Breaking News

Uncategorized

ಪಾಕ್-ಟೀಂ ಇಂಡಿಯಾ ಮ್ಯಾಚ್ ವೀಕ್ಷಣೆ ವೇಳೆ ಹೃದಯಾಘಾತದಿಂದ ವ್ಯಕ್ತಿ ಸಾವು

ಕೊಡಗು: ನಿನ್ನೆ ನಡೆದ ಐಸಿಸಿ ಮೆನ್ಸ್​ ಟಿ 20 ವರ್ಲ್ಡ್​​ಕಪ್​ನಲ್ಲಿ ಟೀಂ ಇಂಡಿಯಾ- ಪಾಕಿಸ್ತಾನ ನಡುವಿನ ಹೈವೋಲ್ಟೇಜ್ ಮ್ಯಾಚ್ ನಡೆಯಿತು. ಈ ಮ್ಯಾಚ್​ನಲ್ಲಿ ಟೀಂ ಇಂಡಿಯಾ ಪಾಕ್ ಟೀಂ ಎದುರು ಸೋಲನುಭವಿಸಿತು. ದುರಂತವೆಂದರೆ ಈ ಮ್ಯಾಚ್ ವೀಕ್ಷಣೆ ವೇಳೆ 55 ವರ್ಷದ ವ್ಯಕ್ತಿಯೋರ್ವ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಘಟನೆ ನಡೆದಿದ್ದು ಇಂಡಿಯಾ-ಪಾಕಿಸ್ತಾನ್ ಟಿ-20 ಪಂದ್ಯದ ವೇಳೆ ಉದಯ್ ಎಂಬ 55 ವರ್ಷದ ವ್ಯಕ್ತಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಉದಯ್ ಅವರು …

Read More »

ವಿಮಾನ ನಿಲ್ದಾಣದಲ್ಲಿ ಹಾಟ್​ ಆಗಿ ಕಾಣಿಸಿಕೊಂಡ ಶಾಹಿದ್​ ಕಪೂರ್​ ಪತ್ನಿ

ಶಾಹಿದ್​ ಕಪೂರ್ ಮತ್ತು ಮೀರಾ ರಜಪೂತ್​ ಅವರು ಮಾಲ್ಡೀವ್ಸ್​ ಪ್ರವಾಸಕ್ಕೆ ಹೋಗಿದ್ದರು. ವಾಪಸ್​ ಬರುವಾಗ ಮುಂಬೈ ಏರ್​ಪೋರ್ಟ್​ನಲ್ಲಿ ಮೀರಾ ಧರಿಸಿದ್ದ ಡ್ರೆಸ್​ ಎಲ್ಲರ ಕಣ್ಣು ಕುಕ್ಕಿದೆ. ಅದು ಟ್ರೋಲ್​ಗೆ ಕಾರಣ ಆಗಿದೆ.​ ಬಾಲಿವುಡ್​ನ ಖ್ಯಾತ ನಟ ಶಾಹಿದ್​ ಕಪೂರ್​ ಅವರ ಪತ್ನಿ ಮೀರಾ ರಜಪೂತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಟ್ರೋಲ್​ ಆಗುತ್ತಿದ್ದಾರೆ. ಅದಕ್ಕೆಲ್ಲ ಕಾರಣ ಅವರು ಧರಿಸಿರುವ ಬಟ್ಟೆ. ಯಾವ ರೀತಿಯ ಬಟ್ಟೆ ಧರಿಸಬೇಕು ಎಂಬುದು ಅವರವರ ವೈಯಕ್ತಿಕ ವಿಚಾರ. …

Read More »

ಅಪ್ರಾಪ್ತ ವಯಸ್ಸಿನ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ

ಪುತ್ತೂರು, ಅ.25 : ಅಪ್ರಾಪ್ತ ವಯಸ್ಸಿನ ಬಾಲಕಿಗೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ವ್ಯಕ್ತಿಯೋರ್ವನ ವಿರುದ್ದ ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪೊಕ್ಸೋ ಪ್ರಕರಣ ದಾಖಲಾಗಿದೆ. ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಮೈಂದನಡ್ಕ ನಿವಾಸಿ ಆದಂ(56) ಎಂಬಾತ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಯಾಗಿದ್ದಾನೆ. ಸ್ಥಳೀಯ ಬಾಲಕಿ ಬೀಡಿ ಬ್ರಾಂಚಿಗೆ ತೆರಳುತ್ತಿದ್ದ ವೇಳೆ ಕೃತ್ಯ ಎಸಗಿರುವುದಾಗಿ ಆರೋಪಿಸಲಾಗಿದೆ. ಘಟನೆ ಕುರಿತು ಸಂಪ್ಯ ಪೊಲೀಸರು ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

