ಬ್ರಿಸ್ಬೇನ್, ಜ. 19- ಭಾರತ ತಂಡದ ಯುವ ವಿಕೆಟ್ ಕೀಪರ್ ರಿಷಭ್ಪಂತ್ ಹಾಗೂ ಶುಭಮನ್ ಗಿಲ್ರ ಕೆಚ್ಚೆದೆಯ ಆಟದಿಂದಾಗಿ ರಹಾನೆ ತಂಡವು 2-1 ರಿಂದ ಐತಿಹಾಸಿಕ ಗೆಲುವು ಸಾಧಿಸಿದೆ. ಆಸ್ಟ್ರೇಲಿಯಾ ನೀಡಿದ್ದ 328 ರನ್ಗಳ ಗುರಿಯನ್ನು ಬೆನ್ನಟ್ಟಿದ್ದ ಟೀಂ ಇಂಡಿಯಾಗೆ ನಿನ್ನೆ ಮಳೆ ಕಾಡಿತಾದರೂ ಇಂದು ದಿನಪೂರ್ತಿ ಭಾರತದ ಯುವ ಬ್ಯಾಟ್ಸ್ಮನ್ಗಳು ಆಸೀಸ್ನ ಅನುಭವಿ ಬೌಲಿಂಗ್ ಪಡೆಯನ್ನು ದಂಡಿಸುವ ಮೂಲಕ ರಹಾನೆ ತಂಡ ಕಪ್ ಅನ್ನು ತನ್ನಲ್ಲೇ ಉಳಿಸಿಕೊಂಡಿದೆ. ಇಂದು …
Read More »ವಿನೂತನ ಪ್ರಯೋಗದಿಂದ ಗಮನ ಸೆಳೆದ ನವ ದಂಪತಿಗಳು
ಮಧುರೈ: ಇತ್ತೀಚಿನ ದಿನಗಳಲ್ಲಿ ವಿವಾಹ ಸಮಾರಂಭಗಳು ಹಲವು ವಿಶೇಷತೆಗಳಿಗೆ ಸಾಕ್ಷಿಯಾಗುತ್ತಿವೆ. ಅದರಲ್ಲೂ ಕೊರೊನಾ ಕಾರಣದಿಂದಾಗಿ ವಿವಾಹಗಳಲ್ಲಿ ಹಲವು ಬದಲಾವಣೆಗಳಾಗಿರುವುದಂತು ಸುಳ್ಳಲ್ಲ. ಇಲ್ಲೊಂದು ಮದುವೆ ಸಮಾರಂಭದಲ್ಲಿ ಆಮಂತ್ರಣ ಪತ್ರಿಕೆಯಲ್ಲಿ ಗೂಗಲ್ ಪೇ ಹಾಗೂ ಫೋನ್ ಪೇ ಕ್ಯೂ ಆರ್ ಕೋಡ್ ಹಾಕಿಸಿರುವ ಪ್ರಸಂಗ ಬೆಳಕಿಗೆ ಬಂದಿದೆ. ಈ ಮೂಲಕ ವಧು-ವರರಿಗೆ ಉಡುಗೊರೆ ನೀಡ ಬಯಸುವವರು ಹಣದ ರೂಪದಲ್ಲಿ ಖಾತೆಗೆ ವರ್ಗಾಯಿಸುವಂತೆ ಮಾಡಲಾಗಿದೆ. ಇಂತದ್ದೊಂದು ವಿನೂತನ ಪ್ರಯೋಗಕ್ಕೆ ಹಲವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ವಿವಾಹ …
Read More »ಕೃಷಿ ಕಾನೂನುಗಳನ್ನು ವಿರೋಧಿಸಿ ಕಾಂಗ್ರೆಸ್ನಿಂದ ನಾಳೆ ‘ರಾಜಭವನ ಚಲೋ’ ರ್ಯಾಲಿ
