Breaking News

Uncategorized

ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ.:

ಹುಬ್ಬಳ್ಳಿ: ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಹೀಗಾಗಿ ಅದರ ಬಗ್ಗೆ ಚರ್ಚೆ ಬೇಡ. ಅವಧಿ ಮುಗಿಯುವವರೆಗೂ ಬಿ.ಎಸ್.‌ ಯಡಿಯೂರಪ್ಪ ಅವರೇ ಮುಖ್ಯಮಂತ್ರಿಯಾಗಿ ಮುಂದುವರೆಯಲಿದ್ದಾರೆ ಎಂದು ಸಚಿವ ಜಗದೀಶ ಶೆಟ್ಟರ ಹೇಳಿದರು. ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಅವರು ಕೇಂದ್ರದ ಮುಖಂಡರೊಂದಿಗೆ ಚರ್ಚಿಸಲಿದ್ದಾರೆ. ಆ ಕುರಿತು ಅವರೇ ಅಂತಿಮ ನಿರ್ಧಾರ ಕೈಗೊಳ್ಳುವರು ಎಂದರು.   ಶಿವಮೊಗ್ಗದಲ್ಲಿ ನಡೆಯಲಿರುವ ಕೋರ್ ಕಮೀಟಿಗೆ ಹಾಜರಾಗಲಿದ್ದೇನೆ. ಪ್ರತಿ …

Read More »

ಬೆಂಗಳೂರು: ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಡಿ. ರೂಪಾ ಅವ್ರು, ‘ನಾಳೆಯಿಂದ ಹೊಸ ಹುದ್ದೆ ನಿಭಾಯಿಸಲಿದ್ದೇನೆ. ವರ್ಗಾವಣೆ ಆಗಿರೋದಕ್ಕೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ. ನನ್ನ ವೃತ್ತಿ ಜೀವನದ ವರ್ಷಗಳಿಗಿಂತ ಹೆಚ್ಚು ಬಾರಿ ನಾನು ವರ್ಗಾವಣೆಯಾಗಿದ್ದೇನೆ. ತಪ್ಪು ತೋರಿಸುವುದು, ಸತ್ಯಾಂಶ ಎತ್ತಿ ಹಿಡಿಯುವುದು ಯಾವಾಗಲೂ ಅಪಾಯದಿಂದ ಕೂಡಿರುತ್ತೆ ಅನ್ನೋದು ಗೊತ್ತಿದೆ. ಆದ್ರೆ, ರಾಜಿಯಾಗದೆ ನನ್ನ ಕೆಲಸ ನಾನು ಮುಂದುವರಿಸುತ್ತೇನೆ’ ಎಂದರು.

ಬೆಂಗಳೂರು: ವರ್ಗಾವಣೆ ಆಗುವುದು ನನಗೆ ಬೇಸರವಿಲ್ಲ. ಮುಂದೆಯೂ ಇದೇ ರೀತಿ ಭ್ರಷ್ಟಾಚಾರದ ವಿರುದ್ಧ ಕೆಲಸ ನಿರ್ವಹಿಸುವೆ ಎಂದು ಐಪಿಎಸ್ ಅಧಿಕಾರಿ ಡಿ. ರೂಪಾ ಹೇಳಿದ್ದಾರೆ. ನಿರ್ಭಯಾ ಸೇಫ್ ಸಿಟಿ ಯೋಜನೆ ಟೆಂಡರ್ ಕುರಿತು ಜಟಾಪಟಿಗಿಳಿದಿದ್ದ ಐಪಿಎಸ್ ಅಧಿಕಾರಿಗಳಾದ ಡಿ.ರೂಪಾ ಹಾಗೂ ಹೇಮಂತ್ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿದ್ದು, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ವರ್ಗಾವಣೆ ಮಾಡಿದೆ. ಈ ಕುರಿತಂತೆ ಮಾತನಾಡಿದ ಡಿ. ರೂಪಾ ಅವ್ರು, …

Read More »

ಸೌರವ್ ಗಂಗೂಲಿಗೆ ಲಘು ಹೃದಯಾಘಾತ..!

