ನವದೆಹಲಿ,: 2021-22ನೇ ಸಾಲಿನ ಬಜೆಟ್ ಇದೇ ಮೊದಲ ಬಾರಿಗೆ ಕಾಗದರಹಿತವಾಗಿ ಮಂಡನೆಯಾಗುತ್ತಿದೆ. 2021ರ ಫೆಬ್ರವರಿ 1 ರಂದು ಆಯವ್ಯಯ ಪತ್ರವನ್ನು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ವಿಶೇಷ ಮೊಬೈಲ್ ಆಪ್ಲಿಕೇಷನ್ ಹೊರ ತರಲಾಗಿದೆ. ಡಿಜಿಟಲ್ ಆಡಳಿತದ ಅನುಕೂಲತೆಗಳನ್ನು ಬಳಸಿಕೊಂಡು ಸಂಸತ್ ಸದಸ್ಯರಿಗೆ ಮತ್ತು ಸಾಮಾನ್ಯ ಜನರಿಗೆ ಬಜೆಟ್ ನ ದಾಖಲೆಗಳು ತಾಕಲಾಟವಿಲ್ಲದೇ ಸುಗಮವಾಗಿ ದೊರಕಿಸಿಕೊಡಲು ”ಕೇಂದ್ರ ಬಜೆಟ್ ನ ಮೊಬೈಲ್ ಆಯಪ್ ” ಅನ್ನು ಹಣಕಾಸು …
Read More »56 ಇಂಚ್ ಎದೆಯ ವ್ಯಕ್ತಿಗೆ ಚೀನಾ ಹೆಸರೆತ್ತುವ ತಾಕತ್ತಿಲ್ಲ: ರಾಹುಲ್ ಗಾಂಧಿ
ಚೆನ್ನೈ, : ತಮಿಳುನಾಡಿನಲ್ಲಿ ಚುನಾವಣಾ ಪೂರ್ವ ಪ್ರಚಾರದ ಎರಡನೆಯ ದಿನವಾದ ಭಾನುವಾರ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಚೀನಾ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿದರು. ಚೀನಾ ಪಡೆಗಳು ಭಾರತದ ಜಾಗವನ್ನು ಅತಿಕ್ರಮಿಸಿಕೊಂಡಿವೆ. ಆದರೆ 56 ಇಂಚ್ ಎದೆಯ ವ್ಯಕ್ತಿಗೆ ನಮ್ಮ ನೆರೆಯ ದೇಶದ ಹೆಸರನ್ನು ಕೂಡ ಹೇಳಲು ಆಗುತ್ತಿಲ್ಲ ಎಂದು ಟೀಕಿಸಿದರು.
Read More »ಸಂಬಳ ನೀಡದೇ ಸತಾಯಿಸಿದ್ದಕ್ಕೆ 5 ಬಸ್ ಗಳಿಗೆ ಬೆಂಕಿ ಯಿಟ್ಟ
ಮುಂಬೈ: ಕೊರೊನಾ ಸಂಕಷ್ಟದಿಂದ ಕಂಗೆಟ್ಟಿದ್ದರೂ ಸಂಬಳ ನೀಡದೇ ಸತಾಯಿಸಿದ್ದಕ್ಕೆ ಮಾಲೀಕನ ವಿರುದ್ಧ ಕೋಪಗೊಂಡ ಬಸ್ ಚಾಲಕನೊಬ್ಬ 5 ಬಸ್ ಗಳಿಗೆ ಬೆಂಕಿ ಹಚ್ಚಿರುವ ಘಟನೆ ಮುಂಬೈನಲ್ಲಿ ನಡೆದಿದೆ. ಆರೋಪಿ ಬಸ್ ಚಾಲಕ 24 ವರ್ಷದ ಅಜಯ್ ನನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಒಂದು ತಿಂಗಳಲ್ಲಿ ಆತ್ಮಾರಾಂ ಟ್ರ್ಯಾವಲ್ಸ್ ಬಸ್ ನ 5 ಬಸ್ ಗಳು ಬೆಂಕಿಗಾಹುತಿಯಾಗಿದ್ದವು. ಈ ಪ್ರಕರಣದ ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಸತ್ಯಬಯಲಾಗಿದೆ. 2020ರ ಡಿಸೆಂಬರ್ ನಲ್ಲಿ …
Read More »ಒಂಟಿ ಸಲಗವನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬೈಕ್ ಸವಾರನೊಬ್ಬ ಕೂದಲೆಳೆ ಅಂತರ ದಲ್ಲಿ ಕಾಡಾನೆಯಿಂದ ಪಾರಾದ
