Breaking News

Uncategorized

ವೈದ್ಯರೇ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಬಿಳಿ ಕೋಟು ಧರಿಸಲಿದ್ದಾರೆ ಗಣೇಶ್

ವೈದ್ಯರಿಗೂ ಸಿನಿಮಾಕ್ಕೂ ಎತ್ತಣಿಂದೆತ್ತ ಸಂಬಂಧ?! ಎನ್ನುವಂತಿಲ್ಲ, ಏಕೆಂದರೆ ವೈದ್ಯರಿಬ್ಬರು ಸೇರಿ ನಿರ್ಮಿಸುತ್ತಿರುವ ಸಿನಿಮಾದಲ್ಲಿ ಕನ್ನಡದ ಸ್ಟಾರ್ ನಟರಲ್ಲೊಬ್ಬರಾದ ಗಣೇಶ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. 25 ವರ್ಷ ವೈದ್ಯೆಯಾಗಿ ಸೇವೆ ಸಲ್ಲಿಸಿರುವ ಶಶಿಕಲಾ ಪುಟ್ಟಸ್ವಾಮಿ ನಿರ್ದೇಶಿಸುತ್ತಿರುವ ಮತ್ತೊಬ್ಬ ವೈದ್ಯ ಶೈಲೇಶ್ ನಿರ್ಮಾಣ ಮಾಡುತ್ತಿರುವ ಸಿನಿಮಾದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ಅವರದ್ದು ವೈದ್ಯನ ಪಾತ್ರ. 25 ವರ್ಷಗಳ ಹಿಂದೆ ಶಶಿಕಲಾ ಹಾಗೂ ಶೈಲೇಶ್ ಒಟ್ಟಿಗೆ ವೈದ್ಯಕೀಯ ಶಿಕ್ಷಣವನ್ನು ಪಡೆದವರು. …

Read More »

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಇಂದು ಕಾಂಗ್ರೆಸ್​ನಿಂದ ರಾಜಭವನ ಚಲೋ ರ್‍ಯಾಲಿ

ಬೆಂಗಳೂರು; ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನ ವಿರೋಧಿಸಿ ಇಂದು ಕಾಂಗ್ರೆಸ್ ವತಿಯಿಂದ ರಾಜಭವನ ಚಲೋ ರ್ಯಾಲಿ ನಡೆಯಲಿದೆ. ಕಾಂಗ್ರೆಸ್ ರ್ಯಾಲಿ ಹಿನ್ನೆಲೆಯಲ್ಲಿ ನಗರದ ಹೃದಯ ಭಾಗ ಮೆಜೆಸ್ಟಿಕ್ ಸುತ್ತಮುತ್ತ ಸಂಚಾರ ದಟ್ಟಣೆ ಹೆಚ್ಚುವ ಸಾಧ್ಯತೆ ಇದೆ. ಬೆಂಗಳೂರಿನ ಹೃದಯ ಭಾಗ ಸ್ತಬ್ಧವಾಗುವ ಸಾಧ್ಯತೆ ದಟ್ಟವಾಗಿದೆ. ಹೀಗಾಗಿ ಜನರು ಇಂದು ರಸ್ತೆಗಿಳಿಯುವ ಮುನ್ನ ಎಚ್ಚರ ವಹಿಸಬೇಕಿದೆ. ಇಂದು ಬೆಳಗ್ಗೆ 10 ಗಂಟೆಗೆ ಕಾಂಗ್ರೆಸ್ ರ್ಯಾಲಿ ಮೆಜೆಸ್ಟಿಕ್​ನ ಕೆಎಸ್‌ಆರ್ ರೈಲು ನಿಲ್ದಾಣದಿಂದ ಆರಂಭವಾಗಲಿದೆ. …

Read More »

ಉತ್ತಮ ಸಂಸದೀಯ ಪಟು ಗುರುತಿಸಲು ಸಮಿತಿ ರಚನೆ

ಬೆಂಗಳೂರು : ರಾಜ್ಯ ವಿಧಾನಸಭೆಯ ಸದಸ್ಯರೊಬ್ಬರಿಗೆ ಪ್ರತಿ ವರ್ಷ ಅತ್ಯುತ್ತಮ ಸಂಸದೀಯ ಪಟು ಅಥವಾ ಅತ್ಯುತ್ತಮ ಶಾಸಕ ಎಂಬ ಪ್ರಶಸ್ತಿ ನೀಡಲು ವಿಧಾನಸಭಾಧ್ಯಕ್ಷರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯನ್ನು ರಚನೆ ಮಾಡಲಾಗಿದೆ. ಸಮಿತಿಯಲ್ಲಿ ಉಪಸಭಾಧ್ಯಕ್ಷರು, ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕರು, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವರು, ಸಭಾಧ್ಯಕ್ಷರು ನಾಮ ನಿರ್ದೇಶನ ಮಾಡುವ ಒಬ್ಬರು ಸದಸ್ಯರಾಗಿ ರುತ್ತಾರೆ. ಸಮಿತಿಯ ಶಿಫಾರಸ್ಸಿನ ಮೇಲೆ ಪ್ರಶಸ್ತಿಗೆ ಆಯ್ಕೆಯಾದ ಶಾಸಕರ ಒಪ್ಪಿಗೆಯನ್ನು ಪಡೆಯಬೇಕು. ಒಬ್ಬ ಶಾಸಕರಿಗೆ …