Read More »

ವಿಜಯಾನಂದ ಚಿತ್ರ ಕುರಿತು ಕುತೂಹಲಕಾರಿ ವಿಚಾರಗಳನ್ನು ಹಂಚಿಕೊಂಡ ಡಾ. ವಿಜಯ ಸಂಕೇಶ್ವರ

ಹುಬ್ಬಳ್ಳಿ: ವಿಜಯಾನಂದ ಸಿನಿಮಾ ಬಿಡುಗಡೆಯಾದ ಬಳಿಕ ಕನ್ನಡದಲ್ಲೂ ಹಾಗೂ ಬೇರೆ ಭಾಷೆಗಳಲ್ಲೂ ಸಿನಿಮಾ ಮಾಡುತ್ತೇವೆ. ಮುಂಬರುವ ಸಿನಿಮಾಗಳ ಬಜೆಟ್ ಖಂಡಿತವಾಗಿಯೂ ದೊಡ್ಡದಿರುತ್ತದೆ. ಸಿನಿಮಾ ಇಂಡಸ್ಟ್ರಿಗೆ ಪರಿಚಿತರಿಲ್ಲದವರನ್ನು ಪರಿಚಯಸಬೇಕು ಅನ್ನೋದೆ ನಮ್ಮ ಸಂಸ್ಥೆಯ ಗುರಿ ಎಂದು ವಿಆರ್​ಎಲ್ ಸಮೂಹ ಸಂಸ್ಥೆಗಳ ಚೇರ್ಮನ್ ಮತ್ತು ಪದ್ಮಶ್ರೀ ಪುರಸ್ಕೃತ ಡಾ. ವಿಜಯ ಸಂಕೇಶ್ವರ ಅವರು ಹೇಳಿದರು. ಹುಬ್ಬಳ್ಳಿ ಸಮೀಪದ ವರೂರಿನ ವಿಆರ್​ಎಲ್​ ಕ್ಯಾಂಪಸ್​ನಲ್ಲಿ ತಮ್ಮ ಜೀವನಾಧಾರಿತ ‘ವಿಜಯಾನಂದ’ ಸಿನಿಮಾದ ಮುಹೂರ್ತ ಕಾರ್ಯಕ್ರಮದಲ್ಲಿಂದು ಭಾಗವಹಿಸಿ ಮಾತನಾಡಿದರು. ಪ್ರಾಯಶಃ ಹುಬ್ಬಳ್ಳಿಯಲ್ಲಿ …

Read More »

ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿನೀಡದ ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ

ಸಾಗರ: ಮಾಹಿತಿ ಹಕ್ಕು ಅರ್ಜಿದಾರರಿಗೆ ಮಾಹಿತಿ ನೀಡದಿರುವುದು ಮತ್ತು ವಿಚಾರಣೆಗೆ ಖುದ್ದು ಹಾಜರಾಗಲು ನೀಡಿದ ಸೂಚನೆಯನ್ನೂ ಉಲ್ಲಂಘಿಸಿರುವುದನ್ನು ಗಂಭೀರವಾಗಿ ಪರಿಗಣಿಸಿದ ರಾಜ್ಯ ಮಾಹಿತಿ ಆಯೋಗದ ಆಯುಕ್ತರಾದ ಎಸ್.ಎಲ್.ಪಾಟೀಲ್ ಸಾಗರ ಉಪವಿಭಾಗದ ಸಹಾಯಕ ಆಯುಕ್ತ ಡಾ. ನಾಗರಾಜ್ ಎಲ್. ಅವರಿಗೆ ಐದು ಸಾವಿರ ರೂ.ಗಳ ದಂಡ ವಿಧಿಸಿ ಆದೇಶ ಹೊರಡಿಸಿದ್ದಾರೆ. ಕೆಳದಿ ರಸ್ತೆಯ ರಾಜಕುಮಾರ ಎಂಬುವವರು 2020ರ ಮಾರ್ಚ್‌ನಲ್ಲಿ ಮಾಹಿತಿ ಹಕ್ಕು ಅರ್ಜಿ ಹಾಕಿ, ಆನಂದಪುರ ಹೋಬಳಿಯ ಮಲಂದೂರು ಗ್ರಾಮದ ಸರ್ವೆ ನಂಬರ್ ಒಂದಕ್ಕೆ …

Read More »

