Breaking News

Uncategorized

13 ಕಡೆ ಎಸಿಬಿ ದಾಳಿ, ಅಧಿಕಾರಿಗಳಿಗೆ ಶಾಕ್..!

ಬೆಂಗಳೂರು, ಡಿ.18- ಆದಾಯಕ್ಕಿಂತ ಅಧಿಕ ಆಸ್ತಿ ಹೊಂದಿರುವ ಬಗ್ಗೆ ಮಾಹಿತಿ ಆಧರಿಸಿದ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳ ತಂಡ ಇಂದು ಮೈಸೂರು, ಹಾಸನ ಮತ್ತು ಬೆಳಗಾವಿ ಜಿಲ್ಲೆಯಾದ್ಯಂತ 13 ಸ್ಥಳಗಳಲ್ಲಿ ದಾಳಿ ನಡೆಸಿದೆ. ಬಲೆಗೆ ಬಿದ್ದಿರುವ ಅಧಿಕಾರಿಗಳನ್ನು ಮೈಸೂರಿನ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಶಿವಶಂಕರಸ್ವಾಮಿ, ಹಾಸನದ ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಗಮದ ಸಹಾಯಕ ಎಂಜಿನಿಯರ್ ವಿ.ಎಸ್. ಅಶ್ವಿನಿ ಹಾಗೂ ಬೆಳಗಾವಿಯ ಲೋಕೋಪ ಯೋಗಿ ಬಂದರು ಮತ್ತು ಒಳನಾಡು …

Read More »

ಕರ್ನಾಟಕ ರಾಜ್ಯ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಅವರನ್ನು ಹುಕ್ಕೇರಿ ಹಿರೇಮಠದಿಂದ ಬೆಂಗಳೂರು ಮಹಾನಗರದಲ್ಲಿ ಸತ್ಕರಿಸಲಾಯಿತು.

ಬೆಂಗಳೂರು – ಕರ್ನಾಟಕ ರಾಜ್ಯ ವೀರಶೈವ -ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಅವರನ್ನು ಹುಕ್ಕೇರಿ ಹಿರೇಮಠದಿಂದ ಬೆಂಗಳೂರು ಮಹಾನಗರದಲ್ಲಿ ಸತ್ಕರಿಸಲಾಯಿತು.   ಕರ್ನಾಟಕ ರಾಜ್ಯ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಪರಮಶಿವಯ್ಯ ಇವರನ್ನು ಬೆಂಗಳೂರು ಮಹಾನಗರದಲ್ಲಿ ಹುಕ್ಕೇರಿ ಹಿರೇಮಠದ ವತಿಯಿಂದ ಶ್ರೀ ಷ ಬ್ರ ಡಾಕ್ಟರ್ ಮಲಯ ಶಾಂತಮುನಿ ಶಿವಾಚಾರ್ಯ ಮಹಾಸ್ವಾಮಿಗಳು ಶಿವಗಂಗಾ ಕ್ಷೇತ್ರ ಇವರ ದಿವ್ಯಸಾನಿಧ್ಯದಲ್ಲಿ ಶ್ರೀ ಷ ಬ್ರ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹಿರೇಮಠ ಹುಕ್ಕೇರಿ …

Read More »

ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಸಹಿಸಲು ಅಸಾಧ್ಯ. : ಸಿದ್ದರಾಮಯ್ಯ

ಮೈಸೂರು (ಡಿ.18): ನನಗೆ ರಾಜಕೀಯ ಪುನರ್ಜನ್ಮ ನೀಡಿದ ಕ್ಷೇತ್ರ ಹಾಗೂ ಹೆಚ್ಚು ವೇದನೆ ನೀಡಿದ ಕ್ಷೇತ್ರ ಚಾಮುಂಡೇಶ್ವರಿ. ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ಸಹಿಸಲು ಅಸಾಧ್ಯ.  ನಾನು ಚಾಮುಂಡೇಶ್ವರಿಯಲ್ಲಿ ಇಷ್ಟು ಕೆಟ್ಟದಾಗಿ ಸೋಲುತ್ತೇನೆ ಎಂದು ಕೊಂಡಿರಲಿಲ್ಲ. ನಾನು ಬಾದಾಮಿಯಲ್ಲಿ ಗೆಲ್ಲದಿದ್ದರೆ ನನ್ನ ರಾಜಕೀಯ ಭವಿಷ್ಯವೇ ಮಂಕಾಗಿ ಹೋಗುತ್ತಿತ್ತು. ನೀವು ಸೋಲಿಸಿದಂತೆ ಅವರು ನನ್ನನ್ನು ಸೋಲಿಸಿದ್ದರೆ, ಈ ರಾಜ್ಯದ ಭವಿಷ್ಯ ಏನಾಗುತ್ತಿತ್ತು ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಭಾವಾನಾತ್ಮಕವಾಗಿ ಮಾತನಾಡಿದ್ದಾರೆ. ಕಳೆದ ವಿಧಾನಸಭಾ …

