Breaking News

Uncategorized

ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ಇವರು ಸಾಮಾಜಿಕ ಕಾರ್ಯ ಕರ್ತ ರಾ ಅಥವಾ ಬಡ್ಡಿ ವ್ಯವಹಾರ ಮಾಡೋರ..?

ಬೆಂಗಳೂರು: ಸಾಮಾಜಿಕ ಕಾರ್ಯಕರ್ತ ಪ್ರಶಾಂತ್ ಸಂಬರಗಿ ವಿರುದ್ಧ ಸುಬ್ರಮಣ್ಯಪುರ ಪೊಲೀಸ್‌ ಠಾಣೆಯಲ್ಲಿ ಎಫ್ಐಆರ್‌ ದಾಖಲಾಗಿದೆ. ಅಧಿಕ ಬಡ್ಡಿ ನೀಡಿಲ್ಲವೆಂದು ವಾಟ್ಸಪ್‌ನಲ್ಲಿ ತೇಜೋವಧೆ ಮಾಡಿದ್ದರೆ ಎಂದು ಆರೋಪಿಸಿ ವೆಸ್ಟ್ ಆಫ್ ಕಾರ್ಡ್ ರೋಡ್ ನಿವಾಸಿ ವೈ.ಕೆ.ದೇವನಾಥ್ ಎಂಬುವರು ದೂರು ನೀಡಿದ್ದರು. ಸಂಬರಗಿ ವಿರುದ್ಧ ಐಪಿಸಿ ಸೆಕ್ಷನ್‌ 499(ಮಾನಹಾನಿ) 500(ಮಾನಹಾನಿಗಾಗಿ ದಂಡನೆ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಅಡಿ ಪ್ರಕರಣ ದಾಖಲಾಗಿದೆ. ದೂರಿನಲ್ಲಿ ಏನಿದೆ? ಪ್ರಶಾಂತ್‌ ಸಂಬರಗಿ ಬಳಿ ನಾನು ಬಡ್ಡಿ ಸಾಲ …

Read More »

ಎಮ್ಮೆಗಳಿಗೂ ಇಲ್ಲಿದೆ ಬ್ಯೂಟಿ ಪಾರ್ಲರ್, ಆಯಿಲ್ ಮಸಾಜ್!, ಉಚಿತ ಸ್ನಾನ, ಹೇರ್ ಕಟ್!

ಹುಕ್ಕೇರಿ; ಮಹಿಳೆಯರು, ಕಾಲೇಜು ಯುವತಿಯವರು ಹಾಗೂ ಸಿನಿಮಾ ನಟ- ನಟಿಯರು ತಮ್ಮ ಸೌಂದರ್ಯವರ್ದನೆಗೋಸ್ಕರ ಬ್ಯೂಟಿ ಪಾರ್ಲರ್​ಗಳ ಮೊರೆ ಹೋಗೋದು ಸಾಮಾನ್ಯ. ಆದರೆ ಇಲ್ಲೊಂದು ಊರಲ್ಲಿ ಎಮ್ಮೆಗಳಿಗಾಗೇ ಒಂದು ವಿಶೇಷ ಬ್ಯೂಟಿ ಪಾರ್ಲರ್ ಶುರುವಾಗಿದೆ. ಅಷ್ಟಕ್ಕೂ ಎಲ್ಲಿದೆ ಆ ಪಾರ್ಲರ್ ಎನದರ ವಿಶೇಷ ಅಂತೀರಾ? ಈ ಸ್ಟೋರಿ ಓದಿ. ಹೌದು, ಅಧುನಿಕ ಜಗತ್ತಿನಲ್ಲಿ ಸೌಕರ್ಯಕ್ಕಿರುವ ಬೆಲೆ ಬೇರೆ ಯಾವುದಕ್ಕೂ ಇಲ್ಲ. ಕಟ್ಟುಮಸ್ತಾದ ದೇಹದ ಜತೆ ಮುಖದ ಸೌಂದರ್ಯ ಅಂದ ಚಂದಕ್ಕೆ ನಮ್ಮ …

