ಕೆಡಿಪಿ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ಅವರು ನೀಡಿದ ಸೂಚನೆಯ ಮೇರೆಗೆ ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಿ ಆದೇಶ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ತಿಳಿಸಿದ್ದಾರೆ. ಬೈಲಹೊಂಗಲ ಸಾರ್ವಜನಿಕ ಆಸ್ಪತ್ರೆಯಲ್ಲಿ ಸರ್ಜನ್ ಇಲ್ಲದಿರುವ ಸಂಗತಿ ಇಂದು ನಡೆದ ಕೆಡಿಪಿ ಸಭೆಯಲ್ಲಿ ತಮ್ಮ ಗಮನಕ್ಕೆ ಬಂದಾಗ ಕೂಡಲೇ ವೈದ್ಯರನ್ನು ನಿಯೋಜಿಸುವಂತೆ ಸಚಿವರು ತಿಳಿಸಿದ್ದರು. ಆ ಪ್ರಕಾರ ಕೆಲವೇ ಗಂಟೆಗಳಲ್ಲಿ ಬೈಲಹೊಂಗಲ ಆಸ್ಪತ್ರೆಗೆ ವೈದ್ಯರನ್ನು ನಿಯೋಜಿಸಲಾಗಿರುತ್ತದೆ. ಜನರಲ್ …
Read More »ಅಶ್ಲೀಲ ವೀಡಿಯೋದಲ್ಲಿ ಇದ್ದಾಳೆ ಎನ್ನಲಾದ ಕಾಂಗ್ರೆಸ್ ಯುವ ನಾಯಕಿ ಬೆಳಗಾವಿ ಎ ಪಿ ಎಮ್ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲ
ಬೆಳಗಾವಿ : ಅಶ್ಲೀಲ ವೀಡಿಯೋದಲ್ಲಿ ಇದ್ದಾಳೆ ಎನ್ನಲಾದ ಕಾಂಗ್ರೆಸ್ ಯುವ ನಾಯಕಿ ಹಾಗೂ ಚನ್ನಪಟ್ಟಣ ಮೂಲದ ಯುವತಿ ವಿರುದ್ಧ ಬೆಳಗಾವಿ ಎ ಪಿ ಎಮ್ ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತನಗೆ ಮಾನಸಿಕ ಚಿತ್ರಹಿಂಸೆ, ಸುಳ್ಳು ಕೇಸ್ ನೀಡಿ ಮಾನನಷ್ಟ ಮಾಡಿ ಜೈಲಿಗೆ ಕಳುಹಿಸುವುದಾಗಿ ಜಾಗೂ ಜೀವ ಬೆದರಿಕೆ ಹಾಕುತ್ತಿರುವುದಾಗಿ ಬೆಳಗಾವಿಯ ತೋಟಗಾರಿಕೆ ಇಲಾಖೆ ಅಧಿಕಾರಿ ರಾಜಕುಮಾರ ಟಾಕಳೆ ಎಂಬುವವರು ದೂರು ದಾಖಲಾಗಿದೆ. ಕಾಂಗ್ರೆಸ್ ಮುಖಂಡೆ ಚನ್ನಪಟ್ಟಣದ …
Read More »ಜೋಗದಲ್ಲಿ ಮತ್ತದೇ ಜನ ಸಾಗರ; ಕೈ ಚೆಲ್ಲಿದ ಪೊಲೀಸರು!
