Breaking News

Uncategorized

ದೆಹಲಿಯಲ್ಲಿ ಟ್ರ್ಯಾಕ್ಟರ್ ರ‍್ಯಾಲಿ : ರೈತ ಮೇಲೆ ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ..!

ನವದೆಹಲಿ,ಜ.26- ಎಪ್ಪತ್ತೆರಡನೆ ಗಣರಾಜ್ಯೋತ್ಸವ ಸಂಭ್ರಮಾಚರಣೆ ನಡುವೆ ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ಟ್ರ್ಯಾಕ್ಟರ್ ರ‍್ಯಾಲಿ ನಡೆಸಿದರೆ, ದೇಶದ ನಾನಾ ಭಾಗಗಳಲ್ಲಿ ಬೃಹತ್ ರೈತ ಹೋರಾಟಗಳು ನಡೆದವು. ರಾಷ್ಟ್ರ ರಾಜಧಾನಿ ನವದೆಹಲಿ, ಎಲ್ಲಾ ರಾಜ್ಯಗಳ ರಾಜಧಾನಿಗಳು ಹಾಗೂ ಜಿಲ್ಲಾ ಕೇಂದ್ರಗಳಲ್ಲಿ ಪಥಸಂಚಲನ ನಡೆಯಿತು. ಅದೇ ಸಂದರ್ಭದಲ್ಲಿ ರೈತರು ಗಣರಾಜ್ಯೋತ್ಸವಕ್ಕೆ ಪರ್ಯಾಯವಾಗಿ ರೈತ ಹೋರಾಟಗಳನ್ನು ನಡೆಸಿದರು. ಸೇನೆ ಮತ್ತು ಸಶಸ್ತ್ರ ಪಡೆಗಳ ಪರೇಡ್‍ಗೆ ಪರ್ಯಾಯವಾಗಿ ಟ್ರ್ಯಾಕ್ಟರ್ ರ‍್ಯಾಲಿಗಳು ನಡೆದವು. ದೆಹಲಿಯ …

Read More »

ಸತ್ಯಕ್ಕೆ ಜಯ, ಸತ್ಯಮೇವ ಜಯತೇ: ರಾಗಿಣಿ

ಬೆಂಗಳೂರು: ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿ ಬಂಧಿತರಾಗಿದ್ದ ನಟಿ ರಾಗಿಣಿ 144 ದಿನಗಳ ಬಳಿಕ ಪರಪ್ಪನ ಅಗ್ರಹಾರದಿಂದ ಹೊರಬರುತ್ತಿದ್ದಂತೆ ನಿಜವಾಗಿ ಸತ್ಯಕ್ಕೆ ಜಯವಾಗಿದೆ, ಸತ್ಯಮೇವ ಜಯತೇ ಎಂದಿದ್ದಾರೆ. ಜೈಲಿನಿಂದ ಹೊರಬಂದು ಮಾಧ್ಯಮದವರೊಂದಿಗೆ ಮಾತಾನಾಡಿದ ಅವರು, ಇಷ್ಟು ದಿನ ನನ್ನ ಪರ ನಿಂತಿದ್ದ ಬಂಧುಗಳಿಗೆ, ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸುತ್ತಿದ್ದೇನೆ. ನಾನು ನ್ಯಾಯಾಲಯದ ಮೇಲೆ ತುಂಬಾ ನಂಬಿಕೆ ಇಟ್ಟಿದ್ದೆ. ಹಾಗಾಗಿ ನನಗೆ ಸಿಕ್ಕ ಜಯವಿದು. ನಾನು ತುಂಬಾ ಹೋರಾಟಗಳನ್ನು ನಡೆಸಿ ಜೈಲಿನಿಂದ ಹೊರಗಡೆ …

Read More »

ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ

ಪುತ್ತೂರಿನ ಬಾಲಕನ ಆವಿಷ್ಕಾರಕ್ಕೆ ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಮಂಗಳೂರು: ದಕ್ಷಿಣ ಕನ್ನಡದ ರಾಕೇಶ್‍ಕೃಷ್ಣ ಕೆ. ಮತ್ತು ಬೆಂಗಳೂರಿನ ವೀರ್ ಕಶ್ಯಪ್ ಸೇರಿದಂತೆ ದೇಶದ ಒಟ್ಟು 32 ಮಕ್ಕಳಿಗೆ ಈ ಬಾರಿಯ ಪ್ರಧಾನಮಂತ್ರಿ ರಾಷ್ಟ್ರೀಯ ಬಾಲ ಪುರಸ್ಕಾರ ಪ್ರಶಸ್ತಿ ಲಭಿಸಿದೆ. ಪುತ್ತೂರು ತಾಲೂಕಿನ ಬನ್ನೂರು ಗ್ರಾಮದ ರಾಕೇಶ್ ಕೃಷ್ಣ ಅವರ ಸೀಡೋಗ್ರಾಫರ್ ಅನ್ನೋ ಬೀಜ ಬಿತ್ತನೆಯ ಕೃಷಿ ಯಂತ್ರ ಸಂಶೋಧನೆಗೆ ಈ ಪ್ರಶಸ್ತಿ ಸಂದಿದೆ. ಇಂದು ಪ್ರಧಾನಿ …

Read More »

ಪ್ರಥಮ ದರ್ಜೆಯ ಗುತ್ತಿಗೆದಾರನಿಗೆ ಐಬಿಯನ್ನೇ ಅಧಿಕಾರಿಗಳು ಬರೆದು ಕೊಟ್ರಾ..?

ವಿಜಯಪುರ: ಲೋಕೋಪಯೋಗಿ ಇಲಾಖೆಯ ಪ್ರವಾಸಿ ಮಂದಿರದಲ್ಲಿ ಗುಂಡು, ತುಂಡು ಪಾರ್ಟಿ ನಡೆದ ಘಟನೆ ವಿಜಯಪುರ ಜಿಲ್ಲೆಯ ಕೊಲ್ಹಾರ ತಾಲೂಕಿನ ಮುಳವಾಡ ಗ್ರಾಮದಲ್ಲಿ ನಡೆದಿದೆ. ಕಳೆದ ರಾತ್ರಿ ಕ್ಲಾಸ್ 1 ಗುತ್ತಿಗೆದಾರನೊಬ್ಬ ಮುಳವಾಡ ಪ್ರವಾಸಿ ಮಂದಿರದಲ್ಲಿ ಪೆಂಡಾಲ್ ಹಾಕಿಸಿ ಭರ್ಜರಿಯಾಗಿ ಗುಂಡು ತುಂಡು ಪಾರ್ಟಿ ನಡೆಸಿದ್ದಾನೆ. ಈ ಪಾರ್ಟಿಯಲ್ಲಿ ಅನೇಕ ಸರ್ಕಾರಿ ಅಧಿಕಾರಿಗಳು, ರಾಜಕಾರಣಿಗಳು ಸೇರಿದಂತೆ 200ಕ್ಕೂ ಅಧಿಕ ಮಂದಿ ಪಾಲ್ಗೊಂಡಿದ್ದರು. ಪಾರ್ಟಿಯಲ್ಲಿ ಎಣ್ಣೆ, ಮಾಂಸದೂಟ ಎಲ್ಲವೂ ರಾಜಾರೋಷವಾಗಿ ನಡೆದಿದೆ. ಪ್ರವಾಸಿ …

Read More »

ಸೈಫ್‍ಅಲಿಖಾನ್ ತಾಂಡವ ಸಿನಿಮಾ ವಿರೋಧಿಸಿ ಶ್ರೀರಾಮ ಸೇನಾ ಹಿಂದೂಸ್ತಾನ್ ಪ್ರತಿಭಟನೆ

ಕೋವಿಡ್ ಸೋಂಕು ತಡೆ ಹೆಸರಿನಲ್ಲಿ ಬಂದ್ ಮಾಡಿರುವ ಹಿಂದೂ ದೇವಾಲಯಗಳನ್ನು ತೆರೆದು ದೇವರ ದರ್ಶನಕ್ಕೆ ಅವಕಾಶ ಮಾಡಿಕೊಡಬೇಕು, ಹಿಂದೂ ದೇವತೆಗಳಿಗೆ ಅಪಮಾನ ಮಾಡುವಂತೆ ಚಿತ್ರೀಕರಿಸಿರುವ ತಾಂಡವ ಹಿಂದಿ ಚಲನಚಿತ್ರವನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆಯ ಮುಖಂಡರು, ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿ ಅವರಿಗೆ ಮನವಿ ಸಲ್ಲಿಸಿದರು. ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದ ಶ್ರೀರಾಮ ಸೇನಾ ಹಿಂದೂಸ್ತಾನ್ ಸಂಘಟನೆಯ ಮುಖಂಡರು, …

Read More »

