Breaking News

Uncategorized

ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.

ಅಂಕೋಲಾ – ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಅಂಬುಲೆನ್ಸ್ ಮೂಲಕ ಗೋವಾಕ್ಕೆ ಕರೆದೊಯ್ಯಲಾಗಿದೆ. ಸೋಮವಾರ ಸಂಜೆ ಅಂಕೋಲಾ ಬಳಿ ಸಚಿವರ ಕಾರು ಪಲ್ಟಿಯಾಗಿ ಪತ್ನಿ ವಿಜಯಾ ಮತ್ತು ಆಪ್ತಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಸಚಿವರು ಗಾಯಗೊಂಡಿದ್ದಾರೆ. ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಅಪಘಾತವಾಗಿದೆ.

Read More »

ಕನ್ನಡದ ಹಿರಿಯ ಸಂಗೀತ ನಿರ್ದೇಶಕ ಜೀವರತ್ನ ನಿಧನ

ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ. ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ ‘ದಾನಶೂರ ಕರ್ಣ’ ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ ‘ಚಕ್ರವರ್ತಿ ತಿರುಮಗಲ’ ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 ‘ಮನೆ ಕಟ್ಟಿ ನೋಡು’ …

Read More »

ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ನ ಎಡವಟ್ಟು: ಮೌನಿ ರಾಯ್ ಫೋಟೋ ಶೇರ್ ಮಾಡಿ ಕ್ಷಮೆ ಕೇಳಿದ NSE

ಬಾಲಿವುಡ್ ನ ಹಾಟ್ ನಟಿ, ಕೆಜಿಎಫ್ ಸಿನಿಮಾದ ‘ಗಲಿ ಗಲಿ..’ ಹಾಡಿಗೆ ಹೆಜ್ಜೆ ಹಾಕಿದ್ದ ಮೌನಿ ರಾಯ್ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್ ಆಗಿದೆ. ಮೌನಿ ರಾಯ್ ಶನಿವಾರದಿಂದ ಸಾಮಾಜಿಕ ಜಾಲತಾಣದಲ್ಲಿ ದಿಢೀರ್ ಸದ್ದು ಮಾಡುತ್ತಿದ್ದಾರೆ. ನ್ಯಾಷನಲ್ ಸ್ಟಾಕ್ ಎಕ್ಸ್ಚೇಂಜ್ ಎಡವಟ್ಟಿನಿಂದ ಮೌನಿ ಸುದ್ದಿಯಲ್ಲಿದ್ದಾರೆ. ಹೌದು, ಎನ್ ಎಸ್ ಇ ತನ್ನ ಅಧಿಕೃತ ಟ್ವಿಟ್ಟರ್ ಖಾತೆಯಲ್ಲಿ ಮೌನಿ ರಾಯ್ ಫೋಟೋಗಳನ್ನು ಶೇರ್ ಮಾಡಿದೆ. ಮೌನಿ ಫೋಟೋ ಹಂಚಿಕೊಳ್ಳುತ್ತಿದ್ದಂತೆ ಕ್ಷಣಾರ್ಧದಲ್ಲಿ …

Read More »

ಸಂಕ್ರಾಂತಿ ಹಬ್ಬಕ್ಕೆ ಕಬ್ಜ ಚಿತ್ರತಂಡ ಕೊಡಲಿದೆ ಬಿಗ್ ಸರ್ಪ್ರೈಸ್, ಏನಿರಬಹುದು?

