Breaking News

Uncategorized

ಅಧಿಕಾರಕ್ಕೆ ಬಂದ ಕೆಲವೇ ದಿನಗಳಲ್ಲಿ ರೈತರ ಸಾಲ ಮನ್ನಾ ಘೋಷಿಸಿದ ತ.ನಾಡು CM ವಿಜಯ್

ಚನ್ನೈ: ತಮಿಳುನಾಡಿನ ಸಣ್ಣ ಮತ್ತು ಅತಿ ಸಣ್ಣ ರೈತರು ಸಹಕಾರಿ ಬ್ಯಾಂಕ್‌ಗಳಿಂದ ಪಡೆದಿದ್ದ ₹50,000ವರೆಗಿನ ಬೆಳೆ ಸಾಲವನ್ನು ಸಂಪೂರ್ಣವಾಗಿ ಮನ್ನಾ ಮಾಡುವುದಾಗಿ ತಮಿಳುನಾಡು ಸರ್ಕಾರ ಸೋಮವಾರ ಘೋಷಿಸಿದೆ. ಈ ಮೂಲಕ ವಿಧಾನಸಭಾ ಚುನಾವಣೆ ವೇಳೆ ಟಿವಿಕೆ ಪಕ್ಷ ನೀಡಿದ್ದ ಪ್ರಮುಖ ಭರವಸೆಗಳಲ್ಲೊಂದನ್ನು ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಈಡೇರಿಸಿದ್ದಾರೆ. ಜತೆಗೆ ಇತರೆ ರೈತರಿಗೆ ತಲಾ ₹5,000ವರೆಗಿನ ಸಾಲ ಮನ್ನಾ ಸೌಲಭ್ಯವನ್ನು ಪ್ರಕಟಿಸಲಾಗಿದೆ. ಸರ್ಕಾರದ ಈ ಮಹತ್ವದ ನಿರ್ಧಾರದಿಂದಾಗಿ ರಾಜ್ಯದ ಸುಮಾರು …

Read More »

ಮಂತ್ರಾಲಯಕ್ಕೆ ಹೋಗೋ ಭಕ್ತರ ಗಮನಕ್ಕೆ, ಕರ್ನಾಟಕದ ಛತ್ರದಲ್ಲಿ ಬತ್ತಿದ ಬೋರ್‌ವೆಲ್, ನೀರಿನ ಅಭಾವಕ್ಕೆ ವಸತಿಗೃಹ ಬಂದ್!

ರಾಯಚೂರು: ಮಂತ್ರಾಲಯಕ್ಕೆ ಭೇಟಿ ನೀಡುವ ಕರ್ನಾಟಕದ ಭಕ್ತರಿಗೆ ವಸತಿ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಡಿಯಲ್ಲಿ ಸುಸಜ್ಜಿತ ಕರ್ನಾಟಕ ಛತ್ರವನ್ನು (ವಸತಿ ಗೃಹ) ನಿರ್ಮಿಸಲಾಗಿದೆ. ರಾಯರ ದರ್ಶನಕ್ಕೆ ಬರುವ ಭಕ್ತರ ಅನುಕೂಲಕ್ಕಾಗಿ ಇಲ್ಲಿ ಒಟ್ಟು 50 ಕೋಣೆಗಳ (ರೂಂ) ವ್ಯವಸ್ಥೆ ಇದೆ. ಆದರೆ, ಪ್ರಸ್ತುತ ಈ ವಸತಿ ಗೃಹದಲ್ಲಿ ತೀವ್ರ ಸ್ವರೂಪದ ನೀರಿನ ಅಭಾವ ತಲೆದೋರಿದೆ. ಛತ್ರದ ಆವರಣದಲ್ಲಿರುವ 50 ರೂಂಗಳಿಗೆ ನೀರು ಸರಬರಾಜು ಮಾಡಲು ಎರಡು …

Read More »