Read More »

ಬ್ರಿಟನ್‍ನಿಂದ ರಿಟರ್ನ್ ಆದ ಗೋವಾ ಶಾಸಕನಿಗೆ ಕ್ವಾರಂಟೈನ್‍

ಪಣಜಿ, ಡಿ.27- ಬ್ರಿಟನ್‍ನಿಂದ ಬಂದ ಗೋವಾ ಶಾಸಕನನ್ನು ಪರೀಕ್ಷೆಗೊಳಪಡಿಸಿ ಕ್ವಾರಂಟೈನ್‍ನಲ್ಲಿಡಲಾಗಿದೆ. ಪಕ್ಷೇತರ ಶಾಸಕ ರೋಹನ್ ಖೌಂಟೆ ಅವರು ಕೆಲವು ದಿನಗಳ ಹಿಂದೆ ಬ್ರಿಟನ್‍ಗೆ ಪ್ರವಾಸಕ್ಕೆ ತೆರಳಿ ಇಂದು ಬೆಳಗ್ಗೆ ಮರಳಿದ್ದರು. ತಕ್ಷಣ ಅವರನ್ನು ಪರೀಕ್ಷೆಗೊಳಪಡಿಸಲು ಮುಂದಾದಾಗ ಅವರು ಅಲ್ಲಿಂದ ನಿರ್ಗಮಿಸಿದರು. ಇದರಿಂದಾಗಿ ಅವರನ್ನು ಕೂಡಲೇ ವಶಕ್ಕೆ ಪಡೆದು ಪರೀಕ್ಷೆಗೊಳಪಡಿಸಬೇಕೆಂದು ಕೆಲ ರಾಜಕೀಯ ಪಕ್ಷಗಳ ಮುಖಂಡರು ಒತ್ತಾಯಿಸಿದ್ದರು.ಈಗಾಗಲೇ ಬ್ರಿಟನ್‍ನಲ್ಲಿ ರೂಪಾಂತರ ಕೊರೊನಾ ಬಂದಿರುವುದರಿಂದ ಯಾರೇ ಆದರೂ ಅವರನ್ನು ಪರೀಕ್ಷೆಗೊಳಪಡಿಸಬೇಕು ಮತ್ತು ಇವರು …

Read More »

ರಾತ್ರಿಗಿಂತ ಹಗಲಲ್ಲಿ ಹೆಚ್ಚು ಜನರು ಕಾಂಡೋಮ್ ಖರೀದಿಸುತ್ತಿರುವುದು ಅಚ್ಚರಿಗೆ ಕಾರಣ

ನವದೆಹಲಿ: ಕೊರೊನಾ ಮಾಹಾಮಾರಿ ಸಂದರ್ಭದಲ್ಲಿಯೇ ದೇಶದಲ್ಲಿ ಕಾಂಡೋಮ್, ಗರ್ಭ ನಿರೋಧಕ ಮಾತ್ರೆ, ಚಿಕನ್ ಬಿರಿಯಾನಿ ಬೇಡಿಕೆ ಹೆಚ್ಚಳವಾಗಿದೆ. ಅದರಲ್ಲೂ ರಾತ್ರಿಗಿಂತ ಹಗಲಲ್ಲಿ ಹೆಚ್ಚು ಜನರು ಕಾಂಡೋಮ್ ಖರೀದಿಸುತ್ತಿರುವುದು ಅಚ್ಚರಿಗೆ ಕಾರಣವಾಗಿದೆ. ಬೆಂಗಳೂರಿನಲ್ಲಿ ಗರ್ಭ ನಿರೋಧಕ ಮಾತ್ರೆ, ಚಿಕನ್ ಬಿರಿಯಾನಿ, ಮುಂಬೈನಲ್ಲಿ ದಾಲ್ ಖಿಚ್ಡಿ, ಚೆನ್ನೈನಲ್ಲಿ ಇಡ್ಲಿ, ದೆಹಲಿಯಲ್ಲಿ ಕಾಫಿ, ಪುಣೆಯಲ್ಲಿ ಮ್ಯಾಗಿ, ಗುರುಗ್ರಾಮದಲ್ಲಿ ಆಲೂ ಟಿಕ್ಕಿ ಬರ್ಗರ್ ಹೆಚ್ಚು ಖರೀದಿಯಾಗುತ್ತಿದೆ. ದೇಶದೆಲ್ಲೆಡೆ ಕಾಂಡೋಮ್ ಖರೀದಿಸುವವರ ಪ್ರಮಾಣ ಮೂರುಪಟ್ಟು ಹೆಚ್ಚಾಗಿದೆ. ಹೈದರಾಬಾದ್ …