Read More »

ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಸಂಚಾರಿ ಪೊಲೀಸರು

ಬೆಂಗಳೂರು: ಬೆಂಗಳೂರು ಸಂಚಾರಿ ಪೊಲೀಸರು ಕಾರ್ಯಾಚರಣೆ ನಡೆಸಿ ಎರಡು ಗಂಟೆಯಲ್ಲಿ ಬರೋಬ್ಬರಿ 26.26 ಲಕ್ಷ ರೂ. ದಂಡವನ್ನು ಸಂಗ್ರಹಿಸಿದ್ದಾರೆ. ಕೇವಲ ಎರಡು ಗಂಟೆಯಲ್ಲಿ ಬರೋಬ್ಬರಿ 5,672 ಸಂಚಾರಿ ನಿಯಮ ಉಲ್ಲಂಘನೆ ಪ್ರಕರಣ ದಾಖಲಾಗಿದ್ದು, ಎರಡು ಗಂಟೆ ಅವಧಿಯಲ್ಲಿ 26,26,800 ರೂಪಾಯಿ ದಂಡ ಸಂಗ್ರಹಿಸಿದ್ದಾರೆ. ನಗರದ 44 ಸಂಚಾರ ಪೊಲೀಸ್ ಠಾಣೆಗಳಲ್ಲಿ 5,672 ಪ್ರಕರಣ ದಾಖಲಾಗಿವೆ. ನಿತ್ಯ ಇರುವ ಸ್ಥಳಗಳನ್ನು ಬಿಟ್ಟು ಬೇರೆ ಸ್ಥಳಗಳಲ್ಲಿ ನಿಂತು. ವಾಹನ ಸವಾರರಿಗೆ ಬಲೆ ಬೀಸಿದ್ದಾರೆ. …

Read More »

ಬೆಂಗಳೂರಿನಲ್ಲಿ ನಿನ್ನೆ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ 49,960 ರೂ. ಇದ್ದ ಬೆಲೆ ಇಂದು 50,410ಕ್ಕೆ ಏರಿಕೆ

ಕಳೆದ ವಾರ ಭಾರತದಲ್ಲಿ 10 ಗ್ರಾಂಗೆ 49,250 ರೂ. ಇದ್ದ ಚಿನ್ನದ ಬೆಲೆ ಇಂದು 49,320 ರೂ. ಆಗಿದೆ. ಅಲ್ಪ ಏರಿಳಿತಗಳನ್ನು ಬಿಟ್ಟರೆ 10 ದಿನಗಳಿಂದ ಚಿನ್ನದ ಬೆಲೆಯಲ್ಲಿ ಹೆಚ್ಚೇನೂ ಬದಲಾವಣೆಯಾಗಿಲ್ಲ. ನೀವೇನಾದರೂ ಚಿನ್ನ ಖರೀದಿಸಲು ಯೋಚಿಸುತ್ತಿದ್ದರೆ ಇಂದು ಯಾವ ಯಾವ ನಗರಗಳಲ್ಲಿ ಚಿನ್ನದ ಬೆಲೆ ಎಷ್ಟಿದೆ ಎಂಬ ಬಗ್ಗೆ ಇಲ್ಲಿದೆ ಮಾಹಿತಿ. ಬೆಂಗಳೂರಿನಲ್ಲಿ 24 ಕ್ಯಾರೆಟ್​ನ 10 ಗ್ರಾಂ ಚಿನ್ನಕ್ಕೆ ಇಂದು 50,410 ರೂ. ಆಗಿದೆ. 22 ಕ್ಯಾರೆಟ್​ನ 10 …

Read More »

-ಆರ್ಥಿಕ ಸಂಕಷ್ಟದ ಮಧ್ಯೆ 2021-22ನೇ ಸಾಲಿನ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ.

