Breaking News

Uncategorized

ಡಿ.25 ರಿಂದ ಜ.10 ರವರೆಗೆ ರೈತರ ಕೃಷಿ ಜಮೀನುಗಳಿಗೆ 6.80 ಟಿಎಮ್‍ಸಿ ನೀರು ಬಿಡುಗಡೆ- ಶಾಸಕ ಹಾಗೂ ಕಹಾಮ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಜಿಎಲ್‍ಬಿಸಿಗೆ 2400, ಜಿಆರ್‍ಬಿಸಿಗೆ 2000, ಸಿಬಿಸಿ ಕಾಲುವೆಗೆ 550 ಕ್ಯೂಸೆಕ್ಸ್ ನೀರು ಬಿಡುಗಡೆ

ಗೋಕಾಕ : ಹಿಡಕಲ್ ಜಲಾಶಯದಿಂದ ಡಿಸೆಂಬರ್ 25 ರಿಂದ 15 ದಿನಗಳವರೆಗೆ ರೈತರ ಕೃಷಿ ಜಮೀನುಗಳಿಗೆ ನೀರು ಹಾಯಿಸಲು 6.80 ಟಿಎಂಸಿ ನೀರು ಬಿಡುಗಡೆ ಮಾಡಲಾಗುತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಜಲಸಂಪನ್ಮೂಲ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಈ ಬಗ್ಗೆ ಅಧಿಕಾರಿಗಳಿಗೆ ಆದೇಶ ನೀಡಿದ್ದು, ಶುಕ್ರವಾರ ಬೆಳಿಗ್ಗೆ 6 ಗಂಟೆಯಿಂದ ಹಿಡಕಲ್ ಜಲಾಶಯದಿಂದ ನೀರನ್ನು ಬಿಡುಗಡೆ …

Read More »

ಪದೇ ಪದೇ ತಮ್ಮ ನಿರ್ಧಾರವನ್ನ ಬದಲಿಸುತ್ತಿರುವ B.S.Y..ಇಂದಿನಿಂದ ಅಲ್ಲ, ನಾಳೆಯಿಂದ ಜಾರಿ; ರಾತ್ರಿ 11ರ ಬಳಿಕ ಎಲ್ಲಾ ಸೇವೆ ಬಂದ್

ಬೆಂಗಳೂರು (ಡಿ. 23): ಬ್ರಿಟನ್​ನ ಹೊಸ ರೂಪಾಂತರದ ಕೊರೋನಾ ವೈರಸ್​ ಆತಂಕದ ಹಿನ್ನಲೆ ರಾಜ್ಯದಲ್ಲಿ ಇಂದಿನಿಂದ ನೈಟ್​ ಕರ್ಫ್ಯೂ ಜಾರಿ ಮಾಡಲಾಗಿತ್ತು. ರಾತ್ರಿ 10 ರಿಂದ ಬೆಳಿಗ್ಗೆ 6ರವರೆಗೆ ಕರ್ಫ್ಯೂ ಜಾರಿ ಮಾಡಿ ಸರ್ಕಾರ ಇಂದು ಮಧ್ಯಾಹ್ನ  ಆದೇಶಿಸಿತ್ತು. ಆದರೆ, ವರ್ಷಾಂತ್ಯದಲ್ಲಿ ಈ ರೀತಿ ಕರ್ಫ್ಯೂ ಜಾರಿ ಮಾಡುವುದರಿಂದ ಬಾರ್​ ಅಂಡ್​ ರೆಸ್ಟೋರೆಂಟ್​, ಓಲಾ, ಉಬರ್​ ಸೇರಿದಂತೆ ಅನೇಕ ಉದ್ಯಮಗಳಿಗೆ ನಷ್ಟವಾಗಲಿದೆ ಎಂಬ ವಿರೋಧ ಎಲ್ಲೆಡೆ ವ್ಯಕ್ತವಾಗಿತ್ತು. ಈ ನೈಟ್​ ಕರ್ಫ್ಯೂನಿಂದಾಗಿ …

Read More »

ವರ್ತೂರು ಕಿಡ್ನಾಪ್ ಕೇಸ್: ಇಬ್ಬರು ವಿದ್ಯಾರ್ಥಿಗಳು ಸೇರಿ 6 ಜನರ ಬಂಧನ

ಕೋಲಾರ: ಮಾಜಿ ಸಚಿವ ವರ್ತೂರು ಪ್ರಕಾಶ್ ಅವರನ್ನು ಕಾರಿನಲ್ಲಿ ಅಪಹರಿಸಿ 30 ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಇಬ್ಬರು ವಿದ್ಯಾರ್ಥಿಗಳು ಸೇರಿದಂತೆ ಬೆಂಗಳೂರಿನ ಆರು ಮಂದಿಯನ್ನು ಬಂಧಿಸುವಲ್ಲಿ ಕೋಲಾರ ಗ್ರಾಮಾಂತರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ ಎಂದು ಕೇಂದ್ರ ವಲಯದ ಐಜಿಪಿ ಸೀಮಂತ್‍ಕುಮಾರ್ ಸಿಂಗ್ ತಿಳಿಸಿದರು.   ಮೂಲತಃ ತಮಿಳುನಾಡಿನ ಬೆಂಗಳೂರಿನ ವಿನಾಯಕನಗರದಲ್ಲಿ ವಾಸಿಸುತ್ತಿರುವ ಕವಿರಾಜ್ (43), ಬೆಳ್ಳಂದೂರು-ಸರ್ಜಾಪುರ ರಸ್ತೆಯ ಅರಳೂರು ನಿವಾಸಿ, ಬಿಕಾಂ ವಿದ್ಯಾರ್ಥಿಗಳಾದ ಲಿಖಿತ್ (20), ಉಲ್ಲಾಸ್ (21), …

Read More »

ಬೆಳಗಾವಿಯಲ್ಲಿ ಕೂಡ ನೈಟ್ ಕರ್ಫ್ಯೂ ಜಾರಿ, ನೋ ಓಲ್ಡ ಮ್ಯಾನ್, ನೋ ಕ್ರಿಸ್ಮಸ್, NEW YEAR ಸೆಲೆಬ್ರೇಶನ್…. ಎಲ್ಲದಕ್ಕೂ ಬ್ರೇಕ್ ಹಾಕಿದ ಸರ್ಕಾರ

ಬೆಳಗಾವಿ-ಬೆಳಗಾವಿ ಗಡಿಭಾಗ,ಮಹಾರಾಷ್ಟ್ರ ,ಗೋವಾ ,ಕರ್ನಾಟಕ ರಾಜ್ಯಗಳ ಸಂಸ್ಕೃತಿಯ ಸಂಗಮ.ಕ್ರಿಸ್ ಮಸ್ ಹಬ್ಬ ಶುರುವಾದ್ರೆ ಸಾಕು,ಇಲ್ಲಿ ಸಂಬ್ರಮ ಶುರುವಾಗುತ್ತದೆ. ಕೊರೋನಾ ರೂಪಾಂತರಗೊಂಡ ಹಿನ್ನಲೆಯಲ್ಲಿ ರಾಜ್ಯ ಸರ್ಕಾರ ಇವತ್ತಿನಿಂದ ಜನೇವರಿ 2 ರವರೆಗೆ ನೈಟ್ ಕರ್ಫ್ಯು ಜಾರಿ ಮಾಡಿದ್ದು ಕ್ರಿಸ್ ಮಸ್ ,ಹ್ಯಾಪೀ ನ್ಯು ಇಯರ್ ಸಂಬ್ರಮಕ್ಕೆ ಬ್ರೇಕ್ ಬಿದ್ದಿದೆ. ಇವತ್ತಿನಿಂದ ರಾತ್ರಿ 10 ಗಂಟೆಯಿಂದ ಬೆಳಗಿನ 6 ಗಂಟೆಯವರೆಗೆ ನೈಟ್ ಕರ್ಫ್ಯು ಜಾರಿಗೆ ಬರಲಿದೆ. ಹೀಗಾಗಿ ಬಾರ್ ಆ್ಯಂಡ ರೆಸ್ಟೋರೆಂಟ್,ಮತ್ತು ಹೊಟೇಲ್ …

