ಕೋಲಾರ,ಡಿ.12- ಕಳೆದ ನಾಲ್ಕು ತಿಂಗಳಿನಿಂದ ಬಾಕಿ ಉಳಿಸಿಕೊಂಡಿರುವ ವೇತನ ನೀಡಿಲ್ಲ ಎಂದು ಆರೋಪಿಸಿ ಕಾರ್ಮಿಕರು ಕಂಪೆನಿಗೆ ಕಲ್ಲು ತೂರಿ ಬೆಂಕಿ ಹಚ್ಚಿ ತಮ್ಮ ಆಕ್ರೋಶ ಹೊರ ಹಾಕಿರುವ ಘಟನೆ ನಗರ ಹೊರ ವಲಯದ ಕೈಗಾರಿಕಾ ಪ್ರದೇಶದಲ್ಲಿ ನಡೆದಿದೆ. ಜಿಲ್ಲೆಯ ಹೊರ ವಲಯದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿರುವ ವಿಸ್ಟ್ರಾನ್ ಕಂಪೆನಿಯ ನೌಕರರಿಗೆ ಕಳೆದ ನಾಲ್ಕು ತಿಂಗಳಿನಿಂದ ವೇತನ ನೀಡದೆ ಇಲ್ಲಸಲ್ಲದ ಸಬೂಬು ಹೇಳಿಕೊಂಡು ಬರುತ್ತಿತ್ತು. ಇದರಿಂದ ರೊಚ್ಚಿಗೆದ್ದ ನೌಕರರು ಏಕಾಏಕಿ ಕಂಪೆನಿಗೆ …
Read More »ಬಸ್ಸಿಗಾಗಿ ಗೋಕಾಕ ತಾಲೂಕಿನ ನಾಗನೂರ ಗ್ರಾಮದ ಮುತ್ತು ಎಂಬ ಪ್ರಯಾಣಿಕ ಬೊಬ್ಬೆ ಹಾಕುವ ಮೂಲಕ ಆಕ್ರೋಶ
ವಿಜಯಪುರ( ಡಿಸೆಂಬರ್. 11): ಬಸ್ಸಿಗಾಗಿ ಪ್ರಯಾಣಿಕರೊಬ್ಬರು ಬೊಬ್ಬೆ ಹಾಕಿ ಬಸ್ ಬಿಡುವಂತೆ ಅಳಲು ತೋಡಿಕೊಂಡ ಘಟನೆ ವಿಜಯಪುರದಲ್ಲಿ ನಡೆದಿದೆ. ರಾಜ್ಯದ ಕೆಲವೆಡೆ ಸಾರಿಗೆ ನೌಕರರು ಮುಷ್ಕರಕ್ಕೆ ಇಳಿದಿದ್ದರಿಂದ ಬಸ್ ಸಂಚಾರ ಸ್ಥಗಿತಗೊಂಡಿತ್ತು. ಆದರೆ, ವಿಜಯಪುರ ಜಿಲ್ಲೆಯಲ್ಲಿ ಮಾತ್ರ ಬೆಳಿಗ್ಗೆಯಿಂದ ಎಂದಿನಂತೆ ಬಸ್ ಸಂಚಾರ ಆರಂಭವಾಗಿತ್ತು. ಈಶಾನ್ಯ ಕರ್ನಾಟಕ ಸಾರಿಗೆ ಸಂಸ್ಥೆಯ ವ್ಯಾಪ್ತಿಯಲ್ಲಿರುವ ವಿಜಯಪುರ ಜಿಲ್ಲಾದ್ಯಂತ ಬಸ್ ಗಳು ರೋಡಿಗಿಳಿದಿದ್ದವು. ಎಲ್ಲವೂ ಸುಸೂತ್ರವಾಗಿ ನಡೆಯುತ್ತಿದ್ದಾಗ ದಿಢೀರನೆ ಪ್ರತಿಭಟನೆಗೆ ಇಳಿದ ಕೆಲವು ಜನ …
Read More »ಭಾರೀ ಸಂಖ್ಯೆಯಲ್ಲಿ ಜೆಡಿಎಸ್, ಕಾಂಗ್ರೆಸ್ನಿಂದ ಬಿಜೆಪಿಗೆ ವಲಸೆ
ಚಿಕ್ಕಬಳ್ಳಾಪುರ : ಉಸ್ತುವಾರಿ ಸಚಿವ ಡಾ. ಕೆ. ಸುಧಾಕರ್ ಗ್ರಾಮ ಪಂಚಾಯಿತಿ ಅಖಾಡದಲ್ಲಿ ಚುನಾವಣೆಗೂ ಮೊದಲೇ ಪಕ್ಷಾಂತರ ಪರ್ವಕ್ಕೆ ಚಾಲನೆ ನೀಡಿದ್ದಾರೆ. ಜಾತ್ಯತೀತ ಜನತಾದಳ ಮತ್ತು ಕಾಂಗ್ರೆಸ್ ನ ಹಲವಾರು ಮುಖಂಡರು ತಮ್ಮ ಬೆಂಬಲಿಗರ ಜೊತೆ ಸಚಿವ ಡಾ.ಕೆ. ಸುಧಾಕರ್ ನಾಯಕತ್ವವನ್ನು ಬೆಂಬಲಿಸಿ ಬಿಜೆಪಿಯತ್ತ ವಲಸೆ ಹೊರಟಿದ್ದಾರೆ. ಸಚಿವ ಸುಧಾಕರ್ ಚಿಕ್ಕಬಳ್ಳಾಪುರ ಜಿಲ್ಲೆಯ ಹಾರೋಬಂಡೆ ಪಂಚಾಯಿತಿ ವ್ಯಾಪ್ತಿಯಲ್ಲಿ ಬಿರುಸಿನ ಪ್ರಚಾರ ಕೈಗೊಂಡ ಸಂದರ್ಭದಲ್ಲಿ ದೊಡ್ಡ ಸಂಖ್ಯೆಯಲ್ಲಿ ಬಿಜೆಪಿಗೆ ಸೇರ್ಪಡೆ ಕಾರ್ಯಕ್ರಮ …
