Breaking News

Uncategorized

ಬಾಯಿ ಚಪ್ಪರಿಸಿಕೊಂಡು ಫಾಸ್ಟ್ ಫುಡ್’ ತಿನ್ನೋ ಮುನ್ನಾ ಈ ಸುದ್ದಿ ತಪ್ಪದೇ ಓದಿ.!

ಬೆಂಗಳೂರು : ಬಹುತೇಕರು ಸಂಜೆ ಆದ್ರೆ ಸಾಕು, ಫಾಸ್ಟ್ ಫುಡ್ ತಿನಿಸುಗಳ ಮೊರೆ ಹೋಗುತ್ತಾರೆ. ಬಾಯಿ ಚಪ್ಪರಿಸಿಕೊಂಡು ಗೋಭಿ, ನೂಡಲ್ಸ್ ಸೇರಿದಂತೆ ಫ್ರೈಡ್ ಪುಡ್ ತಿನ್ನುತ್ತಾರೆ. ಆದ್ರೇ.. ಇದೀಗ ಇವೇ ನಿಮ್ಮ ಆರೋಗ್ಯದ ಮೇಲೆ ಪರಿಣಾಮ ಬೀರಿ, ಶ್ವಾಸಕೋಶದ ಕ್ಯಾನ್ಸರ್ ಗೂ ಕಾರಣವಾಗುತ್ತಿದೆ ಎಂಬ ಆಘಾತಕಾರಿ ಮಾಹಿತಿ ಹೊರ ಬಿದ್ದಿದೆ. ಈ ಕುರಿತಂತೆ ಕಿದ್ವಾಯಿ ಆಸ್ಪತ್ರೆಯ ವೈದ್ಯರೊಬ್ಬರು ಮಾಹಿತಿ ನೀಡಿದ್ದು, ಬೆಂಗಳೂರಿನಲ್ಲಿ ಹೆಚ್ಚು ಹೆಚ್ಚು ಜನರು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದಾರೆ. …

Read More »

65 ಸಾವಿರ ರೂಪಾಯಿ ಹಣದ ಬೇಡಿಕೆ ಇಟ್ಟಿದ್ದ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ

  ಬೆಳಗಾವಿ: ಜಮೀನಿನಲ್ಲಿದ್ದ ಟಿ.ಸಿ ಬದಲಿಸಿ ಹೊಸ ಟಿ.ಸಿ ಮಂಜೂರು ಮಾಡಿಕೊಡಲು 65,000 ರೂಪಾಯಿ ಲಂಚ ಪಡೆಯುತ್ತಿದ್ದ ಹೆಸ್ಕಾಂನ ಇಬ್ಬರು ಸೆಕ್ಷನ್ ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಹೆಸ್ಕಾಂ ಲೋಳುಸರ ಸೆಕ್ಷನ್ ಆಫೀಸರ್ ಪ್ರಕಾಶ್ ವಿರೂಪಾಕ್ಷ ಪರೀಟ್ ಮತ್ತು ಮೇಲ್ವಿಚಾರಕ ಮಲ್ಲಯ್ಯ ಕುಮಾರಸ್ವಾಮಿ ಹಿರೇಮಠ ಎಸಿಬಿ ಬಲೆಗೆ ಬಿದ್ದ ಅಧಿಕಾರಿಗಳು. ಬೆಳಗಾವಿ ಜಿಲ್ಲೆಯ ಮೂಡಲಗಿ ತಾಲೂಕು ಅರಂಭಾವಿ ಗ್ರಾಮದ ನಿವಾಸಿ ಆನಂದ ಉದ್ದಪ್ಪ ತಮ್ಮ ಜಮೀನಿನಲ್ಲಿರುವ …

Read More »

ಲಾರಿ- ಆಟೋ ನಡುವೆ ಭೀಕರ ಅಪಘಾತ ; ಮದುವೆಗೆ ಬಟ್ಟೆ ತರಲು ಹೊರಟ್ಟಿದ್ದ ಆರು ಜನರು ಸಾವು !

