Breaking News
Home / Uncategorized (page 610)

Uncategorized

20 ಅಡಿ ಎತ್ತರದಿಂದ ಬಿದ್ದ ಕಾರು: ಮೂವರ ಸ್ಥಿತಿ ಗಂಭೀರ, ಎಲ್ಲಿ?

ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಚಲಿಸುತ್ತಿದ್ದ ಕಾರು ಕೆಳಗೆ ಬಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಳಗಾವಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ. ಹಾರೂಗೇರಿಯಿಂದ ಬೆಳಗಾವಿಗೆ ಹೊರಟಿದ್ದ ಕಾರು ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಚಾಲಕನ ನಿಯಂತ್ರಣ ತಪ್ಪಿ 20 ಅಡಿ ಎತ್ತರದಿಂದ ಕೆಳಗೆ ಬಿದ್ದಿದೆ. ಇದರಿಂದ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯರ ಸಹಾಯದಿಂದ ಮೂವರನ್ನೂ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

Read More »

ಪ್ರವಾಹ ಪರಿಸ್ಥಿತಿ ನಿಯಂತ್ರಣದಲ್ಲಿದೆ: ರಮೇಶ್ ಜಾರಕಿಹೊಳಿ

ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಬೆಳಗಾವಿ: ನಿರಂತರ ಮಳೆಯಿಂದಾಗಿ ರಾಜ್ಯದಲ್ಲಿ ನದಿಗಳು ಉಕ್ಕಿ ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಮುಖ್ಯವಾಗಿ ಬೆಳಗಾವಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ನದಿಗಳ ಪ್ರಕೋಪ ಹೆಚ್ಚಿದ್ದು ಅನೇಕ ಸಣ್ಣ ಸೇತುವೆಗಳು ಮುಳುಗಡೆಯಾಗಿದೆ. ಹರಿಯುತ್ತಿದ್ದು ಹಲವೆಡೆ ಪ್ರವಾಹದ ಭೀತಿ ಎದುರಾಗಿದೆ. ಇದೇ ವೇಳೆ ಕಾವೇರಿ ಅಣೆಕಟ್ಟೆಗಳಿಂದ ಹೆಚ್ಚುವರಿ ನೀರು ಹರಿದ ಪರಿಣಾಮ ಅನೇಕ ಪ್ರದೇಶಗಳು ಜಲಾವೃತವಾಗಿವೆ. ಸುಪ್ರಸಿದ್ಧ ರಂಗನತಿಟ್ಟು ಪಕ್ಷಧಾಮಕ್ಕೆ ಸಹಾ ನೀರು ನುಗ್ಗಿ …

Read More »

ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ

: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …

Read More »

ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ ಮಳೆ ದಾಖಲು : 24 ಗಂಟೆಯಲ್ಲಿ ಘಟಪ್ರಭೆಗೆ ಹರಿದು ಬಂತು 4 ಟಿಎಂಸಿ ನೀರು..!

ಬೆಂಗಳೂರು/ಉಡುಪಿ/ಬೆಳಗಾವಿ : ರಾಜ್ಯದಲ್ಲಿ ಮಳೆರಾಯನ ಅಬ್ಬರ ಕೊಂಚ ಕಡಿಮೆಯಾಗಿದ್ದರೂ ಘಟ್ಟಪ್ರದೇಶಗಳಲ್ಲಿ ಈಗಲೂ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಮುಂದುವರಿದಿದೆ. ಕಳೆದ 24 ಗಂಟೆಯಲ್ಲಿ ಉಡುಪಿ ಜಿಲ್ಲೆ ಕಾರ್ಕಳದ ಕೆರ್ವಾಶೆ ಬಳಿ ಅತ್ಯಧಿಕ 208.5 ಮಿಮೀ ನಷ್ಟು ಮಳೆ ದಾಖಲಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಕೇಂದ್ರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ಇದು ರಾಜ್ಯದಲ್ಲೇ ಅತ್ಯಂತ ಹೆಚ್ಚು ಮಳೆಯಾದ ಪ್ರದೇಶವಾಗಿದೆ. …

