್ಥಿತಿ ಸುಧಾರಣೆ ಕಂಡು ಬಂದಿದ್ದು,ಯಾವುದೇ ಆತಂಕ ಇಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.ಪ್ರಸ್ತುತ ಬೆಂಗಳೂರಿನ ಅಸ್ಟರ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಸದಾನಂದಗೌಡ ಅವರನ್ನು 24 ಗಂಟೆಗಳ ಕಾಲ ನಿಗಾವಹಿಸಿ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುತ್ತದೆ.ಸದ್ಯ ಅವರ ಆರೋಗ್ಯ ಸ್ಥಿತಿ ಸಹಜವಾಗಿದ್ದು, ಆತಂಕಪಡುವ ಅಗತ್ಯವಿಲ್ಲ ಎಂದು ಆಸ್ಟರ್ ಆಸ್ಪತ್ರೆ ಫಿಜಿಷಿಯನ್ ಡಾ.ಬೃಂದಾ ಮಾಹಿತಿ ನೀಡಿದ್ದಾರೆ. ಆಸ್ಟರ್ ಆಸ್ಪತ್ರೆಯಲ್ಲಿ …

Read More »

ಕೃಷಿ ಪ್ರತಿಭಟನೆಯಲ್ಲಿ ಭಾಗಿಯಾಗಲು ದೆಹಲಿಯತ್ತ ಹೊರಟ ಹರಿಯಾಣ ರೈತರ ಮೇಲೆ ಅಶ್ರುವಾಯು ದಾಳಿ

ರೆವಾರಿ : ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ಪ್ರಟುಭಟನೆಯಲ್ಲಿ ಭಾಗಿಯಾಗಲು ಸಾಗುತ್ತಿದ್ದ ಹರ್ಯಾಣದ ರೈತರನ್ನು ರವಿವಾರ ಪೊಲೀಸರು ತಡೆದಿದ್ದಾರೆ. ಈ ವೇಳೆ ಘರ್ಷಣೆ ಉಂಟಾಗಿದ್ದು, ಪೊಲೀಸರು ಅಶ್ರುವಾಯು ಸಿಡಿಸಿದ ಘಟನೆಯೂ ನಡೆಯಿತು. ರೆವಾರಿ- ಅಲ್ವಾರ್ ಗಡಿಯಲ್ಲಿ ಈ ಘರ್ಷಣೆ ನಡೆದಿದ್ದು, ಪೊಲೀಸರ ತಡೆಯನ್ನು ಮುರಿದು ಮುಂದೆ ಹೋಗಲು ಯತ್ನಿಸಿದ್ದ ರೈತರ ಮೇಲೆ ಪೊಲೀಸರು ಕೆಲವು ಸುತ್ತು ಅಶ್ರುವಾಯು ಸಿಡಿದ್ದಾರೆ. ನಂತರ ಪೊಲೀಸರು ರೈತರನ್ನು ಮಾಸನಿ ಎಂಬಲ್ಲಿನ ಮೇಲ್ಸೇತುವೆಯಲ್ಲಿ ತಡೆದಿದ್ದಾರೆ. …

Read More »

ಕಿತ್ತೂರು ಸಮೀಪದ ಕುಲ್ಲಹಳ್ಳಿ ಜಂಗಲ್ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ತಲೆಮರಿಸಿಕೊಂಡಿದ್ದ ಬೇಟೆಗಾರನ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ

ಬೆಳಗಾವಿ- ಕಿತ್ತೂರು ಸಮೀಪದ ಕುಲ್ಲಹಳ್ಳಿ ಜಂಗಲ್ ಪ್ರದೇಶದಲ್ಲಿ ಜಿಂಕೆ ಬೇಟೆಯಾಡಿ ತಲೆಮರಿಸಿಕೊಂಡಿದ್ದ ಬೇಟೆಗಾರನ ಮನೆಗೆ ಇಂದು ಬೆಳ್ಳಂ ಬೆಳಿಗ್ಗೆ ಅರಣ್ಯ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಬೆಳಗಾವಿಯ ಅಶೋಕ ನಗರದಲ್ಲಿ ಮೆಹಮೂದ್ ಅಲಿ ಖಾನ್ (50) ವರ್ಷದ ಬೇಟೆಗಾರನ ಮನೆಗೆ ದಾಳಿ ಮಾಡಿರುವ ಅರಣ್ಯ ಅಧಿಕಾರಿಗಳು ಬೇಟೆ ಆಡಲು ಬಳಿಸುವ ರೈಫಲ್,ಜೀವಂತ ಗುಂಡು,ಚಾಕೂ,ಚೂರಿ,ಟಾರ್ಚ್..ವಾಕಿ ಟಾಕಿ,ಮತ್ತು ದುರ್ಬಿ‌ನ್,ಮತ್ತು ವಾಹನಕ್ಕೆ ಅಳವಡಿಸುವ ಸರ್ಚ ಲೈಟ್ ,ಸೇರಿದಂತೆ ಅನೇಕ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆಇಂದು ಬೆಳಗ್ಗೆ ಬೇಟೆಗಾರನ ಮನೆಯಲ್ಲೇ …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ.

