ನವದೆಹಲಿ: ಭಾರತದಲ್ಲಿ ಬ್ಯಾನ್ಗೆ ಒಳಗಾದರೂ ಚೀನಾದ ಆಯಪ್ ಟಿಕ್ಟಾಕ್ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಆಯಪ್ ಎನ್ನಿಸಿಕೊಂಡಿದೆ. ಆಯಪ್ ಟೋಪಿಯಾ ಬಿಡುಗಡೆ ಮಾಡಿರುವ ಅನಾಲಿಟಿಕ್ಸ್ನಲ್ಲಿ ಟಿಕ್ಟಾಕ್ 540 ಮಿಲಿಯನ್ ಡಾಲರ್(₹39,62,43,36,000) ಆದಾಯ ಗಳಿಸುವ ಮೂಲಕ 2020ರಲ್ಲಿ ಅತೀಹೆಚ್ಚು ಆದಾಯ ಗಳಿಸಿದ ಪಟ್ಟಿಯಲ್ಲಿ ನಂಬರ್ 1 ಸ್ಥಾನ ಪಡೆದಿದೆ. ಇನ್ನು ಟಿಂಡರ್ ಆಯಪ್ 513 ಮಿಲಿಯನ್ ಡಾಲರ್(₹37,64,31,19,200) ಆದಾಯ ಗಳಿಸುವ ಮೂಲಕ ನಂಬರ್ 2 ಸ್ಥಾನ ಪಡೆದಿದೆ. ಆಯಪ್ ಟೋಪಿಯಾದ ಡೇಟಾ …
Read More »ಎಚ್ಚರ..ನಿಮ್ಮ ವಾಟ್ಸಪ್ಗ್ರೂಪ್ ಗೆ ‘ಅಪರಿಚಿತರು’ ಈ ರೀತಿ ಸೇರಿಕೊಳ್ತಾರಂತೆ..?
ಕೆಎನ್ಎನ್ಡಿಜಿಟಲ್ಡೆಸ್ಕ್: ನಿಮ್ಮ ಕಚೇರಿಯ ಸಹೋದ್ಯೋಗಿಗಳನ್ನು ಒಳಗೊಂಡಿರುವ ವಾಟ್ಸ್ ಆಪ್ ಗ್ರೂಪ್ ನಲ್ಲಿ ಮಹತ್ವದ ವಿವರಗಳನ್ನು ಚರ್ಚಿಸುತ್ತಿರುವಾಗ, ಇದ್ದಕ್ಕಿದ್ದಂತೆ ಅಪರಿಚತ ವ್ಯಕ್ತಿಯು ಸೇರಿಕೊಂಡರೇ ಏನಾಗಬೇಡ ಒಮ್ಮೆ ಯೋಚನೆ ಮಾಡಿ, ಹೌದು, ಗೂಗಲ್ ಸರ್ಚ್ ಮೂಲಕ ನಿಮ್ಮ ಖಾಸಗಿ ಗ್ರೂಪ್ ಚಾಟ್ಗೆ ಪ್ರವೇಶ ಪಡೆಯ ಬಹುದು ಎನ್ನಲಾಗಿದ್ದು, ಇದೊಂದು ಸಮಸ್ಯೆಯಾಗಲಿದೆ ಎನ್ನಲಾಗಿದೆ. ಅಂದ ಹಾಗೇ 2019ರಲ್ಲಿ ಈ ಸಮಸ್ಯೆ ಬಗೆಹರಿಸಲಾಗಿತ್ತು ಆದರೆ ಈಗ ಮತ್ತೆ ಬೆಳಕಿಗೆ ಬಂದಿದೆ ಎನ್ನಲಾಗಿದ್ದು, ವಾಟಫ್ಸ್ ನಲ್ಲಿ ಎಲ್ಲವೂ …
Read More »ಅವಧಿಗೂ ಮುನ್ನ ಬಸ್ ಸಂಚಾರ; 2 ರಾಜ್ಯದ ಸಾರಿಗೆ ಇಲಾಖೆ ನೌಕರರ ನಡುವೆ ಜಟಾಪಟಿ
ಯಾದಗಿರಿ:ಬಸ್ ಸಂಚಾರ ಮಾಡುವ ವಿಚಾರದಲ್ಲಿ ಎರಡು ರಾಜ್ಯದ ಸಾರಿಗೆ ಇಲಾಖೆ ನೌಕರರ ನಡುವೆ ವಾಕ್ಸಮರ ನಡೆದಿದೆ. ಅವಧಿ ಮುನ್ನವೇ ಬಸ್ ನಿಲ್ದಾಣದಲ್ಲಿ ತೆಲಂಗಾಣ ಬಸ್ ತೆಗೆದುಕೊಂಡು ಬಂದ ವಿಚಾರವಾಗಿ ತೆಲಂಗಾಣ ಹಾಗೂ ರಾಜ್ಯದ ಸಾರಿಗೆ ನೌಕರರ ನಡುವೆ ವಾಗ್ವಾದ ನಡೆದಿದೆ. ಈ ವೇಳೆ ಕಂಟ್ರೋಲರ್ ಮೇಲೆ ಹಲ್ಲೆಗೆ ಯತ್ನಿಸಲಾಗಿದೆ. ಯಾದಗಿರಿ ಜಿಲ್ಲೆಯ ಗುರುಮಠಕಲ್ ನ ಕೇಂದ್ರ ಬಸ್ ನಿಲ್ದಾಣದಲ್ಲಿ ನಸುಕಿನ ಜಾವ ಘಟನೆ ಜರುಗಿದೆ. ಎರಡು ದಿನದ ಹಿಂದೆ ಘಟನೆ …