ತೆಲಂಗಾಣ : ಲಾರಿ- ಆಟೋ ನಡುವೆ ಭೀಕರ ರಸ್ತೆ ಅಪಘಾತ ಸಂಭಿಸಿದ್ದು, ಸ್ಥಳದಲ್ಲೇ ಆರು ಜನರು ಮೃತಪಟ್ಟಿರುವ ಘಟನೆ ಮೆಹಬೂಬಾಬಾದ್ ಜಿಲ್ಲೆಯ ಗುಡೂರ್ ವಲಯದ ಮರ್ರಿಮಿಟ್ಟದಲ್ಲಿ ಇಂದು ನಡೆದಿದೆ. ಮೃತರು ಒಂದೇ ಕುಟುಂಬದವರಾಗಿದ್ದು, ಮದುವೆಗೆ ಬಟ್ಟೆ ತರಲು ತೆರಳುತ್ತಿದ್ದ ಸಂದರ್ಭದಲ್ಲಿ ಅವಘಡ ಸಂಭವಿಸಿದೆ. ವದು ಸೇರಿ ಆಟೋದಲ್ಲಿ ಆರು ಮಂದಿ ಇದ್ದರು ಎನ್ನಲಾಗಿದೆ. ವೇಗವೇ ಅಪಘಾತಕ್ಕೆ ಕಾರಣ ಎಂದು ಹೇಳಲಾಗುತ್ತಿದೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ. ಸ್ಥಳಕ್ಕೆ ಪೊಲೀಸರು …

Read More »

ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ

ಬೆಳಗಾವಿ: ಗಡಿ ವಿಚಾರವಾಗಿ ಮಹಾರಾಷ್ಟ್ರದ ಪುಂಡಾಟ ಮುಂದುವರೆದಿದ್ದು, ಕರ್ನಾಟಕದ ಬಸ್ ಗಳ ಮೇಲೆ ಮರಾಠಿ ಪೋಸ್ಟರ್ ಹಚ್ಚಿ ಪುಂಡರು ಉದ್ಧಟತನ ಮೆರೆದಿದ್ದಾರೆ. ಬೆಳಗಾವಿಯಿಂದ ಪುಣೆ ಹೋಗುವ ಬಸ್ ಗಳ ಮೇಲೆ‌ ಕಿಡಿಗೇಡಿಗಳು ಪೋಸ್ಟರಗಳನ್ನು ಅಂಟಿಸಿದ್ದಾರೆ. ಬೆಳಗಾವಿ, ನಿಪ್ಪಾಣಿ, ಕಾರವಾರ ಸೇರಿ ಸಂಯುಕ್ತ ಮಹಾರಾಷ್ಟ್ರ ಆಗವುದು ಎಂದು ಪೋಸ್ಟರ್ ನಲ್ಲಿ ಬರೆಯಲಾಗಿದೆ. ರಾಷ್ಟ್ರವಾದಿ ಕಾಂಗ್ರೆಸ್ ಪಾರ್ಟಿ ಪುಣೆ ಹೆಸರಿನಲ್ಲಿ ಈ ಪೋಸ್ಟರಗಳನ್ನು ಬರೆಯಲಾಗಿದೆ. ಬೆಳಗಾವಿಯನ್ನು ಮಹಾರಾಷ್ಟ್ರಕ್ಕೆ ಸೇರಿಸಿಯೇ ತೀರುತ್ತೇವೆ ಎಂದು ಮಹಾರಾಷ್ಟ್ರ …

Read More »

ಕಲಾಪ ಸಲಹಾ ಸಮಿತಿ ಸಭೆಯನ್ನು ಬಹಿಷ್ಕರಿಸಲು ಕಾಂಗ್ರೇಸ್ ನಿರ್ಧಾರ : ಸಿದ್ದರಾಮಯ್ಯ

ಬೆಂಗಳೂರು : ವಿಧಾನ ಮಂಡಲದ ಕಲಾಪ ಸಲಹಾ ಸಮಿತಿ ಸಭೆ ಬಹಿಷ್ಕರಿಸಲು ವಿಪಕ್ಷ ಕಾಂಗ್ರೆಸ್‌ ನಿರ್ಧರಿಸಿದೆ. ಕಳೆದ ಅಧಿವೇಶನ ಸಂದರ್ಭದಲ್ಲಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನವಾದಂತೆ ಸದನ ನಡೆಯಲಿಲ್ಲ. ಹೀಗಾಗಿ ಈ ಬಾರಿ ಸಭೆಗೆ ಹೋಗುವುದು ಬೇಡ ಎಂಬ ನಿರ್ಧಾರ ಕೈಗೊಳ್ಳಲಾಗಿದೆ. ಗುರುವಾರ ನಡೆದ ಕಾಂಗ್ರೆಸ್‌ ಶಾಸ ಕಾಂಗ ಸಭೆಯಲ್ಲಿ ಈ ತೀರ್ಮಾನಕ್ಕೆ ಬರ ಲಾಗಿದೆ. ಈ ಬಗ್ಗೆ ಸ್ಪೀಕರ್‌ ಅವರಿಗೂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ. ಉಭಯ ಸದನಗಳ ಕಲಾಪದ …

