ರೈತರಿಗೆ ಸಮರ್ಪಕವಾಗಿ ಬೆಳೆ ಹಾನಿ ಪರಿಹಾರ ನೀಡಬೇಕೆಂದು ಒತ್ತಾಯಿಸಿ ಬೈಲಹೊಂಗಲ ತಾಲ್ಲೂಕಿನ ವಿವಿಧ ಗ್ರಾಮಗಳ ರೈತರು ಕೃಷಿ ಇಲಾಖೆಗೆ ತೆರಳಿ ಮುತ್ತಿಗೆ ಹಾಕಿ ಮಂಗಳವಾರ ಪ್ರತಿಭಟನೆ ನಡೆಸಿದರು. ಬೈಲವಾಡ ಗ್ರಾಮದಲ್ಲಿ ಪ್ರವಾಹದಿಂದ ಬೆಳೆ ಹಾನಿಗೆ ಒಳಗಾದ ಪ್ರದೇಶಗಳಿಗೆ ಇತ್ತಿಚೆಗೆ ಜಿಲ್ಲಾಧಿಕಾರಿಗಳು, ಜಿಲ್ಲಾ ಕೃಷಿ ಅಧಿಕಾರಿಗಳು ಭೇಟಿ ನೀಡಿ ಪರಿಹಾರ ನೀಡುವಂತೆ ಸಂಬಂಧಪಟ್ಟ ಕೃಷಿ ಅಧಿಕಾರಿಗಳಿಗೆ ತಿಳಿಸಿದರೂ ಯಾವುದೇ ಪ್ರಯೋಜನವಾಗಿಲ್ಲ. ಬೆಳೆ ಹಾನಿ ಪರಿಹಾರ ವಿತರಿಸುವಲ್ಲಿ ಕೃಷಿ ಇಲಾಖೆ ಅಧಿಕಾರಿಗಳು ವಿಳಂಬ …
Read More »ರಾಜಕೀಯದಲ್ಲಿ ಇರದಿದ್ರೆ.ಬಿಜೆಪಿಯವರ ನಾಲಿಗೆ ಸೀಳುತ್ತಿದ್ದೆ: ಮಮತಾ ಬ್ಯಾನರ್ಜಿ
ಕೋಲ್ಕತಾ: ಪ್ರತಿಯೊಬ್ಬರನ್ನು ಕಳ್ಳರು ಎಂಬಂತೆ ಬಿಂಬಿಸುತ್ತಿರುವ ಭಾರತೀಯ ಜನತಾ ಪಕ್ಷದ ವಿರುದ್ಧ ಪಶ್ಚಿಮಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ (ಆಗಸ್ಟ್ 29) ವಾಗ್ದಾಳಿ ನಡೆಸಿದ್ದು, ಒಂದು ವೇಳೆ ರಾಜಕೀಯದಲ್ಲಿ ಇಲ್ಲದಿರುತ್ತಿದ್ದರೆ, ಬಿಜೆಪಿಯವರ ನಾಲಿಗೆ ಸೀಳಿ ಬಿಡುತ್ತಿದ್ದೆ ಎಂದು ಹೇಳಿದ್ದಾರೆ. ತೃಣಮೂಲ ಕಾಂಗ್ರೆಸ್ ಪಕ್ಷದ ವಿದ್ಯಾರ್ಥಿ ಘಟಕದ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಮಮತಾ ಬ್ಯಾನರ್ಜಿ, ಕೇಸರಿ ಪಕ್ಷವನ್ನು ವಿರೋಧಿಸುತ್ತಿರುವ ರಾಜಕೀಯ ಪಕ್ಷಗಳನ್ನು ಮತ್ತು ಚುನಾಯಿತ ರಾಜ್ಯ ಸರ್ಕಾರವನ್ನು ಕಿತ್ತೊಗೆಯಲು ಕೇಂದ್ರ ತನಿಖಾ …
Read More »ಆಸ್ಪತ್ರೆಯಲ್ಲಿ ಸತ್ತ ಬಾಲಕಿ ಸ್ಮಶಾನದಲ್ಲಿ ಜೀವಂತ: ಕುಟುಂಬಕ್ಕೆ ಶಾಕ್
ಮೂರು ವರ್ಷದ ಬಾಲಕಿಯೊಬ್ಬಳು ಅಂತ್ಯಕ್ರಿಯೆಯಲ್ಲಿ ಎಚ್ಚರಗೊಂಡಿರುವ ಘಟನೆ ಮೆಕ್ಸಿಕೋದಲ್ಲಿ ನಡೆದಿದೆ. ಆಗಸ್ಟ್ 17 ರಂದು ಮಗು ಸತ್ತಿದೆ ಎಂದು ವೈದ್ಯರು ತಪ್ಪಾಗಿ ಘೋಷಿಸಿದ್ದರು. ಮಗುವಿಗೆ ಜೀವವಿದೆ ಅನ್ನೋದು ಪೋಷಕರಿಗೂ ಗೊತ್ತಾಗಿರಲಿಲ್ಲ. ಬಾಲಕಿಯ ತಾಯಿ ಕ್ಯಾಮಿಲಾ ರೊಕ್ಸಾನಾ ಮಾರ್ಟಿನೆಜ್ ಮೆಂಡೋಜಾ, ಸ್ಥಳೀಯ ಆಸ್ಪತ್ರೆಯ ನಿರ್ಲಕ್ಷ್ಯದಿಂದ ಮಗು ಸಾವನ್ನಪ್ಪಿದ್ದಾಳೆ ಎಂದು ಆರೋಪಿಸಿದ್ದಾರೆ. ವಿಲ್ಲಾ ಡಿ ರಾಮೋಸ್ನಲ್ಲಿ ಪೋಷಕರೊಂದಿಗೆ ತಂಗಿದ್ದ ಬಾಲಕಿಗೆ ಹೊಟ್ಟೆ ನೋವು, ವಾಂತಿ ಮತ್ತು ಜ್ವರ ಶುರುವಾಗಿತ್ತು. ಕೂಡಲೇ ಹೆತ್ತವರು …
Read More »ಇಂದು ಅಪ್ರಾಪ್ತೆಯರಿಗೆ ಮೆಡಿಕಲ್ ಟೆಸ್ಟ್ ಶ್ರೀಗಳಿಗೆ ಬಂಧನದ ಭೀತಿ
ಚಿತ್ರದುರ್ಗ: ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಮುರುಘಾ ಶರಣರು ಈಗ ಬಂಧನದ ಭೀತಿಯನ್ನು ಎದುರಿಸುವಂತಾಗಿದೆ. ಮಠದಲ್ಲಿ ಓದುತ್ತಿದ್ದ ಬಾಲಕಿಯರನ್ನು ಬಲವಂತವಾಗಿ ಲೈಂಗಿಕವಾಗಿ ಬಳಸಿಕೊಂಡಿದ್ದು, ಬಾಲಕಿಯಯರು ದೂರು ನೀಡಿದ್ದು, ಈಗ ಪೋಕ್ಸೋ ಪ್ರಕರಣದ ಮೇಲೆ ಬಂಧನವಾಗುವ ಸಾಧ್ಯತೆ ಇದೆ. ಈಗಾಗಲೇ ಮೈಸೂರಿನಿಂದ ಚಿತ್ರದುರ್ಗ ಗ್ರಾಮಾಂತರ ಠಾಣೆಗೆ ಕೇಸ್ ವರ್ಗಾವಣೆಯಾಗಿದ್ದು, ಇಂದು ವೈದ್ಯಕೀಯ ಪರೀಕ್ಷೆಗೆ ಬಾಲಕಿಯರನ್ನು ಹಾಗೂ ಮುರುಘಾ ಶ್ರೀಗಳನ್ನು ಒಳಪಡಿಸುವ ಸಾಧ್ಯತೆ ಇದೆ. ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ಕಿರುಕುಳ ಆರೋಪ …
Read More »ಮಲಗಿದ್ದ ಮಹಿಳೆಯ ಬೆನ್ನೇರಿ ಹೆಡೆ ಬಿಚ್ಚಿದ ಹಾವು
ಅಫಜಲಪುರ (ಕಲಬುರಗಿ): ಮಲಗಿದ್ದ ಮಹಿಳೆಯೊಬ್ಬರ ಬೆನ್ನ ಮೇಲೆ ಹಾವೊಂದು ಹೆಡೆಯೆತ್ತಿ ಸುಮಾರು ಒಂದು ಗಂಟೆ ಕಾಲ ಕುಳಿತಿದ್ದರೂ ಆಕೆಗೆ ಯಾವುದೇ ಹಾನಿ ಮಾಡದೆ ಇಳಿದು ಹೋದ ಕುತೂಹಲಕಾರಿ ಘಟನೆ ನಡೆದಿದೆ. ಮಲ್ಲಾಬಾದ ಗ್ರಾಮದ ರೈತ ಮಹಿಳೆ ಭಾಗಮ್ಮ ಹಣಮಂತ ಬಡದಾಳ ಅವರು ತಮ್ಮದೇ ತೋಟದಲ್ಲಿ ಕೃಷಿ ಕೆಲಸ ಮುಗಿಸಿ ಊಟ ಮಾಡಿ, ಗಿಡವೊಂದರ ಕೆಳಗೆ ಮಲಗಿ ವಿಶ್ರಾಂತಿ ಪಡೆಯುತ್ತಿದ್ದಾಗ ಈ ಘಟನೆ ನಡೆದಿದೆ. ಹಾವು ಮೈಮೇರಿದ್ದು ಗಮನಕ್ಕೆ ಬಂದ ಕೂಡಲೇ …
Read More »ಪಿಎಸ್ಐ ನೇಮಕಾತಿ ಪರೀಕ್ಷೆ ಹಗರಣ: ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದ ಅಭ್ಯರ್ಥಿ ಬಂಧನ
