ಮೈಸೂರು (ಫೆ. 10): ರಾಜ್ಯದಲ್ಲಿ ಹಿಂದುಳಿದವರು, ದಲಿತರು, ಅಲ್ಪಸಂಖ್ಯಾತರಿಗೆ ಅನ್ಯಾಯವಾದರೆ ರಸ್ತೆಗಿಳಿದು ಹೋರಾಟ ಮಾಡುವುದಾಗಿ ಮೈಸೂರಿನ ಸುತ್ತೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಕೇಂದ್ರ ರಾಜ್ಯ ಬಿಜೆಪಿ ಸರ್ಕಾರಗಳು ಮೀಸಲಾತಿ ವಿರುದ್ದ ಇವೆ. ಖಾಸಗೀಕರಣದ ಹೆಸರಿನಲ್ಲಿ ಮೀಸಲಾತಿಯನ್ನು ಕಿತ್ತುಕೊಳ್ಳುತ್ತಿವೆ. ಅಂತಹ ಪರಿಸ್ಥಿತಿ ಬಂದರೆ ಅಹಿಂದ ಪರವಾಗಿ ಹೋರಾಟ ನಡೆಸಲು ಸಿದ್ಧನಿದ್ದೇನೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಹರಿಹಾಯ್ದಿದ್ದಾರೆ. ಕುರುಬರಿರಲಿ ಅಥವಾ ಯಾರೇ ಇರಲಿ ಅವರಿಗೆ ಸಂವಿಧಾನಾತ್ಮಕವಾಗಿ ಮೀಸಲಾತಿ …
Read More »ಸವದತ್ತಿ ಯಲ್ಲಮ್ಮ ಭಕ್ತರ ದರ್ಶನಕ್ಕೆ ಮುಕ್ತ , ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ.
ಬೆಳಗಾವಿ (ಫೆ. 9); ಉತ್ತರ ಕರ್ನಾಟಕದ ಶಕ್ತಿ ದೇವತೆ ಸವದತ್ತಿ ಯಲ್ಲಮ್ಮ. 11 ತಿಂಗಳ ಬಳಿಕ ದೇವಾಲಯ ಭಕ್ತರ ದರ್ಶನಕ್ಕೆ ಮುಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಲಕ್ಷಾಂತರ ಜನ ಭಕ್ತ ಸಾಗರ ಹರಿದು ಬರುತ್ತಿದೆ. ಪ್ರತಿ ಮಂಗಳವಾರ, ಶುಕ್ರವಾರ ಒಂದು ಲಕ್ಷ ಭಕ್ತರು ದೇವಸ್ಥಾನಕ್ಕೆ ಬರುತ್ತಿದ್ದಾರೆ. ಪ್ರತಿ ದಿನ ದೇವಿಯ ದರ್ಶನ ಪಡೆಯಲು 20 ಸಾವಿರ ಜನ ಬರುತ್ತಿದ್ದಾರೆ. ಭಕ್ತರನ್ನು ನಿಯಂತ್ರಿಸಲು ಆಡಳಿತ ಮಂಡಳಿ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದೆ. ಬೆಳಗಾವಿ ಜಿಲ್ಲೆಯ …
Read More »ರಾಜ್ಯ ಸರ್ಕಾರದಿಂದಲೂ ತೆರಿಗೆ ಬರೆ..! ಬಿಎಸ್ವೈ ಬಜೆಟ್ನಲ್ಲಿ ಕಾದಿದೆ ಶಾಕ್..?
