Breaking News

Uncategorized

ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷ: ಸಂಸತ್‌ ಆವರಣದಲ್ಲಿ ಚನ್ನಮ್ಮ ಸ್ಮರಣೆ

ನವದೆಹಲಿ: ವೀರ ವನಿತೆ ಕಿತ್ತೂರು ಚನ್ನಮ್ಮ ಜನ್ಮದಿನಾಚರಣೆ ಹಾಗೂ ಕಿತ್ತೂರು ವಿಜಯೋತ್ಸವಕ್ಕೆ 200 ವರ್ಷಗಳು ಸಂದ ಸಂದರ್ಭದಲ್ಲಿ ಸಂಸತ್‌ ಆವರಣದಲ್ಲಿ ಚನ್ನಮ್ಮ ಅವರ ಸಾಧನೆಯನ್ನು ಸ್ಮರಿಸಲಾಯಿತು. ಚನ್ನಮ್ಮ ಪ್ರತಿಮೆಗೆ ಲೋಕಸಭಾಧ್ಯಕ್ಷ ಓಂಬಿರ್ಲಾ, ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ, ರೈಲ್ವೆ ಖಾತೆ ರಾಜ್ಯ ಸಚಿವ ವಿ.ಸೋಮಣ್ಣ, ಕೂಡಲ ಸಂಗಮ ಮಠದ ಜಯ ಮೃತ್ಯುಂಜಯ ಸ್ವಾಮೀಜಿ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಬಿಜೆಪಿ ಶಾಸಕರಾದ ಬಸನಗೌಡ …

Read More »

ಬಹುಮಾನ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ತಂಡ

ಗೋಕಾಕ: ನಗರದ ಮಹರ್ಷಿ ವಾಲ್ಮೀಕಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿ.ಪಿ.ಎಲ್. ಕ್ರಿಕೆಟ್ ಪಂದ್ಯಾವಳಿಯಲ್ಲಿ ನಗರದ ರಾಯಲ್ ಚಾಲೆಂಜರ್ಸ್ ಗೋಕಾಕ ತಂಡ ಪ್ರಥಮ ಸ್ಥಾನ ಪಡೆಯಿತು. ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ನೀಡಿದ ₹ 75 ಸಾವಿರ ನಗದು ಬಹುಮಾನ ಗೋಕಾಕ್‌ ತಂಡಕ್ಕೆ ನೀಡಲಾಯಿತು. ರನ್ನರ್ಸ್ ಅಪ್ ಆಗಿ ಗೋಕಾಕ ರಾಯಲ್ಸ್ ತಂಡ ₹ 45 ಸಾವಿರ ನಗದು ಬಹುಮಾನ ಪಡೆಯಿತು. ಲಖನ್ ಜಾರಕಿಹೊಳಿ ಅವರ ಆಪ್ತ ಸಹಾಯಕ ಸದಾನಂದ …

Read More »

ನೇರ ನಗದು ಹಣದ ಬದಲಿಗೆ ಆಹಾರ ಕಿಟ್‌ ನೀಡಲು ಮುಂದಿನ ಕ್ಯಾಬಿನೆಟ್ ಸಭೆಯಲ್ಲಿ ಚರ್ಚೆ: ಮುನಿಯಪ್ಪ

ಬೆಂಗಳೂರು: ಡಿಬಿಟಿ ಪ್ರಾರಂಭವಾದ 2023ರ ಜುಲೈಯಿಂದ 2024ರ ಜುಲೈವರೆಗೆ 8433.11 ಕೋಟಿ ಹಣ ವರ್ಗಾವಣೆ ಮಾಡಲಾಗಿದೆ. ಡಿಬಿಟಿ ಮೂಲಕ ಪ್ರತಿಯೊಬ್ಬರಿಗೆ 170 ರೂ. ಕೊಡುತ್ತಿದ್ದೇವೆ. ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಡಿಬಿಟಿ ಹಣ ಬಾಕಿ‌ ಇದೆ. ಶೀಘ್ರವೇ ಹಣ ಖಾತೆಗೆ ವರ್ಗಾವಣೆ ಮಾಡಲಾಗುವುದು‌. ಸರ್ವರ್ ಸಮಸ್ಯೆ ಇದೆ, ಇಂದಿನಿಂದ ಆ ಸಮಸ್ಯೆ ಇರುವುದಿಲ್ಲ. ಪ್ರಸ್ತುತ ರಾಜ್ಯ ಸರ್ಕಾರದಿಂದ ಹೆಚ್ಚುವರಿಯಾಗಿ ನೀಡಬೇಕಾಗಿರುವ ಅಕ್ಕಿ ಬದಲಾಗಿ DBT ನೀಡುತ್ತಿರುವುದನ್ನು ಮುಂದುವರೆಸಲಾಗುತ್ತದೆ. ಪಡಿತರ ಚೀಟಿ ಪರಿಷ್ಕರಣೆ …

