Breaking News

Uncategorized

ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿ

ಬೆಂಗಳೂರು: ವಿಧಾನಸೌಧದಲ್ಲಿ ಕೆಲಸ ಮಾಡುತ್ತಿರುವುದಾಗಿ ಹೇಳಿಕೊಂಡ ದಂಪತಿ, ಸಚಿವರ ಬಳಿ ಹೇಳಿ ಕೆಲಸ ಕೊಡಿಸುವುದಾಗಿ ನಂಬಿಸಿ ರಾಜೀವ್ ಗಾಂಧಿ ಆರೋಗ್ಯ ವಿವಿ ಉಪ ರಿಜಿಸ್ಟ್ರಾರ್ ಗೆ 70 ಲಕ್ಷ ರೂಪಾಯಿ ವಂಚನೆ ಮಾಡಿ ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ದಂಪತಿ ವಂಚನೆ ಮಾಡಿರುವ ಆರೋಪಿಗಳು. ವಂಚನೆಗೊಳಗಾದ ಡಾ.ಪ್ರಭಾ ಹೆಬ್ಬಾಳ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಮಂಜುನಾಥ್ ಹಾಗೂ ಲಕ್ಷ್ಮಿಪ್ರಿಯಾ ತಾವು ಸರ್ಕಾರಿ ನೌಕರರ ಸಂಘದ ಉಪಾಧ್ಯಕ್ಷರು …

Read More »

5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ಒಂದು ಸಾವಿರ ರೂ. ದಂಡ

ಅರಸಿಕೆರೆ – ಪ್ರಯಾಣಿಕರೊಬ್ಬರಿಂದ 5 ರೂ. ನೋಟು ಸ್ವೀಕರಿಸಲು ನಿರಕರಿಸಿದ ಕಂಡಕ್ಟರ್ ಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಒಂದು ಸಾವಿರ ರೂ. ದಂಡ ವಿಧಿಸಿದೆ. ಸೋಮಶೇಖರ ಎನ್ನುವವರು ಅರಸಿಕೆರೆಯಿಂದ ತಿಪಟೂರಿಗೆ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಲ್ಲಿ ಪ್ರಯಾಣಿಸುತ್ತಿದ್ದರು. 35 rs. ಟಿಕೆಟ್ ಗೆ 10 ರೂ.ಗಳ 3 ನೋಟು ಮತ್ತು 5 ರೂ.ಗಳಒಂದು ನೋಟನ್ನು ಅವರು ನೀಡಿದರು. ಆದರೆ 5 ರೂ. ನೋಟನ್ನು ನಿರಾಕರಿಸಿದ ಕಂಡಕ್ಟರ್ ಗಲಾಟೆ …

Read More »

ವಿದೇಶಿಯರ ಅಪಪ್ರಚಾರ ವಿರುದ್ಧ ಸಿಡಿದೆದ್ದ ಬಾಲಿವುಡ್, ಕ್ರೀಡಾ ತಾರೆಯರು

ನವದೆಹಲಿ: ಭಾರತದ ಆಂತರಿಕ ವಿಷಯಗಳ ಕುರಿತು ವಿದೇಶಿಯರ ಅಪಪ್ರಚಾರದ ವಿರುದ್ಧ ಬಾಲಿವುಡ್ ಹಾಗೂ ಕ್ರೀಡಾ ತಾರೆಗಳು ತೀವ್ರ ಖಂಡನೆಯನ್ನು ವ್ಯಕ್ತಪಡಿಸಿದ್ದಾರೆ. ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಸಂಬಂಧ ಅಂತರರಾಷ್ಟ್ರೀಯ ಪಾಪ್ ತಾರೆ ರಿಹಾನ್ನಾ ಸೇರಿದಂತೆ ಅನೇಕ ವಿದೇಶಿ ಗಣ್ಯ ವ್ಯಕ್ತಿಗಳು ಪ್ರತಿಕ್ರಿಯಿಸಿದ್ದರು. ಭಾರತದ ವಿಷಯಗಳ ಬಗ್ಗೆ ವಿದೇಶಿಯರು ಮಾತನಾಡಿರುವ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಭಾರತೀಯ ಸೆಲೆಬ್ರಿಟಿಗಳು, ದೇಶದ ಆಂತರಿಕ ವಿಷಯಗಳಲ್ಲಿ ವಿದೇಶಿಯರು ಅಪಪ್ರಚಾರ ನಡೆಸುವ ಅಗತ್ಯವಿಲ್ಲ ಎಂದು ಹೇಳಿದ್ದಾರೆ. …