Read More »ಬುಲಾವ ಮಾಡಿದ್ದು ಸಚಿವ ಸಂಪುಟ ವಿಸ್ತರಣೆ ಅಂತಾ ಆದ್ರೆ ಹೇಳಿದ್ದು ಕುರ್ಚಿ ಖಾಲಿ ಮಾಡಿ ಅಂತಾ
ನವದಹಲಿ – ಸಚಿವಸಂಪುಟ ವಿಸ್ತರಣೆಗೆ ಹಸಿರು ನಿಶಾನೆ ಕೊಡಲು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಿಜೆಪಿ ಹೈಕಮಾಂಡ್ ನವದೆಹಲಿಗೆ ಕರೆಸಿಕೊಂಡಿದೆ ಎನ್ನುವ ನಿರೀಕ್ಷೆ ಬಹುತೇಕ ಹುಸಿಯಾಗಿದೆ. ಬದಲಾಗಿ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನವನ್ನೇ ಬದಲಾಯಿಸುವ ಪ್ರಸ್ತಾಪವನ್ನು ಅಮಿತ್ ಶಾ ಯಡಿಯೂರಪ್ಪ ಮುಂದಿಟ್ಟಿದ್ದಾರೆ ಎನ್ನಲಾಗಿದೆ. ಯಾರಾಗಲಿದ್ದಾರೆ 2021ಕ್ಕೆ ಕರ್ನಾಟಕದ ಸಿಎಂ? ಬೆಳಗ್ಗೆ ನವದೆಹಲಿಗೆ ಧಾವಿಸಿದ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಒಂದು ಗಂಟೆಗೂ ಹೆಚ್ಚು ಸಮಯ ಚರ್ಚೆ ನಡೆಸಿದ್ದಾರೆ. ಈ …
Read More »ಎಲ್ಲರ ಮೇಲೆ ಹೈಕಮಾಂಡ್ ಕಣ್ಣಿಟ್ಟಿದೆ ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ.: ಯತ್ನಾಳ
ವಿಜಯಪುರ (ಜ. 10); ಸಚಿವ ಸಂಪುಟ ವಿಸ್ತರಣೆಯಾಗುತ್ತೋ? ಪುನಾರಚನೆಯಾಗುತ್ತೋ? ಗೊತ್ತಿಲ್ಲ. ಆದರೆ, ಮಹತ್ವದ ನಿರ್ಣಯ ಕೈಗೊಳ್ಳಲು ಅಮಿತ್ ಶಾ ಸಿಎಂ ಯಡಿಯೂರಪ್ಪ ಅವರನ್ನು ದೆಹಲಿಗೆ ಕರೆಯಿಸಿದ್ದಾರೆ ಅನಿಸುತ್ತಿದೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಹೈಕಮಾಂಡ್ ಬುಲಾವ್ ಹಿನ್ನೆಲೆಯಲ್ಲಿ ಸಿಎಂ ದೆಹಲಿಗೆ ತೆರಳಿದ್ದಾರೆ. ಯಾರನ್ನು ಬಿಜೆಪಿ ಪಕ್ಷದ ನಾಯಕರನ್ನಾಗಿ ಮಾಡಬೇಕೆಂದು ಕೇಂದ್ರ ನಾಯಕರಿಗೆ ಗೊತ್ತಿದೆ. ಪ್ರಧಾನಿ, ಗೃಹ ಸಚಿವರಿಗೆ ಅವರದ್ದೆ …
