ಮುಂಬೈ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ನೇತೃತ್ವದ ಸಚಿವ ಸಂಪುಟದಲ್ಲಿ ಕಂಪನ ಶುರುವಾಗಿದೆ. ರಾಜ್ಯ ಸಚಿವ ಧನುಂಜಯ ಮುಂಡೆ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ಗಾಯಕಿ ರೇಣು ಶರ್ಮಾ ಪೊಲೀಸರಿಗೆ ದೂರು ನೀಡಿದ್ದಾರೆ. ಸಚಿವರು ತಮಗೆ ಲೈಂಗಿಕ ಕಿರುಕುಳ ನೀಡುತ್ತಿದ್ದಾರೆ ಎಂದು ಪೊಲೀಸ್ ಆಯುಕ್ತ ಪರಂ ಭೀರ್ ಸಿಂಗ್ ಅವರಿಗೆ ಬರೆದಿರುವ ಪತ್ರದಲ್ಲಿ ದೂರಿದ್ದಾರೆ. ಸಚಿವ ಧನುಂಜಯ ಮುಂಡೆ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕೆಂದು ಅವರು ಒತ್ತಾಯಿಸಿದ್ದಾರೆ. ಆದರೆ, …
Read More »ನ್ಯಾಯಮೂರ್ತಿಗಳ ವಿರುದ್ಧ ಆರೋಪ ಅರ್ಜಿದಾರನಿಗೆ ₹1 ಲಕ್ಷ ದಂಡ
ಬೆಂಗಳೂರು: ಮೈಸೂರಿನ ಸೋಸಲೆ ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಹೈಕೋರ್ಟ್ ನ್ಯಾಯಮೂರ್ತಿಗಳ ವಿರುದ್ಧವೇ ಆರೋಪಗಳನ್ನು ಮಾಡಿದ್ದ ಅರ್ಜಿದಾರ ವಿ. ಗುರುರಾಜ್ ಎಂಬುವವರಿಗೆ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ವಿಭಾಗೀಯ ಪೀಠ ₹ 1 ಲಕ್ಷ ದಂಡ ವಿಧಿಸಿದೆ. ಮಠದ ವಿವಾದಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಗುರುರಾಜ್ ಕೂಡ ಒಬ್ಬ ಅರ್ಜಿದಾರ. ತಮ್ಮ ಅರ್ಜಿಯನ್ನು ಕರ್ನಾಟಕದ ಹೊರಗೆ ವಕೀಲಿ ವೃತ್ತಿ ನಡೆಸಿರುವ ನ್ಯಾಯಮೂರ್ತಿಗಳೇ ವಿಚಾರಣೆ ನಡೆಸಬೇಕು ಎಂದು ಮನವಿ ಮಾಡಿದ್ದರು. …
Read More »ಇಲ್ಲಿದೆ ಫೈನಲ್ ಆಗಿರುವ ಸಂಭವನೀಯ ಸಚಿವರ ಪಟ್ಟಿ ಕೋಟಾಶ್ರೀನಿವಾಸ್ ಪೂಜಾರಿ ಹಾಗೂ ಶಶಿಕಲಾ ಜೊಲ್ಲೆ ಕೋಕ್
ಬೆಂಗಳೂರು,ಜ.12- ಬಹುನಿರೀಕ್ಷಿತ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ನಾಳೆ ಸಂಜೆ 5 ಗಂಟೆಗೆ ರಾಜಭವನದಲ್ಲಿ ನಡೆಯಲಿದ್ದು, ಹೊಸದಾಗಿ 7 ಸಚಿವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಮಾಜಿ ಸಚಿವರಾದ ಉಮೇಶ್ ಕತ್ತಿ, ರಾಜುಗೌಡ ನಾಯಕ್, ಸಿ.ಪಿ.ಯೋಗೇಶ್ವರ್, ಆರ್. ಶಂಕರ್, ಎಂ.ಟಿ.ಬಿ.ನಾಗರಾಜ್, ಅರವಿಂದ ಲಿಂಬಾವಳಿ ಹಾಗೂ ಎಸ್. ಅಂಗಾರ ಮತ್ತು ಮುನಿರತ್ನ, ಹಾಲಪ್ಪ ಆಚಾರ್ ಸಚಿವರಾಗುವ ಸಂಭವನೀಯ ಪಟ್ಟಿಯಲ್ಲಿದ್ದಾರೆ.ನಾಳೆ ಸಂಜೆ 4 ಗಂಟೆಗೆ ರಾಜಭವನದ ಗಾಜಿನಮನೆಯಲ್ಲಿ ನಡೆಯಲಿರುವ ಸರಳ ಸಮಾರಂಭದಲ್ಲಿ ನೂತನ ಸಚಿವರಿಗೆ …