Read More »

ವರುಣನ ಅಬ್ಬರ. ಕೆರೆಯಂತಾದ ಪೊಲೀಸ್ ಠಾಣೆ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ಸೋಮವಾರ (ಅ.21) ತಡರಾತ್ರಿ ವರುಣನ ಅಬ್ಬರ ಜೋರಾಗಿದ್ದು ಠಾಣೆಯೊಳಗೆ ಅಪಾರ ಪ್ರಮಾಣದ ನೀರು ನುಗ್ಗಿ ನಾಯಕನಕಟ್ಟೆ ಪೊಲೀಸ್ ಠಾಣೆ ಕೆರೆಯಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನಾದ್ಯಂತ ಮಳೆ ಸುರಿದ ಪರಿಣಾಮ ಜನಜೀವನ ಅಸ್ತವ್ಯಸ್ತಗೊಂಡಿದೆ.   ಪೊಲೀಸ್ ಠಾಣೆಯೊಳಗೆ ನೀರು ನುಗ್ಗಿದ ಪರಿಣಾಮ ಕೆಲವು ದಾಖಲೆಗಳು ನೀರುಪಾಲಾಗಿದೆ, ಅಲ್ಲದೆ ಠಾಣೆ ಒಳಗಿನ ಲಾಕಪ್, PSI ರೂಂ, ಕಂಪ್ಯೂಟರ್‌ ರೂಮ್ ಗಳಿಗೆ ನೀರು ನುಗ್ಗಿದೆ. ಬೆಳಿಗ್ಗೆಯಿಂದ ಮಳೆ ನೀರು ಹೊರ ಹಾಕಲು …

Read More »

ಹೈಕೋರ್ಟ್‌ನಲ್ಲಿ ದರ್ಶನ್‌ ಜಾಮೀನು ಅರ್ಜಿ ವಿಚಾರಣೆ ಅಕ್ಟೋಬರ್‌ 28ಕ್ಕೆ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ(Renukaswamy Case) ಜೈಲು ಸೇರಿರುವ ನಟ ದರ್ಶನ್‌ (Darshan) ಅವರ ಜಾಮೀನು ಅರ್ಜಿ ವಿಚಾರಣೆ ಹೈಕೋರ್ಟಿನಲ್ಲಿ ಮಂಗಳವಾರ (ಅ.22ರಂದು) ನಡೆದಿದೆ. ಸಿಸಿಹೆಚ್‌ ನ್ಯಾಯಾಲಯದಲ್ಲಿ ದರ್ಶನ್‌ ಜಾಮೀನಿಗೆ ವಾದ ಮಂಡಿಸಿದ್ದ ಸಿವಿ ನಾಗೇಶ್ ಅವರೇ ಹೈಕೋರ್ಟಿನಲ್ಲಿ ವಾದವನ್ನು ಮಂಡಿಸಿದ್ದಾರೆ.   ನ್ಯಾಯಮೂರ್ತಿ ಎಸ್. ವಿಶ್ವಜಿತ್ ಶೆಟ್ಟಿ ಅವರಿರುವ ಹೈಕೋರ್ಟ್ ಪೀಠದಲ್ಲಿ ಅರ್ಜಿ ವಿಚಾರಣೆ ನಡೆಯಿತು. ದರ್ಶನ್‌ ಪರ ವಕೀಲರು, ದರ್ಶನ್‌ ಅವರ ಆರೋಗ್ಯ ವಿಚಾರವನ್ನು ನ್ಯಾಯಧೀಶರ ಮುಂದೆ ಪ್ರಸ್ತಾಪಿಸಿದ್ದಾರೆ. …