Read More »

8 ಐಪಿಎಸ್ ಅಧಿಕಾರಿಗಳ ಟ್ರಾನ್ಸ್ ಫರ್; ಡಿವೈಎಸ್‌ಪಿಗಳಿಗೆ ಮುಂಬಡ್ತಿ ನೀಡಿ ವರ್ಗಾವಣೆ

ಬೆಂಗಳೂರು: ಪೊಲೀಸ್ ಇಲಾಖೆಯಲ್ಲಿ ಡಿವೈಎಸ್‌ಪಿ (ಸಿವಿಲ್) ವೃಂದದಲ್ಲಿ ಸೇವೆ ಸಲ್ಲಿಸುತ್ತಿರುವ ಅಧಿಕಾರಿಗಳಿಗೆ ಎಸ್‌.ಪಿ. (ಸಿವಿಲ್, ನಾನ್ ಐಪಿಎಸ್) ವೃಂದಕ್ಕೆ ಮುಂಬಡ್ತಿ ನೀಡಿ ವರ್ಗಾವಣೆ ಮಾಡಲಾಗಿದೆ. ಎಸ್‌.ಟಿ.ಸಿದ್ದಲಿಂಗಪ್ಪ ಅವರನ್ನು ರಾಜ್ಯ ಗುಪ್ತವಾರ್ತೆ ಪೊಲೀಸ್ ಅಧೀಕ್ಷಕರಾಗಿ, ಮುಹಮ್ಮದ್ ಹುಸೇನ್ ಕರ್ನಾಟಕ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಬಸಪ್ಪ ಎಸ್.ಅಂಗಡಿ ಅವರನ್ನು ಬೆಂಗಳೂರು ನಗರ ಅಪರಾಧ-2ರ ಉಪ ಪೊಲೀಸ್ ಆಯುಕ್ತರಾಗಿ ವರ್ಗಾಯಿಸಲಾಗಿದೆ.   ಬಿ.ಎಲ್.ವೇಣುಗೋಪಾಲ್ ಅವರನ್ನು ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾಗಿ, ಗುರುನಾಥ್ ಬಿ.ಮತ್ತೂರು ಅವರನ್ನು ಬಳ್ಳಾರಿ ಭ್ರಷ್ಟಾಚಾರ …

Read More »

ಯೋಗಿ ಆದಿತ್ಯನಾಥ್ ಬೆಸ್ಟ್ ಸಿಎಂ

ನವದೆಹಲಿ : ಇತ್ತೀಚಿಗೆ ಇಂಡಿಯಾ ಟುಡೆ-ಕಾರ್ವಿ ಇನ್ಸೈಟ್ಸ್ ಮೂಡ್ ಆಫ್ ದಿ ನೇಷನ್ (ಎಂಒಟಿಎನ್) ನಡೆಸಿದ ಸಮೀಕ್ಷೆಯಲ್ಲಿ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಸತತ ಮೂರನೇ ಬಾರಿಗೆ ಭಾರತದಲ್ಲಿ ಅತ್ಯುತ್ತಮವಾಗಿ ಕಾರ್ಯ ನಿರ್ವಹಿಸುತ್ತಿರುವ ಮುಖ್ಯಮಂತ್ರಿಗಳಲ್ಲಿ ಮೊದಲನೆಯವರಾಗಿ ಸ್ಥಾನ ಪಡೆದಿದ್ದಾರೆ. ಯೋಗಿ ಆದಿತ್ಯನಾಥ್ ಒಟ್ಟು ಮತಗಳ ಪೈಕಿ ಶೇಕಡಾ 24 ರಷ್ಟು ಮತಗಳನ್ನು ಗಳಿಸುವಲ್ಲಿ ಯಶಸ್ವಿಯಾಗಿ ಸತತ ಮೂರನೇ ಬಾರಿಗೆ ‘ಅತ್ಯುತ್ತಮ ಸಿಎಂ’ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ ಎಂದು ಇತ್ತೀಚಿನ …

Read More »

ರಾಜಸ್ಥಾನದಲ್ಲಿ ಬಿಎಸ್​ಪಿಯ 6 ಶಾಸಕರು ಅನರ್ಹಗೊಳ್ಳುತ್ತಾರಾ? ರಾಜಕೀಯ ನಾಟಕಕ್ಕೆ ಸಿಗುತ್ತಾ ಹೊಸ ತಿರುವು?