Read More »

ಗ್ಯಾಸ್ ಟ್ಯಾಂಕರ್ – ಕಂಟೈನರ್ ನಡುವೆ ಢಿಕ್ಕಿ ರಸ್ತೆ ಸಂಚಾರ ಅಸ್ತವ್ಯಸ್ತ

ಬಂಟ್ವಾಳ, ಫೆ.03. ಗ್ಯಾಸ್ ಟ್ಯಾಂಕರ್ ಹಾಗೂ ಕಂಟೈನರ್ ಲಾರಿ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಕೆಲಕಾಲ ರಸ್ತೆ ಸಂಚಾರದಲ್ಲಿ ಅಡಚಣೆಯುಂಟಾದ ಘಟನೆ ಮಂಗಳೂರು – ಬೆಂಗಳೂರು ರಾಷ್ಟೀಯ ಹೆದ್ದಾರಿಯ ಕಲ್ಲಡ್ಕದಲ್ಲಿ ಬುಧವಾರ ರಾತ್ರಿ ನಡೆದಿದೆ. ಬೆಂಗಳೂರು ಕಡೆಯಿಂದ ಮಂಗಳೂರು ಕಡೆಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ವಿರುದ್ಧ ದಿಕ್ಕಿನಿಂದ ತೆರಳುತ್ತಿದ್ದ ಕಂಟೈನರ್ ಲಾರಿ ನಡುವೆ ಕಲ್ಲಡ್ಕ ಎಂಬಲ್ಲಿ ಢಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಎರಡೂ ಲಾರಿಗಳ ಚಾಲಕರು ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ …

Read More »

ಏ.1ರಿಂದ ಸೀಮೆಎಣ್ಣೆ ಸಬ್ಸಿಡಿ ರದ್ದು..! ಕೇಂದ್ರ ಸರ್ಕಾರದ ಆದೇಶ..!

ಫೆಬ್ರುವರಿ 1ರಂದು ಸಂಸತ್ತಿನಲ್ಲಿ ಮಂಡಿಸಲಾದ ಬಜೆಟ್ ದಾಖಲೆಗಳ ಪ್ರಕಾರ, ಏಪ್ರಿಲ್ನಿಂದ ಪ್ರಾರಂಭವಾಗುವ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆಗೆ ಸಬ್ಸಿಡಿ ಪಾವತಿಸಲು ಅವಕಾಶ ನೀಡೋದಿಲ್ಲ ಎಂದಿದೆ. ಅದ್ರಂತೆ, ಮರ‍್ಚ್ 31ಕ್ಕೆ ಮುಕ್ತಾಯವಾಗಲಿರುವ ಪ್ರಸಕ್ತ ಹಣಕಾಸು ರ‍್ಷದಲ್ಲಿ ಸೀಮೆಎಣ್ಣೆ ಸಬ್ಸಿಡಿ 2,677.32 ಕೋಟಿ ರೂಪಾಯಿ ಆಗಿತ್ತು. ಹಿಂದಿನ ಹಣಕಾಸು ರ‍್ಷದಲ್ಲಿ ರೂ4,058 ಕೋಟಿ ಆಗಿತ್ತು ಎಂದು ದಾಖಲೆಗಳಲ್ಲಿ ಉಲ್ಲೇಖಿಸಲಾಗಿದೆ. ಕೇಂದ್ರ ರ‍್ಕಾರ ಸೀಮೆಎಣ್ಣೆ ದರವನ್ನ ಏರಿಕೆ ಮಾಡಿರೋದ್ರ ಜೊತೆಗೆ ಇದ್ರ ಮೇಲೆ ಸಿಗ್ತಿದ್ದ ಸಬ್ಸಿಡಿಯನ್ನೂ …

Read More »

Ration Rice ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸ್ತಿದ್ದ ಪಡಿತರ ಅಕ್ಕಿ ಜಪ್ತಿ.. ಲಾರಿ ಚಾಲಕ ಅರೆಸ್ಟ್

