ಅಡಿಲೇಡ್, ಡಿ.15- ಟೆಸ್ಟ್ ವಿಶ್ವಕಪ್ ಫೈನಲ್ಗೇರಲು ಹೋರಾಟ ನಡೆಸುತ್ತಿರುವ ವಿರಾಟ್ ಕೊಹ್ಲಿ ಬಳಗದ ಟೀಂ ಇಂಡಿಯಾವು ನಾಳೆಯಿಂದ ಆಸ್ಟ್ರೇಲಿಯಾ ವಿರುದ್ಧ ನಡೆಯಲಿರುವ ಬಾರ್ಡರ್- ಗವಾಸ್ಕರ್ ಟ್ರೋಫಿಯ ಅಗ್ನಿ ಪರೀಕ್ಷೆಯನ್ನು ಎದುರಿಸುತ್ತಿದೆ. ನಾಲ್ಕು ಪಂದ್ಯಗಳ ಟೆಸ್ಟ್ನಲ್ಲಿ ಭಾರತವು ಗೆದ್ದು ತಮ್ಮಲ್ಲೇ ಟ್ರೋಫಿ ಉಳಿಸಿಕೊಳ್ಳಲು ಮುಂದಾಗಿದ್ದರೆ, ತವರಿನಲ್ಲಿ ಮಿಂಚುವ ಮೂಲಕ ಕಳೆದ ಬಾರಿಯ ಸೋಲಿನ ಸೇಡು ತೀರಿಸಿಕೊಳ್ಳಲು ಟ್ರಾವಿಸ್ ಹೆಡ್ ಬಳಗ ಸಜ್ಜಾಗಿದೆ. #ಪಿಂಕ್ ಬಾಲ್ ಟೆಸ್ಟ್: ಅಡಿಲೇಡ್ ನಡೆಯಲಿರುವ ಮೊದಲ ಟೆಸ್ಟ್ …
Read More »66 ರ ಇಳಿ ವಯಸ್ಸಿನಲ್ಲಿಯೂ ಚು.ಅಖಾಡಕ್ಕಿಳಿದ ಪತಿ- ಪತ್ನಿ!!
ವಿಜಯಪುರ: ರಾಜ್ಯದೆಲ್ಲೆಡೆ ಗ್ರಾಮ ಪಂಚಾಯಿತಿ ಚುನಾವಣೆ ಕಾವು ಜೋರಾಗಿದೆ. ಚುನಾವಣಾ ಅಭ್ಯರ್ಥಿಗಳು ಲೋಕಲ್ ದಂಗಲ್ ನಲ್ಲಿ ಜಯಗಳಿಸಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಒಂದೇ ವಾರ್ಡ್ ನಲ್ಲಿ ಪತಿ- ಪತ್ನಿ ಅಖಾಡಕ್ಕಿಳಿಯುವ ಮೂಲಕ ಜನರ ಗಮನ ಸೆಳೆದಿದ್ದಾರೆ. ಹೌದು.. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಗುಣಶ್ಯಾಳ ಪಿ.ಬಿ. ಗ್ರಾಮ ಪಂಚಾಯತಿಯ ಸಂನಾಳ ಗ್ರಾಮದಲ್ಲಿ ಒಂದೇ ವಾರ್ಡ್ ನಲ್ಲಿ ಚುನಾವಣೆ ಅಖಾಡಕ್ಕಿಳಿಯುವ ಮೂಲಕ ಪತ್ನಿ ಪತ್ನಿ ಎಲ್ಲರ …
Read More »ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ.
ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒಂದೆಡೆ ರೈತರು ಮತ್ತೆ ಪ್ರತಿಭಟನೆ ಆರಂಭಿಸಿದರೆ ಇನ್ನೊಂದೆಡೆ ಖಾಸಗಿ ಶಾಲಾ ಶಿಕ್ಷಕರು ಧರಣಿ ನಡೆಸುತ್ತಿದಾರೆ. ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ವಿಶೇಷ ಅನುದಾನ, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳಿಗೆ ವಿಮಾ ಸೌಲಭ್ಯ, ಶಿಕ್ಷಕರನ್ನು ಕೊರೊನಾ ಯೋಧರೆಂದು ಪರಿಗಣಿಸಬೇಕು, ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜಧಾನಿಯಲ್ಲಿ ಶಿಕ್ಷಕರು ಬೀದಿಗಿಳಿದು ಹೋರಾಟ ನಡೆಸಿದ್ದಾರೆ. ಪ್ರತಿಭಟನಾ ರ್ಯಾಲಿ ಬಳಿಕ ಶಿಕ್ಷಕರು ಫ್ರೀಡಂ ಪಾರ್ಕ್ ನಲ್ಲಿ ಧರಣಿ ನಡೆಸುತ್ತಿದ್ದು, ಬಸವರಾಜ್ ಹೊರಟ್ಟಿ …
Read More »ಪರಿಷತ್ನಲ್ಲಿ ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ : ಸಚಿವ ಸೋಮಶೇಖರ್
ಮೈಸೂರು, ಡಿ.16- ಸಭಾಪತಿಗಳ ಖುರ್ಚಿಗೆ ಅದರದ್ದೇ ಆದ ಗೌರವವಿದೆ. ಆದರೆ, ಮೊದಲ ಬಾರಿ ಎಂಎಲ್ ಸಿ ಆದವರೂ ಸಹ ಆ ಖುರ್ಚಿಯಲ್ಲಿ ಕೂರುತ್ತಾರೆಂದರೆ ಏನರ್ಥ? ಸಭಾಪತಿಗಳ ಮೇಲೆ ಅವಿಶ್ವಾಸ ನಿರ್ಣಯವನ್ನು ನಮ್ಮ ಪಕ್ಷದ ಸದಸ್ಯರು ಮಂಡಿಸಿದ್ದು ಪ್ರತಿಪಕ್ಷ ನಾಯಕರಾದ ಸಿದ್ದರಾಮಯ್ಯ ಅವರಿಗೆ ಗೊತ್ತಿಲ್ಲವೇ? ಎಲ್ಲರಿಗೂ ನೀತಿ, ಕಾನೂನು ಹೇಳುವ ಅವರು ತಮ್ಮ ಪಕ್ಷದ ನಾಯರಿಗೆ ಬುದ್ಧಿ ಹೇಳಲಿ, ಗೂಂಡಾಗಿರಿ ಮಾಡಿದವರನ್ನು ಅಮಾನತು ಮಾಡಲಿ ಎಂದು ಸಹಕಾರ ಹಾಗೂ ಮೈಸೂರು ಜಿಲ್ಲಾ …
Read More »ದೆಹಲಿ ರೈತ ಪ್ರತಿಭಟನೆ: ಚಳಿ ತಾಳಲಾರದೆ ಕಳೆದ 20 ದಿನಗಳಲ್ಲಿ 22 ರೈತರು ಸಾವು
ನವದೆಹಲಿ: ಮೂರು ನೂತನ ಕೃಷಿ ಕಾಯ್ದೆಗಳನ್ನು ವಿರೋಧಿಸಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಕಳೆದ 20 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆ ವೇಳೆ 22 ರೈತರು ಸಾವನ್ನಪ್ಪಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ಹೇಳಿದೆ. ದೆಹಲಿ ಹಾಗೂ ಹರಿಯಾಣದ ಸಿಂಗು ಹಾಗೂ ಟಿಕ್ರಿ ಗಡಿ ಪ್ರದೇಶಗಳಲ್ಲಿ ರೈತರು ಭಾರಿ ಪ್ರಮಾಣದಲ್ಲಿ ಸೇರಿದ್ದು, ತೀವ್ರ ಚಳಿಯ ನಡುವೆಯೂ ಕೇಂದ್ರ ಸರ್ಕಾರದ ಕೃಷಿ ಕಾನೂನು ವಿರೋಧಿಸಿ ತೀವ್ರ ಪ್ರತಿಭಟನೆ ನಡೆಸುತ್ತಿದ್ದಾರೆ. ಈಗಾಗಲೇ ಟಿಕ್ರಿ ಹಾಗೂ ಸಿಂಘು …