Read More »

ರೈತ ನಾಯಕ ಚೌಧರಿ ಪ್ರಧಾನಿಗೆ ಸ್ಪೂರ್ತಿ, ರೈತರಿಗೆ ಅನ್ಯಾಯವಾಗಲು ಬಿಡಲ್ಲ : ರಾಜನಾಥ್ ಸಿಂಗ್

ನವದೆಹಲಿ,ಡಿ.23- ರೈತರ ದಿನಾಚರಣೆಯ ಹಿನ್ನೆಲೆಯಲ್ಲಿ ಭಾರತದ 5ನೇ ಪ್ರಧಾನಮಂತ್ರಿಯಾಗಿದ್ದ ಚರಣ್‍ಸಿಂಗ್ ಚೌಧರಿ ಅವರನ್ನು ಸ್ಮರಿಸಿರುವ ರಕ್ಷಣಾ ಸಚಿವ ರಾಜ್‍ನಾಥ್ ಸಿಂಗ್, ಚೌಧರಿ ಅವರಿಂದ ಪ್ರಭಾವಿತ(ಸ್ಪೂರ್ತಿ)ರಾಗಿರುವ ಪ್ರಧಾನಿ ನರೇಂದ್ರಮೋದಿ ಅವರು ಎಂದಿಗೂ ರೈತರಿಗೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಹೇಳಿದ್ದಾರೆ. ಇಂದು ಟ್ವೀಟ್ ಮಾಡಿರುವ ರಾಜನಾಥ್ ಸಿಂಗ್, ರೈತ ನಾಯಕ ಹಾಗೂ ಮಾಜಿ ಪ್ರಧಾನಿ ಚರಣ್ ಸಿಂಗ್ ಚೌಧರಿ ಅವರು ತಮ್ಮ ಜೀವಾತವಧಿಯವರೆಗೂ ರೈತರ ಪರ ಧ್ವನಿ ಎತ್ತಿದ್ದರು. ಕೃಷಿಕರ ಸಮಸ್ಯೆಗಳ ಪರಿಹಾರಕ್ಕೆ …

Read More »

ಮುಂದಿನ ವರ್ಷದಿಂದ ಪ್ರತಿವಾರ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡಲು ತೈಲ ಕಂಪೆನಿಗಳು ನಿರ್ಧರಿಸಿವೆ.

ನವದೆಹಲಿ, ಡಿ.23- ಮುಂದಿನ ವರ್ಷದಿಂದ ಪ್ರತಿವಾರ ಗ್ಯಾಸ್ ಸಿಲಿಂಡರ್ ದರ ಪರಿಷ್ಕರಣೆ ಮಾಡಲು ತೈಲ ಕಂಪೆನಿಗಳು ನಿರ್ಧರಿಸಿವೆ. ಪೆಟ್ರೋಲ್, ಡಿಸೇಲ್ ಬೆಲೆಯನ್ನು ಪ್ರತಿದಿನ ಬೆಳಗ್ಗೆ 6 ಗಂಟೆಗೆ ಪರಿಷ್ಕರಣೆ ಮಾಡಲಾಗುತ್ತದೆ. ಆಯಾ ದಿನದ ಆರು ಗಂಟೆ ಬಳಿಕ ಪರಿಷ್ಕರಣೆಯಾಗುವ ದರವನ್ನು ಗ್ರಾಹಕರು ನೀಡಬೇಕಿದೆ. ಗ್ಯಾಸ್ ಸಿಲಿಂಡರ್‍ಗಳ ಬೆಲೆಯನ್ನು ಪ್ರತಿ ತಿಂಗಳಿಗೊಮ್ಮೆ ಪರಿಷ್ಕರಣೆ ಮಾಡುವ ಪದ್ಧತಿ ಜಾರಿಯಲ್ಲಿದೆ. ಒಂದು ವೇಳೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ತೈಲ ಬೆಲೆ ಏರಿಕೆಯಾದರೆ ಅದರಿಂದಾಗುವ ನಷ್ಟವನ್ನು ತೈಲ …