Read More »ಅಮಿತ್ ಶಾ ರಾಜ್ಯ ಪ್ರವಾಸ ಪಟ್ಟಿ ಪ್ರಕಟ: ಬೆಳಗಾವಿಯಲ್ಲಿ 4 ಕಾರ್ಯಕ್ರಮದಲ್ಲಿ ಭಾಗಿ
ನವದೆಹಲಿ – ಇದೇ 16 ಮತ್ತು 17ರಂದು ರಾಜ್ಯ ಪ್ರವಾಸ ಕೈಗೊಂಡಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ ಬೆಳಗಾವಿಯಲ್ಲಿ 4 ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ. ಬಿಜೆಪಿಯ ಜನಸೇವಕ ಸಮಾವೇಶದಲ್ಲಿ ಪಾಲ್ಗೊಳ್ಳಲಿರುವ ಅಮಿತ್ ಶಾ, ಕೆಎಲ್ಇ ಆಸ್ಪತ್ರೆ ಮತ್ತು ದಿವಂಗತ ಸುರೇಶ ಅಂಗಡಿ ಅವರ ನಿವಾಸಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲದೆ ಪಕ್ಷದ ಪದಾಧಿಕಾರಿಗಳ ಸಭೆಯನ್ನೂ ನಡೆಸಲಿದ್ದಾರೆ. ಜ.16ರಂದು ಬೆಳಗ್ಗೆ 9 ಗಂಟೆಗೆ ನವದೆಹಲಿಯಿಂದ ಹೊರಡುವ ಅಮಿತ್ ಶಾ 11.30ಕ್ಕೆ ಬೆಂಗಳೂರು ವಿಮಾನ …
Read More »ಎಸಿಬಿ ಖೆಡ್ಡಾಗೆ ಬಿದ್ದ ಪಿಎಸ್ಐ, ಹೆಡ್ಕಾನ್ಸ್ಟೇಬಲ್..!
ಬೆಂಗಳೂರು, ಜ.12- ದೂರು ದಾಖಲಿಸಬಾರದು ಎಂದು ಮಹಿಳೆಯಿಂದ ಹಣದ ಬೇಡಿಕೆ ಇಟ್ಟಿದ್ದ ಪೊಲೀಸ್ ಸಿಬ್ಬಂದಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬೈಯಪ್ಪನಹಳ್ಳಿ ಪೊಲೀಸ್ ಠಾಣೆಯಲ್ಲಿ ಪತಿಯ ವಿರುದ್ಧ ದೂರು ದಾಖಲಿಸಬಾರದು ಎಂದು ಹೇಳಿದ ಮಹಿಳೆಯೊಬ್ಬಳಿಂದ ಪಿಎಸ್ಐ ಸೌಮ್ಯ ಮತ್ತು ಹೆಡ್ಕಾನ್ಸ್ಟೇಬಲ್ ಜೆ.ಪಿ.ರೆಡ್ಡಿ ಅವರು 1 ಲಕ್ಷ ರೂ. ಲಂಚದ ಬೇಡಿಕೆ ಇಟ್ಟಿದ್ದರು.ಈ ಬಗ್ಗೆ ಬಂದ ನಿಖರ ಮಾಹಿತಿ ಮೇರೆಗೆ ಎಸಿಬಿ ಅಧಿಕಾರಿಗಳು ದಿಢೀರ್ ದಾಳಿ ನಡೆಸಿ ಅಧಿಕಾರಿಗಳನ್ನು ಬಲೆಗೆ ಬೀಳಿಸಿ ತನಿಖೆ …
Read More »ಗೋಹತ್ಯೆ ನಿಷೇಧ: ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ಜಾರಿ