ಬೆಂಗಳೂರು : ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯಯ ಸರ್ಕಾರ ಬಿಗ್ ಶಾಕ್ ನೀಡಿದ್ದು, ಸದ್ಯಕ್ಕೆ ಶಿಕ್ಷಕರ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ. ವರ್ಗಾವಣೆಯಲ್ಲಿ ಲೋಪದೋಷ ಕಂಡುಬಂದ ಹಿನ್ನೆಲೆಯಲ್ಲಿ ವರ್ಗಾವಣೆಗೆ ಬ್ರೇಕ್ ಹಾಕಲಾಗಿದೆ. 2019-20 ನೇ ಸಾಲಿನಲ್ಲಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆ ಒಳಗಾದ ಶಿಕ್ಷಕರಿಗೆ ಪ್ರಸಿದ್ಧ ವರ್ಗಾವಣೆ ಸಂದರ್ಭದಲ್ಲಿ ವಿಶೇಷ ಆದ್ಯತೆ ನೀಡಲು ರಾಜ್ಯ ಸರ್ಕಾರ ಮುಂದಾಗಿದ್ದು, ಯಥಾಸ್ಥಿತಿ ಕಾಯ್ದುಕೊಳ್ಳಬೇಕು ಕೆಎಟಿ ಆದೇಶ ನೀಡಿದೆ. ವರ್ಗಾವಣೆಗೆ 75 ಸಾವಿರ ಶಿಕ್ಷಕರು ಅರ್ಜಿ …

Read More »

ಕೃಷಿ ಮಸೂದೆ ರದ್ದು ಮಾಡುವವರೆಗೆ ಪ್ರತಿಭಟನೆ ಮುಂದುವರಿಯಲಿದೆ : ಇಂದು ಮತ್ತೆ ರೈತ ಸಂಘದ ಜೊತೆ ಕೇಂದ್ರದ ಮಾತುಕತೆ

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳನ್ನು ವಿರೋಧಿಸಿ ದೆಹಲಿ ಗಡಿಯಲ್ಲಿ ರೈತರ ಪ್ರತಿಭಟನೆ ಮುಂದುವರೆದಿದೆ. ಕೃಷಿ ಮಸೂದೆ ರದ್ಧಾಗುವವರೆಗೆ ಪ್ರತಿಭಟನೆ ಮುಂದುವರೆಯಲಿದೆ ಎಂದು ರೈತರು ಕಿಡಿ ಕಾರಿದ್ದಾರೆ. ಕೇಂದ್ರ ಸರ್ಕಾರ ಜಾರಿಗೊಳಿರುವ ನೂತನ ಕೃಷಿ ಕಾನೂನುಗಳ ರದ್ದತಿಗಾಗಿ ದೆಹಲಿಯ ಗಡಿಯಲ್ಲಿ ಸುಮಾರು ಒಂದು ತಿಂಗಳಿನಿಂದ ಪ್ರತಿಭಟನೆ ನಡೆಸುತ್ತಿದ್ದು,ಈಗಾಗಲೇ 6 ಸುತ್ತಿನ ಮಾತುಕತೆ ನಡೆಸಿದರೂ ಕೂಡ ಕೇಂದ್ರದಿಂದ ನಿರೀಕ್ಷಿತ ಫಲ ಸಿಕ್ಕಿಲ್ಲ. ರೈತರು ಕಳೆದ 39 ದಿನಗಳಿಂದ ಪ್ರತಿಭಟನೆ …

Read More »

ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ

ಹೈದರಾಬಾದ್‌: ನವದೆಹಲಿಯಿಂದ ಬೆಂಗಳೂರಿಗೆ ಆಗಮಿಸುತ್ತಿದ್ದ ರಾಜಧಾನಿ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಯಾವುದೇ ಅನಾಹುತ ಸಂಭವಿಸಿಲ್ಲ ಎಂದು ರೈಲ್ವೆ ಇಲಾಖೆ ತಿಳಿಸಿದೆ. ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ನವದೆಹಲಿಯಿಂದ ಬೆಂಗಳೂರು ಕಡೆಗೆ ಬರುತ್ತಿತ್ತು. ಭಾನುವಾರ ರಾತ್ರಿ 9 ಗಂಟೆಗೆ ಸುಮಾರಿಗೆ ತೆಲಂಗಾಣದ ವಿಕರಾಬಾದ್‌ ಜಿಲ್ಲೆ ನವಾಂಡ್ಗಿ ರೈಲು ನಿಲ್ದಾಣದ ಸಮೀಪ ಈ ಘಟನೆ ಸಂಭವಿಸಿದೆ ಎಂದು ದಕ್ಷಿಣ ರೈಲ್ವೆ ವಿಭಾಗದ ಅಧಿಕಾರಿಗಳು ತಿಳಿಸಿದ್ದಾರೆ. ಲೋಕೊ ಪೈಲೆಟ್‌ ರೈಲು ಎಂಜಿನಲ್ಲಿ ಬೆಂಕಿ …

Read More »

ಕುರುಬ ಸಮಾಜದ ಹೋರಾಟದ ಬಗ್ಗೆ ಶ್ರೀರಾಮುಲು ಹೇಳಿದ್ದೇನು? ರಮೇಶ್ ಜಾರಕಿಹೊಳಿಗೆ ಸೆಡ್ಡು ಹೊಡೆಯುತ್ತಾರಾ ರಾಮುಲು

ಬಾಗಲಕೋಟೆ): ಜನಸಂಖ್ಯಾಧಾರಿತವಾಗಿ ವಾಲ್ಮೀಕಿ ಸಮಾಜಕ್ಕೆ ಮೀಸಲಾತಿ ಸಿಗಬೇಕು ಎಂಬ ಕೂಗು ಮೊದಲಿನಿಂದಲೂ ಇದೆ‌. ಕೇಂದ್ರ ಸರ್ಕಾರ ಕೊಟ್ಟರೂ ರಾಜ್ಯ ಸರ್ಕಾರ ಕೊಟ್ಟಿಲ್ಲ. ನಮ್ಮ ಸರ್ಕಾರ ಬಂದ ಬಳಿಕ ಈಗ ಪ್ರಸ್ತಾವನೆ ಸಲ್ಲಿಸಲಾಗಿದೆ. ಈಗ ಕುರುಬರು ಎಸ್​ಟಿ ಸೇರ್ಪಡೆಗಾಗಿ ಹೋರಾಟ ಮಾಡ್ತಿದ್ದಾರೆ. ಅಂತಿಮ ತೀರ್ಮಾನ ಏನು ತೆಗೆದುಕೊಳ್ತಾರೆ ನೋಡೋಣ. ವಾಲ್ಮೀಕಿ ಸಮಾಜಕ್ಕೆ ಜನಸಂಖ್ಯಾಧಾರಿತ ಮೀಸಲಾತಿ ಕೊಡಬೇಕೆನ್ನುವುದು ನನ್ನ ಒತ್ತಾಯ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದರು. ಇಲ್ಲಿ ಮಾಧ್ಯಮಗಳೊಂದಿಗೆ ಮಾತನಾಡುವ …

Read More »

ಪಕ್ಷ ಸಂಘಟನೆ: ಜನವರಿ 6 ರಿಂದ ‘ಕೈ’ ನಾಯಕರ ಸಭೆ

ಬೆಂಗಳೂರು: ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಒತ್ತು ನೀಡುವ ಜೊತೆಗೆ ಮುಂಬರುವ ಚುನಾವಣೆಗಳನ್ನು ದೃಷ್ಟಿಯಲ್ಲಿಟ್ಟು ಪಂಚಾಯಿತಿ, ವಾರ್ಡ್‌, ಬೂತ್‌ ಸಮಿತಿಗಳ ರಚನೆ ಕುರಿತು ಸ್ಥಳೀಯಮಟ್ಟದಲ್ಲಿ ಪಕ್ಷದ ನಾಯಕರ ಜೊತೆ ಸಮಾಲೋಚನೆ ನಡೆಸಲು ರಾಜ್ಯದ ನಾಲ್ಕು ವಿಭಾಗಗಳಲ್ಲಿ (ಮೈಸೂರು, ಬೆಂಗಳೂರು, ಬೆಳಗಾವಿ, ಕಲಬುರ್ಗಿ) ಜ. 6ರಿಂದ ಸಭೆಗಳನ್ನು ಆಯೋಜಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ನಿರ್ಧರಿಸಿದ್ದಾರೆ. ಜ 6ರಂದು ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿರುವ ಸಾಗರ ಆಡಿಟೋರಿಯಂನಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರಿದಂತೆ ಮೈಸೂರು ವಿಭಾಗ, …