Read More »ಸಾರಿಗೆ ಸಂಸ್ಥೆಯ ನೌಕರರ ಮನವಿ ಆಲಿಸಿ ಸಂಧಾನ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕು: ಸತೀಶ ಜಾರಕಿಹೊಳಿ
ಬೆಳಗಾವಿ: ರಾಜ್ಯ ಸರ್ಕಾರ ಸಾರಿಗೆ ಸಂಸ್ಥೆಯ ನೌಕರರ ಮನವಿ ಆಲಿಸಿ ಸಂಧಾನ ಮೂಲಕ ಸಮಸ್ಯೆ ಬಗೆಹರಿಸುವ ಪ್ರಯತ್ನ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದ್ದಾರೆ. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಪ್ರತಿ ತಿಂಗಳು ಸರಿಯಾಗಿ ವೇತನ ನೀಡಬೇಕು. ಸರ್ಕಾರಿ ನೌಕರರು ಎಂದು ಪರಿಗಣಿಸಬೇಕು ಹೀಗೆ ಸಾರಿಗೆ ಸಿಬ್ಬಂದಿಯ ಅನೇಕ ಅಂಶಗಳುಳ್ಳ ಬೇಡಿಕೆ ಇವೆ. ಮುಖ್ಯಮಂತ್ರಿಗಳು,ಸಾರಿಗೆ ಮಂತ್ರಿಗಳು ಮಧ್ಯೆಸ್ಥಿಕೆ ವಹಿಸಿ ನೌಕರರಿಗೆ ಸಂಧಾನ ಮಾಡಬೇಕು …
Read More »ಟಿಕೆಟ್ ವಿಚಾರವಾಗಿ ಈಗಾಗಲೇ ನನ್ನ ಹೆಸರು ಕೇಳಿ ಬಂದಿದೆ. ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ:ಸತೀಶ ಜಾರಕಿಹೊಳಿ
ಬೆಳಗಾವಿ: ಜಿಲ್ಲೆಯ ಶಾಸಕರು ಹಾಗೂ ಹಿರಿಯ ನಾಯಕರೊಂದಿಗೆ ಚರ್ಚಿಸಿ ಲೋಕಸಭಾ ಉಪಚುನಾವಣೆ ಸೂಕ್ತ ಅಭ್ಯರ್ಥಿಯನ್ನು ಅಂತಿಮಗೊಳಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಶುಕ್ರವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಟಿಕೆಟ್ ವಿಚಾರವಾಗಿ ಈಗಾಗಲೇ ನನ್ನ ಹೆಸರು ಕೇಳಿ ಬಂದಿದೆ. ಇದನ್ನು ಉದ್ದೇಶ ಪೂರ್ವಕವಾಗಿ ಮಾಡಿಸುತ್ತಿದ್ದಾರೆ ಮತ್ತು ಸಹಜವಾಗಿಯೂ ಆಗಿದೆ. ಬೆಂಗಳೂರಿನಲ್ಲಿ ಕುಳಿತು ಹೇಳಲು ಸಾಧ್ಯವಿಲ್ಲ. ಕಮಿಟಿ ಇದೆ. ಇನ್ನೊಂದು ಬಾರಿ ಸಭೆ ನಡೆಸಿ …
Read More »– ಸಾರಿಗೆ ನೌಕರರಿಗೆ ಡಿಸಿ ಅವಾಜ್ ಡ್ಯೂಟಿ ಮಾಡಿ, ಇಲ್ಲ ಮನೆಗೋಗಿ