ಸಾಗರ: ಒಂದೆಡೆ ಜೋಗದ ಮೈಸೂರು ಬಂಗ್ಲೋ ಪ್ರದೇಶದಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕೆಲಸಗಳು ಹಾಗೂ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದ ಪ್ರವಾಸಿಗರ ಕಾರಣ ತಾಲೂಕಿನ ಜಗತ್ಪ್ರಸಿದ್ಧ ಜೋಗದಲ್ಲಿ ನಿಯಂತ್ರಣ ವ್ಯವಸ್ಥೆ ಸಂಪೂರ್ಣವಾಗಿ ಪೊಲೀಸರ ಕೈಯಿಂದ ಜಾರಿದ ಘಟನೆಗೆ ಭಾನುವಾರ ಸಾಕ್ಷಿಯಾಯಿತು. 10 ಸಾವಿರಕ್ಕೂ ಹೆಚ್ಚು ಜನ ಭೇಟಿ ಇತ್ತ ಹಿನ್ನೆಲೆಯಲ್ಲಿ ಕಾಮಗಾರಿ ನಡೆದಿರುವ ಗೇಟ್ ಒಳಗಿನ ಪ್ರದೇಶದಲ್ಲಿ ಪಾರ್ಕಿಂಗ್ ರದ್ದುಗೊಳಿಸಲಾಗಿತ್ತು. ಹಾಗಾಗಿ ಜನ ರಸ್ತೆಯ ಪಕ್ಕದಲ್ಲಿಯೇ ವಾಹನಗಳನ್ನು ನಿಲ್ಲಿಸಿದ್ದರಿಂದ ಟ್ರಾಫಿಕ್ ಜ್ಯಾಮ್ ಸಾಮಾನ್ಯವಾಗಿತ್ತು. …
Read More »ಬಿಎಸ್ ವೈ ಜೊತೆ ಜಿಲ್ಲಾ ಪ್ರವಾಸಕ್ಕೆ ಮುಂದಾದ ಸಿಎಂ ಬೊಮ್ಮಾಯಿ
ಬೆಂಗಳೂರು: ರಾಜ್ಯ ಸರ್ಕಾರದ ಸಾಧನಾ ಸಮಾವೇಶಗಳ ಬಗ್ಗೆ ಬಿಜೆಪಿ ಚಿಂತನಾ ಸಭೆಯಲ್ಲಿ ಚರ್ಚೆ ಹಿನ್ನೆಲೆಯಲ್ಲಿ ಬಿ.ಎಸ್.ಯಡಿಯೂರಪ್ಪ ಜತೆಗೆ ಸಿಎಂ ಬಸವರಾಜ್ ಬೊಮ್ಮಾಯಿ ಜಿಲ್ಲಾ ಪ್ರವಾಸ ನಡೆಸಲು ನಿರ್ಧರಿಸಿದ್ದಾರೆ. ಜುಲೈ 21ಕ್ಕೆ ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಸಿಎಂ ಯಡಿಯೂರಪ್ಪ ಮಂಡ್ಯ ಜಿಲ್ಲಾ ಪ್ರವಾಸ ನಡೆಸಲಿದ್ದಾರೆ. ಮಂಡ್ಯದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಿಎಂ ಬೊಮ್ಮಾಯಿ ಚಾಲನೆ ನೀಡಲಿದ್ದಾರೆ. ಕೆ.ಆರ್. ಪೇಟೆಯಲ್ಲಿ 1500 ಕೋಟಿ ರೂ. ವೆಚ್ಚದ ಕಾಮಗಾರಿಗಳಿಗೆ ಚಾಲನೆ …
Read More »ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿ
ಬೆಳಗಾವಿ: ಬೆಳಗಾವಿಯಲ್ಲಿ ಭಾರೀ ಮಳೆಯಾಗಿದ್ದು, ಕಳೆದ ಎರಡು ವಾರಗಳಿಂದ ಸುರಿದ ನಿರಂತರ ಮಳೆಗೆ ಜಿಲ್ಲೆಯ ಜನ ತತ್ತರಿಸಿದ್ದಾರೆ. ಜೂನ್ 1ರಿಂದ ಜುಲೈ 18ರವರೆಗೆ ಸುರಿದ ಮಳೆಯಲ್ಲಿ 775 ಮನೆಗಳಿಗೆ ಹಾನಿಯಾಗಿದ್ದು, ಜಿಲ್ಲೆಯಲ್ಲಿ ಮೂರು ಮನೆಗಳು ಸಂಪೂರ್ಣ ನೆಲಸಮವಾಗಿದೆ. ಸವದತ್ತಿಯಲ್ಲಿ 191, ಬೈಲಹೊಂಗಲದಲ್ಲಿ 112, ಕಿತ್ತೂರಿನಲ್ಲಿ 99, ರಾಮದುರ್ಗದಲ್ಲಿ 92, ಚಿಕ್ಕೋಡಿಯಲ್ಲಿ 89, ಬೆಳಗಾವಿಯಲ್ಲಿ 42 ಮನೆಗಳಿಗೆ ಮಳೆಯಿಂದ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಮಾಹಿತಿ ನೀಡಿದ್ದು, ಮಳೆ …
Read More »LOC ಮೆಹಂದಾರ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ.
