Breaking News

Uncategorized

ಫೆ.2022ರೊಳಗೆ ಬೆಂಗಳೂರು-ಮೈಸೂರು ದಶಪಥ ರಸ್ತೆ ಕಾಮಗಾರಿ ಪೂರ್ಣ

ಬೆಂಗಳೂರು,ಫೆ.3- ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ 275ರಲ್ಲಿ ನಿರ್ಮಾಣವಾಗುತ್ತಿರುವ ಹತ್ತು ಪಥಗಳ ಹೆದ್ದಾರಿಯು 2022ರ ಫೆಬ್ರವರಿಯಲ್ಲಿ ಮುಕ್ತಾಯವಾಗಬೇಕಿದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ವಿಧಾನಪರಿಷತ್‍ನಲ್ಲಿ ತಿಳಿಸಿದರು. ಪ್ರಶ್ನೋತ್ತರ ವೇಳೆಯಲ್ಲಿ ಮರಿತಿಬ್ಬೇಗೌಡರ ಪ್ರಶ್ನೆಗೆ ಉತ್ತರಿಸಿದ ಸಚಿವರು, 6 ಪಥದ ಹೆದ್ದಾರಿಯ ಜೊತೆಗೆ ಇಕ್ಕೆಲಗಳಲ್ಲಿ ಎರಡು ಪಥದ ಸರ್ವೀಸ್ ರಸ್ತೆಯನ್ನು ಅಭಿವೃದ್ದಿಪಡಿಸಲಾಗುತ್ತಿದೆ. ಮೊದಲ ಪ್ಯಾಕೇಜ್‍ನಲ್ಲಿ ಬೆಂಗಳೂರಿನಿಂದ ನಿಡಘಟ್ಟದವ್ಟರೆಗೆ, 2ನೇ ಪ್ಯಾಕೇಜ್‍ನಲ್ಲಿ ನಿಡಘಟ್ಟದಿಂದ ಮೈಸೂರುವರೆಗೆ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ಮೊದಲ ಪ್ಯಾಕೇಜ್‍ಗೆ 2190 ಕೋಟಿ ರೂ. …

Read More »

83 ತೇಜಸ್ ಲಘು ಯುದ್ಧ ವಿಮಾನಗಳಿಗಾಗಿ HALಗೆ 48 ಸಾವಿರ ಕೋಟಿ ಕಾಂಟ್ರಾಕ್ಟ್

ಬೆಂಗಳೂರು, ಫೆ.3 (ಪಿಟಿಐ)- ದೇಶದ ರಕ್ಷಣಾ ವ್ಯವಸ್ಥೆಗೆ ಮತ್ತಷ್ಟು ಬಲನೀಡಲು ಸರ್ಕಾರ 83 ತೇಜಸ್ ಲಘು ಯುದ್ಧ ವಿಮಾನಗಳನ್ನು ಸಂಗ್ರಹಿಸಲಿದೆ. ರಾಜ್ಯ ಸರ್ಕಾರ ನಡೆಸುವ ಅತ್ಯಂತ ದೊಡ್ಡ ಏರೋಸ್ಪೇಸ್ ಕಂಪನಿ ಹಿಂದುಸ್ಥಾನ್ ಏರೋನಾಟಿಕ್ಸ್ ಲಿಮಿಟೆಡ್ (ಹೆಚ್‍ಎಎಲ್) ನಡುವೆ 48,000 ಕೋಟಿ ರೂ.ಗಳ ಒಪ್ಪಂದ ಮಾಡಿಕೊಂಡಿದೆ. ನಗರದಲ್ಲಿ ಬುಧವಾರ ದೇಶದ ಪ್ರತಿಷ್ಠಿತ ಏರೋ ಇಂಡಿಯಾ-2021 ಶೋ ಉದ್ಘಾಟಿಸಿ ಮಾತನಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ಎಚ್‍ಎಎಲ್ ತಯಾರಿಸಿದ ತೇಜಸ್ ಒಂದೇ …

Read More »