ಬೆಂಗಳೂರು: ಗೋಹತ್ಯೆ ನಿಷೇಧ ಕಾಯ್ದೆ ಕುರಿತಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್ ನೀಡಿದ್ದು, ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ ಓಕಾ ಹಾಗೂ ಸಚಿನ್ ಶಂಕರ್ ಮಗುದಂ ಅವರನ್ನೊಳಗೊಂಡ ಪೀಠ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ. ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಯನ್ನು ಪ್ರಶ್ನಿಸಿ ಪಿಳ್ಳಣ್ಣ ಗಾರ್ಡನ್ ನಿವಾಸಿ ಮೊಹಮ್ಮದ್ ಆರಿಫ್ ಜಮೀಲ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಗೋಹತ್ಯೆ ನಿಷೇಧದಿಂದ ಭಾರತದ ಸಂವಿಧಾನದ 19 (ಜಿ) ವಿಧಿ ಖಾತರಿಪಡಿಸಿದ …
Read More »ಪುಣೆ ವಿಮಾನ ನಿಲ್ದಾಣ ತಲುಪಿದ ಕೋವಿಶೀಲ್ಡ್ ಲಸಿಕೆ. : ಆಯಾ ರಾಜ್ಯಗಳಿಗೆ ರವಾನೆಗೆ ಸಿದ್ಧತೆ
ಪುಣೆ : ಕೋವಿಶೀಲ್ಡ್ ಲಸಿಕೆ ಜನರಿಗೆ ನೀಡಲು ಸಿದ್ಧವಾಗುತ್ತಿದ್ದು, ಇದೀಗ ಸೀರಮ್ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಮೂರೂ ಕಂಟೈನರ್ ಹೊರಟಿದೆ. ಇದು ಕೊರೊನಾ ವೈರಸ್ ವಿರೋಧಿ ಹೋರಾಟದಲ್ಲಿ ನಿರ್ಣಾಯಕ ಹಂತವನ್ನು ಸೂಚಿಸುತ್ತದೆ. ತಾಪಮಾನ ನಿಯಂತ್ರಿತ ಮೂರು ಟ್ರಕ್ಗಳು ಸೀರಮ್ ಇನ್ಸ್ಟಿಟ್ಯೂಟ್ನ ಗೇಟ್ಗಳಿಂದ ಮುಂಜಾನೆ 5 ಗಂಟೆಯ ಸುಮಾರಿಗೆ ಹೊರಟು ಪುಣೆ ವಿಮಾನ ನಿಲ್ದಾಣಕ್ಕೆ ತೆರಳಿವೆ. ಅಲ್ಲಿಂದ ಭಾರತದಾದ್ಯಂತ ಲಸಿಕೆಗಳನ್ನು ತಲುಪಿಸಲಾಗುತ್ತದೆ. ವಾಹನಗಳು ಹೊರಡುವ ಮೊದಲು ಪೂಜೆ ನಡೆಸಲಾಯಿತು. ಪುಣಿಯಿಂದ ಕೋವಿಶೀಲ್ಡ್ …
Read More »ಮೊದಲ ಹಂತದಲ್ಲಿ ರಾಜ್ಯದ 16 ಲಕ್ಷ ಮಂದಿಗೆ ಕೊರೊನಾ ಲಸಿಕೆ : ಸಿಎಂ ಬಿಎಸ್ ವೈ
ಬೆಂಗಳೂರು : ರಾಜ್ಯದ ಜನತೆಗೆ ಸಿಎಂ ಯಡಿಯೂರಪ್ಪ ಸಿಹಿಸುದ್ದಿ ನೀಡಿದ್ದು, ರಾಜ್ಯದ ಆಯ್ದ 16 ಲಕ್ಷ ಜನರಿಗೆ ಮೊದಲ ಹಂತದಲ್ಲಿ ಕೊರೊನಾ ಲಸಿಕೆ ಸಿಗಲಿದೆ ಎಂದು ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ನಡೆಸಿದ ಹಲವು ರಾಜ್ಯಗಳ ಸಿಎಂ ಸಭೆ ಬಳಿಕ ಯಡಿಯೂರಪ್ಪ ಸುದ್ದಿಗಾರರ ಜೊತೆ ಮಾತನಾಡಿದರು. ಲಸಿಕೆ ಫಲಾನುಭವಿಗಳ ಆಯ್ಕೆ ಈಗಾಗಲೇ ನಡೆದಿದೆ, ರಾಜ್ಯ ಲಸಿಕೆ ವಿತರಣೆಗೆ ಸಜ್ಜಾಗಿದೆ ಎಂದಿದ್ದಾರೆ. ದೇಶದಲ್ಲಿ ಮೊದಲ ಹಂತದಲ್ಲಿ ಒಟ್ಟು 3 …
Read More »ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ.
