Breaking News

Uncategorized

ಫೆ.15 ರಿಂದ ಎಲ್ಲಾ ವಾಹನಗಳಿಗೆ `FASTAG’ ಕಡ್ಡಾಯ

ದೆಹಲಿ : ಫೆಬ್ರವರಿ 15 ರಿಂದಲೇ ದೇಶಾದ್ಯಂತ ಫಾಸ್ಟ್ಯಾಗ್ ಜಾರಿಗೆ ಬರಲಿದ್ದು. ಕೊರೊನಾ ಮತ್ತು ನಾನಾ ಕಾರಣಗಳಿಂದ ಹಲವು ಬಾರಿ ಮುಂದೂಡಲ್ಪಟ್ಟಿದ್ದ ಈ ವ್ಯವಸ್ಥೆ ಜಾರಿ ದಿನಾಂಕವನ್ನು ಯಾವುದೇ ಕಾರಣಕ್ಕೂ ಮುಂದೂಡದಿರಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಫೆಬ್ರವರಿ 15 ರಿಂದ ಟೋಲ್ ಗೇಟ್ ಗಳಲ್ಲಿ ಸಂಪೂರ್ಣವಾಗಿ ಫಾಸ್ಟ್ ಟ್ಯಾಗ್ ಪಾವತಿ ಕಡ್ಡಾಯ ಎಂದು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ತಿಳಿಸಿತ್ತು. ಈ ಹಿಂದಿನಿಂದಲೂ ವಾಹನಗಳಿಗೆ ಫಾಸ್ಟ್ಯಾಗ್ ಕಡ್ಡಾಯವಾಗಲಿದೆ ಎಂದು ಹೇಳುತ್ತಲೇ …

Read More »

ಮನೆಯಲ್ಲೇ ಕುಳಿತು ಅಂಚೆ ಕಚೇರಿ ಖಾತೆ ನಿರ್ವಹಿಸಲು ಇಲ್ಲಿದೆ ಮಾಹಿತಿ

ಇಂಡಿಯಾ ಪೋಸ್ಟ್ ಪೇಮೆಂಟ್ಸ್ ಬ್ಯಾಂಕ್ ತನ್ನ ಗ್ರಾಹಕರಿಗೆ ಐಪಿಪಿಬಿ ಮೊಬೈಲ್ ಅಪ್ಲಿಕೇಶನ್ ಮೂಲಕ ಡಿಜಿಟಲ್ ಉಳಿತಾಯ ಖಾತೆ ತೆರೆಯುವ ಸೌಲಭ್ಯವನ್ನು ನೀಡ್ತಿದೆ. ಐಪಿಪಿಬಿ ಮೊಬೈಲ್ ಅಪ್ಲಿಕೇಶನ್ ಆಂಡ್ರಾಯ್ಡ್ ಫೋನ್‌ ನ ಪ್ಲೇ ಸ್ಟೋರ್‌ನಿಂದ ಅಥವಾ ಐಫೋನ್‌ ಆಪ್ ಸ್ಟೋರ್‌ನಿಂದ ಇದನ್ನು ಡೌನ್ಲೋಡ್ ಮಾಡಬಹುದು. 18 ವರ್ಷಕ್ಕಿಂತ ಮೇಲ್ಪಟ್ಟ ಯಾವುದೇ ವ್ಯಕ್ತಿ, ಆಧಾರ್ ಮತ್ತು ಪ್ಯಾನ್ ಕಾರ್ಡ್ ಹೊಂದಿರುವವರು ಈ ಖಾತೆಯನ್ನು ತೆರೆಯಬಹುದು. ಮನೆಯಲ್ಲಿ ಕುಳಿತು ಆರಾಮವಾಗಿ ಈ ಖಾತೆ ತೆರೆಯಬಹುದು. …

Read More »

ಈಗ ಜಾತಿ, ಅಹಿಂದ, ಹಿಂದ ಅಂತಾ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ: ಸಿದ್ದರಾಮಯ್ಯಗೆ ಟಾಂಗ್ ನೀಡಿದ ರಮೇಶ್ ಜಾರಕಿಹೊಳಿ