ನವದೆಹಲಿ,ಜ.2- ಮಾಜಿ ಕ್ರಿಕೆಟ್ ಆಟಗಾರ ಹಾಗೂ ಬಿಸಿಸಿಐನ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದ ಕೋಲ್ಕತ್ತಾದ ವುಡ್‍ಲ್ಯಾಂಡ್ ಆಸ್ಪತ್ರೆಗೆ ದಾಖಲಾಗಿದ್ದಾರೆ.  48 ವರ್ಷದ ಗಂಗೂಲಿ ಅವರಿಗೆ ಲಘು ಹೃದಯಾಘಾತ ವಾಗಿದೆ. ಅದೃಷ್ಟವಶಾತ್ ತೊಂದರೆಯೇನಿಲ್ಲ. ಈಗ ಅವರು ಅರೋಗ್ಯವಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ತಮ್ಮ ಮನೆಯ ಜಿಮ್‍ನಲ್ಲಿ ವರ್ಕೌಟ್ ಮಾಡುತ್ತಿದ್ದಾಗ ಆಯಾಸಗೊಂಡಿದ್ದರು. ಕುಸಿದು ಬಿದ್ದರು ಕೂಡಲೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತು ಎಂದು ತಿಳಿದುಬಂದಿದೆ. ಪರೀಕ್ಷೆ …

Read More »

ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ಅಧಿಕಾರಿಗಳಿಂದ 2.50 ಕೆ.ಜಿ. ಚಿನ್ನ ವಶ

ಬೆಂಗಳೂರು, ಜ.2- ಮಂಗಳೂರು ಮತ್ತು ಬೆಂಗಳೂರು ಅಂತಾತ್ಟರಾಷ್ಟ್ರೀಯ ವಿಮಾನ ನಿಲ್ದಾಣಗಳಲ್ಲಿ ಕಸ್ಟಮ್ಸ್ ವಿಭಾಗದ ಅಧಿಕಾರಿಗಳು ನಡೆಸಿದ ತಪಾಸಣೆಯಲ್ಲಿ ಎರಡು ಕಡೆಯಿಂದ ಕಳ್ಳಸಾಗಾಣಿಕೆಯಾಗುತ್ತಿದ್ದ ಒಟ್ಟು 2.50 ಕೆ.ಜಿ. ಚಿನ್ನ ಪತ್ತೆಯಾಗಿದೆ. ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಾಯು ಗುಪ್ತಚರ ಅಧಿಕಾರಿಗಳು 1024 ಗ್ರಾಮ್ ತೂಕದ ಒಟ್ಟು 52,89,984 ರೂ. ಮೌಲ್ಯದ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ. ಈ ಚಿನ್ನವನ್ನು ಪೆಸ್ಟ್ ರೂಪದಲ್ಲಿ ಕಳ್ಳ ಸಾಗಾಣಿಕೆ ಮಾಡಲಾಗುತ್ತಿತ್ತು. ಆರೋಪಿ ಪ್ರಯಾಣಿಕನನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು …

Read More »

ಇದೇ ಜನವರಿ ಅಂತ್ಯದೊಳಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಶೇ. 100ಕ್ಕೆ ನೂರರಷ್ಟು ಬೆಳೆ ಪರಿಹಾರ: ಗೋವಿಂದ ಕಾರಜೋಳ

ಕಲಬುರಗಿ : ಇದೇ ಜನವರಿ ಅಂತ್ಯದೊಳಗೆ ಅತಿವೃಷ್ಟಿಯಿಂದ ಹಾನಿಗೊಳಗಾದ ಎಲ್ಲಾ ರೈತರಿಗೆ ಶೇ. 100ಕ್ಕೆ ನೂರರಷ್ಟು ಬೆಳೆ ಪರಿಹಾರ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳು, ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದ್ದಾರೆ. ಗುಲಬರ್ಗಾ ವಿಶ್ವವಿದ್ಯಾಲಯದ ಮಹಾತ್ಮ ಗಾಂಧಿ ಸಭಾಂಗಣದಲ್ಲಿ ಕೆಡಿಪಿ ಸಭೆಯ ಬಳಿಕ ಪತ್ರಕರ್ತರನ್ನು ಉದ್ದೇಶಿಸಿ ಮಾತನಾಡಿದ ಅವರು, ಅಕ್ಟೋಬರ್ 13 ರಿಂದ 21 ವರೆಗೆ ಉಂಟಾದ ಅತಿವೃಷ್ಟಿಯಿಂದಾಗಿ 13,125 ಮನೆಗಳು ಹಾನಿಯಾಗಿವೆ. 13,12,50,000 ರೂ.ಗಳ …

Read More »