ಅಂಕೋಲಾ – ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ಕೇಂದ್ರ ಆಯುಷ್ ಖಾತೆ ರಾಜ್ ಸಚಿವ ಶ್ರೀಪಾದ ನಾಯಕ ಅವರನ್ನು ಪಣಜಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಅಂಕೋಲಾದಲ್ಲಿ ಪ್ರಾಥಮಿಕ ಚಿಕಿತ್ಸೆ ಬಳಿಕ ಅವರನ್ನು ಅಂಬುಲೆನ್ಸ್ ಮೂಲಕ ಗೋವಾಕ್ಕೆ ಕರೆದೊಯ್ಯಲಾಗಿದೆ. ಸೋಮವಾರ ಸಂಜೆ ಅಂಕೋಲಾ ಬಳಿ ಸಚಿವರ ಕಾರು ಪಲ್ಟಿಯಾಗಿ ಪತ್ನಿ ವಿಜಯಾ ಮತ್ತು ಆಪ್ತಸಹಾಯಕ ದೀಪಕ್ ಸಾವಿಗೀಡಾಗಿದ್ದಾರೆ. ಸಚಿವರು ಗಾಯಗೊಂಡಿದ್ದಾರೆ. ಯಲ್ಲಾಪುರದಿಂದ ಗೋಕರ್ಣಕ್ಕೆ ತೆರಳುವಾಗ ಅಪಘಾತವಾಗಿದೆ.
Read More »ಕನ್ನಡದ ಹಿರಿಯ ಸಂಗೀತ ನಿರ್ದೇಶಕ ಜೀವರತ್ನ ನಿಧನ
ಕನ್ನಡ ಚಿತ್ರರಂಗದ ಅತ್ಯಂತ ಹಿರಿಯ ಸಂಗೀತ ನಿರ್ದೇಶಕ ಆರ್.ರತ್ನ ನಿನ್ನೆ (ಜನವರಿ 09) ರಂದು ಚೆನ್ನೈನಲ್ಲಿ ನಿಧನಹೊಂದಿದ್ದಾರೆ. ಆರ್.ರತ್ನ ಅವರಿಗೆ 97 ವರ್ಷ ವಯಸ್ಸಾಗಿತ್ತು. ಆರ್.ರತ್ನ ನಿಜವಾದ ಹೆಸರು ಜೀವನರತ್ನ. ಮೊದಲಿಗೆ ನಟನಾಗಿ ವೃತ್ತಿ ಆರಂಭಿಸಿದ ರತ್ನ, ತಮಿಳಿನ ‘ದಾನಶೂರ ಕರ್ಣ’ ಸಿನಿಮಾದಲ್ಲಿ ಋಷಿ ಕೇತು ಪಾತ್ರದಲ್ಲಿ ನಟಿಸಿದ್ದರು. ನಂತರ 1961ರಲ್ಲಿ ಬಿಡುಗಡೆ ಆದ ‘ಚಕ್ರವರ್ತಿ ತಿರುಮಗಲ’ ಮೂಲಕ ಸ್ವತಂತ್ರ್ಯ ಸಂಗೀತ ನಿರ್ದೇಶಕರಾದ ಜೀವರತ್ನ. 1963 ‘ಮನೆ ಕಟ್ಟಿ ನೋಡು’ …
Read More »
Laxmi News 24×7