ಚಿತ್ರದುರ್ಗ: ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಅನಾರೋಗ್ಯಕ್ಕೀಡಾಗಿದ್ದು, ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಶುಗರ್ ಲೋ ಆದ ಕಾರಣ ಡಿ.ವಿ.ಸದಾನಂದಗೌಡ ಅವರನ್ನು ಚಿತ್ರದುರ್ಗದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ಕರೆತರಲು ನಿರ್ಧರಿಸಲಾಗಿದೆ. ಆಂಬುಲೆನ್ಸ್ ನಲ್ಲಿ ಝಿರೋ ಟ್ರಾಫಿಕ್ ಮೂಲಕ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆತರು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ
Read More »ಮುಂದಿನ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲೋದು ನಮ್ಮ ಗುರಿ : ಬಿಎಸ್ವೈ
ಶಿವಮೊಗ್ಗ, ಜ.3- ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಸ್ಥಾನ ಪಡೆಯುವುದೇ ನಮ್ಮ ಗುರಿ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು. ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿನ ಬಿಜೆಪಿ ಅಭೂತಪೂರ್ವ ಯಶಸ್ಸು ಸದ್ಯದಲ್ಲೇ ನಡೆಯುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತ್ ಚುನಾವಣೆಯಲ್ಲೂ ಮುಂದುವರಿಯಬೇಕೆಂದು ಹೇಳಿದರು. ನಗರದಲ್ಲಿ ಹಮ್ಮಿಕೊಂಡಿದ್ದ ಬಿಜೆಪಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮ ಪಂಚಾಯಿತಿ ಫಲಿತಾಂಶ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಉಲ್ಲಾಸ, ಸಮಾಧಾನ ಮತ್ತು ತೃಪ್ತಿ ತಂದಿದೆ ಎಂದರು. ಹಠ, ಛಲ …
Read More »ಪ್ರಧಾನಿ ಮೋದಿಗೆ ಡಾಕ್ಟರೇಟ್ ಕೊಟ್ಟಿದೆ. ಡೊನಾಲ್ಡ್ ಟ್ರಂಪ್ ಅಮೆರಿಕದಲ್ಲಿ ಸೋಲೋದಕ್ಕೆ ಓಟ್ ಕೊಡಿಸಿದರಲ್ಲ ಅದಕ್ಕೇ ಮೋದಿಗೆ ಅವಾರ್ಡ್ ಕೊಟ್ಟಿದ್ದಾರೆ” ಎಂದು ವ್ಯಂಗ್ಯವಾಡಿದ್ದಾರೆ. ರಾಮಲಿಂಗಾ ರೆಡ್ಡಿ
ಬೆಂಗಳೂರು (ಜನವರಿ 03); ಬಿಜೆಪಿ ಈ ಹಿಂದೆ ‘ಮನು’ವಾದವನ್ನು ಅನುಸರಣೆ ಮಾಡುತ್ತಿತ್ತು. ಆದರೆ, ಇದಿಗ ಬಿಜೆಪಿ ನಾಯಕರು ‘ಮನಿ’ವಾದವನ್ನು ಅನುಸರಿಸುತ್ತಿದ್ದಾರೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ಮಿತಿಮೀರಿ ನಡೆಯುತ್ತಿದೆ. ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜ್ಯದ ಎಲ್ಲಾ ಬಿಜೆಪಿ ನಾಯಕರೂ ಡೋಂಗಿಗಳೇ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಹಿರಿಯ ನಾಯಕ ರಾಮಲಿಂಗಾ ರೆಡ್ಡಿ ಕಿಡಿಕಾರಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ಅಮೆರಿಕ ಮೂಲದ ಸಂಸ್ಥೆಯೊಂದು ಡಾಕ್ಟರೇಟ್ ಗೌರವ ಘೋಷಿಸಿತ್ತು. ಈ ಕುರಿತು ಅಪಹಾಸ್ಯ …
Read More »ಸರಿಗಮಪ ಚೆನ್ನಪ್ಪ ಹುದ್ದಾರ್ ಎಲ್ಲಿ ಕಾಣೆಯಾಗಿದ್ದಾರೆ?