ಆಲೂರು: ಒಂಟಿ ಸಲಗವನ್ನು ಸೆರೆ ಹಿಡಿಯಲು ಕಾರ್ಯಾಚರಣೆ ನಡೆಯುತ್ತಿರುವಾಗಲೇ ಬೈಕ್ ಸವಾರನೊಬ್ಬ ಕೂದಲೆಳೆ ಅಂತರ ದಲ್ಲಿ ಕಾಡಾನೆಯಿಂದ ಪಾರಾದ ಘಟನೆ ತಾಲೂಕಿನ ಕೆ.ಹೊಸ ಕೋಟೆ ಹೋಬಳಿ ಮಠದಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಕಾಫಿ ತೋಟದಿಂದ ಒಂಟಿ ಸಲಗವೊಂದು ದಿಢೀರ್ ರಸ್ತೆಗೆ ಬಂದಿದೆ. ಈ ವೇಳೆ ಬೈಕ್ ಸವಾರ ಆನೆಗೆ ಅಡ್ಡಲಾಗಿ ಬಂದಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಗ್ರಾಮಸ್ಥರು ಬೈಕ್ ಸವಾರನಿಗೆ ಹಿಂತಿರುಗಿ ಹೋಗುವಂತೆ ಕೂಗಾಡಿದ್ದಾರೆ. ಆದರೂ, ಯುವಕ ನುಗ್ಗಿ ಬಂದಿದ್ದು, ಆಶ್ಚರ್ಯ …
Read More »ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಒತ್ತು:ಶಶಿಕಲಾ ಜೊಲ್ಲೆ
ಬಳ್ಳಾರಿ: ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು ನೀಡುತ್ತೇವೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ. ಬಳ್ಳಾರಿ ಜಿಲ್ಲೆ ಹೊಸಪೇಟೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಚಿವೆ, ‘ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಪೌಷ್ಟಿಕತೆ ಕಂಡು ಬಂದಿದೆ. ಹೀಗಾಗಿ ಈ ಭಾಗಕ್ಕೆ ವಿಶೇಷವಾಗಿ ಹೆಚ್ಚು ಒತ್ತು ನೀಡುತ್ತೇವೆ. ಅಂಗನವಾಡಿ ಮೂಲಕ ಮಕ್ಕಳ ಆರೋಗ್ಯ ತಪಾಸಣೆ ಆರಂಭಗೊಂಡಿದೆ. 2 ಸಾವಿರ …
Read More »ದೆಹಲಿ ಗಣರಾಜ್ಯೋತ್ಸವ ಪೆರೇಡೆಗೆ ಬೈಲಹೊಂಗಲದ ಕೃಷ್ಣಾ ಬಡಿಗೇರ ಆಯ್ಕೆ
ಬೈಲಹೊಂಗಲ : ಪಟ್ಟಣದ ಮೂರುಸಾವಿರ ಮಠದ ಎಸ್.ಜಿ.ವಿ ಸಂಯುಕ್ತ ಪದವಿಪೂರ್ವ ಮಹಾವಿದ್ಯಾಲಯದ ಎನ್.ಸಿ.ಸಿ. ಘಟಕದ ವಿದ್ಯಾರ್ಥಿ ಕೃಷ್ಣಾ ಬಡಿಗೇರ ಇದೇ ಜ.26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವ ಪೆರೇಡಗೆ ಆಯ್ಕೆಯಾಗಿದ್ದಾನೆ. ಬಿಕಾಂ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿ ಎನ್.ಸಿ.ಸಿ ಘಟಕದಲ್ಲಿ ಸೀನಿಯರ್ ಅಂಡರ್ ಆಫೀಸರ ಇದ್ದಾನೆ. ರಾಜ್ಯದಿಂದ ಒಟ್ಟು 26 ಕೆಡೆಟಗಳು ದೆಹಲಿಯ ಗಣರಾಜ್ಯೋತ್ಸವ ಪರೇಡನಲ್ಲಿ ಭಾಗವಹಿಸುತ್ತಿದ್ದು, ಬೆಳಗಾವಿಯಿಂದ ಇಬ್ಬರಿಗೆ ಮಾತ್ರ ಅವಕಾಶ ಸಿಕ್ಕಿದ್ದು . 25 ನೇ …
Read More »ಲಾಲೂ ಪ್ರಸಾದ್ ಯಾದವ್ ಆರೋಗ್ಯ ಸ್ಥಿತಿ ಗಂಭೀರ:
ಹೊಸದಿಲ್ಲಿ: ಆರ್ ಜೆಡಿ ಮುಖ್ಯಸ್ಥ, ಬಿಹಾರ ಮಾಜಿ ಮುಖ್ಯಮಂತ್ರಿ ಲಾಲೂ ಪ್ರಸಾದ್ ಯಾದವ್ ಅವರ ಆರೋಗ್ಯ ಸ್ಥಿತಿ ಮತ್ತೆ ಗಂಭೀರವಾಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ದೆಹಲಿಯ ಏಮ್ಸ್ ಗೆ ಏರ್ ಲಿಫ್ಟ್ ಮೂಲಕ ಕರೆದೊಯ್ಯಲಾಗಿದೆ. ಲಾಲೂ ಪ್ರಸಾದ್ ಯಾದವ್ ಅವರನ್ನು ಶುಕ್ರವಾರ ರಾಂಚಿಯ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆನಂತರ ಏರ್ಲಿಫ್ಟ್ ಮೂಲಕ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮಾಜಿ ಮುಖ್ಯಮಂತ್ರಿ ರಾಬ್ರಿ ದೇವಿ, ಮಾಜಿ ಉಪ ಸಿಎಂ ತೇಜಶ್ವಿ ಯಾದವ್, …