ಬೆಂಗಳೂರು, ಜ.19- ಕೇಂದ್ರ ಕೃಷಿ ಕಾನೂನುಗಳನ್ನು ವಿರೋಧಿಸಿ ರೈತರು ದೆಹಲಿಯಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಬೆಂಬಲ ನೀಡಲು ಮತ್ತು ರಾಜ್ಯ, ಕೇಂದ್ರ ಸರ್ಕಾರಗಳ ವಿರೋಧಿ ನೀತಿಗಳ ವಿರುದ್ಧ ಕಾಂಗ್ರೆಸ್ ನಾಳೆ ರಾಜಭವನ ಚಲೋ ಹಮ್ಮಿಕೊಂಡಿದೆ. ಬೆಳಗ್ಗೆ 11 ಗಂಟೆಗೆ ರೈಲ್ವೆ ನಿಲ್ದಾಣದಿಂದ ಫ್ರೀಡಂಪಾರ್ಕ್ವರೆಗೂ ಪ್ರತಿಭಟನಾ ರ್ಯಾಲಿ ನಡೆಯಲಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಪ್ರತಿಪಕ್ಷದ ನಾಯಕರಾದ ಸಿದ್ದರಾಮಯ್ಯ, ಎಸ್.ಆರ್.ಪಾಟೀಲ್ ಹಾಗೂ ಇತರ ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಲಿದ್ದಾರೆ. ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆ, ಎಪಿಎಂಸಿ …
Read More »ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಮೂರು ದಿನಗಳಲ್ಲಿ 580 ಜನರಿಗೆ ಸೈಡ್ ಎಫೆಕ್ಟ್ !
ನವದೆಹಲಿ: ದೇಶಾದ್ಯಂತ ಜನವರಿ 16ರಿಂದ ಕೊರೊನಾ ಲಸಿಕೆ ನೀಡಿಕೆ ಆರಂಭವಾಗಿದ್ದು, ಮೂರು ದಿನಗಳಲ್ಲಿ 580 ಜನರಿಗೆ ಸೈಡ್ ಎಫೆಕ್ಟ್ ಆರಂಭವಾಗಿದೆ. ಸೋಮವಾರ ದೇಶಾದ್ಯಂತ 1,48,266 ಲಕ್ಷ ಆರೋಗ್ಯ ಕಾರ್ಯಕರ್ತರು ಲಸಿಕೆ ಪಡೆದಿದ್ದು, 133 ಜನರಿಗೆ ಅಡ್ಡಪರಿಣಾಮವುಂಟಾಗಿದೆ. 7 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮೂರು ದಿನಗಳಲ್ಲಿ 3,81,305 ಆರೋಗ್ಯ ಕಾರ್ಯಕರ್ತರಿಗೆ ಲಸಿಕೆ ನೀಡಲಾಗಿದ್ದು, ಈ ಪೈಕಿ 580 ಜನರಲ್ಲಿ ಅಡ್ದ ಪರಿಣಾಮ ಉಂಟಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ. ಉತ್ತರ …
Read More »ಕಳ್ಳರ ಕೈಚಳಕ, ಹಣದ ಸಮೇತ ಎಂಟಿಎಂ ಯಂತ್ರ ಮಾಯ..!