ರಿಯಲ್ ಸ್ಟಾರ್ ಉಪೇಂದ್ರ ಮತ್ತು ಆರ್ ಚಂದ್ರು ಕಾಂಬಿನೇಷನ್‌ನಲ್ಲಿ ತಯಾರಾಗುಲಿರುವ ಕಬ್ಜ ಸಿನಿಮಾ ಭಾರತೀಯ ಸಿನಿಮಾ ರಂಗದಲ್ಲಿ ಭಾರಿ ನಿರೀಕ್ಷೆ ಮೂಡಿಸಿದೆ. ಕೆಜಿಎಫ್ ನಂತರ ಅಷ್ಟು ದೊಡ್ಡ ಮಟ್ಟಕ್ಕೆ ಅಥವಾ ಅದನ್ನು ಮೀರಿಸುವಂತಹ ಸಿನಿಮಾ ಇದಾಗಲಿದೆ ಎಂಬ ಮಾತುಗಳು ಕೇಳಿಬರುತ್ತಿದೆ. ಭಾರತದ ಏಳು ಪ್ರಮುಖ ಭಾಷೆಗಳಲ್ಲಿ ಕಬ್ಜ ಸಿನಿಮಾ ಬಿಡುಗಡೆಯಾಗಲಿದೆ. ಸ್ಯಾಂಡಲ್‌ವುಡ್ ಇಂಡಸ್ಟ್ರಿ ಪಾಲಿಗೆ ಇದು ಅತಿ ದೊಡ್ಡ ಬಜೆಟ್ ಚಿತ್ರ. ಇದೀಗ, ಸಂಕ್ರಾಂತಿ ಹಬ್ಬಕ್ಕೆ ಕಬ್ಜ ಚಿತ್ರತಂಡ ದೊಡ್ಡ …

Read More »

ಮೊದಲ ಬಾರಿಗೆ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಲಿದ್ದಾರೆ.

 ಮೊದಲ ಬಾರಿಗೆ ನಟ ಹೃತಿಕ್ ರೋಷನ್ ಹಾಗೂ ದೀಪಿಕಾ ಪಡುಕೋಣೆ ಒಟ್ಟಿಗೆ ನಟಿಸಲಿದ್ದಾರೆ. ಇಬ್ಬರು ಸ್ಟಾರ್ ನಟರು ಮೊದಲ ಬಾರಿಗೆ ಒಟ್ಟಿಗೆ ಕಾಣಿಸಿಕೊಳ್ಳುತ್ತಿರುವ ಕಾರಣ ನಿರೀಕ್ಷೆಗಳು ಹೆಚ್ಚಿಗೆ ಇವೆ. ಇಂದು ಹೃತಿಕ್ ರೋಷನ್ ಹುಟ್ಟುಹಬ್ಬವಿದ್ದು, ಇದೇ ದಿನ ಹೃತಿಕ್ ರೋಷನ್ ಮತ್ತು ದೀಪಿಕಾ ಪಡುಕೋಣೆ ಮೊದಲ ಬಾರಿಗೆ ಒಟ್ಟಿಗೆ ನಟಿಸುತ್ತಿರುವ ಸಿನಿಮಾದ ಹೆಸರು ಘೋಷಣೆ ಮಾಡಲಾಗಿದೆ. ದೀಪಿಕಾ ಪಡುಕೋಣೆ ಬರ್ತ್‌ಡೇ ಪಾರ್ಟಿಯಲ್ಲಿ ತಾರೆಯರ ಹಿಂಡು ಹೃತಿಕ್-ದೀಪಿಕಾ ನಟಿಸುತ್ತಿರುವ ಈ ಹೊಸ …

Read More »

ಡಾರ್ಲಿಂಗ್ ಕೃಷ್ಣಗೆ ಜೋಡಿಯಾದ ರಚಿತಾ ರಾಮ್; ಯಾವ ಸಿನಿಮಾ?