ಜೈಪುರ: ರಾಜಸ್ಥಾನದ ವಿಧಾನಸಭಾ ಅಧಿವೇಶನ ಶುಕ್ರವಾರ (ಆ.14) ನಡೆಯಲಿರುವ ಹಿನ್ನೆಲೆಯಲ್ಲಿ ರಾಜಕೀಯ ನಾಟಕದ ಹೊಸ ಅಂಕಕ್ಕೆ ಪರದೆ ಮೇಲೇರಲಾರಂಭಿಸಿದೆ. ಬಿಎಸ್​ಪಿಯ 6 ಶಾಸಕರು ಕಾಂಗ್ರೆಸ್​ನಲ್ಲಿ ವಿಲೀನಗೊಂಡಿರುವ ಪ್ರಕರಣದ ಕುರಿತ ಅರ್ಜಿಯ ವಿಚಾರಣೆ ರಾಜಸ್ಥಾನ ಹೈಕೋರ್ಟ್​ನಲ್ಲಿ ನಡೆಯಲಿದ್ದು, ರಾಜಕೀಯ ನಾಟಕದ ಈ ಅಂಕದಲ್ಲಿ ಭಾರಿ ತಿರುವು ಲಭಿಸುವ ಸಾಧ್ಯತೆಗಳು ಕಾಣಿಸಲಾರಂಭಿಸಿವೆ.   ಒಂದು ವೇಳೆ ಬಿಎಸ್​ಪಿಯ ಆರು ಶಾಸಕರನ್ನು ಹೈಕೋರ್ಟ್​ ಅನರ್ಹಗೊಳಿಸಿದರೆ, ರಾಜಕೀಯ ಸಮೀಕರಣವೇ ಬದಲಾಗಲಿದೆ. ತಮ್ಮ ಸರ್ಕಾರವನ್ನು ಶತಾಯಗತಾಯ ಉಳಿಸಿಕೊಳ್ಳಲು ಹವಣಿಸಲಿರುವ …

Read More »

ಹುಬ್ಬಳ್ಳಿಯ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ ಲಿಂಗೈಕ್ಯ

ಬೆಳಗಾವಿ: ವಿಜಯಪುರ‌ದ ಷಣ್ಮುಖಾರೂಢ ಮಠ ಹಾಗೂ ಹುಬ್ಬಳ್ಳಿಯ ಶಾಂತಾಶ್ರಮದ ಶ್ರೀ ಅಭಿನವ ಶಿವಪುತ್ರ ಸ್ವಾಮೀಜಿ (64) ಹೃದಯಾಘಾತದಿಂದ ಶುಕ್ರವಾರ ರಾತ್ರಿ ಲಿಂಗೈಕ್ಯರಾಗಿದ್ದಾರೆ. ನಗರದ ಕೆ‌ಎಲ್‌ಇ ಆಸ್ಪತ್ರೆಗೆ ಸಂಜೆ ದಾಖಲಾಗಿದ್ದ ಶ್ರೀಗಳು ಚಿಕಿತ್ಸೆ ಫಲಿಸದೇ ಲಿಂಗೈಕ್ಯರಾದರು. ಕಳೆದ ಎರಡು ದಿನಗಳಿಂದ ವಿಜಯಪುರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೆಚ್ಚಿನ ಚಿಕಿತ್ಸೆಗೆ ಶುಕ್ರವಾರ ಸಂಜೆ ಕೆ.ಎಲ್.ಇ ಆಸ್ಪತ್ರೆಗೆ ಕರೆತರಲಾಗಿದ್ದು, ಫಲಕಾರಿಯಾಗದೇ ಲಿಂಗೈಕ್ಯರಾದರು ಎಂದು ಶ್ರೀಮಠದ ಉತ್ತರಾಧಿಕಾರಿ ಅಭಿನವ ಸಿದ್ಧಾರೂಢ ಸ್ವಾಮೀಜಿ ತಿಳಿಸಿದ್ದಾರೆ. ಆ. 8ರಂದು ಹುಬ್ಬಳ್ಳಿಯಲ್ಲಿ …