Read More »

ಬ್ಯಾಲೇಟ್ ಪೇಪರ್ ನಲ್ಲಿ ಬಕೆಟ್ ಬದಲು ಅಲ್ಮೇರಾ ಚಿಹ್ನೆ: ಮತದಾನ ಸ್ಥಗಿತ

ರಾಮದುರ್ಗ: ಬ್ಯಾಲೆಟ್ ಪೇಪರ್‌ನಲ್ಲಿ ಅಭ್ಯರ್ಥಿ ಚಿಹ್ನೆಯನ್ನು ತಪ್ಪಾಗಿ ಮುದ್ರಿಸಿರುವ ಹಿನ್ನೆಲೆ ಕದಂಪೂರ ವಾರ್ಡ್ ನಂಬರ್ 6 ರ ಚುನಾವಣೆ ಮುಂದೂಡಿಕೆ ಮಾಡಲಾಗಿದೆ. ತಾಲೂಕಿನ ಕದಂಪೂರ ಗ್ರಾಮದಲ್ಲಿ 6 ನೇ ವಾರ್ಡ್​ಗೆ ನಿರ್ಮಲಾ ಮಹಾಂತೇಶ ಖಾನಪೇಟ್ ಎಂಬುವರು ಸ್ಪರ್ಧಿಸಿದ್ದಾರೆ. ಇವರಿಗೆ ಬಕೆಟ್ ಚಿಹ್ನೆ ನೀಡಲಾಗಿತ್ತು. ಆದರೆ ಮತದಾನದ ಬ್ಯಾಲೆಟ್ ಪೇಪರ್‌ನಲ್ಲಿ ‘ಬಕೆಟ್’ ಚಿಹ್ನೆ ಬದಲು ‘ಅಲ್ಮೇರಾ’ ಚಿಹ್ನೆ ಮುದ್ರಣವಾಗಿದೆ. ಇದರಿಂದಾಗಿ ಮತದಾನ ಮೂಂದೂಡಿಕೆ ಮಾಡಲಾಗಿದೆ. ಸ್ಥಳಕ್ಕೆ ತಹಶೀಲ್ದಾರ್​ ಭೇಟಿ ನೀಡಿ ಪರಿಶೀಲನೆ …

Read More »