ಕೂಲಿ ಕಾರ್ಮಿಕರಿಗೆ ಇ ಕೆವೈಸಿ ಕಡ್ಡಾಯ ; ಸಂಗೂರ ಗ್ರಾಮದಲ್ಲಿ ತಾಪಂ ಇಒ ಡಾ.ಪರಮೇಶ ಹುಬ್ಬಳ್ಳಿ

ಹಾವೇರಿ: ತಾಲೂಕಿನ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯ ಅಡಿಯಲ್ಲಿ ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ಸಾರ್ವಜನಿಕ ಆಸ್ತಿಗಳ ಸೃಜನೆ ಮಾಡಲಾಗುತ್ತಿದೆ. ಎಲ್ಲ ಕೂಲಿಕಾರರು ಕಡ್ಡಾಯವಾಗಿ ಇ-ಕೆವೈಸಿ ಮಾಡಿಸಿಕೊಳ್ಳಿ ಎಂದು ಹಾವೇರಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಪರಮೇಶ ಹುಬ್ಬಳ್ಳಿ ಕರೆ ನೀಡಿದರು ತಾಲೂಕಿನ ಸಂಗೂರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಂಪನಕಟ್ಟಿ ಕೆರೆ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ ಮಾಡಿ, ರೋಜ್‌ಗಾರ್ ದಿನಾಚರಣೆಯಲ್ಲಿ ಭಾಗವಹಿಸಿ ಮಾತನಾಡಿದರು. ನರೇಗಾ ಯೋಜನೆಯಿಂದ …

Read More »

ರಾಮದುರ್ಗದಲ್ಲಿ ₹15 ಸಾವಿರ ಲಂಚ ಪಡೆಯುವಾಗ ಸಿಕ್ಕಿಬಿದ್ದ ಗ್ರಾಮ ಪಂಚಾಯತಿ ಅಧಿಕಾರಿ..!

ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರದ ತಾಂಡವ ಮಿತಿಮೀರಿ ನಡೆಯುತ್ತಿದೆ ಅದಕ್ಕೆ ಸಾಕ್ಷಿ ಎಂಬಂತೆ ಬೆಳಗಾವಿಯಲ್ಲಿ ಭ್ರಷ್ಟಾಚಾರ ವಿರುದ್ಧ ಲೋಕಾಯುಕ್ತ ಅಧಿಕಾರಿಗಳು ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಗ್ರಾಮ ಪಂಚಾಯತಿ ಕಾರ್ಯದರ್ಶಿಯೊಬ್ಬರು ಲಂಚ ಸ್ವೀಕರಿಸುವ ವೇಳೆ ಬಲೆಗೆ ಬಿದ್ದಿದ್ದಾರೆ. ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ನರಸಾಪೂರ ಗ್ರಾಮ ಪಂಚಾಯತಿಯಲ್ಲಿ ಈ ಘಟನೆ ನಡೆದಿದೆ. ಆಸ್ತಿ ರಜಿಸ್ಟರ್‌ನಲ್ಲಿ ಮನೆ, ಅಂಗಡಿ ಹಾಗೂ ಪಕ್ಕದ ಖಾಲಿ ಜಾಗವನ್ನು ನಮೂದಿಸಲು ₹22 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ …

Read More »

ಇಂದು ಬೆಳಿಗ್ಗೆ 11 ಗಂಟೆಗೆ ಮುಹೂರ್ತ ಫಿಕ್ಸ್ ಆಗಿದೆ; ಎಲ್ಲಾ ಗೊಂದಲ ಎಂಡ್ ಆಗುತ್ತೆ ಎಂದ ಸತೀಶ್ ಜಾರಕಿಹೊಳಿ

ರಾಜ್ಯ ಕಾಂಗ್ರೆಸ್‌ನಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ನಡುವಿನ ಕುರ್ಚಿ ಕಾಳಗದ ನಡುವೆ ಹೈಕಮಾಂಡ್ ನಾಯಕರು ಸಿಎಂ ಸಿದ್ದರಾಮಯ್ಯ ಅವರಿಗೆ ಬುಲಾವ್ ನೀಡಿದ್ದಾರೆ. ನಿನ್ನೆ ಸಂಜೆ ಸಿಎಂ ಸಿದ್ದರಾಮಯ್ಯ ದೆಹಲಿಗೆ ಪ್ರಯಾಣಿಸಲಿದ್ದು, ನಾಳೆ ಬೆಳಿಗ್ಗೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಲಿದ್ದಾರೆ. ನಾಳೆ ಕಾಂಗ್ರೆಸ್ ನಲ್ಲಿನ ಅಧಿಕಾರ ಹಂಚಿಕೆ ಗೊಂದಲ, ನಾಯಕರ ಹೇಳಿಕೆಗಳಿಗೆ ತೆರೆ ಬೀಳುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬೆಳವಣಿಗೆ …

Read More »

ಬೆಳಗಾವಿಯಲ್ಲೇ ಮುಂಗಾರು ಅಧಿವೇಶ: ಸಚಿವ ಹೆಚ್.ಕೆ. ಪಾಟೀಲ್

ರಾಜ್ಯ ಸರ್ಕಾರದ ಮುಂಬರುವ ಜಂಟಿ ಅಧಿವೇಶನವನ್ನು ಬೆಳಗಾವಿಯ ಸುವರ್ಣ ಸೌಧದಲ್ಲೇ ನಡೆಸಲಾಗುವುದು, ಈ ವಿಚಾರದಲ್ಲಿ ಸಾರ್ವಜನಿಕರಿಗೆ ಯಾವುದೇ ಗೊಂದಲ ಬೇಡ ಮತ್ತು ಸ್ಥಳ ಬದಲಾವಣೆ ಮಾಡುವ ಯಾವುದೇ ಪ್ರಸ್ತಾವನೆ ಸರ್ಕಾರದ ಮುಂದಿಲ್ಲ ಎಂದು ಕಾನೂನು, ನ್ಯಾಯ ಮತ್ತು ಸಂಸದೀಯ ವ್ಯವಹಾರಗಳ ಸಚಿವ ಹೆಚ್.ಕೆ. ಪಾಟೀಲ್ ಸ್ಪಷ್ಟಪಡಿಸಿದ್ದಾರೆ. ಗದಗದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು,ಅಧಿವೇಶನ, ಇಂಧನ ದರ ಏರಿಕೆ ಹಾಗೂ ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಸೇರಿದಂತೆ ಹಲವು ಪ್ರಮುಖ ವಿಷಯಗಳ ಕುರಿತು …

Read More »

ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಎಂಎಲ್ ಸಿ ಚನ್ನರಾಜ ಹಟ್ಟಿಹೊಳಿ

ಬೆಳಗಾವಿ ಗ್ರಾಮೀಣ ಕ್ಷೇತ್ರದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಶ್ರೀ ಕ್ಷೇತ್ರ ಉಳವಿ ಯಾತ್ರೆಯ ಕಾರ್ಯಕ್ರಮದಲ್ಲಿ ಪಾಲ್ಗೊಂಡ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಶ್ರೀ ಚನ್ನಬಸವೇಶ್ವರ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿ, ಸರ್ವರ ಹಾಗೂ ನಾಡಿನ ಉಳಿತಿಗಾಗಿ ಪ್ರಾರ್ಥನೆ ಸಲ್ಲಿಸಿದರು. ಈ ವೇಳೆ ಬೆಳಗಾವಿ ಗ್ರಾಮೀಣ ಕ್ಷೇತ್ರದ ಪ್ರಮುಖ ಮುಖಂಡರು, ಕಾರ್ಯಕರ್ತರು, ಮಹಿಳೆಯರು ಉಪಸ್ಥಿತರಿದ್ದರು.

Read More »

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ವಿರುದ್ಧ ಯೂತ್ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ಬೆಳಗಾವಿ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ  ಖಂಡಿಸಿ ಬೆಳಗಾವಿಯಲ್ಲಿ ಯೂತ್ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ ಅವರ ರಾಜೀನಾಮೆಗೆ ಆಗ್ರಹಿಸಿದರು.‌ ಇಂದು ನಗರದ ಕನ್ನಡ ಸಾಹಿತ್ಯ ಭವನದಿಂದ ಯೂತ್ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕಾರ್ತಿಕ ಪಾಟೀಲ್ ನೇತೃತ್ವದಲ್ಲಿ ಪ್ರತಿಭಟನೆ ಆರಂಭಿಸಲಾಯಿತು. ಚನ್ನಮ್ಮ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು ಬಳಿಕ ಸಂಸದ ಜಗದೀಶ್ ಶೆಟ್ಟರ್ ಕಚೇರಿಗೆ ನುಗ್ಗಲು ಯತ್ನಿಸಿದರು. ಪೊಲೀಸರು ಬ್ಯಾರಿಕೇಟ್ …