ಬೆಂಗಳೂರು,ಫೆ.10- ಈ ಬಾರಿ ಕೋವಿಡ್-19 ಬಂದ ಹಿನ್ನೆಲೆಯಲ್ಲಿ ಸರ್ಕಾರದ ಬೊಕ್ಕಸಕ್ಕೆ ನಿರೀಕ್ಷಿತ ಪ್ರಮಾಣದ ತೆರಿಗೆ ಸಂಗ್ರಹವಾಗದಿರುವ ಕಾರಣ ಈ ಬಾರಿಯ ಬಜೆಟ್ನಲ್ಲಿ ತೆರಿಗೆ ಹೆಚ್ಚಳ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದ್ದು ಜನಸಾಮಾನ್ಯರಿಗೆ ಮತ್ತಷ್ಟು ಹೊರೆಯಾಗಲಿದೆ. ಮಾರ್ಚ್ ತಿಂಗಳ ಎರಡನೇ ವಾರದಲ್ಲಿ ಹಣಕಾಸು ಖಾತೆಯನ್ನು ಹೊಂದಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು 2021-22ನೇ ಸಾಲಿನ ಬಜೆಟ್ ಮಂಡನೆ ಮಾಡಲಿದ್ದು ಈಗಾಗಲೇ ಇಲಾಖಾವಾರು ಸಭೆಗಳನ್ನು ನಡೆಸುತ್ತಿದ್ದಾರೆ. ಕಳೆದ ವರ್ಷ ಸರ್ಕಾರ ಇಟ್ಟುಕೊಂಡಿದ್ದ ತೆರಿಗೆ ಸಂಗ್ರಹಣೆ …
Read More »ಮೀಸಲು ಸವಾಲು : ಇನ್ನಷ್ಟು ಜಾತಿಗಳಿಂದ ಮುಖ್ಯಮಂತ್ರಿಗೆ ಹೆಚ್ಚಿದ ಒತ್ತಡ
ಬೆಂಗಳೂರು: ರಾಜ್ಯದಲ್ಲಿ ಮೀಸಲಾತಿ ಕೂಗು ಬಲವಾಗಿದೆ. ಕುರುಬ ಮತ್ತು ಪಂಚಮಸಾಲಿ ಜನಾಂಗದವರು ಪಾದಯಾತ್ರೆ ನಡೆಸಿ ಹೋರಾಟ ತೀವ್ರಗೊಳಿಸಿದ್ದಾರೆ. ಇದರ ಮಧ್ಯೆ ಇನ್ನಷ್ಟು ಜಾತಿಗಳು ವಿವಿಧ ಬೇಡಿಕೆಗಳೊಂದಿಗೆ ಹೋರಾಟಕ್ಕಿಳಿಯಲು ಸಜ್ಜಾಗಿವೆ. ಮೀಸಲಾತಿಯು ರಾಜ್ಯ ಸರಕಾರಕ್ಕೆ ಬಿಡಿಸಲಾರದ ಕಗ್ಗಂಟಾಗಿ ಪರಿಣಮಿಸುವ ಸಾಧ್ಯತೆಗಳು ಹೆಚ್ಚಾಗಿವೆ. ಯಾರ ಬೇಡಿಕೆ ಏನು? ಪಂಚಮಸಾಲಿ ವೀರಶೈವ ಲಿಂಗಾಯತ ಸಮುದಾಯದ ಒಂದು ಒಳ ಪಂಗಡ. ಸದ್ಯ 3ಬಿ ಪ್ರವರ್ಗದಲ್ಲಿದೆ. ಈಗ 2ಎಗೆ ಸೇರಿಸಿ ಎಂಬುದು ಆಗ್ರಹ. ಸರಕಾರವು ಈ ಬಗ್ಗೆ ಅಧ್ಯಯನ …
Read More »BIG NEWS : ಕೇಂದ್ರ ಸರ್ಕಾರದ ನಡೆ ವಿರೋಧಿಸಿ ಮಾರ್ಚ್ 15, 16ರಂದು ‘ಭಾರತದಾದ್ಯಂತ ಬ್ಯಾಂಕ್ಗಳ ಮುಷ್ಕರ
ನವದೆಹಲಿ: ಒಂಬತ್ತು ಒಕ್ಕೂಟಗಳ ಒಕ್ಕೂಟವಾದ ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್ ಬಿಯು) ಎರಡು ಸರ್ಕಾರಿ ಸ್ವಾಮ್ಯದ ಬ್ಯಾಂಕ್ಗಳನ್ನು ಖಾಸಗೀಕರಣಗೊಳಿಸುವ ಪ್ರಸ್ತಾಪವನ್ನು ವಿರೋಧಿಸಿ ಮಾರ್ಚ್ ನಲ್ಲಿ ಎರಡು ದಿನಗಳ ಮುಷ್ಕರಕ್ಕೆ ಕರೆ ನೀಡಿದೆ. ಮಾರ್ಚ್ 15ರಿಂದ ಎರಡು ದಿನಗಳ ಮುಷ್ಕರ ಆರಂಭಿಸಲಾಗುತ್ತದೆ ಎಂದು ಯುಎಫ್ ಬಿಯು ತಿಳಿಸಿದೆ. ಮಂಗಳವಾರ ನಡೆದ ಯುಎಫ್ ಬಿಯು ಸಭೆಯಲ್ಲಿ ಬ್ಯಾಂಕ್ ಗಳ ಖಾಸಗೀಕರಣದ ಸರ್ಕಾರದ ನಿರ್ಧಾರವನ್ನು ವಿರೋಧಿಸಲು ನಿರ್ಧರಿಸಲಾಗಿದೆ ಎಂದು ಅಖಿಲ ಭಾರತ …
Read More »ಬನ್ನಿ, ಸೈಬರ್ ಸ್ವಯಂ ಸೇವಕರಾಗಿ :ದೇಶದ್ರೋಹಿ ಪೋಸ್ಟ್ ಮೇಲೆ ಕಣ್ಣಿಡಲು ಜನರಿಗೆ ಕೇಂದ್ರ ಕರೆ