ಡಾ.ಅಂಬೇಡ್ಕರ್ ಗೆ ಅಪಮಾನ ಮಾಡಿದ ಕಾಂಗ್ರೆಸ್ ಸೋಲಿಸಿ : ಕಾರಜೊಳ

ವಿಜಯಪುರ: ಡಾ.ಅಂಬೇಡ್ಕರ್ ಅವರಿಗೆ ಅವಮಾನ ಮಾಡಿರುವ ಹಾಗೂ ಜಗಜೀವನರಾಂ ಪ್ರಧಾನಿಯಾಗುವ ಅವಕಾಶ ತಪ್ಪಿಸಿದ ದಲಿತ ವಿರೋಧಿ ಕಾಂಗ್ರೆಸ್ ಪಕ್ಷವನ್ನು ಸೋಲಿಸಿ ಎಂದು ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಮತದಾರರಿಗೆ ಮನವಿ ಮಾಡಿದರು. ಭಾನುವಾರ ಸಿಂದಗಿ ವಿಧಾನಸಭೆ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಕನ್ನೋಳಿ, ಕೊಕಟನೂರ, ಹಂದಿಗನೂರು ಗ್ರಾಮಗಳಲ್ಲಿ ರೋಡ್ ಶೋನಲ್ಲಿ ಮಾತನಾಡಿದ ಅವರು, ಸುಳ್ಳು ಬಿತ್ತುವ ಕಾಂಗ್ರೆಸ್ ಪಕ್ಷವನ್ನು ಸೋಲಿಸುವ ಮೂಲಕ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ …

Read More »

ಮಕ್ಕಳ ಜೊತೆ ಶಿಲ್ಪಾ ಶೆಟ್ಟಿ ಸುತ್ತಾಟ- ರಾಜ್ ಕುಂದ್ರಾ ಮಿಸ್ಸಿಂಗ್

ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ, ಪತಿ ರಾಜ್ ಕುಂದ್ರಾ ಬಿಡುಗಡೆಯಾಗುತ್ತಿದ್ದಂತೆ ಸೋಶಿಯಲ್ ಮೀಡಿಯಾ ಸೇರಿದಂತೆ ತಮ್ಮ ದಿನ ನಿತ್ಯದ ಚಟುವಟಿಕೆಯಲ್ಲಿ ಸಖತ್ ಆ್ಯಕ್ಟಿವ್ ಆಗಿದ್ದಾರೆ. ಇದೀಗ ಸಾರ್ವಜನಿಕವಾಗಿ ಕಾಣಿಸಿಕೊಂಡಿದ್ದಾರೆ. ಆದರೆ ರಾಜ್‍ ಕುಂದ್ರಾ ಕಾಣಿಸದೇ ಇರುವುದರ ಕುರಿತಾಗಿ ಅಭಿಮಾನಿಗಳು ಪ್ರಶ್ನೆ ಮಾಡುತ್ತಿದ್ದಾರೆ. ಈ ವೀಕೆಂಡ್‌ನಲ್ಲಿ ಶಿಲ್ಪಾ ಶೆಟ್ಟಿ ತಮ್ಮ ಮಕ್ಕಳಾದ ವಿಯಾನ್, ಸಮಿಷಾ ಹಾಗೂ ತಾಯಿ ಸುನಂದಾ ಶೆಟ್ಟಿ ಜೊತೆಯಲ್ಲಿ ಆಲಿಬಾಗ್‍ಗೆ ಹೋಗಿದ್ದಾರೆ. ಶಿಲ್ಪಾ ಶೆಟ್ಟಿ ತೆರಳುವಾಗ ನಗುಮೊಗದಿಂದಲೇ …

Read More »