Read More »

ಗಣರಾಜ್ಯೋತ್ಸವ ಪರೇಡ್‌ಗೆ ಮೊದಲ ಮಹಿಳಾ ಫೈಟರ್‌ ಪೈಲಟ್‌!

ಹೊಸದಿಲ್ಲಿ: ಗಣರಾಜ್ಯೋತ್ಸವ ಪರೇಡ್‌ನ‌ಲ್ಲಿ ಪಾಲ್ಗೊಳ್ಳುತ್ತಿರುವ “ಪ್ರಪ್ರಥಮ ಮಹಿಳಾ ಫೈಟರ್‌ ಪೈಲಟ್‌’ ಎಂಬ ಹೆಗ್ಗಳಿಕೆಗೆ ಫ್ಲೈಟ್‌ ಲೆಫ್ಟಿನೆಂಟ್‌ ಭಾವನಾ ಕಾಂತ್‌ ಪಾತ್ರರಾಗಿದ್ದಾರೆ. ಜ. 26ರಂದು ಐಎಎಫ್ನ ಟ್ಯಾಬ್ಲೊ ಜತೆ ಅವರು ಸಂಚರಿಸಲಿದ್ದಾರೆ. ಹಗುರ ಯುದ್ಧವಿಮಾನ, ಹಗುರ ಯುದ್ಧ ಹೆಲಿಕಾಪ್ಟರ್‌ ಮತ್ತು ಸುಖೋಯ್‌-30 ಯುದ್ಧ ವಿಮಾನಗಳ ಅಣಕು ಸ್ತಬ್ಧಚಿತ್ರದೊಂದಿಗೆ ಭಾವನಾ ಪರೇಡ್‌ ನಡೆಸಲಿದ್ದಾರೆ. ಪ್ರಸ್ತುತ ಇವರು ರಾಜಸ್ಥಾನದ ವಾಯುನೆಲೆಯೊಂದರಲ್ಲಿ ಮಿಗ್‌-21 ಬೈಸನ್‌ ಫೈಟರ್‌ ಪ್ಲೇನ್‌ಗೆ ಪೈಲಟ್‌. 2016ರಲ್ಲಿ ವಾಯುಪಡೆಗೆ ಆಯ್ಕೆಯಾದ “ಮೊದಲ ಫೈಟರ್‌ …

Read More »

ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ.:ರಾಖಿ ಸಾವಂತ್

ಮುಂಬೈ: ನನಗೆ ಅಭಿನವ್ ಶುಕ್ಲಾ ಸ್ಪರ್ಮ್ ದಾನ ಕೊಡಲಿ. ಬಿಗ್‍ಬಾಸ್ ಮನೆಯಿಂದ ಹೊರ ಹೋದ ಬಳಿಕ ಈ ಬಗ್ಗೆ ಮಾತನಾಡುತ್ತೇನೆ ಎಂದು ಬಾಲಿವುಡ್ ನಟಿ ರಾಖಿ ಸಾವಂತ್ ಹೇಳಿದ್ದಾರೆ. ಈ ಬಾರಿ ಬಿಗ್‍ಬಾಸ್ ಮನೆಗೆ ರಾಖಿ ಸಾವಂತ್ ಎಂಟ್ರಿ ನೀಡಿದಾಗಿನಿಂದ ಶೋಗೆ ಹೊಸ ಲುಕ್ ಬಂದಿದೆ. ರಾಖಿಯ ಜಗಳ, ಫನ್ನಿ ಮಾತುಗಳು, ಡ್ಯಾನ್ಸ್ ನೋಡುಗರನ್ನ ಸೆಳೆಯುವಲ್ಲಿ ಯಶಸ್ವಿಯಾಗಿವೆ. ವಾಹಿನಿ ಸಹ ರಾಖಿಯ ಮಾತುಗಳನ್ನ ಕೇಂದ್ರಿಕರಿಸಿ ಸಂಚಿಕೆಯ ಪ್ರೋಮೋಗಳನ್ನ ಸೋಶಿಯಲ್ ಮೀಡಿಯಾದಲ್ಲಿ …

Read More »