ವಿಜಯಪುರ: ಬಸವನಬಾಗೇವಾಡಿ ತಹಶೀಲ್ದಾರ್‌ ಹಾಗೂ ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ಅಕ್ರಮವಾಗಿ ಸಾಗಿಸ್ತಿದ್ದ 589 ಮೂಟೆ ಪಡಿತರ ಅಕ್ಕಿಯನ್ನು ಜಪ್ತಿ ಮಾಡಿದ್ದಾರೆ. ಸುಮಾರು ₹7.99 ಲಕ್ಷ ಮೌಲ್ಯದ ಪಡಿತರ ಅಕ್ಕಿ ಜಪ್ತಿಯಾಗಿದೆ. ಬಾಗಲಕೋಟೆಯಿಂದ ವಿಜಯಪುರ ಮಾರ್ಗವಾಗಿ ಮಹಾರಾಷ್ಟ್ರಕ್ಕೆ ಪಡಿತರ ಅಕ್ಕಿಯನ್ನು ಸಾಗಿಸಲಾಗುತ್ತಿತ್ತು. ನಂಬರ್ KA29 B 8299 ನೋಂದಣಿ ಹೊಂದಿರುವ ಲಾರಿಯಲ್ಲಿ ಸಾಗಾಟ ಮಾಡುತ್ತಿದ್ದ ಒಟ್ಟು 589 ಮೂಟೆ ಪಡಿತರ ಅಕ್ಕಿಯನ್ನು ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ತಾಲೂಕಿನ ಮನಗೂಳಿ …

Read More »

ಗರ್ಭಿಣಿಯರು, ಬಾಣಂತಿಯರಿಗೆ ‘ಸಿಹಿ ಸುದ್ದಿ’ ನೀಡಿದ ಸಚಿವೆ ಶಶಿಕಲಾ ಜೊಲ್ಲೆ..!

ಬೆಂಗಳೂರು: ಗರ್ಭಿಣಿಯರು ಬಾಣಂತಿಯರಿಗೆ ಮನೆ ಬಾಗಿಲಿಗೆ ಪೌಷ್ಟಿಕಾಂಶವುಳ್ಳ ಆಹಾರ ಪೂರೈಕೆ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಸಬಲೀಕರಣ ಇಲಾಖೆ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆಯಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ(Shashikala Jolle), ಗರ್ಭಿಣಿಯರು ಮತ್ತು ಬಾಣಂತಿಯರ ಮನೆಬಾಗಿಲಿಗೆ ಪೌಷ್ಟಿಕಾಂಶ ಆಹಾರ ಪೂರೈಕೆ ಬಗ್ಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸಿ ಸೂಕ್ತ ಕ್ರಮಕೈಗೊಳ್ಳುವುದಾಗಿ ಹೇಳಿದ್ದಾರೆ. ಶಾಸಕ ಸಂಜೀವ್ ಮಠಂದೂರು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಉತ್ತರ ಕನ್ನಡ, …

Read More »

ಒತ್ತಡಕ್ಕೆ ಮಣಿದ ರಾಜ್ಯಸರ್ಕಾರ: ಚಿತ್ರಮಂದಿರಗಳಲ್ಲಿ ಶೇ.100 ರಷ್ಟು ಅವಕಾಶ ನೀಡಲು ಮಾರ್ಗಸೂಚಿ

ಬೆಂಗಳೂರು: ಕನ್ನಡ ಚಿತ್ರರಂಗದ ಒತ್ತಡಕ್ಕೆ ಮಣಿದ ರಾಜ್ಯ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ. 100 ರಷ್ಟು ಪ್ರೇಕ್ಷಕರಿಗೆ ಅವಕಾಶ ನೀಡಲು ನೆರವಾಗುವಂತಹ ಮಾರ್ಗಸೂಚಿ ಸಿದ್ದಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದೆ. “ಮಾರ್ಕೆಟ್ ನಲ್ಲಿ ಗಿಜಿ ಗಿಜಿ ಜನ, ಬಸ್ ನಲ್ಲೂ ಫುಲ್ ರಶ್, ಚಿತ್ರಮಂದಿರಕ್ಕೆ ಮಾತ್ರ ಏಕೆ 50% ನಿರ್ಬಂಧ?” ಎಂಬ ಒಕ್ಕಣೆಯಲ್ಲಿ ನಟ ಧ್ರುವ ಸರ್ಜಾ ಅವರು ಇದೇ ಪೋಸ್ಟರ್ ನ್ನು ಟ್ವೀಟ್ ಮಾಡಿದ್ದರು. ಇದಾದ ಬಳಿಕ ಚಿತ್ರರಂಗದ ಹಲವರು ಚಿತ್ರ …