ಬೆಂಗಳೂರು: ಸಿದ್ದರಾಮಯ್ಯ ಅಹಿಂದ ಸಮಾವೇಶ ನಡೆಸುವ ವಿಚಾರ ರಾಜ್ಯದಲ್ಲಿ ಹೊಸ ಚರ್ಚೆ ಹುಟ್ಟುಹಾಕಿದ್ದು, ಈ ಬಗ್ಗೆ ಪ್ರತಿಕ್ರಿಯಿಸಿರುವ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ, ಈಗ ಜಾತಿ, ಅಹಿಂದ, ಹಿಂದ ಅಂತಾ ಏನೂ ಇಲ್ಲ. ಈಗ ಏನಿದ್ದರೂ ಹಿಂದುತ್ವ ಮಾತ್ರ ಎಂದು ಟಾಂಗ್ ನೀಡಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಜಾರಕಿಹೊಳಿ, ಸಮಾವೇಶವನ್ನು ಅವರು ಪಕ್ಷಾತೀತವಾಗಿ ಮಾಡುತ್ತಿದ್ದಾರೆ. ಪಕ್ಷದಿಂದ ಮಾಡುತ್ತಿದ್ದೇವೆ ಎಂದು ಅವರು ಹೇಳಲಿ. ಆಗ ಗೊತ್ತಾಗುತ್ತೆ ಕಾಂಗ್ರೆಸ್ ಅಹಿಂದಕ್ಕೆ ಸೇರಿರೋದು ಅಂತ ಎಂದು …

Read More »

ಎಪಿಎಂಸಿಗಳ ವರಮಾನಕ್ಕೆ ಹೊಡೆತ ಶುರು!

ಬೆಳಗಾವಿ: ಸರ್ಕಾರವು, ಕೃಷಿ ಉತ್ಪನ್ನಗಳ ವಹಿವಾಟಿಗೆ ಮುಕ್ತ ಅವಕಾಶ ಕಲ್ಪಿಸಿರುವುದರಿಂದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳ (ಎಪಿಎಂಸಿ) ಮೇಲೆ ವ್ಯತಿರಿಕ್ತ ಪರಿಣಾಮ ಬೀರುವುದು ಶುರುವಾಗಿದೆ. ಆ ಸಮಿತಿಗಳ ‘ಸೆಸ್‌’ ಸಂಗ್ರಹ ಪ್ರಮಾಣ ಗಣನೀಯ ಪ್ರಮಾಣದಲ್ಲಿ ಕುಸಿಯುತ್ತಿರುವ ವಿದ್ಯಮಾನ ಕಂಡುಬರುತ್ತಿದೆ. ಎಪಿಎಂಸಿಗಳ ಮೇಲಿನ ಅವಲಂಬನೆಯಿಂದ ರೈತರು ಕ್ರಮೇಣ ‘ದೂರ’ ಸರಿಯುತ್ತಿದ್ದಾರೆಯೇ ಎನ್ನುವ ಅನುಮಾನವೂ ಕಾಡತೊಡಗಿದೆ. ಈರುಳ್ಳಿ, ಆಲೂಗಡ್ಡೆ, ಸಿಹಿಗೆಣಸು ಹಾಗೂ ತಾಜಾ ತರಕಾರಿಗಳಿಗೆ ಇಲ್ಲಿನ ಮಾರುಕಟ್ಟೆ ಬಹಳ ಪ್ರಸಿದ್ಧಿಯಾಗಿದೆ. ಜಿಲ್ಲೆ, ನೆರೆಯ …

Read More »

ನಾಳೆ ಬಿಬಿಎಂಪಿಯ ಎಲ್ಲಾ ಪೌರ ಕಾರ್ಮಿಕರಿಗೆ ಕೊರೊನಾ ಲಸಿಕೆ

ಬೆಂಗಳೂರು,ಫೆ.4- ಬಿಬಿಎಂಪಿ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರ ಕಾರ್ಮಿಕರು ನಾಳೆ ತಪ್ಪದೆ ಕೊರೊನಾ ಲಸಿಕೆ ಹಾಕಿಸಿಕೊಳ್ಳಬೇಕು ಎಂದು ಆಯುಕ್ತ ಮಂಜುನಾಥ್ ಪ್ರಸಾದ್ ಮನವಿ ಮಾಡಿಕೊಂಡಿದ್ದಾರೆ. ಘನತ್ಯಾಜ್ಯ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಲ್ಲಾ ಪೌರ ಕಾರ್ಮಿಕರು, ಆಟೋ, ಟಿಪ್ಪರ್ ಹಾಗೂ ಕಾಂಪ್ಯಾಕ್ಟರ್ ಚಾಲಕರು ನಾಳೆ ತಮ್ಮ 2ನೆ ಮಸ್ಟರಿಂಗ್ ಕಾರ್ಯ ಪೂರ್ಣಗೊಂಡ ಕೂಡಲೆ ಸ್ಥಳೀಯ ಅರೋಗ್ಯ ಕೇಂದ್ರಗಳಿಗೆ ತೆರಳಿ ಕೊರೊನಾ ಲಸಿಕೆ ಹಾಕಿಸಿಕೊಳ್ಳುವಂತೆ ಅವರು ತಿಳಿಸಿದ್ದಾರೆ.ಲಸಿಕೆ ಪಡೆದವರಿಗೆ ಅರ್ಧ ದಿನ …