ಅಕ್ರಮ ಅಕ್ಕಿ ಸಾಗಾಟಕಿತ್ತೂರು ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ

ಕಿತ್ತೂರು : ಖಚಿತ ಮಾಹಿತಿ ಮೇರೆಗೆ ಅನ್ನಭಾಗ್ಯ ಯೋಜನೆಯ ಅಕ್ಕಿಯನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಎರಡು ಲಾರಿಗಳನ್ನು ಕಿತ್ತೂರು ಪೋಲಿಸರು ದಾಳಿ ನಡೆಸಿ ವಶಕ್ಕೆ ಪಡೆದಿದ್ದಾರೆ. ಹಾವೇರಿಯಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ ಅನ್ನಭಾಗ್ಯ ಅಕ್ಕಿಯ ಲಾರಿಗಳನ್ನು ಕಿತ್ತೂರು ಗಜರಾಜ ಪ್ಯಾಲೇಸ್ ಎದುರಿಗೆ ರಾಷ್ಟ್ರಿಯ ಹೆದ್ದಾರಿ 4 ರಲ್ಲಿ ವಶಕ್ಕೆ ಪಡೆದು, ಚಾಲಕರು ಹಾಗೂ ಕ್ಲೀನರ್‍ಗಳನ್ನು ಬಂಧಿಸಿದ್ದಾರೆ. ಎರಡು ಲಾರಿಗಳಲ್ಲಿ ಸಾಗಿಸುತ್ತಿದ್ದ 12 ಲಕ್ಷ ಮೌಲ್ಯದ ತಲಾ 50ಕೆಜಿಯ 1040 ಚೀಲ ರೇಷನ್ ಅಕ್ಕಿ, …

Read More »

ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಮೂಲ ಪತ್ತೆ, ಮತ್ತಿಬ್ಬರು ಅರೆಸ್ಟ್

ಬೆಂಗಳೂರು,ಜ.25- ಎಫ್‍ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತನಿಖೆ ಮಹತ್ವದ ಪ್ರಗತಿ ಸಾಸಿದ್ದು, ಸೋರಿಕೆಯ ಮೂಲವನ್ನು ಪತ್ತೆಹಚ್ಚಿರುವ ಸಿಸಿಬಿ ಪೊಲೀಸರು ಕರ್ನಾಟಕ ಲೋಕಸೇವಾ ಆಯೋಗದ ಇಬ್ಬರು ಸಿಬ್ಬಂದಿಗಳನ್ನು ಬಂಸಿದ್ದಾರೆ. ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್‍ಸಿ)ದಲ್ಲಿ ದ್ವಿತೀಯ ದರ್ಜೆ ಸಹಾಯಕರಾಗಿರುವ ರಮೇಶ್, ಪರೀಕ್ಷಾ ವಿಭಾಗದಲ್ಲಿ ಶೀಘ್ರ ಲಿಫಿಗಾರರಾಗಿರುವ ಸನಾಬೇಡಿ ಅವರನ್ನು ಬಂಸಲಾಗಿದೆ ಎಂದು ಸಿಸಿಬಿ ಪೊಲೀಸರು ತಿಳಿಸಿದ್ದಾರೆ. ಸನಾಬೇಡಿ ಪರೀಕ್ಷಾ ವಿಭಾಗದ ನಿಯಂತ್ರಕರಾಗಿದ್ದು, ಪ್ರಶ್ನೆ ಪತ್ರಿಕೆಯನ್ನು ಸೋರಿಕೆ ಮಾಡಿ ರಮೇಶ್‍ಗೆ …

Read More »

ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌, ಕಾಂಗ್ರೇಸ್ – ಬಿಜೆಪಿ ಸರಕಾರ : ಡಿಕೆಶಿ ವ್ಯಂಗ್ಯ

