Breaking News

Uncategorized

ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್

ಬೆಂಗಳೂರು,ಡಿ.17- ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 13 ಮಂದಿ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನ ನೀಡುವಂತೆ …

Read More »

ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್‌ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಅಸಮಾಧಾನ

ಬೆಳಗಾವಿ: ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್‌ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಎಲ್.ಕೆ.ಅತೀಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ವಿಮಾನದಲ್ಲಿ ಬುಧವಾರ ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾಗೆ ಬಂದಿಳಿದ ಅವರು, ‘ಕರ್ನಾಟಕದಲ್ಲಿ ಇಂಡಿಗೊ ಹಾಗೂ ಇತರ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ನೀಡಲು ಇರುವ ಸಮಸ್ಯೆಯಾದರೂ ಏನು?’ ಎಂದು ಟ್ವೀಟ್ ಮಾಡುವ ಮೂಲಕ ಕೇಳಿದ್ದಾರೆ. ಈ ಅಧಿಕಾರಿಯ ಪ್ರಶ್ನೆಗೆ ಟ್ವಿಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದು, ಕನ್ನಡ ನೆಲದಲ್ಲೇ …

Read More »

ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ

ಕೊಪ್ಪಳ : ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಕಳೆದೊಂದು ದಶಕದಿಂದ ಕುಂಟುತ್ತಲೇ ಸಾಗಿದೆ. ಪ್ರತಿ ಚುನಾವಣೆಯಲ್ಲೂ ಈ ವಿಷಯವನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ಬರುವ ಅಭ್ಯರ್ಥಿಗಳು ಚುನಾಯಿತರಾದ ನಂತರ ಮರೆತುಬಿಡುತ್ತಾರೆ. ಇದು ಯಾವುದೋ ಒಂದು ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪವಲ್ಲ. ಯೋಜನೆ ಅನುಷ್ಠಾನಗೊಳ್ಳಲು, ಜನರಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ರೈತಮುಖಂಡರು, ಪ್ರಗತಿಪರರಾದ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Read More »

ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡ

ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಸಮೀಪದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡದಿಂದ ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ನಾರಾಯಣ ಹೆಲ್ತ್ ಸಿಟಿ ಹೃದ್ರೋಗ ತಜ್ಞರಾದ ಡಾ ಭಗೀರಥ್ ಮತ್ತು ವರುಣ್ ಶೆಟ್ಟಿ ತಂಡದಿಂದ ಬೆಂಗಳೂರು ಮೂಲದ ಸುಮಾರು 42 ವರ್ಷ ವಯಸ್ಸಿನ ವ್ಯಕ್ತಿಗೆ ಯಶಸ್ವಿಯಾಗಿ ಹೃದಯ ಕಸಿ ನಡೆಸಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಬೆಂಗಳೂರು …

Read More »

ಉಸ್ತುವಾರಿ ಸಚಿವರನ್ನೇ ಅವಾಚ್ಯ ಶಬ್ದಗಳಿಂದ ನಿಂದಿಸಿದ ಕಾಂಗ್ರೆಸ್ ಶಾಸಕ : ಆಡಿಯೋ ವೈರಲ್

ಚಾಮರಾಜನಗರ(ಡಿಸೆಂಬರ್. 16): ಚಾಮರಾಜನಗರ ಜಿಲ್ಲೆಯಲ್ಲಿ ಕೆರೆ ನೀರು ತುಂಬಿಸುವ ವಿಚಾರವಾಗಿ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಅವರನ್ನೇ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಸಿ.ಪುಟ್ಟರಂಗಶೆಟ್ಟಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದಾರೆ ಎನ್ನಲಾದ ಆಡಿಯೋ ಒಂದು ವೈರಲ್ ಆಗಿದೆ. ಮೂರು ಹಾಗು ನಾಲ್ಕನೇ ಹಂತದ ಕೆರೆಗಳಿಗೆ ನೀರು ತುಂಬಿಸುವ ವಿಚಾರವಾಗಿ ಶಾಸಕ ಸಿ.ಪುಟ್ಟರಂಗಶೆಟ್ಟಿ ರೈತರೊಬ್ಬರೊಡನೆ ಪೋನ್ ನಲ್ಲಿ ಮಾತನಾಡುತ್ತಾ ಉಸ್ತುವಾರಿ ಸಚಿವರನ್ನೆ ಅವಾಚ್ಯ ಶಬ್ದ ಉಪಯೋಗಿಸಿ ನಿಂದಿಸಿದ್ದಾರೆ. ಅಲ್ಲದೆ ಕಾವೇರಿ ನೀರಾವರಿ …

Read More »

ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಬುಧವಾರ ನೋಟಿಸ್‌…?

ನವದೆಹಲಿ: ಕೇಂದ್ರ ಸರ್ಕಾರದ ಮೂರು ಕೃಷಿ ಮಸೂದೆಯನ್ನು ವಿರೋಧಿಸಿ ದೆಹಲಿ ಗಡಿ ಭಾಗದ ಹಲವು ರಸ್ತೆಗಳಲ್ಲಿ ಪ್ರತಿಭಟಿಸುತ್ತಿರುವ ರೈತರನ್ನು ಸ್ಥಳಾಂತರಗೊಳಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಅರ್ಜಿಯ ಕುರಿತಾಗಿ ಪ್ರತಿಕ್ರಿಯಿಸುವಂತೆ ಕೇಂದ್ರ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ಬುಧವಾರ ನೋಟಿಸ್‌ ಜಾರಿ ಮಾಡಿದೆ. ಅರ್ಜಿ ವಿಚಾರಣೆ ನಡೆಸಿದ ಪೀಠವು,’ಕೃಷಿ ಕಾನೂನು ಸಂಬಂಧಿತ ಸಮಸ್ಯೆಯನ್ನು ಬಗೆಹರಿಸಲು ಸರ್ಕಾರ ಮತ್ತು ರೈತ ಪ್ರತಿನಿಧಿಗಳನ್ನೊಳಗೊಂಡ ಸಮಿತಿಯನ್ನು ರೂಪಿಸುವುದಾಗಿ ಹೇಳಿದೆ. ಈ ಪೀಠವು ಮುಖ್ಯ ನ್ಯಾಯಮೂರ್ತಿ ಎಸ್‌.ಎ.ಬೊಬ್ಡೆ, ನ್ಯಾಯಮೂರ್ತಿಗಳಾದ ಎ.ಎಸ್.ಬೋಪಣ್ಣ ಮತ್ತು …