Read More »ಹಿಂದಿ ರಾಷ್ಟ್ರ ಭಾಷೆ ಅಲ್ಲ:ನಿಖಿಲ್ ಕುಮಾರಸ್ವಾಮಿ
ಬೆಂಗಳೂರು: ಹಿಂದಿ ರಾಷ್ಟ್ರ ಭಾಷೆ ಅಲ್ಲ ಎಂಬುದನ್ನು ಶಾಲಾ ಹಂತದಿಂದಲೇ ತಿಳಿಸಬೇಕಿದೆ ಎಂದು ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದ್ದಾರೆ. 86 ನೇ ಕನ್ನಡ ಸಾಹಿತ್ಯ ಸಮ್ಮೇಳನದ ನಿಯೋಜಿತ ಅಧ್ಯಕ್ಷರಾದ ಸಾಹಿತಿ ದೊಡ್ಡರಂಗೇಗೌಡರು ‘ಹಿಂದಿ ರಾಷ್ಟ್ರ ಭಾಷೆ’ ಎಂದು ಶುಕ್ರವಾರ ಹೇಳಿಕೆ ನೀಡಿದ್ದರು. ಆ ಹೇಳಿಕೆ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿ ನಿಖಿಲ್ ಕುಮಾರಸ್ವಾಮಿ ಶನಿವಾರ ಟ್ವೀಟ್ ಮಾಡಿದ್ದಾರೆ. ‘ಹಿಂದಿ ನಮ್ಮ ರಾಷ್ಟ್ರ ಭಾಷೆ ಕನ್ನಡಿಗರಾದ ನಾವು …
Read More »ಎಫ್ಡಿಎ ಪ್ರಶ್ನೆ ಪತ್ರಿಕೆ ಸೋರಿಕೆ : ಈವರೆಗೆ 14 ಲೀಕಾಸುರರ ಬಂಧನ..!
ಬೆಂಗಳೂರು, ಜ.24- ಕರ್ನಾಟಕ ಲೋಕಸೇವಾ ಆಯೋಗ (ಕೆಪಿಎಸ್ಸಿ) ನಡೆಸುವ ಪ್ರಥಮ ದರ್ಜೆ ಸಹಾಯಕ (ಎಫ್ಡಿಎ) ಹುದ್ದೆ ನೇಮಕಾತಿಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಸಿದಂತೆ ಸಿಸಿಬಿ ಪೊಲೀಸರು ಈವರೆಗೂ 14 ಮಂದಿ ಆರೋಪಿಗಳನ್ನು ಬಂಸಿದ್ದಾರೆ.ಬಂತ ಆರೋಪಿಗಳಿಂದ 35 ಲಕ್ಷ ನಗದು ಮತ್ತು 4 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಪರಾಧ ವಿಭಾಗದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಸುದ್ದಿಗಾರರಿಗೆ ತಿಳಿಸಿದ್ದಾರೆ. ನಿನ್ನೆ ನಮಗೆ ಖಚಿತ ಮಾಹಿತಿ ಬಂದಿತ್ತು. ಆ ಆಧಾರದ …
Read More »ಮಂಗಳೂರು ಬ್ರಾಂಡ್ ಹಾಳು ಮಾಡುವವರ ವಿರುದ್ಧ ಕಠಿಣ ಕ್ರಮ
ಮಂಗಳೂರು, – ಮಂಗಳೂರಿನ ಬ್ರಾಂಡ್ ಹಾಳಾಗುವಂತಹ ದುಷ್ಕøತ್ಯ ನಡೆಸುವವರ ಬಗ್ಗೆ ಮಾಹಿತಿ ನೀಡುವಂತೆ ಮಂಗಳೂರಿನ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಮಂಗಳೂರು ಸುಂದರ ನಗರ. ಉದ್ಯೋಗ ಮತ್ತು ಶಿಕ್ಷಣಕ್ಕಾಗಿ ಇಲ್ಲಿಗೆ ಹಲವಾರು ಮಂದಿ ಬರುತ್ತಾರೆ. ಮಂಗಳೂರಿಗೆ ಒಂದು ಬ್ರಾಂಡ್ ಇದೆ. ಅದನ್ನು ಹಾಳು ಮಾಡುವಂತೆ ಇತ್ತೀಚೆಗೆ ಕೆಲ ಕೃತ್ಯಗಳು ನಡೆಯುತ್ತಿವೆ. ಅದಕ್ಕೆ ಅವಕಾಶ ನೀಡಬಾರದು ಎಂದು ಮನವಿ ಮಾಡಿದ್ದಾರೆಕೆಲವು ವ್ಯಕ್ತಿಗಳು ಧಾರ್ಮಿಕ ಕೇಂದ್ರಗಳಿಗೆ ಆಕ್ಷೇಪಾರ್ಹ ವಸ್ತುಗಳನ್ನು …
Read More »
Laxmi News 24×7