ಚಿಕ್ಕಬಳ್ಳಾಪುರ: ನೀರಲ್ಲಿ ಕೊಚ್ಚಿ ಹೋಗುತ್ತಿದ್ದ ಯುವಕನ ರಕ್ಷಣೆ

ಚಿಕ್ಕಬಳ್ಳಾಪುರ: ಭಾರೀ ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆ ದಾಟಲು ಹೋಗಿ ಕೊಚ್ಚಿ ಹೋದ ಯುವಕ ಪ್ರಾಣಾಪಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ಕಮ್ಮಗುಟ್ಟನಹಳ್ಳಿ ವ್ಯಾಪ್ತಿಯ ನವಿಲುಗುರ್ಕಿಯಲ್ಲಿ ಈ ಘಟನೆ ನಡೆದಿದೆ. ಭಾರೀ ಮಳೆ ಕಾರಣ ರಸ್ತೆ ಮೇಲೆ ರಭಸವಾಗಿ ನೀರು ಹರಿಯುತ್ತಿತ್ತು. ಈ ವೇಳೆ ಬೈಕ್ ಮೂಲಕ ಯುವಕ ರಸ್ತೆ ದಾಟಲು ಮುಂದಾಗಿದ್ದು ಈ ವೇಳೆ ಕೊಚ್ಚಿ ಹೋಗುತ್ತಿದ್ದ ಯುವಕನನ್ನ ಸ್ಥಳೀಯರು ಟ್ರ್ಯಾಕ್ಟರ್​ ಮೂಲಕ ರಕ್ಷಣೆ ಮಾಡಿದ್ದಾರೆ. ಮಳೆಗೆ ತುಂಬಿ ಹರಿಯುತ್ತಿದ್ದ ರಸ್ತೆಯಲ್ಲಿ …

Read More »

ರಾಜ್ಯದಲ್ಲಿ ಮತ್ತೊಂದು ಘೋರ ದುರಂತ: 4 ಮಕ್ಕಳಿಗೆ ವಿಷವುಣಿಸಿ ಆತ್ಮಹತ್ಯೆಗೆ ಶರಣಾದ ತಂದೆ

ಚಿಕ್ಕೋಡಿ: ಪತ್ನಿ ಸಾವಿನಿಂದ ಮನನೊಂದ ವ್ಯಕ್ತಿಯೊಬ್ಬ ತನ್ನ ನಾಲ್ಕು ಮಕ್ಕಳಿಗೆ ವಿಷ ಉಣಿಸಿ ಬಳಿಕ ತಾನೂ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿ‌ ಜಿಲ್ಲೆಯ ಹುಕ್ಕೇರಿ ತಾಲೂಕಿನ‌ ಬೋರಗಲ್ ಗ್ರಾಮದಲ್ಲಿ ನಡೆದಿದೆ. ಗೋಪಾಲ ಹಾದಿಮನಿ 46, ಸೌಮ್ಯಾ ಹಾದಿಮನಿ 19, ಶ್ವೇತಾ ಹಾದಿಮನಿ 16, ಸಾಕ್ಷಿ ಹಾದಿಮನಿ 11, ಸೃಜನ‌ ಹಾದಿಮನಿ 8 ಮೃತ ದುರ್ದೈವಿಗಳು. ಜುಲೈ 6 ರಂದು ಗೋಪಾಲ್‌ ಪತ್ನಿ ಜಯಾ ಬ್ಲಾಕ್ ಫಂಗಸ್ ಗೆ ಬಲಿಯಾಗಿದ್ದರು. ಇದರಿಂದ ಮನನೊಂದು …

Read More »

ಮಟ್ಕಾ ದಂಧೆ ಬಗ್ಗೆ ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸ್​ ಮೇಲೇ ಹಲ್ಲೆ

ಬೀದರ್: ಮಟ್ಕಾ ದಂಧೆ ಕುರಿತು ಮಾಹಿತಿ ಕಲೆ ಹಾಕುತ್ತಿದ್ದ ಪೊಲೀಸ್ ಪೇದೆಯೊಬ್ಬರ ಮೇಲೆ ದುಷ್ಕರ್ಮಿಗಳು ಮಾರಣಾಂತಿಕ ಹಲ್ಲೆ ನಡೆಸಿರುವ ಘಟನೆ ವರದಿಯಾಗಿದೆ. ಬೀದರ್​ ಜಿಲ್ಲೆಯ ಔರಾದ್ ಪೊಲೀಸ್ ಠಾಣೆಯ ಹೆಡ್​​ಕಾನ್ಸ್​ಟೆಬಲ್ ಸಂಗಮೇಶ್ ನಿಟ್ಟೂರೆ ಮೇಲೆ ಹಲ್ಲೆ ನಡೆದಿದೆ. ಔರಾದ್ ತಾಲೂಕಿನ ಹಲವೆಡೆ ಮಟಕಾ ದಂಧೆ ನಡೆಯುತ್ತಿದ್ದು, ಈ ಅಕ್ರಮದ ಬಗ್ಗೆ ಮಾಹಿತಿ ನೀಡುತ್ತಿದ್ದ ಸಂಗಮೇಶ್​ರನ್ನು ಶಿವಶಂಕರ್​ ಮಳಗೆಮನೆ ಎಂಬಾತ ಕರೆಸಿಕೊಂಡು, ಇತರ ನಾಲ್ವರೊಂದಿಗೆ ಹಲ್ಲೆ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಈ …

Read More »