Breaking News

Uncategorized

ಚನ್ನಮ್ಮನ ಸಮಾಧಿ ರಾಷ್ಟ್ರೀಯ ಸ್ಮಾರಕವಾಗಲಿ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಬೈಲಹೊಂಗಲ (ದೊಡ್ಡಬಾವೆಪ್ಪ ವೇದಿಕೆ): ‘ಪ್ರತಿ ವರ್ಷ ಬೈಲಹೊಂಗಲದಲ್ಲಿ ಉತ್ಸವ ನಡೆಯಬೇಕು. ಚನ್ನಮ್ಮನ ಸಮಾಧಿ ಸ್ಥಳ ರಾಷ್ಟ್ರೀಯ ಸ್ಮಾರಕ ಮಾಡಲು ಸರ್ಕಾರಗಳು ಶ್ರಮಿಸಬೇಕು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಮಹಾಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದರು.   ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮ ಸಮಾಧಿ ಸ್ಥಳದಲ್ಲಿ ಕಿತ್ತೂರು ಚನ್ನಮ್ಮನ ವಿಜಯೋತ್ಸವದ 200ನೇ ವರ್ಷಾಚರಣೆ ಅಂಗವಾಗಿ ಸೋಮವಾರ ನಡೆದ ಬೈಲಹೊಂಗಲ ಉತ್ಸವ-2024ರ ಸಮಾರಂಭದ ಸಾನ್ನಿಧ್ಯವಹಿಸಿ ಅವರು ಮಾತನಾಡಿದರು. ಸಮಾರಂಭ ಉದ್ಘಾಟಿಸಿದ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, …

Read More »

ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ: ಕೇಸ್ ದಾಖಲಿಸಲು ‘ಸಚಿವ ಈಶ್ವರ್ ಖಂಡ್ರೆ’ ಸೂಚನೆ

ಬೆಂಗಳೂರು: ನಗರದ ಪೀಣ್ಯ ಬಳಿಯ ಹೆಚ್ ಎಂ ಟಿಯ ಅರಣ್ಯ ಭೂಮಿಯಲ್ಲಿ ಸ್ಯಾಂಡಲ್ ವುಡ್ ನ TAXIC ಚಿತ್ರದ ಚಿತ್ರೀಕರಣಕ್ಕಾಗಿ ಮರಗಳ ಮಾರಣಹೋಮ ಮಾಡಲಾಗಿದೆ. ಹೀಗೆ ಮಾಡಿದವರ ವಿರುದ್ಧ ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಸೂಚಿಸಿದ್ದಾರೆ.   ಇಂದು ಈ ಸಂಬಂಧ ಅರಣ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯವರಿಗೆ ಪತ್ರ ಬರೆದಿದ್ದು,ಬೆಂಗಳೂರು ಪೀಣ್ಯ ಪ್ಲಾಂಟೇಷನ್ 1 ಮತ್ತು 2ರಲ್ಲಿ ಒಟ್ಟು 599 ಎಕರೆ …

Read More »

