Breaking News

Uncategorized

ಬಿಜೆಪಿ ಜನಸೇವಕ ಸಮಾವೇಶದ ವಿರುದ್ಧ ನ್ಯಾಯಾಲಯಕ್ಕೆ ಹೋಗುವೆ’

ಬೆಳಗಾವಿ: ಕೋವಿಡ್-19 ನಡುವೆಯೂ ಇಲ್ಲಿನ ಜಿಲ್ಲಾ ಕ್ರೀಡಾಂಗಣದಲ್ಲಿ ಬಿಜೆಪಿಯಿಂದ ಆಯೋಜಿಸಿರುವ ‘ಜನಸೇವಕ ಸಮಾವೇಶ ಸಮಾರೋಪ’ ರದ್ದುಪಡಿಸಬೇಕು ಎಂದು ಆಗ್ರಹಿಸಿ ಮಾಹಿತಿ ಹಕ್ಕು ಕಾರ್ಯಕರ್ತ ಮತ್ತು ಜೆಡಿಎಸ್ ಮುಖಂಡ ಭೀಮಪ್ಪ ಗಡಾದ ತಮ್ಮ ಬೆಂಬಲಿಗರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಶನಿವಾರ ಪ್ರತಿಭಟನೆ ನಡೆಸಿದರು. ‘ಸಮಾವೇಶ ರದ್ದುಪಡಿಸಬೇಕು ಅಥವಾ ಕೋವಿಡ್ ಮಾರ್ಗಸೂಚಿ ಹಿಂಪಡೆಯಬೇಕು ಎಂದು ಆಗ್ರಹಿಸಿ ಈಚೆಗೆ ಜಿಲ್ಲಾಡಳಿತದ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೆ. ಆದರೆ, ಈವರೆಗೂ ಸರ್ಕಾರದಿಂದ ಯಾವುದೇ ಕ್ರಮ ಆಗಿಲ್ಲ. …

Read More »

ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ.

ಪುಣೆ: ಕೊರೊನಾ ಲಸಿಕೆ ವಿತರಣೆಗೆ ಸಜ್ಜಾದ ಆಸ್ಪತ್ರೆಯ ಸಿಬ್ಬಂದಿ ರಂಗೋಲಿ ಹಾಕಿ ಜನರನ್ನು ಸ್ವಾಗತಿಸಿದ್ದಾರೆ. ಈ ಮೂಲಕ ಹಬ್ಬದ ವಾತಾವರಣ ಸೃಷ್ಟಿಸಿ ಲಸಿಕೆಗಾಗಿ ಬರುವ ಜನರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. ಭಾರತವು ಅತೀ ದೊಡ್ಡ ಲಸಿಕಾ ದಿನವನ್ನು ಆಚರಿಸಲು ಮುಂದಾಗುತ್ತಿದ್ದಂತೆ ಪುಣೆಯ ಆಸ್ಪತ್ರೆಯ ಸಿಬ್ಬಂದಿ ಆಸ್ಪತ್ರೆಯ ಮುಂಭಾಗ ನೀಲಿ ಮತ್ತು ಬಿಳಿ ಬಣ್ಣದ ಹೂವಿನ ರಂಗೋಲಿ ಬಿಡಿಸಿ ಮಧ್ಯದಲ್ಲಿ ಸ್ವಾಗತ ಎಂದು ಬರೆದು ಲಸಿಕೆ ಹಾಕಿಸಿಕೊಳ್ಳಲು ಬರುವ ಎಲ್ಲರನ್ನು ಆತ್ಮೀಯವಾಗಿ ಬರಮಾಡಿಕೊಂಡಿದ್ದಾರೆ. …

Read More »

ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ

ಆಪರೇಷನ್ ಕಮಲ, ಹಣದ ಪ್ರಭಾದಿಂದ ಬಿಎಸ್‍ವೈ ಸಿಎಂ ಆಗಿದ್ದಾರೆ: ಸಿದ್ದರಾಮಯ್ಯ ಬೆಂಗಳೂರು: ಯಡಿಯೂರಪ್ಪ ಅವರು ಜನರ ಆಶೀರ್ವಾದದಿಂದ ರಾಜ್ಯದ ಮುಖ್ಯಮಂತ್ರಿ ಆಗಿಲ್ಲ. ಆಪೆರೇಷನ್ ಕಮಲ, ಹಣದ ಪ್ರಭಾವದಿಂದ ಮುಖ್ಯಮಂತ್ರಿಯಾಗಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಸ್‍ವೈ ಆಪರೇಷನ್ ಕಮಲದ ಜನಕರಾಗಿದ್ದಾರೆ. ಬಿಎಸ್‍ವೈ ಸುಳ್ಳು ಹೇಳಿ, ಎಂಎಲ್‍ಎಗಳನ್ನು ಕೊಂಡುಕೊಂಡು, 9 ಕೋಟಿ ಹಣವನ್ನು ಖರ್ಚು ಮಾಡಿ ಮುಖ್ಯಮಂತ್ರಿ ಆಗಿದ್ದಾರೆ. ಸ್ವತಃ ಅವರ ಪಕ್ಷದವರೇ ಹಣ …