ಕಲಬುರಗಿ: 545 ಪಿಎಸ್ಐ ನೇಮಕಾತಿಯ ಪರೀಕ್ಷೆ ಹಗರಣ ತನಿಖೆ ಸಿಐಡಿ ತೀವ್ರಗೊಳಿಸಿದ್ದು, ಮಹಿಳಾ ಕೋಟಾದಲ್ಲಿ ರಾಜ್ಯಕ್ಕೆ ಪ್ರಥಮ ರ್ಯಾಂಕ್ ಪಡೆದಿದ್ದ ರಚನಾ ಎಂಬ ಅಭ್ಯರ್ಥಿಯನ್ನು ಬಂಧಿಸಲಾಗಿದೆ. ಪಿಎಸ್ಐ ಮಹಿಳಾ ಕೋಟಾದಲ್ಲಿ ಮೊದಲ ರ್ಯಾಂಕ್ ಪಡೆದಿದ್ದ ರಚನಾ ಬಂಧಿತ ಆರೋಪಿ ಯಾಗಿದ್ದು, ವಿಶೇಷವೆನಂದರೆ ಪಿಎಸ್ಐ ಪರೀಕ್ಷಾ ಅಕ್ರಮ ಹೋರಾಟದಲ್ಲಿ ಮುಂಚೂಣಿ ಪಾತ್ರ ವಹಿಸಿದ್ದರು. ರಚನಾ ವಿಜಯಪುರ ಜಿಲ್ಲೆ ಬಸವನಬಾಗೇವಾಡಿ ಮೂಲದವಳಾಗಿದ್ದು, ಪಿಎಸ್ಐ ಹಗರಣ ಹೊರ ಬಂದಾಗಿನಿಂದ ನಾಪತ್ತೆಯಾಗಿದ್ದರು. ಬೆಂಗಳೂರು ಸಿಐಡಿ ಅಧಿಕಾರಿಗಳು …
Read More »ಒಂದು ಕಿಮೀ ರಸ್ತೆಯನ್ನು ಸುಧಾರಣೆ ಮಾಡಲು ಮುಂದಾದ ಶಾಸಕ ಬಾಲಚಂದ್ರ ಜಾರಕಿಹೊಳಿ
*ಮೂಡಲಗಿ* ಇಲ್ಲಿಯ ಅಂಬೇಡ್ಕರ್ ವೃತ್ತದಿಂದ ಟಿಪ್ಪು ಸುಲ್ತಾನ್ ವೃತ್ತದವರೆಗೆ ರಸ್ತೆ ಸುಧಾರಣೆ ಕಾಮಗಾರಿಗೆ ಬರುವ ಸೋಮವಾರದಂದು ಗುದ್ದಲಿ ಪೂಜೆ ಜರುಗಲಿದೆ. ಗುರುವಾರದಂದು ಹದಿಗೆಟ್ಟ ರಸ್ತೆಯನ್ನು ಪರಿಶೀಲನೆ ಮಾಡಿದ ಪುರಸಭೆ ಅಧ್ಯಕ್ಷ ಹನಮಂತ ಗುಡ್ಲಮನಿ ಅವರು, ಶಾಸಕ ಬಾಲಚಂದ್ರ ಜಾರಕಿಕೊಳಿ ಅವರು ತಮ್ಮ ಸ್ವಂತ ವೆಚ್ಚದಲ್ಲಿ ಸುಮಾರು 1.ಕಿ.ಮೀ. ರಸ್ತೆಯನ್ನು ಅಭಿವೃದ್ಧಿ ಮಾಡುವರು. ಇದಕ್ಕಾಗಿ ಸೋಮವಾರವೇ ರಸ್ತೆ ಕಾಮಗಾರಿಗೆ ಮುಹೂರ್ತ ಫಿಕ್ಸ್ ಆಗಿದೆ ಎಂದು ಹೇಳಿದರು. ಮೂಡಲಗಿ ಪಟ್ಟಣದ ಸಾರ್ವಜನಿಕರು …
Read More »‘ಭಾರತ್ ಜೋಡೋ’ ಬದಲು, ‘ಕಾಂಗ್ರೆಸ್ ಜೋಡೋ’ ಯಾತ್ರೆ ಮಾಡಿ -ರಾಹುಲ್ಗೆ ಆಜಾದ್ ಕಿವಿ ಮಾತು
ಕಾಂಗ್ರೆಸ್ನ ಹಿರಿಯ ನಾಯಕ ಗುಲಾಂ ನಬಿ ಆಜಾದ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಪಕ್ಷದಲ್ಲಿನ ನಡೆಗಳ ಬಗ್ಗೆ ತುಂಬಾ ದಿನಗಳ ಹಿಂದೆಯೇ ಕೋಪಿಸಿಕೊಂಡಿದ್ದ ಆಜಾದ್, ಇಂದು ಪಕ್ಷದ ಎಲ್ಲಾ ಸ್ಥಾನ-ಮಾನಗಳಿಗೂ ರಾಜೀನಾಮೆ ಘೋಷಿಸಿದ್ದಾರೆ. ರಾಜೀನಾಮೆ ನೀಡಿ ಹಂಗಾಮಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿಗೆ 4 ಪುಟಗಳ ಸುದೀರ್ಘ ಪತ್ರವನ್ನ ಬರೆದು, ರಾಹುಲ್ ಗಾಂಧಿ ವಿರುದ್ಧ ನೇರ ಅಸಮಾಧಾನ ಹೊರಹಾಕಿದ್ದಾರೆ. ರಾಹುಲ್ ಬಾಲೀಶ ವರ್ತನೆಗೆ ಕಿಡಿ ರಾಜೀನಾಮೆ ಪತ್ರದಲ್ಲಿ ರಾಹುಲ್ ಗಾಂಧಿ ಬಾಲೀಶ …
Read More »ತುಮಕೂರು ಅಪಘಾತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ 2 ಲಕ್ಷ ರೂ ಪರಿಹಾರ..
ತುಮಕೂರು: ಶಿರಾ ತಾಲೂಕಿನ ಬಾಲೆನಹಳ್ಳಿ ಗೇಟ್ ಬಳಿ ಇಂದು ನಸುಕಿನ ಜಾವ ಸಂಭವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಜೊತೆಗೆ ಮೃತರ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂ ಹಾಗೂ ಗಾಯಾಳುಗಳಿಗೆ ತಲಾ 50 ಸಾವಿರ ರೂ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ. ಪ್ರಧಾನಿ ಮೋದಿ ಪರಿಹಾರ ಘೋಷಣೆ: ‘ಕರ್ನಾಟಕದ ತುಮಕೂರು ಜಿಲ್ಲೆಯಲ್ಲಿ ನಡೆದ ಅಪಘಾತ ಹೃದಯ ವಿದ್ರಾವಕ. ಅಪಘಾತದಲ್ಲಿ ಜೀವ ಕಳೆದುಕೊಂಡವರಿಗೆ ಸಂತಾಪಗಳು. ಗಾಯಗೊಂಡವರು ಶೀಘ್ರ …
Read More »ಚಿರತೆ ಬಂದೈತಿ, ಓಡಲೇ….ಓಡಲೇ… ಓಡಲೇ…!
ಬೆಳಗಾವಿ-ಬೆಳಗಾವಿ ಮಹಾನಗರದಲ್ಲಿ ಚಿರತೆ ಪತ್ತೆ ಕಾರ್ಯಾಚರಣೆ ಜೋರಾಗಿ ನಡೆಯುತ್ತಿದೆ.ಇಂದು ಮಧ್ಯಾಹ್ನ 3-00 ಗಂಟೆ ಸುಮಾರಿಗೆ ಹಿಂಡಲಗಾ ಗಣಪತಿ ಮಂದಿರದ ಬಳಿ ಇರುವ ಮಿಲಿಟರಿ ಕ್ವಾಟರ್ಸ್ ಹತ್ತಿರ ಚಿರತೆ ಕಾಣಿಸಿಕೊಂಡಿದೆ. ಹಿಂಡಲಗಾ ಗಣಪತಿ ಮಂದಿರದ ಹತ್ತಿರದಲ್ಲೇ ಇರುವ ಹನುಮಾನ ನಗರದ ಡಬಲ್ ರಸ್ತೆಯಲ್ಲಿರುವ ಮಿಲಿಟರಿ ಕ್ವಾಟರ್ಸ್ ಗೇಟ್ ಬಳಿ ಚಿರತೆ ಕಾಣಿಸಿಕೊಂಡು ಮತ್ತೆ ಗಾಲ್ಫ್ ಮೈದಾನದಲ್ಲಿ ಪರಾರಿಯಾಗಿದೆ. ಗಾಲ್ಫ್ ಮೈದಾನದಲ್ಲಿ ಚಿರತೆ ಪತ್ತೆಗೆ ಜಿಸಿಬಿಯಿಂದ ಕಾರ್ಯಾಚರಣೆ ನಡೆಯುತ್ತಿರುವಾಗ,ಗಿಡಗಂಟೆಯಲ್ಲಿ ಅಡಗಿ …
Read More »
Laxmi News 24×7