Read More »ಸಭಾಪತಿ ಬಂದಾಗ ಬಾಗಿಲು ಹಾಕಿ, ಉಪಸಭಾಪತಿಯನ್ನು ಪೀಠದಲ್ಲಿ ಕೂರಿಸಿದ್ದೆ ಮಹಾಪರಾಧ; ಸಿದ್ದರಾಮಯ್ಯ
ಬೆಂಗಳೂರು; ಪರಿಷತ್ನಲ್ಲಿ ಪ್ರಜಾಪ್ರಭುತ್ವ ಯಾವ ರೀತಿ ಕಗ್ಗೊಲೆ ಆಯ್ತು ಅಂತಾ ನಾನು ನೋಡಿದೆ. ಸಭಾಪತಿ ವಿದೇಶಕ್ಕೆ ಹೋದಾಗ, ಅನಾರೋಗ್ಯ ಇದ್ದಾಗ, ನನ್ನ ಗೈರು ಹಾಜರಿಯಲ್ಲಿ ಕೆಲಸ ಮಾಡಿ ಅಂತಾ ಉಪಸಭಾಪರಿಗೆ ಹೇಳ್ತಾರೆ. ರೂಲ್ಸ್ ಬುಕ್ ಕೂಡ ಮಾಡಿಕೊಂಡಿದ್ದೇವೆ. ರೂಲ್ಸ್ ಕಮಿಟಿ ರೂಲ್ಸ್ ಮಾಡಿರ್ತಾರೆ. ಈ ನಿಯಮಾವಳಿಗಳ ಚೌಕಟ್ಟಿನಲ್ಲಿ ಸಭಾಪತಿಗಳು ಸದನ ನಡೆಸುತ್ತಾರೆ. ಗುರುವಾರ 10ನೇ ತಾರೀಖು ಸಭಾಪತಿ ಸದನ ನಡೆಸಿದ್ದಾರೆ. ಕಾನೂನು ಸಚಿವರ ಆದೇಶದ ಮೇರೆಗೆ ಕೌನ್ಸಿಲ್ ಮೀಟಿಂಗ್ ಕರೆದು ಆ ಲೆಟರ್ ನಲ್ಲಿ ಡಿಸ್ಕಷನ್ ಮಾಡಿ …
Read More »ಉಪಯೋಗಕ್ಕಿಲ್ಲದ ಸಿಸಿ ಟಿವಿ ಕ್ಯಾಮೆರಾಗಳು!
ಪುತ್ತೂರು(ಡಿಸೆಂಬರ್.16): ನಗರ ಪ್ರದೇಶವಾಗಿ ಬೆಳೆಯುತ್ತಿರುವ ಪುತ್ತೂರಿನಲ್ಲಿ ಇತ್ತೀಚಿನ ದಿನಗಳಲ್ಲಿ ಅಪರಾಧ, ಕಳ್ಳತನ ಪ್ರಕರಣಗಳೂ ಹೆಚ್ಚಾಗಲಾರಂಭಿಸಿದೆ. ಹಾಡುಹಗಲೇ ಕಾರುಗಳ ಕಳ್ಳತನ ಸೇರಿದಂತೆ ಹಲವು ಅಪರಾಧ ಕೃತ್ಯಗಳು ನಡೆಯುತ್ತಿದ್ದರೂ, ಕಳ್ಳರನ್ನು ಪತ್ತೆ ಹಚ್ಚಲು ಮಾತ್ರ ಪೋಲೀಸರು ವಿಫಲರಾಗುತ್ತಿದ್ದಾರೆ. ಇಂಥಹ ಅಪರಾಧ ಕೃತ್ಯಗಳ ತಡೆಗೆಂದೇ ಪುತ್ತೂರು ನಗರದ ಸುತ್ತಮತ್ತ ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದರೂ, ಅವುಗಳಲ್ಲಿ ಹಲವು ಇದೀಗ ಸರಿಯಾಗಿ ಕಾರ್ಯಾಚರಿಸುತ್ತಿಲ್ಲ. ಈ ಹಿನ್ನಲೆಯಲ್ಲಿ ಪುತ್ತೂರು ನಗರದಾದ್ಯಂತ ಸಿಸಿ ಕ್ಯಾಮೆರಾ ಅಳವಡಿಸಲು ತೀರ್ಮಾನಿಸಲಾಗಿದ್ದು, ಕಳ್ಳತನ, ಹಿಟ್ …
Read More »ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ.