ಕುಡಿಯಲು ನೀರು ತರಲು ಹೋಗಿದ್ದ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತ

ಕುಡಿಯಲು ನೀರು ತರಲು ಹೋಗಿದ್ದ ಸಂದರ್ಭದಲ್ಲಿ ಕಾರೊಂದನ್ನು ಓವರ್ ಟೇಕ್ ಮಾಡಲು ಹೋದಾಗ ಬೈಕ್ ಹಿಂಬದಿ ಕೂತಿದ್ದ ಸವಾರನೊಬ್ಬ ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಸವಾರನ ಮೇಲೆ ಬಸ್ ಹರಿದು ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಹುಬ್ಬಳ್ಳಿಯ KEB ಗ್ರಿಡ್ ಬಳಿ ನಡೆದಿದೆ. ಮೃತಪಟ್ಟ ಯುವಕ ಕೆಲವು ದಿನಗಳ ಹಿಂದೆಯಷ್ಟೇ ಉತ್ತರ ಪ್ರದೇಶದಿಂದ ಕೆಲಸಕ್ಕೆಂದು ಹುಬ್ಬಳ್ಳಿಗೆ ಬಂದಿದ್ದ ಎಂದು ತಿಳಿದು ಬಂದಿದ್ದು,ನೀರು ತರಲು ಹೋದಾಗ ಈ ಅವಘಡ ಸಂಭವಿಸಿದೆ . …

Read More »

ಬಾರದ ಚುನಾವಣಾಧಿಕಾರಿ; ನಾಮಪತ್ರ ಸ್ವೀಕರಿಸಿದ ಪಿಡಿಒ ತಿಗಡೊಳ್ಳಿ ಗ್ರಾಮ ಪಂಚಾಯತಿ

ಕಿತ್ತೂರ: ತಾಲೂಕಿನ ತಿಗಡೊಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ಆರಂಭವಾಗಿದೆ. ನಾಮ ಪತ್ರ ಸಲ್ಲಿಕೆ ಬೆಳಿಗ್ಗೆ 8 ರಿಂದ 9 ಗಂಟೆಗೆ ನಿಗದಿಯಾಗಿತ್ತು. ಆದರೆ ಚುನಾವಣೆ ಅಧಿಕಾರಿಯಾದ ಎಸ್. ಆರ್. ಮೆಹೆರವಾಡಿ ನಿಗದಿತ ಸಮಯಕ್ಕೆ ಬರದೆ ಇರುವುದರಿಂದ ಇಲ್ಲಿಯ ಪಿಡಿಒ ನಾಮ ಪತ್ರ ಸ್ವೀಕರಿಸಿದರು.

Read More »

ಜನವರಿ 26 ಹಿಂಸಾಚಾರ ಕೇಸ್: ಪ್ರಮುಖ ಆರೋಪಿ ದೀಪ್ ಮಾಹಿತಿ ಕೊಟ್ರೆ 1 ಲಕ್ಷ ಬಹುಮಾನ

ನವದೆಹಲಿ: ಗಣರಾಜ್ಯೋತ್ಸವ(ಜ.26) ದಿನಾಚರಣೆಯಂದು ರೈತರ ಟ್ರ್ಯಾಕ್ಟರ್ ರಾಲಿ ವೇಳೆ ಸಂಭವಿಸಿದ ಹಿಂಸಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದೀಪ್ ಸಿಧು ಸೇರಿದಂತೆ ಪ್ರಮುಖ ಆರೋಪಿಗಳ ಕುರಿತು ಮಾಹಿತಿ ನೀಡಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ದೆಹಲಿ ಪೊಲೀಸರು ಬುಧವಾರ (ಫೆ.3, 2021) ಘೋಷಿಸಿದ್ದಾರೆ. ವರದಿಗಳ ಪ್ರಕಾರ, ಪ್ರಮುಖ ಆರೋಪಿಗಳಾದ ನಟ ದೀಪ್ ಸಿಧು, ಜುಗ್ ರಾಜ್ ಸಿಂಗ್, ಗುರ್ಜೋತ್ ಸಿಂಗ್ ಮತ್ತು ಗುರ್ಜಂತ್ ಸಿಂಗ್ ಕುರಿತು ಮಾಹಿತಿ ನೀಡಿದವರಿಗೆ ತಲಾ …

Read More »

ಸ್ಯಾಮ್‌ ಸಂಗ್ ಗ್ಯಾಲಕ್ಸಿ M02 ಭಾರತದಲ್ಲಿ 6,999 ರೂ (2 ಜಿಬಿ + 32 ಜಿಬಿ ಮಾಡೆಲ್ ) ಆರಂಭಿಕ ಬೆಲೆಯಲ್ಲಿ ಮಾರುಕಟ್ಟೆಗೆ ಬರಲಿದೆ.