ಉದ್ಧವ್​ ಠಾಕ್ರೆ ಬೆಳಗಾವಿಗೆ ಕಾಲಿಟ್ಟು ನೋಡಲಿ; ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡು ಕೂತಿಲ್ಲ; ಶಾಸಕ ಶರಣಬಸ್ಸಪ್ಪಗೌಡ ಎಚ್ಚರಿಕೆ

ಯಾದಗಿರಿ(ಜ.19): ಮಹಾರಾಷ್ಟ್ರ ಸಿಎಂ ಉದ್ದವ್ ಠಾಕ್ರೆ ಹೇಳಿಕೆಗೆ ಶಾಸಕ ಶರಣಬಸ್ಸಪ್ಪಗೌಡ ದರ್ಶನಾಪುರ ಅವರು ಸವಾಲ್ ಹಾಕಿದ್ದಾರೆ. ಉದ್ದವ್ ಠಾಕ್ರೆ ಕರ್ನಾಟಕಕ್ಕೆ  ಬಂದು, ಬೆಳಗಾವಿಯಲ್ಲಿ ಒಂದಿಂಚು ಜಾಗ ತೆಗೆದುಕೊಂಡು ನೋಡಲಿ,  ಸಿಎಂ ಉದ್ದವ್ ಠಾಕ್ರೆ ಅವರು ಮಹಾರಾಷ್ಟ್ರದಿಂದ ಜನರನ್ನು ಕರೆದುಕೊಂಡು ಬರಲಿ ಎಂದು ಸವಾಲು ಹಾಕಿದ್ದಾರೆ. ಕನ್ನಡಿಗರೇನು ಕೈಗೆ ಬಳೆ ತೊಟ್ಟುಕೊಂಡಿಲ್ಲ‌.ಕನ್ನಡಿಗರು ಸುಮ್ಮನೆ ಇದ್ದರೆ ಸುಮ್ಮನೆ ಇರುತ್ತೇವೆ. ನಮಗೆ ತೊಂದರೆ ಕೊಟ್ಟರೆ ನಾವೇನು ಮಾಡುತ್ತೀವಿ ಅಂತ ಇತಿಹಾಸ ತಿಳಿಸುತ್ತದೆ ಎಂದರು. ಮುಖ್ಯಮಂತ್ರಿ …

Read More »

ಕನ್ನಡಿಗರ ತಾಳ್ಮೆ ಕೆಣಕಿದ ಸಚಿವೆ ಶಶಿಕಲಾ ಜೊಲ್ಲೆ ವಿರುದ್ಧ ಆಕ್ರೋಶ

ಬೆಳಗಾವಿ,ಜ.19-ಸಮಾಜ ಸೇವೆಯ ಹೆಸರೇಳಿಕೊಂಡು ಬಿಜೆಪಿ ಸೇರಿ ಆಕಸ್ಮಿಕವಾಗಿ ಮಂತ್ರಿ ಪದವಿ ಪಡೆದುಕೊಂಡಿರುವ ನಿಪ್ಪಾಣಿ ಶಾಸಕಿ ಶಶಿಕಲಾ ಜೊಲ್ಲೆ ಮತ್ತೊಮ್ಮೆ ಕನ್ನಡಿಗರ ತಾಳ್ಮೆ ಕೆಣಕುವ ಪ್ರಯತ್ನಕ್ಕೆ ಕೈ ಹಾಕಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ದಶಕಗಳಿಂದ ಭಾಷಾ ಮತ್ತು ಭೂಪ್ರದೇಶ ವಿಚಾರದಲ್ಲಿ ಕರ್ನಾಟಕ- ಮಹಾರಾಷ್ಟ್ರ ನಡುವೆ ಗುz್ದÁಟ ನಡೆದಿದ್ದರೂ, ತನ್ನ ಸ್ವಾರ್ಥಕ್ಕಾಗಿ ತಮಾಷೆಯ ರಾಜಕಾರಣ ಮಾಡುತ್ತಿರುವ ಜೊಲ್ಲೆ ಅವರು ತಮ್ಮ ಮರಾಠಿ ಪ್ರೇಮ ಮುಂದುವರೆಸಿದ್ದಾರೆಮಹಾರಾಷ್ಟ್ರ ಮುಖ್ಯಮಂತ್ರಿ ಕನ್ನಡ ಭಾಷೆ ಮತ್ತು ನೆಲದ ಬಗ್ಗೆ …

Read More »