ಸರಿಗಮಪ ಚೆನ್ನಪ್ಪ ಹುದ್ದಾರ್ ಎಲ್ಲಿ ಕಾಣೆಯಾಗಿದ್ದಾರೆ? ಜೀ ಕನ್ನಡ ಸಿರಿಗಮಪ ಸೀಸನ್ 11ರ ವಿಜೇತ ಚನ್ನಪ್ಪ ಹುದ್ದಾರ್ ಚಿತ್ರರಂಗಕ್ಕೆ ನಾಯಕನಾಗಿ ಪಾದಾರ್ಪಣೆ ಮಾಡಿದ ನಂತರ ಎಲ್ಲಿಯೂ ಕಾಣಿಸಿಕೊಳ್ಳುತ್ತಿಲ್ಲ ಎಂಬುದು ನೆಟ್ಟಿಗರ ಆರೋಪ. ಚನ್ನಪ್ಪ ಏನು ಮಾಡುತ್ತಿದ್ದಾರೆ ಎಂಬುದಕ್ಕೆ ಕ್ಲಾರಿಟಿ ಇಲ್ಲಿದೆ ನೋಡಿ. ಚೆನ್ನಪ್ಪ ಹುದ್ದಾರ್ ಕನ್ನಡ ಚಿತ್ರರಂಗದಲ್ಲಿ ಸಕ್ರಿಯವಾಗಿರುವ ಹಿನ್ನೆಲೆ ಗಾಯಕ. ಇವರು ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಸರಿಗಮಪ ಕಾರ್ಯಕ್ರಮದ 11 ನೇ ಸೀಸನ್ ನ ವಿಜೇತರು. ಈ …
Read More »ಯುವಕನೋರ್ವ ಹಲ್ಲುಜ್ಜುತ್ತಾ ಟೂಥ್ ಬ್ರಶ್ ನುಂಗಿರುವ ವಿಚಿತ್ರ ಘಟನೆ
ಮುಂಬೈ: ಯುವಕನೋರ್ವ ಹಲ್ಲುಜ್ಜುತ್ತಾ ಟೂಥ್ ಬ್ರಶ್ ನುಂಗಿರುವ ವಿಚಿತ್ರ ಘಟನೆ ಮಹಾರಾಷ್ಟ್ರದ ಔರಂಗಾಬಾದ್ ನಲ್ಲಿ ನಡೆದಿದೆ. ವಿಜಯ್ ಜನಾರ್ಧನ್ ಬ್ರಶ್ ನುಂಗಿದ ಯುವಕ. ಡಿಸೆಂಬರ್ 26ರಂದು ಬೆಳಗ್ಗೆ ಹಲ್ಲುಜ್ಜುವಾಗ ಬ್ರಶ್ ನುಂಗಿದ್ದಾನೆ. ಕೆಲ ಸಮಯದ ಬಳಿಕ ಹೊಟ್ಟೆ ನೋವು ಕಾಣಿಸಿಕೊಂಡಾಗ ವಿಜಯ್ ನನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿದ್ದಾರೆ. ವೈದ್ಯರು ಎಕ್ಸ್ ರೇ ಮಾಡಿದಾಗ ಅವರಿಗೂ ಗೊತ್ತಾಗಿಲ್ಲ. ಸಿಟಿ ಸ್ಕ್ಯಾನ್ ಮಾಡಿದಾಗ ಟೂಥ್ಬ್ರಶ್ ಕಂಡಿದ್ದು, ತಡಮಾಡದೇ ಶಸ್ತ್ರಚಿಕಿತ್ಸೆ ನಡೆಸಿ ಯುವಕನ ಜೀವ …
Read More »ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ.
