ಪೀರನವಾಡಿ ಪಟ್ಟಣ ಪಂಚಾಯತಿ ವ್ಯಾಪ್ತಿಯಲ್ಲಿಯೂ ನರೇಗಾ ಮುಂದುವರಿಸುವಂತೆ ಗ್ರಾಕೂಸ ಆಗ್ರಹ ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೊಳಿಸಿರುವ ಪಟ್ಟಣ ಪಂಚಾಯತಿಗಳಲ್ಲಿಯೂ ನರೇಗಾ ಉದ್ಯೋಗ ಖಾತ್ರಿಯನ್ನು ಮುಂದುವರಿಸಬೇಕು ಎಂದು ಆಗ್ರಹಿಸಿ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ವತಿಯಿಂದ ಬೆಳಗಾವಿಯಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಗಿತ್ತು. ಸೋಮವಾರ ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಗೆ ಆಗಮಿಸಿದ ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ನೂರಾರು ಪದಾಧಿಕಾರಿಗಳು ನೂತನವಾಗಿ ಘೋಷಣೆ ಆಗಿರುವ ಪೀರನವಾಡಿ ಪಟ್ಟಣ ಪಂಚಾಯತಿಯಲ್ಲಿಯೂ ನರೇಗಾ ಉದ್ಯೋಗ ಖಾತ್ರಿ ಯೋಜನೆಯನ್ನು ಆರಂಭಿಸುವಂತೆ ಆಗ್ರಹಿಸಿ …
Read More »ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸ್ಪಂದಿಸಿ, ಉಪಸಮಿತಿ ರಚಿಸಿನನ್ನ ಅಧ್ಯಕ್ಷರನ್ನಾಗಿ ನೇಮಿಸಿದೆ’ :ಶ್ರೀರಾಮುಲು
ಬೆಂಗಳೂರು : ‘ ವಾಲ್ಮೀಕಿ ಜನಾಂಗಕ್ಕೆ ಮೀಸಲಾತಿ ಹೆಚ್ಚಳಕ್ಕೆ ಸರ್ಕಾರ ಸ್ಪಂದಿಸಿ, ಉಪಸಮಿತಿ ರಚಿಸಿದೆ. ಅದಕ್ಕೆ ನನ್ನ ಅಧ್ಯಕ್ಷರನ್ನಾಗಿ ನೇಮಿಸಿದೆ’ ಅಂತಾ ಸಚಿವ ಶ್ರೀರಾಮುಲು ಹೇಳಿದ್ದಾರೆ. ಇಲ್ಲಿನ ಕುಮಾರ ಕೃಪೆ ಗೃಹದಲ್ಲಿ ನಡೆದ ಮೂರನೇ ವಷ೯ದ ಶ್ರೀಮಹಷಿ೯ ವಾಲ್ಮೀಕಿ ಜಾತ್ರೆಯ ಪೂವ೯ಭಾವಿ ಸಭೆಯಲ್ಲಿ ಮಾತನಾಡಿದರು. ‘ವಾಲ್ಮೀಕಿ ಜನಾಂಗದವರು ಮೀಸಲಾತಿ ಹೆಚ್ಚಳದ ಬಗ್ಗೆ ಆತಂಕಕ್ಕೆ ಒಳಗಾಗಬಾರದು. ಸಮುದಾಯದ ಬೇಡಿಕೆಗೆ ನಾವೆಲ್ಲರೂ ಒಟ್ಟಾಗಿ ಶುಭ ಸುದ್ದಿಯನ್ನು ತಿಳಿಸುತ್ತೇವೆ. ಈಗಾಗಲೇ ಈ ವಿಚಾರದಲ್ಲಿ ನಾವು …
Read More »ಕೊಲೆ ಆರೋಪಿಯನ್ನೇ ಮುಗಿಸಲು ಸ್ಕೆಚ್ ಹಾಕಿದ್ರಾ ಮಾಜಿ ಸಚಿವರ ತಂಡ?
ಹುಬ್ಬಳ್ಳಿ: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಹತ್ಯೆ ಪ್ರಕರಣದ ಸಿಬಿಐ ತನಿಖೆ ಮುಂದುವರಿದಿದೆ. ತನಿಖೆಯಲ್ಲಿ ಬೆಚ್ಚಿಬೀಳಿಸುವ ವಿಚಾರಗಳು ಬಯಲಿಗೆ ಬರುತ್ತಿವೆ. ಕೊಲೆ ಆರೋಪದ ಮೇಲೆ ಜೈಲಲ್ಲಿರುವ ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಪ್ರಕರಣದಲ್ಲಿ ಪ್ರಮುಖ ಸಾಕ್ಷ್ಯವಾಗಿರುವ ಕೊಲೆ ಆರೋಪಿಯನ್ನೇ ಹತ್ಯೆ ಮಾಡಲು ಸಂಚು ರೂಪಿಸಿದ್ದರು ಎನ್ನಲಾಗಿದೆ. ಸಿಬಿಐ ತನಿಖೆ ವೇಳೆ ಈ ರಣರೋಚಕ ವಿಚಾರ ಬಹಿರಂಗ ಗೊಂಡಿದೆ. ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸುತ್ತಿದ್ದಂತೆ ಕೊಲೆ ಆರೋಪಿ …
Read More »ಲಿಖಿತ ಭರವಸೆ ತಲುಪಿಸುವವರೆಗೂ ಮುಷ್ಕರ ಹಿಂಪಡೆಯಲ್ಲ: ಕೋಡಿಹಳ್ಳಿ ಚಂದ್ರಶೇಖರ್
ಬೆಂಗಳೂರು(ಡಿ. 14): ಸಾರಿಗೆ ನೌಕರರ ಮುಷ್ಕರ ನಾಟಕೀಯ ತಿರುವು ಪಡೆಯುತ್ತಲೇ ಇದೆ. ಇವತ್ತು ಸಾರಿಗೆ ನೌಕರರು ಸೇವೆಗೆ ಹಾಜರಾಗುತ್ತಿರುವಂತೆಯೇ ಇದೀಗ ಮುಷ್ಕರ ಮುಂದುವರಿಯಲಿದೆ ಎಂದು ಪ್ರತಿಭಟನಾಕಾರರು ಹೇಳಿದ್ದಾರೆ. ಸಾರ್ವಜನಿಕರ ಹಿತದೃಷ್ಟಿಯಿಂದ ಮುಷ್ಕರ ಹಿಂಪಡೆಯುತ್ತೇವೆ ಎಂದು ಹೇಳಿದ್ದ ಕೋಡಿಹಳ್ಳಿ ಚಂದ್ರಶೇಖರ್ ಇದೀಗ ಹೊಸ ಷರತ್ತು ಮುಂದಿಟ್ಟಿದ್ದಾರೆ. ಸಾರಿಗೆ ನೌಕರರು ಮುಂದಿಟ್ಟಿದ್ದ 10 ಬೇಡಿಕೆಗಳ ಪೈಕಿ ಸರ್ಕಾರ ಒಂಬತ್ತನ್ನ ಈಡೇರಿಸಲು ಒಪ್ಪಿದೆ. ಆದರೆ, ಇದು ಬಾಯಿ ಮಾತಿನದ್ದಾಗದೆ ಲಿಖಿತ ರೂಪದಲ್ಲಿರಲಿ. ಸರ್ಕಾರದ ಕಡೆಯಿಂದ …
Read More »ಸಾರಿಗೆ ನೌಕರರ ಪ್ರತಿಭಟನೆ ಗೊಂದಲ, ಇಂದೂ ಕೂಡ ಪ್ರಯಾಣಿಕರ ಪರದಾಟ
ಬೆಂಗಳೂರು, ಡಿ.14- ಸಾರಿಗೆ ನೌಕರರ ಮುಷ್ಕರ ವಾಪಸ್ ಪಡೆದರೂ ನಿನ್ನೆ ರಾತ್ರಿ ಉಂಟಾದ ಗೊಂದಲ ಹಾಗೂ ಬೆಳಗ್ಗೆ ನೌಕರರ ಸಂಘಟನೆಗಳು ವಿಳಂಬವಾಗಿ ತೆಗೆದುಕೊಂಡ ನಿರ್ಧಾರದಿಂದ ಇಂದೂ ಮಧ್ಯಾಹ್ನದವರೆಗೂ ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಸುತ್ತಿದ್ದ ಸಾರಿಗೆ ನೌಕರರು ಸರ್ಕಾರದೊಂದಿಗೆ ನಡೆಸಿದ ಮಾತುಕತೆ ಫಲ ನೀಡಿದೆ ಎಂದು ಮುಷ್ಕರ ವಾಪಸ್ ಪಡೆಯುತ್ತಿರುವುದಾಗಿ ಸಂಜೆ ಘೋಷಿಸಿದ್ದರು. ಆದರೆ, ರಾತ್ರಿ ನಡೆದ ನಾಟಕೀಯ ಬೆಳವಣಿಗೆಯಲ್ಲಿ …