Read More »

ಹಲಗಲಿಯಲ್ಲಿ ಈಗ ನಿರಂತರ ಕುಡಿವ ನೀರು

ಮುಧೋಳ: ಜನಪ್ರತಿನಿ ಧಿಗಳು ಹಾಗೂ ಅಧಿ ಕಾರಿಗಳು·ಮನಸ್ಸು ಮಾಡಿದರೆ ಏನೆಲ್ಲ ಅಭಿವೃದ್ಧಿ ಸಾಧಿ ಸಬಹುದುಎಂಬುದಕ್ಕೆ ಹಲಗಲಿ ಗ್ರಾಮವೇ ಸಾಕ್ಷಿಯೆಂಬಂತಿದೆ.ತಾಲೂಕಿನ ಗಡಿಗ್ರಾಮ ಹಲಗಲಿ ಗ್ರಾಮ ಒಂದುಕಾಲಕ್ಕೆ ಕುಗ್ರಾಮವೆಂಬಂತ್ತಿತ್ತು. ಆದರೆ ಅದೇ ಗ್ರಾಮಇಂದು ಕುಡಿಯುವ ನೀರಿನ ವಿಷಯದಲ್ಲಿ ತಾಲೂಕಿನಎಲ್ಲ ಹಳ್ಳಿಗಳಿಗೂ ಮಾದರಿಯಾಗಿದೆ. ಹೌದು. ಐತಿಹಾಸಿಕ ಹಿನ್ನೆಲೆಯುಳ್ಳ ಹಲಗಲಿಗ್ರಾಮದಲ್ಲಿ ದಶಕಗಳ ಹಿಂದೆ ಒಂದೇ ಒಂದು ಕೊಡನೀರು ತರಬೇಕೆಂದರೂ ಕನಿಷ್ಠ ಒಂದು ಕಿ.ಮೀ. ದೂರನಡೆಯಬೇಕಿತ್ತು. ಮನೆಯಲ್ಲಿ ಒಬ್ಬರು ನೀರು ತರಲುಇರುವಂತಾಗಿತ್ತು. ಈ ಸಮಸ್ಯೆಯನ್ನರಿತ ಇಂದಿನ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ 2017ರಲ್ಲಿಮಾಚಕನೂರ …

Read More »

ಉಚಿತ ಸ್ಪರ್ಧಾತ್ಮಕ ಪರೀಕ್ಷೆ ರದ್ದುಪಡಿಸಿದ್ದಕ್ಕೆಆಕ್ರೋಶ: ಹೆಬ್ಬಾಳಕರ್

ಬೆಂಗಳೂರು – ರಾಜ್ಯದಲ್ಲಿ 2020 -21ನೇ ಸಾಲಿನಲ್ಲಿ ಐಎಎಸ್, ಕೆಎಎಸ್, ಬ್ಯಾಂಕಿಂಗ್ ಉಚಿತ ತರಬೇತಿ ರದ್ದುಪಡಿಸಲಾಗಿದೆ. ಇದಕ್ಕೆ ಕಾರಣ ಕೊರೋನಾ. ಕೊರೋನಾ ಕಾರಣದಲ್ಲಿ ಅನುದಾನ ಕೊರತೆಯಾಗಿದ್ದರಿಂದ ಈ ಉಚಿತ ತರಬೇತಿಗಳ ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿಲ್ಲ ಎಂದು ರಾಜ್ಯ ಸರಕಾರ ವಿಧಾನಸಭೆಯಲ್ಲಿ ತಿಳಿಸಿದೆ. ಹಿಂದುಳಿದ ವರ್ಗಗಳ ಕಲ್ಯಾಣ ಸಚಿವ ಕೋಟ ಶ್ರೀನಿವಾಸ ಪೂಜಾರಿ ಶಾಸಕಿ ಲಕ್ಷ್ಮಿ ಹೆಬ್ಬಾಳಕರ್ ಅವರ ಪ್ರಶ್ನೆಗೆ ಈ ಉತ್ತರ ನೀಡಿದ್ದಾರೆ. ಪ್ರತಿ ವರ್ಷ ಹಿಂದುಳಿದ ವರ್ಗಗಳ ಕಲ್ಯಾಣ …

Read More »