ಸ್ಯಾಂಡಲ್ ವುಡ್ ನ ಸ್ಟಾರ್ ನಟಿ ರಚಿತಾ ರಾಮ್ ಸದ್ಯ ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡ ಮಾತ್ರ ವಲ್ಲದೇ ತೆಲುಗು ಚಿತ್ರರಂಗದಲ್ಲೂ ಮಿಂಚಲು ಸಜ್ಜಾಗಿದ್ದಾರೆ. ಈ ನಡುವೆ ರಚಿತಾ ಮತ್ತೊಂದು ಸಿನಿಮಾಗೆ ಗ್ರೀನ್ ಸಿಗ್ನಲ್ ನೀಡಿದ್ದಾರೆ. ಲವ್ ಮಾಕ್ ಟೇಲ್ ಖ್ಯಾತಿಯ ನಟ ಡಾರ್ಲಿಂಗ್ ಕೃಷ್ಣಗೆ ಜೋಡಿಯಾಗಿ ರಚಿತಾ ನಟಿಸುತ್ತಿದ್ದಾರೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಲವ್ ಮಾಕ್ ಟೇಲ್ ಬಳಿಕ ಕೃಷ್ಣಗೆ ಬೇಡಿಕೆ ಜಾಸ್ತಿ ಆಗಿದ್ದು, ಸಾಲು ಸಾಲು …

Read More »

ವರ್ಗಾವಣೆ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಶಾಕ್: ಮುಂದುವರೆದ ನಿರಾಸೆ

ಬೆಂಗಳೂರು: ಶಿಕ್ಷಕರ ಬಹು ದಿನಗಳ ಬೇಡಿಕೆಯಾಗಿದ್ದ ವರ್ಗಾವಣೆಗೆ ಕಾಲ ಕೂಡಿ ಬಂದಂತಿಲ್ಲ. ಹೆಚ್ಚುವರಿ ಮತ್ತು ಕಡ್ಡಾಯ ವರ್ಗಾವಣೆಯಾಗಿದ್ದ ಶಿಕ್ಷಕರ ವರ್ಗಾವಣೆಗೆ ಕೆಎಟಿ ತಡೆ ನೀಡಿದೆ. ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ(ಶಿಕ್ಷಕರ ವರ್ಗಾವಣೆ) ಅಧಿನಿಯಮ -2020 ರ ಅನ್ವಯ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ನಡೆಸಲು ಕೆಎಟಿ ಆದೇಶ ಹೊರಡಿಸಿದೆ. ಇದರಿಂದಾಗಿ ಕಡ್ಡಾಯ ಮತ್ತು ಹೆಚ್ಚುವರಿ ವರ್ಗಾವಣೆಯಾಗಿದ್ದ ಶಿಕ್ಷಕರಿಗೆ ವರ್ಗಾವಣೆ ನೀಡಲು ಮುಂದಾಗಿದ್ದ ಶಿಕ್ಷಣ ಇಲಾಖೆಗೆ ಹಿನ್ನಡೆಯಾದಂತಾಗಿದೆ. ಫೆಬ್ರವರಿ 17 ರವರೆಗೆ ವರ್ಗಾವಣೆ ಪ್ರಕ್ರಿಯೆ …

Read More »

ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕ ಹುದ್ದೆ ಭರ್ತಿ ಮಾಡಿ’

ಬೆಂಗಳೂರು: ‘ಕಲ್ಯಾಣ ಕರ್ನಾಟಕ ಭಾಗದ ಸರ್ಕಾರಿ, ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಇದು ಹಿಂದುಳಿದ ಭಾಗವಾಗಿರುವುದರಿಂದ ಆರ್ಥಿಕ ಇಲಾಖೆಯ ನಿರ್ಬಂಧಗಳನ್ನು ಸಡಿಲಿಸಿ, ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಬೇಕು’ ಎಂದು ರಾಜ್ಯಸಭೆ ಸದಸ್ಯ ಮಲ್ಲಿಕಾರ್ಜುನ ಖರ್ಗೆ ಸರ್ಕಾರವನ್ನು ಒತ್ತಾಯಿಸಿದರು. ನಗರದ ಸದಾಶಿವನಗರದಲ್ಲಿ ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯ ಶಾಲಾ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆ ಎಂಬುದನ್ನು ಬದಲಿಸಿ, ಕಲ್ಯಾಣ ಕರ್ನಾಟಕ ಎಂದು …

Read More »