ಬೆಳಗಾವಿ: ಹುಲಿ ಉಗುರುಗಳು ಮತ್ತು ಆನೆ ದಂತದಿಂದ ಮಾಡಿದ ಕಡಗಗಳನ್ನು ಮಾರುವ ಉದ್ದೇಶದಿಂದ ತಮ್ಮ ಬಳಿ ಇಟ್ಟುಕೊಂಡಿದ್ದ ಆರೋಪದ ಮೇಲೆ ವ್ಯಕ್ತಿಯನ್ನು ಅರಣ್ಯ ಸಂಚಾರಿ ದಳದವರು ಬಂಧಿಸಿದ್ದಾರೆ. ನಗರದ ಶಹಾಪುರದ ಕಾಕೇರಿ ಚೌಕ್ ನಿವಾಸಿ ಶ್ರೀರಾಮ ಅರ್ಜುನಸಾ ಬಾಕಳೆ (46) ಬಂಧಿತ. ಅವರಿಂದ 2 ಕಡಗ ಹಾಗೂ 5 ಹುಲಿ ಉಗುರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಬೆಳಗಾವಿ ಅರಣ್ಯ ಸಂಚಾರಿ ದಳದ ಪಿಎಸ್ಐ ರೋಹಿಣಿ ಪಾಟೀಲ ನೇತೃತ್ವದ ತಂಡ ಕಾರ್ಯಾಚರಣೆ ನಡೆಸಿದೆ.ಆರೋಪಿ ವಿರುದ್ಧ …
Read More »ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ
ಬೆಳಗಾವಿ : ತಾಲ್ಲೂಕಿನ ಕೇದನೂರು ಗ್ರಾಮದಲ್ಲಿ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ಮಂಗಳವಾರ ಬೆಳ್ಳಿಗೆ ನಡೆದಿದೆ. ಸಚಿನ ಶೆಟ್ಟು ಲೋಹಾರ (22) ಆತ್ಮಹತ್ಯೆ ಮಾಡಿಕೊಂಡ ಯುವಕ. ಕೆಲಸವಿಲ್ಲದೆ ತಿರುಗಾಡುತ್ತಿದ್ದ ಯುವಕ ಮಾನಸಿಕವಾಗಿ ಕುಗ್ಗಿದ್ದನು. ಇದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಕಾಕತಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Read More »ಮುಷ್ಕರದ ನಡುವೆಯು ರಸ್ತೆಗಿಳಿದ 943 ಬಸ್ಗಳು
ಬೆಂಗಳೂರು, ಡಿ.14- ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಸಾರಿಗೆ ಸಂಸ್ಥೆಗಳ ನೌಕರರು ಮುಷ್ಕರ ಮುಂದುವರೆಸಿರುವ ನಡುವೆಯೇ ಹಂತ ಹಂತವಾಗಿ ಸಾರಿಗೆ ಸಂಸ್ಥೆಗಳ ಬಸ್ ಸಂಚಾರ ಆರಂಭವಾಗಿವೆ. ಮಧ್ಯಾಹ್ನ 12 ಗಂಟೆ ವೇಳೆಗೆ ರಾಜ್ಯದಲ್ಲಿ ನಾಲ್ಕು ಸಾರಿಗೆ ಸಂಸ್ಥೆಗಳಿಂದ 943 ಬಸ್ಗಳ ಸಂಚಾರ ಪ್ರಾರಂಭವಾಗಿತ್ತು ಎಂದು ಸಂಸ್ಥೆಗಳ ಮೂಲಗಳು ತಿಳಿಸಿವೆ. ಕೆಎಸ್ಆರ್ಟಿಸಿ 234, ಬಿಎಂಟಿಸಿ 182, ಈಶಾನ್ಯ ಕೆಎಸ್ಆರ್ಟಿಸಿ 286, ವಾಯುವ್ಯಸಾರಿಗೆ ಸಂಸ್ಥೆಯ 241 ಬಸ್ಗಳು ವಿವಿಧ ಸ್ಥಳಗಳಿಂದ ಸಂಚಾರ ಆರಂಭಿಸಿದ್ದವು. …
Read More »