ದ್ರಾಕ್ಷಿ ಮತ್ತೆ ಹುಳಿಯಾಗುವ ಆತಂಕ- ನಷ್ಟ ಅನುಭವಿಸುವ ಭೀತಿ

ತೆಲಸಂಗ: ಬೆಳಗಾವಿ ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಗಳಲ್ಲಿ ಒಂದಾಗಿರುವ ದ್ರಾಕ್ಷಿಗೆ ಈಗ ದಾವನಿ ಹಾಗೂ ಕೊಳೆರೋಗ ಆವರಿಸಿದೆ. ತೆಲಸಂಗ, ಬನ್ನೂರ, ಕನ್ನಾಳ ಸೇರಿದಂತೆ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು ಪ್ರಸಕ್ತ ವರ್ಷವೂ ನಷ್ಟ ಅನುಭವಿಸುವ ಭೀತಿಯಲ್ಲಿದ್ದಾರೆ.   ರಾಜ್ಯದಲ್ಲಿಯೇ ದ್ರಾಕ್ಷಿ ಬೆಳೆಯುವಲ್ಲಿ 2ನೇ ಸ್ಥಾನದಲ್ಲಿರುವ ಅಥಣಿ ತಾಲೂಕಿನ ದ್ರಾಕ್ಷಿ ಬೆಳೆಗಾರರು, ದ್ರಾಕ್ಷಿ ಚಾಟ್ನಿ ಮಾಡುವ ಈ ಹಂತದಲ್ಲಿ ಹವಾಮಾನ ವೈಪರೀತ್ಯದಿಂದ ಮೊದಲು ತುತ್ತಿನಲ್ಲೇ ಕಲ್ಲು ಬಂದು ಆತಂಕ ಪಡುವಂತಾಗಿದೆ. ಅಥಣಿ ತಾಲೂಕಿನ …

Read More »

ನಲಪಾಡ್ ಬ್ರಿಗೇಡ್ ಅಧ್ಯಕ್ಷೆಯಿಂದ ಹನಿಟ್ರ್ಯಾಪ್: ಲೇಡಿ ಮೊಬೈಲ್‌ನಲ್ಲಿ ಸಿಕ್ತು 8 ಮಂದಿ ಖಾಸಗಿ ವಿಡಿಯೋ!

ßಬೆಂಗಳೂರು: ಕಾಂಗ್ರೆಸ್‌ ನ ಮಾಜಿ ಸಚಿವ ಮಾಲೀಕಯ್ಯ ಗುತ್ತೇದಾರ್​ ಅವರಿಗೆ ವಾಟ್ಸಪ್​ ಮೂಲಕ ವಿಡಿಯೊ ಕರೆಗಳನ್ನು ಮಾಡಿ ಅವುಗಳನ್ನು ರೆಕಾರ್ಡ್‌ ಮಾಡಿಕೊಂಡು ಹಣಕ್ಕೆ ಬ್ಲ್ಯಾಕ್​ ಮೇಲ್ ಮಾಡುತ್ತಿದ್ದ ನಲಪಾಡ್ ಬ್ರಿಗೇಡ್‌ನ ಕಲಬುರಗಿ ಘಟಕದ ಅಧ್ಯಕ್ಷೆ ಹಾಗೂ ಆಕೆಯ ಪತಿಯನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.   ಈ ಆಡಿಯೋ-ವಿಡಿಯೋ ಬಹಿರಂಗಗೊಳಿಸದಿರಲು 20 ಲಕ್ಷ ರೂಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಮಂಜುಳಾ ಪಾಟೀಲ ಹಾಗೂ ಆಕೆಯ ಪತಿ ಶಿವರಾಜ್‌ ಪಾಟೀಲರನ್ನು ಬಂಧಿಸಲಾಗಿದೆ. ಮಂಜುಳಾ ಪಾಟೀಲ್ …

Read More »

ಮೊದಲ ದೀಪಾವಳಿ ಸಡಗರ – ಅಯೋಧ್ಯೆಯಲ್ಲಿ ದೀಪಗಳ ದಾಖಲೆ.!

ಅಯೋದ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾದ ಬಳಿಕ ಇದೇ ಮೊದಲ ಬಾರಿಗೆ ದೀಪಾವಳಿ ಹಬ್ಬವನ್ನು ಆಚರಿಸಲಾಗಿದ್ದು, ರಾಮ ಜನ್ಮಭೂಮಿ ಅಯೋಧ್ಯೆಯಲ್ಲಿಯೂ ಈ ಬಾರಿ ದೀಪಾವಳಿ ಸಂಭ್ರಮ ಕಳೆಗಟ್ಟಲಿದೆ. ಹಬ್ಬದ ಪ್ರಯುಕ್ತ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಉತ್ತರ ಪ್ರದೇಶ ಸರ್ಕಾರ ಅಯೋಧ್ಯೆಯ ಸರಯೂ ನದಿಯ ತಟದಲ್ಲಿ ಬರೋಬ್ಬರಿ 28 ಲಕ್ಷ ಪರಿಸರ ಸ್ನೇಹಿ ಹಣತೆಗಳಲ್ಲಿ ದೀಪ ಹಚ್ಚುವ ಮೂಲಕ ಹೊಸ ದಾಖಲೆ ಬರೆಯುವ ಗುರಿಯನ್ನು ಹೊಂದಿದೆ.   ವಿಶೇಷ ಎಂದರೆ, ರಾಮಮಂದಿರದಲ್ಲಿ …