Read More »

ರಾಜ್ಯಸಭೆಯಲ್ಲಿ ಮೋದಿ ಕಣ್ಣೀರಿನ ನಾಟಕ : ಶಶಿ ತರೂರ್ ಟೀಕೆ

ನವದೆಹಲಿ, ಫೆ.11- ರಾಜ್ಯಸಭೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿ, ಆಜಾದ್ ಅವರ ರಾಜ್ಯಸಭೆ ಅವಧಿ ಮುಗಿದಿದ್ದರಿಂದ ಭಾವನಾತ್ಮಕವಾಗಿ ಕಣ್ಣೀರು ಹರಿಸಿದ್ದನ್ನು ಕಾಂಗ್ರೆಸ್ ಮುಖಂಡ, ಸಂಸದ ಶಶಿ ತರೂರ್ ಟೀಕಿಸಿದ್ದಾರೆ. ಪ್ರಧಾನಿಯವರು ಬುಧವಾರ ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಗುಲಾಂ ನಬಿ ಆಜಾದ್ ಅವರ ಮೇಲೆ ತೋರಿದ ಭಾವನಾತ್ಮಕ ವಿದಾಯ ಭಾಷಣ ಒಂದು ರೀತಿಯಲ್ಲಿ ಕಲಾತ್ಮಕವಾಗಿ ರಚಿಸಲಾದ …

Read More »

ಪೆಟ್ರೋಲ್- ಡೀಸೆಲ್, ಅಡುಗೆ ಅನಿಲ ಬೆಲೆ ಏರಿಕೆ ಖಂಡಿಸಿ ವಾಟಾಳ್ ವಿನೂತನ ಪ್ರತಿಭಟನೆ

ಬೆಂಗಳೂರು, ಫೆ.11- ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ, ದಿನಸಿ ಪದಾರ್ಥಗಳ ಬೆಲೆ ಏರಿಕೆ ಖಂಡಿಸಿ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ನಗರದ ಮೈಸೂರು ಬ್ಯಾಂಕ್ ವೃತ್ತದಲ್ಲಿಂದು ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ವಿರುದ್ಧ ಕಿಡಿಕಾರಿದರು. ಸಿಲಿಂಡರ್‍ಅನ್ನು ಕತ್ತೆಯ ಮೇಲಿಟ್ಟು ಪ್ರತಿಭಟಿಸುವ ಮೂಲಕ ಬೆಲೆ ಏರಿಕೆಯನ್ನು ಖಂಡಿಸಿದರು. ನಂತರ ಮಾತನಾಡಿದ ಅವರು, ನಿರಂತರವಾಗಿ ಸಿಲಿಂಡರ್, ಪೆಟ್ರೋಲ್, ಡೀಸೆಲ್ ದರ ಏರಿಕೆಯಾಗುತ್ತಿರುವುದರಿಂದ ಜನಸಾಮಾನ್ಯರ ಬದುಕು …

Read More »

ರಾಜ್ಯ ಸರ್ಕಾರದಿಂದ ರೈತ ಸಮುದಾಯಕ್ಕೆ ಭರ್ಜರಿ ಸಿಹಿಸುದ್ದಿ : ಭತ್ತ, ರಾಗಿ, ತೊಗರಿ, ಶೇಂಗಾ, ಕಡಲೆಗೆ ‘ಬೆಂಬಲ ಬೆಲೆ’ ನಿಗದಿ