ಮತದಾನ ಮಾಡಿದ ಅಭ್ಯರ್ಥಿ ಭಿಕ್ಷುಕ ಅಂಕ ನಾಯಕ : ಗೆಲುವಿನ ವಿಶ್ವಾಸ

ಮೈಸೂರು : ಜಿಲ್ಲೆಯ ನಂಜನಗೂಡು ತಾಲ್ಲೂಕಿನ ಬೊಕ್ಕಹಳ್ಳಿ ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಚುನಾವಣಾ ಕಣಕ್ಕೆ ಇಳಿಸಿದರುವ ಭಿಕ್ಷುಕ ಅಂಕ ನಾಯಕ ಮತದಾನ ಮಾಡಿದರು. ಅಂಕ ನಾಯಕ ಗೆಲುವಿನ ವಿಶ್ವಾಸದಲ್ಲಿದ್ದಾರೆ. ಗ್ರಾಮ ಪಂಚಾಯಿತಿ ಬ್ಲಾಕ್ ನಂ.1ರಲ್ಲಿ ಭಾನುವಾರ ಮತದಾನ ಮಾಡಿದರು. ಬಳಿಕ ಮಾತನಾಡಿದ ಅವರು, “ಗ್ರಾಮದ ಜನರಿಂದ ಉತ್ತಮ ಸ್ಪಂದನೆ ಸಿಕ್ಕಿದೆ. ಹೀಗಾಗಿ ಚುನಾವಣೆಯಲ್ಲಿ ಗೆಲುವು ಸಾಧಿಸುತ್ತೇನೆ ಎಂಬ ವಿಶ್ವಾಸ ವಿದೆ” ಎಂದರು. ಈ ಹಿಂದೆ ಗ್ರಾಪಂ.ಸದಸ್ಯರು ಯಾವುದೇ ಮೂಲ ಸೌಕರ್ಯ …

Read More »

ಎರಡನೇ ಹಂತದ ಚುನಾವಣೆ: 1789 ಮತಗಟ್ಟೆಗಳು ಚಿಕ್ಕೋಡಿ, ರಾಯಬಾಗಗೆ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ

ಬೆಳಗಾವಿ: ಎರಡನೇ ಹಂತದಲ್ಲಿ‌ ಗ್ರಾಮ‌ ಪಂಚಾಯತಿ ಚುನಾವಣೆ ನಡೆಯಲಿರುವ ಚಿಕ್ಕೋಡಿ ಮತ್ತು ರಾಯಬಾಗ ತಾಲ್ಲೂಕುಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಸ್ಟರಿಂಗ್, ಮತ ಎಣಿಕೆ ಕೇಂದ್ರ ಹಾಗೂ ಸ್ಟ್ರಾಂಗ್ ರೂಮ್ ಸೇರಿದಂತೆ ಚುನಾವಣೆಯ ಸಿದ್ಧತೆಗಳನ್ನು ಪರಿಶೀಲಿಸಿದರು. ಎರಡೂ ತಾಲ್ಲೂಕುಗಳಿಗೆ ಶನಿವಾರ (ಡಿ.27) ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಮಸ್ಟರಿಂಗ್ ವ್ಯವಸ್ಥೆ ಮತ್ತು ‌ಮತ ಎಣಿಕೆ‌ ಕೇಂದ್ರಗಳನ್ನು ವೀಕ್ಷಿಸಿದರು. ಚುನಾವಣಾ ಪ್ರಕ್ರಿಯೆ ಸುಸೂತ್ರವಾಗಿ ನಡೆಯುವಂತೆ ಎಲ್ಲ ರೀತಿಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಬೇಕು. …

Read More »

KSRTC ಸಹಾಯವಾಣಿ ಸಂಖ್ಯೆ ಬದಲಾವಣೆ

ಬೆಂಗಳೂರು, – ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಯಾಣಿಕರ ಪ್ರಯಾಣ ಸುಗಮಗೊಳಿಸಲು ಸಹಾಯವಾಣಿ ವ್ಯವಸ್ಥೆ ಒದಗಿಸುತ್ತಿದೆ. ನಿಗಮವು ಪ್ರಯಾಣಿಕರಿಗಾಗಿ ಒದಗಿಸಿರುವ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆ: 9449596666 ಬದಲಾಯಿಸಿ, ನೂತನ ಸಹಾಯವಾಣಿ ಸಂಖ್ಯೆ: 080-26252625ನ್ನು ಜ.1ರರಿಂದ ಜಾರಿಗೊಳಿಸಲು ತೀರ್ಮಾನಿಸಿದೆ. ಪ್ರಯಾಣಿಕರಿಗೆ ಸಲಹೆ/ದೂರುಗಳು ಹಾಗೂ ಇನ್ನಿತರೆ ಸಂಸ್ಥೆಯ ವಿಚಾರಣೆ/ಮಾಹಿತಿಗಾಗಿ ಕಾಲ್ ಸೆಂಟರ್ ಸಹಾಯವಾಣಿ ಸಂಖ್ಯೆ: 080-26252625 ಗೆ ಸಂಪರ್ಕಿಸುವಂತೆ ಕೋರಲಾಗಿದೆ.

