Breaking News

Uncategorized

ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಆಪರೇಷನ್ ಕಮಲ ಆರಂಭ ಸಾಹುಕಾರರ ಹೊಸ ಪ್ಲಾನ್ ಏನು ಗೊತ್ತಾ?

ಬೆಳಗಾವಿ: ಸಚಿವ ರಮೇಶ್ ಜಾರಕಿಹೊಳಿ ಮತ್ತು ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ನಡುವೆ ಮತ್ತೊಂದು ಸುತ್ತಿನ ಫೈಟ್ ಆರಂಭವಾಗಿದೆ. ಬಿಜೆಪಿಗೆ ಸೇರ್ಪಡೆಯಾಗಿ ಗೆದ್ದು ಬಂದ ದಿನವೇ ಲಕ್ಷ್ಮಿ ಹೆಬ್ಬಾಳ್ಕರ್ ಅವರನ್ನ ಸೋಲಿಸುವುದೇ ನನ್ನ ಗುರಿ ಅಂತ ರಮೇಶ್ ಜಾರಕಿಹೊಳಿ ಶಪಥ ಮಾಡಿದ್ದರು. ವಿಧಾನಸಭೆ ಸಾರ್ವತ್ರಿಕ ಚುನಾವಣೆಗೆ ಇನ್ನೂ ಸಾಕಷ್ಟು ಸಮಯವಿದ್ದು ಆದ್ರೆ ರಮೇಶ್ ಜಾರಕಿಹೊಳಿ ಮಾತ್ರ ಈಗಲೇ ಅಖಾಡಕ್ಕಿಳಿದಿದ್ದಾರೆ. ಬೆಳಗಾವಿ ಜಿಲ್ಲಾ ರಾಜಕಾರಣದಲ್ಲಿ ಸದ್ಯ ಆಪರೇಷನ್ ಕಮಲ ಆರಂಭವಾಗಿದೆ. ಸಚಿವ …

Read More »

ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ.

ಸಿಡ್ನಿ: ಟೀಂ ಇಂಡಿಯಾದ ವಿಕೆಟ್‌ ಕೀಪರ್‌ ಕೆಎಲ್‌ ರಾಹುಲ್‌ ಅವರಿಗೆ ಆಸ್ಟ್ರೇಲಿಯಾದ ಆರಂಭಿಕ ಆಟಗಾರ ಆರನ್‌ ಫಿಂಚ್‌ ಅವರು ಕೈಯಿಂದ ಪಂಚ್‌ ಮಾಡಿದ್ದಾರೆ. ಎರಡನೇ ಪಂದ್ಯದಲ್ಲಿ ನವದೀಪ್‌ ಸೈನಿ 12ನೇ ಓವರ್‌ ಬೌಲ್‌ ಮಾಡುತ್ತಿದ್ದರು. ಗಂಟೆಗೆ 146 ಕಿ.ಮೀ ವೇಗದಲ್ಲಿ ಎಸೆದ 5ನೇ ಎಸೆತವನ್ನು ಹೊಡೆಯಲು ಫಿಂಚ್‌ ಪ್ರಯತ್ನ ಪಟ್ಟಿದ್ದರು. ಆದರೆ ಬಾಲ್‌ ಬ್ಯಾಟ್‌ಗೆ ಸಿಗದೇ ಹೊಟ್ಟೆಗೆ ಬಡಿಯಿತು. ಫುಲ್‌ ಟಾಸ್‌ ಆಗಿದ್ದ ಕಾರಣ ಅಂಪೈರ್‌ ನೋಬಾಲ್‌ ನೀಡಿದರು. ಬಳಿಕ …

Read More »

ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ: ಅಂಜಲಿ ನಿಂಬಾಳ್ಕರ್

ಧಾರವಾಡ : ಮರಾಠ ಸಮುದಾಯಕ್ಕೆ ‘ 2ಎ ‘ ಮೀಸಲಾತಿ ನೀಡಬೇಕು. ಇಲ್ಲದಿದ್ರೆ ಬೆಳಗಾವಿ ಉಪಚುನಾವಣೆ ಅಷ್ಟೇ ಅಲ್ಲ ಮುಂದಿನ ಎಲ್ಲ ಚುನಾವಣೆಗಳನ್ನು ಬಹಿಷ್ಕರಿಸುತ್ತೇವೆ ಎಂದು ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್ ಎಚ್ಚರಿಸಿದ್ದಾರೆ. ಧಾರವಾಡದ ಮರಾಠ ಕ್ರಾಂತಿ ಮೋರ್ಚಾ ಸಭೆಯಲ್ಲಿ ಮಾತನಾಡಿದ ಅವರು, ನಮಗೆ ಮರಾಠ ಪ್ರಾಧಿಕಾರ ಬೇಡ, ಅಷ್ಟೊಂದು ಮರಾಠರ ಮೇಲೆ ಬಿ.ಎಸ್.ಯಡಿಯೂರಪ್ಪ ನವರಿಗೆ  ಕಾಳಜಿ ಇದ್ದರೆ. ‘2ಎ’ ಗೆ ಸೇರಿಸಿ ಎಂದು ಆಗ್ರಹಿಸಿದ್ದಾರೆ. 7 ದಿನಗಳಲ್ಲಿ ಮರಾಠ …

Read More »

ಹೊರಗಡೆ ಗಣೇಶನ ಚಿತ್ರ, ಒಳಗಡೆ 16 ಲಕ್ಷದ ಕೆನಡಾ ಡ್ರಗ್ಸ್ –

ಆನೇಕಲ್: ಕೆನಡಾದಿಂದ ಲೈಸರ್ಜಿಕ್ ಡೈಥಲಾಮೈಡ್ (ಎಲ್‍ಎಸ್‍ಡಿ) ಡ್ರಗ್ಸ್ ತರಿಸಿದ್ದ ಖಾಸಗಿ ಆಸ್ಪತ್ರೆ ಸಿಬ್ಬಂದಿಯೋರ್ವನನ್ನು ಸಿಸಿಬಿ ಪೊಲೀಸರು ಬಂಧಿಸಿ ಹೆಬ್ಬಗೋಡಿ ಪೊಲೀಸರಿಗೆ ಒಪ್ಪಿಸಿದ್ದಾರೆ. ಆರೋಪಿಯನ್ನು ಅರುಣ್ ಆಂತೋಣಿ(22) ಎಂದು ಗುರುತಿಸಲಾಗಿದೆ. ಈತ ಮೂಲತಃ ಕೇರಳದ ಪೆರಂಬಾಡಿ ಚೇರಾ ಹೌಸ್‍ನ ಕೊಟ್ಟಾಯಂ ನಿವಾಸಿಯಾಗಿದ್ದಾನೆ. ಆನೇಕಲ್ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 7ರ ಬೊಮ್ಮಸಂದ್ರದ ನಾರಾಯಣ ಹೆಲ್ತ್ ಸಿಟಿಯಲ್ಲಿನ ಸ್ಪರ್ಶ ಆಸ್ಪತ್ರೆಯ ಎಕ್ಸ್-ರೇ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದನು.   ಕೆನಡಾದಲ್ಲಿ ಸಿಗುವ ಎಲ್‍ಎಸ್‍ಡಿ ಡ್ರಗ್ಸ್ ಅನ್ನು …

Read More »

ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್  ಮೇಲೆ ಮುತ್ತಿಗೆ ಹಾಕಲು ಯತ್ನ

ಬಳ್ಳಾರಿ :  ವಿಜಯನಗರ ಜಿಲ್ಲೆಯ ರಚನೆ ವಿರೋಧಿಸಿ ಹೋರಾಟ ನಡೆಸುತ್ತಿರುವ ಹೋರಾಟಗಾರರು  ಡಿಸಿಎಂ ಲಕ್ಷ್ಮಣ ಸವದಿ ಹಾಗೂ ಸಚಿವ ಆನಂದ ಸಿಂಗ್  ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ನಡೆದಿದೆ. ವೈಯಕ್ತಿಕ ಹಿತಾಸಕ್ತಿಗಾಗಿ ಸಚಿವ ಆನಂದ ಸಿಂಗ್ ಜಿಲ್ಲೆಯನ್ನು ವಿಭಜಿಸುತ್ತಿದ್ದಾರೆ. ಅವರ ಬಳ್ಳಾರಿಗೆ ಬಂದರೆ ಮುತ್ತಿಗೆ ಹಾಕುತ್ತೇವೆಂದು ಪ್ರತಿಭಟನಾಕಾರರು ಹೇಳಿದ್ದರು. ಅದೇ ರೀತಿ ಇಂದು ಸ್ವರಾಜ್ಯ ಕಾರ್ಯಕ್ರಮಕ್ಕೆ ಜಿಲ್ಲೆಗೆ ಆಗಮಿಸಿದ ಸಚಿವ ಹಾಗೂ ಡಿಸಿಎಂ ಮೇಲೆ ಮುತ್ತಿಗೆ ಹಾಕಲು ಯತ್ನಿಸಿದ್ದರು. …