Read More »

DCM ಡಿ.ಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಕೇಸ್ : ಸುಪ್ರೀಂಕೋರ್ಟ್’ಗೆ ಅರ್ಜಿ ಸಲ್ಲಿಸಿದ CBI

ಬೆಂಗಳೂರು : ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದೆ. ಬಿಜೆಪಿ ಶಾಸಕ ಯತ್ನಾಳ್ ಬೆನ್ನಲ್ಲೇ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಸಿಬಿಐ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದು, ಅರ್ಜಿ ಸಲ್ಲಿಕೆ ಮಾಡಿದೆ ಎಂದು ತಿಳಿದು ಬಂದಿದೆ.   ಸಿಬಿಐ ತನಿಖೆಗೆ ನೀಡಿದ ಸಮ್ಮತಿಯನ್ನು ಸರ್ಕಾರ ಹಿಂಪಡೆದುಕೊಂಡಿತ್ತು. ಸಿಬಿಐ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ಕ್ರಮ ಪ್ರಶ್ನಿಸಿ ಹೈಕೋರ್ಟ್ …

Read More »

BJP; ವಯನಾಡ್ ನಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ನವ್ಯಾ ಹರಿದಾಸ್ ಕಣಕ್ಕೆ

ವಯನಾಡ್: ಕೇರಳದ ವಯನಾಡ್ ಲೋಕಸಭಾ ಉಪಚುನಾವಣೆ ಅಭ್ಯರ್ಥಿಯನ್ನಾಗಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸುವುದಾಗಿ ಬಿಜೆಪಿ ಶನಿವಾರ(ಅ19) ಘೋಷಿಸಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ವಿರುದ್ಧ ಸ್ಪರ್ಧಿಸಲಿದ್ದಾರೆ. ವಯನಾಡ್ ಮತ್ತು ರಾಯಬರೇಲಿ ಎರಡರಿಂದಲೂ ಚುನಾಯಿತರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ವಯನಾಡ್ ಕ್ಷೇತ್ರ ಬಿಟ್ಟ ಕಾರಣ ಚುನಾವಣೆ ಎದುರಾಗಿದೆ.   39 ರ ಹರೆಯದ ನವ್ಯಾ ಹರಿದಾಸ್ ಬಿಜೆಪಿ ಮಹಿಳಾ ಮೋರ್ಚಾದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಕೋಝಿಕ್ಕೋಡ್ ಕಾರ್ಪೊರೇಶನ್‌ನಲ್ಲಿ ಎರಡು …

Read More »

ಕಾರ್ಯಕರ್ತರ ಅಭಿಪ್ರಾಯದಂತೆ ಅಭ್ಯರ್ಥಿ ಆಯ್ಕೆ: ಬೆಲ್ಲದ್

ಹುಬ್ಬಳ್ಳಿ: ಶಿಗ್ಗಾವಿ ಉಪ ಚುನಾವಣೆಗೆ ಅಭ್ಯರ್ಥಿ ಆಯ್ಕೆ ಪಕ್ಷದ ನಿರ್ಧಾರವಾಗಿದೆ. ಇದಕ್ಕೂ ಪೂರ್ವ ಅಲ್ಲಿನ ನಾಯಕರ, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಅಭ್ಯರ್ಥಿ ಅಂತಿಮಗೊಳಿಸಲಾಗಿದೆ. ರಾಜ್ಯದಿಂದ ಕಳುಹಿಸಿದ ಪಟ್ಟಿಯನ್ನು ಹೈಕಮಾಂಡ್ ಪರಿಗಣಿಸಿರಬಹುದು ಎಂದು ವಿಧಾನಸಭೆ ಪ್ರತಿಪಕ್ಷ ಉಪ ನಾಯಕ ಅರವಿಂದ ಬೆಲ್ಲದ ತಿಳಿಸಿದರು.   ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೋರ್ ಕಮಿಟಿಯಲ್ಲಿ ನಾನಿಲ್ಲದ ಕಾರಣ ಅಲ್ಲಿ ಏನು ಚರ್ಚೆಯಾಗಿದೆ, ಪಟ್ಟಿಯಲ್ಲಿ ಯಾರ ಹೆಸರಿತ್ತು ಎಂಬುವುದು ಗೊತ್ತಿಲ್ಲ. ಆದರೆ ರಾಜ್ಯ ನಾಯಕರು ಕಳುಹಿಸಿರುವ …