Read More »

ಕೊರೋನದ ಹೊಸ ಪ್ರಭೇದ ಪತ್ತೆ; ಜನರು ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಬೇಕು: ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ: ಬ್ರಿಟನ್ ದೇಶದಲ್ಲಿ ಕರೋನಾದ ರೂಪಾಂತರ ಹೊಂದಿದ ಸೋಂಕು ಕಂಡುಬಂದಿರುವ ಹಿನ್ನೆಲೆಯಲ್ಲಿ ಹೆಚ್ಚು ಎಚ್ಚರಿಕೆಯಿಂದ ಇರುವಂತೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ. ವ್ಯಕ್ತಿಗತ ಸಾಮಾಜಿಕ ಅಂತರವನ್ನು ಸದಾ ಕಾಪಾಡಿಕೊಳ್ಳಬೇಕು. ಕಡ್ಡಾಯವಾಗಿ ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಸಬೇಕು. ಕೋವಿಡ್ 19 ಸೋಂಕು‌ ನಿವಾರಕ ಲಸಿಕೆಯು ಶೀಘ್ರದಲ್ಲೇ ಮಾರುಕಟ್ಟೆಗೆ ಬರಲಿದೆ. ಲಸಿಕೆಯನ್ನು ಸಹ ವ್ಯವಸ್ಥಿತವಾಗಿ ಜನರಿಗೆ ತಲುಪಿಸುವ ವ್ಯವಸ್ಥೆಯನ್ನು ಸರ್ಕಾರ ಮಾಡುತ್ತಿದೆ. ಅಲ್ಲಿಯವರೆಗೂ ಜನರು ಮೈಮರೆಯದೇ ಸರ್ಕಾರದ ಮಾರ್ಗಸೂಚಿಗಳನ್ನು …

Read More »

ಶಾಲೆ ಆರಂಭದ ಕುರಿತು ಸ್ಪಷ್ಟನೆ ನೀಡಿದ ಸಚಿವ ಸುರೇಶ್ ಕುಮಾರ್

ಬೆಂಗಳೂರು : ಮಕ್ಕಳ ಭವಿಷ್ಯದ ಹಿತದೃಷ್ಟಿಯಿಂದ ಶಿಕ್ಷಣ ಇಲಾಖೆ ಎಲ್ಲ ಪೂರ್ವ ಸಿದ್ದತೆಗಳನ್ನು ಕೈಗೊಳ್ಳುತ್ತಿದೆ. ಜನವರಿಯಿಂದಲೇ ಶಾಲೆ ಆರಂಭವಾಗಲಿವೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಮಕ್ಕಳಿಗೆ ಹೊರೆಯಾಗದ ರೀತಿ ಪಠ್ಯಕ್ರಮ ಅಂತಿಮಗೊಳಿಸಲಾಗುತ್ತದೆ. ಕನಿಷ್ಠ ಕಲಿಕೆಗೆ ಒತ್ತು ನೀಡಲಾಗುತ್ತದೆಯಲ್ಲದೇ, ವಿಶೇಷವಾಗಿ ರಾಷ್ಟ್ರೀಯ ಮಟ್ಟದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗುವ ಹಿರಿಯ ತರಗತಿಗಳ ವಿದ್ಯಾರ್ಥಿಗಳ ಕಲಿಕೆಯ ಅವಶ್ಯಕತೆಗಳನ್ನು ಗಮನದಲ್ಲಿ ಇಟ್ಟುಕೊಂಡು ಕೆಲವೇ ದಿನಗಳಲ್ಲಿ ಸೂಕ್ತ ನಿರ್ಧಾರ …

Read More »