ತುಮಕೂರು,ಜ.19- ಎಂಟಿಎಂ ಕೇಂದ್ರವೊಂದಕ್ಕೆ ನುಗ್ಗಿರುವ ಕಳ್ಳರು ಹಣದ ಸಮೇತ ಎಟಿಎಂ ಯಂತ್ರವನ್ನು ಕಳವು ಮಾಡಿಕೊಂಡು ಪರಾರಿಯಾಗಿರುವ ಘಟನೆ ಗ್ರಾಮಾಂತರ ಪೊಲೀಸ್ ಠಾಣೆ ಸರಹದ್ದಿನ ಹೆಗ್ಗೆರೆಯಲ್ಲಿ ನಡೆದಿದೆ. ನಗರದ ಹೊರವಲಯದ ಹೆಗ್ಗೆರೆಯಲ್ಲಿರುವ ಇಂಡಿಯನ್ ಓವರ್ಸಿಸ್ ಬ್ಯಾಂಕ್ನ ಎಟಿಎಂ ಕೇಂದ್ರದಲ್ಲಿ ಈ ಕಳ್ಳತನ ನಡೆದಿದೆ. ಮಧ್ಯರಾತ್ರಿ ನಾಲ್ಕು ಚಕ್ರದ ವಾಹನದ ಬಂದಿರುವ ಕಳ್ಳರು ಎಟಿಎಂ ಕೇಂದ್ರಕ್ಕೆ ನುಗ್ಗಿ ಚಾಣಾಕ್ಷತನದಿಂದ ಹಣದ ಸಮೇತ ಎಟಿಎಂ ಯಂತ್ರವನ್ನು ಕದ್ದೊಯ್ದಿದ್ದಾರೆ. ಬ್ಯಾಂಕ್ ಬಳಿಯೇ ಎಟಿಎಂ ಕೇಂದ್ರ ಹಾಗೂ …
Read More »ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಗುಂಡಿನ ಸದ್ದು,ರೌಡಿ ಕಾಲಿಗೆ ಪೊಲೀಸರಿಂದ ಗುಂಡೇಟು
ಬೆಂಗಳೂರು (ಜ. 19): ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ಮತ್ತೆ ಗುಂಡಿನ ಸದ್ದು ಕೇಳಿಬಂದಿದೆ. ರೌಡಿಶೀಟರ್ ಜೊತೆ ಗುರುತಿಸಿಕೊಂಡಿದ್ದ ಆರೋಪಿಯೊಬ್ಬನ ಮೇಲೆ ಕೊಲೆ ಪ್ರಯತ್ನದ ಆರೋಪವಿತ್ತು. ಆತನನ್ನು ಬಂಧಿಸಲು ಹೋದಾಗ ಇಂದು ಮುಂಜಾನೆ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದ. ಈ ವೇಳೆ ಪೊಲೀಸರು ಆತನ ಕಾಲಿಗೆ ಗುಂಡು ಹಾರಿಸಿದ್ದಾರೆ. ಕೊಲೆಗೆ ಸಂಚು ರೂಪಿಸಿದ ಪ್ರಕರಣದ ಆರೋಪಿ 22 ವರ್ಷದ ಪ್ರವೀಣ್ ಕಾಲಿಗೆ ಪೀಣ್ಯ ಪೊಲೀಸ್ ಠಾಣೆ ಸಬ್ ಇನ್ಸ್ಪೆಕ್ಟರ್ ಮಾಯಣ್ಣ ಬಿರಾಣೆ ಗುಂಡು ಹಾರಿಸಿದ್ದಾರೆ. …
Read More »ರೈತ ಸಂಘಟನೆ – ಕೇಂದ್ರದ ನಡುವಿನ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಿಕೆ
ನವದೆಹಲಿ: ಕೇಂದ್ರ ಸರ್ಕಾರದ ಹೊಸ ಕೃಷಿ ಕಾಯ್ದೆ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ಮುಂದುವರೆದಿದ್ದು, ಇದರ ಮಧ್ಯೆ ಇಂದು ನಡೆಯಬೇಕಾಗಿದ್ದ 10ನೇ ಸುತ್ತಿನ ಮಾತುಕತೆ ನಾಳೆಗೆ ಮುಂದೂಡಲಾಗಿದೆ. . ಕೃಷಿ ಸಂಘಟನೆಗಳು ಹಾಗೂ ಕೇಂದ್ರ ಸರ್ಕಾರದ ನಡುವೆ ಈಗಾಗಲೇ ನಡೆದಿರುವ ಎಲ್ಲ ಸಭೆಗಳು ವಿಫಲಗೊಂಡಿರುವ ಕಾರಣ ಇಂದು 10ನೇ ಸುತ್ತಿನ ಮಾತುಕತೆಗೆ ದಿನ ನಿಗದಿ ಮಾಡಲಾಗಿತ್ತು. ಆದರೆ ಇದನ್ನ ನಾಳೆಗೆ ಮುಂದೂಡಿಕೆ ಮಾಡಲಾಗಿದೆ. ನಾಳೆ ಮಧ್ಯಾಹ್ನ 2 ಗಂಟೆಗೆ ದೆಹಲಿಯ …