ಬೆಂಗಳೂರು,ಡಿ.17 -ಆರ್ಥಿಕ ಸಂಕಷ್ಟದ ಮಧ್ಯೆ 2021-22ನೇ ಸಾಲಿನ ಬಜೆಟ್ ಮಂಡಿಸುವ ಅನಿವಾರ್ಯತೆ ಇದೆ. ಸೊರಗಿದ ಸಂಪನ್ಮೂಲ ಕ್ರೋಢೀಕರಣದಿಂದ ಮುಂಬರುವ ಬಜೆಟ್ ಗಾತ್ರವೂ ಕುಗ್ಗಲಿದೆ ಎಂಬ ಮಾತು ಕೇಳಿ ಬರುತ್ತಿವೆ. ರಾಜ್ಯ ಹಿಂದೆಂದೂ ಕಾಣದ ಆರ್ಥಿಕ ಸಂಕಷ್ಟವನ್ನು ಈ ಬಾರಿ ಎದುರಿಸುತ್ತಿದೆ. ಲಾಕ್‍ಡೌನ್‍ನಿಂದ ಆರ್ಥಿಕತೆ ಬುಡಮೇಲಾಗಿದೆ. ಬೊಕ್ಕಸ ತುಂಬಿಸುವ ಆದಾಯ ಮೂಲಗಳೆಲ್ಲವೂ ಸೊರಗಿ ಹೋಗಿದ್ದು, ತೆರಿಗೆ ಸಂಗ್ರಹದಲ್ಲೂ ನಿರೀಕ್ಷಿತ ಚೇತರಿಕೆ ಕಾಣುತ್ತಿಲ್ಲ. ವ್ಯಾಪಾರ-ವಹಿವಾಟು ಕ್ಷೀಣಿಸಿರುವುದರಿಂದ ಸಂಪನ್ಮೂಲ ಸಂಗ್ರಹಕ್ಕೆ ಭಾರೀ ಹೊಡೆತ ಬಿದ್ದಿದೆ. …

Read More »

ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್

ಬೆಂಗಳೂರು,ಡಿ.17- ಕಳೆದೊಂದು ವರ್ಷದಿಂದ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಸಾಕಷ್ಟು ಕಸರತ್ತುಗಳನ್ನು ನಡೆಸುತ್ತಲೇ ಇದ್ದರೂ ಅದು ಸಾಧ್ಯವಾಗುತ್ತಿಲ್ಲ. ಬಿಜೆಪಿ ಹೈಕಮಾಂಡ್ ಒಪ್ಪಿಗೆ ಸಿಗದ ಕಾರಣ ರಾಜ್ಯ ಸಚಿವ ಸಂಪುಟ ವಿಸ್ತರಣೆ ನಡೆಸಲು ಆಗುತ್ತಿಲ್ಲ. ಹೀಗಾಗಿ ಅಸಮಾಧಾನಗೊಂಡಿರುವ ಶಾಸಕರಿಗೆ ಯಡಿಯೂರಪ್ಪ ಅವರು ಬಂಪರ್ ಗಿಫ್ಟ್ ನೀಡಿದ್ದಾರೆ. 13 ಮಂದಿ ಬಿಜೆಪಿ ಶಾಸಕರಿಗೆ ಸಂಪುಟ ದರ್ಜೆಯ ನಿಗಮ ಮಂಡಳಿ ಸ್ಥಾನ ಹಾಗೂ ನಾಲ್ವರಿಗೆ ರಾಜ್ಯ ದರ್ಜೆಯ ಸ್ಥಾನಮಾನ ನೀಡುವಂತೆ …

Read More »

ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್‌ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಅಸಮಾಧಾನ

ಬೆಳಗಾವಿ: ಕನ್ನಡದಲ್ಲಿ ಮಾಹಿತಿ ಕೊಡದ ಇಂಡಿಗೊ ಏರ್‌ಲೈನ್ಸ್ ವಿರುದ್ಧ ಹಿರಿಯ ಐಎಎಸ್ ಅಧಿಕಾರಿ, ಬೆಳಗಾವಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಯೂ ಆಗಿರುವ ಎಲ್.ಕೆ.ಅತೀಕ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆ ವಿಮಾನದಲ್ಲಿ ಬುಧವಾರ ಬೆಂಗಳೂರಿನಿಂದ ಇಲ್ಲಿನ ಸಾಂಬ್ರಾಗೆ ಬಂದಿಳಿದ ಅವರು, ‘ಕರ್ನಾಟಕದಲ್ಲಿ ಇಂಡಿಗೊ ಹಾಗೂ ಇತರ ಕಂಪನಿಗಳಿಗೆ ಕನ್ನಡದಲ್ಲಿ ಸೇವೆ ನೀಡಲು ಇರುವ ಸಮಸ್ಯೆಯಾದರೂ ಏನು?’ ಎಂದು ಟ್ವೀಟ್ ಮಾಡುವ ಮೂಲಕ ಕೇಳಿದ್ದಾರೆ. ಈ ಅಧಿಕಾರಿಯ ಪ್ರಶ್ನೆಗೆ ಟ್ವಿಟ್ಟಿಗರು ಬೆಂಬಲ ವ್ಯಕ್ತಪಡಿಸಿದ್ದು, ಕನ್ನಡ ನೆಲದಲ್ಲೇ …

Read More »

ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ

ಕೊಪ್ಪಳ : ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆ ಕಳೆದೊಂದು ದಶಕದಿಂದ ಕುಂಟುತ್ತಲೇ ಸಾಗಿದೆ. ಪ್ರತಿ ಚುನಾವಣೆಯಲ್ಲೂ ಈ ವಿಷಯವನ್ನೇ ಮುಂದಿಟ್ಟುಕೊಂಡು ಜನರ ಬಳಿಗೆ ಬರುವ ಅಭ್ಯರ್ಥಿಗಳು ಚುನಾಯಿತರಾದ ನಂತರ ಮರೆತುಬಿಡುತ್ತಾರೆ. ಇದು ಯಾವುದೋ ಒಂದು ಪಕ್ಷದ ವಿರುದ್ಧ ಮಾಡುತ್ತಿರುವ ಆರೋಪವಲ್ಲ. ಯೋಜನೆ ಅನುಷ್ಠಾನಗೊಳ್ಳಲು, ಜನರಿಗೆ, ರೈತರಿಗೆ ಅನುಕೂಲ ಕಲ್ಪಿಸುವ ಹಿತದೃಷ್ಟಿಯಿಂದ ಈ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಬೇಕು ಎಂದು ರೈತಮುಖಂಡರು, ಪ್ರಗತಿಪರರಾದ ದೇವೇಂದ್ರಪ್ಪ ಬಳೂಟಗಿ ಆಗ್ರಹಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ …

Read More »

ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡ

ಆನೇಕಲ್: ಬೆಂಗಳೂರು ಹೊರವಲಯ ಆನೇಕಲ್ ತಾಲ್ಲೂಕಿನ ಬೊಮ್ಮಸಂದ್ರ ಸಮೀಪದ ನಾರಾಯಣ ಹೆಲ್ತ್ ಸಿಟಿ ವೈದ್ಯರ ತಂಡದಿಂದ ಮತ್ತೊಂದು ಜೀವಂತ ಹೃದಯ ರವಾನೆ ಮತ್ತು ಜೀವಂತ ಹೃದಯ ಕಸಿ ಶಸ್ತ್ರ ಚಿಕಿತ್ಸೆ ನಡೆಸುವಲ್ಲಿ ಯಶಸ್ವಿಯಾಗಿದ್ದಾರೆ. ಹೌದು, ನಾರಾಯಣ ಹೆಲ್ತ್ ಸಿಟಿ ಹೃದ್ರೋಗ ತಜ್ಞರಾದ ಡಾ ಭಗೀರಥ್ ಮತ್ತು ವರುಣ್ ಶೆಟ್ಟಿ ತಂಡದಿಂದ ಬೆಂಗಳೂರು ಮೂಲದ ಸುಮಾರು 42 ವರ್ಷ ವಯಸ್ಸಿನ ವ್ಯಕ್ತಿಗೆ ಯಶಸ್ವಿಯಾಗಿ ಹೃದಯ ಕಸಿ ನಡೆಸಿ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ್ದಾರೆ. ಬೆಂಗಳೂರು …

Read More »