ಹಾವೇರಿ: ಕೆಎಸ್ಆರ್ಟಿಸಿ ನೌಕರರು ಹೋರಾಟ ಹಾವೇರಿಯಲ್ಲಿ ತೀವ್ರ ಕಾವು ಪಡೆದುಕೊಂಡಿದೆ.ವಾಯುವ್ಯ ಸಾರಿಗೆ ಸಂಸ್ಥೆಯ ಡಿಸಿ ಆವಾಜ್ ಗೆ ಡೋಂಟ್ ಕೇರ್ ಎನ್ನದೆ, ಕರ್ತವ್ಯಕ್ಕೆ ಬರೋದಿಲ್ಲ ಅಂತ ಬಸ್ ಬಂದ್ ಮಾಡಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ್ದಾರೆ. ಡ್ಯೂಟಿ ಮಾಡಿ ಇಲ್ಲ ಮನೆಗೋಗಿ, ನಿಮ್ಮ ಮೇಲೆ ಕಂಪ್ಲೆಂಟ್ ಕೊಡ್ತೀನಿ ಅಂತ ನೌಕರರಿಗೆ ಅವಾಜ್ ಹಾಕಿದ ಜಿಲ್ಲಾ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಜಗ್ಗದೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ್ದಾರೆ. ಬಸ್ ಆರಂಭ ಮಾಡೋದಿಲ್ಲ …
Read More »ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು
ಸಾರಿಗೆ ನೌಕರರನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕು ಹಾಗೂ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಶುಕ್ರವಾರ ಕೇಂದ್ರ ಬಸ್ ನಿಲ್ದಾಣದಲ್ಲಿ ಸಾರಿಗೆ ನೌಕರರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಪ್ರಯಾಣಿಕರು ಪರದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ. ಕ.ರಾ.ರ.ಸಾ ಸಂಸ್ಥೆಯ ನಾಲ್ಕು ನಿಗಮಗಳ ಸುಮಾರು 1.30 ಲಕ್ಷ ಸಿಬ್ಬಂದಿಗಳನ್ನು ಸರಕಾರಿ ನೌಕರರನ್ನಾಗಿ ಪರಿಗಣಿಸಬೇಕೆಂದು ಹಲವಾರು ಪ್ರತಿಭಟನೆ ನಡೆಸಿದರೂ ಸಕಾರಗೊಂಡಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸಾರಿಗೆ ಸಂಸ್ಥೆಯಲ್ಲಿ ಒಟ್ಟು 1.30 ಲಕ್ಷ ಕಾರ್ಮಿಕರನ್ನೊಳಗೊಂಡ ದೇಶ,ವಿದೇಶಗಳ ಅತ್ಯುನ್ನತ ಸಾರಿಗೆ …
Read More »ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿ
ಮಂಗಳೂರು: ಮೇಲಾಧಿಕಾರಿಯ ಕಿರುಕುಳ, ಮಾನಸಿಕ ಹಿಂಸೆಗೆ ಬೇಸತ್ತು, ಪುರಸಭೆ ಆರೋಗ್ಯಾಧಿಕಾರಿಯಾದ ಡಾ.ರವಿಕೃಷ್ಣ ಪಣಚ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬಂಟ್ವಾಳದಲ್ಲಿ ನಡೆದಿದೆ. ಮೇಲಾಧಿಕಾರಿ ಕಿರುಕುಳಕ್ಕೆ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದಾಗಿ ಪತ್ರ ಬರೆದಿಟ್ಟು ವಿಷಸೇವಿಸಿ ಡಾ.