Read More »

ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ದೀಪಾವಳಿಯ ವೇಳೆ ರಾಜ್ಯದಲ್ಲಿ ಪರಿಸರ ಸ್ನೇಹಿ ಹಸುರು ಪಟಾಕಿಗಳ ಮಾರಾಟಕ್ಕೆ ಮಾತ್ರ ಅವಕಾಶ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಹೇಳಿದ್ದಾರೆ. ರಾಜ್ಯದಲ್ಲಿ ಪಟಾಕಿಗಳಿಂದ ಯಾವುದೇ ಹಾನಿ, ಗಾಯ ಅಥವಾ ಸಾವು ಸಂಭವಿಸಬಾರದು ಎಂದು ಅವರು ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗಿನ ಸಭೆಯಲ್ಲಿ ಒತ್ತಿ ಹೇಳಿದ್ದಾರೆ.   “ದೀಪಾವಳಿ ಸಮೀಪಿಸುತ್ತಿದ್ದು, ಯಾವ ರೀತಿಯ ಪಟಾಕಿಗಳನ್ನು ಸಿಡಿಸಬೇಕು ಎಂಬುದಕ್ಕೆ ಸುಪ್ರೀಂ ಕೋರ್ಟ್ ಮಾರ್ಗಸೂಚಿ ನೀಡಿದೆ. ಹಸುರು ಪಟಾಕಿಗಳನ್ನು ಮಾತ್ರ ಮಾರಾಟ ಮಾಡಬೇಕು …

Read More »

ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳಿಂದ ಹಲ್ಲೆ

ಬೆಂಗಳೂರು: ಕ್ಷುಲ್ಲಕ ಕಾರಣಕ್ಕೆ ಬಿಎಂಟಿಸಿ ಕಂಡಕ್ಟರ್ ಮೇಲೆ ಕಿಡಿಗೇಡಿಗಳು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಟ್ಯಾನರಿ ರಸ್ತೆಯಲ್ಲಿ ನಿನ್ನೆ ಸಂಜೆ ನಡೆದಿದೆ. ಕುಡಿದ ಮತ್ತಿನಲ್ಲಿ ಕಂಡಕ್ಟರ್ ಶಿವಕುಮಾರ್ ಅವರ ಮೇಲೆ ಕಿಡಿಗೇಡಿಗಳು ಹಲ್ಲೆ ಮಾಡಿದ್ದಾರೆ. ಸಣ್ಣ ವಿಚಾರಕ್ಕೆ ಬಸ್ ಚಾಲಕ ಗಗನ್ ಮತ್ತು ಸವಾರನ ನಡುವೆ ಗಲಾಟೆ ನಡೆದಿದ್ದು, ಈ ವೇಳೆ ಸವಾರನಿಗೆ ಬಿಎಂಟಿಸಿ ಕಂಡಕ್ಟರ್ ಶಿವಕುಮಾರ್ ಬೈದಾಡಿದ್ದಾರೆ.   ಇದನ್ನು ಕೇಳಿಸಿಕೊಂಡ ಕಿಡಿಗೇಡಿಗಳು ಬಸ್ ಅಡ್ಡಗಟ್ಟಿ ಕಂಡಕ್ಟರ್ ನನ್ನು ರಸ್ತೆಗೆ …