ಮೈಸೂರು: ನಮ್ಮ ಸದಸ್ಯರನ್ನು ಕರೆದುಕೊಂಡು ಹೋಗಿ ಸರ್ಕಾರ ರಚಿಸಿದ್ದಾರೆ. ಆದ್ದರಿಂದ ರಾಜ್ಯದಲ್ಲಿ ಇರೋದು ಬಿಜೆಪಿ ಸರ್ಕಾರವಲ್ಲ‌. ಕಾಂಗ್ರೆಸ್- ಬಿಜೆಪಿ ಸರ್ಕಾರ ಎಂದು ಡಿ.ಕೆ. ಶಿವಕುಮಾರ್ ಹೇಳಿದರು. ನಮ್ಮವರನ್ನು ಕರೆದುಕೊಂಡು ಹೋಗಿ ಗಿಫ್ಟ್ ಕೊಟ್ಟಿದ್ದಾರೆ. ಹಾಗಾಗಿ ರಾಜ್ಯ ಸರ್ಕಾರ ಸುಭದ್ರವಾಗಿದೆ. ಎಲ್ಲರೂ ಅತ್ಯಂತ ಒಗ್ಗಟ್ಟಿನಿಂದ ಸಹಕಾರ ಕೊಡುತ್ತಿದ್ದಾರೆ ಎಂದು ಡಿ.ಕೆ.ಶಿವಕುಮಾರ್ ಲೇವಡಿ‌ ಮಾಡಿದರು. ಈ ಸರ್ಕಾರ ಬಲಿಷ್ಠವಾಗಿದೆ. ಬಹಳಷ್ಟು ಸಂಖ್ಯಾ ಬಲವಿದೆ. ಸರ್ಕಾರದಲ್ಲಿರುವವರು ಎಲ್ಲರೂ ತುಂಬಾ ಒಗ್ಗಟ್ಟಾಗಿದ್ದಾರೆ. ಸರ್ಕಾರದಲ್ಲಿ ಏನೇನು ಗೊಂದಲವಿಲ್ಲ. …

Read More »

ಬಸವಕಲ್ಯಾಣ ಉಪ ಚುನಾವಣೆ: ಡಿಸಿಎಂ ಸವದಿಯತ್ತ ಬಿಜೆಪಿ ಒಲವು, ಕೈ ನಿಂದ ಧರ್ಮಸಿಂಗ್‌ ಪುತ್ರ?

ಬೆಂಗಳೂರು: ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಗೆ ಡಿಸಿಎಂ ಲಕ್ಷ್ಮಣ ಸವದಿ ಹೆಸರು ಕೇಳಿ ಬರುತ್ತಿದೆ. ಬಸವಕಲ್ಯಾಣ ವಿಧಾನಸಭೆ ಉಪ ಚುನಾವಣೆಯನ್ನು ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಜೆಪಿ ಹೇಗಾದರೂ ಮಾಡಿ ಗೆಲುವು ಸಾಧಿಸಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದ್ದು, ಈಗ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ಹೆಸರು ಮುನ್ನೆಲೆಗೆ ಬಂದಿದೆ. ಲಕ್ಷ್ಮಣ ಸವದಿ ಗಡಿ ಭಾಗದಲ್ಲಿ ಮರಾಠ ಸಮುದಾಯದೊಂದಿಗೆ ಉತ್ತಮ ಬಾಂಧವ್ಯ ಹೊಂದಿರುವುದರಿಂದ ಬಸವ ಕಲ್ಯಾಣ ಕ್ಷೇತ್ರದಲ್ಲಿ ಆ ಸಮುದಾಯದ ಮತಗಳನ್ನು ಸೆಳೆಯಬಹುದು ಎಂಬ …

Read More »

BREAKING : ಕೋಲಾರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಶಾಲಾ ವಾಹನ ಪಲ್ಟಿ, 15ಕ್ಕೂ ಹೆಚ್ಚು ಮಕ್ಕಳಿಗೆ ಗಾಯ

ಕೋಲಾರ : ಜಿಲ್ಲೆಯ ಮುಳುಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ, ಇಂದು ಬೆಳಿಗ್ಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ಶಾಲಾ ವಾಹನ ಪಲ್ಟಿ ಆಗಿದೆ. ಶಾಲಾ ವಾಹನ ಪಲ್ಟಿಯಾಗಿದ್ದರಿಂದ ಅದರಲ್ಲಿದ್ದಂತ 15ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೀಗೇಹಳ್ಳಿ ಗೇಟ್ ಬಳಿ ಇಂದು ಬೆಳಿಗ್ಗೆ ನಂಗಲಿಯಿಂದ ಮುಳಬಾಗಿಲು ಪಟ್ಟಣದ ಶ್ರೀಸಾಯಿ ಇಂಟರ್ ನ್ಯಾಷನಲ್ ಶಾಲೆಗೆ ಮಕ್ಕಳನ್ನು ಕರೆದೊಯ್ಯುತ್ತಿದ್ದಂತ ವಾಹನ ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇದರಿಂದಾಗಿ ವಾಹನದಲ್ಲಿದ್ದಂತ …

Read More »