ಬೆಳಗಾವಿಯಲ್ಲಿ ನಾಡದ್ರೋಹಿಗಳ ವಿರುದ್ಧ ಕಠಿಣ ಕ್ರಮಕ್ಕೆ ಎಚ್ಡಿಕೆ ಆಗ್ರಹ January 2, 2021 belagavi Kan

ಬೆಂಗಳೂರು, ಜ.2- ಬೆಳಗಾವಿ ಮಹಾನಗರ ಪಾಲಿಕೆ ಮುಂದೆ ಕನ್ನಡ ಧ್ವಜ ಹಾರಿಸಲು ಕಷ್ಟ ಪಡಬೇಕಾದ ಪರಿಸ್ಥಿತಿಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತ ಪಡಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಸರ್ಕಾರ ಕೂಡಲೇ ಕಠಿಣ ಕ್ರಮ ಕೈಗೊಳ್ಳದಿದ್ದರೆ ಮುಂದೆ ಕೈಲಾಗದವರೆಲ್ಲಾ ಕನ್ನಡಿಗರ ಮೇಲೆ ಸವಾರಿ ಮಾಡಲು ಬರಬಹುದು ಎಂದು ಎಚ್ಚರಿಸಿದ್ದಾರೆ. ಬೆಳಗಾವಿ ಪಾಲಿಕೆ ಎದುರು ಡಿ.28ರಂದು ಕನ್ನಡಪರ ಹೋರಾಟಗಾರರು ನಾಡ ಧ್ವಜ ಹಾರಿಸಿದ ನಂತರದ ಘಟನೆಗಳನ್ನು ಸೂಕ್ಷ್ಮವಾಗಿ ಗಮನಿಸಿದ್ದೇನೆ. ನಮ್ಮ ನೆಲದಲ್ಲಿ …

Read More »

ರೈತ-ಕಾರ್ಮಿಕ ವಿರೋಧಿ ಹೊಸ ಕಾಯ್ದೆಗಳ ಪ್ರತಿಗಳನ್ನ ದಹಿಸಿ ಹುಬ್ಬಳ್ಳಿಯಲ್ಲಿ ಪ್ರತಿಭಟನೆ

ಹುಬ್ಬಳ್ಳಿ: ಕೇಂದ್ರ ಸರ್ಕಾರ ರೈತ ಮತ್ತು ಕಾರ್ಮಿಕ ವಿರೋಧಿ ಕಾನೂನು ಜಾರಿಗೆ ತಂದಿದೆ‌ ಎಂದು ಆರೋಪಿಸಿ ಹುಬ್ಬಳ್ಳಿಯ ಅಮರಗೋಳ ಎಪಿಎಂಎಸಿಯಲ್ಲಿ ಹಮಾಲಿ ಕಾರ್ಮಿಕರು ಪ್ರತಿಭಟನೆ ಮಾಡಿದರು.‌ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನೂತನ ಕೃಷಿ, ಎಪಿಎಮ್‌ಸಿ, ವಿದ್ಯುತ್ ಕಾಯ್ದೆಗಳು ರೈತರು ಮತ್ತು ಕಾರ್ಮಿಕರ ಹಿತಾಸಕ್ತಿಗೆ ವಿರೋಧಿಯಾಗಿವೆ. ಸರ್ಕಾರ ಅನ್ನದಾತರ ಹೋರಾಟಕ್ಕೆ ಸ್ಪಂದಿಸಬೇಕು‌. ಅನ್ನದಾತರು ಮತ್ತು ಕೂಲಿ ಕಾರ್ಮಿಕರ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿದ್ರು. ಎಪಿಎಂಸಿ ಹಮಾಲಿ ಕಾರ್ಮಿಕರ ಒಕ್ಕೂಟದ …

Read More »