ಹುಬ್ಬಳ್ಳಿ – ಮಾಜಿ ಮುಖ್ಯಮಂತ್ರಿ, ಹಾಲಿ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಭಾರಿ ಅಪಾಯವೊಂದರಿಂದ ಸ್ವಲ್ಪದರಲ್ಲಿ ಪಾರಾಗಿದ್ದಾರೆ. ಹುಬ್ಬಳ್ಳಿಯಲ್ಲಿ ವಿವಿಧ ಕಾಮಗಾರಿಗಳ ವೀಕ್ಷಣೆ ವೇಳೆ ಈ ಘಟನೆ ನಡೆದಿದೆ. ಹುಬ್ಬಳ್ಳಿಯ ದೇಶಪಾಂಡೆ ನಗರದಲ್ಲಿ ರೈಲ್ವೆ ಕೆಳ ಸೇತುವೆ ಕಾಮಗಾರಿ ವೀಕ್ಷಿಸಲು ಜಗದೀಶ ಶೆಟ್ಟರ್ ತೆರಳಿದ್ದರು. ಅವರು ವೀಕ್ಷಣೆ ಮಾಡಿ ಹೊರಬಂದ ತಕ್ಷಣ ಅಲ್ಲಿ ಭಾರಿ ಪ್ರಮಾಣದಲ್ಲಿ ಮಣ್ಣು ಕುಸಿದಿದೆ. ಜಗದೀಶ್ ಶೆಟ್ಟರ್ ಹಾಗೂ ಅವರ ಜೊತೆಯಲ್ಲಿದ್ದವರೆಲ್ಲ ಸ್ವಲ್ಪದರಲ್ಲಿ ಈ ಅವಘಡದಿಂದ ಪಾರಾಗಿದ್ದಾರೆ. …
Read More »ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ.:
ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಬೇಡ. ಅವಧಿ ಮುಗಿಯುವವರೆಗೂ ಬಿ.ಎಸ್. ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು. ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ …
Read More »ಬೆಂಗಳೂರು: ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಡಿ. ರೂಪಾ ಅವ್ರು, ‘ನಾಳೆಯಿಂದ ಹೊಸ ಹುದ್ದೆ ನಿಭಾಯಿಸಲಿದ್ದೇನೆ. ವರ್ಗಾವಣೆ ಆಗಿರೋದಕ್ಕೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ. ನನ್ನ ವೃತ್ತಿ ಜೀವನದ ವರ್ಷಗಳಿಗಿಂತ ಹೆಚ್ಚು ಬಾರಿ ನಾನು ವರ್ಗಾವಣೆಯಾಗಿದ್ದೇನೆ. ತಪ್ಪು ತೋರಿಸುವುದು, ಸತ್ಯಾಂಶ ಎತ್ತಿ ಹಿಡಿಯುವುದು ಯಾವಾಗಲೂ ಅಪಾಯದಿಂದ ಕೂಡಿರುತ್ತೆ ಅನ್ನೋದು ಗೊತ್ತಿದೆ. ಆದ್ರೆ, ರಾಜಿಯಾಗದೆ ನನ್ನ ಕೆಲಸ ನಾನು ಮುಂದುವರಿಸುತ್ತೇನೆ’ ಎಂದರು.
ಬೆಂಗಳೂರು: ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಡಿ. ರೂಪಾ ಅವ್ರು, …
Read More »ಸೌರವ್ ಗಂಗೂಲಿಗೆ ಲಘು ಹೃದಯಾಘಾತ..!
ನವದೆಹಲಿ,ಜ.2- ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ವುಡ್ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ. 48 ವರ್ಷದ ಗಂಗೂಲಿ ಅವರಿಗೆ ಲಘು ಹೃದಯಾಘಾತ ವಾಗಿದೆ. ಅದೃಷ್ಟವಶಾತ್ ತೊಂದರೆಯೇನಿಲ್ಲ. ಈಗ ಅವರು ಅರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತಮ್ಮ ಮನೆಯ ಜಿಮ್ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಆಯಾಸಗೊಂಡಿದ್ದರು. ಕುಸಿದು ಬಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ. ಪರೀಕ್ಷೆ …
Read More »ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 2.50 ಕೆ.ಜಿ. ಚಿನ್ನ ವಶ
ಬೆಂಗಳೂರು, ಜ.2- ಮಂಗಳೂರು ಮತ್ತು ಬೆಂಗಳೂರು ಅಂತಾತ್ಟರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಎರಡು ಕಡೆಯಿಂದ ಕಳ್ಳಸಾಗಾಣಿಕೆಯಾಗುತ್ತಿದ್ದ ಒಟ್ಟು 2.50 ಕೆ.ಜಿ. ಚಿನ್ನ ಪತ್ತೆಯಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ಗುಪ್ತಚರ ಅಧಿಕಾರಿಗಳು 1024 ಗ್ರಾಮ್ ತೂಕದ ಒಟ್ಟು 52,89,984 ರೂ. ಮೌಲ್ಯದ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಚಿನ್ನವನ್ನು ಪೆಸ್ಟ್ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು …
Read More »