Read More »

ಬೆಂಗಳೂರಿಗರೇ ಎಚ್ಚರ..! ನಗರದಲ್ಲಿ ‘ತೀವ್ರ ಚಳಿ’ಯ ಬಗ್ಗೆ ನಿರ್ಲಕ್ಷ್ಯ ವಹಿಸಿದ್ರೇ, ಹೀಗೆ ಆಗ್ಬಹುದು.!

ಬೆಂಗಳೂರು : ರಾಜ್ಯದ ರಾಜಧಾನಿಯಲ್ಲಿ ಚಳಿಯ ತೀವ್ರತೆ ಹೆಚ್ಚಾಗಿದೆ. ಇದೇ ಕಾರಣದಿಂದಾಗಿ ನಗರದಲ್ಲಿ ಡಿಸೆಂಬರ್ 24ರ ನಂತ್ರ ತೀವ್ರ ಉಸಿರಾಟದ ತೊಂದೆರೆಯಂತ ಕಾಯಿಲೆ ಕೂಡ ಹೆಚ್ಚಾಗಿದೆಯಂತೆ. ಇದರಿಂದಾಗಿ ತೀವ್ರ ಉಸಿರಾಟದ ತೊಂದೆರೆಗೆ ಒಳಾಗುತ್ತಿರುವ ರಾಜಧಾನಿಯ ಅನೇಕರು ಐಸಿಯುಗೆ ದಾಖಲಾಗುತ್ತಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಹೀಗಾಗಿ ಚಳಿಯ ಬಗ್ಗೆ ಅಸಡ್ಡೆ ಮಾಡಬೇಡಿ. ಎಚ್ಚರಿಗೆ ವಹಿಸೋದು ಮರೆಯಬೇಡಿ. ಹೌದು. ಈ ಬಗ್ಗೆ ನಗರದ ಮಣಿಪಾಲ್ ಹಾಸ್ಪತ್ರೆಯ ತೀವ್ರ ನಿಗಾ ಮೆಡಿಸಿನ್ ವಿಭಾಗದ ಮುಖ್ಯಸ್ಥರಾದ ಡಾ.ಸುನೀಲ್ …

Read More »

ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾನೂನು ಸುಗ್ರೀವಾಜ್ಞೆ ಮೂಲಕ ಜಾರಿ : ರಾಜ್ಯ ಬಿಜೆಪಿ ಘಟಕದಿಂದ ಮಾಹಿತಿ

ಬೆಂಗಳೂರು : ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಕಾಯ್ದೆಯನ್ನು ಕೊನೆಗೂ ಕರ್ನಾಟಕ ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೆ ತರಲು ಮುಂದಾಗಿದ್ದು, ಮಸೂದೆಯನ್ನು ರಾಜ್ಯಪಾಲರ ಅಂಕಿತಕ್ಕೆ ಕಳುಹಿಸಿಕೊಡಲಾಗಿದೆ ಎಂಬ ಮಾಹಿತಿಗಳು ಲಭ್ಯವಾಗಿದೆ. ಈ ಕುರಿತು ಮಾಹಿತಿ ನೀಡಿರುವ ರಾಜ್ಯ ಬಿಜೆಪಿ ಘಟಕ, ಸಿಎಂ ಬಿ.ಎಸ್.ಯಡಿಯೂರಪ್ಪ ಅವರು ಗೋಹತ್ಯೆ ನಿಷೇಧ ಕಾಯ್ದೆಯನ್ನು ಸುಗ್ರಿವಾಜ್ಞೆಯ ಮೂಲಕ ಜಾರಿಗೊಳಿಸಿದ್ದಾರೆ. ಮುಂದಿನ ಅಧಿವೇಶನದಲ್ಲಿ ಲವ್ ಜಿಹಾದ್ ವಿರುದ್ಧ ಕಾನೂನುಗಳನ್ನು ಕೂಡ ಜಾರಿಗೆ ತರಲಿದ್ದೇವೆ …

Read More »