Read More »

ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ

ಬೆಳಗಾವಿ : ಜಿಲ್ಲೆಯಲ್ಲಿ ಯುವ ಮತದಾರರ ನೋಂದಣಿ ಹೆಚ್ಚಿಸುವುದರ ಜತೆಗೆ ಲೋಪರಹಿತ ಮತದಾರರ ಪಟ್ಟಿ ಸಿದ್ಧಪಡಿಸಲು ಮತದಾರರ ಪಟ್ಟಿಯ ಪರಿಷ್ಕರಣೆ ಕಾರ್ಯವನ್ನು ಮಾರ್ಗಸೂಚಿ ಪ್ರಕಾರ ಸಮರ್ಪಕವಾಗಿ ನಡೆಸಬೇಕು ಎಂದು ಜಿಲ್ಲೆಯ ಮತದಾರರ ಪಟ್ಟಿಯ ವೀಕ್ಷಕ(ರೋಲ್ ಅಬ್ಸರ್ವರ್)  ಎಲ್.ಕೆ.ಅತೀಕ್ ಸೂಚನೆ ನೀಡಿದರು. ಜಿಲ್ಲೆಯ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಬುಧವಾರ (ಡಿ.16) ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶೇ.71 ರಷ್ಟು ಜನರ …

Read More »

ನಾಳೆಯಿಂದ ಇಂಡೋ- ಆಸೀಸ್ `ಟೆಸ್ಟ್

ಅಡಿಲೇಡ್, ಡಿ.15- ಟೆಸ್ಟ್ ವಿಶ್ವಕಪ್ ಫೈನಲ್‍ಗೇರಲು ಹೋರಾಟ ನಡೆಸುತ್ತಿರುವ ವಿರಾಟ್ ಕೊಹ್ಲಿ ಬಳಗದ ಟೀಂ ಇಂಡಿಯಾವು ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಗ್ನಿ ಪರೀಕ್ಷೆಯನ್ನು ಎದುರಿಸುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್‍ನಲ್ಲಿ ಭಾರತವು ಗೆದ್ದು ತಮ್ಮಲ್ಲೇ ಟ್ರೋಫಿ ಉಳಿಸಿಕೊಳ್ಳಲು ಮುಂದಾಗಿದ್ದರೆ, ತವರಿನಲ್ಲಿ ಮಿಂಚುವ ಮೂಲಕ ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಳ್ಳಲು ಟ್ರಾವಿಸ್ ಹೆಡ್ ಬಳಗ ಸಜ್ಜಾಗಿದೆ. #ಪಿಂಕ್ ಬಾಲ್ ಟೆಸ್ಟ್: ಅಡಿಲೇಡ್ ನಡೆಯಲಿರುವ ಮೊದಲ ಟೆಸ್ಟ್ …

Read More »

66 ರ ಇಳಿ ವಯಸ್ಸಿನಲ್ಲಿಯೂ ಚು.ಅಖಾಡಕ್ಕಿಳಿದ ಪತಿ- ಪತ್ನಿ!!

ವಿಜಯಪುರ: ರಾಜ್ಯದೆಲ್ಲೆಡೆ ಗ್ರಾಮ ಪಂಚಾಯಿತಿ ಚುನಾವಣೆ ಕಾವು ಜೋರಾಗಿದೆ. ಚುನಾವಣಾ ಅಭ್ಯರ್ಥಿಗಳು ಲೋಕಲ್ ದಂಗಲ್ ನಲ್ಲಿ ಜಯಗಳಿಸಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಒಂದೇ ವಾರ್ಡ್ ನಲ್ಲಿ  ಪತಿ- ಪತ್ನಿ ಅಖಾಡಕ್ಕಿಳಿಯುವ ಮೂಲಕ ಜನರ ಗಮನ ಸೆಳೆದಿದ್ದಾರೆ. ಹೌದು.. ವಿಜಯಪುರ ಜಿಲ್ಲೆಯ  ಬಸವನ ಬಾಗೇವಾಡಿ ತಾಲೂಕಿನ ಗುಣಶ್ಯಾಳ ಪಿ.ಬಿ. ಗ್ರಾಮ ಪಂಚಾಯತಿಯ ಸಂನಾಳ ಗ್ರಾಮದಲ್ಲಿ ಒಂದೇ ವಾರ್ಡ್ ನಲ್ಲಿ ಚುನಾವಣೆ ಅಖಾಡಕ್ಕಿಳಿಯುವ ಮೂಲಕ ಪತ್ನಿ ಪತ್ನಿ ಎಲ್ಲರ …

Read More »

ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಶಿಕ್ಷಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ಬಳಿಕ ಶಿಕ್ಷಕರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಬಸವರಾಜ್ ಹೊರಟ್ಟಿ …

Read More »