Read More »

ಪೊಲೀಸರ ಆರೋಗ್ಯ ರಕ್ಷಣೆಗೆ ಮಾರ್ಗಸೂಚಿ ಕೈಪಿಡಿ

ಬೆಂಗಳೂರು: ಪೊಲೀಸರ ಆರೋಗ್ಯ ರಕ್ಷಣೆಗಾಗಿ ಮಾರ್ಗಸೂಚಿ ಕೈಪಿಡಿ ಬಿಡುಗಡೆ ಮಾಡಲಾಗಿದೆ. ನಗರದ ಹಲವು ಪೊಲೀಸರು ಕೊರೊನಾ ಸೋಂಕಿತರಾಗಿದ್ದರು. ಹೀಗಾಗಿ, ಪೊಲೀಸರು ಆರೋಗ್ಯದ ಬಗ್ಗೆ ಕಾಳಜಿ ವಹಿಸಲೆಂದು ಈ ಕೈಪಿಡಿ ಸಿದ್ಧಪಡಿಸಲಾಗಿದೆ. ಇದರಲ್ಲಿರುವ ಮಾರ್ಗಸೂಚಿಗಳನ್ನು ಪಾಲಿಸುವಂತೆ ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್‌ ಸೂಚನೆ ನೀಡಿದ್ದಾರೆ. ‘ಠಾಣೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು, ಮಾಸ್ಕ್ ಧರಿಸಬೇಕು, ಆಗಾಗ ಕೈ ತೊಳೆಯಬೇಕು, ಹೊರಗಡೆ ಕರ್ತವ್ಯನಿರತ ಸಿಬ್ಬಂದಿ ನೇರವಾಗಿ ಮನೆಗೆ ಹೋಗಬೇಕು, ಸಂಬಂಧಿಕರು-ಸ್ನೇಹಿತರನ್ನು ಭೇಟಿಯಾಗಲು ಹೋಗಬಾರದು. …

Read More »

ಪ್ರವಾಹದೊಂದಿಗೆ ಬಂದ ಬೃಹತ್ ಮೀನು; ಅಚ್ಚರಿಗೊಂಡ ಬೆಳಗಾವಿ ಜನ

ಬೆಳಗಾವಿ: ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಮಹಾಮಳೆಗೆ ಜನ ಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಪರಿಣಾಮ ಭೂಮಿ ಮೇಲೆ ಇರುವ ಪ್ರಾಣಿಗಳಿಗೆ ಮಾತ್ರ ಸಂಕಷ್ಟಕ್ಕೆ ಒಳಗಾಗಿಲ್ಲ, ಜಲಚರ ಜೀವಿಗಳೂ ಆಘಾತಕ್ಕೆ ಒಳಗಾಗಿವೆ. ಹುಕ್ಕೇರಿ ತಾಲೂಕಿನ ಬಸಾಪೂರ ಬಳಿ ಮಾರ್ಕಂಡಯ್ಯ ನದಿ ಪ್ರವಾಹದ ಜೊತೆ ದೊಡ್ಡದಾದ ಮೀನು ಒಂದು ಈಜಿಕೊಂಡು ಬಂದಿದೆ. ಸ್ಧಳೀಯರು ಈ ಮೀನಿನ ಫೋಟೋವನ್ನು ಮೊಬೈಲ್​ನಲ್ಲಿ ತೆಗೆದು ಸೋಶಿಯಲ್​ ಮೀಡಿಯಾದಲ್ಲಿ ಹಾಕಿದ್ದಾರೆ. ಆ ವೀಡಿಯೋ ಸಖತ್ ವೈರಲ್ ಆಗಿದೆ.

Read More »