Read More »

ಕುರ್ಣಿವಾಡಿ ಗ್ರಾಮಕ್ಕೆ ಬೆಳಕು ನೀಡಿದ ಶಾಸಕ ಸತೀಶ ಜಾರಕಿಹೊಳಿ, ಹಲವಾರು ಮುಖಂಡರು ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆ

ಯಮಕನಮರಡಿ: ಯಮಕನಮರಡಿ ವಿಧಾನ ಸಭಾ ಮತ ಕ್ಷೇತ್ರದ ಮೋದಗಾ ಗ್ರಾಮದಲ್ಲಿ ಬಿಜೆಪಿಯ ಹಲವಾರು ಮುಖಂಡರು ಇಂದು‌ ಅಧಿಕೃತವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ನೇತೃತ್ವದಲ್ಲಿ ಕಾಂಗ್ರಸ್ ಸೇರ್ಪಡೆಗೊಂಡರು. ದಡ್ಡಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಮೋದಗಾ ಗ್ರಾಮದಲ್ಲಿ ಶನಿವಾರದಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಶಾಸಕ ಸತೀಶ ಜಾರಕಿಹೊಳಿ‌ ಅವರ ಅಭಿವೃದ್ಧಿ ಕಾರ್ಯಗಳನ್ನು ಮತ್ತು ಅವರ ಸಾಮಾಜಿಕ‌ ಕಳಕಳಿ ಮತ್ತು ಕ್ಷೇತ್ರದ ವಿವಿಧ ರಂಗಗಳಲ್ಲಿ ಕಳೆದ ಒಂದು ದಶಕಗಳಿಂದ ಮಾಡಿದ ಸಾಧನೆಗಳನ್ನು ಮೆಚ್ಚಿ …

Read More »

ಕರ್ತವ್ಯ ಲೋಪ ಆರೋಪದಡಿ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆ ಅಮಾನತು{ಗಾಂಜಾ ಕೇಸ್‍ನಲ್ಲಿ ಫಿಟ್ ಮಾಡೋದಾಗಿ ಸ್ಥಳೀಯರಿಗೆ ಬೆದರಿಕೆ}

ಚಿಕ್ಕಮಗಳೂರು: ಕರ್ತವ್ಯ ಲೋಪ ಆರೋಪದಡಿ ಜಿಲ್ಲೆಯಲ್ಲಿ ಓರ್ವ ಪೊಲೀಸ್ ಸಬ್‍ ಇನ್‍ಸ್ಪೆಕ್ಟರ್ ಹಾಗೂ ಏಳು ಜನ ಪೇದೆಗಳನ್ನು ಅಮಾನತು ಮಾಡಲಾಗಿದೆ. ಈ ಕುರಿತು ಹಿರಿಯ ಪೊಲೀಸ್ ಅಧಿಕಾರಿಗಳು ಮಾಹಿತಿ ನೀಡಿದ್ದು, ನಗರದ ಬಸವನಹಳ್ಳಿ ಪೊಲೀಸ್ ಠಾಣೆಯ ಪಿಎಸ್‍ಐ ಸುಖೇತ್ ಸೇರಿದಂತೆ ಯುವರಾಜ್, ಲಕ್ಷ್ಮಣ್, ಪ್ರದೀಪ್ ಎಂಬ ಮೂವರು ಪೇದೆಗಳನ್ನ ಅಮಾನತು ಮಾಡಲಾಗಿದೆ. ಮತ್ತೊಂದು ಪ್ರಕರಣದಲ್ಲೂ ಕರ್ತವ್ಯ ಲೋಪ ಆರೋದಡಿಯೇ ತಾಲೂಕಿನ ಆಲ್ದೂರು ಪೊಲೀಸ್ ಠಾಣೆಯ ಪೇದೆಗಳಾದ ಶಶಿಧರ್, ಸ್ವಾಮಿ, ಅರುಣ್ …

Read More »

ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ

ಕೊಪ್ಪಳ: ಮಚ್ಚಿನಿಂದ ಕೊಚ್ಚಿ ಪಾಪಿ ಪತಿ ತನ್ನ ಪತ್ನಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ. ಜಿಲ್ಲೆಯ ಯಲಬುರ್ಗಾ ತಾಲೂಕಿನ ಮುರಡಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಆರೋಪಿ ಯಲ್ಲಪ್ಪ ಪತ್ನಿ ರೇಣುಕಾ (32)ಳನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ್ದಾನೆ. ಪತಿ ಮತ್ತು ಪತ್ನಿ ರೇಣುಕಾ ಒಳಜಗಳವೇ ಕೊಲೆಗೆ ಕಾರಣ ಎನ್ನಲಾಗಿದ್ದು, ಕೆಲವು ತಿಂಗಳ ಹಿಂದೆ ಪತಿ-ಪತ್ನಿ ಇಬ್ಬರೂ ಜಗಳವಾಡಿಕೊಂಡಿದ್ದರು. ಬಳಿಕ ಯಲ್ಲಪ್ಪನ ಕಿರಿಕಿರಿಗೆ ಬೇಸತ್ತು ರೇಣುಕಾ ತವರು ಮನೆ …

Read More »

ಭಾರತದಲ್ಲಿ ಕೊರೊನಾ ವೈರಸ್‌ ಸೃಷ್ಟಿಯಾಗಿದೆ ಚೀನಾದ ಮೊಂಡುವಾದ

ಬೀಜಿಂಗ್‌: ಇಡೀ ವಿಶ್ವಕ್ಕೆ ಕೊರೊನಾ ಹಬ್ಬಿಸಿ, ಸುಳ್ಳು ಮಾಹಿತಿಗಳನ್ನು ನೀಡಿದ್ದ ಚೀನಾ ಈಗ ಕೊರೊನಾ ವಿಚಾರದಲ್ಲಿ ಅತಿ ದೊಡ್ಡ ಸುಳ್ಳು ಹೇಳಿ ನಗೆಪಾಟಲಿಗೆ ಗುರಿಯಾಗಿದೆ. ಕೊರೊನಾ ವೈರಸ್‌ ಚೀನಾದಲ್ಲಿ ಸೃಷ್ಟಿಯಾಗಿಲ್ಲ. ಈ ವೈರಸ್‌ನ ಮೂಲ ಭಾರತ ಎಂದು ಹೇಳಿ ತನ್ನ ಮೇಲೆ ಬಂದಿದ್ದ ಕಳಂಕವನ್ನು ತೊಳೆಯಲು ಮತ್ತೊಂದು ಸುಳ್ಳು ಹೇಳಿದೆ. 2019ರ ಬೇಸಿಗೆಯಲ್ಲಿ ಪ್ರಾಣಿಗಳಿಂದ ಮನುಷ್ಯರಿಗೆ ಅಶುದ್ಧ ನೀರಿನ ಮೂಲಕ ಮೊದಲು ವೈರಸ್‌ ಹರಡಿದೆ. ಈ ವೈರಸ್‌ ಹೇಗೋ ವುಹಾನ್‌ …

Read More »

ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‍ವೈ ವಿರುದ್ಧ ಆರೋಪ

ಬೆಂಗಳೂರು: ಲಿಂಗಾಯತ ಸಮುದಾಯವನ್ನು ಒಬಿಸಿಗೆ ಸೇರಿಸಿ ಎಂದು ಕೇಳುವುದರಲ್ಲಿ ತಪ್ಪಿಲ್ಲ. ಸಂವಿಧಾನದ 334ನೇ ವಿಧಿಯಲ್ಲೇ ಇದನ್ನು ತಿಳಿಸಲಾಗಿದೆ. ಆದರೆ, ಯಡಿಯೂರಪ್ಪ ಕುರ್ಚಿ ಉಳಿಸಿಕೊಳ್ಳಲು ಇಂತಹ ತಂತ್ರ ಮಾಡುತ್ತಿದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಸಿಎಂ ಬಿಎಸ್‍ವೈ ವಿರುದ್ಧ ಆರೋಪ ಮಾಡಿದ್ದಾರೆ. ತಮ್ಮ ನಿವಾಸದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಒಬಿಸಿ ಪಟ್ಟಿಗೆ ಸೇರ್ಪಡೆ ಮಾಡಲು ಶಾಶ್ವತ ಹಿಂದುಳಿದ ವರ್ಗಗಳ ಆಯೋಗ ಅಧ್ಯಯನ ನಡೆಸಿ ವರದಿ ನೀಡಬೇಕು. ಪಟ್ಟಿಗೆ ಸೇರಿಸುವ, ರದ್ದು …

Read More »