ಬೆಂಗಳೂರು : 2020-21ನೇ ಸಾಲಿನಲ್ಲಿ ಕನಿಷ್ಟ ಬೆಂಬಲ ಬೆಲೆಯೊಜನೆಯಡಿಯಲ್ಲಿ ಭತ್ತ, ರಾಗಿ, ಬಿಳಿಜೋಳ, ತೊಗರಿ, ಶೇಂಗಾ ಹಾಗೂ ಕಡೆಲೆ ಖರೀದಿಗೆ, ಇಂದು ನಡೆದಂತ ಸಂಪುಟ ಉಪ ಸಮಿತಿ ಸಭೆಯಲ್ಲಿ ದರ ನಿಗದಿ ಪಡಿಸಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್ ಸವದಿಯವರ ಅಧ್ಯಕ್ಷತೆಯಲ್ಲಿ ವಿಧಾನಸೌಧದಲ್ಲಿ ಕೃಷಿ ಮತ್ತು ತೋಟಗಾರಿಕೆ ಉತ್ಪನ್ನಗಳ ಬೆಲೆ ಕುಸಿದಾಗ ಬೆಲೆಗಳ ಸ್ಥಿರಿಕರಣಕ್ಕಾಗಿ …

Read More »

ವಿಶ್ವ ಮಾರುಕಟ್ಟೆಗೆ Mi 11 ಸ್ಮಾರ್ಟ್ ಫೋನ್ ಎಂಟ್ರಿ; ವಿಶೇಷತೆಗಳೇನು?

ನವದೆಹಲಿ: ವಿಶ್ವದ ಸ್ಮಾರ್ಟ್ ಪೋನ್ ,ಮಾರುಕಟ್ಟೆಯಲ್ಲಿ ತನ್ನದೇ ಆದ ಛಾಪನ್ನು ಮೂಡಿಸಿರುವ ಶಿಯೋಮಿ ಕಂಪನಿಯು ತನ್ನ Mi 11 ಸರಣಿಯ ಹೊಸ ಸ್ಮಾರ್ಟ್ ಫೋನ್ ಒಂದನ್ನು ವಿಶ್ವದಾದ್ಯಂತ ಮಾರುಕಟ್ಟೆಗೆ ಬಿಡುಗಡೆಗೊಳಿಸಿದ್ದು, ಇದು ತನ್ನ ವಿಭಿನ್ನ ಫೀಚರ್ ಗಳ ಮೂಲಕ ಮಾರುಕಟ್ಟೆಯಲ್ಲಿ ದೂಳೆಬ್ಬಿಸುತ್ತಿದೆ. ಗ್ರಾಹಕ ಸ್ನೇಹಿ ಸ್ಮಾರ್ಟ್ ಪೋನ್ ಎಂಬ ಪ್ರಖ್ಯಾತಿಗೆ ಪಾತ್ರವಾಗಿರುವ Mi ಸ್ಮಾರ್ಟ್ ಪೋನ್ ಕಳೆದ ವರ್ಷದ ಕೊನೆಯಲ್ಲಿ ಈ ಹೊಸ ಆವೃತ್ತಿಯ Mi 11 ಮೊಬೈಲ್ ಪೋನ್ …

Read More »

ಕುರುಬ ಸಮುದಾಯವನ್ನು ಒಡೆಯುವುದೇ ಬಿಜೆಪಿಯವರ ಮುಖ್ಯ ಉದ್ದೇಶ: ಸಿದ್ದರಾಮಯ್ಯ

ಹುಬ್ಬಳ್ಳಿ: ಕುರುಬ ಸಮುದಾಯವನ್ನು ಒಡೆಯುವುದೇ ಆರ್‌ಎಸ್‌ಎಸ್‌ ಮತ್ತು ಬಿಜೆಪಿಯವರ ಮುಖ್ಯ ಉದ್ದೇಶ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಕುರುಬ ಸಮುದಾಯದ ಮೀಸಲಾತಿ ಹೋರಾಟದ ವಿಚಾರವಾಗಿ ಗುರುವಾರ ಸರಣಿ ಟ್ವೀಟ್‌ ಮಾಡಿರುವ ಅವರು, ‘ಕುರುಬರ ಮೀಸಲಾತಿ ಹೋರಾಟದಲ್ಲಿ ಆರ್.ಎಸ್.ಎಸ್ ಮತ್ತು ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ. ಕುರುಬ ಸಮುದಾಯವನ್ನು ಒಡೆಯುವುದೇ ಅವರ ಮುಖ್ಯ ಉದ್ದೇಶ’ ಎಂದು ಹರಿಹಾಯ್ದಿದ್ದಾರೆ. ‘ಬಿಜೆಪಿ ಮುಖಂಡ ಈಶ್ವರಪ್ಪನವರು ಹೋರಾಟ ಮಾಡುತ್ತಿರೋದು ಯಾರ ವಿರುದ್ಧ? ತಮ್ಮದೇ ಸರ್ಕಾರದ …

Read More »