ಬೆಳಗಾವಿಯಲ್ಲಿ ಕೊರೊನಾ ಲಸಿಕೆಯ ಡ್ರೈ ರನ್ ಆರಂಭ..ಆಶಾ ಕಾರ್ಯಕರ್ತೆಗೆ ಮೊದಲ ಡೆಮೊ

ದೇಶಾಧ್ಯಂತ ಇಂದು ಕೊರೊನಾ ವ್ಯಾಕ್ಸಿನ್ ಡ್ರೈರನ್ ಆರಂಭಿಸಲಾಗಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯ 3 ಸರ್ಕಾರಿ ಆಸ್ಪತ್ರೆಗಳಲ್ಲಿ ಕೊರೊನಾ ಲಸಿಕೆಯ ಡ್ರೈ ರನ್ ಆರಂಭವಾಗಿದೆ. ಮೊದಲು ಹತ್ತು ಜನರ ಮೇಲೆ ಲಸಿಕೆ ಡೆಮೊ ಮಾಡಲು ಸಿಬ್ಬಂದಿ ಸಿದ್ಧತೆ ಮಾಡಿಕೊಂಡಿದ್ದು. ವಂಟಮೂರಿ ನಗರ ಪ್ರಾಥಮಿಕ ಶಾಲೆಯಲ್ಲಿ ಮೊದಲಿಗೆ ಆಶಾ ಕಾರ್ಯರ್ತೆ ಮೇಲೆ ಡೆಮೊ ಮಾಡಲಾಯಿತು. ಹೌದು ಬೆಳಗಾವಿಯ ವಂಟಮುರಿಯಲ್ಲಿರುವ ನಗರ ಪ್ರಾಥಮಿಕ ಆರೋಗ್ಯ ಕೇಂದ್ರ, ಕಿತ್ತೂರು ಸಮುದಾಯ ಆರೋಗ್ಯ ಕೇಂದ್ರ, ಹುಕ್ಕೇರಿ …

Read More »

ಜನೆವರಿ 15ರಿಂದ ರಾಷ್ಟ್ರಾದ್ಯಂತ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ

ಬೆಳಗಾವಿ – ಜನೆವರಿ 15ರಿಂದ ರಾಷ್ಟ್ರಾದ್ಯಂತ ಶ್ರೀರಾಮ ಮಂದಿರ ನಿಧಿ ಸಮರ್ಪಣಾ ಅಭಿಯಾನ ನಡೆಯಲಿದ್ದು, 5 ಲಕ್ಷ ಗ್ರಾಮ ಮತ್ತು 12 ಕೋಟಿ ಜನರನ್ನು ತಲುಪುವ ಉದ್ದೇಶ ಹೊಂದಲಾಗಿದೆ ಎಂದು ವಿಶ್ವ ಹಿಂದು ಪರಿಷತ್ ನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗಡೆ ತಿಳಿಸಿದರು. ಬೆಳಗಾವಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶ್ರೀರಾಮನ ಆದರ್ಶ ಮತ್ತು ಜೀವನ ಮೌಲ್ಯಗಳನ್ನು ಪುನರ್ ಸ್ಥಾಪಿಸುವುದು ಅಭಿಯಾನದ ಮುಖ್ಯ ಉದ್ದೇಶ. ಯಾರಿಂದಲೂ ನಿಧಿಯನ್ನು ಒತ್ತಾಯ ಪೂರ್ವಕ ಸಂಗ್ರಹಿಸುವುದಿಲ್ಲ. …

Read More »

ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಪಂ ಸದಸ್ಯರಿಂದ ಗೋಕಾಕ ಸಾಹುಕಾರರ ಭೇಟಿ

ಗೋಕಾಕ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಗ್ರಾಮ ಪಂಚಾಯಿತಿಗಳಲ್ಲಿ ಅತಿ ಹೆಚ್ಚಿನ ಸಂಖ್ಯೆಯಲ್ಲಿ ಜಯಭೇರಿ ಬಾರಿಸಿರುವ ಬಿಜೆಪಿಯ ವೀರ ಸೇನಾನಿಗಳು ಶನಿವಾರ ಮುಂಜಾನೆ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರನ್ನು ಭೇಟಿಯಾಗುವ ಮೂಲಕ ಬಿಜೆಪಿಯ ಶಕ್ತಿ ಪದರ್ಶನ ನಡೆಸಿದರು. ಗೋಕಾಕನ ಗೃಹ ಕಚೇರಿಯಲ್ಲಿ ಗ್ರಾಮ ಪಂಚಾಯಿತಿ ನೂತನ ಸದಸ್ಯರು ಬಂದು ಸಚಿವ ರಮೇಶ ಜಾರಕಿಹೊಳಿ ಅವರ ಆಶೀರ್ವಾದ ಪಡೆದರು. ಗ್ರಾಮೀಣ ಭಾಗದಲ್ಲಿ ಬಿಜೆಪಿ ಮತ್ತಷ್ಟು ಬಲಗೊಂಡಿದೆ ಎಂದು ಸಚಿವರಿಗೆ ಮನವರಿಕೆ …

Read More »