Read More »ಅನೈತಿಕ ಸಂಬಂಧ ; ಬೆಳಗಾವಿಯಲ್ಲಿ ಇಬ್ಬರು ಏಕಕಾಲಕ್ಕೆ ನೇಣಿಗೆ ಶರಣು
ಬೆಳಗಾವಿ : ಅನೈತಿಕ ಸಂಬಂಧ ಹೊಂದಿದ್ದವರಿಗೆ ಮನೆಯವರು ಹೇಳಿದ ಬುದ್ಧಿವಾದದಿಂದ ಬೇಸರಗೊಂಡು ಏಕಕಾಲಕ್ಕೆ ಇಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಮೀಪದ ಬೆನ್ನಾಳಿ ಗ್ರಾಮದಲ್ಲಿ ಭಾನುವಾರ ಸಂಜೆ ನಡೆದಿದೆ. ಶಿವಾಜಿ ಗಾಡಿವಡ್ಡರ್ (31), ಜಯಶ್ರೀ ಗಾಡಿವಡ್ಡರ್ (35) ಆತ್ಮಹತ್ಯೆಗೆ ಶರಣಾದವರು. ಶಿವಾಜಿ ಜೋಗ್ಯಾನಟ್ಟಿ ಸಮೀಪದಲ್ಲಿ ಮರವೊಂದಕ್ಕೆ ನೇಣು ಬಿಗಿದುಕೊಂಡಿದ್ದು, ಜಯಶ್ರೀ ಎಂಬ ಮಹಿಳೆ ಮನೆಯಲ್ಲಿ ನೇಣು ಬಿಗಿದುಕೊಂಡಿದ್ದಾರೆ. ಇಬ್ಬರು ಅಕ್ಕಪಕ್ಕದ ಮನೆಯವರಾಗಿದ್ದು, ಅನೈತಿಕ ಸಂಬಂಧ ಹೊಂದಿದ್ದರು. ಈ ವಿಷಯ ಮನೆಯವರಿಗೆ ಗೊತ್ತಾಗಿದೆ. …
Read More »ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, B.S.Y.ಸರ್ಕಾರಕ್ಕೆ ಮೊದಲ ಸ್ಥಾನ: ಸತೀಶ್ ಜಾರಕಿಹೊಳಿ
ಸವದತ್ತಿ: ‘ ದೇಶದಲ್ಲಿ ಭ್ರಷ್ಟಾಚಾರ ನಡೆದಿರುವ ಬಗ್ಗೆ ಸರ್ವೇಯಾಗಿದ್ದು, ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಸರ್ಕಾರಕ್ಕೆ ಮೊದಲ ಸ್ಥಾನ ಇದೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ಇಲ್ಲಿನ ಒಡೆಯರ ಕಲ್ಯಾಣ ಮಂಟಪದಲ್ಲಿ ಭಾನುವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆ ಹಾಗೂ ಗ್ರಾಮ ಪಂಚಾಯಿತಿ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು. ‘ ಪಕ್ಷವೆಂದ್ರೆ ಗುಂಪುಗಾರಿಕೆ ಎನ್ನುವುದು ಸಹಜ. ಸವದತ್ತಿ ಅಷ್ಟೇ ಅಲ್ಲ, ನಮ್ಮ ಪಕ್ಷದಲ್ಲಿಯೂ ಇದೆ, ಎಲ್ಲ ಪಕ್ಷದಲ್ಲಿಯೂ …
Read More »ಉಪವಾಸ ಸತ್ಯಾಗ್ರಹ ಆರಂಭಿಸಿ ಸಾರಿಗೆ ನೌಕರರು..!