IND vs AUS| ಟೀಂ ಇಂಡಿಯಾ ಸಾಧನೆ ಕೊಂಡಾಡಿದ ರಾಷ್ಟ್ರಪತಿ, ಪ್ರಧಾನಿ

ನವದೆಹಲಿ: ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್‌ ಕ್ರಿಕೆಟ್‌ ಸರಣಿ ಗೆದ್ದು ತ್ರಿವಿಕ್ರಮ ಮೆರೆದಿರುವ ಭಾರತೀಯ ಕ್ರಿಕೆಟ್‌ ತಂಡವನ್ನು ದೇಶದ ಪ್ರಮುಖರು ಹಾಡಿ ಹೊಗಳಿದ್ದಾರೆ. ಅವರ ಸಾಧನೆಯನ್ನು ಕೊಂಡಾಡಿದ್ದಾರೆ. ರಾಷ್ಟ್ರ ಹೆಮ್ಮೆ ಪಟ್ಟಿದೆ- ರಾಮನಾಥ ಕೋವಿಂದ್‌ ‘ಆಸ್ಟ್ರೇಲಿಯಾದಲ್ಲಿ ಇದು ಐತಿಹಾಸಿಕ ಕ್ರಿಕೆಟ್‌ ದಿಗ್ವಿಜಯ. ಕಠಿಣ ಟೆಸ್ಟ್ ಸರಣಿಯನ್ನು ಗೆದ್ದ ಭಾರತದ ಪ್ರತಿಭಾವಂತ ಯುವ ಕ್ರಿಕೆಟ್ ತಂಡಕ್ಕೆ ಅಭಿನಂದನೆಗಳು. ತಂಡವು ಅಸಾಧಾರಣ ಕೌಶಲ ಮತ್ತು ಸ್ಥಿತಿಸ್ಥಾಪಕತೆ ಪ್ರದರ್ಶಿಸಿದೆ. ಅವರ ಸಾಧನೆಯ ಬಗ್ಗೆ ರಾಷ್ಟ್ರ ಹೆಮ್ಮೆಪಡುತ್ತದೆ,’ …

Read More »

ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ; ಆರೋಪಿಗೆ ಐದು ವರ್ಷ ಜೈಲು ಶಿಕ್ಷೆ

ಧಾರವಾಡ: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಆರೋಪಿಗೆ ನಗರದ 2ನೇ ವಿಶೇಷ ಜಿಲ್ಲಾ ಹಾಗೂ ಪೋಕ್ಸೋ ನ್ಯಾಯಾಲಯವು 5 ವರ್ಷ ಶಿಕ್ಷೆ ಹಾಗೂ ದಂಡ ವಿಧಿಸಿ ಸೋಮವಾರ ಆದೇಶ ಹೊರಡಿಸಿದೆ. ಇಲ್ಲಿನ ಶೀಲವಂತರ ಓಣಿಯ ಮಾಬೂಲಿ ಶೇಖ್‌ ಶಿಕ್ಷೆಗೆ ಗುರಿಯಾದವ. ಈತ ಈ ಪ್ರದೇಶದ ಅಪ್ರಾಪೆ¤ಯನ್ನು 2019ರ ಮಾ.27ರಂದು ಪುಸಲಾಯಿಸಿ ಲೈಂಗಿಕ ದೌರ್ಜನ್ಯ ಎಸಗಿದ ಬಗ್ಗೆ ಶಹರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕುರಿತು ತನಿಖೆ ಮಾಡಿದ್ದ ಪೊಲೀಸರು, …

Read More »

ಮಾರ್ಚ್‌ ಮೊದಲ ವಾರದಲ್ಲಿ ಬಜೆಟ್‌: ಮುಖ್ಯಮಂತ್ರಿ ಯಡಿಯೂರಪ್ಪ

ಕುಂದಾಪುರ: ಹಣಕಾಸಿನ ಇತಿಮಿತಿಯಲ್ಲಿ ಮಾರ್ಚ್‌ ಮೊದಲ ವಾರ ಬಜೆಟ್ ಮಂಡಿಸುತ್ತೇನೆ ಎಂದು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಹೇಳಿದರು. ಕುಂಭಾಶಿಯ ಆನಗುಡ್ಡೆ ದೇವಸ್ಥಾನದಲ್ಲಿ ಮಂಗಳವಾರ ಗಣಹೋಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ‘ಎರಡು ದಿನಗಳಲ್ಲಿ ನೂತನ ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗುವುದು. ಉಡುಪಿಯ ಧಾರ್ಮಿಕ ಪ್ರವಾಸದಲ್ಲಿ ಸಕಾಲಕ್ಕೆ ಮಳೆ ಬೆಳೆಯಾಗಿ ರಾಜ್ಯ ಸಮೃದ್ಧಿಯಾಗಲಿ’ ಎಂದು ದೇವರಲ್ಲಿ ಪ್ರಾರ್ಥಿಸಿದ್ದೇನೆ ಎಂದರು. ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಶಾಸಕ ರೇಣುಕಾಚಾರ್ಯ ಜೊತೆ ಮಾತನಾಡಿದ್ದು ಖುದ್ದು ಬಂದು ಭೇಟಿಯಾಗಲಿದ್ದಾರೆ. …

Read More »