Read More »

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನ ಸಫಾರಿ ವಾಹನದ ಮೇಲೆ ಬಂಗಾಳ ಹುಲಿ ದಾಳಿ; ಬೆದರಿದ ಪ್ರವಾಸಿಗರು

ಆನೇಕಲ್: ಅವರು ಕಾನನ ನಡುವೆ ವನ್ಯಜೀವಿಗಳನ್ನು ಕಂಡು ಖುಷಿಪಡಲು ಅಲ್ಲಿಗೆ ತೆರಳಿದ್ದರು. ಆನೆ, ಜಿಂಕೆ, ಕಾಡೆಮ್ಮೆ, ಕರಡಿ ಸಿಂಹ ಸೇರಿದಂತೆ ಅಪರೂಪದ ವನ್ಯಜೀವಿಗಳನ್ನು ಕಣ್ತುಂಬಿಕೊಂಡು ಮುಂದೆ ಸಾಗಿದ್ದರು. ಅಷ್ಟರಲ್ಲಿ ಎದುರಾಯ್ತು ನೋಡಿ ವ್ಯಾಘ್ರ ಹುಲಿ. ಎಂತಹವರನ್ನು ಒಂದು ಕ್ಷಣ ತನ್ನತ್ತ ಸೆಳೆಯುವ ವನ್ಯಜೀವಿ. ಹಾಗಾಗಿ ಹುಲಿಯನ್ನು ಸಮೀಪದಿಂದ ನೋಡಲು ಅವರು ವಾಹನ ನಿಲ್ಲಿಸಿದ್ದಾರೆ. ಬಳಿಕ ಚಾಲಕ ಎಷ್ಟೇ ಪ್ರಯತ್ನಪಟ್ಟರು ವಾಹನ ಸ್ಟಾರ್ಟ್ ಆಗಲಿಲ್ಲ. ಇದನ್ನು ಕಂಡು ವ್ಯಾಘ್ರಗೊಂಡ ಹುಲಿರಾಯ ವಾಹನದ …

Read More »

ಲಸಿಕೆ ಬಗ್ಗೆ ವದಂತಿ ಹಬ್ಬಿಸಿದರೆ ಹುಷಾರ್ : ಪ್ರಧಾನಿ ಮೋದಿ ಎಚ್ಚರಿಕೆ

ನವದೆಹಲಿ,ಜ.16- ಕೊರೊನಾ ಸೋಂಕು ನಿವಾರಣೆಗೆ ಕಂಡುಹಿಡಿದಿರುವ ಲಸಿಕೆ ಬಗ್ಗೆ ಯಾರಾದರೂ ಸುಳ್ಳು ವದಂತಿಗಳನ್ನು ಹಬ್ಬಿಸಿದರೆ ಸರ್ಕಾರ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಎಚ್ಚರಿಕೆ ಕೊಟ್ಟಿದ್ದಾರೆ. ಇದು ವಿಜ್ಞಾನಿಗಳು ಕಳೆದ ಹಲವು ತಿಂಗಳುಗಳಿಂದ ಅಹೋರಾತ್ರಿ ಕಠಿಣ ಪರಿಶ್ರಮ ವಹಿಸಿ ಲಸಿಕೆಯನ್ನು ಆವಿಷ್ಕಾರ ಮಾಡಿದ್ದಾರೆ. ನಾನು ದೇಶದ ಜನತೆಯಲ್ಲಿ ಸ್ಪಷ್ಟವಾಗಿ ಮನವಿ ಮಾಡಿಕೊಳ್ಳುವುದೇನೆಂದರೆ ಸುಳ್ಳು ವದಂತಿಗಳಿಗೆ ಯಾರೂ ಕಿವಿಗೊಡಬಾರದು. ಅಗತ್ಯವಿರುವವರು ಲಸಿಕೆಯನ್ನು ಮುಕ್ತ ಮನಸ್ಸಿನಿಂದ ತೆಗೆದುಕೊಳ್ಳಿ ಎಂದು …