Read More »ಮದುವೆ ಆಗಬೇಕಿದ್ದ ಯುವಕ ಮಸಣಕ್ಕೆ
ರಾಯಚೂರು: ಮದುವೆ ಆಮಂತ್ರಣ ಪತ್ರಿಕೆ ಕೊಡಲು ಬೈಕಿನಲ್ಲಿ ಹೊರಟಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಮಸ್ಕಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ. ಬೈಕ್ ಸವಾರ ಹಾಗೂ ಆತನೊಂದಿಗಿದ್ದ ಇಬ್ಬರು ಯುವತಿಯರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರನ್ನ ಮಸ್ಕಿ ತಾಲೂಕಿನ ಅಡವಿಭಾವಿ ಗ್ರಾಮದ ಅರುಣಾಕ್ಷಿ (22), ರಜಿಯಾ ಬೇಗಂ (22) ಹಾಗೂ ವಿರೇಶ್ (23) ಎಂದು ಗುರುತಿಸಲಾಗಿದೆ. ಅತೀ ವೇಗದಲ್ಲಿ ಬೈಕ್ ರೈಡ್ ಮಾಡಿದ್ದರಿಂದ ಅಪಘಾತ ಸಂಭವಿಸಿದೆ.ಮಸ್ಕಿಯಿಂದ ಲಿಂಗಸುಗೂರಿಗೆ ತೆರಳುತ್ತಿದ್ದ ವೇಳೆ ಸಾರಿಗೆ ಬಸ್ …
Read More »ರಾಜ್ಯದ 25 DYSP ಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶ
ಬೆಂಗಳೂರು – ರಾಜ್ಯದ 25 ಡವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರಕಾರ ಆದೇಶಹೊರಡಿಸಿದೆ. ರಾಜ್ಯದಲ್ಲಿ ಖಾತೆಗಳ ಮರುಹಂಚಿಕೆಯಾಗಲಿದೆ ಎನ್ನು ವ ಸುದ್ದಿಯ ಮಧ್ಯೆಯೇ ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಲಾಗಿದೆ. ವಿವರಕ್ಕಾಗಿ ಇಲ್ಲಿ ಕ್ಲಿಕ್ ಮಾಡಿ – DySP TRF 18.01.21
Read More »ಯಡಿಯೂರಪ್ಪ ಮತ್ತು ಸಿದ್ದರಾಮಯ್ಯ ಬಹಳ ಆಪ್ತರು.: ಯತ್ನಾಳ್
ಹಾವೇರಿ: ಬಿಎಸ್ ವೈ ಅವರ ಸಿಡಿ ಬಗ್ಗೆ ನಾನು ಹೇಳಿಲ್ಲ. ಆ ಬಗ್ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದರು. ಅದನ್ನು ನಾನು ಹೇಳಿದ್ದೇನೆ. ನಾನು ಶರಣರ ವಚನಗಳ ಸಿಡಿ ನೋಡುತ್ತೇನೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದರು. ಹಾವೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವಾಗ ಏನು ಬೇಕಾದರೂ ಆಗಬಹುದು. ಯಡಿಯೂರಪ್ಪ ಸಿಎಂ ಆಗಿರುವರೆಗೂ ನಾನು ಮಂತ್ರಿ ಆಗುವುದಿಲ್ಲ ಎಂದರು. ನಾನು ಸಚಿವ ಸ್ಥಾನ ಕೇಳಿಲ್ಲ. ಯಾವ್ಯಾವ ಜಿಲ್ಲೆಗೆ …
Read More »
Laxmi News 24×7