ಜಮ್ಮು ಮತ್ತು ಕಾಶ್ಮೀರ(ಜು.18): ಆಕಸ್ಮಿಕವಾಗಿ ಗ್ರೆನೇಡ್ಸ ಸ್ಫೋಟಗೊಂಡ ಕಾರಣ ಗಡಿ ರಕ್ಷಣಾ ಕರ್ತವ್ಯದಲ್ಲಿ ನಿರತರಾಗಿದ್ದ ಭಾರತೀಯ ಸೇನಯ ಕ್ಯಾಪ್ಟನ್ ಹಾಗೂ ಕಿರಿಯ ಕಮಿಷನ್ಡ್ ಆಫೀಸರ್ ನಿಧನರಾಗಿದ್ದಾರೆ. ಜಮ್ಮ ಮತ್ತು ಕಾಶ್ಮೀರದ ಪೂಂಚ್ ವಲಯದಲ್ಲಿ ಈ ಘಟನೆ ನಡೆದಿದೆ. LOC ಮೆಹಂದಾರ್ನಲ್ಲಿ ಕರ್ತವ್ಯದಲ್ಲಿದ್ದ ವೇಳೆ ಅಚಾನಕ್ಕಾಗಿ ಗ್ರೆನೇಡ್ ಕೆಳಕ್ಕೆ ಬಿದ್ದು ಸ್ಫೋಟಗೊಂಡಿದೆ. ಪರಿಣಾಮ ಕ್ಯಾಪ್ಟನ್ ಆನಂದ್ ಹಾಗೂ ನೈಬ್ ಸುಬೇದಾರ್ ಭಗವಾನ್ ಸಿಂಗ್ ಮೃತಪಟ್ಟಿದ್ದಾರೆ. ಮೆಹಂದಾರ್ ಸೆಕ್ಟರ್ನಲ್ಲಿ ಸೇನಾ ಟ್ರೋಪ್ನೊಂದಿಗೆ ಕಾರ್ಯನಿರ್ವಹಿಸುತ್ತಿದ್ದ …
Read More »ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ
ಬಿಬಿಎಂಪಿ ಚುನಾವಣೆ ಹತ್ತಿರವಾಗುತ್ತಿದ್ದಂತೆ ಸಿಎಂ ಬಲು ಚುರುಕಾಗಿದ್ದಾರೆ. ಸಿಲಿಕಾನ್ ಸಿಟಿಯ ಗದ್ದುಗೆ ಏರಲು ಬಿಜೆಪಿ ತಾಲೀಮು ನಡೆಸುತ್ತಿದೆ. ರಾಜಧಾನಿಯಲ್ಲಿ ಸಿಎಂ ಮಿಂಚಿನ ಸಂಚಾರ ನಡೆಸಿದರು. ಮಹಾಲಕ್ಷ್ಮಿ ಲೇಔಟ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಲೋಕಾರ್ಪಣೆ ಹಾಗೂ ಶಂಕು ಸ್ಥಾಪನೆ ನೆರವೇರಿಸಿದರು. ರಾಜ್ಕುಮಾರ್ ರಸ್ತೆಯ ಮೈಸೂರು ಸ್ಯಾಂಡಲ್ ಸೋಪ್ ಫ್ಯಾಕ್ಟರಿ ವೃತ್ತದಲ್ಲಿ ಬಸವಧಾಮ ಉದ್ಯಾನವನದಲ್ಲಿ ಸ್ಥಾಪಿಸಲಾಗಿರುವ ಬಸವಣ್ಣ ಪುತ್ಥಳಿಯನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಲೋಕಾರ್ಪಣೆ ಮಾಡಿದರು. ಸಿದ್ಧಗಂಗಾ ಮಠದ …
Read More »ಈಗ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ
ಬೆಂಗಳೂರು : ನಾಡಿನ ಸೆರೆ ಹಕ್ಕಿಗಳಿಗೆ ಲಭ್ಯವಾಗುವ ರಾಜಾತಿಥ್ಯ ಸೇರಿದಂತೆ ಕಾರಾಗೃಹಗಳಲ್ಲಿ ಕಾನೂನು ಬಾಹಿರ ಕೃತ್ಯಗಳಿಗೆ ಕಡಿವಾಣ ಹಾಕಲು ಮುಂದಾಗಿರುವ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆಗಳ ಇಲಾಖೆ, ಈಗ ಹಿರಿಯ ಪೊಲೀಸ್ ಅಧಿಕಾರಿಗಳ ನೇತೃತ್ವದಲ್ಲಿ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿ ‘ಭದ್ರತಾ ಉಸ್ತುವಾರಿ ಸಮಿತಿ’ಗಳನ್ನು ರಚಿಸಿದೆ. ಈ ಸಮಿತಿ ನಿಯಮಿತವಾಗಿ ಕಾರಾಗೃಹಗಳಿಗೆ ಭೇಟಿ ನೀಡಿ ಪರಿಶೀಲಿಸಲಿದ್ದು, ಆ ವೇಳೆ ಜೈಲುಗಳಲ್ಲಿ ಅಕ್ರಮ ಚಟುವಟಿಕೆಗಳು ಪತ್ತೆಯಾದರೆ ಕೂಡಲೇ ತಪ್ಪಿತಸ್ಥ ಅಧಿಕಾರಿ ಮತ್ತು …
Read More »ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ
ಮೂಡಲಗಿ: ವಡೇರಹಟ್ಟಿ ಗ್ರಾಮದಲ್ಲಿ ಶ್ರೀ ಚಂದ್ರಮ್ಮ ದೇವಿ ಸಮುದಾಯ ಭವನವನ್ನು ಯುವ ನಾಯಕ ಸರ್ವೋತ್ತಮ ಜಾರಕಿಹೊಳಿ ಅವರು ಉದ್ಘಾಟಿಸಿದರು. ನಂತರ ಮಾತನಾಡಿದ ಅವರು ಶಾಸಕರ ವಿಶೇಷ ಅನುದಾನ ಅಡಿಯಲ್ಲಿ ನಿರ್ಮಿಸಲಾದ ನೂತನ ಸಮುದಾಯ ಭವನವನ್ನು ಎಲ್ಲರೂ ಸದುಪಯೋಗ ಪಡೆದುಕೊಳ್ಳಿ ಎಂದರು.ನಾವು ಸದಾ ನಿಮ್ಮ ಸೇವೆಗೆ ಸಿದ್ಧ, ನಾವು ನಿಮ್ಮ ಕುಟುಂಬದವರೇ ಕ್ಷೇತ್ರದಲ್ಲಿ ಯಾವುದೇ ಕಾರ್ಯ ಇದ್ದರೂ ನಿಮ್ಮೊಂದಿಗೆ ಇರುತ್ತೇವೆ ಎಂದರು.ನಂತರ ಗ್ರಾಮದ ಹಿರಿಯರು ಯುವ ನಾಯಕ …
Read More »ರಾಜ್ಯ ರೈತರಿಗೆ ಮತ್ತೊಂದು ಗುಡ್ ನ್ಯೂಸ್.
ಬೆಂಗಳೂರು: ಪ್ರಾಣಿಗಳ ರಕ್ಷಣೆಗಾಗಿ ಜುಲೈ 19ರಂದು ಬೆಳಗಾವಿ ಜಿಲ್ಲೆಗೆ 82 ‘ಪಶು ಸಂಜೀವಿನಿ’ ಆಂಬ್ಯುಲೆನ್ಸ್ ಗಳನ್ನು ಲೋಕಾರ್ಪಣೆ ಮಾಡಲಾಗವುದು ಎಂದು ಪಶುಸಂಗೋಪನಾ ಸಚಿವ ಪ್ರಭು ಚೌಹಾಣ್ ಭಾನುವಾರ ಹೇಳಿದ್ದಾರೆ. ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಪಶುಸಂಗೋಪನಾ ಇಲಾಖೆಯು ಕಲ್ಯಾಣ ಕರ್ನಾಟಕದಲ್ಲಿ ರಾಜ್ಯ ಸರ್ಕಾರದ ಅನುದಾನದಲ್ಲಿ 15 ಪಶು ಸಂಜೀವಿನಿ ಆಂಬ್ಯುಲೆನ್ಸ್ಗಳನ್ನು ಪ್ರಾರಂಭಿಸಿತು. ಇತರ ಪ್ರಾಣಿಗಳು ಸೇರಿದಂತೆ ಹಸುಗಳು, ಎತ್ತು, ಎಮ್ಮೆಗಳಂತಹ ಪ್ರಾಣಿಗಳಿಗೆ ಸೂಕ್ತ ಆರೋಗ್ಯ ಸೇವೆಗಳನ್ನು ಒದಗಿಸಲು ಈ …
Read More »
Laxmi News 24×7