Read More »

ದೀಪಾವಳಿಗೆ KSRTCಯಿಂದ 2000 ಹೆಚ್ಚುವರಿ ವಿಶೇಷ ಬಸ್, ಎಲ್ಲಿಂದ ಎಲ್ಲಿಗೆ…

ಬೆಂಗಳೂರು, ಅಕ್ಟೋಬರ್ 27: ಬೆಳಕಿನ ಹಬ್ಬ ದೀಪಾವಳಿ ಹಬ್ಬದಾಚರಣೆಗೆ ರಾಜ್ಯಾದ್ಯಂತ ಭರ್ಜರಿ ತಯಾರಿ ನಡೆದಿದೆ. ಹಬ್ಬಕ್ಕೆ ಉದ್ಯೋಗ ಸ್ಥಳದಿಂದ ತಮ್ಮೂರಿಗೆ ತೆರಳುವವರಿಗೆ ಅನುಕೂಲವಾಗಲೆಂದು ಕರ್ನಾಕಟ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಹೆಚ್ಚುವರಿ ವಿಶೇಷ ಬಸ್‌ಗಳನ್ನು ಓಡಿಸಲು ತೀರ್ಮಾನಿಸಿದೆ. ಹಾಗಾದರೆ ಯಾವ ದಿನಾಂಕದಂದು ಬಸ್‌ಗಳ ಲಭ್ಯತೆ, ಎಲ್ಲಿಂದ ಎಲ್ಲಿಗೆ ಸಂಚರಿಸಲಿವೆ ಎಂಬ ಪೂರ್ಣ ಮಾಹಿತಿ ಇಲ್ಲಿದೆ. ಇದೇ ಅಕ್ಟೊಬರ್ 31 ರಂದು ನರಕ ಚತುರ್ದಶಿ ಇದೆ. ಮರದುನ ನವೆಂಬರ್ 01ಕ್ಕೆ …

Read More »

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬ ಆಚರಣೆ* ಗೋಕಾಕ : ತಾಲೂಕಿನ ಹಿರೇನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಹುಟ್ಟು ಹಬ್ಬವನ್ನು ಆಚರಿಸಿದ್ದಾರೆ. ಸಿಬ್ಬಂದಿಗಳೊಂದಿಗೆ ಕೇಕ್ ಕತ್ತರಿಸುವ ಮೂಲಕ ಯುವ ನಾಯಕ ಸಂತೋಷ ಜಾರಕಿಹೊಳಿ ಅವರು ಹುಟ್ಟು ಹಬ್ಬವನ್ನು ಆಚರಿಸಿಕೊಂಡರು. ಈ ಸಂದರ್ಭದಲ್ಲಿ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯ ಸಿಬ್ಬಂದಿಗಳು, ಊರಿನ ಮುಖಂಡರು …

Read More »

ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ

ಉಡುಪಿ: ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಅಜೆಕಾರಿನಲ್ಲಿ ಪತ್ನಿ ತನ್ನ ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಘಟನೆ ಇತ್ತೀಚೆಗೆ ಸಂಭವಿಸಿದೆ. ಬಾಲಕೃಷ್ಣ (44) ಮೃತ ವ್ಯಕ್ತಿ. ಇವರು 25 ದಿನಗಳಿಂದ ಜ್ವರ ವಾಂತಿ ಸಹಿತ ಅನಾರೋಗ್ಯದಿಂದ ಬಳಲುತ್ತಿದ್ದರು. ಕಾಮಾಲೆ ರೋಗ ಇರಬಹುದು ಎಂದು ಕಾರ್ಕಳದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಮಣಿಪಾಲ ಕೆಎಂಸಿ, ಬೆಂಗಳೂರಿನ ನಿಮಾನ್ಸ್, ವಿಕ್ಟೋರಿಯಾ ಮಂಗಳೂರಿನ ವೆಲ್ಲಾಕ್ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೆ …

Read More »