ನವ ದೆಹಲಿ: 5000mAh ಬ್ಯಾಟರಿ, ಉತ್ತಮ ಕ್ಯಾಮೆರಾ ಮತ್ತು ದೊಡ್ಡ ಸ್ಕ್ರೀನ್ ನೊಂದಿಗೆ ಗ್ಯಾಲಕ್ಸಿ M02 ಅನ್ನು ಬಿಡುಗಡೆ ಮಾಡುವ ಮೂಲಕ ಸ್ಯಾಮ್‌ ಸಂಗ್ ತನ್ನ ಯಶಸ್ವಿ ‘M’ ಸೀರೀಸ್ ನ್ನು ಭಾರತದಲ್ಲಿ ವಿಸ್ತರಿಸಿದೆ. ಸ್ಯಾಮ್‌ ಸಂಗ್ ಗ್ಯಾಲಕ್ಸಿ M02 ಭಾರತದಲ್ಲಿ 6,999 ರೂ (2 ಜಿಬಿ + 32 ಜಿಬಿ ಮಾಡೆಲ್ ) ಆರಂಭಿಕ ಬೆಲೆಯಲ್ಲಿ ಮಾರುಕಟ್ಟೆಗೆ ಬರಲಿದೆ. 3 ಜಿಬಿ + 32 ಜಿಬಿ ಮಾಡೆಲ್ ಅಮೆಜಾನ್.ಇನ್, …

Read More »

ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ‍್ಯಾಲಿ

ಬೆಳಗಾವಿ(ಫೆ.3): ಬೆಳಗಾವಿಯಲ್ಲಿ ನಾಳೆಯಿಂದ ಸೇನಾ ರ‍್ಯಾಲಿ ನಡೆಯಲಿದ್ದು, ಸಾವಿರಾರು ಜನ ಅಭ್ಯರ್ಥಿಗಳು ಪಾಲ್ಗೊಳ್ಳಲಿದ್ದಾರೆ. ರ‍್ಯಾಲಿಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಕೋವಿಡ್ ಪರೀಕ್ಷೆ ಕಡ್ಡಾಯ ಮಾಡಲಾಗಿದೆ. ಕೋವಿಡ್ ಪರಿಕ್ಷೆಗಾಗಿ ಬೆಳಗಾವಿ ಬಿಮ್ಸ್ ಆಸ್ಪತ್ರೆಯ ಮುಂದೆ ನೂರಾರು ಜನ ಸರತಿ ಸಾಲಿನಲ್ಲಿ ನಿಂತಿದ್ದಾರೆ. ನಾಳೆಯಿಂದ ಬೆಳಗಾವಿಗೆ ಸಾವಿರಾರು ಯುವಕರು ರ‍್ಯಾಲಿಗೆ ಬರುವ ಹಿನ್ನೆಲೆ ಬಸ್ ನಿಲ್ದಾಣ, ರೈಲು ನಿಲ್ದಾಣದಲ್ಲಿ ವ್ಯವಸ್ಥೆ ಮಾಡಲಾಗಿದೆ. ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿವಿಯ ಮೈದಾನದಲ್ಲಿ ನಾಳೆಯಿಂದ ಸೇನಾ ನೇಮಕಾತಿ‌ ರ‍್ಯಾಲಿ …

Read More »

ಮಾರ್ಕೆಟ್​, ಬಸ್​ನಲ್ಲಿ ಜನಜಂಗುಳಿ ಓಕೆ…ಥಿಯೇಟರ್​ಗೆ ಮಾತ್ರ ನಿರ್ಬಂಧ ಏಕೆ ಎಂದು ಪ್ರಶ್ನಿಸಿದ ಧ್ರುವ ಸರ್ಜಾ