Read More »

ಸಿಡಿ ಬೆದರಿಕೆ ಸರಿಯಲ್ಲ” : ಪ್ರಹ್ಲಾದ್ ಜೋಶಿ

ಹುಬ್ಬಳ್ಳಿ, ಜ.16- ಸಿಡಿ ವಿಚಾರ ಇಟ್ಟುಕೊಂಡು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಹೆದರಿಸುವುದು ಸರಿಯಲ್ಲ. ಅವರಲ್ಲಿ ಸಿಡಿ ಇಲ್ಲ. ಸುಖಾಸುಮ್ಮನೆ ಬೆದರಿಕೆ ಹಾಕುತ್ತಿರುವುದು ಸರಿಯಲ್ಲ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದರು. ನಗರದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಸಚಿವ ಪ್ರಹ್ಲಾದ್ ಜೋಶಿ, ಸಚಿವ ಸ್ಥಾನ ಸಿಗದೆ ಇರುವವರು ತಮ್ಮ ಅಭಿಪ್ರಾಯವನ್ನು ಪಕ್ಷದ ಉಸ್ತುವಾರಿ, ಹೈಕಮಾಂಡ್ ಜತೆ ಚರ್ಚಿಸಿ ಬಗೆಹರಿಸಿಕೊಳ್ಳಬಹುದು. ಇದನ್ನು ಸಿಎಂ ಕೂಡ ಸ್ಪಷ್ಟಪಡಿಸಿದ್ದಾರೆ ಎಂದರು. ಸಿಡಿ ಎಂಬುದು ಇಲ್ಲವೇ …

Read More »

BIG NEWS : ವಿಶ್ವಾದ್ಯಂತ ಕೊರೊನಾ ಮಹಾಮಾರಿಗೆ 20ಲಕ್ಷ ಮಂದಿ ಬಲಿ..!

ಮೇರಿಲ್ಯಾಂಡ್, ಜ.16- ವಿಶ್ವದಾದ್ಯಂತ ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ ಒಂದು ಸಣ್ಣ ದೇಶದ ಜನಸಂಖ್ಯೆಗೆ ಸಮಾನವಾಗಿದೆ ಎಂಬ ಅಂಶ ಇದೀಗ ಬೆಚ್ಚಿ ಬೀಳಿಸಿದೆ. ಇದುವರೆಗೂ ಕೊರೊನಾ ಸೋಂಕಿಗೆ 20 ಲಕ್ಷಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದು, ಇದು ಬ್ರಸೆಲ್ಸ್, ಮೆಕ್ಕಾ ಹಾಗೂ ವಿಯೆನ್ನಾದಂತಹ ಸಣ್ಣ ರಾಷ್ಟ್ರದ ಜನಸಂಖ್ಯೆಗೆ ಸಮನಾಗಿದೆ ಎಂದು ಜಾನ್ಸ್ ಅಬ್‍ಕಿನ್ಸ್ ವಿಶ್ವವಿದ್ಯಾಲಯದ ವರದಿ ಬಹಿರಂಗಗೊಳಿಸಿದೆ. ಸದ್ಯ ವಿಶ್ವದಾದ್ಯಂತ ಅಂದಾಜು 10 ಕೋಟಿಯಷ್ಟು ಮಂದಿ ಕೊರೊನಾ ಸೋಂಕಿಗೆ ಗುರಿಯಾಗುತ್ತಿದ್ದು , …

Read More »

BREAKING : ರಾಜ್ಯದಲ್ಲಿ ಮೊದಲ ‘ಕೊರೋನಾ ಲಸಿಕೆ’ ಪಡೆದ ‘ಡಿ.ಗ್ರೂಪ್ ನೌಕರ ಚಂದ್ರಶೇಖರ್’