ನೆಲಕ್ಕೆ ಬಿದ್ರೂ ಮೀಸೆ ಮಣ್ಣಾಗಲಿಲ್ಲ ಎನ್ನುವಂಥವರು ಡಿಕೆಶಿ, ಸಿದ್ದರಾಮಯ್ಯ:ಜಗದೀಶ್ ಶೆಟ್ಟರ್,

ಹುಬ್ಬಳ್ಳಿ: ಇಲ್ಲಿಯ ಗೋಕುಲ ಗಾರ್ಡನ್​ನಲ್ಲಿ ನಿನ್ನೆ ಬಿಜೆಪಿಯಿಂದ ಜನಸೇವಕ ಸಮಾವೇಶ ನಡೆಯಿತು. ಬಿಜೆಪಿ ಬೆಂಬಲಿತ ಗ್ರಾಮ ಪಂಚಾಯತಿ ನೂತನ ಸದಸ್ಯರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಧಾರವಾಡ ಜಿಲ್ಲೆಯ ವಿವಿಧ ತಾಲ್ಲೂಕುಗಳಿಂದ ಆಗಮಿಸಿದ್ದ ನೂರಾರು ಗ್ರಾಮ ಪಂಚಾಯತಿ ಸದಸ್ಯರು ಸಮಾವೇಶದಲ್ಲಿ ಭಾಗವಹಿಸಿ ಸನ್ಮಾನ ಸ್ವೀಕರಿಸಿದರು. ಬಿಜೆಪಿ ಮುಖಂಡರು ಗ್ರಾಮ ಪಂಚಾಯತಿ ನೂತನ ಸದಸ್ಯರಿಗೆ ಶಾಲು ಹೊದಿಸಿ, ಹೂಮಾಲೆ ಹಾಕಿ ಸನ್ಮಾನಿಸಿದ್ರು. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜಗದೀಶ್ ಶೆಟ್ಟರ್, ಗೋವಿಂದ ಕಾರಜೋಳ, …

Read More »

ಉತ್ತಮ ಕೆಲಸ‌ ಮಾಡಿದ್ರೆ ಒಬ್ಬ ಗ್ರಾಮ ಪಂಚಾಯತಿ ಸದಸ್ಯ ದೇಶದ ಪ್ರಧಾನಿಯಾಗಬಹುದು.:ನಮ್ಮ ಪಕ್ಷದಲ್ಲಿ ಮಾತ್ರ ಸಾಧ್ಯ.

ಹುಬ್ಬಳ್ಳಿ: ಬಿಜೆಪಿಯವರು ರಸ್ತೆಯಲ್ಲಿ ಹೊಡೆದಾಡಿ ಲೀಡರ್ ಆಗುತ್ತಾರೆ. ಕಾಂಗ್ರೆಸ್ ಪಕ್ಷದ ಇಬ್ಬರು ಲೀಡರ್‌ಗಳು ರೂ‌ಮಿನಲ್ಲಿ ಒಳಗಡೆ ಹೋದ್ರೆ ಒಬ್ಬ ಲೀಡರ್ ಹುಟ್ಟುತ್ತಾರೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಇಲ್ಲಿ ನಿನ್ನೆ ಭಾನುವಾರ ನಡೆದ ಬಿಜೆಪಿ ಜನಸೇವಕ ಸಮಾವೇಶದಲ್ಲಿ ಮಾತನಾಡಿದ ಅವರು, ಈ ಹಿಂದೆ ಪ್ರಿಯಾಂಕಾ ಗಾಂಧಿಗೆ ಗಂಡು ಮಗು ಹುಟ್ಟಿದಾಗ ಲೀಡರ್ ಹುಟ್ಟಿದ್ದಾನೆಂದು ಕಾಂಗ್ರೆಸ್ ಕಾರ್ಯಕರ್ತರು ಸ್ವೀಟ್ ಹಂಚಿದ್ರು ಎಂದು ಗಾಂಧಿ …

Read More »