ರವಿಕೃಷ್ಣ ಪಣಚ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಗಂಭೀರ ಸ್ಥಿತಿಗೆ ತಲುಪಿದ್ದ ಅವರನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ರವಿಕೃಷ್ಣ, ಪತ್ರದಲ್ಲಿ ಬಂಟ್ವಾಳ ಪುರಸಭೆಯ ಮುಖ್ಯಾಧಿಕಾರಿ ಪ್ರತಿದಿನ ಮಾನಸಿಕ ಕಿರುಕುಳ ನೀಡುತ್ತಿದ್ದು, ಕಚೇರಿ ಸಿಬ್ಬಂದಿ …
Read More »ಬಿಜೆಪಿ ಬೆಂಬಲಿಗರೇ ಗೋ ಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ
ಬಿಜೆಪಿ ಬೆಂಬಲಿಗರೇ ಗೋ ಮಾಂಸ ರಫ್ತು ಮಾಡ್ತಾರೆ: ಸಿದ್ದರಾಮಯ್ಯ ಗಂಭೀರ ಆರೋಪ ಬೆಂಗಳೂರು: ಮೋದಿಯವರು ಪ್ರಧಾನಿಯಾದ ಬಳಿಕ ಗೋ ಮಾಂಸ ರಫ್ತು ಪ್ರಮಾಣ ಏರಿಕೆಯಾಗಿದೆ. ಅಷ್ಟೇ ಅಲ್ಲ, ಗೋ ಮಾಂಸ ರಫ್ತು ಮಾಡುವವರಲ್ಲಿ ಬಹುತೇಕ ಬಿಜೆಪಿ ಬೆಂಬಲಿತರೇ ಇದ್ದಾರೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಗೋ ಮಾಂಸ ರಫ್ತು ಮಾಡುವ ಸಂಸ್ಥೆಗಳು ಹಾಗೂ ಅದರ ಮಾಲೀಕರ ಪಟ್ಟಿಯನ್ನೂ ಸಿದ್ದರಾಮಯ್ಯ ನೀಡಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರ …
Read More »ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತ
ಖಾನಾಪುರ : ಬೆಳಗಾವಿ-ಪಣಜಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುರುವಾರ ಸಂಜೆ ಕಾರು, ಸಾರಿಗೆ ಸಂಸ್ಥೆ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಕಾರು ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, 10 ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಕಾರು ಚಾಲಕ ಮಹಾರಾಷ್ಟ್ರ ಮೂಲದ ಭಿಕಾಜಿ ಸಾವಂತ(46) ಮೃತರು. ತಾಲ್ಲೂಕಿನ ತೋರಾಳಿ ಗ್ರಾಮದ ನಿವಾಸಿ ಪ್ರಕಾಶ ಪಾಟೀಲ ಸೇರಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದ ಹತ್ತಕ್ಕೂ ಪ್ರಯಾಣಿಕರು ಗಾಯಗೊಂಡಿದ್ದಾರೆ. ಗಂಭೀರ ಗಾಯಗೊಂಡವರನ್ನು ಬೆಳಗಾವಿ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. …
Read More »
Laxmi News 24×7