ಬೆಂಗಳೂರು, ಡಿ.13- ಸರ್ಕಾರ ಹಾಗೂ ಸಾರಿಗೆ ನೌಕರರ ನಡುವೆ ಒಮ್ಮತ ಮೂಡದ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಇಂದಿನಿಂದ ರಾಜ್ಯಾದ್ಯಂತ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ.ಇತ್ತ ಸರ್ಕಾರ ಮುಷ್ಕರ ನಿರತರ ಮನವೊಲಿಕೆಯ ಪ್ರಯತ್ನ ಮುಂದುವರೆಸಿದ್ದು , ಕಾರ್ಯ ಸಾಧು ಬೇಡಿಕೆಗಳ ಈಡೇರಿಕೆಗೆ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದೆ. ಮುಷ್ಕರದಿಂದ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆ ತಪ್ಪಿಸುವ ನಿಟ್ಟಿನಲ್ಲಿ ಸರ್ಕಾರ ಸಾರಿಗೆ ನಿಗಮಗಳ ಕಾರ್ಮಿಕ ಮುಖಂಡರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮುಷ್ಕರವನ್ನು ಅಂತ್ಯಗೊಳಿಸುವ …
Read More »ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆ
ಚೆನ್ನೈ: ಸಿಬಿಐ ವಶದಲ್ಲಿದ್ದ 45 ಕೋಟಿ ರೂ ಮೌಲ್ಯದ 103 ಕೆಜಿ ಚಿನ್ನ ಕಾಣೆಯಾಗಿದೆ. ಈ ಕುರಿತು ತನಿಖೆ ನಡೆಸುವಂತೆ ಮದ್ರಾಸ್ ಹೈಕೋರ್ಟ್ ತಮಿಳುನಾಡು ಅಪರಾಧ ಇಲಾಖೆಗೆ ಆದೇಶ ನೀಡಿದೆ. 2012ರಲ್ಲಿ ಸಿಬಿಐ ಚೆನ್ನೈನ ಸುರಾನಾ ಕಾರ್ಪೊರೇಶನ್ ಲಿಮಿಟೆಡ್ ಕಚೇರಿಯ ಮೇಲೆ ದಾಳಿ ನಡೆಸಿ 103 ಕೆಜಿ ಚಿನ್ನವನ್ನು ವಶಪಡಿಸಿಕೊಂಡಿತ್ತು. ಆದರೀಗ ಈ ಚಿನ್ನ ನಾಪತ್ತೆಯಾಗಿದೆ ಎಂದು ತಿಳಿದುಬಂದಿದೆ. ಈ ಹಿನ್ನೆಲೆಯಲ್ಲಿ ಮದ್ರಾಸ್ ಹೈಕೋರ್ಟ್ ನ್ಯಾ.ಮಹದೇವನ್ ತನಿಖೆಗೆ ಆದೇಶ ನೀಡಿದ್ದಾರೆ.
Read More »ಎಲ್ಲ ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ರಕ್ತ ಸೌಲಭ್ಯ:ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ.
ಮುಂಬೈ: ಎಲ್ಲ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಉಚಿತವಾಗಿ ರಕ್ತವನ್ನು ಒದಗಿಸುವ ಸೌಲಭ್ಯವನ್ನು ಜಾರಿಗೆ ತರಲು ಮಹಾರಾಷ್ಟ್ರ ಸರ್ಕಾರದ ಆರೋಗ್ಯ ಇಲಾಖೆ ಶುಕ್ರವಾರ ಅಧಿಸೂಚನೆ ಹೊರಡಿಸಿದೆ. ಮಹಾರಾಷ್ಟ್ರದಲ್ಲಿ ಕೋವಿಡ್ ಸಾಂಕ್ರಾಮಿಕ ರೋಗದ ಪರಿಸ್ಥಿತಿ ಮುಂದುವರೆದಿರುವಂತೆ ಸರ್ಕಾರ ಈ ಅಧಿಸೂಚನೆ ಹೊರಡಿಸಿದೆ. ಇಂದಿನಿಂದಲೇ ಈ ಸೇವೆ ಸಾರ್ವಜನಿಕರಿಗೆ ದೊರೆಯಲಿದೆ. ಡಿಸೆಂಬರ್ 12 ರಿಂದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ರಕ್ತವಾಗಿ ದೊರೆಯುವಂತೆ ಮಾಡಲಾಗುತ್ತಿದೆ ಎಂದು ಗುರುವಾರ ಆರೋಗ್ಯ ಸಚಿವ …
Read More »