ಹೊಸದಿಲ್ಲಿ: ಟ್ವಿಟರ್, ಫೇಸ್ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿನ ದೇಶ ವಿದ್ರೋಹಿ ಪೋಸ್ಟ್ಗಳ ಮೇಲೆ ಹದ್ದಿನ ಕಣ್ಣಿಡಲು ಜನರನ್ನೇ ಬಳಸಿಕೊಳ್ಳಲು ಕೇಂದ್ರ ಸರಕಾರ ಮುಂದಾಗಿದೆ. ಈ ಸಂಬಂಧ “ಸೈಬರ್ ಕ್ರೈಮ್ ಸ್ವಯಂ ಸೇವಕರಾಗಿ ಬನ್ನಿ’ ಎಂದು ಜನರಿಗೆ ಕರೆ ನೀಡಿದೆ. ಇದರಲ್ಲಿ ಸ್ವಯಂ ಸೇವಕರಾಗುವವರು ಮಹಿಳೆಯರು, ಮಕ್ಕಳ ವಿರುದ್ಧದ ಕೆಟ್ಟ ರೀತಿಯ ಪೋಸ್ಟ್ಗಳು ಹಾಗೂ ದೇಶದ ಸಾರ್ವಭೌಮತ್ವಕ್ಕೆ ಧಕ್ಕೆ ತರುವಂತೆ ಪೋಸ್ಟ್ಗಳ ಬಗ್ಗೆ ಸರಕಾರಕ್ಕೆ ವರದಿ ಮಾಡಬಹುದಾಗಿದೆ. ಕಳೆದ ವಾರವಷ್ಟೇ …
Read More »ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ : ಸತೀಶ್ ಜಾರಕಿಹೊಳಿ,
ಬೆಂಗಳೂರು: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ, ಪಕ್ಷ ಹೇಳಿದರೆ ಅನಿವಾರ್ಯವಾಗಿ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆ ಸಂಬಂಧ ಈಗಾಗಲೇ 2-3 ಸುತ್ತಿನ ಸಭೆ ನಡೆದಿದೆ. ಪಕ್ಷದವರು ಮೂವರ ಹೆಸರನ್ನು ವರಿಷ್ಠರಿಗೆ ಕಳುಹಿಸಿದ್ದಾರೆ. ಪಕ್ಷ ಹೇಳಿದರೆ ಉಪಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ ಎಂದರು. ಇನ್ನು ವಾಲ್ಮೀಕಿ ಸಮುದಾಯಕ್ಕೆ ಶೇ.7.5ರಷ್ಟು ಮೀಸಲಾತಿ ಹೆಚ್ಚಳ ವಿಚಾರಕ್ಕೆ ಸಂಬಂಧಿಸಿದಂತೆ …
Read More »ನಾವು ಸದಾ ಜಾಗೃತರಾಗಿ, ಸಂಘಟಿತರಾದರೆ ಮಾತ್ರ ನಮ್ಮ ಮುಂದಿನ ಭವಿಷ್ಯ ಉಜ್ವಲವಾಗಲಿದೆ: ರಮೇಶ್ ಜಾರಕಿಹೊಳಿ
ಹರಿಹರ: ಸಮಾಜದಲ್ಲಿ ಜಾಗೃತಿ ನಿರ್ಮಾಣ ಮತ್ತು ಸಬಲ ಸಂಘಟನೆಯ ದೃಷ್ಟಿಯಿಂದ ಮಹರ್ಷಿ ವಾಲ್ಮೀಕಿ ಜಾತ್ರೆಯನ್ನು ಹಮ್ಮಿಕೊಂಡಿದ್ದು, ನ್ಯಾಯಸಮ್ಮತವಾಗಿ ಸವಲತ್ತುಗಳನ್ನು ಪಡೆಯಲು ಸಂಘಟನಾ ಶಕ್ತಿ ಪ್ರದರ್ಶಿಸಬೇಕಾದ ಸಂದರ್ಭ ಇದಾಗಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಹರಿಹರ ತಾಲ್ಲೂಕಿನ ರಾಜನಹಳ್ಳಿ ಗ್ರಾಮದಲ್ಲಿರುವ ವಾಲ್ಮೀಕಿ ಗುರುಪೀಠದಲ್ಲಿ ಹಮ್ಮಿಕೊಳ್ಳಲಾಗಿದ್ದ 3 ನೇ ವರ್ಷದ ಮಹರ್ಷಿ ವಾಲ್ಮೀಕಿ ಜಾತ್ರೆ ಮತ್ತು ಜನಜಾಗೃತಿ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಚಿವ ರಮೇಶ್ ಜಾರಕಿಹೊಳಿ, ನಾಯಕ ಜನಾಂಗದ …
Read More »ವಿದ್ಯಾರ್ಥಿನಿ ಜತೆ ಲೆಕ್ಚರರ್ ಮಗನ ಕಾಮಪುರಾಣ!