Read More »

ಪ್ರತಿಭಟನಾ ಸ್ಥಳದಲ್ಲಿ ಮತ್ತೆ ರೈತರ ಜಮಾವಣೆ.. ಗಾಜಿಪುರ್ ಬಾರ್ಡರ್ ಕ್ಲೋಸ್

ನವದೆಹಲಿ: ದೆಹಲಿ- ಉತ್ತರಪ್ರದೇಶ ನಡುವಿನ ಗಡಿ ಪ್ರದೇಶ ಗಾಜಿಪುರ್ ಬಾರ್ಡರ್​ನಲ್ಲಿ ರಾತ್ರೋರಾತ್ರಿ ಮತ್ತೆ ರೈತರು ಜಮಾವಣೆಗೊಂಡಿದ್ದಾರೆ. ಉತ್ತರಪ್ರದೇಶದ ಮುಜಾಫ್ಪರ್​ನಗರ್​ನಿಂದ ರೈತರ ದಂಡು ಹರಿದುಬಂದ ಹಿನ್ನೆಲೆ ಗಾಜಿಪುರ್ ಬಾರ್ಡರ್​ ಕ್ಲೋಸ್ ಆಗಿದೆ. ಗಾಜಿಪುರ್​ ಬಾರ್ಡರ್ ಕ್ಲೋಸ್ ಆದ ಹಿನ್ನೆಲೆ ರಸ್ತೆ ಮಾರ್ಗವನ್ನ NH-24, NH-9, ರಸ್ತೆ ನಂಬರ್ 56, 57A, ಕೊಂಡ್ಲಿ, ಪೇಪರ್ ಮಾರ್ಕೆಟ್, ಟೆಲ್ಕೋ ಟಿ ಪಾಯಿಂಟ್, EDM ಮಾಲ್, ಅಕ್ಷರಧಾಮ್, ನಿಜಾಮುದ್ದೀನ್ ಖಟ್ಟಾ ಕಡೆಗೆ ಬದಲಿಸಲಾಗಿದೆ. ವಿಕಾಸ್ ಮಾರ್ಗ …

Read More »

ಸಂಸತ್‌ ಅಧಿವೇಶನ ಇಂದು ಶುರು

ಹೊಸದಿಲ್ಲಿ: ಎರಡು ಹಂತಗಳ ಸಂಸತ್‌ನ ಬಜೆಟ್‌ ಅಧಿವೇಶನ ಶುಕ್ರವಾರ ಶುರುವಾಗಲಿದ್ದು, ರಾಷ್ಟ್ರಪತಿ ರಾಮನಾಥ ಕೋವಿಂದ್‌ ಉಭಯ ಸದನಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಆರ್ಥಿಕ ಸಮೀಕ್ಷೆಯೂ ಶುಕ್ರವಾರವೇ ಮಂಡನೆಯಾ ಗ ಲಿದೆ. ಫೆ.1ರಂದು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ಮುಂಗಡಪತ್ರ ಮಂಡಿಸಲಿದ್ದಾರೆ. ಕೊರೊನಾ ನಿಯಮದ ಹಿನ್ನೆಲೆಯಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯ ಕಲಾಪಗಳು ತಲಾ ಐದು ಗಂಟೆಗಳಿಗೆ ನಿಗದಿಯಾಗಿವೆ. ರಾಜ್ಯಸಭೆಯ ಕಲಾಪಗಳು ಬೆಳಗ್ಗೆ, ಲೋಕಸಭೆ ಕಲಾಪಗಳು ಸಂಜೆ ವೇಳೆ ನಡೆಯಲಿವೆ. ಅಧಿವೇಶನದ ಮತ್ತೂಂದು ಪ್ರಮುಖ ಅಂಶವೆಂದರೆ ವಾರಾಂತ್ಯಗಳಲ್ಲಿ …

Read More »

ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ

ಬೆಂಗಳೂರು: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವರನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಲಾಗಿದೆ. ಆದರೆ ದೊಡ್ಡ ತಿಮಿಂಗಲಗಳನ್ನು ಹಿಡಿಯುವುದು ಬಾಕಿಯಿದೆ ಎಂದು ನಿರ್ದೇಶಕ ಇಂದ್ರಜಿತ್ ಲಂಕೇಶ್ ಹೇಳಿದ್ದಾರೆ. ಸ್ಯಾಂಡಲ್ ವುಡ್ ಗೆ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ನೋಟೀಸ್ ಹಿನ್ನೆಲೆಯಲ್ಲಿ ಮತ್ತೆ ವಿಚಾರಣೆಗೆ ಹಾಜರಾದ ಇಂದ್ರಜಿತ್ ಲಂಕೇಶ್ ಸುದ್ದಿಗಾರರೊಂದಿಗೆ ಮಾತನಾಡಿ, ಕಳೆದ 6 ತಿಂಗಳಿಂದ ತನಿಖೆಗೆ ಸಹಕಾರ ನೀಡುತ್ತಾ ಬಂದಿದ್ದೇನೆ. ಸಿಸಿ ಅಧಿಕಾರಿಗಳು ಸಣ್ಣ ಸಣ್ಣ ಮೀನುಗಳನ್ನು ಹಿಡಿದಿದ್ದಾರೆ. ಇನ್ನು …

Read More »

C.M.ಕುರ್ಚಿ ಖಾಲಿಯಾಗುತ್ತದೆ ನಾನೇ ಸಿಎಂ ಆಗುತ್ತೇನೆ: ಯತ್ನಾಳ್

ದಾವಣಗೆರೆ : ಪಂಚಮಸಾಲಿ ಲಿಂಗಾಯತ ಸಮುದಾಯದ ಪಾದಯಾತ್ರೆ ಬೆಂಗಳೂರು ಸೇರುವ ಮುನ್ನ 2 ಎ ಘೋಷಿಸದಿದ್ದರೆ ನಿಮ್ಮ ಕುರ್ಚಿ ಖಾಲಿಯಾಗುತ್ತದೆ ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ವಿರುದ್ಧ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಾಗ್ದಾಳಿ ನಡೆಸಿದ್ದಾರೆ. ಹರಿಹರದಲ್ಲಿ ಮಾತನಾಡಿದ ಯತ್ನಾಳ್, ನಮ್ಮ ಸಮಾಜವನ್ನು ಹಿಂದುಳಿದ ವರ್ಗಕ್ಕೆ ಸೇರಿಸಿ, ನಾನೇ ನಿಮಗೆ ಕೋಟಿಗಟ್ಟಲೆ ಹಣ ಕೊಡುತ್ತೇನೆ. ಮೀಸಲಾತಿ ಕೊಡುತ್ತೇನೆ ಎಂದು ಸುಮ್ಮನೆ ಯಾಕೆ ಮಾಡುತ್ತೀರಿ? ನಾನು ಮಂತ್ರಿ ಆಗಬೇಕೆಂದು ಯಾರ ಕೈ …

Read More »

ಎಸ್‌ಎಸ್‌ಎಲ್ ಸಿ ಪರೀಕ್ಷಾ ವೇಳಾಪಟ್ಟಿ ಬಿಡುಗಡೆ: ಜೂನ್ 14ರಿಂದ ಪರೀಕ್ಷೆ ಆರಂಭ

ಬೆಂಗಳೂರು: 2020-21ನೇ ಸಾಲಿನ ಎಸ್‌ಎಸ್ ಎಲ್ ಸಿ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಇಂದು ಘೋಷಣೆ ಮಾಡಿದರು. ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಜೂನ್ 14ರಿಂದ ಎಸ್‌ಎಸ್‌ಎಲ್ ಸಿ ಪರೀಕ್ಷೆ ಆರಂಭವಾಗಲಿದೆ ಎಂದರು. ಜೂ.14ರಿಂದ ಜೂ.25ರವರೆಗೆ ಪರೀಕ್ಷೆಗಳು ನಡೆಯಲಿದೆ. ಜೂನ್ 14ರಂದು ಪ್ರಥಮ ಭಾಷೆ, ಜೂ.16 ಗಣಿತ, ಸಮಾಜ ಶಾಸ್ತ್ರ, ಜೂ.18 ದ್ವಿತೀಯ ಭಾಷೆ, ಜೂ. 21 ವಿಜ್ಞಾನ, ಜೂ.23 ತೃತೀಯ ಭಾಷೆ, …

Read More »