ಕೋವಿಡ್​ 19 ಅಬ್ಬರ ಕಡಿಮೆಯಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಸಾರಿಗೆ ಸೇವೆ, ಶಾಲಾ – ಕಾಲೇಜುಗಳು ಸಹಜ ಸ್ಥಿತಿಯತ್ತ ಮರಳುತ್ತಿವೆ. ಆದರೆ ಫೆಬ್ರವರಿ 28ರವರೆಗೆ ರಾಜ್ಯದ ಚಿತ್ರ ಮಂದಿರಗಳಲ್ಲಿ ಶೇಕಡಾ 50ರಷ್ಟು ಸೀಟು ಭರ್ತಿಗೆ ಮಾತ್ರ ಅವಕಾಶ ನೀಡಿ ಸರ್ಕಾರ ಆದೇಶ ಹೊರಡಿಸಿದ್ದು ಚಂದನವನದ ತಾರೆಯರ ಕಣ್ಣು ಕೆಂಪಗಾಗಿಸಿದೆ. ಈ ವಿಚಾರವಾಗಿ ಟ್ವೀಟ್​ ಮಾಡಿರುವ ಸ್ಯಾಂಡಲ್​ವುಡ್​ ನಟ ಧ್ರುವ ಸರ್ಜಾ, ಮಾರ್ಕೆಟ್​ನಲ್ಲಿ ಗಿಜಿ ಗಿಜಿಗುಡುತ್ತಿರುವ ಜನ, ಬಸ್​ನಲ್ಲೂ ಜನರ ಹಿಂಡೇ ತುಂಬಿರುತ್ತೆ. …

Read More »

ವಿಶ್ವದ ಮೊದಲ ಹೈಬ್ರಿಡ್ ಏರ್ ಶೋ ಇಂದಿನಿಂದ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ.

ಬೆಂಗಳೂರು : ವಿಶ್ವದ ಮೊದಲ ಹೈಬ್ರಿಡ್ ಏರ್ ಶೋ ಇಂದಿನಿಂದ ಬೆಂಗಳೂರಿನ ವಾಯುನೆಲೆಯಲ್ಲಿ ನಡೆಯುತ್ತಿದ್ದು, ಈ ಏರೋ ಇಂಡಿಯಾ ಶೋಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ರಾಜನಾಥ್ ಸಿಂಗ್, ಏರ್ ಶೋ ನಮ್ಮ ದೇಶದ ಶಕ್ತಿ ಪ್ರದರ್ಶನದ ವೇದಿಕೆಯಾಗಿದೆ. ವಿಶ್ವದ ಮೊಟ್ಟ ಮೊದಲ ಹೈಬ್ರಿಡ್ ಏರ್ ಶೋ ಇದಾಗಿದೆ. ಭಾರತೀಯ ತಯಾರಿಕೆಯ ತೇಜಸ್ ಯುದ್ಧ ವಿಮಾನಕ್ಕೆ ಸಾಕಷ್ಟು ಬೇಡಿಕೆಯಿದೆ. ಈಗಾಗಲೇ 83 …

Read More »

ಕೇರಳ ಹೈಕೋರ್ಟ್ ತೀರ್ಪು ಎತ್ತಿ ಹಿಡಿದ ʼಸುಪ್ರೀಂʼ: ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ʼPhD ಕಡ್ಡಾಯʼ

ನವದೆಹಲಿ: ಕೇರಳ ಹೈಕೋರ್ಟ್ ತೀರ್ಪನ್ನ ಎತ್ತಿ ಹಿಡಿದಿರುವ ಸುಪ್ರೀಂ ಕೋರ್ಟ್, AICTE ನಿಯಮಾವಳಿಗಳ ಪ್ರಕಾರ, 5.3.2010ರ ನಂತರ ತಾಂತ್ರಿಕ ಸಂಸ್ಥೆಗಳಲ್ಲಿ ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪಿಎಚ್ ಡಿ ಕಡ್ಡಾಯ ಎಂದಿದೆ. ಪಿಹೆಚ್ ಡಿ ಪದವಿಯ ಕೊರತೆಗೆ ಸಂಬಂಧಿಸಿದಂತೆ ಸಹಾಯಕ ಪ್ರಾಧ್ಯಾಪಕರು ಸಲ್ಲಿಸಿದ್ದ ಹನ್ನೆರಡು ಅರ್ಜಿಗಳನ್ನ ವಿಲೇವಾರಿ ಮಾಡಿದ ಸುಪ್ರಿಂಕೋರ್ಟ್‌, ಕೇರಳ ಹೈಕೋರ್ಟ್ ವಿಭಾಗೀಯ ಪೀಠದ ತೀರ್ಪಿನ ವಿರುದ್ಧ ಸಲ್ಲಿಸಲಾಗಿದ್ದ ವಿಶೇಷ ಅರ್ಜಿಗಳನ್ನ ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್, ದಿನೇಶ್ ಮಹೇಶ್ವರಿ …

Read More »