ಬೆಂಗಳೂರು : ದೇಶಾದ್ಯಂತ ಇಂದಿನಿಂದ ಕೊರೋನಾ ಸೋಂಕಿನ ಲಸಿಕಾ ವಿತರಣೆ ಆರಂಭಗೊಂಡಿದೆ. ಪ್ರಧಾನಿ ನರೇಂದ್ರ ಮೋದಿಯವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ ಬಳಿಕ, ರಾಜ್ಯದಲ್ಲೂ ಲಸಿಕಾ ಅಭಿಯಾನ ಆರಂಭಗೊಂಡಿದೆ. ಬೆಂಗಳೂರಿನ ಕೆಸಿ ಜನರಲ್ ಆಸ್ಪತ್ರೆಯಲ್ಲಿ ಕೊರೋನಾ ಲಸಿಕೆ ನೀಡಿದೆ ಆರಂಭಗೊಂಡಿದ್ದು, ರಾಜ್ಯದಲ್ಲೇ ಮೊದಲ ಲಸಿಕೆಯನ್ನು ಕೆಸಿ ಜನರಲ್ ಆಸ್ಪತ್ರೆಯ ಡಿ.ಗ್ರೂಪ್ ನೌಕರ ಚಂದ್ರಶೇಖರ್ ಪಡೆಯುವ ಮೂಲಕ ಆರಂಭಗೊಂಡಿದೆ. ಇಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಅತಿದೊಡ್ಡ ಕೊರೋನಾ ಲಸಿಕಾ ಅಭಿಯಾನಕ್ಕೆ …

Read More »

ಉಮೇಶ ಕತ್ತಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ -ನಿಡಸೋಸಿ ಶ್ರೀ

ಸಂಕೇಶ್ವರ : ರಾಜ್ಯದ ಜನರ ಬಗೆಗೆ ಅಪಾರ ಕಾಳಜಿ ಹೊಂದಿರುವ ಸಚಿವ ಉಮೇಶ ಕತ್ತಿ ಅವರು ಭವಿಷ್ಯದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗುವ ಸಾಮರ್ಥ್ಯ ಹೊಂದಿದ್ದಾರೆ ಎಂದು ನಿಡಸೋಸಿಯ ಜಗದ್ಗುರು ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ ಹೇಳಿದರು. ಇಲ್ಲಿಗೆ ಸಮೀಪದ ನಿಡಸೋಸಿ ದುರದುಂಡೀಶ್ವರ ಮಠಕ್ಕೆ ಭೇಟಿ ನೀಡಿದ ಸಚಿವ ಉಮೇಶ ಕತ್ತಿ ಅವರನ್ನು ಆಶೀರ್ವದಿಸಿ ಮಾತನಾಡಿದ ಅವರು, ಎಂಟು ಬಾರಿ ಹುಕ್ಕೇರಿ ಮತಕ್ಷೇತ್ರದಿಂದ ಆಯ್ಕೆಯಾಗಿರುವ ಉಮೇಶ ಕತ್ತಿ ರಾಜ್ಯದ ಅತ್ಯಂತ ಹಿರಿಯ ಶಾಸಕರಾಗಿದ್ದು, ರಾಜಕೀಯ, …

Read More »

ಹರ ಜಾತ್ರೆಯಲ್ಲಿ ಪುನೀತ್ ರಾಜ್‌ಕುಮಾರ್: ಅಭಿಮಾನಿಗಳ ನೂಕು-ನುಗ್ಗಲು

ನಟ ಪುನೀತ್ ರಾಜ್‌ಕುಮಾರ್ ಅವರು ಇಂದು ದಾವಣಗೆರೆಯ ಪ್ರಸಿದ್ಧ ಹರಜಾತ್ರೆ ಮಹೋತ್ಸವದ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. ಪುನೀತ್ ಅವರನ್ನು ನೋಡಲು ಜನಸಾಗರವೇ ಹರಿಬಂದಿತ್ತು. ಶಾಸಕ, ನಿರ್ಮಾಪಕ ಮುನಿರತ್ನ ಅವರೊಟ್ಟಿಗೆ ಪುನೀತ್ ರಾಜ್‌ಕುಮಾರ್ ಅವರು ದಾವಣಗೆರೆಗೆ ತೆರಳಿದ್ದರು. ಪುನೀತ್ ಬರುತ್ತಿರುವ ವಿಷಯ ತಿಳಿದು ಕಾಲೇಜು ಯುವಕ-ಯುವತಿಯರು ನೂರಾರು ಮಂದಿ ಹೆಲಿಪ್ಯಾಡ್‌ಗೆ ಆಗಮಿಸಿದ್ದರು. ಅಲ್ಲಿಂದ ಕಾರ್ಯಕ್ರಮಕ್ಕೆ ತೆರಳಿದ ಪುನೀತ್ ವಚನಾನಂದ ಸ್ವಾಮೀಜಿ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದು, ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಾತ್ರೆ ಕಾರ್ಯಕ್ರಮಕ್ಕೆ …

Read More »