Read More »

New Zealand ವಿರುದ್ಧ ಟೆಸ್ಟ್‌ : ಟೀಮ್ ಇಂಡಿಯಾಕ್ಕೆ ವಾಷಿಂಗ್ಟನ್ ಸುಂದರ್ ಸೇರ್ಪಡೆ

ಬೆಂಗಳೂರು: ನ್ಯೂಜಿಲ್ಯಾಂಡ್ ವಿರುದ್ಧದ ಉಳಿದ ಎರಡು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡಕ್ಕೆ ಆಲ್ ರೌಂಡರ್ ವಾಷಿಂಗ್ಟನ್ ಸುಂದರ್ ರವಿವಾರ(ಅ 20) ಸೇರ್ಪಡೆಯಾಗಿದ್ದಾರೆ. ಸರಣಿಯ ಮೊದಲ ಪಂದ್ಯದಲ್ಲಿ ನ್ಯೂಜಿಲ್ಯಾಂಡ್ ವಿರುದ್ಧ ಭಾರತ ಎಂಟು ವಿಕೆಟ್‌ಗಳಿಂದ ಹೀನಾಯವಾಗಿ ಸೋತ ಕೂಡಲೇ ಆಯ್ಕೆಗಾರರು ವಾಷಿಂಗ್ಟನ್ ಅವರನ್ನು ತಂಡಕ್ಕೆ ಸೇರಿಸಿಕೊಂಡಿದ್ದಾರೆ.   ವಾಷಿಂಗ್ಟನ್ ಸುಂದರ್ ಅವರು ಎರಡನೇ ಟೆಸ್ಟ್‌ಗೆ ಮುಂಚಿತವಾಗಿ ಪುಣೆಯಲ್ಲಿ ತಂಡದೊಂದಿಗೆ ಸೇರಿಕೊಳ್ಳುತ್ತಾರೆ” ಎಂದು ಬಿಸಿಸಿಐ ಹೇಳಿಕೆಯಲ್ಲಿ ತಿಳಿಸಿದೆ. ರಣಜಿ ಟ್ರೋಫಿ ಪಂದ್ಯದಲ್ಲಿ ದೆಹಲಿ ವಿರುದ್ಧ …

Read More »

DK ಶಿವಕುಮಾರ್ ರನ್ನು `CM’ ಮಾಡಿ ತೋರಿಸುತ್ತೇವೆ : ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಹೇಳಿಕೆ!

ಗದಗ : ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ ಎಂದು ನೊಣವಿನಕೆರೆ ಕಾಡಸಿದ್ದೇಶ್ವರ ಮಠದ ಸ್ವಾಮೀಜಿ ಮಹತ್ವದ ಹೇಳಿಕೆ ನೀಡಿದ್ದಾರೆ. ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಕಾರ್ಯಕ್ರಮದಲ್ಲಿ ಮಾತನಾಡಿದ ಕಾಡಸಿದ್ದೇಶ್ವರ ಸ್ವಾಮೀಜಿ, ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ತೋರಿಸುತ್ತೇವೆ. ಮುಕ್ತಿಮಂದಿರದಲ್ಲಿ ತ್ರಿಕೋಟಿ ಲಿಂಗ ಸ್ಥಾಪನೆ ಮಾಡಿ ಡಿ.ಕೆ. ಶಿವಕುಮಾರ್ ಅವರನ್ನು ಸಿಎಂ ಮಾಡಿ ಇದೇ ಜಾಗಕ್ಕೆ ಕರೆತಂದು ಪೂಜೆ …

Read More »