ಬೆಂಗಳೂರು: ತಾನು ಓದುತ್ತಿದ್ದ ಕಾಲೇಜಿನ ಲೆಕ್ಚರರ್ರೊಬ್ಬರ ಮಗನ ಪ್ರೇಮಪಾಶಕ್ಕೆ ಸಿಕ್ಕ ವಿದ್ಯಾರ್ಥಿನಿ, ಇದೀಗ ನ್ಯಾಯಕ್ಕಾಗಿ ವಿದ್ಯಾರಣ್ಯಪುರ ಪೊಲೀಸ್ ಠಾಣೆ ಮೆಟ್ಟಿಲೇರಿದ್ದಾಳೆ. ಸಂತ್ರಸ್ತ ಯುವತಿ ಕೊಟ್ಟ ದೂರಿನ ಮೇರೆಗೆ ಆರೋಪಿ ಚಂದನ್ನನ್ನು ಪೊಲೀಸರು ಬಂಧಿಸಿದ್ದಾರೆ. ಚಂದನ್ ತಾಯಿ ನಗರದ ಕಾಲೇಜೊಂದರ ಲೆಕ್ಚರರ್. ಆ ಯುವತಿಯೂ ಅದೇ ಕಾಲೇಜಿನ ವಿದ್ಯಾರ್ಥಿನಿ. ಲೆಕ್ಚರರ್ನನ್ನು ನೋಡೋಕೆ ಎಂದು ವಿದ್ಯಾರ್ಥಿನಿ ಮನೆಗೆ ಬಂದ ವೇಳೆ ಚಂದನ್ ಪರಿಚಯವಾಗಿತ್ತು. ಇವರಿಬ್ಬರ ನಡುವೆ ಸಲುಗೆ ಬೆಳೆದು ಪ್ರೀತಿಗೆ ತಿರುಗಿತ್ತು. ಮುಂದೆ …
Read More »ವೇಶ್ಯೆ ಸೋಗಲ್ಲಿ ಯುವಕರ ಕೋಣೆಗೆ ಆಂಟಿ ಎಂಟ್ರಿ!
ಬೆಂಗಳೂರು: ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ವೇಶ್ಯೆ ಸೋಗಿನಲ್ಲಿ ಗಿರಾಕಿಗಳ ಮನೆಗೆ ಕಳುಹಿಸಿ, ದಿನಕ್ಕೆ 1.5 ಲಕ್ಷ ಹಣ ಪೀಕುತ್ತಿದ್ದ ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ. 3 ವರ್ಷದಿಂದ ಹಲವು ಯುವಕರಿಗೆ ಗಾಳ ಹಾಕಿದ್ದ ಈ ದಂಪತಿ, ಕೊನೆಗೂ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಉಲ್ಲಾಳ ಉಪನಗರ ವಿಶ್ವೇಶ್ವರ ಲೇಔಟ್ನ ಭಾಸ್ವತಿ ದತ್ತಾ (26) ಮತ್ತು ಕಿರಣ್ ರಾಜ್ (33) ಬಂಧಿತ ದಂಪತಿ. ನಾಗಮಂಗಲದ ಕಿರಣ್ ಮತ್ತು ಪಶ್ಚಿಮ ಬಂಗಾಳದ ಭಾಸ್ವತಿ ದತ್ತಾ 2018ರಂದು …
Read More »
Laxmi News 24×7