ಗ್ರಾಹಕರ ವಿಶ್ವಾಸರ್ಹತೆ ಗಳಿಸಿದ ಸಂತೃಪ್ತಿ ವಿಜಯ ಸೌಹಾರ್ಧ ಸಹಕಾರಿಗಿದೆ : ಮುರುಗೇಶ ನಿರಾಣಿ

ಮುಧೋಳ – ನಿರಾಣಿ ಉದ್ಯಮ ಸಮೂಹ ಸಂಸ್ಥೆಯ ವಿಜಯ ಸೌಹಾರ್ದ ಕ್ರೆಡಿಟ್ ಸಹಕಾರಿ ಲಿಮಿಟೆಡ್ ಸೌಹಾರ್ದ ಸಹಕಾರಿ ಕ್ಷೇತ್ರದಲ್ಲಿ ಅಲ್ಪಾವಧಿಯಲ್ಲಿಯೇ ರಾಷ್ಟ್ರೀಕೃತ ಬ್ಯಾಂಕುಗಳಿಗೆ ಸರಿ ಸಮವಾಗಿ ಸೇವೆ ನೀಡುವಷ್ಟು ಸದೃಢವಾಗಿ ಬೆಳೆದು ನಿಂತಿದೆ. ವಿನೂತನ ಯೋಜನೆಗಳೊಂದಿಗೆ ಮಹತ್ತರ ಹೆಜ್ಜೆ ಗುರುತುಗಳನ್ನು ಮೂಡಿಸುವ ಮೂಲಕ ಗ್ರಾಹಕರ ವಿಶ್ವಾಸಾರ್ಹ ಸಂಸ್ಥೆಯಾಗಿ ಹೊರಹೊಮ್ಮಿದ್ದು ಹೆಮ್ಮೆಯ ಸಂಗತಿ ಎಂದು ಸಂಸ್ಥೆಯ ಸಂಸ್ಥಾಪಕ ಅಧ್ಯಕ್ಷ, ಬೀಳಗಿ ಶಾಸಕ ಮುರುಗೇಶ ನಿರಾಣಿ ತಿಳಿಸಿದರು. ಮುಧೋಳದ ಸಹಕಾರಿಯ ಪ್ರಧಾನ ಕಚೇರಿ …

Read More »

117 ತಾಲ್ಲೂಕುಗಳಲ್ಲಿ ಮೊದಲ ಹಂತದ ಗ್ರಾಮ ಸಮರ, ಎಲ್ಲೆಡೆ ಭರ್ಜರಿ ಮತದಾನ

ಬೆಂಗಳೂರು,ಡಿ.22- ಕೋವಿಡ್ ಆತಂಕದ ನಡುವೆ ರಾಜ್ಯದಲ್ಲಿ ಗ್ರಾಮ ಪಂಚಾಯ್ತಿಗಳ ಮೊದಲ ಹಂತದ ಚುನಾವಣೆಯ ಮತದಾನ ಇಂದು ಬಿರುಸಾಗಿತ್ತು.  ಅಲ್ಲಲ್ಲಿ ಮಾತಿನ ಚಕಮಕಿ, ಅಭ್ಯರ್ಥಿಗಳ ನಡುವೆ ಪರಸ್ಪರ ಆರೋಪ, ಪ್ರತ್ಯಾರೋಪ, ತಳ್ಳಾಟ-ನೂಕಾಟ, ಮತಪತ್ರಗಳ ದೋಷದಿಂದ ಹಲವೆಡೆ ಮತದಾನ ಸ್ಥಗಿತ, ಗುಂಪು ಚದುರಿಸಲು ಪೊಲೀಸರಿಂದ ಲಘು ಲಾಠಿ ಪ್ರಹಾರದಂತಹ ಸಣ್ಣಪುಟ್ಟ ಘಟನೆಗಳನ್ನು ಹೊರತುಪಡಿಸಿ 30 ಜಿಲ್ಲೆಗಳ 117 ತಾಲ್ಲೂಕುಗಳ 3,019 ಗ್ರಾಪಂಚಾಯ್ತಿಗಳಿಗೆ ನಡೆದ ಮತದಾನ ಬಹುತೇಕ ಶಾಂತಿಯುತವಾಗಿತ್ತು. ಗ್ರಾಮಪಂಚಾಯ್ತಿಗಳ 43,238 ಸ್ಥಾನಗಳಿಗೆ ಸ್ಪರ್ಧಿಸಿದ್ದ …

Read More »