Read More »ಬಿಜೆಪಿಯ ದರಿದ್ರ ಸರ್ಕಾರದ ಜನ ವಿರೋಧಿ ಕಾಯ್ದೆಗಳ ವಿರುದ್ಧ ಬೀದಿಗಿಳಿದು ಹೋರಾಟ; ಸಿದ್ದರಾಮಯ್ಯ ಕಿಡಿ
ಬೆಂಗಳೂರು (ಜ. 10): ಗೋಹತ್ಯೆ ನಿಷೇಧ ಮಾಡಬೇಕಾದರೆ ಇಡೀ ದೇಶದಲ್ಲಿ ಬ್ಯಾನ್ ಮಾಡಿ. ದೇಶದಲ್ಲಿ ಗೋ ಮಾಂಸ ರಫ್ತು, ಆಮದು ಮಾಡೋದನ್ನು ಮೊದಲು ನಿಲ್ಲಿಸಿ. ಬಿಜೆಪಿಯವರು ಸಗಣಿ ಎತ್ತಿಲ್ಲ, ಗಂಜಲ ಬಾಚಿಲ್ಲ. ಆದರೆ ಗೋಮಾತೆ ಪೂಜೆ ಮಾಡುತ್ತೇವೆ ಎನ್ನುತ್ತಾರೆ. ಬಿಜೆಪಿ ಬೆಂಬಲಿಗರೇ ದನದ ಮಾಂಸ ರಫ್ತು ಮಾಡುತ್ತಾರೆ. ಬಿಜೆಪಿಯದ್ದು ದರಿದ್ರ ಸರ್ಕಾರ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಅಲ್ಲದೆ ಬಿಜೆಪಿ ಸರ್ಕಾರದ ಜನ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ …
Read More »ಅಕಾಲಿಕ ಮಳೆಯಿಂದ ಬೆಳೆ ನಾಶ; ಸಂಕಷ್ಟದ ಸುಳಿಯಲ್ಲಿ ಧಾರವಾಡದ ರೈತರು
ಧಾರವಾಡ (ಜ. 10): ಮುಂಗಾರು ಬೆಳೆಗಳು ಅತಿವೃಷ್ಟಿ-ನೆರೆ ಹಾವಳಿಗೆ ತುತ್ತಾದ ಕಾರಣ ನಷ್ಟದ ಸುಳಿಯಲ್ಲಿದ್ದ ರೈತರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಇದೀಗ ಮತ್ತೆ ವರುಣನ ಆರ್ಭಟಕ್ಕೆ ಹಿಂಗಾರು ಬೆಳೆಗಳು ಸಹ ಹಾನಿಯಾಗುತ್ತಿದೆ. ಮಳೆರಾಯನ ಚೆಲ್ಲಾಟದಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ. ಹೌದು, ಧಾರವಾಡ ಜಿಲ್ಲೆಯಲ್ಲಿ ಸುರಿದ ಧಾರಾಕಾರ ಅಕಾಲಿಕ ಮಳೆಯಿಂದ ಹಿಂಗಾರಿನ ಬೆಳೆಗಳು ಸಂಪೂರ್ಣ ಹಾನಿಯಾಗಿವೆ. ಜಿಲ್ಲೆಯ ರೈತ ಸಮೂಹ ತಲೆಯ ಮೇಲೆ ಕೈಹೊತ್ತು ಕುಳಿತುಕೊಳ್ಳುವ ಪರಿಸ್ಥಿತಿ ಬಂದಿದೆ. …
Read More »2 ತಿಂಗಳೊಳಗೆ ನೆಲಮಂಗಲ ನಗರಸಭೆ ಚುನಾವಣೆ ನಡೆಸಲು ಹೈಕೋರ್ಟ್ ಆದೇಶ
ನೆಲಮಂಗಲ (ಜ. 10): ಎರಡು ತಿಂಗಳಲ್ಲಿ ನೆಲಮಂಗಲ ನಗರಸಭೆ ಚುನಾವಣೆ ನಡೆಸುವಂತೆ ಹೈ ಕೋರ್ಟ್ನ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ದೇವದಾಸ್ ಅದೇಶ ನೀಡಿದ್ದಾರೆ. ನಗರಸಭೆ ಚುನಾವಣೆ ಕುರಿತಂತೆ ನೆಲಮಂಗಲ ನಗರಸಭೆಗೆ ನೂತನವಾಗಿ ಸೇರ್ಪಡೆಗೊಂಡಿರುವ ಅರಿಶಿನಕುಂಟೆ, ವಾಜರಹಳ್ಳಿ, ವಿಶ್ವೇಶ್ವರಪುರ, ಬಸವನಹಳ್ಳಿ ಗ್ರಾಮ ಪಂಚಾಯ್ತಿಗಳು 108 ಜನ ಮಾಜಿ ಸದಸ್ಯರ ಪರವಾಗಿ ಕಲ್ಪನಾ ಮಂಜುನಾಥ್ ಹೈ ಕೋರ್ಟ್ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಆ ಅರ್ಜಿಯ ವಿಚಾರಣೆ ನಡೆಸಿದ ಉಚ್ಚ ನ್ಯಾಯಾಲಯದ …
Read More »ಬಿಎಸ್ವೈ ಅವರನ್ನು ದೆಹಲಿಗೆ ಬರುವಂತೆ ಬುಲಾವ್ ನೀಡಿದ್ದು, ರಾಜ್ಯ ಸಂಪುಟ ವಿಸ್ತರಣೆಯಾಗುವ ಎಲ್ಲಾ ಲಕ್ಷಣಗಳೂ ಗೋಚರಿಸುತ್ತಿವೆ.
ನವದೆಹಲಿ; ಸಿಎಂ ಬಿಎಸ್ ಯಡಿಯೂರಪ್ಪ ಅವರು ಇಂದು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಈ ವೇಳೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಉಪಸ್ಥಿತರಿದ್ದರು. ರಾಜ್ಯ ಸಚಿವ ಸಂಪುಟ ವಿಸ್ತರಣೆ ಕಳೆದ ಒಂದೂವರೆ ವರ್ಷದಿಂದ ಮುಂದೂಡಲ್ಪಡುತ್ತಲೇ ಇದೆ. ಒಂದೆಡೆ ಸಚಿವಾಕಾಂಕ್ಷಿಗಳ ಸಂಖ್ಯೆ ಏರುತ್ತಿದ್ದರೆ, ಮತ್ತೊಂದೆಡೆ ಬಿಜೆಪಿ ಹೈಕಮಾಂಡ್ ಈವರೆಗೆ ಸಂಪುಟವನ್ನು ವಿಸ್ತರಿಸಲು ಮುಖ್ಯಮಂತ್ರಿ ಬಿ.ಎಸ್. …
Read More »ಸಚಿವರಿಗೆ ಸುಳ್ಳು ಮಾಹಿತಿ ಕೊಟ್ಟ ಎಂಇಎಸ್ ಮುಖಂಡನಿಗೆ ಶಾಸಕ ಅಭಯ ಪಾಟೀಲ್ ಹಿಗ್ಗಾಮುಗ್ಗಾ ತರಾಟೆ
ಬೆಳಗಾವಿ(ಜ.9): ಬೆಳಗಾವಿ ಮಹಾನಗರ ಪಾಲಿಕೆಯಲ್ಲಿ ಇಂದು ಬಿಜೆಪಿ ಶಾಸಕ ಅಭಯ ಪಾಟೀಲ್ ಎಂಇಎಸ್ ಮಾಜಿ ಮೇಯರ್ ಮಧ್ಯೆ ವಾಗ್ವಾದ ನಡೆಯಿತು. ಎಂಇಎಸ್ ಮಾಜಿ ಮೇಯರ್ ಸುಳ್ಳು ಆರೋಪಕ್ಕೆ ಶಾಸಕ ಅಭಯ ಪಾಟೀಲ್ ಫುಲ್ ಗರ್ಂ ಆದರು. ಬೆಳಗಾವಿ ಮಹಾನಗರ ಪಾಲಿಕೆ ಸಭಾಂಗಣದಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಸಮ್ಮುಖದಲ್ಲಿ ವಾಗ್ವಾದ ನಡೆಯಿತು. ಸ್ಮಾರ್ಟ್ ಸಿಟಿ ಕಾಮಗಾರಿ ಸರಿಯಾಗಿಲ್ಲ ಎಂದು ಮಾಜಿ ಎಂಇಎಸ್ ಮೇಯರ್ ನಾಗೇಶ ಸಾತೇರಿ ಸಚಿವರ ಮುಂದೆ ಆರೋಪ …
Read More »
Laxmi News 24×7