Read More »

ಚುನಾವಣಾ ಕಾರ್ಯಕ್ಕೆ 1615 ಕೆಎಸ್‌ಆರ್‌ಟಿಸಿ ಬಸ್

ಬೆಂಗಳೂರು,ಡಿ.26- ರಾಜ್ಯದಲ್ಲಿ ನಡೆಯುವ 2ನೇ ಹಂತದ ಗ್ರಾಮಪಂಚಾಯ್ತಿ ಚುನಾವಣೆಗೆ ಕೆಎಸ್‍ಆರ್‍ಟಿಸಿಯಿಂದ 1615 ಬಸ್‍ಗಳನ್ನು ನೀಡಲಾಗಿದೆ. ಗ್ರಾಮಪಂಚಾಯ್ತಿ ಚುನಾವಣಾ ಕಾರ್ಯಕ್ಕಾಗಿ ಸಾಂದರ್ಭಿಕ ಒಪ್ಪಂದದ ಆಧಾರದ ಮೇಲೆ ಇಂದು ಬಸ್‍ಗಳನ್ನು ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ತಿಳಿಸಿದೆ. ಸುಮಾರು 5 ಸಾವಿರ ಬಸ್‍ಗಳು ಪ್ರತಿದಿನ ಪ್ರಯಾಣಿಕರಿಗೆ ಸೇವೆ ಒದಗಿಸುತ್ತಿದ್ದು, ಚುನಾವಣಾ ಕಾರ್ಯಕ್ಕೆ ಬಸ್ ನೀಡಿರುವುದರಿಂದ ಪ್ರಯಾಣಿಕರಿಗೆ ಹೆಚ್ಚಿನ ತೊಂದರೆಯಾಗುವುದಿಲ್ಲ. ರಾಜ್ಯದ 109 ತಾಲ್ಲೂಕುಗಳಲ್ಲಿ ಗ್ರಾಮ ಪಂಚಾಯ್ತಿ ಚುನಾವಣೆ ನಡೆಯುತ್ತಿದ್ದು, ಪ್ರಯಾಣಿಕರ ಸಂಖ್ಯೆಯು ಕಡಿಮೆ ಇರುತ್ತದೆ. …

Read More »

ಲಕ್ಷ್ಮೀ ಹೆಬ್ಬಾಳ್ಕರ್ ವರಿಷ್ಠರು ಹೇಳುವಷ್ಟು ದೊಡ್ಡ ಲೀಡರ್ ಅಲ್ಲ..ರಮೇಶ ಜಾರಕಿಹೊಳಿ

  ಬೆಳಗಾವಿ ಗ್ರಾಮೀಣ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ವಾಗ್ದಾಳಿ ಮುಂದುವರಿಸಿದ್ದಾರೆ. ಆಕೆ ವರಿಷ್ಠರು ಹೇಳುವಷ್ಟು ದೊಡ್ಡ ಲೀಡರ್ ಅಲ್ಲ. ನನ್ನ ಹಿತೈಷಿಗಳು ಆಕೆಯ ಬಗ್ಗೆ ಮಾತನಾಡಬೇಡ ಎಂದಿದ್ದಕ್ಕೆ ಮಾತನಾಡುವುದನ್ನು ಬಿಟ್ಟಿದ್ದೇನೆ ಎಂದು ಹೇಳುವ ಮೂಲಕ ಮತ್ತೆ ತಿರುಗೇಟು ಕೊಟ್ಟಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ ಲಕ್ಷ್ಮೀ ಹೆಬ್ಬಾಳ್ಕರ್ ಬಗ್ಗೆ ಮಾತನಾಡಬೇಡ ಎಂದು ವರಿಷ್ಠರು ಹೇಳುವಷ್ಟು ಆಕೆ ದೊಡ್ಡ …

Read More »