Read More »

ಸರ್ಕಾರ ನಿರ್ಮಿಸಿದ್ದ ಕನ್ನಡ ಭವನ ಖಾಸಗಿ ಸಂಸ್ಥೆಗೆ ಹಸ್ತಾಂತರ!

ಬೆಳಗಾವಿ : ಸರ್ಕಾರದ ಕೋಟ್ಯಂತರ ರೂಪಾಯಿ ಅನುದಾನದಲ್ಲಿ ನಿರ್ಮಾಣಗೊಂಡ ಬೆಳಗಾವಿಯ ಕನ್ನಡ ಭವನವನ್ನು ಖಾಸಗಿ ಸಂಘಕ್ಕೆ ಹಸ್ತಾಂತರಿಸಿದ ಗಂಭೀರ ಆರೋಪದ ಹಿನ್ನೆಲೆಯಲ್ಲಿ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್  ಅಧ್ಯಕ್ಷೆ ಮಂಗಲಾ ಮೆಟಗುಡ್ಡ ಅವರಿಗೆ ರಾಜ್ಯ ಕಸಾಪ ನೋಟೀಸ್ ಜಾರಿ ಮಾಡಿದೆ. ಬೆಳಗಾವಿಯ ಒಂಬತ್ತು ಕನ್ನಡಪರ ಸಂಘಟನೆಗಳು ನೀಡಿದ ದೂರಿನ ಮೇರೆಗೆ ರಾಜ್ಯ ಕಸಾಪ ಆಡಳಿತಾಧಿಕಾರಿ ಕೆ.ಎ. ದಯಾನಂದ ಅವರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ. ಸುಮಾರು ₹5 ಕೋಟಿ ವೆಚ್ಚದ …

Read More »

ಐತಿಹಾಸಿಕ ಬಾವಿಗೆ ಕಾಯಕಲ್ಪ

ಬೆಳಗಾವಿ: ಬೆಳಗಾವಿ ನಗರ ಹಾಗೂ ಸುತ್ತಲಿನ ಭಾಗದಲ್ಲಿರುವ ಹಳೇ ತೆರೆದ ಬಾವಿಗಳನ್ನು ಪುನರುತ್ಥಾನಗೊಳಿಸುವ ಸಂಕಲ್ಪ ಮಾಡಿರುವ ಪ್ಯಾಸ್ ಫೌಂಡೇಷನ್, ಮುತಗಾದಲ್ಲಿರುವ 200 ವರ್ಷ ಹಳೆಯ ಬಾವಿಯ ಪುನಶ್ಚೇತನಕ್ಕೆ ಚಾಲನೆ ನೀಡಿದೆ. ಕೆಎಲ್‌ಇ ಎನ್‌ಎಸ್‌ಎಸ್ ಯೂನಿಟ್‌ನ ಸ್ವಯಂ ಸೇವಕರು, ಪ್ಯಾಸ್ ಫೌಂಡೇಷನ್ ಸದಸ್ಯರು ಮತ್ತು ಸ್ಥಳೀಯ ನಿವಾಸಿಗಳು ಶ್ರಮದಾನದ ಮೂಲಕ ಬಾವಿಯೊಳಗಿನ ಹೂಳು, ಕಲ್ಲುಗಳು ಮತ್ತು ಕಸ-ಕಡ್ಡಿಗಳನ್ನು ಸ್ವಚ್ಛಗೊಳಿಸಿದರು. ಶಿವಲಿಂಗದ ಆಕಾರದಲ್ಲಿರುವ ಬಾವಿಗೆ ಸಾಂಸ್ಕೃತಿಕ ಹಿನ್ನೆಲೆಯೂ ಇದೆ. ಮುತಗಾ, ಕಂಚವೀರ ನಗರ …

Read More »